ಮಡಿಕೇರಿ ಜು.4 : ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 21.58 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 66.11 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 342.28 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 845.83 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 47.50 ಮಿ.ಮೀ. ಕಳೆದ ವರ್ಷ ಇದೇ ದಿನ 117.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 537.26 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1236.49 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.83 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 30.73 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 240.54 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 692.44 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 50 ಮಿ.ಮೀ.…
ಲೇಖಕ: admin
ಮಡಿಕೇರಿ ಜು.1 : ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಸರಕಾರದ ಮೂಲಕ ರಾಜ್ಯದ ಹಲವು ವೈದ್ಯರಿಗೆ ಶ್ರೇಷ್ಠ ವೈದ್ಯ ಪ್ರಶಸ್ತಿಯನ್ನು ನೀಡಲಾಗಿದ್ದು, ಗೋಣಿಕೊಪ್ಪಲು ಸಮುದಾಯ ಆರೋಗ್ಯ ಕೇಂದ್ರದ ವೈದ್ಯೆಯಾಗಿರುವ ಮುಕ್ಕಾಟಿರ ಡಾ.ಗ್ರೀಷ್ಮ ಬೋಜಮ್ಮ ಅವರಿಗೂ ಈ ಪ್ರಶಸ್ತಿ ಲಭ್ಯವಾಗಿದೆ. ಉತ್ತಮ ಪ್ರಸೂತಿ ತಜ್ಞೆ ಎಂದು ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗೂಂಡೂರಾವ್ ಪ್ರಶಸ್ತಿ ಪ್ರದಾನ ಮಾಡಿದರು. ಡಾ.ಗ್ರೀಷ್ಮಾ ಬೋಜಮ್ಮ ಅವರು ಕಳೆದ 2007ರಿಂದ ಗೋಣಿಕೊಪ್ಪಲು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ಶ್ರೀಮಂಗಲ ಪ.ಪೂ ಕಾಲೇಜಿನ ಮಾಜಿ ಪ್ರಾಂಶುಪಲರಾದ ಕಟ್ಟೇರ ಎನ್.ಮೇದಪ್ಪ ಹಾಗೂ ಶಿಕ್ಷಕಿ ದಿವಂಗತ ಉಷಾಬಾಯಿ ಅವರ ಪುತ್ರಿ ಹಾಗೂ ಗೋಣಿಕೊಪ್ಪಲುವಿನಲ್ಲಿ ಖಾಸಗಿ ಆಸ್ಪತ್ರೆ ನಡೆಸುತ್ತಿರುವ ಮೂಳೆ ತಜ್ಞ ಮುಕ್ಕಾಟಿರ ಡಾ.ಸಂಜಯ್ ಪೊನ್ನಪ್ಪ ಅವರ ಪತ್ನಿ.
ಚೆಯ್ಯಂಡಾಣೆ, ಜು.3 : ಸರಕಾರಿ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿರಾಜಪೇಟೆ ವಲಯ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಸ್ಥಳೀಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಉತ್ತಪ್ಪ ಭರತ್ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ವಿರಾಜಪೇಟೆ ವಲಯ ಆರ್ ಎಫ್ ಓ ಕಳ್ಳಿರ ದೇವಯ್ಯ, ಫಾರೆಸ್ಟರ್ ಗಳಾದ ಅನಿಲ್, ಆನಂದ, ಅರುಣಾ ಹಾಗೂ ಕ್ಯಾಂಪ್ ಸಿಬ್ಬಂದಿಗಳಾದ ಸುರೇಶ್, ಭರತ್, ನಾಣಯ್ಯ, ಆರೋಗ್ಯ ಕೇಂದ್ರದ ಸಹಾಯಕಿ ರೋಹಿಣಿ, ಲ್ಯಾಬ್ ಟೆಕ್ನಿಷಿಯನ್ ಲೀಲಾವತಿ, ಸಿಬ್ಬಂದಿಗಳು ಹಾಜರಿದ್ದರು. ವರದಿ : ಅಶ್ರಫ್
ಸುಂಟಿಕೊಪ್ಪ ಜು.3 : ವಿದ್ಯಾರ್ಥಿಗಳು ಉತ್ಸಾಹ ಭರಿತರಾಗಿ ಕಲಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರೆ, ತಮ್ಮ ಗುರಿಯನ್ನು ಲಾಭದಾಯಕವಾಗಿ ಮುಟ್ಟಲು ಸಾಧ್ಯವಾಗಲಿದೆ ಎಂದು ಸ್ವಸ್ಥ ಶಾಲೆಯ ಸಿ.ಬಿ.ಆರ್ ಸಂಯೋಜಕ ವ್ಯಕ್ತಿ ಮುರುಗೇಶ್ ಹೇಳಿದರು. ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭಿಕ ಉತ್ಸಾಹ ವ್ಯಕ್ತಿತ್ವ ವಿಕಸನ ಉಪನ್ಯಾಸದ ಕಾರ್ಯಕ್ರಮದಲ್ಲಿ ಸ್ವಸ್ಥ ಶಾಲೆಯ ಸಿ.ಬಿ.ಆರ್ ಸಂಯೋಜಕ ಶೈಕ್ಷಣಿಕ ಪೂರಕವಾದ ಹತ್ತು ಹಲವು ಚಟುವಟಿಕೆಗಳನ್ನು ವಿದ್ಯಾರ್ಥಿಗಳ ಸಮ್ಮುಖದಲ್ಲಿ ನಿರ್ಮಿಸಿ ಪ್ರದರ್ಶಿಸಿದರು. ಯಾವುದೇ ಒಂದು ಗುರಿಯನ್ನು ತಲುಪ ಬೇಕಾದರೆ ಅಥವಾ ಕನಸನ್ನು ನನಸು ಮಾಡಿಕೊಳ್ಳಬೇಕಾದರೆ ಆರಂಭದಲ್ಲಿ ಉತ್ಸಾಹ ಉರುಪನ್ನು ಹೊಂದಿರಬೇಕು ಎಂದರು. ಜಾನಪದ ಗೀತೆಗಳನ್ನು ಹಾಡುವುದರ ಮೂಲಕ ವಿದ್ಯಾರ್ಥಿಗಳನ್ನು ಮನರಂಜಿಸಿದರು. ಕ್ರೀಡಾಪಟು ಸಚಿನ್ ತೊಂಡಲ್ಕರ್, ಲತಾ ಮಂಜೆಸ್ಕರ್, ಎ.ಆರ್.ರಹೆಮಾನ್ ಮುಂತಾದ ಸಾಧಕರ ಸಾಧನೆಯ ಬಗ್ಗೆ ವಿದ್ಯಾರ್ಥಿಗಲಿಗೆ ಮಾಹಿತಿ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾರ್ಥಿಗಳು ತರಗಗತಿ ಕೋಣೆಯಲ್ಲಿ ಗ್ರಹಿಕಾ ಸಾಮರ್ಥವನ್ನು ಉತ್ತಮಗೊಳಿಸಿಕೊಳ್ಳಲು ಅವರುಗಳಿಗೆ ಸೂಕ್ತ ತರಬೇತಿಯ ಅವಶ್ಯಕವಾಗಿರುತ್ತದೆ. ವಿದ್ಯಾರ್ಥಿಗಳು ಆಸಕ್ತರಹಿತರಾಗಿ ಪಾಠಪ್ರವಚನಗಳ ಬಗ್ಗೆ ಒಲವನ್ನು ಹೊಂದಿದ್ದರೆ ಅವರುಗಳ ವಿದ್ಯಾರ್ಥಿ ಜೀವನವು…
ಸೋಮವಾರಪೇಟೆ ಜು.2 : ಅವಿರತ ಸಂಸ್ಥೆ ವತಿಯಿಂದ ಕಿರಗಂದೂರು ಸರ್ಕಾರಿ ಮಾದರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಿಸಿದರು. ಸಂಸ್ಥೆಯ ಸದಸ್ಯರಾದ ಸಾಹಿತಿ ಹಾಗು ವೈದ್ಯ ಶಾಲಿನಿ ಹಾಗು ನಿವೃತ್ತ ಶಿಕ್ಷಕ ಲಕ್ಷö್ಮಪ್ಪ ಅವರುಗಳು ನೋಟ್ಬುಕ್ ವಿತರಿಸಿದರು. ನಂತರ ನಿವೃತ್ತ ಶಿಕ್ಷಕ ಲಕ್ಷ್ಮಪ್ಪ ಮಾತನಾಡಿ, ಪಠ್ಯ ಪುಸ್ತಕಗಳನ್ನು ಸರ್ಕಾರ ವಿತರಿಸುತ್ತದೆ. ಬರೆಯುವ ಪುಸ್ತಕಗಳನ್ನು ನೀಡುತ್ತಿಲ್ಲ. ಇಂದಿಗೂ ಸಾಕಷ್ಟು ಬಡ ಮಕ್ಕಳಿಗೆ ಮಸ್ತಕಗಳನ್ನು ತೆಗೆದುಕೊಳ್ಳುವುದಕ್ಕೆ ಕಷ್ಟದ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಕಳೆದ ಹಲವು ವರ್ಷಗಂದ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕಗಳನ್ನು ನೀಡುತ್ತಿದ್ದೇವೆ ಎಂದರು. ಇತ್ತಿಚಿನ ದಿನಗಳಲ್ಲಿ ಬಹುತೇಕ ಸರ್ಕಾರಿ ಶಾಲೆಗಳು ಮುಚ್ಚುವಂತಹ ಸ್ಥಿತಿಯಲ್ಲಿವೆ. ಸರ್ಕಾರಿ ಶಾಲೆಯಲ್ಲಿ ಓದಿದಂತಹ ಸಾಕಷ್ಟು ವಿದ್ಯಾರ್ಥಿಗಳು ಒಳ್ಳೆಯ ಹುದ್ದೆಗಳನ್ನು ಆಲಂಕರಿಸಿದ್ದಾರೆ. ವಿದ್ಯಾವಂತರಾದ ನಾವುಗಳು ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಸೇರಿಸಲು ಮತ್ತು ಆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವುದು ನಮ್ಮ ಕರ್ತವ್ಯ. ಅವಿರತ ಸಂಸ್ಥೆ ಕಳೆದ ಹದಿನೈದು ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಮಾಡುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪ್ರೌಢಶಾಲೆಯ…
ಸೋಮವಾರಪೇಟೆ ಜು.2 : ಸೋಮವಾರಪೇಟೆ ತಾಲ್ಲೂಕು ಕಾನೂನು ಸೇವೆಗಳ ಸಮಿತಿ. ವಕೀಲರ ಸಂಘ, ತಾಲೂಕು ಆಡಳಿತ ವತಿಯಿಂದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಾಗಾರ ಈಚೆಗೆ ತಾಲ್ಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನಡೆಯಿತು. ಸೋಮವಾರಪೇಟೆ ಜೆಎಂಎಫ್ಸಿಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೋಕುಲ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿಲ್ಲಬೇಕು. ಇದರ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕಾಗಿದೆ. ಬಾಲಕಾರ್ಮಿಕರು ಕಂಡುಬಂದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು. ವಕೀಲರ ಸಂಘದ ಅಧ್ಯಕ್ಷರಾದ ಕಾಟ್ನಮನೆ ವಿಠ್ಠಲ್ಗೌಡ ಮಾತನಾಡಿ, ಪಾಲಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಪಿಡುಗಾಗಿದೆ. ಪದ್ಧತಿಯನ್ನು ಸಂಪೂರ್ಣವಾಗಿ ನಿಷೇಧಿಸುವ ನಿಟ್ಟಿನಲ್ಲಿ 1986 ರಲ್ಲಿ ಬಾಲ ಕಾರ್ಮಿಕ ನಿಷೇಧ ಕಾಯ್ದೆಯನ್ನು ತರಲಾಗಿದೆ ಎಂದರು. ಕಾನೂನು ಮೀರಿದವರಿಗೆ ತಕ್ಕ ಶಿಕ್ಷೆಯಾಗಲಿದೆ ಎಂದರು. ತಹಸೀಲ್ದಾರ್ ಎಸ್.ಎನ್.ನರಗುಂದ, ಹಿರಿಯ ಕಾರ್ಮಿಕ ಅಧಿಕಾರಿ ಕೆ.ಎನ್.ಲೀನಾ, ತಾಲೂಕು ಕಚೇರಿ, ಕಾರ್ಮಿಕ ಇಲಾಖೆ, ಖಜಾನೆಯ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಇದ್ದರು.
ಮಡಿಕೇರಿ ಜು.2 : ಕಾರು ಮತ್ತು ಈಚರ್ ವಾಹನದ ನಡುವೆ ಡಿಕ್ಕಿ ಸಂಭವಿಸಿ ಅಗ್ನಿ ಕಾಣಿಸಿಕೊಂಡ ಪರಿಣಾಮ ಕಾರು ಚಾಲಕ ಸಜೀವ ದಹನವಾದ ಘಟನೆ ಗುಂಡ್ಲುಪೇಟೆಯ ಹಿರೀಕಾಟಿ ಗೇಟ್ ಬಳಿ ನಡೆದಿದೆ. ಮೈಸೂರಿನ ಮುಜಾಮಿಲ್ ಅಹಮದ್(35) ಮೃತಪಟ್ಟ ಚಾಲಕನಾಗಿದ್ದು, ಈಚರ್ ವಾಹನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಈಚರ್ ವಾಹನದಲ್ಲಿದ್ದವರು ಹೊರಗೆ ಹಾರಿ ಅಪಾಯದಿಂದ ಪಾರಾಗಿದ್ದಾರೆ. ಆದರೆ ಕಾರು ಚಾಲಕ ಹೊರಬರಲಾಗದೆ ಸಜೀವವಾಗಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಚಾಮರಾಜನಗರ ಪೊಲೀಸ್ ವರಿಷ್ಟಾಧಿಕಾರಿ ಪದ್ಮಿನಿ ಸಾಹೋ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋಣಿಕೊಪ್ಪ ಜು.2 : ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಥಮ ವರ್ಷದ ಮಹಾಸಭೆ ಮತ್ತು ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ ಗೋಣಿಕೊಪ್ಪ ಕಕೂನ್ ಸಭಾಂಗಣದಲ್ಲಿ ನಡೆಯಿತು. 2022 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ತಮ್ಮ ಸೋದರ ಮಾವಂದಿರಾದ ದೇಯಂಡ ಪೂಣಚ್ಚ ಹಾಗೂ ಉಮೇಶ್ ಜ್ಞಾಪಕಾರ್ಥದ ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿ, ವಿರಾಜಪೇಟೆ ತಾಲೂಕು ಸಂಘದ ಅಧ್ಯಕ್ಷರಾಗಿದ್ದ ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ ಅವರು ತಮ್ಮ ತಂದೆ ಸಣ್ಣುವಂಡ ಮಾದಪ್ಪ ಹಾಗೂ ತಾಯಿ ಜಾನಕಿ ಮಾದಪ್ಪ ಜ್ಞಾಪಕಾರ್ಥದ ಪರಿಸರ ಕುರಿತ ವರದಿ ಪ್ರಶಸ್ತಿಯನ್ನು ವಿಜಯ ಕರ್ನಾಟಕ ಪತ್ರಿಕೆ ವರದಿಗಾರ ಕೆ. ಬಿ. ಜಗದೀಶ್ ಜೋಡುಬೀಟಿ, ರಾಷ್ಟ್ರೀಯ ಸಮಿತಿ ಸದಸ್ಯರಾಗಿದ್ದ ಎಸ್. ಎ. ಮುರುಳಿಧರ್ ಅವರು ಸಹೋದರ ಗಣೇಶ್ ಜ್ಞಾಪಕಾರ್ಥದ ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆ ವರದಿಗಾರ ಅಣ್ಣೀರ ಹರೀಶ್ ಮಾದಪ್ಪ ಸ್ವೀಕರಿಸಿದರು. ರಾಜ್ಯ ಪ್ರಶಸ್ತಿ ಪಡೆದ…
ಮಡಿಕೇರಿ ಜು.2 : ಕೊಡವ ಕುಟುಂಬ ತಂಡಗಳ ನಡುವೆ ನಡೆಯಲಿರುವ 24ನೇ ವರ್ಷದ ಹಾಕಿ ಪಂದ್ಯಾವಳಿ ‘ಕುಂಡ್ಯೋಳಂಡ ಹಾಕಿ ನಮ್ಮೆ-2024’ರ ಕೈಪಿಡಿ ಬಿಡುಗಡೆ ಮಾಡಲಾಯಿತು. ವೆಸ್ಟ್ ಕೊಳಕೇರಿಯಲ್ಲಿರುವ ಕುಂಡ್ಯೋಳಂಡ ಐನ್ ಮನೆ ಆವರಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಬೋಪಣ್ಣಕೈಪಿಡಿಅನಾವರಣ ಮಾಡಿದರು. ಬಳಿಕ ಮಾತನಾಡಿದ ಪಾಂಡಂಡ ಬೋಪಣ್ಣ, ಪಂದ್ಯಾವಳಿ ಆಯೋಜನೆ ಕೇವಲ ಒಂದು ಕುಟುಂಬದ ಜವಾಬ್ದಾರಿಯಲ್ಲ. ಎಲ್ಲರೂ ಕೈಜೋಡಿಸಿದಾಗ ಮಾತ್ರ ಯಶಸ್ವಿಯಾಗಿ ನಡೆಸಲು ಸಾಧ್ಯ. ಕೊಡವ ಹಾಕಿ ಅಕಾಡೆಮಿ ವತಿಯಿಂದ ಎಲ್ಲಾ ರೀತಿಯ ನೆರವನ್ನು ಕುಂಡ್ಯೋಳಂಡ ಕುಟುಂಬಕ್ಕೆ ನೀಡಲಾಗುವುದುಎಂದು ಭರವಸೆ ನೀಡಿದರು. ಪಂದ್ಯಾವಳಿಗೆ ಒಂದು ವರ್ಷ ಮುಂಚಿತವಾಗಿಯೇ ಬೇಕಾದಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಆರ್ಥಿಕ ಕ್ರೋಢೀಕರಣ ವಿಚಾರದಲ್ಲಿಯೂ ಕುಟುಂಬದ ಪ್ರತಿಯೊಬ್ಬರು ಮುತುವರ್ಜಿ ವಹಿಸಬೇಕು. ಕೈಪಿಡಿಯನ್ನು ಅಚ್ಚುಕಟ್ಟಾಗಿ, ಆಕರ್ಷಕ ರೀತಿಯಲ್ಲಿ ಸಿದ್ಧಪಡಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಹಾಕಿ ಹಬ್ಬ ಸಮಿತಿ ಅಧ್ಯಕ್ಷ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಮಾತನಾಡಿ, ನಮ್ಮದು ಸಣ್ಣ ಕುಟುಂಬ. ಜನಸಂಖ್ಯೆಯಲ್ಲಿಯೂ ಕಡಿಮೆ ಪ್ರಮಾಣದಲ್ಲಿದ್ದೇವೆ. ಪಂದ್ಯಾವಳಿ ಆಯೋಜನೆಯ…
ಮಡಿಕೇರಿ ಜು.2 : ಗೋಣಿಕೊಪ್ಪಲು ರೋಟರಿ ಸಂಸ್ಥೆಗೆ ವಿವಿಧ ಕಾಯ೯ಯೋಜನೆಗಳಿಗಾಗಿ ರೋಟರಿ ಜಿಲ್ಲೆಯಲ್ಲಿ ಪ್ಲಾಟಿನಂ ಪ್ಲಸ್ ಪ್ರಶಸ್ತಿ ದೊರಕಿದೆ. ಮಂಗಳೂರಿನಲ್ಲಿ ಆಯೋಜಿತ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಗೋಣಿಕೊಪ್ಪಲು ರೋಟರಿ ಕ್ಲಬ್ ಅಧ್ಯಕ್ಷೆ ಜೆ.ಕೆ.ಸುಭಾಷಿಣಿ, ಕಾಯ೯ದಶಿ೯ ಅರುಣ್ ತಮ್ಮಯ್ಯ ಮತ್ತು ಸದಸ್ಯರು ಜಿಲ್ಲಾ ರೋಟರಿ ಗವನ೯ರ್ ಆಗಿದ್ದ ಪ್ರಕಾಶ್ ಕಾರಂತ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಗೋಣಿಕೊಪ್ಪಲು ರೋಟರಿ ಸಂಸ್ಥೆಯು 2022-23 ನೇ ರೋಟರಿ ವಷ೯ದಲ್ಲಿ 78 ಯೋಜನೆಗಳನ್ನು ಯಶಸ್ವಿಯಾಗಿ ಕಾಯ೯ಗತಗೊಳಿಸಿತ್ತು. ಪಿರಿಯಾಪಟ್ಟಣದಲ್ಲಿ ಐಕಾನ್ ರೋಟರಿ ಕ್ಲಬ್ ಎಂಬ ಹೊಸ ರೋಟರಿ ಸಂಸ್ಥೆಯನ್ನೂ 54 ಸದಸ್ಯರಿಂದ ಪ್ರಾರಂಭಿಸಲಾಗಿತ್ತು. ಗೋಣಿಕೊಪ್ಪಲು ಸಕಾ೯ರಿ ಪ್ರಾಥಮಿಕ ಶಾಲೆಯ 435 ವಿದ್ಯಾಥಿ೯ಗಳಿಗೆ ಸಮವಸ್ತ್ರ ನೀಡಿಕೆ. ಕಳತ್ತಮಾಡು , ಹೊಸೂರು, ಪಾಲಿಬೆಟ್ಟ ಸಕಾ೯ರಿ ಶಾಲೆಗಳಿಗೆ ಟೇಬಲ್, ಚೇರ್, ಲ್ಯಾಪ್ ಟಾಪ್ ಸೇರಿದಂತೆ 3 ಲಕ್ಷ ಮೌಲ್ಯದ ಪೀಠೋಪಕರಣಗಳನ್ನು ನೀಡಲಾಗಿತ್ತು. ಅಂತೆಯೇ ಗೋಣಿಕೊಪ್ಪ ರೋಟರಿ ಕ್ಲಬ್ ಆಯೋಜಿಸಿದ್ದ ಆರೋಗ್ಯ ಸಿರಿ ಯೋಜನೆಯಡಿಯಲ್ಲಿ ರಕ್ತದಾನ ಶಿಬಿರ, ನೇತ್ರ ಚಿಕಿತ್ಸಾ ಶಿಬಿರಗಳೂ ಸಾವ೯ಜನಿಕರಿಗೆ ಪ್ರಯೋಜನಕಾರಿಯಾಗಿದ್ದವು.…






