ದೆಹಲಿ ಜು.6 : ದಶಮತ್ ರಾವತ್ ಎಂಬ ವ್ಯಕ್ತಿಯ ಮೇಲೆ ಪ್ರವೇಶ್ ಶುಕ್ಲಾ ಎಂಬಾತ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬoಧಿಸಿದoತೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸಂತ್ರಸ್ತ ವ್ಯಕ್ತಿ ದಶಮತ್ ರಾವತ್ ಅವರ ಪಾದಪೂಜೆ ಮಾಡಿ ಸಂತೈಸಿದ್ದಾರೆ. ಈ ಫೋಟೋಗಳು ಈಗ ವೈರಲ್ ಆಗಿದೆ. ಆರೋಪಿ ಪ್ರವೇಶ್ ಶುಕ್ಲಾನನ್ನು ಈಗಾಗಲೇ ಬಂಧಿಸಿದ್ದು, ಈತನ ಅಕ್ರಮ ಮನೆಗಳನ್ನು ಧ್ವಂಸಗೊಳಿಸಲಾಗಿದೆ.
ಲೇಖಕ: admin
ಮಡಿಕೇರಿ ಜು.6 : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 58.12 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 68.01 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 451.44 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1024.84 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 87.28 ಮಿ.ಮೀ. ಕಳೆದ ವರ್ಷ ಇದೇ ದಿನ 98.28 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 705.17 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1510.87 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 47.08 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 48.73 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 326.57 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 827.32 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 57.03 ಮಿ.ಮೀ.…
ಮಡಿಕೇರಿ ಜು.6 : ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 8 ಇಂಚಿಗೂ ಅಧಿಕ ಮಳೆಯಾಗಿದೆ. ದಕ್ಷಿಣ ಕೊಡಗಿನಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ನದಿತೊರೆಗಳು ತುಂಬಿ ಹರಿಯುತ್ತಿವೆ. ಮರಗಳು ಮತ್ತು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸುಂಟಿಕೊಪ್ಪದ ಕಂಬಿಬಾಣೆ ಗ್ರಾಮದಲ್ಲಿ ಮರಿಯಾ ಲಲಿತ ಎಂಬುವವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ವಿದ್ಯುತ್ ಕಂಬಗಳು ಕೂಡ ಬಿದ್ದಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೊಸ್ಕೇರಿ ಗ್ರಾ.ಪಂ ವ್ಯಾಪ್ತಿಯ ಅರೆಕಾಡು ಗ್ರಾಮದ ನೇತಾಜಿ ನಗರ ಬಡಾವಣೆಯಲ್ಲಿ ಗುರುರಾಜ್ ಎಂಬುವವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಮಡಿಕೇರಿ, ಕೊಯನಾಡು, ಸಂಪಾಜೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೊಯನಾಡು ಬಳಿ ಹೆದ್ದಾರಿಗೆ ಹಾನಿಯಾಗುವ ಸಾಧ್ಯತೆ ಕಂಡು ಬಂದಿದೆ. ತಲಕಾವೇರಿ ಮತ್ತು ಭಾಗಮಂಡಲ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮ ಭರ್ತಿಯಾಗಿ ನದಿ ನೀರು ರಸ್ತೆಯನ್ನು ಆವರಿಸುತ್ತಿದೆ. ಮರ ಮತ್ತು ವಿದ್ಯುತ್ ಕಂಬಗಳು ಬೀಳುತ್ತಿರುವುದರಿಂದ ವಿದ್ಯುತ್…
ಮಡಿಕೇರಿ ಜು.6 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತೀಯ ಹರಿಕಾರ ಡಾ.ಬಾಬು ಜಗಜೀವನ್ರಾಂ ಅವರ 37ನೇ ಪರಿನಿರ್ವಾಣ ಕಾರ್ಯಕ್ರಮವನ್ನು ಗುರುವಾರ ಸರಳವಾಗಿ ಆಚರಿಸಲಾಯಿತು. ನಗರದ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಡಾ.ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಬಾಬು ಜಗಜೀವನ್ ರಾಂ ಅವರು ಕೇಂದ್ರದಲ್ಲಿ ಆಹಾರ ಸಚಿವರಾಗಿ ‘ಹಸಿರು ಕ್ರಾಂತಿ’ ಜಾರಿಗೊಳಿಸಿದರು ಎಂದು ಹೇಳಿದರು. ಬಡವರ ಏಳಿಗೆಗೆ ಶ್ರಮಿಸಿದ ಬಾಬು ಜಗಜೀವನ್ ರಾಂ ಅವರು ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಅವರು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ಆಹಾರ, ಕಾರ್ಮಿಕ, ರಕ್ಷಣಾ ಸಚಿವರಾಗಿ ಹಲವು ಮಹತ್ತರ ಕಾರ್ಯಗಳನ್ನು ಕೈಗೊಂಡು ರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ನುಡಿದರು. ಹೆಚ್ಚುವರಿ ಪೊಲೀಸ್…
ಮಡಿಕೇರಿ ಜು.6 : ಕರ್ನಾಟಕ ರಾಜ್ಯದ ಕೊಡಗು ಜಿಲ್ಲೆ ಸೇರಿದಂತೆ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಶಿವಮೊಗ್ಗ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ.
ಮಡಿಕೇರಿ ಜು.5 : ಪಾನಮತ್ತ ಕಾರ್ಮಿಕನೊಬ್ಬ ತನ್ನ ಪತ್ನಿ ಹಾಗೂ ಮಗುವಿನ ಮೇಲೆ ಕತ್ತಿಯಿಂದ ಹಲ್ಲೆ ಮಾಡಿರುವ ಘಟನೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೋಕೇರಿ ಗ್ರಾಮದಲ್ಲಿ ನಡೆದಿದೆ. ಆರೋಪಿ ಭರತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ತೀವ್ರವಾಗಿ ಗಾಯಗೊಂಡಿರುವ ಪ್ರೇಮ ಹಾಗೂ ಮಗುವನ್ನು ನಾಪೋಕ್ಲು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಯ್ಯಂಡಾಣೆ ಸಮೀಪದ ಕೋಕೇರಿ ಗ್ರಾಮದ ತೋಟದ ಲೈನ್ ಮನೆಯಲ್ಲಿ ಕಾರ್ಮಿಕನಾಗಿ ಕಾರ್ಯ ನಿರ್ವಹಿಸುತ್ತಿರುವ ಭರತ್ ಪಾನಮತ್ತನಾಗಿ ಬಂದು ಊಟದ ವಿಚಾರಕ್ಕೆ ಕಲಹ ನಡೆಸಿ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸುಂಟಿಕೊಪ್ಪ ಜು.5 : ಹೈಮಾಸ್ಟ್ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ಘಟನೆ ಸುಂಟಿಕೊಪ್ಪ ಸಮೀಪ ಗದ್ದೆಹಳ್ಳ ರಾಷ್ಟ್ರೀಯ ಹೆದ್ದಾರಿ ವೃತ್ತದ ಬಳಿ ನಡೆದಿದೆ. ಕುಶಾಲನಗರದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಬುಧವಾರ ನಸುಕು 4 ಗಂಟೆ ಸುಮಾರಿಗೆ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬ ತುಂಡಾಗಿ ಬಲ್ಬ್ ಗಳಿಗೆ ಹಾನಿಯಾಗಿದೆ ಎಂದು ಪಂಚಾಯಿತಿ ಅಭಿವೃಧ್ದಿ ಅಧಿಕಾರಿ ವೇಣು ಗೋಪಾಲ್ ಅವರು ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಡಿಕ್ಕಿಯಾದ ವೇಗಕ್ಕೆ ಕಾರಿನ ಎರಡು ಚಕ್ರಗಳು ಸಿಡಿದು ಹೋಗಿವೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ಸುಮಾರು 40 ಸಾವಿರ ರೂ. ವೆಚ್ಚದಲ್ಲಿ ಹೈಮಾಸ್ಟ್ ಕಂಬ ಅಳವಡಿಸಲಾಗಿತ್ತು.
ನಾಪೋಕ್ಲು ಜು.5 : ನಾಪೋಕ್ಲು ಪೊಲೀಸ್ ಠಾಣಾ ಸರಹದ್ದಿನ ಬೇತು ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಡಿಕೇರಿ ವಿದ್ಯಾನಗರದ ನಿವಾಸಿ ಅರ್.ವಿನೋದ್ ಹಾಗೂ ಬೇತು ಗ್ರಾಮದ ನಿವಾಸಿ ವಿಷ್ಣು ಎಂ.ವಿ ಬಂಧಿತ ಆರೋಪಿಗಳಾಗಿದ್ದಾರೆ. ಇವರ ಬಳಿಯಿಂದ 230ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಉಪಅಧೀಕ್ಷಕ ಸುಂದರ್ ರಾಜ್ ನಿರ್ದೇಶನದಂತೆ ಉಪ ವಿಭಾಗದ ಡಿವೈಎಸ್ಪಿ ಜಗದೀಶ್, ಮಡಿಕೇರಿ ಗ್ರಾಮಾಂತರ ವೃತ ನಿರೀಕ್ಷಕ ಅನೂಪ್ ಮಾದಪ್ಪ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು. (ವರದಿ : ಝಕ್ರಿಯ ನಾಪೋಕ್ಲು)
ಮಡಿಕೇರಿ ಜು.5 : ಕರಡಿಯೊಂದು ರೈತ ಹಾಗೂ ಹಸುವಿನ ಮೇಲೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಅರಣ್ಯದಿಂದ ಬಂದು ಗ್ರಾಮಕ್ಕೆ ಲಗ್ಗೆ ಇಟ್ಟ ಕರಡಿ ಜಮೀನಿಗೆ ತೆರಳುತ್ತಿದ್ದ ರೈತ ನರಸಿಂಹ ಮೂರ್ತಿ ಎಂಬುವವರ ಮೇಲೆ ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿದೆ. ನಂತರ ಸಮೀಪದ ಮನೆಯಲ್ಲಿದ್ದ ಹಸುವಿನ ಮೇಲೂ ದಾಳಿ ಮಾಡಿದೆ. ರೈತ ಹಾಗೂ ಹಸುವಿಗೆ ಚಿಕಿತ್ಸೆ ನೀಡಲಾಗಿದ್ದು, ಅರಣ್ಯ ಇಲಾಖೆಯಿಂದ ಸೂಕ್ತ ಪರಿಹಾರ ದೊರಕಿಸಿಕೊಡುವುದಾಗಿ ಅರಣ್ಯ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಅಲ್ಲದೆ ಕರಡಿ ಸೆರೆಗೆ ಕ್ರಮ ಕೈಗೊಂಡಿದ್ದಾರೆ, ಆದರೂ ಗ್ರಾಮದಲ್ಲಿ ಆತಂಕದ ವಾತಾವರಣ ಮುಂದುವರೆದಿದೆ.
ಮಡಿಕೇರಿ ಜು.5 : ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಅಲ್ಲಲ್ಲಿ ಮರಗಳು ಬಿದ್ದಿವೆ. ಕುಟ್ಟ-ಶ್ರೀಮಂಗಲ ಮುಖ್ಯ ರಸ್ತೆಯಲ್ಲಿ ಮರ ಬಿದ್ದಿರುವುದನ್ನು ಪೊನ್ನಂಪೇಟೆ ವ್ಯಾಪ್ತಿಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಲಾಯಿತು.






