ನಾಪೋಕ್ಲು ಜು.5 : ಮರಂದೋಡ ಗ್ರಾಮದಲ್ಲಿ ಕಾಡಾನೆಗಳ ಉಪಟಳ ದಿಂದ ಗ್ರಾಮಸ್ಥರು ನಲುಗುವಂತಾಗಿದೆ. ಕಳೆದ ಕೆಲವು ದಿನಗಳಿಂದ ಗ್ರಾಮದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳು ತೋಟಗಳಿಗೆ ನುಗ್ಗಿ ಕಾಫಿ, ಅಡಿಕೆ, ತೆಂಗು, ಬಾಳೆ, ಅನಾನಾಸು ಗಿಡಗಳನ್ನು ಧ್ವಂಸ ಪಡಿಸುತ್ತಿವೆ ಎಂದು ಗ್ರಾಮಸ್ಥರು ಅವಲತ್ತುಕೊಂಡಿದ್ದಾರೆ. ಮರಂದೋಡ ಗ್ರಾಮದ ಹಲವು ತೋಟಗಳಿಗೆ ನುಗ್ಗಿರುವ ಕಾಡಾನೆಗಳು ಕಾಫಿ, ಬಾಳೆ ಗಿಡಗಳನ್ನು ದ್ವಂಸಪಡಿಸಿ ರಸ್ತೆಗಳಲ್ಲಿ ಎಳೆದೊಯ್ದಿರುವ ದೃಶ್ಯಗಳು ಕಂಡುಬಂದಿವೆ. ಗ್ರಾಮದ ಚೋಯಮಾಡಂಡ ಪೂರ್ಣಚ್ಚ ಅವರ ಮನೆಯ ಬಳಿ ಅಡ್ಡಾಡಿ ಕಿಟಕಿ ಒಳಗಿನಿಂದ ಮಕ್ಕಳ ಸಮವಸ್ತ್ರವನ್ನು ಕಿತ್ತು ಎಸೆದು ತುಳಿದಿರುವುದಾಗಿ ಪೂಣಚ್ಚ ತಿಳಿಸಿದರು. ಇದರಿಂದಾಗಿ ಸಂಜೆ ಕತ್ತಲಾಗುತ್ತಿದ್ದಂತೆ ರಸ್ತೆ ಹಾಗೂ ಗ್ರಾಮದ ದಾರಿಗಳಲ್ಲಿ ಅಡ್ಡಾಡುವ ಕಾಡಾನೆಗಳಿಂದ ಕಾರ್ಮಿಕರು ಶಾಲಾ ವಿದ್ಯಾರ್ಥಿಗಳು ಗ್ರಾಮಸ್ಥರು, ಮನೆಗಳಿಂದ ಹೊರಗೆ ಬರಲು ಜೀವ ಭಯದಿಂದ ತತ್ತರಿಸಿ ಕಂಗಲಾಗಿದ್ದಾರೆ. ಭತ್ತದ ಬಿತ್ತನೆಗಾಗಿ ಗದ್ದೆಗಳನ್ನು ಸಿದ್ಧಪಡಿಸಲಾಗಿದ್ದು ಬಿತ್ತನೆಗೂ ಮುನ್ನವೇ ಆನೆಗಳು ಗದ್ದೆಗಳಲ್ಲಿ ಅಡ್ಡಾಡಿವೆ.ಬಿತ್ತನೆ ಮುಗಿದ ನಂತರ ಮತ್ತೆ ಕಾಡಾನೆಗಳು ಪೈರುಗಳನ್ನು ಧ್ವಂಸ ಮಾಡುವ ಆತಂಕವಿದ್ದು ಭತ್ತದ ಕೃಷಿ ಮಾಡುವುದು…
ಲೇಖಕ: admin
ಮಡಿಕೇರಿ ಜು.4 : ರಾಜ್ಯ ಚುನಾವಣಾ ಆಯೋಗವು ವಿವಿಧ ಕಾರಣಗಳಿಗೆ ತೆರವಾದ/ ಖಾಲಿ ಇರುವ ಕೊಡಗು ಜಿಲ್ಲೆಯ 5 ಗ್ರಾಮ ಪಂಚಾಯಿತಿಗಳ 9 ಸದಸ್ಯ ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ. ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮ ಪಂಚಾಯಿತಿಯ 4, ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯಿತಿಯ 1, ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡುವಿನ 2, ಕಾಂತೂರು ಮೂರ್ನಾಡುವಿನ 1 ಹಾಗೂ ಕಡಗದಾಳುವಿನ 1 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜು.6 ರಂದು ಜಿಲ್ಲಾಧಿಕಾರಿ ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಜು.12 ಕೊನೆಯ ದಿನವಾಗಿದೆ. ಜು.13 ರಂದು ನಾಮಪತ್ರ ಪರಿಶೀಲನೆ, ಜು.15 ಉಮೇದುವಾರಿಕೆಯನ್ನು ವಾಪಸ್ ತೆಗೆದುಕೊಳ್ಳಲು ಕೊನೆಯ ದಿನ. ಜು.23 ರಂದು ಮತದಾನ ನಡೆಯಲಿದ್ದು, ಅವಶ್ಯವಿದ್ದರೆ ಮರು ಮತದಾನವು ಜು.25 ರಂದು ನಡೆಯಲಿದೆ. ಜು.26 ರಂದು ಮತ ಎಣಿಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮಡಿಕೇರಿ ಜು.4 : ಮಂಗಳೂರು ವಿಶ್ವವಿದ್ಯಾನಿಲಯ/ ಕೊಡಗು ವಿಶ್ವವಿದ್ಯಾನಿಲಯದ ಅಧೀನ ಕಾಲೇಜಿನ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಗ್ರಂಥಪಾಲಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಸಿ.ವಿಜಯಲತ ಇವರನ್ನು ಪ್ರೊಫೆಸರ್/ ಗ್ರಂಥಪಾಲಕರಾಗಿ ಪದೋನ್ನತಿ ನೀಡಿ ಆಯ್ಕೆ ಮಾಡಲಾಗಿದೆ. ಇಲ್ಲಿಯ ತನಕ ವಿಶ್ವವಿದ್ಯಾನಿಲಯದ ಬೋಧಕ ವರ್ಗದವರಿಗೆ ಹಾಗೂ ವಿಶ್ವವಿದ್ಯಾನಿಲಯದ ಗ್ರಂಥ ಪಾಲಕರುಗಳಿಗೆ ಮಾತ್ರ ಪ್ರಾದ್ಯಾಪಕರ ಹುದ್ದೆಯನ್ನು ನೀಡುವ ಪದ್ಧತಿ ಇದ್ದು, ಇತ್ತೀಚೆಗೆ ಯು.ಜಿ.ಸಿ ನಿಯಮಗಳಂತೆ ಕಾಲೇಜು ಘಟ್ಟಕ್ಕೂ ಈ ಸೌಲಭ್ಯ ವಿಸ್ತರಿಸಲಾಗಿದೆ. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಇತಿಹಾಸದಲ್ಲಿ ಮೊದಲ ಬಾರಿಗೆ ಡಾ.ವಿಜಯಲತ. ಸಿ ಅವರು ಪ್ರೊಫೆಸರ್/ ಗ್ರಂಥಪಾಲಕರು ಆಗಿ ಪದೋನ್ನತಿಯನ್ನು ಹೊಂದಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.
ಮಡಿಕೇರಿ ಜು.4 : ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ರಾಷ್ಟ್ರೀಯ ಸಾಮಾಜಿಕ ರಕ್ಷಣಾ ಸಂಸ್ಥೆ ರಾಜ್ಯ ಮಟ್ಟದ ಸಮನ್ವಯ ಸಂಸ್ಥೆ ಸಹಯೋಗದಲ್ಲಿ ಪೊಲೀಸ್ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕುಶಾಲನಗರ ಶಕ್ತಿಧಾಮ ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರ ವತಿಯಿಂದ ಮಾದಕ ವಸ್ತು(ಡ್ರಗ್ಸ್) ದುರುಪಯೋಗ ತಡೆಗಟ್ಟುವ ಬಗ್ಗೆ ಜಾಗೃತಿ ಕಾರ್ಯಕ್ರಮವು ಜು.7 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಮನೋ ವೈದ್ಯರಾದ ಡಾ.ಡೆವಿನ್ ಲಿನೇಕರ್ ಕಾರ್ಕಡ, ವಿಕಲಚೇತನರ ಇಲಾಖೆಯ ಕಲ್ಯಾಣಾಧಿಕಾರಿ ವಿಮಲ, ರಾಜ್ಯ ಮಟ್ಟದ ಸಮನ್ವಯ ಸಂಸ್ಥೆಯ ನಿರ್ದೇಶಕರು ಹಾಗೂ ದಾವಣಗೆರೆ ದೊಡ್ಡಬಾತಿ ತಪೋವನ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಡಾ.ವಿ.ಎಂ.ಶಶಿಕುಮಾರ್, ರಾಜ್ಯಮಟ್ಟದ ಸಮನ್ವಯ ಸಂಸ್ಥೆಯ ಯೋಜನೆಯ ಸಂಯೋಜಕರಾದ ಶೈಲಶ್ರೀ, ಕುಶಾಲನಗರ ಶಕ್ತಿಧಾಮದ ಯೋಜನೆಯ ಸಂಯೋಜಕರಾದ ಕೆ.ಒ.ಪ್ರಭು, ಇತರರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಜು.4 : ಪ್ರಸಕ್ತ ಸಾಲಿನ ಜುಲೈ ಆವೃತ್ತಿಯ ಸ್ನಾತಕ ಬಿ.ಎ, ಬಿ.ಕಾಂ, ಬಿ.ಲಿಬ್, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎಸ್.ಡಬ್ಲ್ಯೂ ಹಾಗೆಯೇ ಸ್ನಾತಕೋತ್ತರ ಎಂ.ಎ, ಎಂ.ಎ-ಪತ್ರಿಕೋದ್ಯಮ. ಎಂ.ಕಾಂ, ಎಂ.ಬಿ.ಎ, ಎಂ.ಲಿಬ್, ಎಂ.ಎಸ್ಸಿ , ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ ಹಾಗೂ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಮಡಿಕೇರಿ ಪ್ರಾದೇಶಿಕ ಕೇಂದ್ರವನ್ನು ಸ್ಥಾಪಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಈ ಅವಕಾಶವನ್ನು ಎಲ್ಲಾ ಉದ್ಯೋಗ ಆಕಾಂಕ್ಷಿಗಳು ಕೆಲಸ ನಿರ್ವಹಿಸಿಕೊಂಡು ಕಾಲೇಜುಗಳಿಗೆ ಹೋಗದೆ ತೆರೆದ ಶಿಕ್ಷಣದ ಮೂಲಕ ಪದವಿ ಪಡೆಯಬಹುದಾಗಿದೆ ಎಂದು ಮುಕ್ತ ವಿಶ್ವ ವಿದ್ಯಾಲಯ ಮಡಿಕೇರಿ ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ. ಮೈಸೂರು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಎ+ ಮಾನ್ಯತೆ ಪಡೆದ ದೂರ ಶಿಕ್ಷಣ ನೀಡುವ ವಿಶ್ವ ವಿದ್ಯಾನಿಲಯವಾಗಿದೆ. ಯು.ಜಿ.ಸಿ ನಿಯಮಾವಳಿ ಪ್ರಕಾರ ಪೂರ್ಣಾವಧಿಯಲ್ಲಿ ಭೌತಿಕ ಶಿಕ್ಷಣ(ರೆಗ್ಯುಲರ್) ಒಂದು ಕೋರ್ಸ್ ಮತ್ತು ದೂರ ಶಿಕ್ಷಣದಲ್ಲಿ (ಮುಕ್ತ ವಿವಿ)…
ಮಡಿಕೇರಿ ಜು.4 : ಮಹಿಳೆಯರು ಸಮಾಜದಲ್ಲಿ ಮುಖ್ಯ ವಾಹಿನಿಗೆ ಬರಲು ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ ಮತ್ತು ಸಾವಿತ್ರಿಬಾಯಿ ಪುಲೆ ಅವರ ಪಾತ್ರ ಅತಿ ಮುಖ್ಯ ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯರಾದ ಡಾ.ಸೌಮ್ಯ ಹೇಳಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಮಹಿಳೆಯರು ಶಿಕ್ಷಣದಿಂದ ವಂಚಿತರಾಗಿದ್ದರು, ಸ್ವಾತಂತ್ರ್ಯ ನಂತರ ಅಂಬೇಡ್ಕರ್ ಅವರ ಸಂವಿಧಾನ ಮತ್ತು ಸಾವಿತ್ರಿಬಾಯಿ ಪುಲೆ ಶಿಕ್ಷಣ ನೀತಿಯಿಂದ ಮಹಿಳೆಯರು ಶಿಕ್ಷಣ ಪಡೆಯಲು ಮುಂದಾದರು, ಸಮಾಜದಲ್ಲಿ ಪುರುಷರೊಂದಿಗೆ ಉತ್ತಮ ಸ್ಥಾನಮಾನ ಪಡೆದು ವಿದೇಶಗಳಲ್ಲಿ ಉನ್ನತ ವಿದ್ಯಾಭ್ಯಾಸ ಮಾಡಿ ದೇಶದ ಉನ್ನತ ಹುದ್ದೆಗಳನ್ನು ಪಡೆಯುತ್ತಿದ್ದಾರೆ ಎಂದು ನುಡಿದರು. ಮಹಿಳೆ ಎಂದರೆ ಕೇವಲ ಮನೆಯ ಕೆಲಸಕ್ಕೆ ಸೀಮಿತವಾಗಿರದೆ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಹಾಗೂ ದೊಡ್ಡ ಗುರಿಯೊಂದಿಗೆ ಸಾಧನೆ ಮಾಡಿ ಪ್ರತಿಯೊಂದು ಕ್ಷೇತ್ರದಲ್ಲೂ ಸಹ ತಮ್ಮದೇ ಆದ…
ಮಡಿಕೇರಿ ಜು.4 : ಕೊಡಗು ಜಿಲ್ಲೆಯ ಗಡಿ ಗ್ರಾಮ ಕರಿಕೆಯ ಅನಪಾರೆ ಗ್ರಾಮದ ನಿವಾಸಿ ಲಿಬೀನ್ (25) ಜ್ವರದಿಂದ ಸಾವನ್ನಪ್ಪಿದ್ದು, ಇಲಿಜ್ವರದ ಶಂಕೆ ವ್ಯಕ್ತವಾಗಿದೆ. ಆದರೆ ಇಲಿಜ್ವರದ ಕುರಿತು ಖಾತ್ರಿಯಾಗಿಲ್ಲವೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಕರಿಕೆಯ ಬಾಲನ್ ಹಾಗೂ ಲತಾ ದಂಪತಿಯ ಪುತ್ರ ಲಿಬೀನ್ ಪಕ್ಕದ ರಾಜ್ಯ ಕೇರಳಕ್ಕೆ ಕೆಲಸಕ್ಕೆಂದು ಪ್ರತಿದಿನ ಹೋಗಿ ಬರುತ್ತಿದ್ದರಂತೆ. ಇತ್ತೀಚೆಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಕೇರಳದ ಪರಿಯಾರಮ್ ಮೆಡಿಕಲ್ ಕಾಲೇಜ್ ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು ಎಂದು ತಿಳಿದು ಬಂದಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜು.3 ರಂದು ಲಿಬೀನ್ ಮೃತಪಟ್ಟಿದ್ದರು. ಇಲಿಜ್ವರ ಸಾವಿಗೆ ಕಾರಣ ಎನ್ನುವ ಸುದ್ದಿ ಹಬ್ಬಿದ ಹಿನ್ನೆಲೆ ಆರೋಗ್ಯಾಧಿಕಾರಿಗಳು ಕರಿಕೆಯ ಲಿಬೀನ್ ನಿವಾಸಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆದರೆ ಮನೆಯವರಿಗೆ ಹಾಗೂ ಅಕ್ಕಪಕ್ಕದ ನಿವಾಸಿಗಳಿಗೆ ಯಾವುದೇ ಜ್ವರದ ಲಕ್ಷಣ ಕಂಡು ಬಂದಿಲ್ಲ ಎಂದು ಡಾ.ಕೆ.ಎಂ.ಸತೀಶ್ ಕುಮಾರ್ ಪತ್ರಿಕೆಗೆ ತಿಳಿಸಿದ್ದಾರೆ. ಕರಿಕೆ ಆರೋಗ್ಯ ಕೇಂದ್ರದಲ್ಲೂ ನಿಗಾ ವಹಿಸಲಾಗಿದೆ, ಈ ರೀತಿಯ ಯಾವುದೇ ಪ್ರಕರಣಗಳು…
ಮಡಿಕೇರಿ ಜು.4 : ಮಡಿಕೇರಿಯಲ್ಲಿ ಟ್ರಾಫಿಕ್ ಸಮಸ್ಯೆಯಿಂದ ನಾಗರಿಕರು ಪರದಾಡುವಂತಾಗಿದ್ದು, ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಪೀಪಲ್ಸ್ ಮೂಮೆಂಟ್ ಫಾರ್ ಹ್ಯೂಮನ್ ರೈಟ್ಸ್ ಜಿಲ್ಲಾಧ್ಯಕ್ಷ ಹರೀಶ್ ಜಿ.ಆಚಾರ್ಯ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹಲವರು ಪ್ರವಾಸೋದ್ಯಮದಿಂದ ಬದುಕು ಕಟ್ಟಿಕೊಂಡಿದ್ದಾರೆ. ಆದರೆ ನಗರದಲ್ಲಿ ವಾಹನ ಪಾರ್ಕಿಂಗ್ಗೆ ಸ್ಥಳವಕಾಶಗಳಿಲ್ಲದೇ ಪೊಲೀಸ್ ಇಲಾಖೆಯವರು ಟ್ರಾಫಿಕ್ ನಿಯಂತ್ರಿಸಲು ಹರಸಾಹಸ ಪಡುವಂತಾಗಿದೆ ಎಂದರು. ನಗರದ ಜನರಲ್ ತಿಮ್ಮಯ್ಯ ವೃತ್ತ ಮತ್ತು ನಗರಸಭೆ ಬಳಿ ಇರುವ ಸರ್ಕಲ್ಗಳಲ್ಲಿ ವಾಹನ ದಟ್ಟಣೆಯಿಂದ ಪೊಲೀಸ್ ಇಲಾಖೆಯವರಿಗೆ ತುಂಬಾ ಸಮಸ್ಯೆಯಾಗುತ್ತಿದ್ದು, ಮಳೆಯಿಂದ ರಕ್ಷಿಸಿಕೊಳ್ಳಲು ಸೂಕ್ತ ವ್ಯವಸ್ಥೆ ಇಲ್ಲದೆ ವಾಹನಗಳನ್ನು ನಿಯಂತ್ರಿಸುವಂತಾಗಿದೆ. ಇಷ್ಟೆಲ್ಲ ಕೊಡಗಿಗಾಗಿ ಖರ್ಚು ಮಾಡುವ ಇಲಾಖೆಗಳು ಸಿಗ್ನಲ್ ಲೈಟ್ ಅಳವಡಿಸಲು ಮೀನ ಮೇಷ ಎಣಿಸಲು ಕಾರಣವೇನು ಎಂದು ಪ್ರಶ್ನಿಸಿದರು. ನಗರದಲ್ಲಿ ಸಿಗ್ನಲ್ ಲೈಟ್ ಅಳವಡಿಸಲು ನಗರಸಭೆ, ಪೊಲೀಸ್ ಇಲಾಖೆ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ ಹರೀಶ್ ಆಚಾರ್ಯ, ಪ್ರತಿ…
ಮಡಿಕೇರಿ ಜು.4 : ನಾಪೋಕ್ಲು ಪೊಲೀಸ್ ಠಾಣಾ ಸರಹದ್ದಿನ ಕೊಟ್ಟಮುಡಿ ಜಂಕ್ಷನ್ ಬಳಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಟ್ಟಮುಡಿ ಬಸ್ ನಿಲ್ದಾಣದ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು ಮಡಿಕೇರಿ ನಿವಾಸಿಗಳಾದ ಮೊಹಮ್ಮದ್ ಹ್ಯಾರಿಸ್ (40) ಹಾಗೂ ಹ್ಯಾರಿಸ್ (37) ಎಂಬುವವರನ್ನು ಬಂಧಿಸಿದ್ದಾರೆ. ಇವರ ಬಳಿಯಿಂದ 225 ಗ್ರಾಂ ಗಾಂಜಾ ಮತ್ತು 4 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ ಯನ್ನು ವಶಪಡಿಸಿಕೊಂಡಿದ್ದಾರೆ. ಮಡಿಕೇರಿ ಉಪ ವಿಭಾಗದ ಡಿವೈಎಸ್ಪಿ ಎಂ.ಜಗದೀಶ್, ಗ್ರಾಮಾಂತರ ವೃತ್ತದ ಸಿಪಿಐ ಅನೂಪ್ ಮಾದಪ್ಪ, ನಾಪೋಕ್ಲು ಪಿಎಸ್ಐ ಈ.ಮಂಜುನಾಥ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ದಾಳಿ ನಡೆಸಿತು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಶ್ಲಾಘಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಮಾದಕ ವಸ್ತು ಮಾರಾಟದ ಕುರಿತು ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.…
ಮಡಿಕೇರಿ ಜು.4 : ಮೂರ್ನಾಡು ಚೆಸ್ಕಾಂ ವಿದ್ಯುತ್ ನಿಗಮದ ಕಿರಿಯ ಅಭಿಯಂತರರು ಹಾಗೂ ಲೈನ್ಮೆನ್ ಕಳೆದ ಒಂದು ವರ್ಷದಿಂದ ಮುತ್ತಾರ್ಮುಡಿ ಗ್ರಾಮದ ಮನೆಗಳಿಗೆ ಸರಿಯಾಗಿ ವಿದ್ಯುತ್ ಸರಬರಾಜು ಮಾಡದೆ ಕರ್ತವ್ಯಲೋಪ ಎಸಗುತ್ತಿದ್ದಾರೆ ಎಂದು ಮುತ್ತಾರ್ಮುಡಿ ಗ್ರಾಮಸ್ಥರು ಆರೋಪಿಸಿದ್ದಾರೆ. ಮುತ್ತಾರ್ಮುಡಿ ಗ್ರಾಮಸ್ಥರ ಪರವಾಗಿ 54 ಗ್ರಾಮಸ್ಥರ ಸಹಿ ಸಹಿತ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಗ್ರಾಮಸ್ಥರಾದ ತೆಕ್ಕಡೆ ಆರ್.ಸುನಂದ ಹಾಗೂ ಪಾರೆಮಜಲು ದಿನೇಶ್ ಗ್ರಾಮದ ಸಮಸ್ಯೆಗಳ ಬಗ್ಗೆ ವಿವರಿಸಿದರು. ಮೂರ್ನಾಡು ಪಟ್ಟಣದಿಂದ ಕೇವಲ 2ಕಿ.ಮೀ ಅಂತರದಲ್ಲಿರುವ ಮುತ್ತಾರ್ಮುಡಿ ಗ್ರಾಮಕ್ಕೆ ಮೂರ್ನಾಡಿನಿಂದ ಬರುವ ಕಂಬ ಮತ್ತು ವಿದ್ಯುತ್ ತಂತಿಗಳಿಗೆ ಅಡಚಣೆ ಆಗುವ ಮರದ ಕೊಂಬೆ, ರೆಂಬೆಗಳನ್ನು ಕತ್ತರಿಸದೆ ಜೋತು ಬಿದ್ದ ತಂತಿಗಳನ್ನು ಸರಿಪಡಿಸದೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ ವಿದ್ಯುತ್ ಕಂಬಗಳಲ್ಲಿ ಬೆಂಕಿ ಕಾಣಿಸಿಕೊಂಡಾಗÀ, ಕಂಬದಿಂದ ತಂತಿ ತುಂಡಾದಾಗ, ರಸ್ತೆ ಬದಿಯ ಕಂಬಕ್ಕೆ ವಾಹನಗಳು ಡಿಕ್ಕಿಯಾದಾಗ ಮತ್ತು ತುರ್ತು ಸಂದರ್ಭಗಳಲ್ಲಿ…






