ಮಡಿಕೇರಿ ಜು.9 : ನಾವು ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸಿ ನಮ್ಮ ಸುತ್ತಲಿನ ಪರಿಸರದಲ್ಲಿ ಹೆಚ್ಚೆಚ್ಚು ಗಿಡ- ಮರಗಳನ್ನು ಬೆಳೆಸುವ ಮೂಲಕ ಅರಣ್ಯ ಸಂರಕ್ಷಣೆಯೊಂದಿಗೆ ವನ್ಯಜೀವಿ ಮತ್ತು ಪರಿಸರ ಸಂರಕ್ಷಣೆಗೆ ಸಂಕಲ್ಪ ತೊಡಬೇಕು ಎಂದು ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎಸ್.ಸತೀಶ್ ಮನವಿ ಮಾಡಿದರು. ಕರ್ನಾಟಕ ಅರಣ್ಯ ಇಲಾಖೆಯ ಮಡಿಕೇರಿ ವಿಭಾಗದ ಕುಶಾಲನಗರ ಅರಣ್ಯ ವಲಯ ಹಾಗೂ ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಕೊಡಗು ಜಿಲ್ಲಾ ಘಟಕದ ವತಿಯಿಂದ ಕುಶಾಲನಗರ ಕಾವೇರಿ ಪರಿಸರ ಬಳಗ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ, ಕಾಲೇಜಿನ ಎನ್.ಎಸ್.ಎಸ್.ಘಟಕ ಹಾಗೂ ಸುಂಟಿಕೊಪ್ಪ ಜೆ.ಸಿ.ಐ.ಸಂಸ್ಥೆಯ ಸಹಯೋಗದಲ್ಲಿ ಶನಿವಾರ ಕುಶಾಲನಗರ ಸರ್ಕಾರಿ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ “ನಮ್ಮ ನಡೆ ಹಸಿರೆಡೆಗೆ'( ಗ್ರೋ ಗ್ರೀನ್ ) ಹಾಗೂ ‘ನನ್ನ ಗಿಡ ನನ್ನ ಹೆಮ್ಮೆ’ ಅಂಗವಾಗಿ ಏರ್ಪಡಿಸಿದ್ದ ವನ ಮಹೋತ್ಸವ ಸಪ್ತಾಹ :2023 ರ ಅಂಗವಾಗಿ 250 ಅರಣ್ಯ ಸಸಿ…
ಲೇಖಕ: admin
ಮಡಿಕೇರಿ ಜು.9 : ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಬು ಕಾಡಿನ ಗಿರಿಜನ ಹಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮತ್ತು ಸೇತುವೆ ನಿರ್ಮಾಣಕ್ಕೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು. ಸುಮಾರು 20 ಲಕ್ಷ ರೂ.ಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, ಈ ಯೋಜನೆಯಿಂದ 80ಕ್ಕೂ ಹೆಚ್ಚು ಕುಟುಂಬಗಳಿಗೆ ಮುಖ್ಯ ರಸ್ತೆಯ ಸಂಪರ್ಕ ದೊರೆಯಲಿದೆ. ಗಿರಿಜನ ಹಾಡಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕರು ಭರವಸೆ ನೀಡಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಕ್ತಾರ ಎ.ಎಸ್.ಟಾಟು ಮೊಣ್ಣಪ್ಪ, ತಿತಿಮತಿ ವಲಯ ಕಾಂಗ್ರೆಸ್ ಅಧ್ಯಕ್ಷ ನವೀನ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೆರಿರ ನವೀನ್, ಗ್ರಾ.ಪಂ ಸದಸ್ಯರಾದ ಚುಬ್ರು, ಅಫ್ರೊಜ್, ಜಿ.ಪಂ ಮಾಜಿ ಸದಸ್ಯರಾದ ಪೃಥ್ವಿ, ಪಂಕಜ, ಸಹಕಾರ ಬ್ಯಾಂಕ್ ನ ಅಧ್ಯಕ್ಷ ಚಪ್ಪುಡಿರ ರಾಮಕೃಷ್ಣ, ಡಿಸಿಸಿ ಸದಸ್ಯ ವಿನಯ್ ಕುಮಾರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಮಡಿಕೇರಿ ಜು.9 : ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ತಮ್ಮ 49 ನೇ ಜನ್ಮದಿನವನ್ನು ಶಾಲಾ ಮಕ್ಕಳೊಂದಿಗೆ ಸಂಭ್ರಮದಿಂದ ಆಚರಿಸಿದರು. ಕಾವೇರಿಯ ಉಗಮಸ್ಥಾನ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶಾಸಕರು, ಸಸಿ ನೆಡುವ ಮೂಲಕ ಪರಿಸರ ಕಾಳಜಿ ಮೆರೆದರು. ಪತ್ನಿ ಕಾಂಚನ ಹಾಗೂ ಕುಟುಂಬದ ಸದಸ್ಯರೊಂದಿಗೆ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯ ಮತ್ತು ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿದ ಪೊನ್ನಣ್ಣ, ದೇವಸ್ಥಾನದ ತಪ್ಪಲಿನಲ್ಲಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಸಿ ನೆಟ್ಟರು. ನಂತರ ಕೈಲಾಸ ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ::: ಮಕ್ಕಳೊಂದಿಗೆ ಸಂಭ್ರಮ ::: ಭಾಗಮಂಡಲದ ಕೋರಂಗಾಲ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ 550 ಕ್ಕೂ ಅಧಿಕ ಬಡಮಕ್ಕಳು, ಅಧ್ಯಾಪಕ ವೃಂದ, ಪೋಷಕರು ಹಾಗೂ ಸ್ಥಳೀಯ ಮುಖಂಡರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದರು. ವಸತಿ ಶಾಲೆಯ ಕುಂದುಕೊರತೆಗಳ ಬಗ್ಗೆ ಚರ್ಚಿಸಿದ ಶಾಸಕರು ಅಗತ್ಯ ಸಹಕಾರ ನೀಡುವ ಭರವಸೆ ನೀಡಿದರು. ವಸತಿ ಶಾಲೆಯಲ್ಲಿ ಆಗಬೇಕಾದ…
ಮಡಿಕೇರಿ ಜು.9 : ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ನಡೆಯಿತು. ಸಂಘ 42.61 ಲಕ್ಷ ರೂ. ಲಾಭಗಳಿಸಿದ್ದು, ಶೇ.10 ಡಿವಿಡೆಂಟ್ ಘೋಷಣೆ ಮಾಡಲಾಯಿತು. ಉಪಾಧ್ಯಕ್ಷ ಅಶೋಕ ಪಿ.ಎಂ, ನಿರ್ದೇಶಕರುಗಳಾದ ಮೋಣಪ್ಪ ಎನ್ ಬಿ, ಪ್ರಸನ್ನ ನೆಕ್ಕಿಲ, ದೀನರಾಜ ದೊಡ್ಡಡ್ಕ, ಧನಂಜಯ ಕೋಡಿ, ಜಯರಾಮ ಪಿ ಟಿ, ಶೇಷಪ್ಪ ನಾಯ್ಕ ನಿಡ್ಯಮಲೆ, ರೇಣುಕಾ ಕುಂದಲ್ಪಾಡಿ, ಉದಯಕುಮಾರ ಪಿ ಎ, ದಾಸಪ್ಪ ಮಡಿವಾಳ, ಕಿರಣ ಬಂಗಾರಕೋಡಿ, ಹೊನ್ನಪ್ಪ ಅಮಚೂರು, ಸೀತಾರಾಮ ಕದಿಕಡ್ಕ, ಪುಷ್ಪಾವತಿ ವ್ಯಾಪಾರೆ, ಪ್ರದೀಪ ಕೆ ಎಂ ರವರು ಉಪಸ್ಥಿತರಿದ್ದರು. ಮಾ|ಯತೀಶ್ ಪ್ರಾರ್ಥಿಸಿ, ಮುಖ್ಯ ಕಾರ್ಯನಿರ್ವಣಾಧಿಕಾರಿ ಲೋಕೇಶ್ ಹೆಚ್.ಕೆ ಸ್ವಾಗತಿಸಿ, ನಿರ್ದೇಶಕ ಪ್ರಸನ್ನ ನೆಕ್ಕಿಲ ವಂದಿಸಿದರು.
ಸೋಮವಾರಪೇಟೆ ಜು.8 : ಶಾಂತಳ್ಳಿ ಹೋಬಳಿಯ ತಲ್ತಾರೆಶೆಟ್ಟಳ್ಳಿ ಗ್ರಾಮದ ಸುಗ್ಗಿದೇವರಬನ ದೇವರಕಾಡು ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಸಾಗುವಳಿ ಮಾಡಿದ್ದ ಜಾಗವನ್ನು ಅರಣ್ಯ ಇಲಾಖೆ ತೆರವುಗೊಳಿಸಿ ಇಲಾಖಾ ಸುಪರ್ದಿಗೆ ಪಡೆದುಕೊಂಡಿದೆ. ಸೋಮವಾರಪೇಟೆ ಅರಣ್ಯ ಇಲಾಖೆಯಲ್ಲಿ ಒತ್ತುವರಿ ಪ್ರಕರಣ ದಾಖಲಾಗಿತ್ತು. ಸೋಮವಾರಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಒತ್ತುವರಿ ಜಾಗವನ್ನು ತೆರವುಗೊಳಿಸಲು ಆದೇಶ ನೀಡಿದ್ದರು. ಒತ್ತುವರಿದಾರರು ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮೇಲ್ಮನವಿ ಪ್ರಾಧಿಕಾರಿ ಕೊಡಗು ವೃತ್ತದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಸೋಮವಾರಪೇಟೆ ಉಪ ವಿಭಾಗದ 16.7.2018ರ ಆದೇಶವನ್ನು ಎತ್ತಿಹಿಡಿದ ಮೇಲ್ಮನವಿ ಪ್ರಾಧಿಕಾರ, 10.2.2023ರಲ್ಲಿ ಒತ್ತುವರಿದಾರರ ಮೇಲ್ಮನವಿಯನ್ನು ವಜಾಗೊಳಿಸಿ, 30 ದಿನಗಳ ಒಳಗೆ ಒತುವರಿ ತೆರವುಗೊಳಿಸಿ, ಅರಣ್ಯ ಇಲಾಖೆಯ ಸುಪರ್ದಿಗೆ ಪಡೆದುಕೊಳ್ಳಲು ಆದೇಶಿಸಿತ್ತು. ಹಿರಿಯ ಅರಣ್ಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಸೋಮವಾರಪೇಟೆ ವಲಯ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಕಾಫಿ, ಕಿತ್ತಳೆ ಇನ್ನಿತರ ವಾಣಿಜ್ಯ ಬೆಳೆಗಳನ್ನು ತೆರವುಗೊಳಿಸಿ, ಹಿಟಾಚಿ ಯಂತ್ರದ ಮೂಲಕ ಜಾನುವಾರು ನಿರೋಧಕ ಕಂದಕ ತೋಡಿ, ಪೂರ್ಣ ಪ್ರಮಾಣದಲ್ಲಿ ಇಲಾಖೆಯ ವಶಕ್ಕೆ ಪಡೆದುಕೊಂಡಿದ್ದಾರೆ.…
ವಿರಾಜಪೇಟೆ ಜು.8 : ವಿದ್ಯಾ ಸಂಸ್ಥೆಗಳಿಂದ ಪಡೆಯುವ ಶಿಕ್ಷಣಕ್ಕೆ ತನ್ನಾದೆಯಾದ ಮೌಲ್ಯಗಳಿವೆ. ವಿದ್ಯಾರ್ಥಿಗಳು ಗೌರವಯುತ ಬದುಕು ಕಟ್ಟಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ ಸಲಹೆ ನೀಡಿದರು. ವಿರಾಜಪೇಟೆ ಕಾವೇರಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾಲೇಜಿನ ವಾರ್ಷಿಕೋತ್ಸವಕ್ಕೆ ಮುಖ್ಯ ಅತಿಥಿಗಳಗಿ ಆಗಮಿಸಿ ಮಾತನಾಡಿದ ಅವರು ಉತ್ತಮ ಗುಣಮಟ್ಟದ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ್ತ ಸ್ಥಾನಮಾನಗಳನ್ನು ಹೊಂದುತ್ತಾರೆ. ವಿದ್ಯಾರ್ಥಿಗಳು ದೇಶದ ಉತ್ತಮ ಪ್ರಜೆಗಳಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರ ಎಂದರು. ಕಾವೇರಿ ವಿದ್ಯಾ ಸಂಸ್ಥೆಯು ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುತ್ತಾ ಜಿಲ್ಲೆ ಮತ್ತು ರಾಜ್ಯದಲ್ಲಿ ಉತ್ತಮ ಸಂಸ್ಥೆ ಎಂದು ಹೆಸರುವಾಸಿಯಾಗಿದೆ. ಇಂತಹ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ಎಷ್ಟೋ ಮಂದಿ ರಾಜ್ಯ, ದೇಶ ಮತ್ತು ವಿದೇಶಗಳಲ್ಲಿ ಕೆಲಸ ಗಿಟ್ಟಿಸಿಕೊಂಡು ಉನ್ನತ ಪದವಿಯಲ್ಲಿದ್ದಾರೆ. ವಿದ್ಯಾರ್ಥಿ ಜೀವನವು ಕೊನೆಗೊಂಡು ಮುಂದಿನ ಜೀವನದ ನಡೆ ದೇಶದ ಉನ್ನತ್ತಿಗಾಗಿರಲಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕಾವೇರಿ ಕಾಲೇಜಿನ…
ಸುಂಟಿಕೊಪ್ಪ,ಜು.8: ಸುಂಟಿಕೊಪ್ಪ ನಿವಾಸಿ ವಸಂತ ಸ್ಟೋರಿನ ಮಾಲಿಕ ಹಾಗೂ ಹಿರಿಯ ಪತ್ರಿಕಾ ವಿತರಕ ಎಂ.ಎ.ವಸಂತ ಅವರ ಮನೆ ಮುಂಭಾಗದ ತಡೆಗೋಡೆ ಗಾಳಿ ಮಳೆಗೆ ಕುಸಿದು ಬಿದ್ದಿದ್ದು, ನಷ್ಟ ಸಂಭವಿಸಿದೆ ಎಂದು ಎಂ.ಎ.ವಸಂತ ಗ್ರಾ.ಪಂ ಮತ್ತು ಕಂದಾಯ ಇಲಾಖೆಗೆ ದೂರು ಸಲ್ಲಿಸಿದ್ದಾರೆ. ರಾತ್ರಿ ಸುರಿದ ಗಾಳಿಮಳೆಗೆ 7ನೇ ಹೊಸಕೋಟೆ ಗ್ರಾಮದ ಅಶೋಕ ಎಸ್ಟೇಟ್ ಒಳಗಡೆ 2 ವಿದ್ಯುತ್ ಕಂಬಗಳು ಮುರಿದು ಬಿದ್ದು ರಾತ್ರಿಯಿಂದ ವಿದ್ಯುತ್ ಸಂಚಾರ ಸ್ಥಗಿತ ಗೊಂಡಿತ್ತು. ಸ್ಥಳಕ್ಕೆ ಸೆಸ್ಕ್ ಇಲಾಖೆಯ ಸಿಬ್ಬಂದಿ ತೆರಳಿ ಕಂಬಗಳನ್ನು ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿದರು.
ಮಡಿಕೇರಿ ಜು.8: ಮಡಿಕೇರಿ ರೋಟರಿ ಸಂಸ್ಥೆಯ 73ನೇ ಅಧ್ಯಕ್ಷೆಯಾಗಿ ಗೀತಾ ಗಿರೀಶ್ ಅಧಿಕಾರ ಸ್ವೀಕರಿಸಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕಾರಿ ಸ್ವೀಕರಿಸಿದ್ದು, ಕಾರ್ಯದರ್ಶಿಯಾಗಿ ಎಂ.ಕೆ.ಶರತ್ ಕರ್ತವ್ಯ ನಿರ್ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿರಾಜಪೇಟೆ ಸ್ಥಾಪನಾ ಅಧಿಕಾರಿ ರೋಟರಿಯನ್ ಡಾ. ಎಸ್.ವಿ.ನರಸಿಂಹನ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ.ನಯನಾ ಕಶ್ಯಪ್, ರೋಟರಿ ಸಹಾಯಕ ಗವರ್ನರ್ ಡಿ.ಎಮ್.ತಿಲಕ್, ರೋಟರಿ ಝೋನಲ್ ಲೆಫ್ಟಿನೆಂಟ್ ಎಸ್.ಎಸ್.ಸಂಪತ್ ಕುಮಾರ್ ಪಾಲ್ಗೊಂಡಿದ್ದರು. ವನಮಹೋತ್ಸವದ ಪ್ರಯುಕ್ತ ಕಾರ್ಯಕ್ರಮಕ್ಕೆ ಆಗಮಿಸಿದ ಹಿರಿಯರಿಗೆ ಗಿಡಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ರೋಟರಿ ಬುಲೆಟಿನ್ ಬಿಡುಗಡೆ ಮಾಡಲಾಯಿತು.
ಮಡಿಕೇರಿ ಜು.8 : ಸುಂಟಿಕೊಪ್ಪ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಹೇರೂರು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಕೃಷಿ ಫಸಲನ್ನು ನಾಶ ಮಾಡಿದೆ. ಸ್ಥಳೀಯ ಕೃಷಿಕ ಅರುಣ್ ಚೆಂಗಪ್ಪ ಎಂಬುವವರ ತೋಟಕ್ಕೆ ನಿತ್ಯ ಆನೆಗಳು ಲಗ್ಗೆ ಇಡುತ್ತಿದ್ದು, ಕಾಫಿ, ಬಾಳೆ, ಅಡಿಕೆ ಗಿಡಗಳನ್ನು ನೆಲಸಮ ಮಾಡಿವೆ. ಕೈಗೆ ಬಂದ ತ್ತುತ್ತು ಬಾಯಿಗೆ ಬರಲಿಲ್ಲ ಎನ್ನುವ ರೀತಿಯಲ್ಲಿ ಕೃಷಿ ಫಸಲನ್ನು ತಿಂದು ತೇಗುತ್ತಿವೆ. ಒಂದೆಡೆ ಪ್ರಾಕೃತಿಕ ಅಸಮಾತೋಲನ, ಮತ್ತೊಂದೆಡೆ ವನ್ಯಜೀವಿಗಳ ದಾಳಿಯಿಂದ ಅಪಾರ ನಷ್ಟವಾಗುತ್ತಿದೆ ಎಂದು ಬೆಳೆಗಾರರು ಬೇಸರ ವ್ಯಕ್ತಪಡಿಸಿದ್ದಾರೆ. ಕಾಡಾನೆಗಳು ತೋಟಗಳು ಮಾತ್ರವಲ್ಲದೆ ಮನೆ ಬಾಗಲಿಗೆ ಬರುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ಆತಂಕದಿಂದಲೇ ಸಂಚರಿಸಬೇಕಾದ ಅನಿವಾರ್ಯತೆ ಇದೆ. ತಕ್ಷಣ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸಬೇಕಾಗಿದೆ. ವಿಶೇಷ ಆಸಕ್ತಿ ತೋರಿ ಹೇರೂರು ಗ್ರಾಮದಲ್ಲಿ ಬೀಡುಬಿಟ್ಟಿರುವ ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಸಬೇಕು ಮತ್ತು ನಷ್ಟಕ್ಕೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ನವದೆಹಲಿ: ವಂದೇ ಭಾರತ್ ರೈಲು ಸೇರಿದಂತೆ ಎಲ್ಲಾ ರೈಲುಗಳ ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್ಗಳ ಟಿಕೆಟ್ ದರ ಮತ್ತು ಅನುಭೂತಿ ಹಾಗೂ ವಿಸ್ಟಾಡೋಮ್ ಕೋಚ್ಗಳ ದರವನ್ನು ಲಭ್ಯತೆಗೆ ಅನುಗುಣವಾಗಿ ಶೇಕಡಾ 25 ರಷ್ಟು ಕಡಿತಗೊಳಿಸಲಾಗುವುದು ಎಂದು ರೈಲ್ವೆ ಮಂಡಳಿಯ ಆದೇಶ ಹೊರಡಿಸಿದೆ.






