ಲೇಖಕ: admin

ಮಡಿಕೇರಿ ಜು.8 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ಜನ್ಮದಿನವನ್ನು ಜು.9 ರಂದು ಭಾಗಮಂಡಲದ ಕೋರಂಗಾಲದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಮುಖರಾದ ಸುನೀಲ್ ಪತ್ರಾವೋ ಹಾಗೂ ಹಾರಿಸ್ ಪದಕಲ್ ತಿಳಿಸಿದ್ದಾರೆ. ಬೆಳಗ್ಗೆ 8 ಗಂಟೆಗೆ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಪೊನ್ನಣ್ಣ ಅವರು, ಸಸಿ ನೆಡುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣಗೊಳಿಸಲಿರುವರು. ನಂತರ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಪೂಜೆ ನೆರವೇರಿಸಲಿದ್ದಾರೆ. 10 ಗಂಟೆಗೆ ಕೋರಂಗಾಲದ ಅಟಲ್ ಬಿಹಾರಿ ವಾಜಪೇಯಿ ವಸತಿಯ ಶಾಲೆಯ ಮಕ್ಕಳೊಂದಿಗೆ ಜನ್ಮದಿನದ ಆಚರಣೆ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Read More

ಮಡಿಕೇರಿ ಜು.8 : ನಗರಸಭಾ ಸದಸ್ಯ ಕಾಳಚಂಡ ಅಪ್ಪಣ್ಣ ಅವರ ಮೇಲಿನ ಹಲ್ಲೆ ಪ್ರಕರಣವನ್ನು ನಗರಸಭೆಯ ಎಸ್‍ಡಿಪಿಐ ಸದಸ್ಯರುಗಳಾದ ಅಮೀನ್ ಮೊಹಿಸಿನ್, ಮನ್ಸೂರ್, ಬಶೀರ್ ಅಹಮ್ಮದ್, ಮೇರಿ ವೇಗಸ್ ಹಾಗೂ ನೀಮಾ ಅರ್ಷಾದ್ ತೀವ್ರವಾಗಿ ಖಂಡಿಸಿದ್ದಾರೆ. ಜನರಿಂದ ಆಯ್ಕೆಯಾದ ಜನಪ್ರತಿನಿಧಿಯೊಬ್ಬರನ್ನು ಕ್ಷುಲಕ ಕಾರಣಕ್ಕಾಗಿ ಹಲ್ಲೆ ಮಾಡಿರುವುದು ಅಪರಾಧವಾಗಿದ್ದು, ತಪ್ಪಿತಸ್ಥರ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ. ನಗರದ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಕಾನೂನಾತ್ಮಕವಾಗಿ ಬಗೆಹರಿಸಿಕೊಳ್ಳಬೇಕೆ ಹೊರತು ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ನಗರಸಭಾ ಸದಸ್ಯರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಎಸ್‍ಡಿಪಿಐ ಸದಸ್ಯರು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಜು.8 : ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ  ಕೊಡಮಾಡುವ  “ವಿಕಾಸ ಶ್ರೀ ಪ್ರಶಸ್ತಿ” ಗೆ ನಗರದ ಸ್ನೇಹಶ್ರಾಯ  ಯೂತ್  ಟ್ರಸ್ಟ್‌ನ ನಿರ್ದೇಶಕ ಸಿ.ವಿ.ವಿಶ್ವನಾಥ್ ಭಾಜನರಾಗಿದ್ದಾರೆ. ಜಿಲ್ಲೆಯಲ್ಲಿ ಕಳೆದ 9ವರ್ಷಗಳಿಂದ ಮಾನಸಿಕ ಅಸ್ವಸ್ಥರು ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಸೇವೆಯನ್ನು ಗುರುತಿಸಿ ಸಿ.ವಿ.ವಿಶ್ವನಾಥ್  ಈ ಪ್ರಶಸ್ತಿಯನ್ನು ನೀಡಿದೆ. ಜು.12 ರಂದು  ಮೈಸೂರಿನ ಕಲಾಭವನದಲ್ಲಿ ನಡೆಯಲಿರುವ ದಿ.ಕೆ.ಹೆಚ್.ರಾಮಯ್ಯ ಅವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Read More

ಮಡಿಕೇರಿ ಜು.8 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಕೆ.ಆರ್.ದಿನೇಶ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಟಿ.ಎಂ.ಧರ್ಮಜ ಉತ್ತಪ್ಪ ಅವರ ಶಿಫಾರಸ್ಸಿನ ಮೇರೆಗೆ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿ ಗೌಡ ಅವರು ದಿನೇಶ್ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಪಕ್ಷ ಸಂಘಟನೆಯೊಂದಿಗೆ ಜಿಲ್ಲೆಯ ಕಾರ್ಮಿಕ ವರ್ಗದ ಕುಂದು ಕೊರತೆಗಳನ್ನು ಅವಲೋಕಿಸಿ ಪಕ್ಷ ಮತ್ತು ಸರ್ಕಾರದ ಗಮನ ಸೆಳೆಯುವುದಾಗಿ ದಿನೇಶ್ ತಿಳಿಸಿದ್ದಾರೆ.

Read More

ಕುಶಾಲನಗರ ಜು.8: ನಾವು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಹೆಚ್ಚೆಚ್ಚು ಗಿಡ- ಮರಗಳನ್ನು ಬೆಳೆಸುವ ಮೂಲಕ ಉತ್ತಮ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆಗೆ ಪಣ ತೊಡಬೇಕಾಗಿದೆ ಎಂದು ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ‌ ಪ್ರಾಂಶುಪಾಲ ಸತೀಶ್ ಕಾಳೇಗೌಡ  ಹೇಳಿದರು. ಕರ್ನಾಟಕ ಅರಣ್ಯ ಇಲಾಖೆಯ ಕುಶಾಲನಗರ ಅರಣ್ಯ ವಲಯ ಹಾಗೂ ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಕೊಡಗು ಜಿಲ್ಲಾ ಘಟಕದ ವತಿಯಿಂದ ಕುಶಾಲನಗರ ಕಾವೇರಿ ಪರಿಸರ ಬಳಗ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ, ಕಾಲೇಜಿನ ಎನ್.ಎಸ್.ಎಸ್.ಘಟಕ ಹಾಗೂ ಸುಂಟಿಕೊಪ್ಪ ಜೆ.ಸಿ.ಐ.ಸಂಸ್ಥೆಯ ಸಹಯೋಗದಲ್ಲಿ ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ “ನಮ್ಮ ನಡೆ ಹಸಿರೆಡೆಗೆ'( ಗ್ರೋ ಗ್ರೀನ್ ) ಹಾಗೂ ‘ನನ್ನ ಗಿಡ ನನ್ನ ಹೆಮ್ಮೆ’ ಅಂಗವಾಗಿ ಏರ್ಪಡಿಸಿದ್ದ ವನ ಮಹೋತ್ಸವ ಸಪ್ತಾಹ :2023 ರ ಅಂಗವಾಗಿ 350 ಅರಣ್ಯ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಪರಿಸರವನ್ನು ರಕ್ಷಣೆ ಮಾಡುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದ್ದು,…

Read More

ಮಡಿಕೇರಿ ಜು.8 :  ಮಡಿಕೇರಿ ನಗರಸಭಾ ಸದಸ್ಯ  ಅಪ್ಪಣ್ಣ ಅವರ ಮೇಲೆ ಗುಂಪು ಹಲ್ಲೆ ಮಾಡಿರುವ ಕ್ರಮವನ್ನು ಕೊಡವಾಮೆರ ಕೊಂಡಾಟ ಸಂಘಟನೆ ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ದ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ  ಕೊಡವಾಮೆರ ಕೊಂಡಾಟ ಸಂಘಟನೆ  ಈ ರೀತಿಯ ಘಟನೆ ಮರುಕಳಿಸದಂತೆ  ಪೊಲೀಸ್ ಇಲಾಖೆ  ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ಒಬ್ಬ ನಗರಸಭಾ ಸದಸ್ಯನ ಮೇಲೆ ತನ್ನ ವಾರ್ಡ್ ವ್ಯಾಪ್ತಿಯಲ್ಲಿ ರಕ್ಷಣೆ ಇಲ್ಲದೆ ಹೋದರೆ ಸಾಮಾನ್ಯರ ಪಾಡೇನು ಎಂದು ಪ್ರಶ್ನಿಸಿದ ಸಂಘಟನೆಯ ಪ್ರಮುಖರು   ಮುಂದಿನ ದಿನಗಳಲ್ಲಿ ಕ್ಷುಲ್ಲಕ ವಿಚಾರಗಳೇ ಬೇರೆ ಬೇರೆ ಆಯಾಮಗಳಿಗೆ ತಿರುವು ಪಡೆದುಕೊಂಡು, ಜಿಲ್ಲೆಯಲ್ಲಿ ಗೊಂದಲ ಮತ್ತು ಅಶಾಂತಿಯ ವಾತಾವರಣ ಸೃಷ್ಟಿಯಾಗುವುದನ್ನು ತಡೆಯಬೇಕಾದರೆ ಪೋಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಘಟನೆ ಆಗ್ರಹಿಸಿದೆ.

Read More

ಮಡಿಕೇರಿ ಜು.8 :  ಕೊಡಗು ಜಿಲ್ಲೆಗೆ ಅತ್ಯವಶ್ಯಕವಾದ ಹೈಟೆಕ್ ಆಸ್ಪತ್ರೆಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸಕಾ೯ರ ಆದ್ಯತೆ ನೀಡಿದ್ದು, ಆರೋಗ್ಯ ಕ್ಷೇತ್ರದ ಬಹುಕಾಲದ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ ಇದು ಜನಪರವಾದ ಬಜೆಟ್ ಎಂದು ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪರವಂಡ ಸಿರಾಜ್ ಪ್ರತಿಕ್ರಿಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು,   ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಕೊಡಗು ದೇಶ ಸೇವೆ, ಕ್ರೀಡಾ ಕ್ಷೇತ್ರ, ಪ್ರವಾಸೋದ್ಯಮದಲ್ಲೂ ಹೆಸರು ಪಡೆದಿದೆ. ಜಿಲ್ಲೆಗೆ ಹೊರಗಿನಿಂದ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಾರೆ, ಆದರೆ ತುರ್ತು ಸಂದರ್ಭದಲ್ಲಿ ಸೂಕ್ತ  ಚಿಕಿತ್ಸೆ ನೀಡಲು, ಶಸ್ತ್ರಚಿಕಿತ್ಸೆ ಒದಗಿಸಲು ಸುಸಜ್ಜಿತವಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕೊರತೆಯಿತ್ತು, ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದಕ್ಕೆ ಆದ್ಯತೆ  ನೀಡಿದೆ. ಅಲ್ಲದೆ  ಕಾಫಿಯನ್ನು ಬ್ರಾಂಡ್ ಮಾಡುವ ಮೂಲಕ ಆಂತರಿಕವಾಗಿ ಕಾಫಿ ಬಳಕೆ ಹೆಚ್ಚಳಕ್ಕೆ ಸಕಾ೯ರ ಒತ್ತು ನೀಡಲಿದೆ, ಇದು ಕಾಫಿ ಜಿಲ್ಲೆಯಾದ ಕೊಡಗಿನ ಕಾಫಿ ಬೆಳೆಗಾರರಿಗೂ ಸಂತಸ ತಂದಿದೆ ಎಂದರು. ಕೊಡಗಿನ ಜನತೆಗೆ ಚುನಾವಣಾ ಪ್ರಾಣಾಳಿಕೆಯಲ್ಲಿ…

Read More

ಕಡಂಗ ಜು.8 :  ಜಿಲ್ಲೆಯಲ್ಲಿ ಸುರಿದ ನಿರಂತರ ಮಳೆಯಿಂದಾಗಿ ನಾಪೋಕ್ಲುವಿನ ವಿವಿಧೆಡೆ ಹಾನಿಯಾಗಿದ್ದು,  ಬೊಳ್ಳುಮಾಡು ರಸ್ತೆಯಲ್ಲಿರುವ ವರ್ಗೀಸ್ ಎಂಬವರಿಗೆ ಸೇರಿದ  ಕಾಫಿ ಕ್ಯೂರಿಂಗ್ ವರ್ಕ್ಸ್ ನ ಮೇಲೆ  ಮರದ ಕೊಂಬೆ ಬಿದ್ದು ಗೋಡೆ ಮತ್ತು ಶೀಟ್ ಹಾನಿಯಾದ ಘಟನೆ ನಡೆದಿದೆ. ಮಳೆಯ ನೀರು ಮಿಲ್ ಗೆ ಪ್ರವೇಶಿಸಿ ಕಾಫಿ ಚೀಲಗಳು ಮತ್ತು ಕಾಫಿ ಕೊಂಚ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ. ವರದಿ : ನೌಫಲ್  

Read More

ಮಡಿಕೇರಿ ಜು.8 : ಕೇಂದ್ರ ಸರ್ಕಾರ ಜಿಲ್ಲೆಯನ್ನು ಬಜೆಟ್ ನಲ್ಲಿ ನಡೆಸಿಕೊಂಡ ರೀತಿಯೆ ರಾಜ್ಯ ಬಜೆಟ್ ನಲ್ಲಿ ನಡೆದಿದೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ ನಲ್ಲಿ ಕೊಡಗು ಜಿಲ್ಲೆಗೆ ಹೈಟೆಕ್ ಆಸ್ಪತ್ರೆ ಮತ್ತು ಕಾಫಿಗೆ ಬ್ರಾಂಡ್ ಬೆಳೆಸುವುದು ಬಿಟ್ಟರೆ ಬೇರೇನೂ ಇಲ್ಲ. ಜಿಲ್ಲೆಯಲ್ಲಿ ಆಸ್ಪತ್ರೆಗೆ ಅನುದಾನ ಒಳ್ಳೆಯ ಬೆಳವಣಿಗೆ. ಆದರೆ ಪ್ರತಿ ತಾಲೂಕಿಗೆ ಒಂದು ಸುಸಜ್ಜಿತ ಆಸ್ಪತ್ರೆ ಅವಶ್ಯಕತೆ ಇದ್ದು, ಅದನ್ನು ಈಡೇರಿಸಿಲ್ಲ. ಜಿಲ್ಲೆಯಲ್ಲಿ ವಿಶ್ವವಿದ್ಯಾಲಯಕ್ಕೆ ಕಟ್ಟಡ ನಿರ್ಮಾಣಕ್ಕೆ ಯಾವುದೇ ಅನುದಾನ ಇಲ್ಲ. ಬಹಳ ವರ್ಷಗಳ ನಂತರ ಕೊಡಗಿನಲ್ಲಿ ಶಾಸಕರ ಬದಲಾವಣೆ ಕಂಡಿದ್ದು, ರಾಜ್ಯ ಸರ್ಕಾರದ ಮೇಲೆ ಜನರು ಬಹಳ ನೀರಿಕ್ಷೆ ಇಟ್ಟಿದ್ದರು. ಆದರೆ ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿಸಿದೆ ಎಂದು ಭೋಜಣ್ಣ ಸೋಮಯ್ಯ ಹೇಳಿದರು.

Read More

ಮಡಿಕೇರಿ ಜು.8 : ರಾಜ್ಯ ಬಜೆಟ್‍ನಲ್ಲಿ ಕೊಡಗು ಜಿಲ್ಲೆಗೆ ಅನ್ಯಾಯ ಮಾಡಲಾಗಿದೆ. ಯಾವುದೇ ಅನುದಾನ ನೀಡದೆ ಇರುವುದು ಮಲತಾಯಿ ಧೋರಣೆಗೆ ಸಾಕ್ಷಿಯಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಆರೋಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ಜಿಲ್ಲೆಗೆ 400 ಬೆಡ್‍ನ ಸುಸಜ್ಜಿತ ಆಸ್ಪತ್ರೆಯನ್ನು ನೀಡಿ ಉದ್ಘಾಟನೆ ಹಂತಕ್ಕೆ ತಲುಪಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಘೋಷಿಸಿರುವ ಆಸ್ಪತ್ರೆಯ ಕುರಿತು ಜಿಲ್ಲೆಯ ಜನತೆಗೆ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. ಕಾಮಗಾರಿಗಾಗಿ ಹಿಂದೆ ಮಾಡಲಾದ ಭೂಮಿಪೂಜೆಗೆ ಮತ್ತೊಮ್ಮೆ ಭೂಮಿಪೂಜೆ ಮಾಡಿ ನಾವು ಮಾಡಿದ್ದೇವೆ ಎಂದು ಹೇಳುವುದು ಸರಿಯಲ್ಲ. ಈ ರೀತಿಯ ನಡೆ ದ್ವೇಷದ ರಾಜಕೀಯ ಎಂದು ಟೀಕಿಸಿದ ಅವರು, ಹಿಂದಿನ ಸರ್ಕಾರದ ಯೋಜನೆಯನ್ನು ಯತಾಸ್ಥಿತಿಯಲ್ಲಿ ಮುಂದುವರೆಸಬೇಕು ಎಂದು ಆಗ್ರಹಿಸಿದರು. ಜಿಲ್ಲಾ ವಕ್ತಾರ ಮಹೇಶ್ ಜೈನಿ ಮಾತನಾಡಿ, ಬಿಟ್ಟಿ ಗ್ಯಾರಂಟಿಗಳ ಮೂಲಕ ಮತಗಳಿಸಿರುವ ಕಾಂಗ್ರೆಸ್ ಸರ್ಕಾರ ತೆರಿಗೆ ಹೆಚ್ಚಳ ಮಾಡಿ ಜನರ ಹೊರೆಯನ್ನು ಹೆಚ್ಚಿಸಿದೆ. ಸಾಲದ…

Read More