ಮಡಿಕೇರಿ ಜು.6 : ಜಿಲ್ಲೆಯ ಎಲ್ಲಾ ಹಂತದ ನ್ಯಾಯಾಲಯಗಳಲ್ಲಿ ಜು.8 ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದ್ದು, ಅರ್ಹರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಡಿ.ಟಿ.ಪುಟ್ಟರಂಗಸ್ವಾಮಿ ಅವರು ಕೋರಿದ್ದಾರೆ. ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನ್ಯಾಯಾಧೀಶರು ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ ಎಂದು ತಿಳಿಸಿದರು. ಲೋಕ ಅದಾಲತ್ನಲ್ಲಿ ರಾಜಿಯಾಗಬಲ್ಲ ಅಪರಾಧಿತ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ…
ಲೇಖಕ: admin
ಮಡಿಕೇರಿ ಜು.6 : ಕೊಡಗು ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಯದ ಜವಾಹರ ನವೋದಯ ವಿದ್ಯಾಲಯದ 2023 ನೇ ಸಾಲಿನ ಸಿಬಿಎಸ್ಇ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, 10 ಮತ್ತು 12 ನೇ ತರಗತಿಗಳಲ್ಲಿ ವಿದ್ಯಾರ್ಥಿಗಳು 100 ಕ್ಕೆ 100 ಉತ್ತೀರ್ಣರಾಗಿದ್ದಾರೆ ಎಂದು ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಪಂಕಜಾಕ್ಷನ್ ತಿಳಿಸಿದ್ದಾರೆ. ಫಲಿತಾಂಶದಲ್ಲಿ ವಿದ್ಯಾಲಯವು ಕೊಡಗು ಜಿಲ್ಲೆಯಲ್ಲಿ ಎಂದಿನಂತೆ ಮುನ್ನಡೆ ಸಾಧಿಸಿದೆ. ಹನ್ನೆರಡನೇ ತರಗತಿಯಲ್ಲಿ 70 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. 54 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಎಸ್.ಯು.ಸಾತ್ವಿಕ ಶೇ.94.4(ಪ್ರಥಮ), ಎಸ್.ಪಿ.ವೈಶಿಣಿ ಶೇ.90.8 (ದ್ವಿತೀಯ), ಬಿ.ಎಚ್.ಸಾಕ್ಷಿ ಶೇ.90(ತೃತೀಯ) ಸ್ಥಾನ ಪಡೆದಿದ್ದಾರೆ. ಹಾಗೆಯೇ ವಾಣಿಜ್ಯ ವಿಭಾಗದಲ್ಲಿ ಬಿ.ಜಿ.ದುರ್ಗೇಶ್ ಶೇ.95.4(ಪ್ರಥಮ), ಎಚ್.ಪಿ.ರಕ್ಷಯ ಶೇ.94 (ದ್ವಿತೀಯ), ಎಂ.ಕಾವೇರಿ ಶೇ.90 (ತೃತೀಯ) ಸ್ಥಾನ ಪಡೆದಿದ್ದಾರೆ. ಹತ್ತನೇ ತರಗತಿಯಲ್ಲಿ 77 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ಇವರಲ್ಲಿ 68 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 39 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕೆ.ಜೆ.ನಿಧಿ…
ಮಡಿಕೇರಿ ಜು.6 : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜು.12 ರಂದು ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣ ಮತ್ತು ಜು.17 ರಂದು ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಜು.6 : ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಜು.7 ರಂದು ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ 24 ಗಂಟೆಗಳಲ್ಲಿ ದಾಖಲೆಯ 8 ಇಂಚಿಗೂ ಅಧಿಕ ಮಳೆಯಾಗಿದೆ. ತಲಕಾವೇರಿ ಮತ್ತು ಭಾಗಮಂಡಲ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮ ಭರ್ತಿಯಾಗಿ ನಾಪೋಕ್ಲು ರಸ್ತೆಯನ್ನು ಆವರಿಸಿದೆ. ಶ್ರೀಭಗಂಡೇಶ್ವರ ದೇವಾಲಯದ ಆವರಣ ಮತ್ತು ಮಡಿಕೇರಿ ರಸ್ತೆಗೆ ಪ್ರವಾಹದ ನೀರು ಬರುವ ಸಾಧ್ಯತೆಗಳಿದೆ. ಜನ ಸಂಚಾರ ಕಷ್ಟಸಾಧ್ಯವಾಗಿದ್ದು, ಅಧಿಕಾರಿಗಳು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದಾರೆ. ದಕ್ಷಿಣ ಕೊಡಗಿನಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ನದಿತೊರೆಗಳು ತುಂಬಿ ಹರಿಯುತ್ತಿವೆ. ಮರಗಳು ಮತ್ತು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ::: ಮರ ಬಿದ್ದು ಹಾನಿ ::: ಸುಂಟಿಕೊಪ್ಪದ ಕಂಬಿಬಾಣೆ ಗ್ರಾಮದಲ್ಲಿ ಮರಿಯಾ ಲಲಿತ ಎಂಬುವವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ವಿದ್ಯುತ್ ಕಂಬಗಳು ಕೂಡ ಬಿದ್ದಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೊಸ್ಕೇರಿ ಗ್ರಾ.ಪಂ ವ್ಯಾಪ್ತಿಯ…
ಬೆಂಗಳೂರು: ವಿಧಾನಸಭೆಯ 25ನೇ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಮಾನಪ್ಪ ಲಮಾಣಿ, ಗುರುವಾರ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು. ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಅವಧಿಯ ನಂತರ ನಡೆದ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಪ್ರಕಟಿಸಿದರು. ತಮ್ಮ ಕಾರ್ಯಾವಧಿಯಲ್ಲಿ ಸಾರ್ವಜನಿಕ ಹಿತಾಸಕ್ತಿಯ ವಿಷಯ-ವಿಚಾರಗಳ ಚರ್ಚೆಯಲ್ಲಿ ಸದನದ ಸರ್ವಸದಸ್ಯರು ಹೆಚ್ಚು ಪಾಲ್ಗೊಳ್ಳುವಂತಾಗಲಿ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವ ಕೆಲಸವಾಗಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದರು.
ಮಡಿಕೇರಿ ಜು.6 : ಮಡಿಕೇರಿ ತಾಲ್ಲೂಕಿನ ಕೆ.ನಿಡುಗಣೆ ಗ್ರಾಮದಲ್ಲಿರುವ ಗೋಮಾಳ ಮತ್ತು ಅಯ್ಯಪ್ಪ ದೇವರ ಬನಬನದ ಜಾಗವನ್ನು ಖಾಸಗಿ ಸಂಸ್ಥೆಯೊಂದು ಅತಿಕ್ರಮಣ ಮಾಡಿಕೊಂಡಿದೆ ಎಂದು ಆರೋಪಿಸಿರುವ ಕರವಲೆ ಭಗವತಿ ಮಹಿಷ ಮರ್ಧಿನಿ ದೇವಾಲಯ ಸಮಿತಿ ಹಾಗೂ ಗ್ರಾಮದ ಪ್ರಮುಖರು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವಾಲಯ ಸಮಿತಿ ಸದಸ್ಯ ಎಂ.ಬಿ.ದೇವಯ್ಯ, ಗೋಮಾಳದ ಜಾಗ ಖಾಸಗಿ ವ್ಯಕ್ತಿಗಳ ಪಾಲಾಗದಂತೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ಭಾಗದಲ್ಲಿ ಬೆಟ್ಟಗುಡ್ಡವನ್ನು ಸಮತಟ್ಟು ಮಾಡಿ ಅರಣ್ಯವನ್ನು ನಾಶ ಮಾಡಲಾಗಿದ್ದು, ಸುಮಾರು 6 ಏಕರೆ ಜಾಗವನ್ನು ಒತ್ತುವರಿ ಮಾಡಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಗೋಮಾಳದ ಸುತ್ತಲು ಇದ್ದ ರಾಜಕಡಂಗ(ಅರಮನೆ ಕಡಂಗ)ವನ್ನು ಮಣ್ಣು ಮುಚ್ಚಿ ಸಮತಟ್ಟು ಮಾಡಲಾಗಿದೆ. ಸರ್ಕಾರಕ್ಕೆ ಸಂಬಂಧಿಸಿದ ಆಸ್ತಿಯನ್ನು ಅತಿಕ್ರಮಿಸಿಕೊಂಡಿದ್ದಾರೆ. ಗೋಮಾಳದಲ್ಲಿ ನೂತನವಾಗಿ ಗೋಶಾಲೆ ನಿರ್ಮಾಣ ಮಾಡಲಾಗಿದ್ದು, ಗೋವುಗಳನ್ನು ಮೇಯಲು ಬಿಡಲಾಗುತ್ತಿತ್ತು. ಆದರೆ, ಅತಿಕ್ರಮಣದಿಂದ ಕಾಡುಮರಗಳು ನಾಶವಾಗಿವೆ.…
ವಿರಾಜಪೇಟೆ ಜು.6 : ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಮತ್ತು ಮಳೆಗಾಲದ ತುರ್ತು ನಿರ್ವಹಣಾ ಘಟಕ ಸ್ಥಾಪನೆ ಮಾಡಲಾಗುತ್ತದೆ ಎಂದು ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ ಮಾಹಿತಿ ನೀಡಿದರು. ನಗರ ಕಾಂಗ್ರೆಸ್ ಸಮಿತಿ ವಿರಾಜಪೇಟೆ ಘಟಕದ ವತಿಯಿಂದ ಶಾಸಕರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಅಲ್ಲದೇ ಸಾಮಾಜಿಕ ತಳಹದಿಯ ಮೇಲೆ ಕಾರ್ಯಕ್ರಮ ರೂಪಿಸಬೇಕು ಎಂಬ ಮನೋಭಾವದಿಂದ ಜು.9 ರಂದು ರವಿವಾರದಂದು ಪುರಭವನದಲ್ಲಿ ಬೃಹತ್ ರಕ್ತದಾನ ಶಿಬಿರ ಮತ್ತು ಮಳೆಗಾಲದಲ್ಲಿ ತುರ್ತು ಪರಿಸ್ಥಿತಿ ನಿರ್ವಹಣೆ ಮಾಡಲು ದಿನದ 24*7 ಯುವಕರ ಕಾರ್ಯಪಡೆಯನ್ನು ಸಿದ್ದಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು. ಪುರಸಭೆ ಸದಸ್ಯರ ಮುಂದಾಳತ್ವದಲ್ಲಿ ಎಎಸ್ಪಿ ತುರ್ತು ನಿರ್ವಹಣಾ ಘಟಕ ಸ್ಥಾಪನೆ ಮಾಡಲಾಗಿದ್ದು, 9ರಂದು ಅಧಿಕೃತವಾಗಿ ಕಾರ್ಯಪಡೆಗೆ ಚಾಲನೆ ನೀಡುವುದರೊಂದಿಗೆ ಘಟಕದ ಲೋಗೋ ಬಿಡುಗಡೆಗೊಳಿಸಿ ಹೆಲ್ಪ್ಲೈನ್ ಸಂಖ್ಯೆ…
ಮಡಿಕೇರಿ ಜು.6 : ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಮತ್ತು ಜಿಲ್ಲೆಗೆ ಆರೆಂಜ್ ಆಲರ್ಟ್ ಘೋಷಣೆ ಮಾಡಿರುವುದರಿಂದ ಜು.7 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ಸೋಮವಾರಪೇಟೆ, ಜು.6 : ಉತ್ತರ ಕೊಡಗಿನ ಮಾದಾಪುರ ಬಳಿಯ ಗರಗಂದೂರು ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಕೊಡಗು ಅರಣ್ಯ ವೃತ್ತದ ಸೋಮವಾರಪೇಟೆ ಅರಣ್ಯ ವಲಯ ಅರಣ್ಯಾಧಿಕಾರಿ ಕಚೇರಿ, ಜಿಲ್ಲಾ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್, ಸೋಮವಾರಪೇಟೆ ಲಯನ್ಸ್ ಕ್ಲಬ್ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿಯ ವತಿಯಿಂದ ‘ನನ್ನ ಗಿಡ ನನ್ನ ಹೆಮ್ಮೆ’ ಯೋಜನೆಯಡಿ ವನ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸಸಿ ನೆಡುವ ಸಪ್ತಾಹದಲ್ಲಿ 50 ಗಿಡಗಳನ್ನು ನೆಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. “ಅರಣ್ಯ ಸಂರಕ್ಷಣೆ ಮತ್ತು ವನ ಮಹೋತ್ಸವ”ದ ಮಹತ್ವ ಕುರಿತು ಮಾಹಿತಿ ನೀಡಿ ಪರಿಸರ ರಕ್ಷಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃರಾದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ, ಪರಿಸರ ಪ್ರೇಮಿ, ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ , ಪರಿಸರ ಸಂರಕ್ಷಣೆ ಇಂದು ತೀರಾ ಅಗತ್ಯವಾಗಿದ್ದು, ಪರಿಸರ ಸಂರಕ್ಷಣೆ…
ಬೆಂಗಳೂರು ಜು.6 : ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಬಾಬೂಜಿ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪ ನಮನ ಸಲ್ಲಿಸಿದರು. ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಈ ಸಂದರ್ಭ ಹಾಜರಿದ್ದರು.






