ಮಡಿಕೇರಿ ಆ.6 : ಮಡಿಕೇರಿಯ ಸಮರ್ಥ ಕನ್ನಡಿಗರು ಸಂಸ್ಥೆಯ ವತಿಯಿಂದ ನ್ ಲೈನ್ ನೖತ್ಯ ಸ್ಪರ್ಧೆಯನ್ನು ಆಯೋಜಿಸಲಾಗಿದೆ.ಈ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ನವೆಂಬರ್ ತಿಂಗಳಲ್ಲಿ ಸಂಸ್ಥೆ ಹಮ್ಮಿಕೊಳ್ಳುವ ಪ್ರತಿಭೋತ್ಸವದಲ್ಲಿ ಬಹುಮಾನ ನೀಡಲಾಗುವುದು ಎಂದು ಸಂಸ್ಥೆಯ ಜಿಲ್ಲಾ ಸಂಚಾಲಕಿ ಕೆ.ಜಯಲಕ್ಷ್ನಿ ತಿಳಿಸಿದ್ದಾರೆ. : ನೃತ್ಯ ಸ್ಪರ್ಧೆಯ ನಿಯಮಗಳು : ಕನ್ನಡ ದೇಶಭಕ್ತಿ ಗೀತೆಗಳಿಗೆ ನೃತ್ಯ ಮಾಡಬೇಕು.ಕಾಲಾವಕಾಶ 3 ನಿಮಿಷ, ಸ್ಪರ್ಧೆಗೆ ಯಾವುದೇ ಶುಲ್ಕವಿಲ್ಲ, ನೃತ್ಯದ ವೀಡಿಯೋ ಕಳುಹಿಸಲು ಕೊನೆಯ ದಿನಾಂಕ ಆಗಸ್ಟ್ 20., ವಿಡಿಯೋ ಕಳುಹಿಸಬೇಕಾದ ಮೊಬೈಲ್ ಸಂಖ್ಯೆಗಳು – 3 ರಿಂದ 6 ವರ್ಷದ ಮಕ್ಕಳು…6363179214, 7 ರಿಂದ 12 ವರ್ಷದ ಮಕ್ಕಳು..9480783156 13 ರಿಂದ 18 ವರ್ಷದ ಮಕ್ಕಳು… 9740875383. . ಮಾಹಿತಿಗೆ ಸಂಪರ್ಕ ಸಂಖ್ಯೆ 9663119670
ಲೇಖಕ: admin
ಮಡಿಕೇರಿ ಆ.5 : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿರುವುದು ಖಂಡನೀಯವೆoದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಿರಿಯ ಶಾಸಕರಾಗಿರುವ ಆರಗ ಜ್ಞಾನೇಂದ್ರ ಅವರು ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಆದರೆ ವಿರೋಧ ಪಕ್ಷದ ನಾಯಕನಿಗೆ ಗೌರವ ನೀಡುವಷ್ಟು ಕನಿಷ್ಠ ಜ್ಞಾನ ಅವರಲ್ಲಿ ಇಲ್ಲದಾಗಿದೆ. ಖರ್ಗೆ ಅವರ ಮೈಬಣ್ಣದ ಬಗ್ಗೆ ನೀಡಿರುವ ಹೇಳಿಕೆ ಆರಗ ಅವರ ಘನತೆಗೆ ಶೋಭೆ ತರುವುದಿಲ್ಲ ಎಂದು ಟೀಕಿಸಿದ್ದಾರೆ. ಬಿಜೆಪಿ ನಮ್ಮದು ಸುಸಂಸ್ಕೃತರ ಪಕ್ಷ ಎಂದು ಹೇಳಿಕೊಳ್ಳುತ್ತದೆ, ಆದರೆ ಆರಗ ಜ್ಞಾನೇಂದ್ರ ಅವರ ಹೇಳಿಕೆಯನ್ನು ಗಮನಿಸಿದರೆ ಇದು ಯಾವ ಸಂಸ್ಕೃತಿ, ವರ್ಣಬೇಧ ನೀತಿಯನ್ನು ಇನ್ನೂ ಜೀವಂತವಾಗಿಡಲಾಗಿದೆಯೇ ಎನ್ನುವ ಪ್ರಶ್ನೆ ಮೂಡುತ್ತದೆ. ಒಬ್ಬ ಸಜ್ಜನ ರಾಜಕಾರಣಿ, ವಿರೋಧ ಪಕ್ಷದ ನಾಯಕ ಹಾಗೂ ದಲಿತ ಮುಖಂಡನಿಗೆ…
ಮಡಿಕೇರಿ ಆ.5 : ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ‘ಮೇರಿ ಮಾಟಿ ಮೇರಿ ದೇಶ್’ (ನನ್ನ ಮಣ್ಣು, ನನ್ನ ದೇಶ) ಎಂಬ ಅಭಿಯಾನದ ಮೂಲಕ ಸಸಿಗಳನ್ನು ನೆಡುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಎಲ್ಲಾ ಹಂತದ ಅಧಿಕಾರಿಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಸಸಿಗಳನ್ನು ನೆಡುವುದು ಮತ್ತು ಪಂಚ್ ಪ್ರಾಣ್ ಪ್ರತಿಜ್ಞೆಯನ್ನು ಬೋಧಿಸುವುದು, ಜೊತೆಗೆ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಯೋಧರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕಿದೆ. ಈ ಕಾರ್ಯಕ್ರಮವನ್ನು ಗ್ರಾಮ ಮತ್ತು ತಾಲ್ಲೂಕು ಪಂಚಾಯಿತಿಗಳಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಆಯೋಜಿಸಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಹೇಳಿದರು. ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ಕಾರ್ಯಕ್ರಮವನ್ನು ಎಲ್ಲಾ ಗ್ರಾ.ಪಂ.ಗಳಲ್ಲಿ ಯಶಸ್ವಿಯಾಗಿ ಆಯೋಜಿಸಲು ತಮ್ಮ ವ್ಯಾಪ್ತಿಯಲ್ಲಿ ಗ್ರಾ.ಪಂ.ಅಧ್ಯಕ್ಷರು ಹಾಗೂ ಸದಸ್ಯರನ್ನು ಆಹ್ವಾನಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಶ್ರಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.…
ಮಡಿಕೇರಿ ಆ.5 : ಕೊಡಗು ಜಿಲ್ಲೆಯ ವಿವಿಧ ಸಿ.ಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯಗಳಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರುಗಳ ಹುದ್ದೆಯಲ್ಲಿ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಕೆಲಸ ನಿರ್ವಹಿಸಲು ಆಸಕ್ತಿಯುಳ್ಳ ಅರ್ಹ ವಕೀಲರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಸಂಚಿತ ಸಂಭಾವನೆಯಾಗಿ ರೂ.35 ಸಾವಿರ ಪಡೆಯಲು ಅರ್ಹರಿರುತ್ತಾರೆ. ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಕೊನೆಯ ದಿನಾಂಕ ಆಗಸ್ಟ್, 20 ಕ್ಕೆ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಸದಸ್ಯ ಕಾರ್ಯದರ್ಶಿ ಗುತ್ತಿಗೆ ಆಧಾರದ ಸಹಾಯಕ ಸರ್ಕಾರಿ ಅಭಿಯೋಜಕರ ನೇಮಕಾತಿ ಸಮಿತಿ ಮತ್ತು ಸರ್ಕಾರಿ ಅಭಿಯೋಜಕರು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಡಿಕೇರಿ ಕೊಡಗು ಜಿಲ್ಲೆ, ಇವರಿಗೆ ಆಗಸ್ಟ್ 20 ರೊಳಗೆ ಅರ್ಜಿಯನ್ನು ಪೂರ್ಣ ಲಗತ್ತುಗಳೊಂದಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಸರ್ಕಾರಿ ಅಭಿಯೋಜಕರು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ…
ಮಡಿಕೇರಿ ಆ.5 : ಸ್ವಸ್ಥಿಕ್ ಯುವ ವೇದಿಕೆ ಬನ್ನಿಮಂಟಪ ಗಣೇಶೋತ್ಸವ ಸಮಿತಿಯ 22ನೇ ವರ್ಷದ ಗಣೇಶೋತ್ಸವ ಪೂಜಾ ಕಾರ್ಯಕ್ರಮ ಹಾಗೂ ಶೋಭಾಯಾತ್ರೆಯ ಉಪಸಮಿತಿಗಳನ್ನು ರಚಿಸಲಾಗಿದೆ ಎಂದು ಸಮಿತಿಯ ಸ್ಥಾಪಕ ಅಧ್ಯಕ್ಷರು ಕುಲದೀಪ್ ತಿಳಿಸಿದ್ದಾರೆ. ಅಧ್ಯಕ್ಷರಾಗಿ ಪುನೀತ್ ಭೀಮಯ್ಯ, ಉಪಧ್ಯಾಕ್ಷರಾಗಿ ಸಿ.ಯು.ವಿಘ್ನೇಶ್, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್, ಸಹ ಕಾರ್ಯದರ್ಶಿಯಾಗಿ ರಮೇಶ್, ಜಂಟಿ ಕಾರ್ಯದರ್ಶಿಯಾಗಿ ಹೊಯ್ಸಳ, ಮನೋಹರ್ ನೇಮಕಗೊಂಡಿದ್ದಾರೆ. ಖಜಾಂಚಿಯಾಗಿ ವಿನಯ್, ಸಹ ಖಜಾಂಚಿಯಾಗಿ ಸಂದೇಶ್, ಜಂಟಿ ಖಜಾಂಚಿಯಾಗಿ ಕವನ್, ನಿಖಿಲ್ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಮಂಜು, ಮೊನಿಷ್, ಮಿಥುನ್, ಗೌರವಾಧ್ಯಕ್ಷರಾಗಿ ಎ.ಕೆ.ಸತೀಶ್, ಸಂದೇಶ್, ಶಿವರಾಜ್, ಹೇಮಂತ್ ಕುಮಾರ್, ಸಲಹೆಗಾರರಾಗಿ ಪ್ರೇಮ ರಾಮಯ್ಯ, ರಶ್ಮಿ ಪ್ರವೀಣ್, ಸವಿತಾ ರಾಕೇಶ್, ಮಂಜುನಾಥ್, ಎ.ಎಂ.ನಿತಿನ್, ಕಾರ್ತಿಕ್, ಶ್ರೀನಿಧಿ ರಾಜ್ ನೇಮಕಗೊಂಡಿದ್ದಾರೆ. ಅಲಂಕಾರ ಸಮಿತಿಗೆ ಸಿ.ವಿ.ವಿಕ್ರಂ, ಭರತ್, ಲಿಖಿತ್ ಲೀ, ಪೂಜಾ ಸಮಿತಿಗೆ ವರ್ಶಿತ್, ಪೋಪಿನ್, ಧ್ವನಿವರ್ಧಕ ಸಮಿತಿಗೆ ಗಣೇಶ್, ಮೆರವಣಿಗೆ ಸಮಿತಿಗೆ ಸೋನಾಲ್ ಪೂಜಾರಿ, ಆಹಾರ ಸಮಿತಿಗೆ ಪ್ರಶಾಂತ್, ಜಯಣ್ಣ ಪ್ರಮುಖರಾಗಿ ಪ್ರಸಾದ್ ಅವರುಗಳನ್ನು ನೇಮಕ ಮಾಡಲಾಗಿದೆ ಎಂದು…
ಮಡಿಕೇರಿ ಆ.5 : ಈಶಾನ್ಯ ರಾಜ್ಯ ಮಣಿಪುರದಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ನಡೆದ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಅತ್ಯಾಚಾರ ಪ್ರಕರಣವನ್ನು ಖಂಡಿಸಿ, ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವಂತೆ ಆಗ್ರಹಿಸಿ ಕೊಡಗು ಜಿಲ್ಲಾ ಮಹಿಳೋದಯ ಮಹಿಳಾ ಒಕ್ಕೂಟ(ಓಡಿಪಿ) ನಗರದಲ್ಲಿ ಪ್ರತಿಭಟನೆ ನಡೆಸಿತು. ಕೊಡಗು ಜಿಲ್ಲಾ ಮಹಿಳೋದಯ ಮಹಿಳಾ ಒಕ್ಕೂಟದ ವಲಯ ಸಂಯೋಜಕರಾದ ಜಾಯ್ಸ್ ಮೆನೇಜಸ್, ಓಡಿಪಿ ಸಂಸ್ಥೆ ಮೈಸೂರಿನ ಸಂಯೋಜಕರಾದ ಮೋಲಿ ಅವರ ನೇತೃತ್ವದಲ್ಲಿ ಸಂಘಟನೆಯ ಸದಸ್ಯರು ಗಾಂಧಿ ಮೈದಾನದಿಂದ ಜನರಲ್ ತಿಮ್ಮಯ್ಯ ವೃತ್ತವನ್ನು ಹಾದು ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಘೋಷಣೆಗಳೊಂದಿಗೆ ಮೆರವಣಿಗೆ ನಡೆಸಿದರು. ಜಿಲ್ಲಾಡಳಿತ ಭವನದ ಮುಂಭಾಗ ನಡೆದ ಪ್ರತಿಭಟನೆ ಸಂದರ್ಭ ಕೊಡಗು ಮಹಿಳಾ ಒಕ್ಕೂಟ(ಓಡಿಪಿ)ದ ವಲಯ ಸಂಯೋಜಕಿ ಜಾಯ್ಸ್ ಮೆನೇಜಸ್ ಮಾತನಾಡಿ, ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ನಡೆಸಿರುವ ಮತ್ತು ಅತ್ಯಾಚಾರಗೈದಿರುವ ಅಮಾನುಷ ಘಟನೆ ನಡೆದಿದೆ. ಇದಕ್ಕೆ ಕಾರಣರಾದವರನ್ನು ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಿವುದರೊಂದಿಗೆ ಮರಣ ದಂಡನೆ ವಿಧಿಸಬೇಕೆಂದು ಆಗ್ರಹಿಸಿದರು. ಪ್ರಸ್ತುತ ದೇಶ ವ್ಯಾಪಿ ಮಹಿಳೆಯರ ಮೇಲೆ ದೌರ್ಜನ್ಯ,…
ಮಡಿಕೇರಿ ಆ.5 : ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಮತ್ತೆ ಸಂಸತ್ ಸ್ಥಾನ ದೊರೆಯುತ್ತಿರುವುದನ್ನು ಸ್ವಾಗತಿಸಿ ಕುಶಾಲನಗರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು. ರಾಹುಲ್ ಗಾಂಧಿ ಅವರ ಪ್ರಕರಣದಲ್ಲಿ ಗುಜರಾತ್ ಹೈ ಕೋರ್ಟ್ ವಿಧಿಸಿದ ಶಿಕ್ಷೆಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದ ಕ್ರಮವನ್ನು ಬ್ಲಾಕ್ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಗತಿಸಿ ಸಂಭ್ರಮಿಸಿದರು ಕುಶಾಲನಗರ ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಗಣಪತಿ ದೇವಾಲಯದ ಮುಂಭಾಗ ಸೇರಿದ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿ ಸಿಹಿ ಹಂಚಿದರು. ಕೆ.ಪಿ.ಸಿ.ಸಿ ಸದಸ್ಯ ಮಂಜುನಾಥ್ ಗುಂಡೂರಾವ್, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಉಪಾಧ್ಯಕ್ಷ ಶಿವಶಂಕರ್, ಜಿ.ಪಂ ಮಾಜಿ ಸದಸ್ಯ ಪಿ.ಎಂ.ಲತೀಫ್, ಪುರಸಭೆ ಸದಸ್ಯ ಶೇಕ್ ಕಲೀಮುಲ್ಲ, ದಿನೇಶ್, ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷ ಕಿರಣ್ ಕುಮಾರ್, ಪಕ್ಷದ ಸಾಮಾಜಿಕ ಜಾಲಾತಾಣದ ಪ್ರಮುಖ ಅಬ್ದುಲ್ ರಜಾಕ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮಡಿಕೇರಿ ಆ.5 : ಕೊಡವ ಸಾಹಿತ್ಯ ಉಳಿಯಬೇಕಾದರೆ ಓದುಗರು ಮತ್ತು ಕೊಡವ ಭಾಷೆ ಬಳಸುವವರ ಸಂಖ್ಯೆ ಹೆಚ್ಚಾಗಬೇಕು ಎಂದು ಹಿರಿಯ ಸಾಹಿತಿ ಹಾಗೂ ಎಂ.ಎ ಕೊಡವ ವಿಭಾಗದ ಉಪನ್ಯಾಸಕ ಬಾಚರಣಿಯಂಡ ಅಪ್ಪಣ್ಣ ಅಭಿಪ್ರಾಯಪಟ್ಟಿದ್ದಾರೆ. ಕೊಡವ ಎಂ.ಎ ಸ್ನಾತಕೋತ್ತರ ವಿಭಾಗ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಕೊಡವ ಮಕ್ಕಡ ಕೂಟದ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಸಾಹಿತಿ ಕೊಟ್ಟುಕತ್ತಿರ ಜಾಲಿ ಸೋಮಣ್ಣ ಬರೆದಿರುವ, ಕೊಡವ ಮಕ್ಕಡ ಕೂಟದ 71ನೇ ಪುಸ್ತಕ “ಕರ್ಮ-ಪ್ರಾರಬ್ಧ” ವನ್ನು ಅನಾವರಣಗೊಳಿಸಿ ಅವರು ಮಾತನಾಡಿದರು. ಪುಸ್ತುತ ದಿನಗಳಲ್ಲಿ ಓದುಗರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಅಪ್ಪಣ್ಣ, ಓದಲು ಎಷ್ಟು ಸಾಧ್ಯವೊ ಅಷ್ಟು ಓದಬೇಕು. ಇದರಿಂದ ಸಾಹಿತ್ಯ, ಭಾಷೆ, ಜನಪದ ಕಲೆಯ ಬೆಳವಣಿಗೆಯಾಗಲಿದೆ. ನಾವು ಓದಿದ ಪ್ರತಿ ಪುಸ್ತಕವನ್ನು ಸಂಗ್ರಹದ ರೂಪದಲ್ಲಿ ಇಡಬೇಕು. ಅಲ್ಲದೆ ಅದರ ಸಾರಾಂಶವನ್ನು ಮತ್ತೊಬ್ಬರಿಗೆ ತಿಳಿಸುವ ಮೂಲಕ ಸಾಹಿತ್ಯ ಬೆಳವಣಿಗೆಗೆ ಮುಂದಾಗಬೇಕು ಎಂದರು. ಕೊಡವ ಮಕ್ಕಡ ಕೂಟದ ವತಿಯಿಂದ ಬೊಳ್ಳಜಿರ ಬಿ.ಅಯ್ಯಪ್ಪ…
ವಿರಾಜಪೇಟೆ ಆ.5 : ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ವತಿಯಿಂದ ವಿರಾಜಪೇಟೆಯ ಅಖಿಲ ಕೊಡವ ಸಮಾಜದ ಸಭಾಂಗಣದಲ್ಲಿ ಕಕ್ಕಡ ಪದಿನೆಟ್ಟ್ ನಮ್ಮೆ ಅದ್ದೂರಿಯಾಗಿ ಆಚರಿಸಲಾಯಿತು. ಇದೇ ಸಂದರ್ಭ ಮಡಿಕೇರಿ ಆಕಾಶವಾಣಿಯಲ್ಲಿ ಉದ್ಘೋಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಕೂಪದೀರ ಶಾರದಾ ನಂಜಪ್ಪ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ, ಶಾರದಾ ನಂಜಪ್ಪ ಅವರು ಆಕಾಶವಾಣಿಯಲ್ಲಿ ನಾನೊಬ್ಬ ಉದ್ಯೋಗಿಯಾಗಿ ಸಂಬಳಕ್ಕೆ ಕೆಲಸ ಮಾಡಿದ್ದೇನೆ ಹೊರತು ಹೆಚ್ಚೇನೂ ಮಾಡಿಲ್ಲ, ಆದರೆ ಜನರು ನನಗೆ ತೋರಿಸುತ್ತಿರುವ ಪ್ರೀತಿ ನನ್ನನ್ನು ಮೂಕವಿಸ್ಮಿತಳಾಗಿ ಮಾಡಿದೆ. ಸರ್ಕಾರಿ ಕೆಲಸ ದೇವರ ಕೆಲಸವಾಗಿದ್ದು ಅದನ್ನು ಕೇವಲ ಸಂಬಳಕ್ಕಾಗಿ ಮಾಡದೆ ಮನತೃಪ್ತಿಗಾಗಿ ಮಾಡಿದಾಗ ನಾವು ಜನರಿಗೆ ಹತ್ತಿರವಾಗುತ್ತೇವೆ ಎಂದ ಅವರು ಆಕಾಶವಾಣಿಯ ನೋವು ನಲಿವುಗಳನ್ನು ಹಂಚಿಕೊಂಡರು. ಆಕಾಶವಾಣಿಯಲ್ಲಿ ಸೇವೆ ಸಲ್ಲಿಸಿದ್ದ 30 ವರ್ಷ ಹಲವು ಕಾರ್ಯಕ್ರಮಗಳನ್ನು ಜನರಿಗೆ ನೀಡಲೂ ಕೇಳುಗರೇ ಕಾರಣ, ಕೇಳುಗರು ಕಾರ್ಯಕ್ರಮಗಳನ್ನು ಬಯಸಿದ್ದಾಗ ಮಾತ್ರ ನಮಗೆ ನೀಡಲು ಸಾಧ್ಯ ಎಂದರು. ಹಾಗೇ ಕೊಡವ ಭಾಷೆ ಹಾಗೂ ಕೊಡವರ ಮೇಲೆ…
ಮಡಿಕೇರಿ ಆ.5 : ಕಂಜಕ್ಟವೈಟೀಸ್(Madras Eye) ಇದು ಒಂದು ವೈರಸ್ನಿಂದ ಹರಡುವ ಕಾಯಿಲೆ, ಕಣ್ಣಿನ ಬಿಳಿಭಾಗವನ್ನು ಆವರಿಸುವ ಕಣ್ಣಿನ ಮುಂಭಾಗದಲ್ಲಿ ಇರುವ ಪದರದ ಸೋಂಕಿಗೆ (ಉರಿಊತ) ಇದಕ್ಕೆ ಕಂಜಕ್ಟವೈಟೀಸ್ ಎನ್ನುತ್ತಾರೆ. ಇದು ಹೆಚ್ಚಾಗಿ ಮಳೆಗಾಲದ ಆರಂಭ ಹಂತದಲ್ಲಿ ಕಂಡು ಬರುವ ಸಾಧ್ಯತೆಗಳು ಹೆಚ್ಚು. ಸೋಂಕಿತ ವ್ಯಕ್ತಿಯ ಕಣ್ಣಿನಿಂದ ಬರುವ ದ್ರವದ (Discharge) ಸಂಪರ್ಕದಿಂದ ಆರೋಗ್ಯವಂತ ವ್ಯಕ್ತಿಗೆ ಹರಡುತ್ತದೆ. ಸೋಂಕಿತ ವ್ಯಕ್ತಿಗಳು ಕಪ್ಪು ಕನ್ನಡಕ ಬಳಸುವುದರಿಂದ ಬೇರೆಯವರಿಗೆ ಸೋಂಕು ಹರಡುವುದನ್ನು ತಡೆಗಟ್ಟಬಹುದು. ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಕಂಡು ಬರುತ್ತದೆ. ವಿಶೇಷವಾಗಿ ಶಾಲಾ ಕಾಲೇಜು, ವಸತಿ ನಿಲಯಗಳಲ್ಲಿ ಮತ್ತು ಅತಿಥಿ ಗೃಹಗಳಲ್ಲಿ (ಪಿ.ಜಿ) ಈ ಸೋಂಕು ಬೇಗ ಹರಡುವ ಸಾಧ್ಯತೆ ಹೆಚ್ಚು. 3 ರಿಂದ 5 ದಿನಗಳಲ್ಲಿ ಗುಣ ಮುಖವಾಗುತ್ತದೆ. ಎಲ್ಲಾ ವಯಸ್ಸಿನವರಲ್ಲಿ ಕಂಡು ಬರುತ್ತದೆ. ಲಕ್ಷಣಗಳು: ಕಣ್ಣು ಕೆಂಪಾಗುವಿಕೆ, ನೀರು ಸೋರುವಿಕೆ, ಅತಿಯಾದ ಕಣ್ಣೀರು, ಕಣ್ಣಿನಲ್ಲಿ ತುರಿಕೆ, ಸತತ ಕಣ್ಣು ನೋವು ಹಾಗೂ ಚುಚ್ಚುವಿಕೆ, ಬೆಳಕನ್ನು ನೋಡಲು ಸಾಧ್ಯವಾಗದಿರುವುದು, ದೃಷ್ಠಿ ಮುಸಕಾಗುವುದು/…






