ಮಡಿಕೇರಿ ಜು.3 : ಕಾಳುಮೆಣಸು ಕೊಡಗು ಜಿಲ್ಲೆಯ ಬಹು ವಾರ್ಷಿಕ ಸಾಂಬಾರು ಬೆಳೆ. ಇದನ್ನು ಕಾಫಿ, ಅಡಿಕೆ, ಏಲಕ್ಕಿ ತೋಟದಲ್ಲಿ ಅಂತರ ಬೆಳೆಯಾಗಿ ಜಿಲ್ಲೆಯಾದ್ಯಂತಹ ಬೆಳೆಯಲಾಗುತ್ತಿದೆ. ಇತ್ತೀಚೆಗೆ ಕಾಳು ಮೆಣಸು ಬೆಳೆಗೆ ಅನೇಕ ರೋಗಗಳು ತೀವ್ರಗತಿಯಲ್ಲಿ ಕಂಡು ಬರುತ್ತಿದ್ದು, ಕೃಷಿಕನಿಗೆ ಹೆಚ್ಚು ಆರ್ಥಿಕ ಹಾನಿಯನ್ನುಂಟು ಮಾಡುತ್ತೀವೆ. ಅದರಲ್ಲಿಯೂ ಮುಖ್ಯವಾಗಿ ಇತ್ತೀಚೆಗೆ ಕೊಡಗು ಜಿಲ್ಲೆಯಾದ್ಯಂತಹ ಕಾಫಿ ತೋಟದಲ್ಲಿ ಬೆಳೆಸಲಾಗುತ್ತಿರುವ ಕಾಳುಮೆಣಸಿನ ಬಳ್ಳಿಗಳಲ್ಲಿ ಎಲೆಗಳು ಚಿಕ್ಕದಾಗಿ, ಬಳ್ಳಿಗಳು ಸಾಯುವುದು ಇಲ್ಲ ಅಥವಾ ಬೆಳವಣಿಗೆಯೂ ಇಲ್ಲದೆ, ಕಾಳುಮೆಣಸು ಬಿಡದೆ ಇರುವ ಬಳ್ಳಿಗಳು ದಿನೇ ದಿನೇ ಹೆಚ್ಚಾಗುತ್ತಿರುತ್ತವೆ. ಇದಕ್ಕೆ ಮೂಲ ಕಾರಣ ನಂಜಾಣುವಿನ ಭಾದೆಗೆ ತುತ್ತಾಗುತ್ತಿರುವುದು. ಈ ನಿಟ್ಟಿನಲ್ಲಿ ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ನಂಜಾಣುವಿನ ಭಾದೆಗೆ ತುತ್ತಾಗಿರುವ ಬಳ್ಳಿಗಳನ್ನು ಪುನಶ್ಚೇತನಗೂಳಿಸಲು ಕೇರಳ ರಾಜ್ಯದ ಕ್ಯಾಲಿಕಟ್ ಭಾರತೀಯ ಸಾಂಬಾರು ಬೆಳೆಗಳ ಸಂಶೋಧನ ಸಂಸ್ಥೆ ಅವರು ಶಿಫಾರಸ್ಸು ಮಾಡಿರುವ ಸಮಗ್ರ ತಂತ್ರಜ್ಞಾನಗಳ ಪರಿಚಯವನ್ನು ರೈತರಿಗೆ ತಿಳಿಸಲು ಜಿಲ್ಲೆಯ 10 ತೋಟಗಳಲ್ಲಿ ಮೂಂಚೂಣಿ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿದೆ. ಕೃಷಿ ವಿಜ್ಞಾನ…
ಲೇಖಕ: admin
ಮಡಿಕೇರಿ ಜು.3 : ಸಿಕ್ಕಿಂ ರಾಜ್ಯದ ಬೌದ್ಧ ಸನ್ಯಾಸಿ ಸಮುದಾಯದ ಸಂಘ ಕ್ಷೇತ್ರದ ಮಾದರಿಯಲ್ಲಿ ಹೊಸ ಸಂಸತ್ ನಲ್ಲಿ ಪ್ರತ್ಯೇಕ ಕೊಡವ ಪ್ರಾತಿನಿಧ್ಯ ನೀಡಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿತು. ವಿವಿಧ ಬೇಡಿಕೆಗಳ ಪರ ಘೋಷಣೆಗಳನ್ನು ಕೂಗಿದ ಧರಣಿ ನಿರತರು ಸಂಸತ್ ನಲ್ಲಿ ಕೊಡವ ಪ್ರಾತಿನಿಧ್ಯದ ಕುರಿತು ಗಮನ ಸೆಳೆದರು. ಸೆಂಟ್ರಲ್ ವಿಸ್ಟಾ ಇದಕ್ಕಾಗಿ ಪ್ರತ್ಯೇಕ ವಿಶೇಷ ವರ್ಚುವಲ್ ಮತ್ತು ಅಮೂರ್ತ ಲೋಕಸಭೆ ಸ್ಥಾನಗಳನ್ನು ಅತ್ಯಂತ ಸೂಕ್ಷ್ಮ ಬುಡಕಟ್ಟು ಜನಾಂಗ ಕೊಡವರಿಗೆ ನೀಡಬೇಕು. ಹೊಸ ಸಂಸತ್ತಿನಲ್ಲಿ ಪ್ರತಿನಿಧಿಸಲು ವಿಶೇಷವಾದ ಕೊಡವ ಸಂಸದೀಯ ಮತ್ತು ಕೊಡವ ಅಸೆಂಬ್ಲಿ ಕ್ಷೇತ್ರಗಳನ್ನು ರಚಿಸಬೇಕು ಎಂದು ಒತ್ತಾಯಿಸಿದರು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮಾತನಾಡಿ ವಿಶೇಷವಾದ ಕೊಡವ ಅದೃಶ್ಯ-ವರ್ಚುವಲ್ ಕ್ಷೇತ್ರಗಳನ್ನು ರಚಿಸಿ ಕೇಂದ್ರೀಯ ವಿಸ್ಟಾ ಅಂದರೆ ಹೊಸ ಸಂಸತ್ತಿನಲ್ಲಿ ನಮಗೆ ಪ್ರಾತಿನಿಧ್ಯವನ್ನು ಒದಗಿಸುವುದರ ಮೂಲಕ ಕೊಡವರು ನೈಸರ್ಗಿಕ ನ್ಯಾಯ ಮತ್ತು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಶಾಶ್ವತವಾಗಿ ಸಾಂವಿಧಾನಿಕ ಕಾರ್ಯವಿಧಾನದಲ್ಲಿ ಭಾಗವಹಿಸಲು…
ಮಡಿಕೇರಿ ಜು.3 : ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ವಾರ್ಷಿಕ ಮಹಾಸಭೆ ಜು.9 ರಂದು ಬೆಳಗ್ಗೆ 10.30 ಗಂಟೆಗೆ ಸುಂಟಿಕೊಪ್ಪದ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ ತಿಳಿಸಿದ್ದಾರೆ. ಮಹಾಸಭೆಯ ನಂತರ ಜಿಲ್ಲಾ ಸಮಿತಿಯ ಪುನರ್ ರಚನಾ ಪ್ರಕ್ರಿಯೆ ನಡೆಯಲಿದ್ದು, ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ 95917 93301 ನ್ನು ಸಂಪರ್ಕಿಸಬಹುದಾಗಿ.
ನಾಪೋಕ್ಲು ಜು.3 : ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯ ನಿಸರ್ಗ ಇಕೋ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ರೋಟ್ರಿ ಇಂಟ್ರಾಕ್ಟ್ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಮಡಿಕೇರಿ ವಲಯ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರದಿನ ಹಾಗೂ ವನಮಹೋತ್ಸವವನ್ನು ವಿವಿಧ ತಳಿಯ ಗಿಡಗಳನ್ನು ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಆವರಣದಲ್ಲಿ ಗಿಡನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ವಲಯ ಆರ್ಎಫ್ಒ ರವೀಂದ್ರ, ನಮ್ಮ ಒಟ್ಟಾರೆ ಭೂಮಿಯಲ್ಲಿ ಕನಿಷ್ಠ ಪಕ್ಷ ಶೇ33ರಷ್ಟು ಅರಣ್ಯ ಇದ್ದರೆ ಮಾತ್ರ ನಮ್ಮ ನಾಗರೀಕತೆ,ಹಸಿರು ಹೊದಿಕೆ ಇರುತ್ತದೆ. ಇಲ್ಲವಾದರೆ ಯಾವುದು ಉತ್ತುಂಗಕ್ಕೆ ಹೆರಲು ಸಾಧ್ಯವಿಲ್ಲ, ಇವಾಗ ಗೂಗಲ್ ನಲ್ಲಿ ಸರ್ಚ್ ಮಾಡಿದರೆ ಶೇ.21ರಷ್ಟು ಮಾತ್ರ ಅರಣ್ಯ ಕಾಣಲು ಸಾಧ್ಯ ಎಂದರು. ಶಾಲಾ ಕಾಲೇಜುಗಳಲ್ಲಿ ಮತ್ತು ನಮ್ಮ ಮನೆ, ಕಚೇರಿಗಳ ಸುತ್ತಮುತ್ತಲಿನ ಪರಿಸರದಲ್ಲಿ ಎಲ್ಲರೂ ಗಿಡ ನೆಟ್ಟು ಪರಿಸರವನ್ನು ಸಂರಕ್ಷಿಸಬೇಕಿದೆ ಎಂದರು. ಶಾಲೆಯ ಆಡಳಿತ ಮಂಡಳಿಯ ಉಪಾಧ್ಯಕ್ಷ ಹಾರಿಸ್ ಮಾತನಾಡಿ, ವನಮಹೋತ್ಸವ ಕಾರ್ಯಕ್ರಮ ಒಂದು…
ಮಡಿಕೇರಿ ಜು.3 : ಭಾರತೀಯ ಸೇನೆಯ ಅವಿಭಾಜ್ಯ ಭಾಗವಾಗಿರುವ ಭಾರತೀಯ ವಾಯು ಸೇನೆಯು (ಐಎಎಫ್) ಪ್ರಪಂಚದ ಅತಿ ದೊಡ್ಡ ವಾಯು ಸೇನೆಗಳಲ್ಲಿ ಒಂದು. ವಾಯು ಸೇನೆಯ ಪ್ರಥಮ ಕರ್ತವ್ಯ ದೇಶದ ಮೈಮಾನಿಕ ವಲಯದ ರಕ್ಷಣೆಯಾಗಿದ್ದು, ಯುದ್ಧದಂತಹ ತುರ್ತು ಕಾಲಪರಿಸ್ಥಿತಿಯಲ್ಲಿ ಕಾರ್ಯಾಚರಣೆ ನಡೆಸಲಿದೆ. ಇನ್ನು ನೈಸರ್ಗಿಕ ವಿಕೋಪವುಂಟಾದಲೂ ರಕ್ಷಣಾ ಕಾರ್ಯಾಚರಣೆಗೆ ನೇತೃತ್ವ ವಹಿಸಲಿದೆ ಎಂದು ಭಾರತೀಯ ವಾಯುಸೇನೆಯ ಫ್ಲೈಟ್ ಲೆಫ್ಟಿನೆಂಟ್ ಗೌರವ ಶರ್ಮ ತಿಳಿಸಿದರು. ಭಾರತೀಯ ವಾಯುಸೇನೆಯ ವತಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕೊಡಗು ಜಿಲ್ಲೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ( ಎನ್.ಎಸ್.ಎಸ್.) ಸಂಯುಕ್ತಾಶ್ರಯದಲ್ಲಿ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶಾಲೆಯ ಎನ್.ಎಸ್.ಎಸ್.ಘಟಕದ ಸಹಯೋಗದೊಂದಿಗೆ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಭಾರತೀಯ ವಾಯು ಸೇನೆಯ ವತಿಯಿಂದ ವಾಯುಸೇನೆಯ ಬಸ್ನಲ್ಲಿ ಅಳವಡಿಸಿರುವ ಸೇನೆಯ ಕುರಿತು ಏರ್ಪಡಿಸಿದ್ದ ವಿಡಿಯೋ- ಚಿತ್ರಗಳೊಂದಿಗೆ ಮಾಹಿತಿ ನೀಡಿದ ಅವರು ವಿದ್ಯಾರ್ಥಿಗಳು ಭಾರತೀಯ ಸೇನೆ ಬಗ್ಗೆ ಹೆಚ್ಚಿನ ಜ್ಞಾನ ಗಳಿಸಿಕೊಂಡು ಭವಿಷ್ಯದಲ್ಲಿ ಭಾರತೀಯ ಸೇನೆಗೆ ಸೇರ್ಪಡೆಗೊಳ್ಳಲು…
ಮಡಿಕೇರಿ ಜು.3 : ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಪ್ರೋತ್ಸಾಹಿಸಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ತಿಳಿಸಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಮಡಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅತಿ ಹೆಚ್ಚು ಅಂಕ ಪಡೆದ ದ್ವಿತೀಯ ಪಿ.ಯು.ಸಿ ಹಾಗೂ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಮತ್ತು ಫಲಿತಾಂಶ ಬರಲು ಕಾರಣರಾದ ಶಿಕ್ಷಕರಿಗೆ ಸನ್ಮಾನ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಸನ್ಮಾನಿಸಿ ಮಾತನಾಡಿದರು. ಸಮಾಜದಲ್ಲಿ ಇಂದು ಜನರು ಯಾವುದೇ ಕಟ್ಟುಪಾಡುಗಳಿಲ್ಲದೆ ಜೀವನ ನಡೆಸುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ಡಾ.ಬಿ.ಆರ್.ಅಂಬೇಡ್ಕರ್ ಮುಂದಾಳತ್ವದಲ್ಲಿ ರಚನೆಯಾದ ಸಂವಿಧಾನ. ನಮ್ಮ ಬದುಕಿನಲ್ಲಿ ಸಂವಿಧಾನ ಬಹಳಷ್ಟು ಮುಖ್ಯವಾಗಿದ್ದು, ಜನಪ್ರತಿನಿಧಿಯಾಗಿ ಸಮುದಾಯದ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ಜೊತೆಯಾಗಿರುತ್ತೇನೆ ಎಂದು ಭರವಸೆ ನೀಡಿದರು. ದೀಪಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬಾರದು, ಜೀವನದಲ್ಲಿ ಸಾಧನೆ ಮಾಡಬೇಕೆಂದರೆ ಶಿಕ್ಷಕರ ಮಾರ್ಗದರ್ಶನ ಮುಖ್ಯ. ವಿದ್ಯಾರ್ಥಿಗಳು…
ಮಡಿಕೇರಿ ಜು.3 : ವಿಧಾನ ಪರಿಷತ್ನ ನೂತನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಜಗದೀಶ್ ಶೆಟ್ಟರ್, ಬೋಸರಾಜು ಮತ್ತು ತಿಪ್ಪಣ್ಣ ಕಮಕನೂರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿ, ಶುಭ ಹಾರೈಸಿದರು.
ಬೆಂಗಳೂರು ಜು.3 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಜಿಲ್ಲಾಡಳಿತ ರವೀಂದ್ರ ಕಲಾ ಕ್ಷೇತ್ರದಲ್ಲಿ ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ವೇದಿಕೆಯಲ್ಲಿ ನಾಡೋಜ ಡಾ.ಗೋ.ರು.ಚನ್ನಬಸಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಡಾ.ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ವಿರಾಜಪೇಟೆ ಜು.3 : ಸರಕಾರದ ಯೋಜನೆಗಳನ್ನು ಗ್ರಾಮಸ್ಥರು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು, ಆಗ ಮಾತ್ರ ಯೋಜನೆಯ ಉದ್ದೇಶ ನೆರವೇರಲು ಸಾಧ್ಯವಾಗುತ್ತದೆ ಎಂದು ಆರ್ಜಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮಣಿ ಹೇಳಿದರು. ವಿರಾಜಪೇಟೆ ಬಳಿಯ ಆರ್ಜಿ ಗ್ರಾ.ಪಂ ವ್ಯಾಪ್ತಿಯ ಪೆರುಂಬಾಡಿ ಮತ್ತು ಆರ್ಜಿ ಗ್ರಾಮಸ್ಥರಿಗೆ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಸ್ಯೆಯ ಬಗ್ಗೆ ಪಂಚಾಯಿತಿ ಸಭಾಂಗಣದಲ್ಲಿ ಕರೆದಿದ್ದ ಗ್ರಾಮಸ್ಥರ ಸಭೆಯಲ್ಲಿ ಮಾತನಾಡಿ ಸ್ವಚ್ಚತೆಯನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಇದು ಗಾಂಧಿಜೀ ಅವರ ಕನಸಾಗಿತ್ತು ಎಂದ ಮಣಿ ಅವರು ಮೊದಲು ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಇತ್ತು. ಈಗ ಪಂಚಾಯಿತಿ ಸಮಿತಿಯನ್ನು ರಚನೆ ಮಾಡಿದ ನಂತರ ನೀರಿನ ಸಮಸ್ಯೆ ಇಲ್ಲ. ನೀರಿನ ಬಗ್ಗೆ ಸಾರ್ವಜನಿಕರಲ್ಲಿ ಪ್ರಮಾಣಿಕತೆ ಇರಬೇಕು. ನಾವುಗಳು ಅಂತರ್ಜಲ ನೀರನ್ನು ಉಳಿಸುವ ಮೂಲಕ ಪ್ರಕೃತಿಯನ್ನು ಉಳಿಸಿ ಬೆಳಸಬೇಕು. ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಪ್ರತಿಯೋಬ್ಬರು ಕಡಿಮೆ ಮಾಡಬೇಕೆಂದು ಸಭೆಗೆ ತಿಳಿಸಿದರು. ಸಭೆಯಲ್ಲಿದ್ದ ಪೆರುಂಬಾಡಿ ಗ್ರಾಮದ ಬಿ.ಆರ್.ಅನೀಲ್ ಕುಮರ್[ಹರೀಶ್] ಮಾತನಾಡಿ, ವಿರಾಜಪೇಟೆ ಪುರಸಭೆಯವರು ಟ್ಯಾಕ್ಟರ್ನಲ್ಲಿ ಪಟ್ಟಣದ ಕಸವನ್ನು…
ಮಡಿಕೇರಿ ಜು.3 : ಗುಡ್ಡೆಹೊಸೂರು-ಹಾರಂಗಿ ರಸ್ತೆಯ ಜಮೀನಿನಲ್ಲಿ ಮೂರು ವರ್ಷದ ಗಂಡು ಚಿರತೆಯೊಂದರ ಮೃತದೇಹ ಪತ್ತೆಯಾಗಿದೆ. ಮಹಮ್ಮದ್ ಫಿರ್ ಎಂಬವರಿಗೆ ಸೇರಿದ ತೋಟದಲ್ಲಿ ಚಿರತೆಯ ಮೃತದೇಹಪತ್ತೆಯಾಗಿದ್ದು, ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಉರುಳಿಗೆ ಸಿಲುಕಿ ಚಿರತೆ ಮೃತ ಪಟ್ಟಿರಬಹುದೆಂದು ಶಂಕಿಸಲಾಗಿದೆ.






