ಲೇಖಕ: admin

ಮಡಿಕೇರಿ ಜು.4 : ಶಾಲಾ ಮಕ್ಕಳು ಶಿಸ್ತನ್ನು ಬೆಳೆಸಿಕೊಳ್ಳಬೇಕು. ಬಹಳ ಮುಖ್ಯವಾಗಿ ಶಾಲೆಯಲ್ಲಿ ಉತ್ತಮವಾಗಿ ಓದಬೇಕು ಮತ್ತು ಬಾಲ್ಯದಿಂದಲೇ ವಿವಿಧ ಕಲೆ, ಸಾಹಿತ್ಯದಲ್ಲಿ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ  ಹೇಳಿದರು. ಅರಣ್ಯ ಇಲಾಖೆ ಮಡಿಕೇರಿ ಪ್ರಾದೇಶಿಕ ವಿಭಾಗ ಮತ್ತು ಸಾಮಾಜಿಕ ಅರಣ್ಯ ವಲಯ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್  ಸಂಸ್ಥೆಯ ಸಹಯೋಗದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಾಟೆಕಾಡುವಿನಲ್ಲಿ  ನಡೆದ ‘ನನ್ನ ಗಿಡ, ನನ್ನ ಹೆಮ್ಮೆ’ ಶೀರ್ಷಿಕೆಯಡಿ ವನಮಹೋತ್ಸವ ಕಾರ್ಯಕ್ರಮವನ್ನು  ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು,  ಶಾಲೆಯು ಮಕ್ಕಳನ್ನು ಸೌಹಾರ್ಧರನ್ನಾಗಿ ಬೆಳೆಸಲು ಪೂರಕವಾಗಿದೆ. ಮಕ್ಕಳು ಪೋಷಕರಿಗೆ ಸಮಾಜಕ್ಕೆ ಉತ್ತಮ ವ್ಯಕ್ತಿಗಳಾಗಿ ನಿಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಆಶಯಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಉಪನಿರ್ದೇಶಕರ ಕಚೇರಿಯ ಡಿವೈಪಿಸಿ ಸೌಮ್ಯ  ಮಾತನಾಡಿ, ಶಾಲಾ ಮಕ್ಕಳು ಪರಿಸರದ ಕಾಳಜಿಯನ್ನು ವೃದ್ಧಿಸಿಕೊಳ್ಳಬೇಕು ಮನೆಗಳಲ್ಲಿ ಸಸಿಗಳನ್ನು ನೆಟ್ಟು ಬೆಳೆಸಬೇಕು. ಪರಿಸರದ ಮೇಲಿನ ಕಾಳಜಿಯು ನಿರಂತರವಾಗಿರಬೇಕು…

Read More

ಕಡಂಗ  ಜು.4 : ಎಸ್‍ವೈಎಸ್ ಆಮಿಲ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಸಮಸ್ತದ 97ನೇ ಸ್ಥಾಪಕ ದಿನದ ಪ್ರಯುಕ್ತ ರಕ್ತ ದಾನ ಶಿಬಿರ  ನಡೆಯಿತು. ವಿರಾಜಪೇಟೆ ಶಾಫಿ ಜುಮಾಮಸೀದಿ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ರಕ್ತ ನಿಧಿ ಕೇಂದ್ರ ಹಾಗೂ ಎಸ್ ವೈ ಎಸ್ ಆಮಿಲ ಕೊಡಗು ಜಿಲ್ಲಾ ಸಮಿತಿ ವತಿಯಿಂದ ರಕ್ತದಾನ ಶಿಬಿರವನ್ನು ವಿರಾಜಪೇಟೆ ಮದರಸ ಸಭಾಂಗಣದಲ್ಲಿ ನಡೆಸಲಾಯಿತು. ಕೊಡಗು ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆ ಮುಖ್ಯಸ್ಥ ಡಾ.ಕರುಂಬಯ್ಯ  ಅವರನ್ನು  ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ನಂತರ ಮಾತನಾಡಿ  ರಕ್ತದಾನದ ಮಹತ್ವವನ್ನು  ತಿಳಿಸಿದರು. ವಿರಾಜಪೇಟೆ ಹಾಗೂ ಸುತ್ತಮುತ್ತಲಿನ ಯುವರು ರಕ್ತದಾನ ಮಾಡಿದರು.  ದಾನಿಗಳಿಗೆ ಅಭಿನಂದನಾ ಪತ್ರವನ್ನು ನೀಡಲಾಯಿತು. ಶಿಬಿರದಲ್ಲಿ  ಎಸ್‌ ವೈ ಎಸ್ ಮುಖ್ಯಸ್ಥ ಸಿಪಿಎಂ ಬಶೀರ್ ಹಾಜಿ , ವಿರಾಜಪೇಟೆ ಶಾಫಿ ಜುಮಾ ಮಸೀದಿ ಕಾರ್ಯದರ್ಶಿ ಆಲಿ, ಅಬ್ದುಲ್ ರಹವುಫ್, ಷರೀಫ್ ಮುಂತಾದ ಗಣ್ಯರು ಹಾಜರಿದ್ದರು. ವರದಿ : ನೌಫಲ್ ಕಡಂಗ   

Read More

ಮಡಿಕೇರಿ ಜು.4 : ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕಲ್ಲಹಳ್ಳ ವಲಯ ಅರಣ್ಯ ಇಲಾಖೆಯಿಂದ ವಿಜಯಲಕ್ಷ್ಮಿ ಪ್ರೌಢಶಾಲೆಯ ಪರಿಸರ ಸಂಘದ ಸಹಕಾರದೊಂದಿಗೆ ವಿದ್ಯಾಸಂಸ್ಥೆಯ ಆವರಣದಲ್ಲಿ ಮೂವತ್ತಕ್ಕೂ ಹೆಚ್ಚು ವಿವಿಧ ಸಸಿಗಳನ್ನು ನೆಡಲಾಯಿತು. ವಿದ್ಯ ಸಂಸ್ಥೆಯ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಮಾತನಾಡಿ, ಸಸಿಗಳನ್ನು ನೆಡುವ ಜೊತೆ ಜೊತೆಗೆ ವಿದ್ಯಾರ್ಥಿಗಳು ಪರಿಸರದ ಸಂರಕ್ಷಣೆಗೆ ವಿಶೇಷ ಕಾಳಜಿ ವಹಿಸಿ ನೆಟ್ಟ ಗಿಡದ ಪಾಲನೆ ಪೋ ಷಣೆಯನ್ನು ಪ್ರತಿ ಮಾಡಬೇಕೆಂದು ಕರೆ ನೀಡಿದರು. ಸಂಸ್ಥೆಯ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣಗಣಪತಿ ಮಾತನಾಡಿ, ಅರಣ್ಯ ಪ್ರದೇಶದಲ್ಲಿ ತೇಗದ ತೊಪುಗಳನ್ನು ಬೆಳೆಸುವ ಬದಲಾಗಿ ವಿವಿಧ ಪ್ರಬೇಧಗಳ ಮರಗಳನ್ನು ಬೆಳೆಸಿದರೆ ಪ್ರಾಣಿ ಪಕ್ಷಗಳಿಗೆ ಪೂರಕ ವಾತಾವರಣ ಸೃಷ್ಟಿ ಮಾಡಬಹುದೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ವಿದ್ಯ ಸಂಸ್ಥೆಯ ಸಹ ಕಾರ್ಯದರ್ಶಿ ಪೊಡಮಾಡ ಮೋಹನ್, ಪ್ರಾಂಶುಪಾಲ ಪ್ರಭು, ಅರಣ್ಯ ಇಲಾಖೆ ಉಪವಲಯ ಅರಣ್ಯ ಅಧಿಕಾರಿಗಳಾದ ಯೋಗೇಶ್, ಬಸಪ್ಪ, ವೀರಶ್ ಪಾಟೀಲ್, ಪ್ರೌಢಶಾಲಾ ವಿಭಾಗ ಪರಿಸರ ಸಂಘದ ಸಂಚಾಲಕ ರಾಘವೇಂದ್ರ, ಶಿಕ್ಷಕರಾದ ಸುಬ್ಬಯ್ಯ. ತಿಮ್ಮರಾಜು,…

Read More

ಮಡಿಕೇರಿ ಜು.4 : ನೀರಗುಂದ ಗ್ರಾಮದ ಮಹಿಳೆ ದಿವ್ಯಶ್ರೀ (30) ಮತ್ತು ಮೂರು ವರ್ಷದ ಪುತ್ರಿ ಜೂ.27 ರಿಂದ ಕಾಣೆಯಾಗಿದ್ದು, ಇದುವರೆಗೂ ಪತ್ತೆಯಾಗಿಲ್ಲ ಎಂದು ಪತಿ ನಿಂಗರಾಜು ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕನ್ನಡ ಭಾಷೆ ಮಾತನಾಡ ಬಲ್ಲ ಮಹಿಳೆ 157 ಸೆಂ.ಮೀ ಎತ್ತರ ಇದ್ದು, ಗೋದಿ ಮೈ ಬಣ್ಣ, ದುಂಡು ಮುಖ, ಕಪ್ಪು ಕೂದಲು, ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಮಹಿಳೆಯನ್ನು ಕಂಡವರು ಶನಿವಾರಸಂತೆ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಮಡಿಕೇರಿ ಜು.4 : ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಮುಂಬೈ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದ ಗದ್ದೆಹಳ್ಳದ ಬಳಿ ನಡೆದಿದೆ. ಅಂದೇರಿ ವೆಸ್ಟ್ ಮುಂಬೈನ್ ನ ನಿವಾಸಿ ಸೀಮಾ (50) ಮೃತ ದುರ್ದೈವಿಯಾಗಿದ್ದಾರೆ. ಇವರ ಪತಿ ಸುಧೀರ ಚಂದಾಲಿಯಾ (53) ಹಾಗೂ ಕಾರು ಚಾಲಕ ಉಡುಪಿ ಜಿಲ್ಲೆಯ ಕುಂಜಿಬೆಟ್ಟು ಗ್ರಾಮದ ನಿವಾಸಿ ಮೊಹಮ್ಮದ್ ರಫೀಕ್ (28) ಗೆ ತೀವ್ರ ಗಾಯಗಳಾಗಿದ್ದು, ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಡಿಕೇರಿ ಕಡೆಯಿಂದ ಸುಂಟಿಕೊಪ್ಪದ ರೆಸಾರ್ಟ್ ಗೆ ಆಗಮಿಸುತ್ತಿದ್ದ ಕಾರಿಗೆ ಕುಶಾಲನಗರ ಭಾಗದಿಂದ ಮಡಿಕೇರಿಯತ್ತ ತೆರಳುತ್ತಿದ್ದ ಲಾರಿ (ಎಪಿ-39 ಯುಬಿ-3679) ಡಿಕ್ಕಿಯಾಗಿದ್ದು, ಮಹಿಳೆ ಸ್ಥಳದಲ್ಲೆ ಮೃತಪಟ್ಟರು. ಘಟನೆ ಸಂದರ್ಭ ಬಾರ್ ಮತ್ತು ಸ್ಥಳದಲ್ಲಿ ನಿಲ್ಲಿಸಿದ್ದ ಕೆಲವು ಬೈಕ್ ಗಳಿಗೂ ಹಾನಿಯಾಗಿದೆ. ಸುಧೀರ ಹಾಗೂ ಸೀಮಾ ದಂಪತಿ ತಮ್ಮ ಪುತ್ರನನ್ನು ಉಡುಪಿಯ ಕಾಲೇಜ್ ವೊಂದಕ್ಕೆ ದಾಖಲಿಸಿ ನಂತರ ಮೊಹಮ್ಮದ್ ರಫೀಕ್ ಎಂಬುವವರ ಕಾರಿನಲ್ಲಿ ಸುಂಟಿಕೊಪ್ಪಕ್ಕೆ ಆಗಮಿಸಿದ್ದರು. ರೆಸಾರ್ಟ್ ನಲ್ಲಿ ತಂಗಿ ಮಡಿಕೇರಿಯ ಪ್ರವಾಸಿತಾಣಗಳನ್ನು…

Read More

ಮಡಿಕೇರಿ ಜು.4 :  ಜೆಸಿಐ ಭಾರತದ ವಲಯ 14ರ ಮಧ್ಯವಾರ್ಷಿಕ ಸಮ್ಮೇಳನದಲ್ಲಿ ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕವು ವಿವಿಧ ವಿಭಾಗಗಳಲ್ಲಿ 15ಕ್ಕೂ ಹೆಚ್ಚು ಪ್ರಶಸ್ತಿಯನ್ನು ಪಡೆದುಕೊಂಡಿದೆ. ಜೆಸಿಐ ಬೀರೂರು ಘಟಕದ ಆತಿಥ್ಯದಲ್ಲಿ  ಬೀರೂರಿನ ಶ್ರೀ ತರಳಬಾಳು ಕಲ್ಯಾಣ ಮಂಟಪದಲ್ಲಿ ನಡೆದ ಜೆಸಿಐ ಭಾರತದ ವಲಯ 14ರ ಮಧ್ಯವಾರ್ಷಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಾಂತ್ಯ ಬಿ ವಿಭಾಗದ, ವೈಯಕ್ತಿಕ ಪ್ರಶಸ್ತಿ ವಿಭಾಗದಲ್ಲಿ ಅತ್ಯುತ್ತಮ ಘಟಕಾಧಿಕಾರಿ ಪ್ರಶಸ್ತಿಯನ್ನು ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ಕಾರ್ಯದರ್ಶಿ ಚೆಟ್ಟೋಳಿರ ಶರತ್ ಸೋಮಣ್ಣ ಪಡೆದುಕೊಂಡರು. ಅತ್ಯುತ್ತಮ ಘಟಕ ವಿಭಾಗದಲ್ಲಿ ವಿಜೇತರಾದರು, ಅತ್ಯುತ್ತಮ ಕಾರ್ಯಕ್ರಮ ವಿಭಾಗದಲ್ಲಿ ರನ್ನರ್ ಪ್ರಶಸ್ತಿ  ಪಡೆದುಕೊಂಡರು, , ವಲಯ ವಿಭಾಗದಲ್ಲಿ ಘಟಕ ಅಧ್ಯಕ್ಷ  ನೀತ್ ಅಯ್ಯಪ್ಪ ಗೆ ವಿದ್ಯರತ್ತ ಪುರಸ್ಕಾರ್ ನೀಡಿ ಸನ್ಮಾನಿಸಲಾಯಿತು. 2ನೇ ವಲಯ ಆಡಳಿತ ಮಂಡಳಿ ಸಭೆಯನ್ನು ಆಯೋಜಿಸಿದಕ್ಕೆ ಘಟಕಕ್ಕೆ ವಿಶೇಷ ಮನ್ನಣೆ ಪ್ರಶಸ್ತಿಯನ್ನು ನೀಡಿದರು. ಘಟಕ ಅಧ್ಯಕ್ಷರಿಗೆ ವಿಶೇಷ ಮನ್ನಣೆ ಪ್ರಶಸ್ತಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ 15ಕ್ಕೂ ಹೆಚ್ಚು ಪ್ರಶಸ್ತಿಯನ್ನು…

Read More

ಮಡಿಕೇರಿ ಜು.4 :  ಉತ್ತಮ ವ್ಯಕ್ತಿತ್ವದ ಜೊತೆಯಾಗಿದ್ದರೆ ಮಾತ್ರ ಉತ್ತಮ ಸಮಾಜದ ನಿರ್ಮಾಣ ಸಾಧ್ಯ ಎಂದು  ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ  ಮೇಜರ್ ಡಾ.ಬಿ.ರಾಘವ  ಅಭಿಪ್ರಾಯಪಟ್ಟರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸ್ನಾತಕ ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗ ಆಯೋಜಿಸಿದ ವ್ಯಕ್ತಿತ್ವ ವಿಕಸನ ಮತ್ತು ಸಂವಹನ ಕಲೆ ಎಂಬ ವಿಷಯದ ಕುರಿತು ನಡೆದ ಕಾರ್ಯಾಗಾರದಲ್ಲಿ ಮಾತನಾಡಿದರು. ನಾನು ನನ್ನವರು, ನನ್ನ ತನದಿಂದ ಮುಕ್ತವಾಗಿ ಸಮಾಜಮುಖಿ ವ್ಯಕ್ತಿತ್ವವನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕಾಗಿದೆ. ಬುದ್ಧ ತ್ಯಾಗದ ಮೂಲಕ, ಮದರ್ ಥೆರೆಸಾ ಸೇವೆಯ ಮೂಲಕ, ಮಹಮ್ಮದ್ ಫೈಗಂಬರ್ ದಾನದಶೀಲತೆಯ ಮೂಲಕ, ಅಂಬೇಡ್ಕರ್ ಜ್ಞಾನದ ಮೂಲಕ, ಗಾಂಧಿ ಅಹಿಂಸೆಯ ಮೂಲಕ ಸಾಮಾಜಿಕ ವ್ಯಕ್ತಿತ್ವವನ್ನು ರೂಪಿಸಿಕೊಂಡರು.ಇತಿಹಾಸದಲ್ಲಿ ಸ್ಥಾನ ಪಡೆಯಬೇಕಾದರೆ ಸಮಾಜಮುಖಿ ವ್ಯಕ್ತಿತ್ವವನ್ನು ಮೈಗೊಡಿಸಿಕೊಳ್ಳಬೇಕಾಗಿದೆ ಎಂದರು. ಕಾಲೇಜಿನ ಐಕ್ಯೂಎಸ್ ಸಿ ಸಂಯೋಜಕರಾದ ಡಾ. ರಾಜೇಂದ್ರ  ಮಾತನಾಡಿ,  ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ವಿಕಸನಕ್ಕಾಗಿ ವ್ಯಕ್ತಿತ್ವ ವಿಕಸನದಂತಹ ಕಾರ್ಯಕ್ರಮಗಳ ಅಗತ್ಯತೆ ಹೆಚ್ಚು ಇದೆ. ಜಾಗತಿಕವಾಗಿ ಸ್ಫರ್ಧಾತ್ಮಕ ಜಗತ್ತಿನಲ್ಲಿ ಕಾರ್ಯಪ್ರವೃತ್ತರಾಗಲು ಸಂವಹನ ಕಲೆ ತುಂಬಾ…

Read More

ಮಡಿಕೇರಿ ಜು.4 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕ್ರಿಶ್ಚಿಯನ್ ಘಟಕದ ವತಿಯಿಂದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ವಿರಾಜಪೇಟೆಯಲ್ಲಿ ಶಾಸಕರನ್ನು ಸನ್ಮಾನಿಸಿದ ಪಕ್ಷದ ಪ್ರಮುಖರು ಸ್ಥಳೀಯ ಸಂಸ್ಥೆ ಮತ್ತು ನಿಗಮ, ಮಂಡಳಿಗಳಲ್ಲಿ ಕ್ರೈಸ್ತರಿಗೆ ಪ್ರಾತಿನಿಧ್ಯ ನೀಡುವಂತೆ ಕೋರಿ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಜಾನ್ಸನ್ ಪಿಂಟೋ, ಲಾರೆನ್ಸ್, ಮರ್ವಿನ್ ಲೋಬೋ, ಜೋಕಿಂ ರಾಡ್ರಿಗಸ್, ಕೆಪಿಸಿಸಿ ಸದಸ್ಯ ಜೋಸೆಫ್ ಸ್ಯಾಂ, ಮಡಿಕೇರಿ ನಗರ ಕಾಂಗ್ರೆಸ್ ಉಪಾಧ್ಯಕ್ಷ ಜೊಸೇಫ್ ವಿನ್ಸೆಂಟ್, ಪ್ರಮುಖರಾದ ಜೂಡಿವಾಸ್, ಮಲೆರಿ ಲೋಬೋ, ತೆರೆಝಾ ವಿಕ್ಟರ್ ಮತ್ತಿತರರು ಉಪಸ್ಥಿತರಿದ್ದರು. 

Read More

ಮಡಿಕೇರಿ ಜು.4 : ಅಸ್ತಿತ್ವಕ್ಕೆ ಬಂದ ಒಂದೇ ವರ್ಷದಲ್ಲಿ ಸ್ವರ್ಣ ಪ್ರಶಸ್ತಿ ಗೆದ್ದ ರೋಟರಿ ಕ್ಲಬ್ ಮಡಿಕೇರಿ ವುಡ್ಸ್ ನ 2023- 24 ನೇ ಸಾಲಿನ ಅಧ್ಯಕ್ಷರಾಗಿ ವಸಂತ್ ಕುಮಾರ್ ಹಾಗೂ ಕಾರ್ಯದರ್ಶಿಯಾಗಿ ಹರೀಶ್ ಕಿಗ್ಗಾಲ್ ಆಯ್ಕೆಯಾಗಿದ್ದಾರೆ. ಪ್ರಥಮ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಎಸ್.ಎಸ್.ಸಂಪತ್ ಕುಮಾರ್ ಅವರನ್ನು ರೋಟರಿ ವಲಯ 6ರ ವಲಯ ಸೇನಾನಿಯನ್ನಾಗಿ ನೇಮಕ ಮಾಡಲಾಗಿದೆ.

Read More

ಬೆಂಗಳೂರು ಜು.4 :  ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಜಿಲ್ಲಾಡಳಿತ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.  ನಂತರ ಶ್ರೀ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳು, ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳ ಸೇರಿ ಹಲವರು ಉಪಸ್ಥಿತರಿದ್ದರು.

Read More