ಲೇಖಕ: admin

ಮಡಿಕೇರಿ ಜು.4 : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನ ಅಮ್ಮತ್ತಿಯ ಶ್ರೀ ಮುತ್ತಪ್ಪ ದೇವಾಲಯ ವ್ಯಾಪ್ತಿಯ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಮ್ಮತ್ತಿ ನಿವಾಸಿ ಎನ್.ಎ.ಪೊನ್ನಣ್ಣ (46) ಹಾಗೂ ವಿರಾಜಪೇಟೆ ಸುಂಕದಕಟ್ಟೆ ನಿವಾಸಿ ಹೆಚ್.ಆರ್.ಲೋಹಿತ್ (26) ಅವರನ್ನು 104 ಗ್ರಾಂ ಗಾಂಜಾ ಸಹಿತ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ವಿರಾಜಪೇಟೆ ಉಪ ವಿಭಾಗದ ಡಿವೈಎಸ್‌ಪಿ ಆರ್.ಮೊಹನ್ ಕುಮಾರ್, ಸಿಪಿಐ ಬಿ.ಎಸ್.ಶಿವರುದ್ರಪ್ಪ, ಪಿಎಸ್‌ಐ ಮಂಜುನಾಥ.ಸಿ.ಸಿ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯವನ್ನು ಶ್ಲಾಘಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಮಾದಕ ವಸ್ತು ಮಾರಾಟದ ಕುರಿತು ಸಾರ್ವಜನಿಕರು ಮಾಹಿತಿ ನೀಡಿ ಸಹಕರಿಸುವಂತೆ ಮನವಿ ಮಾಡಿದ್ದಾರೆ.

Read More

ಮಡಿಕೇರಿ ಜು.4 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2822.61 ಅಡಿಗಳು. ಕಳೆದ ವರ್ಷ ಇದೇ ದಿನ 2855.24 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 5.20 ಮಿ.ಮೀ., ಕಳೆದ ವರ್ಷ ಇದೇ ದಿನ 23.40 ಮಿ.ಮೀ. ಇಂದಿನ ನೀರಿನ ಒಳಹರಿವು 1110 ಕ್ಯುಸೆಕ್, ಕಳೆದ ವರ್ಷ ಇದೇ ದಿನ 4360 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 12700 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.

Read More

ಮಡಿಕೇರಿ ಜು.4 : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 14.62 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 45.16 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 356.90 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 891 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 31.85 ಮಿ.ಮೀ. ಕಳೆದ ವರ್ಷ ಇದೇ ದಿನ 74.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 569.11 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1310.79 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.08 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 31.32 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 244.62 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 723.76 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 7.92 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 29.87 ಮಿ.ಮೀ.…

Read More

ಮಡಿಕೇರಿ ಜು.4 :  ಚೆಂಬು ಗ್ರಾಮದ ಊರುಬೈಲು-ಮಾರ್ಪಡ್ಕ ಭಾಗದಲ್ಲಿ ಪ್ರಸ್ತುತ ಇರುವ ಸಂಪರ್ಕ ಸೇತುವೆಯ ಎದುರು ಬದಿ, ಶಿಥಿಲಗೊಂಡ ಹಳೆ ಸೇತುವೆ ಇದ್ದು, ಇದರಿಂದಾಗಿ ಮಳೆಗಾಲದಲ್ಲಿ ಸುಲಲಿತ ನೀರಿನ ಹರಿವಿಗೆ ತೊಂದರೆ ಉಂಟಾಗಿದ್ದು ಪ್ರವಾಹ ಭೀತಿ ಮಾತ್ರವಲ್ಲದೇ ಪ್ರಸ್ತುತ ಇರುವ ಸೇತುವೆಗೆ ಅಪಾಯ ಮತ್ತು ಅಕ್ಕಪಕ್ಕದ ಆಸ್ತಿಗಳಿಗೆ ನೀರು ನುಗ್ಗಿ ಆಸ್ತಿ ಹಾನಿ ಆಗುವ ಆತಂಕವಿತ್ತು. ಇದನ್ನು ಮನಗಂಡ ನೂತನ ಶಾಸಕ  ಎ.ಎಸ್ ಪೊನ್ನಣ್ಣ  ಸ್ಥಳೀಯ ನಿವಾಸಿಗಳ ಕೋರಿಕೆ ಮೇರೆಗೆ ಕೂಡಲೇ ಸ್ಪಂದಿಸಿ, ಜಿ.ಪಂ ಇಂಜಿನಿಯರ್ ಅವರಿಗೆ ಸೂಚನೆ ನೀಡಿದ ಮೇರೆಗೆ ಇದೀಗ ಹಳೆ ಸೇತುವೆಯ ತೆರುವಿನ ಕಾಮಗಾರಿ ಪೂರ್ಣವಾಗಿದೆ. ಅತ್ಯಂತ ಕ್ಷೀಪ್ರ ಗತಿಯಲ್ಲಿ ಸಾರ್ವಜನಿಕರ ತೊಂದರೆಗೆ ಸ್ಪಂದಿಸಿದ  ಪೊನ್ನಣ್ಣ ಅವರ ಕಾರ್ಯವೈಕರಿಗೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ,  ಇಸ್ಮಾಯಿಲ್ ಅವರಿಗೆ ಸ್ಥಳೀಯ ನಿವಾಸಿಗಳು ಪ್ರಶಂಸೆ ವ್ಯಕ್ತಪಡಿಸಿ ಧನ್ಯವಾದ ಅರ್ಪಿಸಿದರು. ಕೂಡಲೇ ಸ್ಪಂದಿಸಿದ ಜಿ.ಪಂ ಕಾಮಗಾರಿ ತಂಡಕ್ಕೆ, ಸ್ಥಳೀಯರ ಸಮಸ್ಯೆಯನ್ನು ಶಾಸಕರಿಗೆ ತಲುಪಿಸುವಲ್ಲಿ ಮುತುವರ್ಜಿ ವಹಿಸಿದ ಸೂರಜ್ ಹೊಸೂರು, ವಲಯ…

Read More

ಮಡಿಕೇರಿ ಜು.3 : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ನಿಷೇಧಿತ ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ನಲ್ವತ್ತೋಕ್ಲು ಗ್ರಾಮದ ಹೋಂಸ್ಟೇಯೊoದರಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳೆ ನಡೆಸಿದ ಪೊಲೀಸರು ಸ್ಥಳೀಯ ನಿವಾಸಿ 28 ವರ್ಷದ ಯುವಕನೋರ್ವನನ್ನು  130 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳೊಂದಿಗೆ ವಶಕ್ಕೆ ಪಡೆದರು. ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ಮೋಹನ್ ಕುಮಾರ್, ಸಿಪಿಐ ಬಿ.ಎಸ್.ಶಿವರುದ್ರಪ್ಪ, ಪಿಎಸ್‌ಐ ಮಂಜುನಾಥ ಸಿ.ಸಿ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.

Read More

ನಾಪೋಕ್ಲು ಜು.3 :  ಪಡಿಯಾಣಿ ಗ್ರಾಮದಲ್ಲಿರುವ ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ ಎಸ್ ಎಫ್ ಶಾಖೆಯ ಅದೀನದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ನೂರುಲ್ ಉಲಮಾ ಸುನ್ನೀ ಸೆಂಟರ್ ಕಟ್ಟಡದ ಶೀಲಾನ್ಯಾಸ ಕಾರ್ಯಕ್ರಮವನ್ನು ಕುರ್ರತು ಸಾದಾತ್ ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್  ನೆರವೇರಿಸಿದರು. ಬಳಿಕ ಮಾತನಾಡಿದ ಫಝಲ್ ಕೊಯಮ್ಮ ತಂಙಳ್ ನಾಡಿನಲ್ಲಿ ಎಲ್ಲರೂ ಸಹನೆ,ಸಹಬಾಳ್ವೆ, ಐಕ್ಯತೆಯಿಂದ ಜೀವನ ಸಾಗಿಸುವಂತ್ತಾಗಬೇಕು. ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಲು ದೇವರು ಕರುಣಿಸಲಿ, ಇಂತಹ ಕಾರ್ಯಕ್ರಮಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಸಾಮೂಹಿಕವಾಗಿ ವಿಶೇಷ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭ ಕೊಡಗು ಜಿಲ್ಲಾ ನಾಹಿಬ್ ಖಾಝಿ ಶಾದುಲಿ ಫೈಝಿ, ಎಸ್ ವೈ ಎಸ್ ಕರ್ನಾಟಕ ರಾಜ್ಯ ಘಟಕದ ಸದಸ್ಯರಾದ ಸಯ್ಯದ್ ಇಲ್ಯಾಸ್ ಅಲ್ ಹೈದರೂಸಿ ತಂಙಳ್ ಎಮ್ಮೆಮಾಡು,ಅಝೀ ಝ್ ತಂಙಳ್, ಷರಫುದ್ದಿನ್ ತಂಙಳ್, ಇಶಾಕ್ ತಂಙಳ್, ಹಬೀಬ್ ತಂಙಳ್, ಎಸ್ ವೈ ಎಸ್ ಜಿಲ್ಲಾಧ್ಯಕ್ಷ ಹಮೀದ್ ಮುಸ್ಲಿಯಾರ್, ಎಸ್ ವೈ ಎಸ್ ಮಡಿಕೇರಿ ಜೋನ್ ಅಧ್ಯಕ್ಷರಾದ…

Read More

ಕುಶಾಲನಗರ ಜು.3 :   ಕುಶಾಲನಗರ ಶ್ರೀ ಶಿರಡಿ ಸಾಯಿ ದೇವಾಲಯದಲ್ಲಿ ಗುರು ಪೂರ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಮುಂಜಾನೆಯಿಂದಲೇ  ಕಾಕಡ ಆರತಿ, ನಂತರ ಗಣಪತಿ ಹೋಮ, ಸಾಯಿ ಹೋಮ, ದೇವರಿಗೆ ಪಂಚಾಮೃತ ಅಭಿಷೇಕ ನಂತರ ಭಕ್ತಾದಿಗಳಿಂದ ಹಾಲಿನ ಅಭಿಷೇಕ ನಡೆಯಿತು. ನಂತರ ಸಾಮೂಹಿಕ ಸತ್ಯನಾರಾಯಣ ಪೂಜೆ ಮಹಾಮಂಗಳಾರತಿ  ಹಾಗೂ ಅನ್ನ ಪ್ರಸಾದ ವಿನಿಯೋಗ ನಡೆಯಿತು. ರಾಘವೇಂದ್ರ ಭಟ್, ನವೀನ್ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಶ್ರೀ ಶಿರಡಿ ಸಾಯಿ ಟ್ರಸ್ಟ್ ಅಧ್ಯಕ್ಷರಾದ ಧರೇಶ್ ಬಾಬು ಮತ್ತು ನಿರ್ದೇಶಕರುಗಳು ಇದ್ದರು.   

Read More

ಮಡಿಕೇರಿ ಜು.3 :  ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇಂದು ನಡೆಯಿತು. ಚುನಾವಣಾ ಕಣದಲ್ಲಿ ಅಧ್ಯಕ್ಷ ಸ್ಥಾನಕ್ಕೆ  ನಾಗೇಶ್ ಕುಂದಲಪಾಡಿ ಬಿ ಅವರು ನಾಮಪತ್ರ ಸಲ್ಲಿಸಿದರು. ಸೂಚಕರಾಗಿ ಕಿರಣ ಬಂಗಾರಕೋಡಿ, ಅನುಮೋದಕರಾಗಿ ಜಯರಾಮ ನಿಡ್ಯಮಲೆ ಬಿ ಇವರು ಅನುಮೋದಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಅಶೋಕ ಪೆರುಮುಂಡ ಎಂ ನಾಮಪತ್ರ ಸಲ್ಲಿಸಿದರು., ಸೂಚಕರಾಗಿ ಶೇಷಪ್ಪ ನಾಯ್ಕ ನಿಡ್ಯಮಲೆ ಹಾಗೂ ಅನುಮೋದಕರಾಗಿ ಹೊನ್ನಪ್ಪ ಅಮಚೂರು  ಅನುಮೋದಿಸಿದರು. ಇನ್ನುಳಿದಂತೆ ಯಾವುದೇ ನಾಮಪತ್ರಗಳು ಬಾರದ ಹಿನ್ನೆಲೆಯಲ್ಲಿ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷರಾಗಿ  ನಾಗೇಶ್ ಕುಂದಲ್ಪಾಡಿ ಬಿ ಹಾಗೂ ಉಪಾಧ್ಯಕ್ಷರಾಗಿ  ಅಶೋಕ ಪೆರುಮುಂಡ ಎಂ ಆಯ್ಕೆಯಾದರು. ಚುನಾವಣೆ ಅಧಿಕಾರಿ ಬಿ.ಜಿ.ಸಂದೀಪ್ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Read More

ಮಡಿಕೇರಿ ಜು.3 : ಪರಿಸರ ಜಾಗೃತಿ ಮತ್ತು ಜಿಲ್ಲೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಆಗಬೇಕಾದ ಕಾರ್ಯಗಳ ಬಗ್ಗೆ ಗ್ರೀನ್ ಸಿಟಿ ಫೋರಂ ವತಿಯಿಂದ ನೂತನ ಜಿಲ್ಲಾಧಿಕಾರಿ ವೆಂಕಟ್‍ರಾಜಾ ಅವರ ಗಮನ ಸೆಳೆಯಲಾಯಿತು. ಜಿಲ್ಲಾಧಿಕಾರಿ ಕಚೇರಿಯಲ್ಲಿ ವೆಂಕಟ್‍ರಾಜಾ ಅವರನ್ನು ಭೇಟಿಯಾದ ಫೋರಂ ಅಧ್ಯಕ್ಷ ಚೆಯ್ಯಂಡ ಸತ್ಯ ಗಣಪತಿ ಹಾಗೂ ನಿರ್ದೇಶಕ ಕುಕ್ಕೇರ ಜಯ ಚಿಣ್ಣಪ್ಪ, ಗ್ರೀನ್ ಸಿಟಿ ಫೋರಂ ವತಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಜತೆಗೆ ಜಿಲ್ಲಾಡಳಿತ ವತಿಯಿಂದ ಕಾರ್ಯರೂಪಕ್ಕೆ ಬರಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಮಡಿಕೇರಿ ನಗರದಲ್ಲಿನ ಸ್ಟೋನ್‍ಹಿಲ್‍ನಲ್ಲಿರುವ ಕಸದ ರಾಶಿ ನಗರಕ್ಕೆಕಪ್ಪು ಚುಕ್ಕೆಯಾಗಿದೆ. ಅದಕ್ಕೆ ವೈಜ್ಞಾನಿಕವಾಗಿ ಪರಿಹಾರ ಕ್ರಮವನ್ನು ತುರ್ತಾಗಿ ಕಾರ್ಯರೂಪಕ್ಕೆ ತಂದು ನಗರದ ಸೌಂದರ್ಯ ಹಾಳಾಗದಂತೆ ಕ್ರಮ ವಹಿಸುವಂತೆ ಮನವಿ ಮಾಡಿದರು. ಪರಿಸರ ಸ್ನೇಹಿ ಪ್ರವಾಸೋದ್ಯಮ ಬೆಳೆಯಬೇಕು. ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಶೌಚಾಲಯ, ನೀರಿನ ವ್ಯವಸ್ಥೆ, ವಾಹನ ಪಾರ್ಕಿಂಗ್ ಸೇರಿ ಇತರೆ ಅಗತ್ಯ ಮೂಲ ಸೌಕರ್ಯ ವ್ಯವಸ್ಥೆಯನ್ನು ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಆಸಕ್ತಿ ವಹಿಸಬೇಕೆಂದು…

Read More

ಮಡಿಕೇರಿ ಜು.3 : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜು.8 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ `ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಡಿ.ಟಿ.ಪುಟ್ಟರಂಗಸ್ವಾಮಿ ತಿಳಿಸಿದ್ದಾರೆ. ನ್ಯಾಯಾಲಯಗಳಲ್ಲಿ ಹಲವು ಪ್ರಕರಣಗಳಿದ್ದು, ಇವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ವಕೀಲರ ಸಹಕಾರದಿಂದ ಲೋಕ್ ಅದಾಲತ್ ಕಾರ್ಯಕ್ರಮ ಯಶಸ್ವಿಗೊಳಿಸಲಾಗುತ್ತದೆ ಎಂದು ಡಿ.ಟಿ.ಪುಟ್ಟರಂಗಸ್ವಾಮಿ ಹೇಳಿದ್ದಾರೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ ಎಂದರು. ಲೋಕ ಅದಾಲತ್‍ನಲ್ಲಿ ರಾಜಿಯಾಗಬಲ್ಲ ಅಪರಾಧಿತ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್…

Read More