ಲೇಖಕ: admin

ಮಡಿಕೇರಿ ಆ.3 :  ಕೊಡಗಿನಲ್ಲಿ ಕೃಷಿಕರು ನಾಟಿ ಕಾರ್ಯದಲ್ಲಿ ನಿರತರಾಗಿದ್ದಾರೆ. ಮಡಿಕೇರಿ ತಾಲ್ಲೂಕಿನಲ್ಲಿ ಹೆಚ್ಚು ಭತ್ತ ಬೆಳೆಯುವ ಪ್ರದೇಶಗಳಿದ್ದು, ಗಾಳಿಬೀಡುವಿನಲ್ಲಿ ರೈತರು ನಾಟಿ ಕಾರ್ಯ ಪೂರ್ಣಗೊಳಿಸಿದ್ದಾರೆ.      

Read More

ಕಡಂಗ ಆ.3 : ಇತಿಹಾಸ ಪ್ರಸಿದ್ಧ ಕಡಂಗ ಕೋಕ್ಕಂಡ ಬಾಣೆ  ಮಖಾಂ ಉರೂಸ್  ಸಮಾರಂಭವು 2024 ಫೆಬ್ರವರಿ 2 ರಿಂದ 6 ರವರೆಗೆ  ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಮುಹ್ಯದ್ದೀನ್ ಜುಮಾ ಮಸೀದಿ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ವರದಿ : ನೌಫಲ್ ಕಡಂಗ 

Read More

ಕುಶಾಲನಗರ, ಆ.3: ಕೊಡಗು ಜಿಲ್ಲೆಯ ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯ ಉಪ ನಿರ್ದೇಶಕ (ಅಭಿವೃದ್ಧಿ)ರೂ ಮತ್ತು ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದು, ಜುಲೈ ತಿಂಗಳ ಅಂತ್ಯಕ್ಕೆ ನಿವೃತ್ತಗೊಂಡ ಬಿ.ವಿ.ಮಲ್ಲೇಶಪ್ಪ ಅವರಿಗೆ ಕೂಡಿಗೆ ಡಯಟ್ ನಲ್ಲಿ  ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. ಡಯಟ್ ಸಂಸ್ಥೆಯ ಉಪನ್ಯಾಸಕ ವೃಂದ, ಸಿಬ್ಬಂದಿ ಸೇರಿದಂತೆ ಜಿಲ್ಲಾ ಹಾಗೂ ಸೋಮವಾರಪೇಟೆ ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ ಹಾಗೂ ತಾಲ್ಲೂಕು ಸಹ ಶಿಕ್ಷಕರ ಸಂಘ ಮತ್ತು ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ನಿವೃತ್ತಗೊಂಡ ಮಲ್ಲೇಶಪ್ಪ ಅವರಿಗೆ ಫಲತಾಂಬುಲ ನೀಡಿ ಶಾಲು ಹೊದಿಸಿ ಸತ್ಕರಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಾಂಶುಪಾಲ ಬಿ.ವಿ.ಮಲ್ಲೇಶಪ್ಪ, ತಾವು ಶಿಕ್ಷಣ ಇಲಾಖೆಯಲ್ಲಿ 37 ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಲು ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕೆಲಸ ಕಾರ್ಯಗಳಲ್ಲಿ ಪರಸ್ಪರ ಪ್ರೀತಿ- ವಿಶ್ವಾಸ, ಸಹನೆ, ತಾಳ್ಮೆ ಅಧಿಕಾರದ ಕುಟುಂಬದ ಸದಸ್ಯರಂತೆ ಕೆಲಸ ನಿರ್ವಹಿಸಿದರೆ ಅಧಿಕಾರದಲ್ಲಿ ಅಹಂ ಎಂಬ…

Read More

ನಾಪೋಕ್ಲು  ಆ.3 :  ಇತಿಹಾಸ ಪ್ರಸಿದ್ಧ ನಾಪೋಕ್ಲು ಸಮೀಪದ ಕೊಳಕೇರಿ ದರ್ಗಾ ಷರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ವಲಿಯುಲ್ಲಾಹಿರವರ ಹೆಸರಿನಲ್ಲಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು 2024 ಫೆ.16ರಿಂದ 20 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಕೊಳಕೇರಿ ಸುನ್ನಿ ಮುಸ್ಲಿಂ ಜಮಾಅತ್ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ವರದಿ :ಝಕರಿಯ ನಾಪೋಕ್ಲು   

Read More

ಸೋಮವಾರಪೇಟೆ ಆ.3 : ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯಲ್ಲೂ ಮುಂದೆ ಇರಬೇಕು ಎಂದು ಮಡಿಕೇರಿ ಶಾಸಕ ಡಾ.ಮಂತರ್‍ಗೌಡ ಹೇಳಿದರು. ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ನಡೆದ ಬಿಟಿಸಿಜಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡಾಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅತೀ ಬುದ್ದಿವಂತರು ಮಾತ್ರ ಉನ್ನತ ಹುದ್ದೆಯನ್ನು ಪಡೆಯಲು ಸಾಧ್ಯ ಎಂಬ ಭ್ರಮೆ ಯಾರಿಗೂ ಬೇಡ, ನಾನು ಕೂಡ ಎವರೆಜ್ ಸ್ಟೂಡೆಂಟ್ ಆಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಉನ್ನತ ವ್ಯಾಸಂಗ ಮಾಡಿದ್ದೇನೆ. ಆದ್ದರಿಂದ ಯಾರಿಗೂ ಕೀಳರಿಮೆ ಬೇಡ, ನಿರಂತರ ಕಲಿಕೆಯಿಂದ ಸಾಧನೆ ಮಾಡಬಹುದು ಎಂದು ಹೇಳಿದರು. ಗ್ರಾಮೀಣ ಮಕ್ಕಳಿಗೂ ಉನ್ನತ ಶಿಕ್ಷಣ ಸಿಗಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕಾಗಿದೆ. ಆರ್ಥಿಕ ಸಮಸ್ಯೆಯಿಂದ ಯಾವ ಮಕ್ಕಳ ವಿದ್ಯಾಭ್ಯಾಸ ನಿಲ್ಲಬಾರದು, ಇಂತಹ ಸಂಕಷ್ಟದ ಸಮಯದಲ್ಲಿ ಬಡಕುಟುಂಬದ ಮಕ್ಕಳಿಗೆ ಆರ್ಥಿಕ ಸಹಾಯ ಮಾಡುವುದು ನಮ್ಮೆಲ್ಲರ ಕರ್ತವ್ಯ…

Read More

ಮಡಿಕೇರಿ ಆ.3 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ  ಮಡಿಕೇರಿ ಆಕಾಶವಾಣಿಯಿಂದ ನಿವೃತ್ತಿ ಹೊಂದಿದ ಕೂಪದಿರ ಶಾರದಾ ನಂಜಪ್ಪ ಅವರನ್ನು ಆಕಾಶವಾಣಿಯಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್, ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಗೌರವ ಕಾರ್ಯದರ್ಶಿ ರೇವತಿ ರಮೇಶ್, ನಿರ್ದೇಶಕರುಗಳಾದ ವಿ.ಟಿ ಮಂಜುನಾಥ್, ಶೋಭಾ ಸುಬ್ಬಯ್ಯ, ಶ್ವೇತಾ ರವೀಂದ್ರ, ಸದಸ್ಯರುಗಳಾದ ಚೊಕ್ಕಾಡಿ ಪ್ರೇಮಾ ರಾಘವಯ್ಯ, ಸುಂದರಿ ಮಾಚಯ್ಯ, ಕಸ್ತೂರಿ ಗೋವಿಂದಮಯ್ಯ ಉಪಸ್ಥಿತರಿಧ್ದರು. ಮಡಿಕೇರಿ ಎಫ್ಎಂ ರೇಡಿಯೋ ಸ್ಟೇಷನ್ ನಲ್ಲಿ ಕೂಪದಿರ ಶಾರದಾ ನಂಜಪ್ಪ ಕಳೆದ 30 ವಷ೯ಗಳಲ್ಲಿ ರೇಡಿಯೋ ಮೂಲಕ ಸಂಮೋಹನದ ರೀತಿಯಲ್ಲಿ ಕೊಡಗಿನ ಮನೆ ಮನಗಳನ್ನೂ ತಲುಪಿದ್ದಾರೆ. ಸಂಹವನ ಮಾಧ್ಯಮದ ದೊಡ್ಡ ಶಕ್ತಿಯಾಗಿ ಶಾರದಾ ತಮಗೆ ಅರಿವಿಲ್ಲದಂತೆಯೇ ಬೆಳೆದಿದ್ದಾರೆ. ನೊಂದ ಮನಸ್ಸುಗಳಿಗೆ ತಮ್ಮ ಮಧುರ ಸ್ವರದ ಮೂಲಕವೇ ಸಾಂತ್ವನ ಹೇಳಿದ್ದಾರೆ. ವಿಶಿಷ್ಟ ಶೈಲಿಯ ಮಾತುಗಳ ಮೂಲಕ ಎಂಥವರಲ್ಲಿಯೂ ಸಂಭ್ರಮ ಉಂಟಾಗುವಂತೆ ಮಾಡಿದ್ದಾರೆ, 30…

Read More

ಸುಂಟಿಕೊಪ್ಪ ಆ.3 :  ನಾಕೂರು ಶಿರಂಗಾಲ ಗ್ರಾ.ಪಂ ಯ 2 ಅವಧಿಯ ಅಧ್ಯಕ್ಷ -ಉಪಾಧ್ಯಕ್ಷರ ಚುನಾವಣೆ  ಗ್ರಾ.ಪಂ.ಸಭಾಂಗಣದಲ್ಲಿ  ನಡೆಯಿತು. 2ನೇ ಅವಧಿಗೆ ಅಧ್ಯಕ್ಷರ ಸ್ಥಾನವನ್ನು ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನವು ಬಿಸಿಎಂ(ಎ) ಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಜಗನ್ನಾಥ್ ಹಾಗೂ ಕೆ.ಎಂ.ಸುಭಾಫ್ ಸ್ಪರ್ಧಿಸಿದ್ದು, ಜಗನ್ನಾಥ್ 7 ಮತಗಳನ್ನು ಪಡೆದರೆ ಕೆ.ಎಂ.ಸುಭಾಷ್ 1 ಮತಗಳನ್ನಷ್ಟೇಗಳಿಸುವ ಮೂಲಕ ಪರಾಜಯಗೊಂಡರು. ಅಧ್ಯಕ್ಷರಾಗಿ ಹಾಲಿ ಗ್ರಾ.ಪಂ ಅಧ್ಯಕ್ಷ ಮಂದೋಡಿ ಜಗನ್ನಾಥ್ ಪುನರಾಯ್ಕೆಯಾದರು ಹಾಗೂ ಉಪಾಧ್ಯಕ್ಷ ರಾಗಿ ಸತೀಶ್ ಅವಿರೋಧವಾಗಿ ಆಯ್ಕೆಯಾದರು. ನಾಕೂರು ಶಿರಂಗಾಲ ಗ್ರಾ.ಪಂ ನಲ್ಲಿ 8 ಸದಸ್ಯರ ಬಲ ಹೊಂದಿದ್ದು, ಸದಸ್ಯರುಗಳಾದ ಜಗನ್ನಾಥ್, ಬಿ.ಜಿ.ರಮೇಶ್, ಕೊಳಂಬೆ ಸುಭಾಷ್, ಸತೀಶ, ಅರುಣ ಕುಮಾರಿ,ಪ್ರೇಮ,ಸೀತೆ ಹಾಗೂ ‌ರಾಧಮಣಿ ಚುನಾವಣೆಯಲ್ಲಿ ಭಾಗವಹಿಸಿದ್ದರು. ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾಗಿ ವರದರಾಜು ಕಾರ್ಯನಿರ್ವಹಿಸಿದ್ದರು. ನಾಕೂರು ಶಿರಂಗಾಲ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗೂಳಪ್ಪ ಕೂತಿನ್, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Read More

ನಾಪೋಕ್ಲು ಆ.2 : ಮರಂದೋಡ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ರಸ್ತೆಯಂಚಿಗೆ ಸರಿದು ಪಲ್ಟಿಯಾದ ಘಟನೆ ನಡೆದಿದೆ. ನಾಪೋಕ್ಲುವಿನಿಂದ ವಿರಾಜಪೇಟೆಗೆ ಸಿಲ್ವರ್ ಮರಗಳನ್ನು ಸಾಗಿಸುತ್ತಿದ್ದ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದ್ದು, ಸ್ಥಳೀಯರ ನೆರವಿನಿಂದ ಪಿಕಪ್ ನ್ನು ಮತ್ತೊಂದು ಪಿಕಪ್‍ನ ಸಹಕಾರದಿಂದ ಮೇಲಕ್ಕೆತ್ತಲಾಯಿತು. ಪಿಕಪ್ನಲ್ಲಿ ಚಾಲಕ ಸೇರಿದಂತೆ ಮೂರಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಚೋಯಮಾದಂಡ ಹರೀಶ್ ಪಿಕಪ್ ಒಳಗಿದ್ದವರನ್ನು ರಕ್ಷಿಸಿದ್ದಾರೆ. ಕಳೆದ ವಾರ ಇದೇ ಮರಂದೋಡ ಗ್ರಾಮದಲ್ಲಿ ಮಳೆಯಿಂದಾಗಿ ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆಯಾಗಿತ್ತು. ಕಿರಿದಾದ ರಸ್ತೆಯಲ್ಲಿ ವಾಹನಗಳು ಸಂಚರಿಸುವಾಗ ಅಪಘಾತಕ್ಕೆ ಈಡಾಗುತ್ತಿವೆ.ಸುಗಮ ಸಂಚಾರಕ್ಕೆ ರಸ್ತೆಯನ್ನು ವಿಸ್ತರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಆ.2 : ಕೊಡಗು ಜಿಲ್ಲಾ ಸರ್ವೋದಯ ಸಮಿತಿಯ ಸಭೆ ಸಮಿತಿಯ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದಲ್ಲಿ ನಡೆಯಿತು. ಗಾಂಧಿ ಸ್ಮಾರಕ ಭವನ ನಿರ್ಮಾಣ ಕಾರ್ಯದ ಕುರಿತು ಚರ್ಚಿಸಲಾಯಿತು. ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಟಿ.ಪಿ.ರಮೇಶ್ ಅವರು ಪ್ರಾಸ್ತವಿಕವಾಗಿ ಮಾತನಾಡಿ, ಸರ್ವೋದಯ ಸಮಿತಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದ್ದು, ಜಿಲ್ಲೆಯಲ್ಲಿ ಗಾಂಧಿ ವಿಚಾರಧಾರೆಗಳ ಕುರಿತು ಬೆಳಕು ಚೆಲ್ಲುತ್ತಾ ಸಾಗಿರುವುದು ಶ್ಲಾಘನೀಯ ಎಂದರು. ಗಾಂಧಿ ಮೈದಾನದ ಗಾಂಧಿ ಸ್ಮಾರಕ ಭವನದ ಕುರಿತು ಸಭೆಗೆ ಮಾಹಿತಿ ನೀಡಿದ ಅವರು ಸ್ಮಾರಕ ಭವನ ನಿರ್ಮಾಣಕ್ಕೆ ಸಕಾಲದಲ್ಲಿ ಸ್ಪಂದಿಸಿದ ಸರ್ಕಾರ ಈಗಾಗಲೇ ರೂ.50 ಲಕ್ಷ ಬಿಡುಗಡೆ ಮಾಡಿದೆ. ಇದು ಸರ್ವೋದಯ ಸಮಿತಿಯ ನಿರಂತರ ಕಾರ್ಯ ಚಟುವಟಿಕೆಯ ಫಲ ಎಂದು ತಿಳಿಸಿದರು. ಸ್ಮಾರಕ ಭವನ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸುವ ಬಗ್ಗೆ ಜಿಲ್ಲಾಡಳಿತದೊಂದಿಗೆ ಚರ್ಚಿಸಲಾಗಿದ್ದು, ಕಾಮಗಾರಿ ಶೀಘ್ರ ಆರಂಭಗೊಳ್ಳಲಿದೆ ಎಂದು ರಮೇಶ್ ಹೇಳಿದರು. ಸಭೆಯಲ್ಲಿ ಪ್ರಮುಖರಾದ ಕಾನೆಹಿತ್ಲು ಮೊಣ್ಣಪ್ಪ, ಕೆ.ಟಿ.ಬೇಬಿ ಮ್ಯಾಥ್ಯೂ, ಎಂ.ಎಂ.ಲಿಯಾಕತ್ ಆಲಿ,…

Read More

ಮಡಿಕೇರಿ ಆ.2 : ಸೌರಮಾನ ಕೊಡವ ಪಂಚಾಂಗದಂತೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ 28ನೇ ವರ್ಷದ “ಕಕ್ಕಡ ಪದ್‍ನೆಟ್” ನ್ನು ಅರ್ಥಪೂರ್ಣವಾಗಿ ಆಚರಿಸಿತು. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮುಖ ನಿರ್ಣಯಗಳನ್ನು ಮಂಡಿಸಲಾಯಿತು. ಕೊಡವ ಜನಾಂಗಕ್ಕೆ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ, ಎಸ್‍ಟಿ ಟ್ಯಾಗ್ ಮತ್ತು ಕೋವಿ ಹಕ್ಕಿನ ಕುರಿತು ಕರ್ನಾಟಕ ಹೈಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಶಕ್ತಿಯ ರಿಟ್ ಅರ್ಜಿಯನ್ನು ಸಲ್ಲಿಸಿದ ಅರ್ಥಶಾಸ್ತ್ರಜ್ಞ ಹಾಗೂ ಮಾಜಿ ಕೇಂದ್ರ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರನ್ನು ಅಭಿನಂದಿಸಲು ಮತ್ತು ಸ್ವಾಮಿ ಅವರ ಜನ್ಮದಿನದಂದು ಕೊಡವ ಸಮೂಹವನ್ನು ಜಾಗೃತಿಗೊಳಿಸಲು ಸುದೀರ್ಘ ಪಾದಯಾತ್ರೆಯನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಸ್ವಾಮಿ ಅವರ ಜನ್ಮದಿನವಾದ ಸೆ.15 ರಂದು ಯೋಗಕ್ಷೇಮಕ್ಕಾಗಿ ತಲಕಾವೇರಿ ಹಾಗೂ ಪಾಡಿ ಶ್ರೀ ಇಗ್ಗತ್ತಪ್ಪ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ ನಂತರ ಪಾದಯಾತ್ರೆ ಆರಂಭಗೊಳ್ಳಲಿದೆ. ರಾಜ್ಯದ ದಾಖಲೆಯಲ್ಲಿ ಜಾನಪದ “ಕೊಡವ” ನಾಮಕರಣದ ಪುನರುಜ್ಜೀವನಕ್ಕಾಗಿ ಸಿಎನ್‍ಸಿ ಹೆಮ್ಮೆ ವ್ಯಕ್ತಪಡಿಸಿತು. ಶಾಸ್ತ್ರೀಯ ಕೊಡವ…

Read More