ಸುಂಟಿಕೊಪ್ಪ ಜು.5 : ಕೊಡಗರಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಪೌತಿ ಖಾತೆ ಆಂದೋಲನ ನಡೆಯಿತು. ಗ್ರಾ.ಪಂ ಸಭಾಂಗಣದಲ್ಲಿ ನಡೆದ ಆಂದೋಲನದ ಅಧ್ಯಕ್ಷತೆಯನ್ನು ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಪ್ರಕಾಶ್ ವಹಿಸಿದ್ದರು. ಈ ಸಂದರ್ಭ ನಾಡಕಚೇರಿಯ ಉಪತಹಶೀಲ್ದಾರ್ ಶಿವಪ್ಪ ಮಾತನಾಡಿ, ಸರಕಾರ ಮಹತ್ತರ ಯೋಜನೆಗಳಲ್ಲಿ ಒಂದಾಗಿದೆ. ರೈತಾಪಿ ವರ್ಗದವರು ಕಚೇರಿಯಿಂದ ಕಚೇರಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಮಗಳಲ್ಲಿ ಅಧಿಕಾರಿಗಳೇ ಆಗಮಿಸಿ ಜನತೆಗೆ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದರು. ಸುಂಟಿಕೊಪ್ಪ ಗ್ರಾ.ಪಂ ವ್ಯಾಪ್ತಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ, ಉಲುಗುಲಿ, ನಾರ್ಗಾಣೆ ಗ್ರಾಮದ ಕೃಷಿಕರು ಹಾಗೂ ಸಾರ್ವಜನಿರು ಪಾಲ್ಗೊಂಡಿದ್ದರು. ಕಂದಾಯ ಪರಿವೀಕ್ಷಕರಾದ ಪ್ರಶಾಂತ್, ಗ್ರಾಮ ಲೆಕ್ಕಿಗಾರುಗಳಾದ ಜಯಂತ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಶ್, ಗ್ರಾ.ಪಂ ಸದಸ್ಯೆ ನೀತಾ, ಚೆನ್ನಬಸವಿ, ಸಿಬ್ಬಂದಿಗಳಾದ ಧನಂಜಯ ಹಾಗೂ ಗ್ರಾಮ ಸಹಾಯಕರು ಇದ್ದರು.
ಲೇಖಕ: admin
ಮಡಿಕೇರಿ ಜು.5 : ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 393 ಮಿ.ಮೀ ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 956 ಮಿ.ಮೀ ಮಳೆಯಾಗಿತ್ತು. ಜಿಲ್ಲೆಯ ಮಡಿಕೇರಿ ತಾಲ್ಲೂಕಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಮಂಜು ಮುಸುಕಿದ ವಾತಾವರಣದೊಂದಿಗೆ ಶೀತ ಗಾಳಿ ಬೀಸುತ್ತಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ಉತ್ತಮ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ನಿಧಾನವಾಗಿ ಏರಿಕೆಯಾಗುತ್ತಿದೆ. ಭಾಗಮಂಡಲದ ಮೇಲುಸೇತುವೆ ಕಾಮಗಾರಿ ಅಪೂರ್ಣಗೊಂಡ ಕಾರಣ ರಸ್ತೆ ಕೆಸರುಮಯವಾಗಿದ್ದು, ವಾಹನಗಳ ಚಾಲನೆ ಮತ್ತು ಪಾದಾಚಾರಿಗಳ ಓಡಾಟಕ್ಕೆ ಅಡಚಣೆ ಉಂಟಾಗಿದೆ. ನಾಪೋಕ್ಲು ಭಾಗದಲ್ಲೂ ಉತ್ತಮ ಮಳೆಯಾಗುತ್ತಿದ್ದು, ವಿರಾಜಪೇಟೆ, ಪೊನ್ನಂಪೇಟೆ, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನಲ್ಲೂ ಮಳೆಯಾಗುತ್ತಿದೆ. ಗಾಳಿ ಬೀಸದೆ ಇರುವ ಕಾರಣ ದೊಡ್ಡಮಟ್ಟದ ಅನಾಹುತ ಎಲ್ಲೂ ಸಂಭವಿಸಿಲ್ಲ. ಗ್ರಾಮೀಣ ಭಾಗದಲ್ಲಿ ಅಲ್ಲಲ್ಲಿ ಮರ ಮತ್ತು ವಿದ್ಯುತ್ ಕಂಬಗಳು ಬಿದ್ದಿವೆ. ಇದರಿಂದ ಕುಗ್ರಾಮಗಳ ಮನೆಗಳ ವಿದ್ಯುತ್ ಕಡಿತಗೊಂಡು ನಿವಾಸಿಗಳು ಕಾರ್ಗತ್ತಲಲ್ಲಿ ದಿನ ದೂಡುವಂತ್ತಾಗಿದೆ. ಮಡಿಕೇರಿ…
ಮಡಿಕೇರಿ ಜು.5 : ಕಿರಗಂದೂರು ಗ್ರಾ.ಪಂ ವ್ಯಾಪ್ತಿಯ ತಾಕೇರಿ, ಕಿರಗಂದೂರು, ಬಿಳಿಗೇರಿ ಗ್ರಾಮಗಳಿಗೆ ಸಂಬಂಧಿಸಿದ ಪೌತಿ ಖಾತೆ ಆಂದೋಲನವು ಕಿರಗಂದೂರು ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು. ತಹಶೀಲ್ದಾರ್ ನರಗುಂದ್ಅಧ್ಯಕ್ಷತೆಯಲ್ಲಿ ನಡೆದ ಆಂದೋಲನದಲ್ಲಿ ಕಂದಾಯ ಪರಿವೀಕ್ಷಕರಾದ ಸಿ.ಎನ್.ಪ್ರಹ್ಲಾದ್, ಗ್ರಾಮ ಆಡಳಿತ ಅಧಿಕಾರಿ ಹೆಚ್.ಎನ್.ಕುಮಾರಿ, ಗ್ರಾ.ಪಂ ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಮಡಿಕೇರಿ ಜು.5 : ವಿರಾಜಪೇಟೆ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ತಾಲ್ಲೂಕು ಕಚೇರಿ ಸಿಬ್ಬಂದಿವರ್ಗ ಮತ್ತು ಲೋಕೋಪಯೋಗಿ, ಸೆಸ್ಕ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈಗಾಗಲೇ ಮುಂಗಾರು ಮಳೆ ಚುರುಕು ಪಡೆದಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ತಂಡವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ತಾಲ್ಲೂಕು ಕಚೇರಿಯ ಕಾಮಗಾರಿ ಪರಿಶೀಲಿಸಿದರು. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ತಹಶೀಲ್ದಾರ್ ರಾಮಚಂದ್ರ, ಲೋಕೋಪಯೋಗಿ, ಸೆಸ್ಕ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಜು.5 : 2021-22ನೇ ಸಾಲಿನಲ್ಲಿ ಗಾಂಧಿ ಗ್ರಾಮ ಪ್ರಶಸ್ತಿ ಪಡೆದಿರುವ ಕೂಡುಮಂಗಳೂರು ಮತ್ತು ದೊಡ್ಡಮಳ್ತೆ ಗ್ರಾಮ ಪಂಚಾಯಿತಿಗೆ ಜಿ.ಪಂ ಸಿಇಒ ಡಾ.ಎಸ್.ಆಕಾಶ್ ಪ್ರಶಸ್ತಿ ಪತ್ರ ಮತ್ತು ಫಲಕ ನೀಡಿ ಗೌರವಿಸಿದರು. ಕೂಡುಮಂಗಳೂರು ಮತ್ತು ದೊಡ್ಡಮಳ್ತೆ ಗ್ರಾ.ಪಂ.ನ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರು ಪ್ರಶಸ್ತಿ ಸ್ವೀಕರಿಸಿದರು. ಜಿ.ಪಂ.ಉಪ ಕಾರ್ಯದರ್ಶಿ ಜಿ.ಧನರಾಜು, ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್, ಯೋಜನಾ ನಿರ್ದೇಶಕರಾದ ಜಗದೀಶ್, ತಾ.ಪಂ.ಇಒ ಜಯಣ್ಣ, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ರಾಕೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇತರರು ಇದ್ದರು.
ಮಡಿಕೇರಿ ಜು.5 : ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲು ಜಿಲ್ಲಾ ಪಂಚಾಯತ್ ಹಂತದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದ್ದಾರೆ. ಸೋಮವಾರಪೇಟೆ ತಾ.ಪಂ ಸಭಾಂಗಣದಲ್ಲಿ ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕು ಗ್ರಾ.ಪಂ.ಅಧ್ಯಕ್ಷರು ಮತ್ತು ಉಪಾಧ್ಯಕ್ಷರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು. ಗ್ರಾಮಗಳ ಅಭಿವೃದ್ಧಿ ಮತ್ತು ಆಡಳಿತದಲ್ಲಿ ಗ್ರಾ.ಪಂ.ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಪಾತ್ರ ಮಹತ್ವದ್ದಾಗಿದೆ. ಗ್ರಾಮ ಮಟ್ಟದಲ್ಲಿನ ಸಮಸ್ಯೆಗಳ ಬಗ್ಗೆ ನಿಖರ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಗ್ರಾಮಮಟ್ಟದ ವಾಸ್ತವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಮತ್ತು ಅವುಗಳಿಗೆ ಸೂಕ್ತ ಪರಿಹಾರ ಒದಗಿಸುವ ಸಲುವಾಗಿ ಈ ಸಭೆ ಮಹತ್ವದ್ದಾಗಿದೆ ಎಂದು ಜಿ.ಪಂ.ಸಿಇಒ ಅಭಿಪ್ರಾಯಪಟ್ಟರು. ಸಭೆಯಲ್ಲಿ ಭಾಗವಹಿಸಿದ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನ ವಿವಿಧ ಗ್ರಾ.ಪಂ.ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಮ್ಮ ವ್ಯಾಪ್ತಿಯ ಆಡಳಿತ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು. ಮುಖ್ಯವಾಗಿ ಜಲಜೀವನ್ ಮಿಷನ್ ಯೋಜನೆಗೆ…
ಮಡಿಕೇರಿ ಜು.5 : ರಾಷ್ಟ್ರೀಯ ಮೋಟಾರ್ ರ್ಯಾಲಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಅಭಿನ್ ರೈ ಅವರನ್ನು ರೋಟರಿ ಜಿಲ್ಲೆ 3181 ನ ನಿಯೋಜಿತ ಗವನ೯ರ್ ವಿಕ್ರಂದತ್ತ ಮತ್ತು ಗಣ್ಯರು ಮಿಸ್ಟಿ ಹಿಲ್ಸ್ ವತಿಯಿಂದ ಸನ್ಮಾನಿಸಿ ಗೌರವಿಸಿದರು. ಇತ್ತೀಚಿಗೆ ಅರುಣಾಚಲ ಪ್ರದೇಶದಲ್ಲಿ ಆಯೋಜಿತ ರಾಷ್ಟ್ರೀಯ ಮೋಟಾರ್ ರ್ಯಾಲಿಯ 4 ವಿಭಾಗಗಳಲ್ಲಿ ಅಭಿನ್ ರೈ ಪ್ರಥಮ ಸ್ಥಾನ ಪಡೆದಿದ್ದರು. ಈವರೆಗೆ ಯುವಸಾಧಕ ಅಭಿನ್ ರೈ ಗೆ ಮೋಟಾರ್ ರ್ಯಾಲಿ ಸ್ಪಧೆ೯ಗಳಲ್ಲಿ 25 ಪ್ರಥಮ ಸ್ಥಾನ ದೊರಕಿದೆ. ಅಭಿನ್ ರೈ ಮಿಸ್ಟಿ ಹಿಲ್ಸ್ ನ ನೂತನ ಕಾಯ೯ದಶಿ೯ ರತ್ನಾಕರ್ ರೈ, ನಮಿತಾ ರೈ ದಂಪತಿ ಪುತ್ರ.
ಮಡಿಕೇರಿ ಜು. 5 : ಭರವಸೆಯೊಂದಿಗೆ ಅವಕಾಶಗಳನ್ನು ಸಮಥ೯ವಾಗಿ ಬಳಸಿಕೊಂಡು ಜನಸೇವೆಗೆ ಮುಂದಾಗಬೇಕಾದ ಸಂದಭ೯ ಇಂದಿನ ದಿನಗಳಲ್ಲಿದೆ ಎಂದು ರೋಟರಿ ಜಿಲ್ಲೆ 3181 ನ ನಿಯೋಜಿತ ಗವನ೯ರ್ ವಿಕ್ರಂದತ್ತ ಹೇಳಿದ್ದಾರೆ. ನಗರದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನ ನೂತನ ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ರೈ , ಕಾಯ೯ದಶಿ೯ ರತ್ನಾಕರ್ ರೈ ಮತ್ತು ತಂಡಕ್ಕೆ ಪದಗ್ರಹಣ ನೆರವೇರಿಸಿ ಮಾತನಾಡಿದ 2024 -25 ನೇ ರೋಟರಿ ವಷ೯ದ ಗವನ೯ರ್ ವಿಕ್ರಂದತ್ತ, ರೋಟರಿಯಂಥ ಜಾಗತಿಕ ಸಮಾಜಸೇವಾ ಸಂಸ್ಥೆಯ ಬಗ್ಗೆ ಜನರು ಅಪಾರವಾದ ನಂಬಿಕೆ, ಭರವಸೆಗಳನ್ನು ಇಟ್ಟುಕೊಂಡಿದ್ದಾರೆ. ಈ ನಂಬಿಕೆಗೆ ಚ್ಯುತಿಬಾರದಂತೆ ರೋಟರಿ ಸದಸ್ಯರು ಸಾಕಷ್ಟು ಛಲ, ಭರವಸೆಯೊಂದಿಗೆ ತಮಗಿರುವ ಅವಕಾಶಗಳನ್ನು ಸಮಥ೯ವಾಗಿ ಉಪಯೋಗಿಸಿಕೊಂಡು ಸಾಮಾಜಿಕ ಸೇವಾ ಕಾಯ೯ಗಳಲ್ಲಿ ಸಕ್ರಿಯರಾಗುವಂತೆ ಕರೆ ನೀಡಿದರು. ಎಲ್ಲರೂ ಸ್ವಾಮಿ ವಿವೇಕಾನಂದ, ಮದರೆ ಥೆರೆಸಾ ಅವರಂಥೆ ಮಹಾನ್ ವ್ಯಕ್ತಿಯಾಗಲು ಸಾಧ್ಯವಿಲ್ಲ. ಹೀಗಿದ್ದರೂ ಪ್ರತಿಯೋವ೯ರು ರೋಟರಿಯಂಥ ಬೖಹತ್ ಸಮಾಜ ಸೇವಾ ಸಂಸ್ಥೆಗಳ ಮೂಲಕ ತಮ್ಮ ಕೈಲಾದಷ್ಟು ಸಹಾಯವನ್ನು ಸಮಾಜದಲ್ಲಿ ಅಗತ್ಯವುಳ್ಳವರಿಗೆ ನೀಡಬಹುದಾಗಿದೆ ಎಂದೂ…
ವಿರಾಜಪೇಟೆ ಜು.5 : ವಿರಾಜಪೇಟೆ ವಿವೇಕ ಜಾಗೃತ ಬಳಗ, ಸರ್ವೋದಯ ಶಿಕ್ಷಣ ಮಹಾವಿದ್ಯಾಲಯ ಹಾಗೂ ಮುರಾರ್ಜಿ ದೇಸಾಯಿ ವಸತಿ ಶಾಲೆ ತಿತಿಮತಿ ಇದರ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಸದ್ಗತಿ ದಿನದ ಪ್ರಯುಕ್ತ ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಉಚಿತ ವೈದ್ಯಕೀಯ ಹಾಗೂ ನೇತ್ರ ತಪಾಸಣಾ ಶಿಬಿರ ನಡೆಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯರುಗಳಾದ ನೇತ್ರ ತಜ್ಞ ಡಾ. ವಿಕ್ರಂ ಮತ್ತು ತಂಡ, ತಾಲೂಕು ಆಸ್ಪತ್ರೆ ವಿರಾಜಪೇಟೆ ವೈದ್ಯರುಗಳಾದ ಡಾ. ಸೌಮ್ಯಶ್ರಿ ಮತ್ತು ಡಾ.ಸತ್ಯಜಿತ್ ರಾಜ್ ತಪಾಸಣೆ ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ವಾಣಿ, ವಿದ್ಯಾರ್ಥಿಗಳು ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು. ವಿವೇಕ ಜಾಗೃತ ಬಳಗದ ಅಧ್ಯಕ್ಷರಾದ ಶಶಿಕಲಾ ಭಾಸ್ಕರ್, ತಿತಿಮತಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಹೆಚ್.ಆರ್. ಷಡಕ್ಷರಿ ಹಾಗೂ ಸರ್ವೋದಯ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಸೂರ್ಯ ಕುಮಾರಿ, ಮುಖ್ಯ ಗ್ರಂಥಪಾಲಕ ಕೆ.ಎಸ್.ರಾಜಶೇಖರ್ ಹಾಜರಿದ್ದರು. ವಿದ್ಯಾರ್ಥಿಗಳು ಸೇರಿದಂತೆ ಸುಮಾರು 300ಕ್ಕೂ ಹೆಚ್ಚು…
ವಿರಾಜಪೇಟೆ ಜು.5 : ರಾಜ್ಯದಲ್ಲಿ ಸಹಕಾರಿ ಸಂಸ್ಥೆಗಳಲ್ಲಿ ಶಿಸ್ತು ಬದ್ಧ, ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿರುವುದು ಕೊಡಗು ಜಿಲ್ಲೆ ಮಾತ್ರ ಎಂದು ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಹೇಳಿದರು. ಕಾಕೋಟುಪರಂಬು ಕೃಷಿ ಪತ್ತಿನ ಸಹಕಾರ ಸಂಘದ ರೂ.45 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ಹಿಂದೆ ನಮ್ಮ ಪೂರ್ವಜರು ಕಟ್ಟಿ ಬೆಳೆಸಿದ ಸಹಕಾರಿ ಸಂಸ್ಥೆಗಳು ಇಂದಿಗೂ ಉತ್ತಮವಾಗಿದೆ ಎಂದರೆ ನಾವು ಅವರಿಗೆ ನೀಡುತ್ತಿರುವ ಗೌರವ ಎಂದರು. ಜಿಲ್ಲೆಯ ಒಂದೆರಡು ಸಹಕಾರಿ ಸಂಸ್ಥೆಗಳನ್ನು ಹೊರತುಪಡಿಸಿದರೆ ಉಳಿದ ಎಲ್ಲಾ ಸಹಕಾರಿ ಸಂಸ್ಥೆಗಳು ಅವ್ಯವಹಾರ ಹಾಗೂ ಹಣ ದುರುಪಯೋಗ ಇಲ್ಲದೆ ಪ್ರಗತಿ ಸಾಧಿಸಿದೆ ಎಂದು ಶ್ಲಾಘಿಸಿದರು. ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ ಮಾತನಾಡಿ, ಸ್ವತಂತ್ರ ಪೂರ್ವದಲ್ಲಿಯೇ ಆರಂಭಗೊಂಡ ಸಹಕಾರಿ ಕ್ಷೇತ್ರ ಗ್ರಾಮೀಣ ಭಾಗದಲ್ಲಿ ಪ್ರಗತಿ ಸಾಧಿಸಿ ರಾಷ್ಟ್ರೀಕೃತ ಬ್ಯಾಂಕ್ಗಳಿಗೆ ಪೈಪೆÇೀಟಿ ನೀಡುತ್ತಿರುವುದು ಅವರುಗಳಿಗೆ ನುಂಗಲಾರದ ತುತ್ತಾಗಿದೆ. ಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡಿದರೆ ಸಹಕಾರ ಸಂಘಗಳು ಉಳಿದುಕೊಳ್ಳಲು ಸಹಕಾರಿಯಾಗುತ್ತದೆ…






