ಲೇಖಕ: admin

ಅರಂತೋಡು ಆ.4 :  ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ದೈನಂದಿನ ಚಟುವಟಿಕೆಗಳಿಗೆ  ಡಾ. ಶಿವರಾಮ ಕಾರಂತ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ದಾಮೋದರ ಕಣಜಾಲು ಚಾಲನೆ ನೀಡಿದರು. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಅವರು,   ಕ್ರಮಬದ್ಧವಾದ ಜೀವನಶೈಲಿ ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದರು. ಕಾಲೇಜಿನ ಸಂಚಾಲಕ, ರಾಷ್ಟ್ರ ಪ್ರಶಸ್ತಿ ಪುರಸ್ಕತ ಶಿಕ್ಷಕ  ಕೆ.ಆರ್.ಗಂಗಾಧರ್ ಮಾತನಾಡಿ, ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದರೊಂದಿಗೆ, ಚಲನಾಶೀಲರಾಗಿರಬೇಕು. ಸಮಾಜದಲ್ಲಿ ಧೈರ್ಯದಿಂದ ಬದುಕುವುದನ್ನು  ಎನ್ಎಸ್ಎಸ್ ಕಲಿಸುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ  ರಮೇಶ್ ವಹಿಸಿದ್ದರು. ನಿಕಟಪೂರ್ವ ಕಾರ್ಯಕ್ರಮಾಧಿಕಾರಿ  ಗೌರಿಶಂಕರ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ  ಪದ್ಮಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಾಧಿಕಾರಿ  ಎಂ.ಲಿಂಗಪ್ಪ  ವಂದಿಸಿದರು. ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Read More

ನಾಪೋಕ್ಲು ಆ.4 :   ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಕ್ಯಾಬಿನೆಟ್ ದರ್ಜೆ ಸ್ಥಾನವನ್ನು ಅಲಂಕರಿಸಿ ಮೊದಲ ಬಾರಿಗೆ ನಾಪೋಕ್ಲುವಿಗೆ ಆಗಮಿಸಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ  ಎ.ಎಸ್. ಪೊನ್ನಣ್ಣ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿದರು. ಜಿಲ್ಲಾ  ಡಿಸಿಸಿ ಉಪಾಧ್ಯಕ್ಷ ಅಬ್ದುಲ್ ರೆಹ್ಮಾನ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಲು ಹೊದಿಸಿ ಹೂವಿನ ಹಾರ ಹಾಕಿ  ಬರಮಾಡಿಕೊಂಡರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ವಲಯಾಧ್ಯಕ್ಷ ಮಾಚೆಟ್ಟಿರ ಕುಶು ಕುಶಾಲಪ್ಪ, ನಾಪೋಕ್ಲು ಯೂತ್ ಕಾಂಗ್ರೆಸ್ ಅಧ್ಯಕ್ಷ ಸಿರಾಜ್, ಗ್ರಾ.ಪಂ ಅಧ್ಯಕ್ಷೆ ಹೆಚ್.ಎಸ್ ಪಾರ್ವತಿ, ಉಪಾಧ್ಯಕ್ಷ ಮಹಮ್ಮದ್, ಗ್ರಾ.ಪಂ ಸದಸ್ಯರು, ಕಾಂಗ್ರೆಸ್ ಮುಖಂಡರು, ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಜರಿದ್ದರು. ವರದಿ :ಝಕರಿಯ ನಾಪೋಕ್ಲು 

Read More

ಮಡಿಕೇರಿ ಆ.4 :  ಹೂಕಾಡು ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಶುಕ್ರವಾರ ನಡೆಯಿತು. ಕಗ್ಗೋಡು ಗ್ರಾಮದ ಆಶಾ ಕಾರ್ಯಕರ್ತೆ ಯಶೋಧ ಕುಮಾರಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಎದೆ ಹಾಲಿನ ಮಹತ್ವದ ಕುರಿತು ಮಾಹಿತಿ ನೀಡಿದರು. ಎದೆ ಹಾಲು ಅಮೃತಕ್ಕೆ ಸಮಾನ. ಪ್ರತಿಯೊಬ್ಬ ತಾಯಿಯು ಮಗು ಹುಟ್ಟಿದ ಅರ್ಧ ಗಂಟೆಯೊಳಗೆ ಮೊದಲಿಗೆ ಬರುವ ಕೊಲೊಸ್ಟ್ರಂ ಗಟ್ಟಿ ಹಾಲನ್ನು ಮಗುವಿಗೆ ತಪ್ಪದೆ ಕುಡಿಸಬೇಕು ಎಂದರು. ಈ ಹಾಲು ಕುಡಿಸುವುದರಿಂದ ಮಗುವಿನಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಈ ಹಾಲಿನಲ್ಲಿ ಪ್ರೊಟೀನ್ ಮತ್ತು ವಿಟಮಿನ್ ‘ಎ’ ಹೇರಳವಾಗಿ ಸಿಗುತ್ತದೆ. ಮಗುವಿಗೆ ಆರು ತಿಂಗಳುಗಳ ಕಾಲ ಎದೆಹಾಲನ್ನು ಮಾತ್ರ ಕುಡಿಸಬೇಕು. ಆರು ತಿಂಗಳ ನಂತರ ಎದೆ ಹಾಲಿನ ಜೊತೆಗೆ ಇತರೆ ಆಹಾರವನ್ನು ನೀಡಬೇಕು. ನಮ್ಮ ಮಕ್ಕಳ ಆರೋಗ್ಯ ನಮ್ಮ ಕೈಯಲ್ಲಿ ಇರುವುದರಿಂದ ಯಾವುದೇ ಜಾಹೀರಾತುಗಳಿಗೆ ಮರುಳಾಗದೆ,  ಎದೆಹಾಲನ್ನು ಮಾತ್ರ ಕುಡಿಸಬೇಕು. ಮಗು ಅನಾರೋಗ್ಯದಿಂದ ಬಳಲುತ್ತಿರುವಾಗ ಎದೆಹಾಲು ಕುಡಿಸುವುದನ್ನು ನಿಲ್ಲಿಸಬಾರದು ಎಂದು ಕಿವಿ ಮಾತು ಹೇಳಿದರು.…

Read More

ಮಡಿಕೇರಿ ಆ.4 : 2023-24ನೇ ಸಾಲಿನ 31ನೇ ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳು ಆ.12 ರಂದು ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ.ಬೋಪಯ್ಯ ಅವರ ಗದ್ದೆಯಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೆಲ್ ಅಸೋಸಿಯೇಶನ್ ಆಫ್ ಇಂಡಿಯಾ (ಮಡಿಕೇರಿ ಘಟಕ), ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಕಗ್ಗೊಡ್ಲು ಕಾವೇರಿ ಯುವಕ ಸಂಘ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 9.30 ಗಂಟೆಯಿಂದ ಸ್ಪರ್ಧೆಗಳು ನಡೆಯಲಿವೆ ಎಂದರು. ಸಾರ್ವಜನಿಕ ಪುರುಷ ಮತ್ತು ಮಹಿಳೆಯರ ಹಗ್ಗ ಜಗ್ಗಾಟ (9 ಜನರ ತಂಡ), ಸಾರ್ವಜನಿಕ ಪುರುಷರ ವಾಲಿಬಾಲ್ (4 ಜನರ ತಂಡ), ಸಾರ್ವಜನಿಕ ಮಹಿಳೆಯರಿಗೆ ಥ್ರೋಬಾಲ್ (6 ಜನರ ತಂಡ), ಪ್ರೌಢ ಶಾಲಾ ಬಾಲಕಿಯರಿಗೆ ಥ್ರೋಬಾಲ್…

Read More

ಮಡಿಕೇರಿ ಆ.4 : ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೊಡಗಿನ ಆರು ಕಡೆಗಳಲ್ಲಿ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮದ ಪ್ರಯುಕ್ತ ಪಂಜಿನ ಮೆರವಣಿಗೆ, ವಾಹನ ಜಾಥ ಮತ್ತು ಸಭಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ಕುಕ್ಕೇರ ಅಜಿತ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಆ.9 ರಂದು ವಿರಾಜಪೇಟೆಯಲ್ಲಿ ಸಂಜೆ 6 ಗಂಟೆಗೆ ಪಂಜಿನ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಮೆರವಣಿಗೆ ತೆಲುಗರ ಬೀದಿ ಮಾರಿಯಮ್ಮ ದೇವಾಲಯದಿಂದ ಆರಂಭಗೊಂಡು ಕ್ಲಾಕ್ ಟವರ್, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕಾಗಿ ಮಹಿಳಾ ಸಮಾಜದ ಬಳಿ ಸಂಜೆ 7.30 ಕ್ಕೆ ಮುಕ್ತಾಯಗೊಳ್ಳಲಿದೆ. ಸುಮಾರು 2 ಕಿ.ಮೀ. ಅಂತರದ ಪಂಜಿನ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು. ಗೋಣಿಕೊಪ್ಪಲಿನಲ್ಲಿ ಆ.10 ರಂದು ಬೆಳಗ್ಗೆ 10 ಗಂಟೆಗೆ ಸುಮಾರು 10 ಕಿ.ಮೀ. ಅಂತರದ ವಾಹನ ಜಾಥ ನಡೆಯಲಿದೆ. ಅಲ್ಲಿನ ಆರ್‍ಎಂಸಿ ಬಳಿಯಿಂದ ಜಾಥ ಆರಂಭಗೊಂಡು ಖಾಸಗಿ ಬಸ್ ನಿಲ್ದಾಣದ ಮೂಲಕ ಬೈಪಾಸ್ ಮಾರ್ಗವನ್ನು ಹಾದು ಪೊನ್ನಂಪೇಟೆ ಕೊಡವ…

Read More

ಮಡಿಕೇರಿ ಆ.4 :  ಪೊನ್ನಂಪೇಟೆಯ  ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಕ್ನಾಲಜಿ ಶಿಕ್ಷಣ ಸಂಸ್ಥೆಯಲ್ಲಿ  ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಕಾಲೇಜಿನ ಇಕೋ ಕ್ಲಬ್ ವತಿಯಿಂದ  ಆಚರಿಸಲಾಯಿತು. ಕಾರ್ಯಕ್ರಮದ ಪ್ರಯುಕ್ತ ಮುಖ್ಯಅತಿಥಿಗಳಾಗಿ ಆಗಮಿಸಿದ ಪೊನ್ನಂಪೇಟೆ ಅರಣ್ಯ ಕಾಲೇಜಿನ ನಿವೃತ್ತ ಡೀನ್  ಸಿ.ಜಿ.ಕುಶಾಲಪ್ಪ  ವಿಶ್ವ ಪ್ರಕೃತಿ ಸಂರಕ್ಷಣಾದಿನದ ಕುರಿತು ಮಾತನಾಡಿ ದಿನದ ಮಹತ್ವವನ್ನುತಿಳಿಸಿದರು. ಕೊಡಗಿನ ಜೀವವೈವಿಧ್ಯತೆಯ ಜೊತೆಗೆ ಪ್ರಕೃತಿಯ ಸಂರಕ್ಷಣೆ, ಮಾನವ ಹಾಗೂ ವನ್ಯಜೀವಿಗಳ ಸಂಘರ್ಷ , ಜಾಗತಿಕ ತಾಪಮಾನದ ಪರಿಣಾಮ , ಕಾಫಿಮೆಣಸು ಭತ್ತದ ಕೃಷಿ, ಪ್ರವಾಸಿಕೇಂದ್ರಗಳಿಂದ ಪರಿಸರದಮೇಲಾಗುವ ಪರಿಣಾಮ ಮುಂತಾದ ವಿಚಾರಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು. ಇದೇ ಸಂದರ್ಭ ಡಾ.ಸಿ.ಜಿ.ಕುಶಾಲಪ್ಪ ಅವರು,  ಉಡುಗೊರೆಯಾಗಿ ನೀಡಿದ  ಬಿದಿರಿನ ಎರಡು ವಿಶಿಷ್ಟತಳಿಗಳನ್ನು ಪ್ರಾಂಶುಪಾಲರು ಹಾಗೂ ಇಕೋ ಕ್ಲಬ್ ವಿದ್ಯಾರ್ಥಿಗಳು ಹಾಗೂ ಸಂಚಾಲಕರಾದ ಪ್ರೊ. ಕಾರ್ತಿಕ್  ಅವರ ಸಮ್ಮುಖದಲ್ಲಿ ಕಾಲೇಜು ಆವರಣದಲ್ಲಿ ನೆಡುವುದರ ಮೂಲಕ ಕಾಲೇಜು ಆವರಣದಲ್ಲಿ ಹಸಿರೀಕರಣ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಮತ್ತಷ್ಟು ಗಿಡನೆಡಲು ಪ್ರೋತ್ಸಾಹಿಸಿದರು. ಕಾರ್ಯಕ್ರಮದಲ್ಲಿ ಒಟ್ಟು 272 ವಿಧ್ಯಾರ್ಥಿಗಳು ಭಾಗವಹಿಸಿದ್ದರು.…

Read More

ಮಡಿಕೇರಿ ಆ.4 : ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದು ಕುಶಾಲನಗರದ ಹಾರಂಗಿಯಲ್ಲಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದ ವ್ಯಕ್ತಿಯ ಮೃತದೇಹವನ್ನು ಇಂದು ಹೊರ ತೆಗೆಯಲಾಗಿದೆ. ಬೆಂಗಳೂರು ವಿಜಯಪುರದ ನಿವಾಸಿ ಸಂದೀಪ್ (45) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಗುರುವಾರ ಹಾರಂಗಿ ಜಲಾಶಯದ ಎದುರಿನ ಸೇತುವೆಯಿಂದ ಆಯತಪ್ಪಿ ನೀರಿಗೆ ಬಿದ್ದಿದ್ದರು. ಸಂಜೆ ಶವ ಪತ್ತೆ ಕಾರ್ಯಾಚರಣೆ ವಿಫಲವಾದ ಹಿನ್ನೆಲೆ ಇಂದು ಅಗ್ನಿಶಾಮಕ ದಳ ಹಾಗೂ ದುಬಾರೆಯ ರ್ಯಾಫ್ಟಿಂಗ್ ತಂಡ ಶೋಧ ಕಾರ್ಯ ನಡೆಸಿತು. ಹಾರಂಗಿ ಜಲಾಶಯದ ಹೊರಹರಿವು ಸ್ಥಗಿತಗೊಳಿಸಿ ಪತ್ತೆ ಕಾರ್ಯಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮಧ್ಯಾಹ್ನದ ವೇಳೆಗೆ ಸೇತುವೆಯ ಕೆಳಭಾಗದಲ್ಲೇ ಶವ ಸಿಕ್ಕಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಬೆಂಗಳೂರು ಆ.4 :  ಬೆಂಗಳೂರಿನ ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಜೆ.ಡಬ್ಲ್ಯೂ ಮ್ಯಾರಿಯೆಟ್ ಹೋಟೆಲ್ ನಲ್ಲಿ ನಡೆದ ಶಿಕ್ಷಣ ಕುರಿತ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಫಿ ಟೇಬಲ್ ಪುಸ್ತಕ ಬಿಡುಗಡೆಗೊಳಿಸಿದರು. ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್,  ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್,  ಪ್ರಾಥಮಿಕ ಶಿಕ್ಷಣ ಸಚಿವ  ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಸಚಿವರಾದ ಶರಣಪ್ರಕಾಶ್ ಪಾಟೀಲ್, ಡಿ.ಸುಧಾಕರ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಅವರು ಉಪಸ್ಥಿತರಿದ್ದರು. 

Read More

ಮಡಿಕೇರಿ ಆ. 4 : ಪರಿಸರ ನಾಶವಾದರೆ ಭವಿಷ್ಯದಲ್ಲಿ ಘೋರ ಪರಿಣಾಮ ಎದುರಿಸಬೇಕಾದೀತು. ಈ ಹಿನ್ನಲೆಯಲ್ಲಿ ಪರಿಸರವನ್ನು ಸಂರಕ್ಷಿಸುವುದರೊಂದಿಗೆ ಮರಗಳ ನಾಶವನ್ನು ತಡೆಗಟ್ಟುವುದು ಪ್ರತೀಯೋವ೯ ಜವಬ್ದಾರಿಯುತ ನಾಗರಿಕರ ಕತ೯ವ್ಯ ಎಂದು ಪ್ರಭಾರ ವಲಯ ಅರಣ್ಯಾಧಿಕಾರಿ ಮಯೂರ್ ಉದಯ್ ಕರವೇಕರ್ ಹೇಳಿದ್ದಾರೆ. ಮಡಿಕೇರಿ ರೋಟರಿ ವುಡ್ಸ್ ವತಿಯಿಂದ ರೋಟರಿ ಸಭಾಂಗಣದಲ್ಲಿ ಆಯೋಜಿತ ಪರಿಸರ ಮಹತ್ವದ ಉಪನ್ಯಾಸ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಯೂರ್ ಕರವೇಕರ್ , ವನ ಮಹೋತ್ಸವದಂಥ ಪರಿಸರ ಜಾಗ್ರತಿ ಆಚರಣೆಗಳು ವಷ೯ಕ್ಕೊಂದೇ ದಿನಕ್ಕೆ ಸೀಮಿತವಾಗದೇ ಯಾವಾಗ ಸಾಧ್ಯವಾಗುತ್ತದೋ ಆಗಾಗ್ಗೆ ಪರಿಸರ ಕಾಳಜಿಯ ನಿಟ್ಟಿನಲ್ಲಿ ಹಸಿರ ಸಸಿ ನೆಡುವಿಕೆಯಂಥ ಕಾಯ೯ಕ್ರಮಗಳು ಜರುಗಬೇಕು. ಪರಿಸರ ನಾಶ ತಡೆಯದೇ ಹೋದಲ್ಲಿ ವಿದ್ಯುತ್, ನೀರಿನಂತೆ ಗಾಳಿಗೂ ಅತ್ಯಧಿಕ ಬೆಲೆ ತೆರಬೇಕಾದೀತು. ನಾವು ಮೊದಲು ಪರಿಸರ ರಕ್ಷಣೆಗೆ ಬದ್ದರಾಗಬೇಕು. ಬೇರೆಯವರಿಗೆ ಉಪದೇಶ ನೀಡುವಮುನ್ನ ಈ ನಿಟ್ಟಿನಲ್ಲಿ ನಾವು ಯಾವ ರೀತಿ ಕಾಳಜಿ ವಹಿಸಿರುವೆ ಎಂಬ ಆತ್ಮಾವಲೋಕನ ಮುಖ್ಯವಾಗಬೇಕು. ಮೂಲಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಪ್ರತೀ ವಷ೯ ಲಕ್ಷಾಂತರ ಹೆಕ್ಟೇರ್ ನಾಶವಾಗುತ್ತಿದೆ.…

Read More

ಮಡಿಕೇರಿ ಆ.4 : ಭಾರತೀಯ ಭೂ ಸೇನೆಯಲ್ಲಿ ಕ್ಯಾಪ್ಟನ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿರಾಜಪೇಟೆಯ ಶರಣ್ಯರಾವ್ ಅವರಿಗೆ ಪ್ರಶಸ್ತಿ “ಡಬಲ್”ಗೆ ಪಾತ್ರರಾಗಿದ್ದಾರೆ. 60ನೇ ವರ್ಷಾಚರಣೆಯಲ್ಲಿರುವ ಗುಜರಾತ್‍ನ ವಡೋದರಾದಲ್ಲಿರುವ ಇಎಂಇ ಶಾಲೆಯಲ್ಲಿ ಆಯೋಜಿಸಲಾಗಿದ್ದ “ಯಂಗ್ ಆಫೀಸರ್ಸ್” ತರಬೇತಿಯಲ್ಲಿ ಶರಣ್ಯರಾವ್ ಮೊದಲ ಸ್ಥಾನಿಯೂ ಆಗಿ ಹೊರಹೊಮ್ಮಿದ್ದಾರೆ. ಭೂ ಸೇನೆಯ ತರಬೇತಿ ವಿಭಾಗದ ಮುಖ್ಯಸ್ಥರಾದ ಹೆಸರಿನಲ್ಲಿರುವ ಟ್ರೋಫಿ ಪದಕವನ್ನು ಇತ್ತೀಚಿಗೆ ನಡೆದ ಸಮಾರಂಭವೊಂದರಲ್ಲಿ ಇಎಂಇ ಶಾಲಾ ಕಮಾಂಡೆಂಟ್ ಮೇ.ಜ ನೀರಜ್ ವರ್ಶಾನಿ ವಿಎಸ್‍ಎಂ ರಿಂದ ಪಡೆದುಕೊಂಡಿದ್ದಾರೆ. ಶರಣ್ಯ ಕೂರ್ಗ್ ಗಾಲ್ಫ್ ಲಿಂಕ್ಸ್‍ನ ವ್ಯವಸ್ಥಾಪಕರಾಗಿರುವ ಹರೀಶ್‍ರಾವ್ ಎಸ್ ಹಾಗೂ ಎಸ್‍ಎಂಎಸ್ ಅಕಾಡೆಮಿಯಲ್ಲಿ ಗೈಡ್ ಕ್ಯಾಪ್ಟನ್ ಆಗಿರುವ ಮೈಥಿಲಿರಾವ್ ದಂಪತಿಯ ಪುತ್ರಿ.

Read More