ಮಡಿಕೇರಿ ಆ.3 : ಡಾ.ಕಸ್ತೂರಿ ರಂಗನ್ ವರದಿಯ ಸಾಧಕ, ಬಾಧಕಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಆ.11 ರಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುವ ಸೇನೆ ವತಿಯಿಂದ ಜಿಲ್ಲೆಯಲ್ಲಿ ವಿಚಾರಗೋಷ್ಠಿ ನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆ ಅಥವಾ ಸಿದ್ದಾಪುರದಲ್ಲಿ ವಿಚಾರಗೋಷ್ಠಿ ಮತ್ತು ಸಂವಾದವನ್ನು ಆಯೋಜಿಸಲಾಗುವುದು. ಗೋಷ್ಠಿಯಲ್ಲಿ ಪರಿಸರ ತಜ್ಞರು, ಸಂಪನ್ಮೂಲ ವ್ಯಕ್ತಿಗಳು ಹಾಗೂ ಮಲೆನಾಡು ಪ್ರದೇಶದ ಎಲ್ಲಾ ಜಿಲ್ಲೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಪರಿಸರವನ್ನು ಕಾಪಾಡುವ ಕಾರಣ ನೀಡಿ ಸೂಕ್ಷ್ಮ ವಲಯ ಎಂದು ಘೋಷಿಸಲು ಕಸ್ತೂರಿ ರಂಗನ್ 2013 ಏಪ್ರಿಲ್ 15 ರಂದು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವರದಿಯು ಅವೈಜ್ಞಾನಿಕವಾಗಿದ್ದು, ಇದು ರೈತರಿಗೆ ಮಾರಕವಾಗಿದೆ. ಮಲೆನಾಡು ಪ್ರದೇಶದಲ್ಲಿ ವಾಸಿಸುತ್ತಿರುವ ರೈತರು, ಕಾರ್ಮಿಕರು, ಆದಿವಾಸಿ ಬುಡಕಟ್ಟು ಜನರ ಬದುಕು ಮತ್ತು ಮೂಲಭೂತ ಹಕ್ಕನ್ನು ಕಸಿದುಕೊಳ್ಳುವ ವರದಿಯಾಗಿದೆ. ಇದನ್ನು ಈ ಹಿಂದೆ ಕಾಂಗ್ರೆಸ್ ಮತ್ತು ಇತರ ಸರ್ಕಾರಗಳು ತಿರಸ್ಕರಿಸಿದ್ದು, ಪ್ರಸ್ತುತ…
ಲೇಖಕ: admin
ಸುಂಟಿಕೊಪ್ಪ,ಆ.3: ಗುರುವಾರದಂದು ನಿಗಧಿಯಾಗಿದ್ದ ಗ್ರೇಡ್ 1 ಪಂಚಾಯಿತಿಯ 2ನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯು ತಾಂತ್ರಿಕ ದೋಷದ ಹಿನ್ನಲೆಯಲ್ಲಿ ಆ.10ಕ್ಕೆ ಮುಂದೂಡಲಾಗಿದೆ ಎಂದು ಚುನಾವಣಾ ಅಧಿಕಾರಿ ವರದರಾಜ್ ತಿಳಿಸಿದ್ದಾರೆ. ಅಧ್ಯಕ್ಷ ಸ್ಥಾನವು ಬಿಸಿಎಂ (ಎ) ಮತ್ತು ಉಪಾಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆ ಮೀಸಲಾಗಿದ್ದು, ಸಲ್ಲಿಕೆಯಾಗಿದ್ದ 7 ಅಧ್ಯಕ್ಷ ಆಕಾಂಕ್ಷಿಗಳ ನಾಮಪತ್ರ ಪರಿಶೀಲನೆ ಸಂದರ್ಭ ಸಂಬಂಧಿಸಿದ ಆಭ್ಯರ್ಥಿಗಳು ಆಯಾ ತಾಲೂಕು ತಹಶೀಲ್ದಾರ್ ನೀಡಿದ ಜಾತಿ ಪ್ರಮಾಣಪತ್ರ, ನಾಮಪತ್ರದ ಜೊತೆಗೆ ಸಲ್ಲಿಸಬೇಕಾಗಿದ್ದು, ಪ್ರಸ್ತುತ ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರಗಳು ತಿರಸ್ಕೃತಗೊಂಡಿದೆ. ಈ ಹಿನ್ನೆಲೆ ಪ್ರಮಾಣ ಪತ್ರ ಒದಗಿಸಲು 7 ದಿನಗಳ ಕಾಲಾವಕಾಶ ನೀಡಿ ಚುನಾವಣೆಯನ್ನು ಆ.10 ರ ಗುರುವಾರಕ್ಕೆ ಮುಂದೂಡಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ವರದರಾಜ್ ಆದೇಶಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ 7 ಜನ ಆಭ್ಯರ್ಥಿಗಳಾಗಿ ಬಿಜೆಪಿ. ಬೆಂಬಲಿತ ಪಕ್ಷದ ಪಿ.ಆರ್.ಸುನಿಲ್, ಬಿ.ಎಂ.ಸುರೇಶ್, ಕಾಂಗ್ರೆಸ್ ಬೆಂಬಲಿತ ರಫೀಕ್ ಖಾನ್, ಆಲಿಕುಟ್ಟಿ, ಪಕ್ಷೇತರರಾಗಿ ಶಬ್ಬೀರ್ ಪ್ರಸಾದ್ ಕುಟ್ಟಪ್ಪ, ಎಸ್ಡಿಪಿಐ ಬೆಂಬಲಿತ ಆಭ್ಯರ್ಥಿಯಾಗಿ ನಾಗರತ್ನ ಸುರೇಶ್ ನಾಮಪತ್ರ…
ಮಡಿಕೇರಿ ಆ.3 : ಚೆಟ್ಟಳ್ಳಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘವು 2022-23ನೇ ಸಾಲಿನಲ್ಲಿ ಒಟ್ಟು ರೂ.2764.77 ಲಕ್ಷಗಳ ವಹಿವಾಟು ನಡೆಸುವ ಮೂಲಕ ರೂ.53.42 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದಸ್ಯರಿಗೆ ಶೇ.15ರಂತೆ ಡಿವಿಡೆಂಟ್ ನೀಡಲಾಗುವುದು ಎಂದರು. ಸಂಘದಲ್ಲಿ 2022-23ನೇ ಸಾಲಿನ ಒಟ್ಟು ‘ಎ’ ತರಗತಿಯ 1138 ಸದಸ್ಯರಿದ್ದು, ಸದಸ್ಯರಿಂದ ಪಾಲು ಬಂಡವಾಳವಾಗಿ ರೂ.121.64 ಲಕ್ಷಗಳಿರುತ್ತದೆ. ಕ್ಷೇಮ ನಿಧಿ ಸೇರಿ ಇತರೆ ನಿಧಿಗಳು ರೂ.273.03 ಲಕ್ಷ ಹಾಗೂ ನಿರುಖು ಠೇವಣಿ, ಸಂಚಯ ಠೇವಣಿ ಹಾಗೂ ಇತರೆ ಠೇವಣಿ ಸೇರಿ ಒಟ್ಟು ರೂ.1410.33 ಲಕ್ಷಗಳಿರುತ್ತದೆ. ಸಂಘದ ಬಂಡವಾಳವನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಪಾಲು ಹಣ, ಕ್ಷೇಮ ನಿಧಿ ಹಾಗೂ ನಿರುಖು ಠೇವಣಿಯಲ್ಲಿ ಹಾಗೂ ಇತರೆ ಸಹಕಾರ ಸಂಸ್ಥೆಯಲ್ಲಿ ಪಾಲು ಮತ್ತು ನಿರಖು ಠೇವಣಿ ರೂಪದಲ್ಲಿ ಒಟ್ಟು ರೂ.485.37 ಲಕ್ಷಗಳನ್ನು ಠೇವಣಿ ಮಾಡಲಾಗಿದೆ ಎಂದು ತಿಳಿಸಿದರು.…
ಸುಂಟಿಕೊಪ್ಪ,ಆ.3 : ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ರಸ್ತೆಯಲ್ಲಿ ಹಾಡಹಗಲು ಹಾಗೂ ರಾತ್ರಿಯ ವೇಳೆಯಲ್ಲಿ ಬೀದಿ ದೀಪಗಳು ಕಳೆದ 10 ದಿನಗಳಿಂದ ನಿರಂತರವಾಗಿ ಉರಿಯುತ್ತಿದ್ದು, ಸಾರ್ವಜನಿಕರು ಪಂಚಾಯಿತಿ ಹಾಗೂ ಚೆಸ್ಕಾಂ ಇಲಾಖೆಯ ನಿರ್ಲಕ್ಷ್ಯತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿಯು ಸೆಸ್ಕ್ ಇಲಾಖೆಗೆ ಲಕ್ಷಗಟ್ಟಲೇ ಹಣ ಬಾಕಿ ಉಳಿಸಿಕೊಂಡಿದೆ. ಹಗಲಲ್ಲೂ ಬೀದಿದೀಪ ಉರಿಯುತ್ತಿರುವ ಗ್ರಾ.ಪಂ ಗಮನಕ್ಕೆ ತಂದರೂಯಾವುದೇ ಪ್ರಯೋಜನವಾಗಿಲ್ಲ. ಈ ರಸ್ತೆಯಲ್ಲಿ ತುರ್ತು ವೇಳೆಯಲ್ಲಿ ರಾತ್ರಿ ಹೊತ್ತು ಕತ್ತಲಮಯವಾಗಿರುತ್ತದೆ. ಆದರೆ ಇದೀಗ ಹಗಲು ವೇಳೆಯಲ್ಲೂ ಉರುಯುತ್ತಿರುವುದು ಗ್ರಾ.ಪಂ ಮತ್ತು ಸೆಸ್ಕ್ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದರು. ಸೆಸ್ಕ್ ಕಿರಿಯ ಎಂಜಿನಿಯರ್ ಲವ ಅವರ ಗಮನಕ್ಕೆ ತಂದಾಗ, ಈ ಬಗ್ಗೆ ಯಾವುದೇ ದೂರು ಬಂದಿಲ್ಲ. ಗಮನಹರಿಸುವುದಾಗಿ ಮಾಹಿತಿ ನೀಡಿದರು.
ಮಡಿಕೇರಿ, ಆ.3 : ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ, ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡಿಕೊಂಡು ಸೊಳ್ಳೆಗಳ ನಿಯಂತ್ರಣ ಮಾಡುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಕೆ.ಎಂ.ಸತೀಶ್ ಕುಮಾರ್ ಹೇಳಿದರು. ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ, ಮಲೇರಿಯಾ ಮತ್ತು ಚಿಕೂನ್ಗುನ್ಯಾ ರೋಗ ಹರಡುವಿಕೆ, ನಿಯಂತ್ರಣ ಕುರಿತು ಮಡಿಕೇರಿ ನಗರದ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಮಡಿಕೇರಿ ತಾಲ್ಲೂಕಿನ ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಏರ್ಪಡಿಸಿದ್ದ ಅಡ್ವೊಕೆಸಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರು ತಮ್ಮ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ, ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಮಕ್ಕಳು ಹಾಗೂ ಸಮುದಾಯದಲ್ಲಿ ಅರಿವು ಮೂಡಿಸುವ ಮೂಲಕ ಸಾಂಕ್ರಾಮಿಕ ರೋಗಗಳು ಹರಡದಂತೆ ಜಾಗೃತಿ ಮೂಡಿಸಬೇಕು ಎಂದರು. ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡರೆ ಎಲ್ಲಾ ರೋಗಗಳನ್ನು ತಡೆಗಟ್ಟಲು ಸಾಧ್ಯ…
ಮಡಿಕೇರಿ ಆ.3 : ಶಿರಂಗಾಲ ಗ್ರಾ.ಪಂ ನ ಎರಡನೇ ಅವಧಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷರಾಗಿ ಲತಾಬಾಯಿ, ಉಪಾಧ್ಯಕ್ಷರಾಗಿ ಎಚ್.ಎಸ್.ಬಸವರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 9 ಮಂದಿ ಸದಸ್ಯರ ಪೈಕಿ ಮತದಾನದಲ್ಲಿ 8 ಮಂದಿ ಸದಸ್ಯರು ಪಾಲ್ಗೊಂಡಿದ್ದರು. ಸದಸ್ಯರಾದ ಎಸ್.ಬಿ.ಶ್ರೀಕಾಂತ್, ಸರಿತಾ, ಲಕ್ಷ್ಮಮ್ಮ, ಗೀತಾ, ಪ್ರದೀಪ್, ಭಾಗೀರಥಿ ಮತದಾನದಲ್ಲಿ ಭಾಗಿಯಾಗಿದ್ದರು.
ಮಡಿಕೇರಿ ಆ.3 : ನೆಲ್ಲಿಯಹುದಿಕೇರಿ ಗ್ರಾಮ ಪಂಚಾಯತ್ ಎರಡನೇ ಅವಧಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬೆಂಬಲಿತ ಅಭ್ಯರ್ಥಿ ಎಚ್.ಎನ್. ಧನಲಕ್ಷ್ಮಿ ಹಾಗೂ ಉಪಾಧ್ಯಕ್ಷರಾಗಿ ಪ್ರಮೀಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರು ಆ.3 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದರು. ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ ಕಳುಹಿಸಿ ಲೋಪ ದೋಷ ಸರಿಪಡಿಸುವುದಾಗಿ ಗಡ್ಕರಿ ಅವರು ತಿಳಿಸಿದರು. ಶಿರಾಡಿ ಘಾಟ ಸುರಂಗ ಮಾರ್ಗ ಕುರಿತಾಗಿಯೂ ಮುಖ್ಯಮಂತ್ರಿಗಳು ಸಚಿವರೊಂದಿಗೆ ಮಾತುಕತೆ ನಡೆಸಿದರು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಜರಿದ್ದರು.
ನವದೆಹಲಿ ಆ.3 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ. ಸಂಸತ್ ಭವನಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಈ ವೇಳೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮೋದಿಯವರಿಗೆ ಗಂಧದ ಹಾರ ಹಾಕಿ, ಮೈಸೂರು ಪೇಟ ಧರಿಸಿ, ಅಂಬಾರಿ ಕೊಟ್ಟು ಸನ್ಮಾಸಿದರು. ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾದರು. nodbeku
ಮಡಿಕೇರಿ ಆ.3 : ಮಡಿಕೇರಿ ಕೊಡವ ಸಮಾಜದ ವತಿಯಿಂದ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರನ್ನು ಸನ್ಮಾನಿಸಲಾಯಿತು. ಕೊಡವ ಸಮಾಜದಲ್ಲಿ ಸಮಾಜದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಶಾಸಕರಿಗೆ ಶಾಲುಹೊದಿಸಿ ಸನ್ಮಾನಿಸಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿ ಶಾಸಕರು, ಸಮಾಜದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಈ ಸಂದಭದಲ್ಲಿ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ಉಪಾಧ್ಯಕ್ಷ ನಂದಿನೆರವಂಡ ಚೀಯಣ್ಣ, ಕಾರ್ಯದರ್ಶಿ ಕನ್ನಂಡ ಸಂಪತ್ತ್ ಕುಮಾರ್, ಜಿಂಟಿಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರುಗಳಾದ ಕನ್ನಂಡ ಕವಿತಬೊಳ್ಳಪ್ಪ, ಬೊಪ್ಪಂಡ ಸರಳಾ ಕರುಂಬಯ್ಯ, ಮೂವೆರ ಕೆ.ಜಯರಾಂ, ಶಾಂತೆಯಂಡ ವಿಶಾಲ್ ಕಾರ್ಯಪ್ಪ,ಕಾಳಚಂಡ ಅಪ್ಪಣ್ಣಪುತ್ತರಿರ ಕರುಣ್ ಕಾಳಯ್ಯ, ಮಂಡಿರ ಸದಾಮುದ್ದಪ್ಪ, ಕಾಂಡೆರ ಲಲ್ಲುಕುಟ್ಟಪ್ಪ ಹಾಗು ಸದಸ್ಯರುಗಳಾದ ಚೊಟ್ಟೆಯಂಡ ಸಂಜುಕಾವೇರಪ್ಪ, ಪಾಲೆಯಂಡ ಸುಬ್ಬಯ್ಯ, ಪಾಲೆಯಂಡ ರೂಪಸುಬ್ಬಯ್ಯ ಹಾಜರಿದ್ದರು.






