ವಿರಾಜಪೇಟೆ ಆ.7 : ಕೊಡಗಿನಲ್ಲಿ ಮುಂಗಾರು ಮಳೆಯ ಏರಿಳಿತದ ನಡುವೆ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಇದರ ಮಧ್ಯೆ “ಗ್ರಾಮೀಣ ಕೆಸರು ಗದ್ದೆ ಕ್ರೀಡಾಕೂಟ” ವೈಭವದಿಂದ ನಡೆಯುತ್ತಿದೆ. ವಿರಾಜಪೇಟೆಯ ಅರಮೇರಿ ಕಳಂಚೇರಿ ಮಠದ ಎಸ್.ಎಂ.ಎಸ್. ವಿದ್ಯಾಪೀಠ ಇಂತಹದ್ದೊಂದು ಕ್ರೀಡಾಕೂಟ ದೇಸೀ ಸೊಗಡನ್ನು ಅನಾವರಣಗೊಳಿಸಿತ್ತು. ಕೆಸರುಗದ್ದೆ ಕ್ರೀಡಾಕೂಟದಲ್ಲಿ ವಾಲಿಬಾಲ್, ಥ್ರೋಬಾಲ್, ಕಬ್ಬಡ್ಡಿ, ರನ್ನಿಂಗ್ ಮೊದಲಾದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಮಕ್ಕಳು ಮನಸೋ ಇಚ್ಛೆ ಖುಷಿಪಟ್ಟರು. ಮೋಡ ಮುಸುಕಿದ ವಾತಾವರಣ, ಭತ್ತದ ನಾಟಿಗೆ ಸಿದ್ಧಗೊಂಡಿದ್ದ ಕೆಸರು ಗದ್ದೆಯಲ್ಲಿ, ಕೆಸರಿನಲ್ಲಿ ಶಾಲಾ ವಿದ್ಯಾರ್ಥಿಗಳು ಗದ್ದೆಗೆ ಇಳಿದು ನಾನಾ ಸ್ಪರ್ಧೆಗಳಲ್ಲಿ ಪಾಲ್ಗೊಂಡರು. ಪ್ರತ್ಯೇಕವಾಗಿ ಕೆಸರು ಗದ್ದೆ ಓಟ, ವಾಲಿಬಾಲ್, ಥ್ರೋಬಾಲ್, ವಿವಿಧ ಸ್ಪರ್ಧೆಗಳು ನಡೆದವು. ಇದರೊಂದಿಗೆ ಕೆಸರಿನಲ್ಲಿ ವಿದ್ಯಾರ್ಥಿಗಳ ರೋಚಕ ನೃತ್ಯ ಕ್ರೀಡೆಗೆ ಸಾಂಸ್ಕೃತಿಕ ಮೆರುಗನ್ನು ನೀಡಿತು, ಬಹುತೇಕ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಂಡಿದ್ದರು. ಕೆಸರು ಗದ್ದೆಯಲ್ಲಿ ಎದ್ದು ಬಿದ್ದು ಖುಷಿಪಟ್ಟರು. ಶಿಕ್ಷಕರು ಇದಕ್ಕೆ ಪ್ರೋತ್ಸಾಹ ನೀಡಿದರು. ಎಸ್.ಎಂ. ಎಸ್ ಶಾಲೆಯಲ್ಲಿ ಕಳೆದ 15 ವರ್ಷಗಳಿಂದ ಕೆಸರು ಗದ್ದೆ ಗ್ರಾಮೀಣ…
ಲೇಖಕ: admin
ಬೆಂಗಳೂರು : ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತ ಪಡಿಸಿದ್ದಾರೆ. ಸಿದ್ದರಾಮಯ್ಯ ಟ್ವೀಟ್ ಮಾಡಿ, ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.
ಮಡಿಕೇರಿ ಆ.7 : ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಸಂಘ ಸಿಐಟಿಯು ಸಂಯೋಜಿತ ಜಿಲ್ಲಾ ಮಟ್ಟದ ವಿಶೇಷ ಸಭೆ ಮಡಿಕೇರಿ ಬಾಲ ಭವನದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷ ಪಿ.ಆರ್ ಭರತ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾ.ಪಂ ನೌಕರರು ಎದುರಿಸುತ್ತಿರುವ ಸಮಸ್ಯೆಗಳು ಸರಕಾರದ ಜೊತೆ ನಡೆಸಿರುವ ಚರ್ಚೆಯ ಬಗ್ಗೆ ಪ್ರಸ್ತಾಪಿಸಲಾಯಿತು. ಸಿ ಐ ಟಿ ಯು ರಾಜ್ಯಾಧ್ಯಕ್ಷರಾಗಿ, ಪ್ರದಾನ ಕಾರ್ಯದರ್ಶಿಯಾಗಿ ಹೆಚ್ಚು ಕಾಲ ಸಲ್ಲಿಸಿದ ದಿವಂಗತ ವಿ.ಪಿ.ಕುಲಕರ್ಣಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವಿ.ಪಿ.ಕುಲಕರ್ಣಿ ಅವರ ಸೇವೆ ಗ್ರಾ.ಪಂ ನೌಕರರಿಗೆ ಸರ್ಕಾರದಿಂದ ಕೊಡಿಸಿದ ಅನುಕೂಲಗಳ ಬಗ್ಗೆ ಹಲವಾರು ವಿಷಯವನ್ನು ರಾಜ್ಯ ಪ್ರದಾನ ಕಾರ್ಯದರ್ಶಿ ಜಿ.ರಾಮಕೃಷ್ಣ ಪ್ರಸ್ತಾಪಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಎಂ.ಎಸ್. ಮಹದೇವ್, ವಿದ್ಯಾ ಶ್ರೇಯಸ್, ಹಾಸಿಫ್ ವೇಣು, ಖಜಾಂಚಿ ವಸಂತ್, ಹಾಗೂ ಇತರರು ಹಾಜರಿದ್ದರು.
ಮಡಿಕೇರಿ ಆ.7 : ರಾಜ್ಯದ ಕ್ರೀಡಾ ತವರೂರು ಕೊಡಗು ಕ್ರೀಡೆಯಲ್ಲಿ ಸದಾ ಸುದ್ದಿಯಲ್ಲಿರುವ ಜಿಲ್ಲೆ.ಅಪ್ರತಿಮ ಕ್ರೀಡಾಪಟುಗಳನ್ನು ಪುಟ್ಟ ಜಿಲ್ಲೆ ಕೊಡಗು ಅಂತರರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸಿದೆ. ಬಾಲ್ಯದಿಂದಲೇ ಕ್ರೀಡೆಯಲ್ಲಿ ಸೂಕ್ತ ತರಬೇತಿ,ಶಾಲಾ ಮಟ್ಟದಿಂದಲೇ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಅವಕಾಶ ದೊರೆತರೆ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಲು ಸಾಧ್ಯ. ವಿದ್ಯಾರ್ಥಿಗಳು ಪ್ರಾಥಮಿಕ ಶಾಲೆಯಿಂದಲೇ ಕ್ರೀಡೆಯ ಬಗ್ಗೆ ಆಸಕ್ತಿವಹಿಸಿಕೊಂಡರೆ ಮಾತ್ರ ಉತ್ತಮ ಕ್ರೀಡಾಪಟುಗಳಾಗಿ ರೂಪುಗೊಳ್ಳಲು ಸಾಧ್ಯ. ಆದರೆ ಮಕ್ಕಳಿಗೆ ಆಟದ ಪಾಠ ಹೇಳಿಕೊಡಲು ದೈಹಿಕ ಶಿಕ್ಷಕರೇ ಇಲ್ಲದಂತಾಗಿದೆ. ಹೌದು ಕ್ರೀಡಾ ತವರಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಕ್ರೀಡೆಯ ಬಗ್ಗೆ ತರಬೇತಿ ನೀಡಲು ದೈಹಿಕ ಶಿಕ್ಷಕರಿಲ್ಲದೆ ಕ್ರೀಡೆಯಿಂದ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಪ್ರಾಥಮಿಕ, ಪ್ರೌಢಶಾಲೆ ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ 80 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿರುವ ಒಟ್ಟು 58 ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಹುದ್ದೆ ಖಾಲಿ ಇದೆ. ಪ್ರಸಕ್ತ ಶೈಕ್ಷಣಿಕ ವರ್ಷ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೊಡಗಿನ 10 ದೈಹಿಕ ಶಿಕ್ಷಕರು ಬೇರೆ ಜಿಲ್ಲೆಗಳಿಗೆ…
ಬೆಂಗಳೂರು: ಸ್ಯಾಂಡಲ್ ವುಟ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅವರಿಗೆ ಹೃದಯಾಘಾತದಿಂದ ನಿಧನಾರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸಂಭವಿಸಿದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ ವೇಳೆ ದುರಂತ ಸಂಭವಿಸಿದೆ. ಬ್ಯಾಂಕಾಕ್ ನಲ್ಲಿ ಹೃದಯಾಘಾತವಾಗಿ, ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಸ್ಪಂದನಾ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ಅವರ ಪುತ್ರಿಯಾಗಿದ್ದಾರೆ.
ಮಡಿಕೇರಿ ಆ.7 : ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿ ತಾಲೂಕಿನ ಗೂಡ್ಲುರು ಚನ್ನಂಗಿ ಗ್ರಾಮದ ಕೆ.ಆರ್.ಕಿರಣ್ ಬಂಧಿತ ಆರೋಪಿ. ತನ್ನ ಮನೆಯ ಹಿಂಭಾಗದ ಕಾಫಿ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಪೊಲೀಸರು ಬೆಳೆದಿದ್ದ 31 ಕೆಜಿ 900 ಗ್ರಾಂ ತೂಕದ ಮಾದಕ ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಮಡಿಕೇರಿ ಉಪ ವಿಭಾಗದ ಡಿವೈಎಸ್ಪಿ ಎಂ.ಜಗದೀಶ್, ಮಡಿಕೇರಿ ನಗರ ವೃತ್ತ ಅನೂಪ್ ಮಾದಪ್ಪ, ಸಿದ್ದಾಪುರ ಪೊಲೀಸ್ ಠಾಣೆ ಪಿಎಸ್ಐ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
ಮಡಿಕೇರಿ ಅ .6. ಖ್ಯಾತ ಜಾನಪದ ಗಾಯಕ, ಹೋರಾಟಗಾರ ಗದ್ದರ್ ಭಾನುವಾರ ನಿಧನರಾಗಿದ್ದಾರೆ. ಇವರ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೊಡಗು ಜಿಲ್ಲೆ ಲೇಖಕ ಮತ್ತು ಕಲಾವಿದರ ಬಳಗ ಸಂತಾಪ ವ್ಯಕ್ತಪಡಿಸುತ್ತದೆ ಎಂದು ಅಧ್ಯಕ್ಷ ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗದ್ದರ್ ಎಂದೇ ಖ್ಯಾತ ಪಡೆದಿದ್ದ ಕ್ರಾಂತಿಕಾರಿ ಗಾಯಕ 77 ವರ್ಷದ ಗುಮ್ಮಡಿ ವಿಠಲ್ ರಾವ್ ಅವರು ಕಳೆದ ಕೆಲವು ದಿನಗಳಿಂದ ಶ್ವಾಸಕೋಶ ಮತ್ತು ಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಅಪೋಲೋ ಸ್ಪೆಕ್ಟ್ರಾ ಆಸ್ಪತ್ರೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರ ತೀವ್ರ ಹೃದ್ರೋಗದಿಂದ ಬಳಲುತ್ತಿದ್ದ ಅವರು ಜುಲೈ 20 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 3 ರಂದು ಅವರಿಗೆ ಬೈಪಾಸ್ ಸರ್ಜರಿ ಮಾಡಲಾಗಿತ್ತು ಮತ್ತು ಚೇತರಿಸಿಕೊಂಡಿದ್ದಾರೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ ಆದಾಗ್ಯೂ, ಅವರು ಶ್ವಾಸಕೋಶ ಮತ್ತು ಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು…
ಮಡಿಕೇರಿ ಆ.6 : 2018 ರಲ್ಲಿ ಅಂದಿನ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ನನಗೆ ನ್ಯಾಯಾಧೀಶನಾಗುವಂತೆ ಆಹ್ವಾನ ನೀಡಿದರು. ಪ್ರಾರಂಭದಲ್ಲಿ ಹಿಂಜರಿದೆನಾದರೂ ಅಜ್ಜಿಕುಟ್ಟೀರ ಜಸ್ಟೀಸ್ ಬೋಪಣ್ಣ ಅವರ ಸಲಹೆ ಮೇರೆಗೆ ನ್ಯಾಯಾಧೀಶನಾಗಲು ಸಮ್ಮತಿ ಸೂಚಿಸಿ ಅದಕ್ಕೆ ಅಗತ್ಯವಾದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದೆ. 44 ವರ್ಷದವನಾಗಿದ್ದ ನಾನು ಇನ್ನೇನು ಕನಾ9ಟಕದ ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ನ್ಯಾಯಾಧೀಶನಾಗುವ ಹಂತದಲ್ಲಿದ್ದೆ. ಆದರೆ ಕೊನೇ ಕ್ಷಣದಲ್ಲಿ ಯಾವುದೇ ಕಾರಣಗಳಿಲ್ಲದೆ ನನಗೆ ಅವಕಾಶ ತಪ್ಪಿಹೋಯಿತು. ಹೀಗಾಗಿ ಮತ್ತೆ ವಕೀಲ ವೃತ್ತಿಯಲ್ಲಿಯೇ ಮುಂದುವರೆದು ಉನ್ನತ ಹುದ್ದೆಗಳನ್ನು ಅಲಂಕರಿಸಿ ಶಾಸಕನಾಗಿ ಆಯ್ಕೆಯಾಗಿ ಮುಖ್ಯಮಂತ್ರಿಯ ಕಾನೂನು ಸಲಹೆಗಾರನಾಗಿ ನೇಮಕಗೊಂಡೆ. ನ್ಯಾಯಾಧೀಶನಾಗಲಿಲ್ಲ ಎಂದು ನಾನು ಯಾವತ್ತೂ ತಲೆಕೆಡಿಸಿಕೊಳ್ಳಲಿಲ್ಲ. ಯಾವುದನ್ನೂ ಕೇಳದೆ ನನಗೆ ಉತ್ತಮ ಸ್ಥಾನಗಳು ದೊರಕುತ್ತಾ ಬಂದಿದೆ. ಹೀಗಾಗಿ ತಪ್ಪಿಹೋದ ಅವಕಾಶಗಳ ಬಗ್ಗೆ ಚಿಂತೆ ಮಾಡಿಲ್ಲ. (ವಕೀಲರ ಸಂಘದ ಕಾರ್ಯಕ್ರಮದಲ್ಲಿ ಎ.ಎಸ್.ಪೊನ್ನಣ್ಣ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ)
ಮಡಿಕೇರಿ ಆ.6 : ನಾನು ಶಾಸಕನಾಗಲು ಯೋಚನೆ ಮಾಡಿದ್ದೇ ಒಂದು ಸವಾಲಿನಿಂದಾಗಿ. ಮನೆಯಲ್ಲಿ ತಂದೆಯವರಾದ ಎ.ಮಂಜು ಸಚಿವರಾಗಿದ್ದರು. ಈ ಸಂದರ್ಭ ನನಗೂ ಅವರಿಗೂ ಬಹಳ ಆಸಕ್ತಿದಾಯಕವಾದ ಚರ್ಚೆಗಳಾಗುತ್ತಿದ್ದವು. ಒಂದು ಹಂತದಲ್ಲಿ ನಿಮಗಿಂತ ಉತ್ತಮವಾಗಿ ಅಧಿಕಾರ ನಿರ್ವಹಿಸುವೆ ಎಂದು ಚಾಲೆಂಜ್ ಮಾಡಿ ರಾಜಕೀಯ ಕ್ಷೇತ್ರಕ್ಕೆ ಬಂದೆ. ಹಾಸನದಿಂದ ಸ್ಪರ್ಧಿಸಲು ಚಿಂತಿಸುತ್ತಿದ್ದಾಗ ಎ.ಎಸ್.ಪೊನ್ನಣ್ಣ ಅವರು ವಿಧಾನ ಪರಿಷತ್ ಚುನಾವಣೆಗೆ ಕೊಡಗಿನಿಂದ ಸ್ಪರ್ಧಿಸುವಂತೆ ಆಹ್ವಾನಿಸಿದರು. ಅಂತೆಯೇ ಇಲ್ಲಿ ಬಂದೆ, ಅಲ್ಪಮತಗಳ ಅಂತರದಲ್ಲಿ ಸೋಲು ಕಂಡೆ. ಆದರೂ ಛಲ ಬಿಡದೆ ಆನಂತರದ ದಿನಗಳಲ್ಲಿ ಸರಿ ಸುಮಾರು 15 ತಿಂಗಳು ಮಡಿಕೇರಿ ಕ್ಷೇತ್ರದಲ್ಲಿಯೇ ಜನರೊಂದಿಗೆ ಬೆರೆಯುತ್ತಾ ಹೋದೆ. ಪೊನ್ನಣ್ಣ ಅವರು ಮಡಿಕೇರಿ ಕ್ಷೇತ್ರದಿಂದ ಟಿಕೆಟ್ ದೊರಕುವಲ್ಲಿ ಕಾರಣರಾದರು. ಜನರೊಂದಿಗೆ ವಿಶ್ವಾಸದಿಂದ ಇದ್ದದ್ದು ನಾನು ಶಾಸಕನಾಗಿ ಆಯ್ಕೆಯಾಗಲು ನೆರವಾಯಿತು. (ವಕೀಲರ ಸಂಘದ ಕಾರ್ಯಕ್ರಮದಲ್ಲಿ ಡಾ.ಮಂಥರ್ ಗೌಡ, ಮಡಿಕೇರಿ ಕ್ಷೇತ್ರದ ಶಾಸಕರು)
ಮಡಿಕೇರಿ ಆ.6 : ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ವಕೀಲರ ರಕ್ಷಣಾ ಕಾಯಿದೆ ಮಂಡಿಸುವ ಮೂಲಕ ವಕೀಲರ ಬಹಕಾಲದ ಬೇಡಿಕೆ ಈಡೇರಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಮಡಿಕೇರಿ ವಕೀಲರ ಸಂಘದ ವತಿಯಿಂದ ನಗರದ ಲಯನ್ಸ್ ಸಭಾಂಗಣದಲ್ಲಿ ಜರುಗಿದ ಶಾಸಕದ್ವಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಎ.ಎಸ್.ಪೊನ್ನಣ್ಣ, ಅನೇಕ ರಾಜ್ಯಗಳಲ್ಲಿ ಈಗಾಗಲೇ ವಕೀಲರ ಭದ್ರತೆಗಾಗಿ ರಕ್ಷಣಾ ಕಾಯಿದೆ ಜಾರಿಯಲ್ಲಿದೆ. ಕರ್ನಾಟಕದಲ್ಲಿ ಈ ಕಾಯಿದೆ ಜಾರಿಗೆ ಅನೇಕ ವರ್ಷಗಳಿಂದ ವಕೀಲ ಸಮುದಾಯದ ಒತ್ತಾಯವಿತ್ತು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯೊoದಿಗೆ ಚರ್ಚಿಸಿ ಕಾಯಿದೆಗೆ ಅಂತಿಮ ರೂಪು ನೀಡಲಾಗಿದ್ದು ಮುಂದಿನ ಅದಿವೇಶನದಲ್ಲಿ ಕಾಯಿದೆ ಮಂಡಿಸಿ ಜಾರಿಗೊಳಿಸಲಾಗುತ್ತದೆ. ಆ ಮೂಲಕ ವೈದ್ಯರಂತೆಯೇ ವಕೀಲರ ಸುರಕ್ಷತೆಗೆ ಕೂಡ ಕ್ರಮಕೈಗೊಳ್ಳಲಾಗುತ್ತದೆ ಎಂದರು. ನ್ಯಾಯವಾದಿಗಳು ತಮ್ಮ ಘನತೆ ಉಳಿಸಿಕೊಂಡಾಗ ಮಾತ್ರ ನ್ಯಾಯಾಂಗದ ಘನತೆ ಉಳಿಯುತ್ತದೆ ಎಂದು ವ್ಯಾಖ್ಯಾನಿಸಿದ ಪೊನ್ನಣ್ಣ, ವಕೀಲ ವೃತ್ತಿಯು ಸಮಾಜದಲ್ಲಿ ಅತ್ಯಂತ ಗೌರವದ ವೃತ್ತಿಯಾಗಿದ್ದು, ಇದರ ಘನತೆಗೆ ಎಂದೂ ಕುಂದುಂಟಾಗದಂತೆ ಗಮನ ಹರಿಸಿ ಎಂದು…






