ಲೇಖಕ: admin

ನಾಪೋಕ್ಲು ಜು.2 : ಲಯನ್ಸ್ ಕ್ಲಬ್ ನಿಂದ ನಮಗೆ ಏನು ಲಾಭ ಎನ್ನುವ ಬದಲು ನಾವು ಲಯನ್ಸ್ ಕ್ಲಬ್ ಮೂಲಕ ಸಮಾಜಕ್ಕೆ ಏನು ಕೊಡಬಲ್ಲೆವು ಎನ್ನುವುದು ಮುಖ್ಯವಾಗಿರಬೇಕೆಂದು ಲಯನ್ಸ್ ಉಪರಾಜ್ಯಪಾಲೆ  ಭಾರತೀ ಬಿ.ಎಂ ಹೇಳಿದರು.  ಅವರು ನಾಪೋಕ್ಲು ಕೊಡವ ಸಮಾಜದಲ್ಲಿ ಲಯನ್ಸ್  ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಸ್ನೇಹ ವಾತ್ಸಲ್ಯದೊಂದಿಗೆ ಸೇವಾ ಮನೋಭಾವವನ್ನು ವೃದ್ಧಿಸಿಕೊಂಡು ಸಮಾಜಮುಖಿ ಕೆಲಸ ಮಾಡಲು ಲಯನ್ಸ್ ಕ್ಲಬ್  ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಸಮಾಜದ ಒಳಿತಿಗೆ ಪ್ರತಿಯೊಬ್ಬರು ಲಯನ್ಸ್ ಸಂಸ್ಥೆಯ ಜೊತೆ ಕೈಜೋಡಿ ಸಹಕರಿಸುವಂತೆ ಮನವಿ ಮಾಡಿದರು. ನಂತರ  ನೂತನವಾಗಿ ಆಯ್ಕೆಯಾಗಿರುವ ಕ್ಲಬ್ ನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ, ಮಾರ್ಗದರ್ಶನ ನೀಡಿ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಲಯನ್ಸ್ ಕ್ಲಬ್ ನ  ಬ್ಯಾನರ್ ಹಾಗೂ 5. ಸಾವಿರ ರೂ ದೇಣಿಗೆಯನ್ನು ನಾಪೋಕ್ಲು ಕ್ಲಬ್ಬಿನ ಪದಾಧಿಕಾರಿಗಳಿಗೆ ನೀಡಿ ಶುಭ ಹಾರೈಸಿದರು.             ನಿರ್ಗಮಿತ ಅಧ್ಯಕ್ಷ ಕುಂಡಿಯೊಳಂದ ಗಣೇಶ್ ಮುತ್ತಪ್ಪನವರ ಅಧ್ಯಕ್ಷತೆಯಲ್ಲಿ ಜರುಗಿದ…

Read More

ಮಡಿಕೇರಿ ಜು.2 : ಸಿಕ್ಕಿಂ ರಾಜ್ಯದ ಬೌದ್ಧ ಸನ್ಯಾಸಿ ಸಮುದಾಯದ ಸಂಘ ಕ್ಷೇತ್ರದ ಮಾದರಿಯಲ್ಲಿ ಹೊಸ ಸಂಸತ್ ನಲ್ಲಿ ಪ್ರತ್ಯೇಕ ಕೊಡವ ಪ್ರಾತಿನಿಧ್ಯಕ್ಕಾಗಿ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಜು.3 ರಂದು ಬೆಳಗ್ಗೆ 10.30 ಗಂಟೆಗೆ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸೆಂಟ್ರಲ್ ವಿಸ್ಟಾ ಇದಕ್ಕಾಗಿ ಪ್ರತ್ಯೇಕ ವಿಶೇಷ ವರ್ಚುವಲ್ ಮತ್ತು ಅಮೂರ್ತ ಲೋಕಸಭೆ ಸ್ಥಾನಗಳನ್ನು ಅತ್ಯಂತ ಸೂಕ್ಷ್ಮ ಬುಡಕಟ್ಟು ಜನಾಂಗ ಕೊಡವರಿಗೆ ನೀಡಬೇಕೆಂದು ಒತ್ತಾಯಿಸಿ ರಾಷ್ಟçಪತಿಗಳು ಹಾಗೂ ಕೇಂದ್ರ ಸರ್ಕಾರದ ಪ್ರತಿನಿಧಿಗಳಿಗೆ ಜಿಲ್ಲಾಡಳಿತದ ಮೂಲಕ ಮನವಿ ಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ. ಸಿಕ್ಕಿಂ ರಾಜ್ಯದ ಬೌದ್ಧ ಸನ್ಯಾಸಿ ಸಮುದಾಯದ ಸಂಘ ಕ್ಷೇತ್ರದ ಮಾದರಿಯಲ್ಲಿ ಕೊಡವರಿಗೂ ಸಂಸತ್ ನಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಜು.1 : ಜಲ ಮೂಲವನ್ನು ಉಳಿಸಲು ಅರಣ್ಯ ಸಂರಕ್ಷಿಸುವುದು ಅತ್ಯಗತ್ಯ ಎಂದು ಕೊಡಗು ಜಿಲ್ಲೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್.ಮೂರ್ತಿ ಪ್ರತಿಪಾದಿಸಿದ್ದಾರೆ. ಅರಣ್ಯ ಇಲಾಖೆಯ ಪ್ರಾದೇಶಿಕ ವಲಯ, ಸಾಮಾಜಿಕ ಅರಣ್ಯ ವಲಯ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಗರದ ಎಫ್‍ಎಂಸಿ ಕಾಲೇಜಿನಲ್ಲಿ ‘ವನಮಹೋತ್ಸವ ಸಪ್ತಾಹ’ಕ್ಕೆ ಶನಿವಾರ ಗಿಡ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ನದಿ ಮೂಲ ಇರುವುದೇ ಅರಣ್ಯ ಪ್ರದೇಶದಲ್ಲಿ ಎಂಬುದನ್ನು ಯಾರೂ ಸಹ ಮರೆಯಬಾರದು. ಆದ್ದರಿಂದ ಅರಣ್ಯವನ್ನು ರಕ್ಷಿಸಿದಲ್ಲಿ ಪ್ರತಿಯೊಬ್ಬರೂ ಸಮೃದ್ಧಿಯ ಬದುಕು ಕಾಣಬಹುದು ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರು ಹೇಳಿದರು. ಕಾಡು ಉಳಿದರೆ ನಾಡು ಉಳಿದಂತೆ. ಆದ್ದರಿಂದ ಗಿಡ ಮರಗಳನ್ನು ಬೆಳೆಸುವುದರಿಂದ ಅಂತರ್ಜಲ ಮಟ್ಟವನ್ನು ಹೆಚ್ಚಿಸಬಹುದು. ಇದರಿಂದ ಮಳೆಯಾಗುತ್ತದೆ ಎಂದು ಮೂರ್ತಿ ಅವರು ಒತ್ತಿ ಹೇಳಿದರು. ಭೂಮಿಯಲ್ಲಿ ಶೇ.33 ರಷ್ಟು ಅರಣ್ಯ ಇರಬೇಕು. ಆದರೆ ಶೇ.23 ರಷ್ಟು ಮಾತ್ರ ಅರಣ್ಯ ಇದೆ. ಇನ್ನೂ 10 ರಷ್ಟು ಅರಣ್ಯ/…

Read More

ಮಡಿಕೇರಿ ಜು.1 : ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ಹೇಗೆ ರಕ್ಷಣಾ ಕಾರ್ಯ ಕೈಗೊಳ್ಳಬೇಕು ಎಂಬ ಬಗ್ಗೆ ‘ಅಣಕು ಪ್ರದರ್ಶನ’ ಪ್ರಾತ್ಯಕ್ಷಿಕೆಯು ತಾಲ್ಲೂಕಿನ ಹೆಬ್ಬೆಟ್ಟಗೇರಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ನೇತೃತ್ವದಲ್ಲಿ ನಡೆಯಿತು. ಜಿಲ್ಲಾಡಳಿತ, ಎನ್‍ಡಿಆರ್‍ಎಫ್, ಪೊಲೀಸ್ ಮತ್ತು ಅಗ್ನಿಶಾಮಕ, ಗೃಹ ರಕ್ಷಕ ದಳ ಹೀಗೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ‘ಅಣಕು ಪ್ರದರ್ಶನ’ ಪ್ರಾತ್ಯಕ್ಷಿಕೆ ನಡೆಯಿತು. ಭೂಕುಸಿತ, ಪ್ರವಾಹ ಮತ್ತಿತರ ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲಿ ರಕ್ಷಣಾ ಕಾರ್ಯಗಳನ್ನು ಹೇಗೆ ಕೈಗೊಳ್ಳಬೇಕು ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ಅಂತಹ ಸ್ಥಳದಲ್ಲಿ ವಿದ್ಯುತ್ ಕಡಿತಗೊಳಿಸುವುದು, ಘಟನಾ ಸ್ಥಳವನ್ನು ಸೀಲು ಮಾಡುವುದು, ಬಳಿಕ ರಕ್ಷಣಾ ಕಾರ್ಯ ಕೈಗೊಂಡು ಪ್ರಥಮ ಚಿಕಿತ್ಸೆ ನೀಡುವುದು, ಗಂಭೀರ ಗಾಯವಾಗಿದ್ದಲ್ಲಿ ಆಸ್ಪತ್ರೆಗೆ ಕರೆದೊಯ್ಯುವುದು… ಹೀಗೆ 9 ಕ್ಕೂ ಹೆಚ್ಚು ರೀತಿಯ ಅಣಕು ಪ್ರದರ್ಶನ ಜರುಗಿತು. ಅಣಕು ಪ್ರದರ್ಶನದಲ್ಲಿ ಎನ್‍ಡಿಆರ್‍ಎಫ್, ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ದಳ ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಯವರು ಕೈಜೋಡಿಸಿದರು.…

Read More

ಮಡಿಕೇರಿ ಜು.1 : ಭೀಕರ ರಸ್ತೆ ಅಪಘಾತದಲ್ಲಿ ಕೊಡಗು ಜಿಲ್ಲೆಯ ಸೋಮವಾರಪೇಟೆ ಬಳಿಯ ಹಿರಿಕರ ಗ್ರಾಮದ ದಂಪತಿ ಸಾವನ್ನಪ್ಪಿರುವ ಘಟನೆ ಬಿಳಿಕೆರೆ ಬಳಿಯ ರಂಗನಕೊಪ್ಪಲು ಹೆದ್ದಾರಿಯಲ್ಲಿ ನಡೆದಿದೆ. ಕೆಎಸ್‍ಆರ್‍ಟಿಸಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಮೈಸೂರು ಕಡೆಗೆ ಕಾರಿನಲ್ಲಿ ಸಂಚರಿಸುತ್ತಿದ್ದ ನಿವೃತ್ತ ಪ್ರಾಂಶುಪಾಲ ಹಿರಿಕರ ಗ್ರಾಮದ ನಿವಾಸಿ ಹೆಚ್.ಬಿ.ಬೆಳ್ಳಿಯಪ್ಪ (66)ಸ್ಥಳದಲ್ಲೇ ಮೃತಪಟ್ಟರು. ಬೆಳ್ಳಿಯಪ್ಪ ಅವರ ಪತ್ನಿ ವೀಣಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಸಾವನ್ನಪ್ಪಿದ್ದಾರೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಡಿಕೇರಿ ಜು.1 : ಕ್ರೈಸ್ತ ಸಮುದಾಯದವರು ಕಾಂಗ್ರೆಸ್ ಪಕ್ಷದ ಪ್ರಬಲ ಬೆಂಬಲಿಗರಾಗಿದ್ದು, ಈ ಬಾರಿ ಪಕ್ಷದಲ್ಲಿ ಕ್ರೈಸ್ತ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕ್ರಿಶ್ಚಿಯನ್ ಘಟಕ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಸದಸ್ಯ ವಿ.ಎ.ಲಾರೆನ್ಸ್ ಜಿಲ್ಲೆಯಲ್ಲಿ ಕ್ರೈಸ್ತರಿಗೆ ಕಾಂಗ್ರೆಸ್ ಪಕ್ಷದಲ್ಲಿ ಸ್ಥಾನಮಾನದ ಕೊರತೆ ಇದೆ ಎಂದರು. ಕ್ರೈಸ್ತ ಧರ್ಮೀಯರ ಶೇ.98 ರಷ್ಟು ಮತಗಳು ಕಾಂಗ್ರೆಸ್ ಪಕ್ಷಕ್ಕೆ ಚಲಾವಣೆಯಾಗುತ್ತಿದೆ. ಆದರೆ ಪಕ್ಷದಲ್ಲಿ ಸೂಕ್ತ ಪ್ರಾತಿನಿಧ್ಯ ಮಾತ್ರ ದೊರೆಯುತ್ತಿಲ್ಲ. ಈ ಕೊರತೆಯನ್ನು ನೀಗಿಸಲು ಪಕ್ಷದ ರಾಜ್ಯಾಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯ ಶಾಸಕರುಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಸ್ವಾತಂತ್ರ್ಯ ಬಂದ ನಂತರ ಶಿಕ್ಷಣ, ಸಮಾಜ ಸೇವೆ, ವೈದ್ಯಕೀಯ, ಮಾಧ್ಯಮ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಕ್ರೈಸ್ತರು ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ಪಕ್ಷದ ಬಲವರ್ಧನೆಯಲ್ಲೂ ತೊಡಗಿಸಿಕೊಂಡಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಕ್ರೈಸ್ತ ಬಾಂಧವರ ಎಲ್ಲಾ ಕೊಡುಗೆಗಳನ್ನು…

Read More

ಮಡಿಕೇರಿ ಜು.1 : ಕೊಡಗಿನಲ್ಲಿ ಶೇ.33 ರಷ್ಟು ಇರಬೇಕಾಗಿದ್ದ ಅರಣ್ಯ ವ್ಯಾಪ್ತಿಯು ಈಗ ಶೇ.21 ರಷ್ಟು ನಷ್ಟವಾಗಿರುವ ಅರಣ್ಯವನ್ನು ಪುನರ್ ಭರಿಸುವುದು ನಮ್ಮ ಹೊಣೆಯಾಗಿರುತ್ತದೆ. ಯುವಕರು, ಸಾರ್ವಜನಿಕರು ಗಿಡ ನೆಟ್ಟು, ಆ ಗಿಡಕ್ಕೆ ಯಾವುದೇ ಹಾನಿಯಾಗದಂತೆ ರಕ್ಷಿಸಬೇಕು ಎಂದು ಕೊಡಗು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಬಿ ಎನ್.ಎನ್.ಮೂರ್ತಿ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಅರಣ್ಯ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಎನ್‍ಸಿಸಿ ಸಂಯುಕ್ತ ಆಶ್ರಯದಲ್ಲಿ “ನನ್ನ ಗಿಡ ನನ್ನ ಹೆಮ್ಮೆ ” ಎಂಬ ಘೋಷ ವಾಕ್ಯದ ಮೂಲಕ ಕಾಲೇಜಿನ ಮೈದಾನದಲ್ಲಿ ಅರಣ್ಯ ಮಹೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮೊದಲಿಗೆ ಅತಿಥಿ ಗಣ್ಯರು ಹಾಗೂ ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಮಳೆಯ ನಡುವೆಯೂ ವಿದ್ಯಾರ್ಥಿಗಳು ತಮ್ಮ ಹೆಸರಿನಲ್ಲಿ ಒಂದೊಂದು ಗಿಡ ನೆಡುವ ಮೂಲಕ ಸಂಭ್ರಮಿಸಿದರು. ತಾವು ಇನ್ನೆಂದೂ ಮರಗಿಡಗಳನ್ನು ಹಾನಿಗೊಳಿಸುವುದಿಲ್ಲವೆಂದು ಪ್ರತಿಜ್ಞಾ ವಿಧಿಯಂತೆ ಮುನ್ನೆಡೆಯೂದಾಗಿಯೂ ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುಂಡೇಗೌಡ, ಪದ್ಮಶ್ರೀ ಪುರಸ್ಕೃತರಾದ…

Read More

ಮಡಿಕೇರಿ ಜು.1 : ನಾಪೋಕ್ಲು ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿಯ ಹಿನ್ನೆಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ನಿವಾಸಿ ಯೂಸುಫ್ (52) ಹಾಗೂ ಕೇರಳ ಮೂಲದ ರಜಾಕ್ (42) ಎಂಬುವವರನ್ನು 305 ಗ್ರಾಂ ಗಾಂಜಾ ಸಹಿತ ವಶಕ್ಕೆ ಪಡೆದಿದ್ದಾರೆ. ಮಡಿಕೇರಿ ಉಪ ವಿಭಾಗದ ಡಿವೈಎಸ್‍ಪಿ ಎಂ.ಜಗದೀಶ್, ಮಡಿಕೇರಿ ಗ್ರಾಮಾಂತರ ವೃತ್ತದ ಸಿಪಿಐ ಅನೂಪ್ ಮಾದಪ್ಪ, ನಾಪೋಕ್ಲು ಪೊಲೀಸ್ ಠಾಣೆಯ ಪಿಎಸ್‍ಐ ಮಂಜುನಾಥ್ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಕೊಳಕೇರಿ ಬಸ್ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿತು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಕೆ.ರಾಮರಾಜನ್ ಶ್ಲಾಘಿಸಿದ್ದಾರೆ. ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.

Read More

ಮಡಿಕೇರಿ ಜು.1 : ಕುಶಾಲನಗರದ ಶ್ರೀ ಶಿರಡಿ ಸಾಯಿ ಟ್ರಸ್ಟ್ ವತಿಯಿಂದ ಜು.3 ರಂದು ಶ್ರೀ ಶಿರಡಿ ಸಾಯಿ ಮಂದಿರದಲ್ಲಿ ಗುರು ಪೂರ್ಣಿಮೆ ವಿಶೇಷ ಪೂಜೆ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 6.30 ಗಂಟೆಗೆ ಕಾಕಡ ಆರತಿ, 7 ಗಂಟೆಗೆ ಗಣಪತಿ ಹೋಮ, 7.30ಕ್ಕೆ ಸಾಯಿ ಹೋಮ, 8 ಗಂಟೆಗೆ ಪಂಚಾಮೃತ ಅಭಿಷೇಕ ಜರುಗಲಿದೆ. ಬೆಳಿಗ್ಗೆ 8.30 ರಿಂದ ಸಾರ್ವಜನಿಕರಿಂದ ಹಾಲು ಅಭಿಷೇಕ ಜರುಗಲಿದ್ದು,  10 ಗಂಟೆಗೆ ಸಾಮೂಹಿಕ ಸತ್ಯನಾರಾಯಣ ಪೂಜೆ, 12.30ಕ್ಕೆ ಮಹಾಮಂಗಳಾರತಿ  ನೆರವೇರಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಶ್ರೀ ಶಿರಡಿ ಸಾಯಿ ಟ್ರಸ್ಟ್ ನ ಪ್ರಮುಖರು ಹಾಗೂ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಸೋಮವಾರಪೇಟೆ ಜು.1 :  ತಾಲೂಕು ಕಚೇರಿಯಲ್ಲಿ ಶಿರಸ್ತೇದಾರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎಸ್.ವೆಂಕಟೇಶ್  ಅವರನ್ನು ಸೋಮವಾರಪೇಟೆ ತಾಲೂಕು ಕಚೇರಿ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ತಾಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಎಸ್.ಎನ್.ನರಗುಂದ್  ಅಧ್ಯಕ್ಷೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಳೆದ 35 ವರ್ಷಗಳ ಸೇವೆಯಿಂದ ನಿವೃತ್ತಿ ಹೊಂದಿದ ವೆಂಕಟೇಶ್ ಅವರನ್ನು ತಾಲೂಕು ಕಚೇರಿಯ ಎಲ್ಲಾ ಸಿಬ್ಬಂದಿಗಳು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು. ಈ ಸಂದರ್ಭ ಮಾತನಾಡಿದ ತಹಶೀಲ್ದಾರ್ ವೆಂಕಟೇಶ್ ವೃತ್ತಿಯಲ್ಲಿ ಅನುಭವಸ್ಥರು ಅವರಿಗೆ ವಹಿಸಿದ ಕೆಲಸಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದರು.  ಖಚೇರಿಗೆ ಬರುವ ಜನಸಾಮಾನ್ಯ ರೊಂದಿಗೆ ಸೌಜನ್ಯ ದಿಂದ ವರ್ತಿಸುತ್ತಿದ್ದರು,ಸರಳ ವ್ಯಕ್ತಿತ್ವ ಹೊಂದಿರುವ ಪ್ರಾಮಾಣಿಕ ವ್ಯಕ್ತಿ ಎಂದರು. ಶಿರಸ್ತೇದಾರ್ ಗಳಾದ ಲೋಹಿತ್, ಸುಶೀಲ ಪಳಂಗಪ್ಪ , ರಾಜಸ್ವ, ನಿರೀಕ್ಷಕ ಪ್ರಹ್ಲಾದ್ , ತಾಲೂಕು ಕಚೇರಿ ಹಾಗೂ ನಾಡಕಚೇರಿ  ಸಿಬ್ಬಂದಿಗಳು  ಹಾಜರಿದ್ದರು.  

Read More