ಮಡಿಕೇರಿ ಜು.7 : ಮಡಿಕೇರಿ ನಗರಸಭಾ ಸದಸ್ಯ ಹಾಗೂ ಮಡಿಕೇರಿ ಕೊಡವ ಸಮಾಜದ ನಿರ್ದೇಶಕ ಕಾಳಚಂಡ ಅಪ್ಪಣ್ಣ ಅವರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಕೆಲವು ಯುವಕರನ್ನು ನಗರಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿ ಹೋಗುತ್ತಿದ್ದ ನನ್ನ ಮೇಲೆ ಯುವಕರ ಗುಂಪು ಹಲ್ಲೆ ಮಾಡಿದೆ ಎಂದು ಅಪ್ಪಣ್ಣ ಅವರು ನೀಡಿದ ದೂರಿನ ಹಿನ್ನೆಲೆ ಮೋನಿಶ್ ಸೇರಿದಂತೆ ಕೆಲವು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ಸುರಿದ ಧಾರಾಕಾರ ಮಳೆಗೆ ನಮಗೆ ಸೇರಿದ ಐಟಿಐ ಜಂಕ್ಷನ್ ಬಳಿಯ ಕ್ಯಾಂಟೀನ್ ಗೆ ನೀರು ನುಗ್ಗಿತ್ತು. ಈ ಸಂದರ್ಭ ವಾರ್ಡ್ ಸದಸ್ಯ ಅಪ್ಪಣ್ಣ ಅವರಿಗೆ ದೂರು ನೀಡಿದರೂ ಯಾವುದೇ ಸ್ಪಂದನೆ ನೀಡಿಲ್ಲ. ಕೊನೇ ಗಳಿಗೆಯಲ್ಲಿ ಬಂದ ಅಪ್ಪಣ್ಣ ಅವರು ಅವಾಚ್ಯ ಶಬ್ಧ ಬಳಸಿದ ಕಾರಣ ಕಲಹ ಏರ್ಪಟ್ಟಿದೆ ಎಂದು ಮೋನಿಶ್ ಆರೋಪಿಸಿದ್ದಾರೆ. ಉಭಯ ಕಡೆಯಿಂದ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಪ್ಪಣ್ಣ ಅವರು ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯನ್ನು ಮಡಿಕೇರಿ ಕೊಡವ ಸಮಾಜ ತೀವ್ರವಾಗಿ ಖಂಡಿಸಿದ್ದು,…
ಲೇಖಕ: admin
ಮಡಿಕೇರಿ ಜು.7 : ವೈಲ್ಡ್ ಲೈಫ್ ಸೊಸೈಟಿಯ ಹುಣುಸೂರು ಕಚೇರಿಯ ಹಿರಿಯ ಅಧಿಕಾರಿ ಕೆ.ಎಸ್.ಲೋಕೇಶ್(54) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕೊಡಗು ಜಿಲ್ಲೆಯ ದುಬಾರೆ ಬಳಿಯ ರಂಗಸಮುದ್ರ ಗ್ರಾಮದ ನಿವಾಸಿಯಾಗಿರುವ ಇವರು ಶುಕ್ರವಾರ ಬೆಳಗ್ಗೆ ಮನೆಯಲ್ಲೇ ಕುಸಿದು ಬಿದ್ದರು. ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರು ಮೃತಪಟ್ಟಿರುವುದು ದೃಢಪಟ್ಟಿತು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸಂಜೆ ರಂಗಸಮುದ್ರದಲ್ಲಿ ನಡೆಯಿತು.
ಬೆಂಗಳೂರು: ನಾನು ಪೂರ್ಣ ಪ್ರಮಾಣದ 3,27,747 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದೇನೆ. ಇದು ನಮ್ಮ ಗ್ಯಾರಂಟಿ ಬಜೆಟ್. ನಾವು ಕೊಟ್ಟ ಮಾತಿನಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಚುನಾವಣಾ ಪೂರ್ವದಲ್ಲಿ ನಾವು ನೀಡಿದ್ದ 5 ಗ್ಯಾರೆಂಟಿಗಳಿಗೆ ಅನುದಾನ ಒದಗಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಸಮತೋಲಿತ ಹಾಗೂ ದೂರದೃಷ್ಟಿಯ ಬಜೆಟ್ ಅನ್ನು ನಾಡಿನ ಜನತೆಗೆ ಅರ್ಪಿಸುತ್ತಿದ್ದೇನೆ ಎಂದರು. ಬಜೆಟ್ನಲ್ಲೂ 5 ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಿದ್ದೇವೆ. ರಾಜ್ಯ ಆರ್ಥಿಕವಾಗಿ ದಿವಾಳಿ ಆಗದಂತೆ ನೋಡಿಕೊಂಡಿದ್ದೇವೆ. 1.30 ಕೋಟಿ ಕುಟುಂಬದ ಯಜಮಾನಿಗೆ ‘ಗೃಹಲಕ್ಷ್ಮೀ’ ಹಣ ನೀಡುತ್ತೇವೆ. ಜುಲೈ 16ರಿಂದ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ. ಆಗಸ್ಟ್ನಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ. ಆಗಸ್ಟ್ 15 ಅಥವಾ 16ರಂದು ಮನೆ ಯಜಮಾನಿ ಖಾತೆಗೆ ಹಣ ಹಾಕಲಾಗುವುದು…
ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 14ನೇ ಬಜೆಟ್ ಮಂಡಿಸಿದ್ದು, ಈ ಹಿಂದೆಯೂ 13 ಬಾರಿ ಬಜೆಟ್ ಮಂಡಿಸಿ ಭಾಗ್ಯ ರಾಮಯ್ಯ ಎಂದೇ ಖ್ಯಾತಿ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ನಲ್ಲಿ ಯಾವ ಕ್ಷೇತ್ರಕ್ಕೆ ಏನು ಕೊಡುಗೆ ನೀಡಿದ್ದಾರೆ. ಈ ಮುಖಾಂತರ ತಿಳಿಯಿರಿ. ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಬೆಂಬಲ: •ಕೃಷಿ ಭಾಗ್ಯ ಯೋಜನೆ 100 ಕೋಟಿ ರೂ. ವೆಚ್ಚದಲ್ಲಿ ಮರುಜಾರಿ. • ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಐದು ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ. • ಜಾನುವಾರುಗಳ ಆಕಸ್ಮಿಕ ಸಾವಿನ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಮರುಜಾರಿ. ಮೀನುಗಾರಿಕೆಗೆ ಉತ್ತೇಜನ: • ಮೀನುಗಾರ ಮಹಿಳೆಯರಿಗೆ ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿ 50,000 ರೂ. ಗಳಿಂದ 3 ಲಕ್ಷ ರೂ. ಗಳಿಗೆ ಹೆಚ್ಚಳ. • ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದ ಡೀಸೆಲ್ ಮಿತಿ 2 ಲಕ್ಷ ಕಿಲೋ ಲೀಟರ್ಗಳವರೆಗೆ ಹೆಚ್ಚಿಸಲು 250 ಕೋಟಿ ರೂ. ನೆರವು. •…
ಮಡಿಕೇರಿ ಜು.7 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರ್ಕಾರದ ಕಾರ್ಯಕ್ರಮಗಳ ಸಂಬಂಧ ಪ್ರತಿ ಪಂಚಾಯತಿಗಳ ನೋಟಿಸ್ ಬೋರ್ಡ್ನಲ್ಲಿ ಅಳವಡಿಸುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಅನುಸೂಚಿತ ಜಾತಿ ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಪ್ರಕರಣಗಳ ಬಗ್ಗೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು. ಸಮಿತಿ ಸದಸ್ಯರಾದ ಮುತ್ತಪ್ಪ ಶನಿವಾರಸಂತೆ ಹೋಬಳಿಯ ದುಂಡಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಹೆಮ್ಮನೆ ಗ್ರಾಮದಲ್ಲಿ ಸರ್ವೆ ನಂ. 999/39 ಬೀ ಪರಿಶಿಷ್ಟ ಜಾತಿ ಕುಟುಂಬಗಳಿಗೆ 25 ಸೆಂಟ್ ಜಾಗವನ್ನು ಘೋಷಣೆ ಮಾಡಿತ್ತು, ಆದರೆ ಈ ಗ್ರಾಮದಲ್ಲಿ 3 ತಿಂಗಳು ಕಳೆದರೂ ಸರ್ವೆ ಕಾರ್ಯ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು, ಜಿಲ್ಲಾಧಿಕಾರಿ ಅವರು ಸರ್ವೆ ಕಾರ್ಯ ಯಾಕೆ ಪ್ರಾರಂಭ ಆಗಿಲ್ಲ, ಸೋಮವಾರದೊಳಗೆ ಸರ್ವೆ ಕಾರ್ಯ ಕೈಗೊಳ್ಳುವಂತೆ ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಹೇಳಿದರು. ಸಮಿತಿ ಸದಸ್ಯರಾದ ಪಳನಿ ಪ್ರಕಾಶ್ ಮಾತನಾಡಿ ಪ್ರಾಕೃತಿಕ ವಿಕೋಪದಿಂದ ಹಲವು…
ಮಡಿಕೇರಿ ಜು.7 : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಇಂದು ಮಂಡನೆಯಾಗಿರುವ ಬಜೆಟ್ ಬಡವರು, ಮಧ್ಯಮ ವರ್ಗ ಹಾಗೂ ರೈತಪರವಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಎಸ್.ಟಾಟು ಮೊಣ್ಣಪ್ಪ ಶ್ಲಾಘಿಸಿದ್ದಾರೆ. ಕೊಡಗಿನ ಬಹುದಿನಗಳ ಬೇಡಿಕೆಯಾದ ಹೈಟೆಕ್ ಆಸ್ಪತ್ರೆಯ ಕನಸು ನನಸಾಗಲಿದ್ದು, ಈ ಯೋಜನೆಯನ್ನು ಘೋಷಿಸಿದ ಮುಖ್ಯಮಂತ್ರಿಗಳಿಗೆ ಜಿಲ್ಲೆಯ ಜನರ ಪರವಾಗಿ ಕಾಂಗ್ರೆಸ್ ಪಕ್ಷ ಕೃತಜ್ಞತೆ ಸಲ್ಲಿಸುತ್ತದೆ. ಅಲ್ಲದೆ ಕಾಫಿ ಬ್ರಾಂಡ್ ಯೋಜನೆ ಮೂಲಕ ಕಾಫಿ ಬೆಳೆಗಾರರಿಗೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗಿದೆ. ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಅನುದಾನ ಮೀಸಲಿಡಲಾಗಿದೆ. ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೂಪಿಸಿರುವ ಸರ್ಕಾರ ಖಾಸಗಿ ಸಹಭಾಗಿತ್ವದೊಂದಿಗೆ ಜನಪ್ರಿಯ ಪ್ರವಾಸಿತಾಣಗಳಲ್ಲಿ ಯಾತ್ರಿ ನಿವಾಸ ಅಥವಾ ವಸತಿ ನಿಲಯಗಳನ್ನು ನಿರ್ಮಿಸಲು ಮುಂದಾಗಿದೆ. ರಾಜ್ಯದ ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಪ್ರಸಿದ್ಧ ಪುಣ್ಯಕ್ಷೇತ್ರಗಳ ಅಭಿವೃದ್ಧಿಗೆ ಮತ್ತು ಯಾತ್ರಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಇದೆಲ್ಲವೂ ಕೊಡಗು ಜಿಲ್ಲೆಯ…
ಮಡಿಕೇರಿ ಜು.7 : ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಸರ್ಕಾರದ ಆದೇಶದನ್ವಯ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿ ಆಗಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಜು.30 ರೊಳಗೆ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹೋಂ-ಸ್ಟೇ ನೋಂದಣಿಗೆ ನಿಗಧಿಪಡಿಸಲಾಗಿರುವ ದಿನಾಂಕದೊಳಗೆ ನೋಂದಣಿ ಮಾಡಿಕೊಳ್ಳದ ಹೋಂ-ಸ್ಟೇಗಳನ್ನು ರದ್ದುಪಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಡಾ.ಯತೀಶ ಉಲ್ಲಾಳ ತಿಳಿಸಿದ್ದಾರೆ. 2015-20ನೇ ಸಾಲಿನಲ್ಲಿ ಹೋಂ-ಸ್ಟೇ ನಡೆಸಲು ಪರವಾನಿಗೆ ನೀಡಿರುವ ಪರವಾನಿಗೆ ಅವಧಿಯು 5 ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿದ್ದು, ಅಂತಹ ಹೋಂ-ಸ್ಟೇಗಳು ಪರವಾನಿಗೆಯನ್ನು ನವೀಕರಿಸಬೇಕು ಹಾಗೂ ಹೋಂ-ಸ್ಟೇಗಳ ನೋಂದಣಿಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದ್ದು, ಅಂತರ್ಜಾಲ ತಾಣ http://karnatakatourism.org/ ಅಥವಾ https://kttf.karnatakatourism.org/ ಮುಖಾಂತರ ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಳ್ಳಲು ತಿಳಿಸಿದೆ. ಆನ್ಲೈನ್ನಲ್ಲಿ ಹೋಂ-ಸ್ಟೇ ನೋಂದಣಿ ಮಾಡಲು ಭಾವಚಿತ್ರ, ಆಧಾರ್ ಕಾರ್ಡ್, ಹೋಂ-ಸ್ಟೇ ಹೊರಾಂಗಣ, ಒಳಾಂಗಣ,…
ಮಡಿಕೇರಿ ಜು.7 : ಕೊಡಗು ಜಿಲ್ಲೆಯಲ್ಲಿ ಯುವ ಜನರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕಿದ್ದು, ಆ ನಿಟ್ಟಿನಲ್ಲಿ ಸ್ಥಳೀಯ ಸಂಪನ್ಮೂಲಕ್ಕೆ ತಕ್ಕಂತೆ ಉದ್ಯೋಗ ಸೃಷ್ಟಿ ಮಾಡಿ ಉದ್ಯೋಗ ಕಲ್ಪಿಸುವಂತಾಗಬೇಕು ಎಂದು ವೆಂಕಟ್ ರಾಜಾ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರವಾಸೋದ್ಯಮ ಕ್ಷೇತ್ರದ ಜೊತೆಗೆ, ಆಹಾರ ಉತ್ಪಾದನೆ, ಹಾಸ್ಪಿಟಾಲಿಟಿ, ಕೃಷಿ ಕೌಶಲ್ಯ, ವಾಣಿಜ್ಯ, ಹೀಗೆ ವಿವಿಧ ರೀತಿಯ ವೃತ್ತಿ ಕೌಶಲ್ಯ ತರಬೇತಿಯನ್ನು ಯುವಜನರಿಗೆ ನೀಡಿ, ಉದ್ಯೋಗ ಒದಗಿಸುವಂತಾಗಬೇಕು. ಆ ನಿಟ್ಟಿನಲ್ಲಿ ಉದ್ಯೋಗಾಧಾರಿತ ಕಾರ್ಯಕ್ರಮ ರೂಪಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ ನೀಡಿದರು. ಸ್ಥಳೀಯ ಸಂಸ್ಥೆಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾಮಾಜಿಕ ಅರಣ್ಯ, ಹಿಂದುಳಿದ ವರ್ಗ, ಹೀಗೆ ಹಲವು ಇಲಾಖೆಗಳ ವ್ಯಾಪ್ತಿಯಲ್ಲಿ ವೃತ್ತಿಪರ ತರಬೇತಿಯನ್ನು ನೀಡಿ ಉದ್ಯೋಗ ಕಲ್ಪಿಸಲು ಮುಂದಾಗಬೇಕಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವ್ಯಾಸಂಗ ಮಾಡುತ್ತಿರುವ ಪ್ರಶಿಕ್ಷಣಾರ್ಥಿಗಳ ಸಂಖ್ಯೆ ಹಾಗೂ ಲಭ್ಯವಿರುವ ಕೋರ್ಸ್ಗಳ ಮಾಹಿತಿಯನ್ನು ಜಿಲ್ಲಾ…
ಮಡಿಕೇರಿ ಜು.7 : ಇತ್ತೀಚಿನ ವರ್ಷಗಳಲ್ಲಿ ಕೆಲವು ಯುವಜನರು ಮಾದಕ ವಸ್ತುಗಳ ಚಟಕ್ಕೆ ದಾಸರಾಗುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದ್ದು, ಇದನ್ನು ನಿಯಂತ್ರಣ ಮಾಡಬೇಕಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ತಿಳಿಸಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ರಾಷ್ಟ್ರೀಯ ಸಾಮಾಜಿಕ ರಕ್ಷಣಾ ಸಂಸ್ಥೆ ರಾಜ್ಯ ಮಟ್ಟದ ಸಮನ್ವಯ ಸಂಸ್ಥೆ ಸಹಯೋಗದಲ್ಲಿ ಪೊಲೀಸ್ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕುಶಾಲನಗರ ಶಕ್ತಿಧಾಮ ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರ ವತಿಯಿಂದ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿ ಬಳಿ ಇರುವ ಸಭಾಂಗಣದಲ್ಲಿ ಪೊಲೀಸ್ ಠಾಣಾ ಅಧಿಕಾರಿಗಳಿಗೆ ಮಾದಕ ವಸ್ತು ಬಳಕೆ ನಿಯಂತ್ರಣ ಕುರಿತು ಶುಕ್ರವಾರ ನಡೆದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. `ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ ಮಾದಕ ವಸ್ತುಗಳಿಗೆ ಸಂಬಂಧಿಸಿದಂತೆ 35 ರಿಂದ 40 ಪ್ರಕರಣಗಳನ್ನು ಪತ್ತೆ ಹಚ್ಚಿ, 67 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.’ ಯುವ ಜನರು ಮಾದಕ ವಸ್ತುಗಳ ಚಟಕ್ಕೆ ತುತ್ತಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ…
ಮಡಿಕೇರಿ ಜು.7 : ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮ ಪಂಚಾಯಿತಿಗೆ ಖಾಯಂ ಸಿಬ್ಬಂದಿಗಳನ್ನು ನೇಮಿಸದಿದ್ದಲ್ಲಿ ಪಂಚಾಯಿತಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕೆದಮುಳ್ಳೂರು ಗ್ರಾ.ಪಂ ಸದಸ್ಯ ಎಂ.ಎಂ.ಪರಮೇಶ್ವರ್ ಎಚ್ಚರಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಹಂಗಾಮಿ ಕಾರ್ಯದರ್ಶಿಯಾಗಿ ಪಿ.ಎಸ್.ಸತೀಶ್ ಎಂಬುವವರನ್ನು ನೇಮಿಸಲಾಗಿತ್ತು. ಇವರು ವಾರದಲ್ಲಿ ಮೂರು ದಿನದಂತೆ ಗ್ರಾ.ಪಂ ಕಚೇರಿಗೆ ಆಗಮಿಸಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ, ಏಕಾಏಕಿ ವರ್ಗಾವಣೆ ಮಾಡಲಾಗಿದೆ. ಈ ಹಿನ್ನೆಲೆ ಕಚೇರಿ ಕೆಲಸಗಳು ವಿಳಂಬವಾಗುವುದರ ಜತೆಗೆ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಆದಷ್ಟು ಶೀಘ್ರದಲ್ಲಿ ಪಿಡಿಒ, ಕಾರ್ಯದರ್ಶಿ ಹಾಗೂ ಕರವಸೂಲಿಗಾರರನ್ನು ನೇಮಕ ಮಾಡದಿದ್ದಲ್ಲಿ ಕೆದಮುಳ್ಳುರು ಗ್ರಾ.ಪಂ ಅಧ್ಯಕ್ಷರು ಸೇರಿದಂತೆ ಸದಸ್ಯರು ಹಾಗೂ ಗ್ರಾಮಸ್ಥರೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಕೆದಮುಳ್ಳೂರು ಗ್ರಾ.ಪಂ ಅಧ್ಯಕ್ಷೆ ಶೀಲಾ ಮೇದಪ್ಪ, ಉಪಾಧ್ಯಕ್ಷೆ ಎಂ.ಬಿ.ಮೀನಾಕ್ಷಿ, ಸದಸ್ಯರಾದ ಎಂ.ಜೆ.ಮುತ್ತಪ್ಪ, ಪಿ.ಜೆ.ಜಯಂತಿ ಉಪಸ್ಥಿತರಿದ್ದರು.






