ಬಾಳೆಲೆ ಆ.5 : ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಂಡಿರುವ ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜನ್ನು ವಿವೇಕಾನಂದ ಸೇವಾ ಸಮಿತಿಯ ಪ್ರಮುಖರಾದ ಡಾ ಮಾಪಂಗಡ ಪ್ರತಾಪ್ ಬೆಳ್ಳಿಯಪ್ಪ ಉದ್ಘಾಟಿಸಿದರು. ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ 1979/81ರ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿದ ಬಳಗದವರು ವಿವೇಕಾನಂದ ಸೇವಾ ಸಂಸ್ಥೆಯನ್ನು ಸ್ಥಾಪಿಸಿಕೊಂಡು ವಿವಿಧ ಜನಪರ ಕಾರ್ಯಕ್ರಮಗಳಲ್ಲಿ ತೋಡಗಿಸಿಕೊಂಡಿದ್ದಾರೆ. ಇವರು ಕಳೆದ ಶೈಕ್ಷಣಿಕ ವರ್ಷದಲ್ಲಿ ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜನ್ನು ಅಭಿವೃದ್ಧಿ ಪಡಿಸಲು ಆಯ್ಕೆ ಮಾಡಿಕೊಂಡರು. ಗಿರಿಜನ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿರುವ ಈ ವಿದ್ಯಾಸಂಸ್ಥೆಯನ್ನು ಇಪ್ಪತ್ತು ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ಕೊಠಡಿ, ಶೌಚಾಲಯ ಸೇರಿದಂತೆ ವ್ಯವಸ್ಥಿತವಾಗಿ ತರಗತಿಗಳನ್ನು ನವೀಕರಿಸಲಾಗಿದೆ. ಕಟ್ಟಡ ಉದ್ಘಾಟಿಸಿ ಮಾತನಾಡಿದ ಪ್ರತಾಪ್ ಬೆಳ್ಳಿಯಪ್ಪ ವಿದ್ಯೆಯೆಂಬ ಸಂಪತ್ತನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಶೈಕ್ಷಣಿಕ ಗುರಿಯತ್ತ ಸಾಗಲು ಶ್ರಮಿಸಬೇಕಾಗಿದೆ ಎಂದರು. ನಂತರ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿದರು. ವಿಜಯಲಕ್ಷ್ಮಿ ಸಂಯುಕ್ತ ಪದವಿ…
ಲೇಖಕ: admin
ಮಡಿಕೇರಿ ಆ.5 : ಪೊನ್ನಂಪೇಟೆ ತಾಲ್ಲೂಕು ಕಚೇರಿಯಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ಭೂಮಿ ಶಾಖೆ, ಅಭಿಲೇಖಾಲಯ ಕೊಠಡಿ ಮತ್ತು ಸಕಾಲ ಅರ್ಜಿ ಕೇಂದ್ರ ಉದ್ಘಾಟಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೇಶವ ಕಾಮತ್, ಜಿಲ್ಲಾಧಿಕಾರಿ ವೆಂಕಟ ರಾಜ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಆ.5 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಈಚೆಗೆ ಮಹಿಳಾ ಸಮಾಜದಲ್ಲಿ ಜರುಗಿದ ಕವಯತ್ರಿ ಜಲಜಾಶೇಖರ್ ಅವರ ‘ನೆಲ ಮುಗಿಲು’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಜಾನಪದ ವಿದ್ವಾಂಸ, ಡಾ.ಮೋಹನ್ ಪಾಳೇಗಾರ್, ಹಾಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ. ಪಿ. ರಮೇಶ್ ಅವರುಗಳನ್ನು ಸನ್ಮಾನಿಸಲಾಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ.ವಿಜೇತ್, ಮಾಜಿ ಅಧ್ಯಕ್ಷ ಜೆ. ಸಿ. ಶೇಖರ್, ಕವಯತ್ರಿ ಜಲಕಾಳಪ್ಪ ಇದ್ದರು.
ಮಡಿಕೇರಿ ಆ.5 : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ನೇಮಕಗೊಂಡ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಮಡಿಕೇರಿ ಕೊಡವ ಸಮಾಜದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸಮಾಜದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು ಪೊನ್ನಣ್ಣ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಮಾತನಾಡಿದ ಪೊನ್ನಣ್ಣ ಅವರು, ಮಡಿಕೇರಿ ಕೊಡವ ಸಮಾಜದ ನವೀಕರಣ ಕಾರ್ಯಕ್ಕೆ ಸಕರಾತ್ಮಕ ವಾಗಿ ಸ್ಪಂದಿಸುತ್ತೇನೆಂದು ತಿಳಿಸಿದರು. ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ಉಪಾಧ್ಯಕ್ಷ ನಂದಿನೆರವಂಡ ಚೀಯಣ್ಣ, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರುಗಳಾದ ಕನ್ನಂಡ ಕವಿತಬೊಳ್ಳಪ್ಪ, ಬೊಪ್ಪಂಡ ಸರಳಾ ಕರುಂಬಯ್ಯ, ಮೂವೆರ ಕೆ.ಜಯರಾಂ, ಶಾಂತೆಯಂಡ ವಿಶಾಲ್ ಕಾರ್ಯಪ್ಪ, ಮಂಡಿರ ಸದಾಮುದ್ದಪ್ಪ, ಕಾಂಡೆರ ಲಲ್ಲುಕುಟ್ಟಪ್ಪ ಹಾಗೂ ಸದಸ್ಯರುಗಳಾದ ಚೊಟ್ಟೆಯಂಡ ಸಂಜುಕಾವೇರಪ್ಪ, ಪಾಲೆಯಂಡ ಸುಬ್ಬಯ್ಯ, ಪಾಲೆಯಂಡ ರೂಪಸುಬ್ಬಯ್ಯ, ಉಳ್ಳಿಯಡ ಸಚಿತ ನಂಜಪ್ಪ, ಹಾಜರಿದ್ದರು.
ಸಿದ್ದಾಪುರ ಆ.5 : ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ತಡೆಗೋಡೆ, ರಸ್ತೆ, ಮನೆ ಕುಸಿತ ಸೇರಿದಂತೆ ಇತರೆ ಹಾನಿಯಾದ ಪ್ರದೇಶಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರೆಕಾಡು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಬಹುತೇಕ ಕಾರ್ಮಿಕ ಕುಟುಂಬಗಳ ಅಧಿಕವಾಗಿದ್ದು, ನಿವೇಶನ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವುದು ಹಾಗೂ ರಸ್ತೆ ಸಮಸ್ಯೆ ಮತ್ತು ಬಸ್ ಸಂಚಾರ ಇಲ್ಲದಿರುವ ಬಗ್ಗೆ ಶಾಸಕರ ಗಮನ ಸೆಳೆದರು. ಈ ಸಂದರ್ಭ ಶಾಸಕ ಮಂತರ್ ಗೌಡ ಮಾತನಾಡಿ ಗ್ರಾಮೀಣ ಭಾಗದ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಬಗ್ಗೆ ನೇರವಾಗಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಗ್ರಾಮ ಪಂಚಾಯಿತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾನಿಯಾಗಿರುವ ಪ್ರದೇಶಗಳ ಬಗ್ಗೆ ಅಂದಾಜು ಪಟ್ಟಿ ತಯಾರಿಸಿದ್ದಾರೆ. ಕೂಡಲೇ ಸರ್ಕಾರದ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಮಳೆಯ ಸಂದರ್ಭದಲ್ಲಿ ಜನರು ಯಾವುದೇ ಸಮಸ್ಯೆ ಹೆದರಿಸದಂತೆ ತಕ್ಷಣ ತುರ್ತು ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.…
ಸಿದ್ದಾಪುರ ಆ.5 : ಹೊಸ್ಕೆರಿ ಗ್ರಾ.ಪಂ ನೂತನ ಕಟ್ಟಡ ನಿರ್ಮಾಣಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ಎಂಎಲ್ಸಿ ಸುಜಾ ಕುಶಾಲಪ್ಪ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಎನ್ ಆರ್ ಐ ಜಿ ಯೋಜನೆಯ ಅಂದಾಜು 20 ಲಕ್ಷ ರೂ.ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದ್ದು, ಗ್ರಾಮಸ್ಥರು ಸರ್ಕಾರದ ಸೌಲಭ್ಯಗಳೊಂದಿಗೆ ಪಂಚಾಯತಿಯ ಯೋಜನೆಗಳನ್ನ ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು. ಗ್ರಾ.ಪಂ ಅಧ್ಯಕ್ಷ ಪ್ರಭು ಶೇಖರ್ ಮಾತನಾಡಿ, ಅತ್ತಿಮಂಗಲ ಅರೇಕಾಡು, ಹೊಸಕೇರಿ, ಮರಗೋಡು ಮಾರ್ಗದ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಣದೆ ವಾಹನ ಸವಾರರಿಗೆ ಸಾರ್ವಜನಿಕರಿಗೆ ಹಲವು ಸಮಸ್ಯೆಗಳು ಎದುರಾಗುತ್ತಿದ್ದು, ರಸ್ತೆ ಅಭಿವೃದ್ಧಿ ಮಾಡಬೇಕೆಂದು ಮನವಿ ಮಾಡಿದರು. ಈ ಸಂದರ್ಭ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲ, ಪ್ರಮುಖರಾದ ಯೂಸುಫ್,ಇಸ್ಮಾಯಿಲ್,ಸದ ಡೆನ್ನಿಸ್,ಚಂದನ್, ಪಂಚಾಯಿತಿಯ ಸದಸ್ಯರುಗಳು ಗ್ರಾಮಸ್ಥರು ಹಾಜರಿದ್ದರು.
ಮಡಿಕೇರಿ ಆ.5 : ವಿರಾಜಪೇಟೆಯ ಶಾಸಕ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಕ್ಯಾಬಿನೆಟ್ ದರ್ಜೆಯ ಸ್ಥಾನವನ್ನು ಅಲಂಕರಿಸಿದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಗುಂಡಿಕೆರೆ ಮುಸ್ಲಿಂ ಜಮಾಹತ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಜಮಾಹತ್ ಅದ್ಯಕ್ಷ ಕೆ.ಯು.ಮುಹಮ್ಮದ್ ಹಾಜಿ ಅದ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸಿನ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಅದ್ಯಕ್ಷ ಅನಿಫ್ ಚೋಕಂಡಳ್ಳಿ , ಶಾಪೀ ಮಸೀದಿ ಗುಂಡಿಕೆರೆ ಉಪಾದ್ಯಕ್ಷ ಎಂ.ವೈ.ಆಲಿ, ಮಾಜಿ ಅಧ್ಯಕ್ಷ ಅಬ್ಬಾಸ್, ಕಾರ್ಯದರ್ಶಿ ಸಿ.ಪಿ.ಆಲಿ, ಪ್ರದಾನ ಕಾರ್ಯದರ್ಶಿ ಇಸ್ಮಾಯಿಲ್ ಹಾಜಿ, ಆಡಳಿತ ಮಂಡಳಿ ಸದಸ್ಯ ಅಲೀ ಮುಸ್ಲಿಯಾರ್, ತಕ್ಕಮುಖ್ಯಸ್ಥರಾದ ಶಾದುಲಿ ಎಂಪಿ.ಹಸೈನಾರ್ ಬೇಟೋಳಿ ಗ್ರಾ.ಪಂ ಸದಸ್ಯ ರಝಾಕ್ ಮತ್ತಿತರರು ಹಾಜರಿದ್ದರು. ಕಾರ್ಯದರ್ಶಿ ಆಲಿ ಸ್ವಾಗತಿಸಿದರು. ಕೆದಮುಳ್ಳೂರು ಗ್ರಾ.ಪಂ ಸದಸ್ಯ ಎಂ.ಎಂ.ಇಸ್ಮಾಯಿಲ್ ಕಾರ್ಯಕ್ರಮ ನಿರೂಪಿಸಿ, ಸರ್ವರನ್ನು ವಂದಿಸಿದರು. ವರದಿ : ನೌಫಲ್ ಕಡಂಗ
ಸೋಮವಾರಪೇಟೆ ಆ.5 : ಹಾಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸರ್ಕಾರ ಹಿಂಬಡ್ತಿ ನೀಡಿದೆ ಎಂದು ಆರೋಪಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಚನ್ನಬಸಪ್ಪ ಸಭಾಂಗಣದಲ್ಲಿ ಆಯೋಜನೆಗೊಂಡಿದ್ದ ಭಾರತ ಸೇವಾದಳದ ಕಾರ್ಯಾಗಾರವನ್ನು ಬಹಿಷ್ಕರಿಸುವ ಮೂಲಕ ಪ್ರತಿಭಟನೆ ನಡೆಸಿದರು. 1 ರಿಂದ 7ನೇ ತರಗತಿಯವರೆಗೆ ಬೋಧಿಸಲು ನೇಮಕಗೊಂಡ ಶಿಕ್ಷಕರನ್ನು ಈಗ 1 ರಿಂದ 5ನೇ ತರಗತಿಯವರೆಗೆ ಮಾತ್ರ ಬೋಧಿಸಲು ನಿಗಧಿಗೊಳಿಸಿ ಶಿಕ್ಷಕರಿಗೆ ಹಿಂಬಡ್ತಿ ನೀಡಲಾಗಿದೆ. ಮಕ್ಕಳಿಗೆ ಪಾಠ ಮಾಡುವುದು ನಮ್ಮ ಕೆಲಸ, ಬೇರೆ ಕೆಲಸಗಳನ್ನು ಶಿಕ್ಷಕರು ಮಾಡುವುದಿಲ್ಲ ಎಂದು ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್ ಹೇಳಿದರು. 1 ರಿಂದ 7ನೇ ತರಗತಿಗೆ ನೇಮಕವಾದ ಯಾವುದೇ ಶಿಕ್ಷಕರು ಈಗ ಹಿರಿಯ ಪ್ರಾಥಮಿಕ ಶಾಲೆಗಳಿಗೆ ವರ್ಗಾವಣೆ ಅಸಾಧ್ಯವಾಗಿದೆ. ಹುದ್ದೆಗಳು ತನ್ನಿಂದ ತಾನೇ ಜಿಪಿಟಿ ಹುದ್ದೆಗಳಾಗಿ ಪರಿವರ್ತನೆಯಾಗಿವೆ. ಪಿಎಸ್ಟಿ ಶಿಕ್ಷಕರಿಗೆ ವರ್ಗಾವಣೆಗೆ ಸ್ಥಳಾವಕಾಶ ಸಿಗದಂತೆ ಯಾಗಿದೆ. ಪ್ರಾಥಮಿಕ ಹಂತದಲ್ಲಿ ದೈಹಿಕ ಶಿಕ್ಷಣವನ್ನು ಒಂದು ವಿಷಯವಾಗಿ ಸೇರಿಸಿ ಪಠ್ಯ ನೀಡಿದ್ದು, ಬಹುತೇಕ ಶಾಲೆಯಲ್ಲಿ ದೈಹಿಕ ಶಿಕ್ಷಕರಿಲ್ಲ. ಆ ಶಿಕ್ಷಕರೆ ಮಾಡುತ್ತಿದ್ದಾರೆ.…
ಸಿದ್ದಾಪುರ ಆ.5 : ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಪ್ರಾಥಮಿಕ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಹೆರಿಗೆ ಪ್ರಮಾಣ ಹೆಚ್ಚಾಗಿದ್ದರೂ ಸಹ ತಾಯಿ ಮಗುವಿಗೆ ಎದೆ ಹಾಲು ಕುಡಿಸುವ ಪ್ರಮಾಣ ಕಡಿಮೆ ಆಗಿದೆ. ಮಗುವಿಗೆ 6 ತಿಂಗಳವರೆಗೆ ಕೇವಲ ಎದೆ ಹಾಲನ್ನು ಮಾತ್ರ ಉಣಿಸಬೇಕು. ಇದರಿಂದ ಶಿಶುಗಳಿಗೆ ಬರುವಂತಹ ಸೋಂಕು ರೋಗಗಳನ್ನು ತಡೆಗಟ್ಟಿ, ಶಿಶು ಮರಣಗಳನ್ನು ತಪ್ಪಿಸಬಹುದು ಎಂದರು. ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ನ ಕೊಡಗು ಶಾಖೆಯ ಕುಸುಮ ಮಾತನಾಡಿ, ಮಗು ಜನಿಸಿದ ಒಂದು ಗಂಟೆಯೊಳಗೆ ಸ್ತನ್ಯಪಾನ ಪ್ರಾರಂಭಿಸಬೇಕು. ಇದು ಮಗುವಿಗೆ ಮೊದಲಯ ಲಸಿಕೆ ಎದೆ ಹಾಲು ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಮತ್ತು ಸ್ತನ್ಯಪಾನದಿಂದ ಶಿಶು ಮರಣವನ್ನು ತಗ್ಗಿಸಬಹುದು ಎಂದು ಮಾಹಿತಿ ನೀಡಿದರು.
ಸೋಮವಾರಪೇಟೆ ಆ.5 : ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಹೊಣೆ ಶಿಕ್ಷಕರ ಮೇಲಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಹೇಮಂತ್ ಹೇಳಿದರು. ಸೋಮವಾರಪೇಟೆ ಚನ್ನಬಸಪ್ಪ ಸಭಾಂಗಣದಲ್ಲಿ ಭಾರತ ಸೇವಾದಳದ ಕೊಡಗು ಜಿಲ್ಲಾ ಘಟಕದಿಂದ ನಡೆದ ತಾಲ್ಲೂಕು ಮಟ್ಟದ ಶಿಕ್ಷಕ ಮತ್ತು ಶಿಕ್ಷಕಿಯರಿಗೆ ಒಂದು ದಿನ ಮಿಲಾಫ್ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಆಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕು. ಸೇವಾದಳದಲ್ಲಿ ಪ್ರತಿಫಲಾಫೇಕ್ಷೆಯಿಲ್ಲದೆ ಶಿಕ್ಷಕರು ಕೆಲಸ ಮಾಡಬೇಕು. ರಾಷ್ಟ್ರಪಿತ ಮಹಾತ್ಮಗಾಂಧಿಯವರ ತತ್ವ ಮತ್ತು ಕಾರ್ಯಕ್ರಮಗಳ ತಳಹದಿಯ ಮೇಲೆ ಯುವಕರನ್ನು ಸಂಘಟಿಸಲು ರಾಷ್ಟ್ರೀಯ ಸೇವೆಗಾಗಿ ತರಬೇತಿಯನ್ನು ನೀಡಲಾಗುತ್ತಿದೆ. ಭಾರತದ ಆದರ್ಶ ನಾಗರಿಕರನ್ನಾಗಿ ಮಾಡಲು, ಅವರಲ್ಲಿ ಸಂಯಮ, ಶಿಸ್ತು, ಧೈರ್ಯ. ತ್ಯಾಗ, ಸರಳತೆ, ಸೇವೆ, ತಾಳ್ಮೆ, ಸಹಕಾರ ಮತ್ತು ಸೇವಾ ಮನೋಭಾವ ಮೂಡಿಸುವುದು ಸೇವಾದಳದ ಪ್ರಮುಖ ಯೋಜನೆಯಾಗಿದೆ ಎಂದರು. ಕಾರ್ಯಗಾರದ ಅಧ್ಯಕ್ಷತೆಯನ್ನು ಜಿಲ್ಲಾ ಸಮಿತಿ ಅಧ್ಯಕ್ಷ ಕರುಂಬಯ್ಯ ವಹಿಸಿದ್ದರು. ಅವರು ಮಾತನಾಡಿ, ಕಳೆದ ಹಲವು ವರ್ಷಗಳಿಂದ ತಾಲ್ಲೂಕಿನ ಹೆಚ್ಚಿನ ಶಾಲೆಗಳಲ್ಲಿ ಸೇವಾದಳದ ಚಟುವಟಿಕೆಗಳು ನಡೆಯುತ್ತಿದ್ದವು.…






