ಲೇಖಕ: admin

ಕುಶಾಲನಗರ ಜು.5 :  ನಾವು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಹೆಚ್ಚೆಚ್ಚು ಗಿಡ- ಮರಗಳನ್ನು ಬೆಳೆಸಿ ಅರಣ್ಯ ಪ್ರದೇಶವನ್ನು ವೃದ್ಧಿಸುವ ಮೂಲಕ ಉತ್ತಮ ಪರಿಸರ ವ್ಯವಸ್ಥೆಯೊಂದಿಗೆ ಭವಿಷ್ಯಕ್ಕಾಗಿ ನೀರು ಮತ್ತು ಜೀವ ವೈವಿಧ್ಯ ಸಂರಕ್ಷಣೆ ಮಾಡಲು ಸಮುದಾಯದ ಸಹಕಾರ ಅಗತ್ಯ ಎಂದು ಅರಣ್ಯ ಇಲಾಖೆಯ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ ಹೇಳಿದರು. ಅರಣ್ಯ ಇಲಾಖೆಯ ಕೊಡಗು ವೃತ್ತದ ಮಡಿಕೇರಿ ವಿಭಾಗ ಮತ್ತು ಕುಶಾಲನಗರ ಅರಣ್ಯ ವಲಯ ಹಾಗೂ ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕದ ವತಿಯಿಂದ ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಿಸರ್ಗ ಇಕೋ ಕ್ಲಬ್ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿಯ ಸಹಯೋಗದಲ್ಲಿ ಶಾಲಾವರಣದಲ್ಲಿ “ನಮ್ಮ ನಡೆ ಹಸಿರೆಡೆಗೆ'( ಗ್ರೋ ಗ್ರೀನ್ ) ಹಾಗೂ ‘ನನ್ನ ಗಿಡ ನನ್ನ ಹೆಮ್ಮೆ’ ಅಂಗವಾಗಿ ಏರ್ಪಡಿಸಿದ್ದ ವನ ಮಹೋತ್ಸವ ಸಪ್ತಾಹ :2023 ರ ಅಂಗವಾಗಿ 100 ಅರಣ್ಯ ಸಸಿ ನೆಡುವ ಕಾರ್ಯಕ್ಕೆ…

Read More

ಮಡಿಕೇರಿ ಜು.5 : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ರಾಜ್ಯ ಮಟ್ಟದ ಕಾವ್ಯ ಮತ್ತು ಸಾಂಸ್ಕೃತಿಕ ಸಂಭ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದ್ದು, ಜು.9 ರಂದು ಬೆಂಗಳೂರಿನ ಚಾಮರಾಜಪೇಟೆ ರಸ್ತೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯಲಿದೆ. ಸಮಾರಂಭದ ಅಂಗವಾಗಿ ರಾಜ್ಯ ಮಟ್ಟದ ಕವಿಗೋಷ್ಠಿ ಏರ್ಪಡಿಸಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಮೂವತ್ತು ಮಂದಿ ಕವಿ ಕವಯತ್ರಿಯರು ಅವಕಾಶ ಪಡೆದಿದ್ದಾರೆ. ಈ ಪೈಕಿ ಕೊಡಗು ಜಿಲ್ಲೆಯಿಂದ ಈರಮಂಡ ಹರಿಣಿ ವಿಜಯ್ ಆಯ್ಕೆಯಾಗಿದ್ದಾರೆ ಎಂದು ಖಿದ್ಮಾ ಫೌಂಡೇಶನ್‍ನ ರಾಜ್ಯ ಸಂಚಾಲಕ ಅಮೀರ್ ಬನ್ನೂರು ತಿಳಿಸಿದ್ದಾರೆ.

Read More

ಮಡಿಕೇರಿ ಜು.5 : ಹಾಕತ್ತೂರು ಗ್ರಾಮದ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕೂಲಿ ಕಾರ್ಮಿಕ ನಂಜುಂಡ(40) ಜೂ.27 ರಂದು ಮನೆಯಿಂದ ಹೊರ ಹೊದವರು ವಾಪಸು ಬಾರದೇ ಕಾಣೆಯಾಗಿರುವ ಬಗ್ಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಂಜುಂಡ ಕನ್ನಡ, ತಮಿಳು, ಹಿಂದಿ ಭಾಷೆ ಮಾತನಾಡುವವರಾಗಿದ್ದು, 5.4 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ತೆಳ್ಳಗಿನ ಶರೀರ ಹೊಂದಿದ್ದಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ 08272-228777 ಅಥವಾ ಪೊಲೀಸ್ ಅಧೀಕ್ಷಕರು 08272-229000 ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.

Read More

ಮಡಿಕೇರಿ ಜು.5 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾರ್ಭಟ ಮುಂದುವರೆದಿದೆ. ಮೋರಿ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯತಪ್ಪಿ ಬಿದ್ದು ಮಳೆ ನೀರಿನಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲ್ಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಸುರೇಶ್ ಗಟ್ಟಿ (52) ಎಂಬುವವರೇ ಸಾವನ್ನಪಿರುವ ದುರ್ದೈವಿ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ದಕ್ಷಿಣ ಕನ್ನಡ ವ್ಯಾಪ್ತಿಯಲ್ಲಿ ಗಾಳಿ, ಮಳೆ ವ್ಯಾಪಕವಾಗಿದ್ದು, ಜಿಲ್ಲಾಡಳಿತ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ.

Read More

ಮಡಿಕೇರಿ ಜು.5 :  ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ 2023-24ನೇ ಸಾಲಿನ ʻಕನ್ನಡ ಪ್ರವೇಶʼ, ʻಕಾವʼ, ʻಜಾಣʼ ಹಾಗೂ ʻರತ್ನʼ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2023ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯಲಿರುವ ʻಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನʼ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು 2023ರ ಆಗಸ್ಟ್ 31 ಕೊನೆಯ ದಿನವಾಗಿದೆ. 2023ರ ಸೆಪ್ಟೆಂಬರ್ 15ರ ವರೆಗೆ ದಂಡ ಶುಲ್ಕ ರೂ. 50-00ಅನ್ನು ಹೆಚ್ಚುವರಿಯಾಗಿ ಪಾವತಿಸಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ. ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು 25ರೂ. ಶುಲ್ಕ ಪಾವತಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ಇರುವ ಮಾರಾಟ ಮಳಿಗೆಯಲ್ಲಿ ದಿನಾಂಕ 1-07-2023 ರಿಂದ ಪಡೆಯಬಹುದಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ತಾವು ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸುವ ಸೌಲಭ್ಯವನ್ನು ಪರಿಷತ್ತು ಕಲ್ಪಿಸಿದೆ. ಅರ್ಜಿ ನಮೂನೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ…

Read More

ಮಡಿಕೇರಿ ಜು.5 : ಹುಚ್ಚು ನಾಯಿ ಕಚ್ಚಿ ಬಾಲಕ ಸೇರಿದಂತೆ 9 ಮಂದಿಗೆ ಗಾಯವಾಗಿರುವ ಘಟನೆ ಪಿರಿಯಾಪಟ್ಟಣದ ಈಡಿಗರ ಬೀದಿಯ ಬಳಿ ನಡೆದಿದೆ. 10 ವರ್ಷದ ಬಾಲಕನ ಕಾಲು ಮತ್ತು ತೊಡೆ ಭಾಗಕ್ಕೆ ತೀವ್ರವಾಗಿ ಕಚ್ಚಿದ ಪರಿಣಾಮ ಗಂಭೀರ ಗಾಯಗಳಾಗಿವೆ. ಉಳಿದ 8 ಮಂದಿಯ ಮೇಲೂ ನಾಯಿ ದಾಳಿ ಮಾಡಿದ್ದು, ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪಿರಿಯಾಪಟ್ಟಣದ ವ್ಯಾಪ್ತಿಯಲ್ಲಿ ಹುಚ್ಚು ನಾಯಿ ಮತ್ತು ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಪುರಸಭೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಜು.5 :  ಕರಿಕೆ ಪ್ರೌಢ ಶಾಲೆಯಲ್ಲಿ ಭಾಗಮಂಡಲ ವಲಯ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಶಾಲೆಯ ಆವರಣದಲ್ಲಿ  ಅರಣ್ಯ ಅಧಿಕಾರಿಗಳು, ಪಂಚಾಯಿತಿ ಸಿಬ್ಬಂದಿಗಳು, ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಎಸ್.ಡಿ.ಎಂ.ಸಿ ಸಿಬ್ಬಂದಿಗಳು,  ಪ್ರಮುಖರಾದ ಶಿವ, ಗಿರಿ, ರಾಜೇಶ್, ಸಚಿನ್ ಬಿರೇದಾರ್ ಪಾಲ್ಗೊಂಡು ವಿವಿಧ  ತಳಿಯ ಸಸಿಗಳನ್ನು ನೆಟ್ಟರು. ಈ ಸಂದರ್ಭ  ಆರ್‍ಎಪ್‍ಓ ರಾವೀಂದ್ರ ಮಾತನಾಡಿ,  ಸಸಿಗಳನ್ನು ನೆಡುವ ಜೊತೆ ಜೊತೆಗೆ ವಿದ್ಯಾರ್ಥಿಗಳು ಪರಿಸರದ ಸಂರಕ್ಷಣೆಗೆ ವಿಶೇಷ ಕಾಳಜಿ ವಹಿಸಬೇಕೆಂದು ಕರೆ ನೀಡಿದರು.

Read More

ಮಡಿಕೇರಿ ಜು.5 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 36.43 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 65.83 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 393.32 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 956.83 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 48.78 ಮಿ.ಮೀ. ಕಳೆದ ವರ್ಷ ಇದೇ ದಿನ 101.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 617.89 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1412.59 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 34.87 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 54.83 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 279.49 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 778.59 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 25.63 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 40.87 ಮಿ.ಮೀ.…

Read More

ಮಡಿಕೇರಿ ಜು.5 : ಭಾರತೀಯ ಸೇನೆಯಲ್ಲಿ ಕ್ಯಾಪ್ಟನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿಲ್ಲೆಯವರಾದ ಚಾಮೆರ ದೇವಯ್ಯ (ಚಂದನ್) ಇದೀಗ ಮೇಜರ್ ಆಗಿ ಬಡ್ತಿ ಹೊಂದಿದ್ದಾರೆ. ಇವರು ಮೂಲತಃ ಮಂಕ್ಯದವರಾಗಿದ್ದು, ಶನಿವಾರಂಸತೆಯಲ್ಲಿ ನೆಲೆಸಿದ್ದ, ಇದೀಗ ಬೆಂಗಳೂರಿನಲ್ಲಿರುವ ಚಾಮೆರ ಪ್ರಕಾಶ್ ಹಾಗೂ ಉಷಾ ದಂಪತಿ ಪುತ್ರ.

Read More

ಮಡಿಕೇರಿ ಜು.5 :   ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣೆ ಮತ್ತು ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಪತ್ರಕರ್ತರಿಗೆ ವಿವಿಧ ಬಗೆಯ ಸ್ಪರ್ಧೆಗಳನ್ನ ಆಯೋಜಿಸಲಾಗಿದೆ. ಈ ಕುರಿತು ಜಂಟಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೆಳ್ಳಿ ಮಹೋತ್ಸವ ಸಾಂಸ್ಕೃತಿಕ ಸಮಿತಿ ಸಂಚಾಲಕ ಐಮಂಡ ಗೋಪಾಲ್ ಸೋಮಯ್ಯ ಮತ್ತು ಕಾರ್ಯಕ್ರಮ ಸಂಚಾಲಕ ಸಂಚಾಲಕ ಮಂದನೆರವಂಡ ಯುಗ ದೇವಯ್ಯ, ಕಾಲೇಜು ವಿದ್ಯಾರ್ಥಿಗಳಿಗೆ ಸಾಕ್ಷ್ಯಚಿತ್ರ, ಸಾರ್ವಜನಿಕರಿಗೆ ರೀಲ್ಸ್ ಮತ್ತು ಪತ್ರಕರ್ತರಿಗೆ ಛಾಯಾಗ್ರಹಣ ಹಾಗೂ ಛಾಯಾಚಿತ್ರ ಸ್ಪರ್ಧೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳಿಗೆ ಸಾಕ್ಷ್ಯ ಚಿತ್ರ ಸ್ಪರ್ಧೆ ::  ಕೊಡಗು ವಿಶ್ವವಿದ್ಯಾನಿಲಯದ ಅಧಿನ ಕಾಲೇಜು ವಿದ್ಯಾರ್ಥಿಗಳಿಗೆ ಸಾಕ್ಷ್ಯಚಿತ್ರ ಸ್ಪರ್ಧೆ ಏರ್ಪಡಿಸಲಾಗಿದ್ದು, ಕೊಡಗಿನಲ್ಲಿ “ಮುಂಗಾರು” ಎಂಬ ವಿಷಯ ವಸ್ತು ನೀಡಲಾಗಿದೆ. ಸಾಕ್ಷ್ಯ ಚಿತ್ರದ ಅವಧಿ 5 ನಿಮಿಷ ಮೀರುವಂತಿಲ್ಲ. ಒಂದು ಕಾಲೇಜಿನಿಂದ ಎಷ್ಟು ಎಂಟ್ರಿಗಳನ್ನು ಬೇಕಾದರೂ ನೀಡಬಹುದು. ಸ್ಪರ್ಧೆಯಲ್ಲಿ ಪ್ರಥಮ‌ ಬಹುಮಾನ ವಿಜೇತರಿಗೆ 5000 ರೂ ನಗದು, ದ್ವಿತೀಯ 3000 ರೂ ನಗದು ಹಾಗೂ…

Read More