ಮಡಿಕೇರಿ ಜು.8 : ಮಡಿಕೇರಿ ನಗರಸಭಾ ಸದಸ್ಯ ಕಾಳಚಂಡ ಅಪ್ಪಣ್ಣ ಅವರ ಮೇಲೆ ನಡೆದ ಹಲ್ಲೆಗೆ ಖಂಡನೆ ವ್ಯಕ್ತಪಡಿಸಿರುವ ಕೊಡಗು ಜಿಲ್ಲಾ ಬಿಜೆಪಿ, ಘಟನೆಯನ್ನು ಕೂಲಕುಂಶವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸುವಂತೆ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ ಎಂದು ತಿಳಿಸಿದರು. ನಗರಸಭೆಯಲ್ಲಿ 23 ಸದಸ್ಯರಿದ್ದು, ಈ ರೀತಿಯ ಘಟನೆಯಿಂದ ಭಯದ ವಾತಾವಣ ಸೃಷ್ಟಿಯಾಗಿದೆ. ಕೊಡಗು ಗುಡ್ಡಗಾಡು ಪ್ರದೇಶವಾಗಿದ್ದು, ಮಳೆಗಾಲದಲ್ಲಿ ಮನೆಗಳಿಗೆ ಹಾನಿಯಾಗುವುದು ಸಹಜ. ಇದಕ್ಕೆ ಜನಪ್ರತಿನಿಧಿಗಳು ಕಾರಣಕರ್ತರಲ್ಲ, ಮಳೆ ನೀರು ನುಗ್ಗಿತು ಎಂದು ನಗರಸಭಾ ಸದಸ್ಯನ ಮೇಲೆ ಹಲ್ಲೆ ನಡೆಸುವುದು ಹೇಯ ಕೃತ್ಯವಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ಘಟನೆ ಮಡಿಕೇರಿ ನಗರಕ್ಕೆ ಕಪ್ಪುಚುಕ್ಕೆಯಾಗಿದ್ದು, ನಗರದ ಜನತೆ ಜನಪ್ರತಿನಿಧಿಗಳಿಗೆ ಸಹಕಾರ ನೀಡಬೇಕು ಮತ್ತು ವಿನಯದಿಂದ ಕೆಲಸಗಳನ್ನು ಮಾಡಿಸಿಕೊಳ್ಳಬೇಕು ಎಂದು ರಾಬಿನ್…
ಲೇಖಕ: admin
ಮಡಿಕೇರಿ ಜು.8 : ಹೈಟೆಕ್ ಹಣೆಪಟ್ಟಿಯ ಮಡಿಕೇರಿ ಮಾರುಕಟ್ಟೆ ಕಾರ್ಯಾರಂಭ ಮಾಡಿ ಕೆಲವು ವರ್ಷಗಳೇ ಕಳೆದಿದೆ. ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾದ ಈ ಬೃಹತ್ ಕಟ್ಟಡದಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳಿಲ್ಲದೆ ವರ್ತಕರು ಹಾಗೂ ಗ್ರಾಹಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಾಜಾ ತರಕಾರಿ ಮತ್ತು ನಿತ್ಯ ಬಳಕೆಯ ವಸ್ತುಗಳಿಗಾಗಿ ಮಡಿಕೇರಿ ತಾಲ್ಲೂಕಿನ ಹೆಚ್ಚಿನ ಗ್ರಾಹಕರು ಶುಕ್ರವಾರದ ಸಂತೆಯನ್ನೇ ಅವಲಂಬಿಸಿದ್ದಾರೆ. ಪಾಳುಬಿದ್ದಿದ್ದ ಮಾರುಕಟ್ಟೆಯನ್ನು ಕೆಡವಿ ಕೋಟಿ ಕೋಟಿ ಖರ್ಚು ಮಾಡಿ ಹೈಟೆಕ್ ಮಾರುಕಟ್ಟೆಯನ್ನು ನಿರ್ಮಿಸಲಾಗಿದೆ. ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆಯಿಂದಲೂ ವ್ಯಾಪಾರಿಗಳು ಇಲ್ಲಿಗೆ ಆಗಮಿಸುತ್ತಾರೆ. ಇವರಲ್ಲಿ ಮಹಿಳಾ ವ್ಯಾಪಾರಿಗಳೇ ಹೆಚ್ಚು ಎನ್ನುವುದು ಇಲ್ಲಿ ಗಮನಾರ್ಹ. ಮಡಿಕೇರಿ ನಗರದಲ್ಲಿರುವ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವವರು ನೆಲ ಬಾಡಿಗೆ ಎಂದು ರೂ.250 ನ್ನು ಪಾವತಿಸಬೇಕಾಗುತ್ತದೆೆ. ಸಂತೆ ನಡೆಯುವ ಹಿಂದಿನ ರಾತ್ರಿಯೇ ಬರುವ ವ್ಯಾಪಾರಸ್ಥರು ತಮ್ಮ ನಿತ್ಯ ಕರ್ಮಗಳಿಗಾಗಿ ಮಾರುಕಟ್ಟೆಯ ಸಮೀಪವಿರುವ ನಗರಸಭೆಯ ಸಾರ್ವಜನಿಕ ಶೌಚಾಲಯವನ್ನೇ ಅವಲಂಬಿಸಿದ್ದಾರೆ. ಇಲ್ಲಿನ ಪರಿಸ್ಥಿತಿಯನ್ನು ಗಮನಿಸಿದರೆ ಇದು ನಗರಸಭೆಯ ಆಡಳಿತ ಮಂಡಳಿಗೇ ಪ್ರೀತಿ…
ಮಡಿಕೇರಿ ಜು.8 : ಮಾನವೀಯ ಸ್ನೇಹಿತರ ಒಕ್ಕೂಟದ ವತಿಯಿಂದ ನಗರದ ಮಡಿಕೇರಿಯ ತಣಲ್ ಸಂಸ್ಥೆಯ ಹಿರಿಯನಾಗರಿಕರಿಗೆ ಸ್ವೆಟರ್ ಹಾಗೂ ಸ್ಕಾರ್ಫ್ ಗಳನ್ನು ವಿತರಿಸಲಾಯಿತು. ಒಕ್ಕೂಟದ ಹಿರಿಯ ಪ್ರತಿನಿಧಿ ಹಾ.ತಿ. ಜಯಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ 40 ಮಂದಿ ಮಹಿಳೆಯರಿಗೆ ಒಕ್ಕೂಟದ ಪ್ರಮುಖರು ಸ್ವೆಟರ್ ಹಾಗೂ ಸ್ಕಾರ್ಫ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಣಲ್ ಸಂಸ್ಥೆಯ ವಕ್ತಾರ ಮಹಮ್ಮದ್ ಮುಸ್ತಫ , ಮಾನವೀಯ ಸ್ನೇಹಿತರ ಒಕ್ಕೂಟವು ಕಳೆದ ಕೆಲವು ವರ್ಷಗಳಿಂದ ಒಂದು ವಾಟ್ಸಾಪ್ ಗ್ರೂಪನ್ನು ರಚಿಸಿಕೊಂಡು ನೊಂದವರ ಕಣ್ಣೀರು ಒರೆಸುವ ಉತ್ತಮ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದು ಹೇಳಿದರು . ಉತ್ತಮ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಈ ಒಕ್ಕೂಟವು ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಒಕ್ಕೂಟದ ಅಡ್ಮಿನ್ಗಳಾದ ಎಂ.ಇ.ಮಹಮ್ಮದ್, ಪಿ.ಪಿ. ಸುಕುಮಾರ್, ಜಾನ್ ಬೆನೆಟ್, ಮನ್ಸೂರ್ ಫರ್ಝ್, ಗಾಯತ್ರಿ ನರಸಿಂಹ, ಹನೀಫ್ ಸೋನಾ, ಪ್ರತಿನಿಧಿಗಳಾದ ಮಾಜಿ ಯೋಧ ಡೇವಿಡ್ ವೇಗಸ್, ಅನಿಲ್ ಕುಮಾರ್,…
ನಾಪೋಕ್ಲು ಜು.8 : ನಾಪೋಕ್ಲು ಗ್ರಾ.ಪಂ ಗೆ ಒಳಪಡುವ ನಾಪೋಕ್ಲು, ಕೊಳಕೇರಿ, ಬೇತು ಗ್ರಾಮದ ಗ್ರಾಮ ಸಭೆಯನ್ನು ಜು.10 ರಂದು ಬೆಳಿಗ್ಗೆ 10.30ಕ್ಕೆ ಕೊಡುವ ಸಮಾಜದಲ್ಲಿ ಆಯೋಜಿಸಲಾಗಿದೆ. ಗ್ರಾ.ಪಂ ಅಧ್ಯಕ್ಷರಾದ ಎಚ್.ಎಸ್. ಪಾರ್ವತಿ ಅವರ ಅಧ್ಯಕ್ಷತೆಯಲ್ಲಿ ಗ್ರಾಮಸಭೆ ನಡೆಯಲಿದ್ದು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗ್ರಾಮ ಸಭೆಯನ್ನು ಯಶಸ್ವಿ ಗೊಳಿಸಿಕೊಡುವಂತೆ ಗ್ರಾ.ಪಂ ಪ್ರಕಟಣೆ ತಿಳಿಸಿದೆ. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಜು.8 : ನಾಪೋಕ್ಲು-ಮಡಿಕೇರಿ ಕಡೆ ತೆರಳುವ ಮುಖ್ಯರಸ್ತೆಯ ಪಾಲೂರು ಗ್ರಾಮ ತೆರಳಿ ಮಡಿಕೇರಿಯ ಮುಖ್ಯ ರಸ್ತೆಯ ಮಧ್ಯ ತಿರುವುವಿನಲ್ಲಿ ಭಾರೀ ಗಾತ್ರದ ಗುಂಡಿ ನಿರ್ಮಾಣವಾಗಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಹಿಂದೆ ಗುಂಡಿ ಮುಚ್ಚುವ ಕಾರ್ಯವನ್ನು ಸಮರ್ಪಕವಾಗಿ ಮಾಡದೆ ಇರುವುದರಿಂದಾಗಿ ಇದು ಹಲವುರು ತಿಂಗಳಿನಿಂದ ಹಾಗೆ ಇದ್ದು ಸಂಬಂಧಪಟ್ಟವರು ಗಮನ ಹರಿಸಿಲ್ಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಇಲಾಖಾಧಿಕಾರಿಗಳು ಇದೆ ರಸ್ತೆಯಲ್ಲಿ ಸಂಚರಿಸುತ್ತಿದ್ದರು ಯಾವುದೇ ಕ್ರಮ ಕೈಗೊಂಡಿಲ್ಲ. ತಕ್ಷಣವೇ ಗಮನ ಹರಿಸಿ ಗುಂಡಿ ಮುಚ್ಚಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಬೇಕಿದೆ. ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಜೂ.8 : ಜಿಲ್ಲೆಯಾದ್ಯಂತ ಬಿರುಸಿನ ಮಳೆ ಸುರಿಯುತ್ತಿದ್ದು, ಗ್ರಾಮೀಣ ಭಾಗಗಳಲ್ಲಿ ಭತ್ತದ ಗದ್ದೆಗಳಲ್ಲಿ ಕೃಷಿ ಚಟುವಟಿಕೆ ಬಿರುಸುಗೊಂಡಿದೆ ಸಮೀಪದ ಕೊಳಕೇರಿ ಗ್ರಾಮದ ಕೋಟೇರಿ ಮತ್ತು ಹೊದ್ದೂರು ಗ್ರಾಮ ಪಂಚಾಯತಿಯ ಕುಯ್ಯಂಗೇರಿಯಲ್ಲಿ ರೈತರು ಭತ್ತದ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ದಿನಗಳಿಂದ ಮಳೆಸುರಿದ ಪರಿಣಾಮ ಗದ್ದೆಗಳಲ್ಲಿ ನೀರಾಗಿದ್ದು ಬಿತ್ತನೆ ಕಾರ್ಯಕ್ಕೆ ರೈತರು ಸಜ್ಜಾಗಿದ್ದಾರೆ. ಸರಕಾರದ ವತಿಯಿಂದ ರೈತರ ಶ್ರೇಯೋಭಿವೃದ್ಧಿಗೆ ಕೃಷಿ ಇಲಾಖೆಯ ಮೂಲಕ ರೈತರಿಗೆ ರಿಯಾಯಿತಿ ದರದಲ್ಲಿ ಬತ್ತದ ಬಿತ್ತನೆ ಬೀಜಗಳನ್ನು ಒದಗಿಸುತ್ತಿದೆ. ಅಭಿಪ್ರಾಯ :: ಮಳೆಯ ಕೊರತೆಯಿಂದ ಹಲವು ರೈತರು ಭತ್ತದ ಕೃಷಿ ಕಾರ್ಯಕ್ಕೆ ಹಿಂದೇಟು ಹಾಕಿದ್ದರು. ಇದೀಗ ಮಳೆ ಆಗುತ್ತಿರುವುದರಿಂದ ಬಿತ್ತನೆ ಕಾರ್ಯ ಆರಂಭಗೊಂಡಿದೆ. ದೊಡ್ಡಿ ತಳಿಯ ಭತ್ತದ ಬಿತ್ತನೆ ಮಾಡುತ್ತಿದ್ದೇನೆ. ಇದರಿಂದ ಉತ್ತಮ ಇಳುವರಿ ದೊರಕುತ್ತಿದೆ ಹಾಗೂ ಉತ್ತಮ ದರವು ಇದೆ. ಕೆಲವು ವರ್ಷಗಳಿಂದ ಇದೆ ತಳಿಯನ್ನು ಬೆಳೆಯುತ್ತಿರುವುದರಿಂದ ಇಳುವರಿ ಲಾಭದಾಯಕವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಮಳೆಯ ಪ್ರಮಾಣ ಕಡಿಮೆ, ಕಳೆದ ವರ್ಷ ಇದೇ…
ಮಡಿಕೇರಿ ಜು.7 : ನಿರಂತರ ಮಳೆಯಿಂದ ಮಡಿಕೇರಿ ಹೊರವಲಯದ ಜನಪ್ರಿಯ ಪ್ರವಾಸಿತಾಣ ಅಬ್ಬಿ ಜಲಪಾತ ದುಮ್ಮಿಕ್ಕಿ ಹರಿಯುತ್ತಿದ್ದು, ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಪ್ರಕೃತಿಯ ಸೊಬಗನ್ನು ಸವಿಯುತ್ತಿದ್ದಾರೆ.
ಮಡಿಕೇರಿ ಜು.7 : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಡಿಕೇರಿ ನಗರದ ವಿವಿಧ ಬಡಾವಣೆಗಳಲ್ಲಿ ಸಾರ್ವಜನಿಕರ ಆಸ್ತಿಗೆ ಹಾನಿಯಾಗಿದೆ. ಹಾನಿ ಪ್ರದೇಶಗಳಿಗೆ ನಗರಸಭಾ ಅಧ್ಯಕ್ಷೆ ಅನಿತಾಪೂವಯ್ಯ ಭೇಟಿ ನೀಡಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮನೆಯ ಗೋಡೆಗೆ ತಡೆಗೋಡೆ ಕುಸಿದ ರಾಣಿಪೇಟೆ, ಜಲಾವೃತಗೊಂಡು ಹಾನಿಗೊಳಗಾದ ಪ್ರದೇಶ ಹಾಗೂ ರಸ್ತೆಗಳನ್ನು ಪರಿಶೀಲಿಸಿದರು. ತೋಡು ಮತ್ತು ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳುವ ಮೂಲಕ ಹೆಚ್ಚಿನ ಅಪಾಯವನ್ನು ತಪ್ಪಿಸಲಾಗುವುದು ಎಂದು ತಿಳಿಸಿದರು. ಬೆಟ್ಟಗುಡ್ಡ ಮತ್ತು ತಗ್ಗು ಪ್ರದೇಶದ ನಿವಾಸಿಗಳು ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಮನವಿ ಮಾಡಿದರು. ಹಾನಿಗೊಳಗಾದ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಲು ಎನ್ಡಿಆರ್ಎಫ್ ತಂಡದ ಸಹಕಾರ ಪಡೆದರು. ವಿವಿಧ ವಾರ್ಡ್ಗಳ ಭೇಟಿ ಸಂದರ್ಭ ಉಪಾಧ್ಯಕ್ಷೆ ಸವಿತಾ ರಾಕೇಶ್, ಪೌರಾಯುಕ್ತ ವಿಜಯ, ಸದಸ್ಯರು ಹಾಗೂ ಅಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಜು.7 : ಕೊಡಗು ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ 24 ಗಂಟೆಗಳಲ್ಲಿ 14 ಇಂಚು ಮಳೆಯಾಗಿದೆ. ಮಡಿಕೇರಿ ತಾಲ್ಲೂಕು ಭಾಗಮಂಡಲ ಹೋಬಳಿ ಚೇರಂಗಾಲ ಗ್ರಾಮದ ಮತ್ತಾರಿ ಸೇತುವೆ ಮಳೆಯಿಂದ ಮುಳುಗಡೆಯಾಗಿದೆ. ಈ ಭಾಗದಲ್ಲಿ ಒಟ್ಟು 15 ಮನೆಗಳಿದ್ದು, 65 ಮಂದಿ ವಾಸವಾಗಿದ್ದಾರೆ. ಹಾನಿ ಪ್ರದೇಶವನ್ನು ಮಡಿಕೇರಿ ತಹಶೀಲ್ದಾರ್ ಕಿರಣ್ ಗೌರಯ್ಯ ಅವರು ಪರಿಶೀಲಿಸಿದರು. ಹಾಗೆಯೇ ಭಾಗಮಂಡಲ ತ್ರಿವೇಣಿ ಸಂಗಮ, ಭಾಗಮಂಡಲ -ನಾಪೋಕ್ಲು ರಸ್ತೆಗೆ ಬಂದಿರುವ ನೀರಿನ ಮಟ್ಟವನ್ನು ವೀಕ್ಷಿಸಿದರು. ಭಾಗಮಂಡಲ ಗ್ರಾಮದಲ್ಲಿರುವ ಕಾಶಿ ಮಠದಲ್ಲಿ ಕಾಳಜಿ ಕೇಂದ್ರ ನಡೆಸಲು ಸಿದ್ಧತೆ ಯಾಗಿದ್ದು, ಹೆಚ್ಚಿನ ಮಳೆ ಆದಲ್ಲಿ ಸಂತ್ರಸ್ತರನ್ನು ಕಾಳಜಿ/ ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾಗಮಂಡಲ – ನಾಪೋಕ್ಲು ರಸ್ತೆಯ ಮೇಲೆ ಅಂದಾಜು 2 ಅಡಿ ನೀರು ಬಂದಿದೆ. ಗೃಹ ರಕ್ಷಕ ದಳದ ತಂಡವು ಬೋಟ್ ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ತಹಶೀಲ್ದಾರ್ ಹೇಳಿದ್ದಾರೆ. ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ…
ಮಡಿಕೇರಿ ಜು.7 : ಮಡಿಕೇರಿ ನಗರದ ಶ್ರೀಕುಂದುರುಮೊಟ್ಟೆ ದೇವಾಲಯದ ದಸರಾ ಸಮಿತಿ ಸದಸ್ಯ ಜಗದೀಶ್ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.






