ಮಡಿಕೇರಿ ಆ.8 : ಹಾರಂಗಿ ಜಲಾಶಯದ ಬಳಿ ಇರುವ ತೋಟಗಾರಿಕೆ ಕ್ಷೇತ್ರಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ರೈತರಿಗೆ ತೆಂಗಿನ ಗಿಡಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತೋಟಗಾರಿಕಾ ಪಿತಾಮಹ ಡಾ. ಎಂ.ಹೆಚ್. ಮರೀಗೌಡರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ರೈತರಿಗೆ ತೆಂಗಿನ ಗಿಡಗಳನ್ನು ವಿತರಿಸಿದರು. ಈ ಸಂದರ್ಭ ಶಾಸಕರು ಹಾರಂಗಿ ತೋಟಗಾರಿಕೆ ಕ್ಷೇತ್ರದಲ್ಲಿರುವ ಮೀನುಗಾರಿಕೆ ಘಟಕ, ಎರೆಹುಳ ಉತ್ಪಾದನ ಘಟಕ ಹಾಗೂ ವನ್ಯ ಸಸಿ ಬೆಳೆಗಳ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ವರದರಾಜ್, ಅಧಿಕಾರಿಗಳಾದ ಶೋಭ, ಜಿ.ಪಂ ಮಾಜಿ ಸದಸ್ಯರುಗಳಾದ ವಿ.ಪಿ.ಶಶಿಧರ್, ಕೆ.ಪಿ.ಚಂದ್ರಕಲ, ಕೆಪಿಸಿಸಿ ಸಂಯೋಜಕ ನಟೇಶ್ ಗೌಡ ಹಾಗೂ ಪ್ರಮುಖರು ಮತ್ತು ರೈತರು ಈ ಸಂಧರ್ಭ ಹಾಜರಿದ್ದರು.
ಲೇಖಕ: admin
ಮಡಿಕೇರಿ ಆ.8 : ಕೆಎಸ್ಆರ್ಟಿಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಯುವತಿಯೋರ್ವಳು ಮೃತಪಟ್ಟಿರುವ ಘಟನೆ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಗುಟ್ಟೆ ಜಯಮಂಗಳಿ ನದಿ ಸೇತುವೆ ಬಳಿ ನಡೆದಿದೆ. ಗಾರ್ಮೆಂಟ್ಸ್ ಗೆ ನೌಕರರನ್ನು ಕರೆದೊಯ್ಯುತ್ತಿದ್ದ ಆಟೋರಿಕ್ಷಾಗೆ ನಗರ ಸಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ಜೋಗೆನಹಳ್ಳಿ ನಿವಾಸಿ ಲಕ್ಷ್ಮೀ (20) ಎಂಬಾಕೆ ತೀವ್ರವಾಗಿ ಗಾಯಗೊಂಡು ಮೃತಪಟ್ಟರು. ಎಂಟಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಮೃತ ಯುವತಿಯ ಕುಟುಂಬಕ್ಕೆ ಸಾಂತ್ವನ ಹೇಳಿದರು. ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಆ.8 : ಕುಂದಚೇರಿ ಗ್ರಾ.ಪಂ ನ ಎರಡನೇ ಅವಧಿಯ ಆಡಳಿತಕ್ಕಾಗಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಪಿ.ಬಿ.ದಿನೇಶ್ ಹಾಗೂ ಉಪಾಧ್ಯಕ್ಷರಾಗಿ ಹೆಚ್.ಪಿ. ಬೇಬಿ ಆಯ್ಕೆಯಾಗಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಸುಂಟಿಕೊಪ್ಪ ಆ.8 : ಮರದಿಂದ ಬಿದ್ದು ಮೃತಪಟ್ಟ ಪೊಲೀಸ್ ಸಿಬ್ಬಂದಿ, ಸುಂಟಿಕೊಪ್ಪ ನಾಕೂರು-ಶಿರಂಗಾಲ ಗ್ರಾಮದ ಲೋಕೇಶ್ ಪೂಜಾರಿ ಅವರ ಅಂತ್ಯಕ್ರಿಯೆ ಸಕಲ ಪೊಲೀಸ್ ಗೌರವಗಳೊಂದಿಗೆ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಎಸ್ ಪಿ ಸುಂದರ್ ರಾಜ್, ಡಿವೈಎಸ್ಪಿ ಗಂಗಾಧರಪ್ಪ, ವೃತ್ತ ನಿರೀಕ್ಷಕ ಮಹೇಶ್, ಶಸಸ್ತ್ರ ದಳದ ಅಧಿಕಾರ ಚೆನ್ನ ನಾಯಕ, ಸುಂಟಿಕೊಪ್ಪ ಪಿಎಸೈ ಶ್ರೀಧರ್, ಅಪರಾಧ ಪತ್ತೆ ದಳದ ಪಿಎಸ್ಐ ಸ್ವಾಮಿ, ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂದೋಡಿ ಜಗನಾಥ್, ಅಭಿವೃದ್ಧಿ ಅಧಿಕಾರಿ ಗೂಳಪ್ಪ ಕೂತಿನಾರ್, ಮಾಜಿ ಅಧ್ಯಕ್ಷ ಬಿ.ಜಿ.ರಮೇಶ್, ತಾ.ಪಂ ಮಾಜಿ ಸದಸ್ಯರಾದ ಮಣಿ, ಜಿಲ್ಲಾ ಭೂ ನ್ಯಾಯ ಮಂಡಳಿ ಸದಸ್ಯ ಡಾ.ಶಶಿಕಾಂತ್ ರೈ ಹಾಗೂ ನೂರಾರು ಗ್ರಾಮಸ್ಥರು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು.
ಮಡಿಕೇರಿ ಆ.7 : ದಡಾರ, ರುಬೆಲ್ಲಾ ಸೇರಿದಂತೆ ಹಲವು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸಲು ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಲಸಿಕಾಕರಣ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಲಸಿಕೆಯನ್ನು ಕಾಲ ಕಾಲಕ್ಕೆ ಪಡೆಯದ ಮತ್ತು ಬಿಟ್ಟುಹೋದ ಹಾಗೂ ಹೊರಗುಳಿದ 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿ ಸ್ತ್ರೀಯರು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ. ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ಲಸಿಕಾ ವಿಭಾಗದಲ್ಲಿ ಇಂದ್ರಧನುಷ್ 5.0 ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯ 207 ಕಡೆಗಳಲ್ಲಿ ಇಂದ್ರಧನುಷ್ ಲಸಿಕಾಕರಣ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಮಕ್ಕಳಿಗೆ ಬರುವ ದಡಾರ, ರುಬೆಲ್ಲಾ ಸೇರಿದಂತೆ ಹಲವು ರೋಗಗಳನ್ನು ತಡೆಯಲು ಇಂದ್ರಧನುಷ್ 5.0 ಸಹಕಾರಿಯಾಗಿದೆ ಎಂದರು. ಇಂದ್ರಧನುಷ್ 5.0 ಅಭಿಯಾನದಲ್ಲಿ ಲಸಿಕೆ ಬಿಟ್ಟು ಹೋಗಿರುವ, ವಿಶೇಷವಾಗಿ ದಡಾರ-ರುಬೆಲ್ಲಾ ಲಸಿಕಾಕರಣ, ಪಿಸಿವಿ ಲಸಿಕಾಕರಣ ಮತ್ತು ಇತ್ತೀಚೆಗೆ 3 ನೇ ಡೋಸ್ ಆಗಿ ಸೇರ್ಪಡೆಗೊಳಿಸಲಾಗಿರುವ…
ಮಡಿಕೇರಿ ಆ.7 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಹಯೋಗದೊಂದಿಗೆ ಸ್ತನ್ಯಪಾನ ಸಪ್ತಾಹ ಮತ್ತು ಶಿಶು ಪ್ರದರ್ಶನ ಕಾರ್ಯಕ್ರಮವು ಎಂ.ಬಾಡಗ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅವರು ಸ್ತನ್ಯಪಾನ ಸಪ್ತಾಹ ವನ್ನು ಆಗಸ್ಟ್ ಏಳರ ವರೆಗೆ ಎಲ್ಲಾ ಅಂಗನವಾಡಿ ಕೇಂದ್ರದಲ್ಲಿ ನಡೆಸಲಾಗಿದೆ ಎಂದರು. ನಂತರ ಸ್ತನ್ಯಪಾನದ ಮಹತ್ವದ ಬಗ್ಗೆ, ಪೌಷ್ಟಿಕ ಆಹಾರ, ವ್ಯಾಯಾಮದ ಕುರಿತು ಹಾಗೂ ಮಾನಸಿಕ ಮತ್ತು ದೈಹಿಕ ಆರೋಗ್ಯದ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ತೂಕದ ಮಹತ್ವ ಮತ್ತು ಇಲಾಖೆಯಿಂದ ದೊರಕುವ ಸೌಲಭ್ಯಗಳ ಬಗ್ಗೆ ವಿವರಿಸಿದರು. ಅಂಗನವಾಡಿಯಲ್ಲಿ ದೊರಕುವ ಆಹಾರಗಳನ್ನು ಕೇಂದ್ರದಲ್ಲಿಯೇ ಪರಿಶೀಲಿಸಿ ಪಡೆಯಲು ತಿಳಿಸಿದರು. ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಲಲಿತಾ ಅವರು ಶಿಶು ಪ್ರದರ್ಶನ ಕಾರ್ಯಕ್ರಮದ ಉದ್ದೇಶಗಳನ್ನು ವಿವರವಾಗಿ ತಿಳಿಸುತ್ತಾ, ಮೈಲಿಗಲ್ಲುಗಳ ಬಗ್ಗೆ, ಲಸಿಕಾ ಕರಣದ ಬಗ್ಗೆ ವಿವರವಾಗಿ ತಿಳಿಸಿದರು. ಶಿಶು ಪ್ರದರ್ಶನದಲ್ಲಿ ಪ್ರಾದ್ವಿ(ಪ್ರಥಮ ಸ್ಥಾನ) ದಿಶಾ(ದ್ವಿತೀಯ…
ಮಡಿಕೇರಿ, ಆ.7 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ವತಿಯಿಂದ ವಿಶ್ವ ಹೆಪಟೈಟಿಸ್ ದಿನವು ಆ.8 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಬೋಧಕ ಆಸ್ಪತ್ರೆ ಸೆಮಿನಾರ್ ಹಾಲ್(ಜಿಲ್ಲಾ ಆಸ್ಪತ್ರೆ) ನಲ್ಲಿ ನಡೆಯಲಿದೆ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರಾದ ಡಾ.ಕೆ.ಬಿ.ಕಾರ್ಯಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಗೋಪಿನಾಥ್, ಐಎಂಎ ಅಧ್ಯಕ್ಷರಾದ ಡಾ.ಶ್ಯಾಮ್ ಅಪ್ಪಣ್ಣ, ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ರೂಪೇಶ್ ಗೋಪಾಲ್, ಸ್ಥಾನೀಯ ವೈದ್ಯರಾದ ಡಾ.ಸತೀಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಯು. ಚೇತನ್ ಮತ್ತು ಎನ್ವಿಹೆಚ್ಸಿಪಿ ಕಾರ್ಯಕ್ರಮಾಧಿಕಾರಿ ಡಾ.ಎನ್.ಆನಂದ್. ನೋಡಲ್ ಅಧಿಕಾರಿ ಡಾ.ಅಬ್ದುಲ್ ಅಜೀಜ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ, ಆ.7 : ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. 2023-24ನೇ ಸಾಲಿನ ಯೋಜನೆಗಳಾದ ಉತ್ಪಾದನೆ ಮತ್ತು ಉತ್ಪಾದಕತೆಯ ವರ್ಧನೆಗೆ ಸಂಬಂಧಿಸಿದ ಯೋಜನೆಗಳು ಮೀನು ಕೃಷಿ ಕೊಳಗಳ ನಿರ್ಮಾಣ ಹೂಡಿಕೆ ವೆಚ್ಚದೊಂದಿಗೆ, ಒಳನಾಡಿನಲ್ಲಿ ಬಯೋಪ್ಲೋಕ್ ಕೊಳಗಳ ನಿರ್ಮಾಣ(ಹೆಕ್ಟೇರ್ 14 ಲಕ್ಷ ರೂ ಹೂಡಿಕೆ ವೆಚ್ಚ ಸೇರಿದಂತೆ), ಜೀವಂತ ಮೀನು ಮಾರಾಟ ಕೇಂದ್ರಗಳು, ಸಣ್ಣ ಆರ್ಎಎಸ್ (100 ಮೀ. 31 ಟ್ಯಾಂಕ್ ಬಯೋಪ್ಲೋಕ್ (4 ಮೀ ಡಯಾ 1.5 ಮೀ ಎತ್ತರದ 7 ಟ್ಯಾಂಕ್ಗಳು) ಘಟಕವನ್ನು ಸ್ಥಾಪಿಸುವುದು, ಯಾಂತ್ರಿಕೃತ ಎಫ್ಆರ್ಪಿ ಬೋಟ್. ಈ ಯೋಜನೆಗಳಿಗೆ ರೈತರು ಅರ್ಜಿ ಸಲ್ಲಿಸಲು ಆಗಸ್ಟ್, 22 ಕೊನೆಯ ದಿನವಾಗಿದೆ. ಜಿಲ್ಲೆಯ ರೈತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕೋರಿದೆ. ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ಮಡಿಕೇರಿ, ಪೊನ್ನಂಪೇಟೆ ಮತ್ತು ಸೋಮವಾರಪೇಟೆ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಸುಂಟಿಕೊಪ್ಪ, ಆ.7 : ಮೂಲತಃ ಸುಂಟಿಕೊಪ್ಪದವರಾದ ಪ್ರಸ್ತುತ ಬೆಂಗಳೂರಿನ ರೇವ ಯೂನಿವರ್ ಸಿಟಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎ.ಮಂಥನ್ ರಾಷ್ಟ್ರೀಯ ಮಟ್ಟದ ಶೂಟಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಬೆಂಗಳೂರಿನ ಇಂಟರ್ ಡೈರಕ್ಟರೇಟ್ ಶೂಟಿಂಗ್ ತರಬೇತಿ ವತಿಯಿಂದ ಕೇರಳದ ಪಟ್ಟಿವೂರ್ ಕಾವ್ ಎಂಬಲ್ಲಿ ನಡೆದ ಶೂಟಿಂಗ್ ಸ್ಪರ್ಧೆಯಲ್ಲಿ ಮಂಥನ್ ಈ ಸಾಧನೆ ಮಾಡಿದ್ದಾರೆ. ಸುಂಟಿಕೊಪ್ಪ ನಿವಾಸಿಗಳಾದ ಟಿ.ಜಿ.ಅಶ್ವಥ್ ಹಾಗೂ ಜ್ಯೋತಿ ಅವರ ಪುತ್ರ ಮಂಥನ್ ಅವರು ರೇವ ಯೂನಿವರ್ಸೀಟಿಯಲ್ಲಿ ಮೊದಲ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದು, ಪೋಷಕರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಮಂಥನ್ ಸಾಧನೆಯನ್ನು ಕರ್ನಾಟಕ ರಾಜ್ಯಪಾಲರಾದ ತಾವರಚೆಂದ್ ಗೆಹ್ಲೋಟ್ ಅಭಿನಂದಿಸಿದ್ದಾರೆ.






