ಲೇಖಕ: admin

ಮಡಿಕೇರಿ ಆ.7 : ಬೇಂಗೂರು ಗ್ರಾ.ಪಂ ಚೇರಂಬಾಣೆಯ ಎರಡನೇ ಅವಧಿಯ ಆಡಳಿತಕ್ಕಾಗಿ ಇಂದು ನಡೆದ ಚುನಾವಣೆಯಲ್ಲಿ ಯಾವುದೇ ಪಕ್ಷದಲ್ಲಿ ಗುರುತಿಸಿಕೊಳ್ಳದ ಸದಸ್ಯೆ ಪಟ್ಟಮಾಡ ಮಿಲನ್ ಮುತ್ತಣ್ಣ ಅವರಿಗೆ ಕಾಂಗ್ರೆಸ್ ಬೆಂಬಲದೊಂದಿಗೆ ಲಾಟರಿ ಮೂಲಕ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ. ಉಪಾಧ್ಯಕ್ಷರಾಗಿ ಬಿಜೆಪಿಯ ರೆಬೆಲ್ ಸದಸ್ಯ ಕಾಂಗ್ರೆಸ್ ಬೆಂಬಲಿತ ಬಡ್ಡೀರ ಸೋಮಣ್ಣ ಆಯ್ಕೆಯಾಗಿದ್ದಾರೆ. ಒಟ್ಟು 12 ಸದಸ್ಯ ಬಲದ ಗ್ರಾ.ಪಂ ಯಲ್ಲಿ 9 ಬಿಜೆಪಿ ಬೆಂಬಲಿತ, 2 ಕಾಂಗ್ರೆಸ್ ಬೆಂಬಲಿತ ಹಾಗೂ ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಪಕ್ಷೇತರ ಅಭ್ಯರ್ಥಿ ಮಿಲನ್ ಮುತ್ತಣ್ಣ ಅವರಿಗೆ ಕಾಂಗ್ರೆಸ್ ಬೆಂಬಲ ಸೂಚಿಸಿತ್ತು. ಬಿಜೆಪಿ ಬೆಂಬಲಿತರಾಗಿ ತಟ್ಟಂಡ ಸ್ವಾತಿ ಸ್ಪರ್ಧೆಯಲ್ಲಿದ್ದರು. ಆದರೆ ಅಂತಿಮವಾಗಿ ಇಬ್ಬರಿಗೂ ತಲಾ 6 ಮತಗಳು ಲಭಿಸಿದ ಕಾರಣ ಲಾಟರಿ ಮೂಲಕ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಅದೃಷ್ಟ ಮಿಲನ್ ಮುತ್ತಣ್ಣಗೆ ಒಲಿಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಬಡ್ಡೀರ ಸೋಮಣ್ಣ ಹಾಗೂ ಇವರ ಪ್ರತಿಸ್ಪರ್ಧಿಯಾಗಿ ಬಿಜೆಪಿಯ ಕೂರನ ಕಿಶೋರ್ ಸ್ಪರ್ಧೆಯಲ್ಲಿದ್ದರು. ಸೋಮಣ್ಣ 7 ಮತಗಳನ್ನು…

Read More

ಸುಂಟಿಕೊಪ್ಪ,ಆ.7: ಶಿಶು ಜನಿಸಿದ ಅರ್ಧ ಗಂಟೆಯೊಳಗೆ ತಾಯಿಯ ಸ್ತನ್ಯಪಾನ ನೀಡುವುದರಿಂದ ಶಿಶು ಮರಣವನ್ನು ತಪ್ಪಿಸಬಹುದು ಎಂದು ಕೊಡಗರಹಳ್ಳಿ ಆರೋಗ್ಯ ಕಾರ್ಯಕರ್ತೆ ಲತಾ ಕುಮಾರಿ ಹೇಳಿದರು. ಕೊಡಗರಹಳ್ಳಿ ಅಂಗನವಾಡಿ ಕೇಂದ್ರ ಮತ್ತು ಕೊಡಗರಹಳ್ಳಿ ಪ್ರಾಥಮಿಕ ಶಾಲೆಯ ಜಂಟಿ ಆಶ್ರಯದಲ್ಲಿ ಕೊಡಗರಹಳ್ಳಿ ಅಂಗನವಾಡಿ ಕೇಂದ್ರದಲ್ಲಿದಲ್ಲಿ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು. ಕೇಂದ್ರ ಸರಕಾರದ ಈ ಯೋಜನೆ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲಾಗುವ ಪೋಷಣ್ ಮಾಸಾಚರಣೆ ಮಹತ್ವದ ಕುರಿತು ವಿವರಿಸಿದರು. ಮಗುವಿನ ಬೆಳವಣಿಗೆಗೆ ಪೋಷಕಾಂಶ ಹೊಂದಿರುವ ಆಹಾರ ತಾಯಿ ಹಾಲನ್ನು ಹೊರತುಪಡಿಸಿ ಬೇರೊಂದು ಇಲ್ಲ. ತಾಯಿಯ ಎದೆಹಾಲು ರೋಗ ನಿರೋಧಕ ಶಕ್ತಿಯನ್ನು ಹೊಂದಿದ್ದು, ಅಮೃತಕ್ಕೆ ಸಮಾನವಾಗಿದೆ ಎಂದು ಹೇಳಿದರು. ಗ್ರಾ.ಪಂ ಸದಸ್ಯೆ ನೀತಾ ಹರೀಶ್ ಮಾತನಾಡಿ, ಎದೆಹಾಲು ನೀಡುವುದು ಪ್ರತಿ ಮಾತೆಯರ ಆದ್ಯ ಕರ್ತವ್ಯವಾಗಿದೆ. ತಾಯಿ ಸ್ತನ್ಯಪಾನವನ್ನು ಯಾರು ಕೃತಕವಾಗಿ ಸೃಷ್ಟಿಸಲು ಸಾಧ್ಯವಿಲ್ಲ. ತಾಯಿ ಮಗುವಿನ ಬಾಂಧವ್ಯವನ್ನು ಹೆಚ್ಚಿಸುತ್ತದೆ. ಸ್ತನ್ಯಪಾನ ಪಾನವನ್ನು ನೀಡುವುದ್ದರಿಂದ ಶಿಶುವು ಸದೃಢ…

Read More

ಸುಂಟಿಕೊಪ್ಪ ಆ.7 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಒಕ್ಕೂಟ ಮತ್ತು ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರುಗಳು ಕಾನ್‍ಬೈಲ್ ಗ್ರಾಮದ ಶ್ರೀರಾಮ ಮಂದಿರ ದೇವಾಲಯದ ಆವರಣ ಸೇರಿದಂತೆ ಸುತ್ತ ಮುತ್ತಲಿನಲ್ಲಿ ಬೆಳೆದಿದ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಚಗೊಳಿಸಿದರು. ವರ್ಷಂಪ್ರತಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಘದ ಸದಸ್ಯರುಗಳಿಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಆದರಂತೆ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಕಾನ್‍ಬೈಲ್ ಗ್ರಾಮದ ಶ್ರೀ ರಾಮ ಮಂದಿರ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ವಲಯ ಮೇಲ್ವಿಚಾರಕಿ ಭವ್ಯ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಕೂರು ಶಿರಂಗಾಲ ಮಹಿಳಾ ಸ್ವ ಸಹಾಯ ಸಂಘಗಳ ಪ್ರತಿನಿಧಿಗಳು ಹಾಗೂ ಸಂಘದ ಸದಸ್ಯರುಗಳು ಆವರಣದಲ್ಲಿ ಬೆಳೆದಿದ್ದ ಕಾಡು ಗಿಡ ಗಂಟಿ, ಪ್ಲಾಸ್ಟಿಕ್ ಇನ್ನಿತರರ ತ್ಯಾಜ್ಯ ಹಾಗೂ ದೇವಾಲಯದ ಒಳಾಂಗಣವನ್ನು ಶುಭ್ರಗೊಳಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

Read More

ಮಡಿಕೇರಿ ಆ.7 : ಬೇಂಗೂರು ಗ್ರಾ.ಪಂ ಚೇರಂಬಾಣೆಯ ಎರಡನೇ ಅವಧಿಯ ಆಡಳಿತಕ್ಕಾಗಿ ಇಂದು ನಡೆದ ಚುನಾವಣೆಯಲ್ಲಿ ಯಾವುದೇ ಪಕ್ಷದಲ್ಲಿ ಗುರುತಿಸಿಕೊಳ್ಳದ ಸದಸ್ಯೆ ಪಟ್ಟಮಾಡ ಮಿಲನ್ ಮುತ್ತಣ್ಣ ಅವರಿಗೆ ಕಾಂಗ್ರೆಸ್ ಬೆಂಬಲದೊಂದಿಗೆ ಲಾಟರಿ ಮೂಲಕ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ. ಉಪಾಧ್ಯಕ್ಷರಾಗಿ ಬಿಜೆಪಿಯ ರೆಬೆಲ್ ಸದಸ್ಯ ಕಾಂಗ್ರೆಸ್ ಬೆಂಬಲಿತ ಬಡ್ಡೀರ ಸೋಮಣ್ಣ ಆಯ್ಕೆಯಾಗಿದ್ದಾರೆ. ಒಟ್ಟು 12 ಸದಸ್ಯ ಬಲದ ಗ್ರಾ.ಪಂ ಯಲ್ಲಿ 9 ಬಿಜೆಪಿ ಬೆಂಬಲಿತ, 2 ಕಾಂಗ್ರೆಸ್ ಬೆಂಬಲಿತ ಹಾಗೂ ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಪಕ್ಷೇತರ ಅಭ್ಯರ್ಥಿ ಮಿಲನ್ ಮುತ್ತಣ್ಣ ಅವರಿಗೆ ಕಾಂಗ್ರೆಸ್ ಬೆಂಬಲ ಸೂಚಿಸಿತ್ತು. ಬಿಜೆಪಿ ಬೆಂಬಲಿತರಾಗಿ ತಟ್ಟಂಡ ಸ್ವಾತಿ ಸ್ಪರ್ಧೆಯಲ್ಲಿದ್ದರು. ಆದರೆ ಅಂತಿಮವಾಗಿ ಇಬ್ಬರಿಗೂ ತಲಾ 6 ಮತಗಳು ಲಭಿಸಿದ ಕಾರಣ ಲಾಟರಿ ಮೂಲಕ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಅದೃಷ್ಟ ಮಿಲನ್ ಮುತ್ತಣ್ಣಗೆ ಒಲಿಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಬಡ್ಡೀರ ಸೋಮಣ್ಣ ಹಾಗೂ ಇವರ ಪ್ರತಿಸ್ಪರ್ಧಿಯಾಗಿ ಬಿಜೆಪಿಯ ಕೂರನ ಕಿಶೋರ್ ಸ್ಪರ್ಧೆಯಲ್ಲಿದ್ದರು. ಸೋಮಣ್ಣ 7 ಮತಗಳನ್ನು…

Read More

ಮಡಿಕೇರಿ ಆ.7 : ಅತ್ಯಾಚಾರದಿಂದ ಅಮಾನವೀಯವಾಗಿ ಹತ್ಯೆಯಾದ ಉಜಿರೆ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಒಪ್ಪಿಸಬೇಕೆಂದು ಕೊಡಗು ಜಿಲ್ಲಾ ಒಕ್ಕಲಿಗರ ಸಂಘ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ.ಚಂಗಪ್ಪ, ವಿದ್ಯಾರ್ಥಿನಿ ಸೌಜನ್ಯಳ ಹತ್ಯೆಯಾಗಿ 11 ವರ್ಷಗಳೇ ಕಳೆದರೂ ನೈಜ ಆರೋಪಿಯನ್ನು ಬಂಧಿಸದೇ ಇರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಸ್‌ಐಟಿ ತನಿಖೆ ಮೂಲಕ ತಪ್ಪಿತಸ್ಥರನ್ನು ಪತ್ತೆ ಮಾಡಿ ಶಿಕ್ಷೆಗೆ ಗುರಿ ಪಡಿಸಬೇಕು, ಆ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. ಅಮಾಯಕ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಹತ್ಯೆಗೈದಿರುವುದು ಪೈಶಾಚಿಕ ಕೃತ್ಯವಾಗಿದೆ. ಈ ರೀತಿಯ ಘಟನೆಗಳನ್ನು ಯಾವ ಸಮಾಜವೂ ಸಹಿಸಲು ಸಾಧ್ಯವಿಲ್ಲ. ಸುದೀರ್ಘ ಕಾಲದಿಂದ ನೈಜ ತಪ್ಪಿತಸ್ಥರನ್ನು ಪತ್ತೆ ಮಾಡದೆ ಇರುವುದರಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತಿದೆ. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರ ವಹಿಸಲು ಅತ್ಯಾಚಾರ ಪ್ರಕರಣಗಳ ಆರೋಪಿಗಳನ್ನು ಶೀಘ್ರ ಪತ್ತೆ ಮಾಡಿ ಶಿಕ್ಷಗೆ ಗುರಿ ಪಡಿಸುವುದು ಸೂಕ್ತ…

Read More

ಮಡಿಕೇರಿ ಆ.7 : “ವಿಶ್ವ ಆದಿಮಸಂಜಾತ ಸ್ಥಳೀಯ ಜನರ” ಅಂತರಾಷ್ಟ್ರೀಯ ದಿನದ ಪ್ರಯುಕ್ತ ಆ.9 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿ ಕೊಡವ ಸ್ವಯಂ ನಿರ್ಣಯ ಹಕ್ಕು ಮತ್ತು ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತತ್ತೆಯನ್ನು ಒಳಗೊಂಡ ವಿವಿಧ ರಾಜ್ಯಾಂಗದತ್ತ ಹಕ್ಕುಗಳ ಬೇಡಿಕೆಗಳ ಕುರಿತು ಗಮನ ಸೆಳೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ 10.30 ಗಂಟೆಗೆ ಶಾಂತಿಯುತ ಧರಣಿ ನಡೆಸಿ ಸ್ವಯಂ ನಿರ್ಣಯದ ಹಕ್ಕುಗಳನ್ನು ಮಂಡಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2023ನೇ ವರ್ಷವನ್ನು ಪ್ರಪಂಚದಾದ್ಯಂತದ ಆದಿಮಸಂಜಾತ ಸ್ಥಳೀಯ ಜನರ ಸ್ವಯಂ ನಿರ್ಣಯದ ಹಕ್ಕುಗಳ ವರ್ಷವೆಂದು ಯುಎನ್‍ಒ/ವಿಶ್ವ ರಾಷ್ಟ್ರ ಸಂಸ್ಥೆ ಘೋಷಿಸಿದೆ. ಕೊಡವರು ಕೊಡವ ಪ್ರದೇಶದ ಆದಿಮಸಂಜಾತ ಸ್ಥಳೀಯ ಬುಡಕಟ್ಟು ಜನಾಂಗವಾಗಿದೆ. ಆದ್ದರಿಂದ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳು ಮತ್ತು ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಕುರಿತು ಆಡಳಿತ ವ್ಯವಸ್ಥೆಯ ಗಮನ ಸೆಳೆಯಲು ಧರಣಿ ನಡೆಸಲಾಗುತ್ತಿದೆ. ಸ್ವಯಂ…

Read More

ಮಡಿಕೇರಿ ಆ.7 :  ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಜಿಲ್ಲಾಧ್ಯಕ್ಷ  ಪಿ.ಎ.ಹನೀಫ್  ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿ ಮಾಡಿದರು. ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ವಿ.ಪಿ. ಶಶಿಧರ್ ಹಾಗೂ ಕಾಂಗ್ರೆಸ್ ಪ್ರಮುಖರು ಹಾಜರಿದ್ದರು.

Read More

ನಾಪೋಕ್ಲು ಆ.7 :  ಇತಿಹಾಸ ಪ್ರಸಿದ್ಧ ನಾಪೋಕ್ಲು ಸಮೀಪದ ಚೆರಿಯಪರಂಬು ದರ್ಗಾ ಶರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಶಹೀದ್ ಅಬ್ದುಲ್ ರಹ್ಮಾನ್ ವಲಿಯುಲ್ಲಾಹಿ (ನ.ಮ)ಹಾಗೂ ಹೌಲಿಯಾಗಳ ಹೆಸರಿನಲ್ಲಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು 2024 ಫೆ.9ರಿಂದ 13ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಚೆರಿಯಪರಂಬು ಮುಹಿಯುದ್ದೀನ್ ಜುಮಾ ಮಸೀದಿಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ವರದಿ :ಝಕರಿಯ ನಾಪೋಕ್ಲು 

Read More

ಮಡಿಕೇರಿ ಆ.7 : ಮಡಿಕೇರಿಯಲ್ಲಿ ನಡೆದ ಕರ್ನಾಟಕದ ಬೆಸ್ಟ್ ಡ್ಯಾನ್ಸರ್ ಆಡಿಷನ್ ನಲ್ಲಿ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್‍ನ 4ನೇ ತರಗತಿ ವಿದ್ಯಾರ್ಥಿನಿ ಪಿ.ಜಿ.ಸಿಂಚನ ಕಾವೇರಮ್ಮ ಪಾಲ್ಗೊಂಡು ಮುಂದಿನ ಮೆಗಾ ಆಡಿಷನ್ ಗೆ ಆಯ್ಕೆಯಾಗಿದ್ದಾಳೆ. ಇವಳು ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ನೃತ್ಯ ಶಾಲೆಯ ತರಬೇತುದಾರ ಅಭಿಷೇಕ್ ಅವರಲ್ಲಿ ನೃತ್ಯ ತರಬೇತಿ ಪಡೆಯುತ್ತಿದ್ದಾಳೆ. ಸಿಂಚನ ಕೋಪಟ್ಟಿ ಗ್ರಾಮದ ಪೊಡನೋಳನ ಗಿರೀಶ್ ಹಾಗೂ ಪವಿತ್ರ ದಂಪತಿಗಳ ಪುತ್ರಿ.

Read More

ಮಡಿಕೇರಿ ಆ. 7  : ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢ ಶಾಲಾ ವಿಭಾಗದಲ್ಲಿ ರೋಟರಿ ಇಂಟರಾಕ್ಟ್ ಕ್ಲಬ್ ನ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮ ವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ ರೋಟರಿ ಮಿಸ್ಟಿ ಹಿಲ್ಸ್ ನ ಇಂಟರಾಕ್ಟ್ ಸಮಿತಿ ಅಧ್ಯಕ್ಷ ಕಟ್ಟೆಮನೆ ಸೋನಾಜಿತ್, ಪದಗ್ರಹಣಾಧಿಕಾರಿಯಾಗಿ ಪ್ರಮಾಣ ವಚನ ಬೋಧಿಸಿದರು.  ವಿದ್ಯಾಥಿ೯ಗಳಲ್ಲಿ ನಾಯಕತ್ವ ಗುಣ ಮತ್ತು ಸಾಮಾಜಿಕ ಹೊಣೆಗಾರಿಕೆ ಬೆಳೆಸುವಲ್ಲಿ ರೋಟರಿಯ ವಿದ್ಯಾಥಿ೯ ಘಟಕಗಳು ಸಹಕಾರಿ ಎಂದೂ ಸೋನಾಜಿತ್ ಹೇಳಿದರು. ರೋಟರಿ ಮಿಸ್ಟಿ ಹಿಲ್ಸ್ ನ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಮಾತನಾಡಿ, ನಾಪೋಕ್ಲುವಿನ ಕನಾ೯ಟಕ ಪಬ್ಲಿಕ್ ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ವತಿಯಿಂದ 12 ವಷ೯ಗಳ ಹಿಂದೆ ಇಂಟರ್ಯಾಕ್ಟ್ ಘಟಕ ಪ್ರಾರಂಭಿಸಿದ್ದು ಅತ್ಯಂತ ಸಕ್ರಿಯವಾಗಿ ವಿದ್ಯಾಥಿ೯ಗಳು ಕಾಯ೯ಯೋಜನೆ ಕೈಗೊಳ್ಳುತ್ತಿದ್ದಾರೆ. ಈ ಮೂಲಕ ಸಾಮಾಜಿಕ ಬದ್ದತೆಯನ್ನು ಈ ವಿದ್ಯಾಥಿ೯ಗಳಲ್ಲಿ ಕಾಣಬಹುದಾಗಿದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಕಾರ್ಯದರ್ಶಿ ರತ್ನಾಕರ್ ರೈ, ಜಗದೀಶ್, ಅಜಿತ್ ನಾಣಯ್ಯ, ಕಾರ್ಯಪ್ಪ, ಉಪ ಪ್ರಾಂಶುಪಾಲ…

Read More