ಮಡಿಕೇರಿ ಜು.7 : ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಮನೆಯ ಹಿಂಭಾಗದಲ್ಲಿದ್ದ ತಡೆಗೋಡೆ ಕುಸಿದು ಮನೆಗೆ ಹಾನಿಯಾದ ಘಟನೆ ಮಡಿಕೇರಿ ನಗರದ ರಾಣಿಪೇಟೆಯಲ್ಲಿ ನಡೆದಿದೆ. ರಾಣಿಪೇಟೆಯ ನಿವಾಸಿ ಸಲಾಲುದ್ದೀನ್ ಎಂಬುವವರ ಮನೆ ತಡೆಗೋಡೆ ಕುಸಿತದಿಂದ ಅಡುಗೆ ಕೋಣೆ, ಬಾತ್ ರೂಂ ಸಂಪೂರ್ಣ ಕುಸಿದು ನಷ್ಟ ಉಂಟಾಗಿದೆ. ಅದೃಷ್ಟಾವಶಾತ್ ಮನೆಯಲ್ಲಿದ್ದ ಐದು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಎನ್ಡಿಆರ್ಎಫ್ ಮತ್ತು ಸ್ಥಳೀಯ ಅಧಿಕಾರಿಗಳ ಭೇಟಿ ಪರಿಶೀಲನೆ ಪರಿಶೀಲನೆ ನಡೆಸಿದರು.
ಲೇಖಕ: admin
ಮಡಿಕೇರಿ ಜು.7 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 83.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 57.06 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 535.24 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1081.90 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 140.50 ಮಿ.ಮೀ. ಕಳೆದ ವರ್ಷ ಇದೇ ದಿನ 77.15 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 845.67 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1588.02 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 59.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 42.32 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 385.97 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 869.64 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 51.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 51.70 ಮಿ.ಮೀ.…
ಮಡಿಕೇರಿ ಜು.7 : ಧಾರಾಕಾರ ಮಳೆಗೆ ಮನೆಯ ಮೇಲೆ ಗುಡ್ಡ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬಂಟ್ವಾಳದ ಸಜಿಪಮುನ್ನೂರು ಸಮೀಪದ ನಂದಾವರದಲ್ಲಿ ನಡೆದಿದೆ. ನಂದಾವರ ನಿವಾಸಿ ಮಹಮ್ಮದ್ ಎಂಬುವವರ ಪತ್ನಿ ಝರೀನಾ(46) ಮೃತ ದುರ್ದೈವಿ. ಮಣ್ಣಿನಡಿ ಸಿಲುಕಿದ್ದ ಪುತ್ರಿ ಶಫಾ(20) ಅವರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಒಂದು ವಾರದಿಂದ ಬಂಟ್ವಾಳ ಭಾಗದಲ್ಲಿ ಭಾರೀ ಗಾಳಿ, ಮಳೆಯಾಗುತ್ತಿದ್ದು, ವಿವಿಧೆಡೆ ಹಾನಿ ಸಂಭವಿಸಿದೆ.
ಮಡಿಕೇರಿ ಜು.7 : ಕರ್ನಾಟಕ ಸರಕಾರದ ಮುಖ್ಯ ವಿದ್ಯುತ್ ಪರಿವೀಕ್ಷಕರಾಗಿ ಕೊಡಗಿನ ತೀತಿರ ರೋಶನ್ ಅಪ್ಪಚ್ಚು ಪದೋನ್ನತಿ ಹೊಂದಿದ್ದು, ಇದರೊಂದಿಗೆ ವಿದ್ಯುತ್ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ರಾಜ್ಯ ಸರ್ಕಾರದ ಇಂಧನ ಸಚಿವಾಲಯದ ಅಧೀನದಲ್ಲಿ ಬರುವ ವಿದ್ಯುತ್ ಪರಿವೀಕ್ಷಣಾ ಇಲಾಖೆಯ ಪ್ರಭಾರ ಮುಖ್ಯ ವಿದ್ಯುತ್ ಪರಿವೀಕ್ಷಕರಾಗಿದ್ದ ತೀತಿರ ರೋಷನ್ ಅಪ್ಪಚ್ಚು ಅವರನ್ನು ಸರ್ಕಾರ ಇದೀಗ ಮುಖ್ಯ ವಿದ್ಯುತ್ ಪರಿವೀಕ್ಷಕರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದು, ಇದರೊಂದಿಗೆ ವಿದ್ಯುತ್ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಗಳಾಗಿ ನೇಮಕಗೊಳಿಸಿದ್ದಾರೆ. ವಿದ್ಯುತ್ ಇಲಾಖೆಯಲ್ಲಿ ರಾಜ್ಯಕ್ಕೆ ಇದು ಏಕೈಕ ಹುದ್ದೆಯಾಗಿದ್ದು ಇಲಾಖೆಯ ಮುಖ್ಯಸ್ಥರಾಗಿದ್ದಾರೆ. ಹುದಿಕೇರಿಯ ಜಿಎಂಪಿ ಪ್ರಾಥಮಿಕ ಶಾಲೆಯಲ್ಲಿ ತಮ್ಮ ವಿದ್ಯಾಭ್ಯಾಸ ಆರಂಭಿಸಿದ ರೋಶನ್ ಅಪ್ಪಚ್ಚು ನಂತರ ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾಭ್ಯಾಸ ಮುಗಿಸಿದ್ದರು. ಚಿಕ್ಕಮಗಳೂರಿನ ಆದಿಚುಂಚನಗಿರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಪಡೆದ ಇವರು ಕೋಲ್ಕತಾದ ಮೆಂಬರ್ ಆಫ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್, ಮತ್ತು ದೆಹಲಿಯ ಮೆಂಬರ್ ಆಫ್ ಇಂಡಿಯನ್ ಸೊಸೈಟಿ…
ಸೋಮವಾರಪೇಟೆ ಜು.7 : ತೋಳೂರುಶೆಟ್ಟಳ್ಳಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗಣಪತಿ ಕ್ಲಾತ್ ಎಂಪೋರಿಯಂನ ಮಾಲೀಕ ಡಿ.ಎಸ್.ಕುಮಾರ್ ಟಿ-ಶರ್ಟ್ ಹಾಗೂ ಶಾಲಾ ಸಮವಸ್ತ್ರವನ್ನು ಉಚಿತವಾಗಿ ನೀಡಿದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷೆ ಸರಿತಾ, ಶಾಲಾ ಮುಖ್ಯ ಶಿಕ್ಷಕಿ ವಾರಿಜಮಣಿ, ಶಿಕ್ಷಕ ರವಿ, ಚೈತ್ರ, ಎಸ್ಡಿಎಂಸಿ ಸದಸ್ಯರಾದ ಪ್ರೇಮ, ಪೋಷಕರಾದ ಶೀಲಾ, ದೇವಿಕ, ಮಂಜುಳ, ಅನಿತ, ಶಿವಕುಮಾರ್, ಸುಬ್ರಮಣಿ, ಗೌರಿ, ಕಾವೇರಿ ಇದ್ದರು.
ಸೋಮವಾರಪೇಟೆ ಜು.7 : ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ ಸಪ್ತಾಹ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮನೋವೈದ್ಯರಾದ ಡಾ.ಡೆವಿನ್ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗಬಾರದು. ಪೋಷಕರು ತಮ್ಮ ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು. ದುಶ್ಚಟಗಳನ್ನು ವಿದ್ಯಾರ್ಥಿ ಜೀವನದಲ್ಲಿ ಬೆಳೆಸಿಕೊಂಡರೆ ಇಡೀ ಬದುಕು ನರಕವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು ಎಂದರು. ಮನಶಾಸ್ತ್ರಜ್ಞ ಮೋಹನ್, ಮುಖ್ಯ ಶಿಕ್ಷಕ ಯಶ್ವಂತ್ಕುಮಾರ್, ಸಹ ಶಿಕ್ಷಕರು ಇದ್ದರು. ಇದೇ ಸಂದರ್ಭ ಟೆಲಿಮನಸ್ ಎಂಬ ವಿನೂತನ ಯೋಜನೆಯ ಟೋಲ್ ಫ್ರೀ ನಂಬರ್ ಇರುವ ಮಾಹಿತಿ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮ ಮತ್ತು ತಡೆಗಟ್ಟುವಲ್ಲಿ ಯುವ ಜನರ ಪಾತ್ರ ಕುರಿತು ಪ್ರಬಂಧ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಮಡಿಕೇರಿ ಜು.6 : ಮಡಿಕೇರಿ ತಾಲ್ಲೂಕು ಭಾಗಮಂಡಲ ಹೋಬಳಿ ಚೇರಂಗಾಲ ಗ್ರಾಮದ ಮತ್ತಾರಿ ಸೇತುವೆ ಮಳೆಯಿಂದ ಮುಳುಗಡೆಯಾಗಿದೆ. ಈ ಭಾಗದಲ್ಲಿ ಒಟ್ಟು 15 ಮನೆಗಳಿದ್ದು, 65 ಮಂದಿ ವಾಸವಾಗಿದ್ದಾರೆ. ಹಾನಿ ಪ್ರದೇಶವನ್ನು ಮಡಿಕೇರಿ ತಹಶೀಲ್ದಾರ್ ಕಿರಣ್ ಗೌರಯ್ಯ ಅವರು ಇಂದು ಪರಿಶೀಲಿಸಿದರು. ಹಾಗೆಯೇ ಭಾಗಮಂಡಲ ತ್ರಿವೇಣಿ ಸಂಗಮ, ಭಾಗಮಂಡಲ -ನಾಪೋಕ್ಲು ರಸ್ತೆಗೆ ಬಂದಿರುವ ನೀರಿನ ಮಟ್ಟವನ್ನು ವೀಕ್ಷಿಸಿದರು. ಭಾಗಮಂಡಲ ಗ್ರಾಮದಲ್ಲಿರುವ ಕಾಶಿ ಮಠದಲ್ಲಿ ಕಾಳಜಿ ಕೇಂದ್ರ ನಡೆಸಲು ಸಿದ್ಧತೆ ಯಾಗಿದ್ದು, ಹೆಚ್ಚಿನ ಮಳೆ ಆದಲ್ಲಿ ಸಂತ್ರಸ್ತರನ್ನು ಕಾಳಜಿ/ ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾಗಮಂಡಲ – ನಾಪೋಕ್ಲು ರಸ್ತೆಯ ಮೇಲೆ ಅಂದಾಜು 2 ಅಡಿ ನೀರು ಬಂದಿದೆ. ಗೃಹ ರಕ್ಷಕ ದಳದ ತಂಡವು ಬೋಟ್ ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ತಹಶೀಲ್ದಾರ್ ಹೇಳಿದ್ದಾರೆ. ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮದ ಬಿ ಕೆ ಚಂದಪ್ಪ ಎಂಬುವವರ ವಾಸದ ಮನೆಯ ಎರಡು ಗೋಡೆಗಳು ಕುಸಿದು ಹಾನಿಯಾಗಿದೆ. ಈ ಸಂಬಂಧ ಗ್ರಾಮ…
ಮಡಿಕೇರಿ ಜು.6 : ಮಡಿಕೇರಿ, ಮದೆನಾಡು ಮತ್ತು ಕೊಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಈ ಭಾಗದ ರಾಷ್ಟ್ರೀಯ ಹೆದ್ದಾರಿಗೆ ಹಾನಿಯಾಗುವ ಸಾಧ್ಯತೆಗಳು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾಗಿರುವ ಹೆದ್ದಾರಿ ವಿಭಾಗದ ಅಧಿಕಾರಿಗಳು ಮದೆನಾಡು ಬಳಿ ರಸ್ತೆಯ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಂಡಿದ್ದಾರೆ. ಹೆದ್ದಾರಿ ಬದಿ ನೀರು ಸರಾಗವಾಗಿ ಚರಂಡಿಯಲ್ಲಿ ಹರಿಯುವಂತೆ ಮಾಡಲಾಗಿದೆ. ಹೆದ್ದಾರಿಯ ಸುರಕ್ಷತೆಗಾಗಿ ಹಲವು ನಿರ್ವಹಣಾ ಕಾರ್ಯವನ್ನು ಹೆದ್ದಾರಿ ಎಂಜಿನಿಯರಿಂಗ್ ವಿಭಾಗದ ವತಿಯಿಂದ ಕೈಗೊಳ್ಳಲಾಗಿದೆ ಎಂದು ಹೆದ್ದಾರಿ ವಿಭಾಗದ ಎಇಇ ನಾಗರಾಜು ತಿಳಿಸಿದ್ದಾರೆ. ಮಡಿಕೇರಿಯಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಕಳೆದ ವರ್ಷವೂ ಮಳೆಹಾನಿಯಿಂದ ವಾಹನಗಳ ಸಂಚಾರಕ್ಕೆ ತೊಡಕ್ಕುಂಟಾಗಿತ್ತು.
ಮಡಿಕೇರಿ ಜು.6 : ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿದ್ದು, ಅಪಘಾತಗಳನ್ನು ತಡೆಯಲು ಅಗತ್ಯ ಇರುವ ಕಡೆಗಳಲ್ಲಿ ‘ಸೈನ್ಬೋರ್ಡ್’ (ಸೂಚನಾ ಫಲಕ) ಅಳವಡಿಸುವಂತೆ ಸಂಬಂಧಪಟ್ಟ ವಿಭಾಗದ ಎಂಜಿನಿಯರ್ಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊಡಗು ಜಿಲ್ಲೆಗೆ ರಾಜ್ಯ, ಅಂತರ ರಾಜ್ಯಗಳಿಂದ ಲಕ್ಷಾಂತರ ಜನರು ಭೇಟಿ ನೀಡುತ್ತಾರೆ. ಸ್ಥಳೀಯರು ಸೇರಿದಂತೆ ಯಾರಿಗೂ ಯಾವುದೇ ರೀತಿ ತೊಂದರೆಯಾಗದಂತೆ ಗಮನಹರಿಸುವುದು ಅತ್ಯಗತ್ಯ. ಪ್ರತಿಯೊಬ್ಬರ ಜೀವ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಅಪಘಾತ ತಡೆಯುವಲ್ಲಿ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ತಾಕೀತು ಮಾಡಿದರು. ರಾಷ್ಟ್ರೀಯ, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಸೈನ್ ಬೋರ್ಡ್ ಅಳವಡಿಸುವ ಸಂಬಂಧ ಪೊಲೀಸ್ ಇಲಾಖೆಯಿಂದ ಸ್ಥಳದ ಮಾಹಿತಿ ಪಟ್ಟಿ ಪಡೆದು ಕೂಡಲೇ ಸೈನ್ಬೋರ್ಡ್ನ್ನು ಆದ್ಯತೆ ಮೇಲೆ ಅಳವಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಈಗಾಗಲೇ…
ಮಡಿಕೇರಿ ಜು.6 : ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಬೆಂಗಳೂರು ಇವರು ಮಾನ್ಯ ಗೌರವಾನ್ವಿತ ಉಚ್ಛ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಿದಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಿಗೆ ಅನ್ವಯವಾಗುವಂತೆ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಈ ರಿಯಾಯಿತಿಯು 2023 ರ ಸೆಪ್ಟೆಂಬರ್, 9 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






