ಲೇಖಕ: admin

ಮಡಿಕೇರಿ ಆ.1 :   ಉಡುಪಿಯ ಬನ್ನಂಜೆಯಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕಿಯರ ಹಾಸ್ಟೆಲ್‌ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಭೇಟಿ ನೀಡಿದರು. ಈ ಸಂದರ್ಭ  ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿ, ಊಟ, ವಸತಿ ಸೇರಿದಂತೆ ಇನ್ನಿತರೆ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು.   

Read More

ಮಡಿಕೇರಿ ಆ.1 : ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ವತಿಯಿಂದ ಕಕ್ಕಡ ಪದ್‍ನೆಟ್ಟ್ ಆಚರಣೆ ಆ.3 ರಂದು ಅಖಿಲ ಕೊಡವ ಸಮಾಜದ ಕಟ್ಟಡದಲ್ಲಿ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವ ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ, ಅಂದು ಬೆಳಗ್ಗೆ 10.30 ಗಂಟೆಗೆ ಕೂಟದ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಮಡಿಕೇರಿ ಅಕಾಶವಾಣಿ ಕೇಂದ್ರದಲ್ಲಿ 30 ವರ್ಷಗಳ ಕಾಲ ಉದ್ಘೋಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಕೂಪದಿರ ಶಾರದಾ ನಂಜಪ್ಪ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಹ್ಮಣಿ, ಉಪಾಧ್ಯಕ್ಷ ಅಜ್ಜಿಕುಟ್ಟೀರ ಸುಬ್ರಹ್ಮಣಿ, ಕಾರ್ಯದರ್ಶಿ ಅಮ್ಮಣಿಚಂಡ ರಾಜ ನಂಜಪ್ಪ, ಖಜಾಂಚಿ ಮಂಡೆಪಂಡ ಸುಗುಣ ಮುತ್ತಣ್ಣ ಹಾಗೂ ಪೊಮ್ಮಕ್ಕಡ ಕೂಟದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ರಾಣು ಅಪ್ಪಣ್ಣ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ…

Read More

ಮಡಿಕೇರಿ ಆ.1 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಮಡಿಕೇರಿ ಕೊಡಗು ಗೌಡ ಯುವ ವೇದಿಕೆ ಹಾಗೂ ನರಿಯಂದಡ ಅಯ್ಯಪ್ಪ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಆ.13 ರಂದು ಪಾರಾಣೆಯಲ್ಲಿ ‘ಆಟಿ ಜಂಬರ-2023’ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅಯ್ಯಪ್ಪ, ಯುವಕ ಸಂಘದ ಗೌರವ ಅಧ್ಯಕ್ಷ ತೋಟಂಬೈಲು ಅನಂತ ಕುಮಾರ್, ಅಂದು ಬೆಳಿಗ್ಗೆ 9 ಗಂಟೆಗೆ ಪಾರಾಣೆ ಗೌಡ ಸಮಾಜದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಪಾರಾಣೆ ಗೌಡ ಸಮಾಜದ ಅಧ್ಯಕ್ಷ ಮುಕ್ಕಾಟಿ ಕುಶಾಲಪ್ಪ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ನರಿಯಂದಡ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷ ಬೆಳಿಯಂಡ್ರ ಹರಿಪ್ರಸಾದ್ ವಹಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ನರಿಯಂದಡ ಅಯ್ಯಪ್ಪ ಯುವಕ ಸಂಘದ ಸ್ಥಾಪಕ ಅಧ್ಯಕ್ಷ ಹಾಗೂ ಮಾಜಿ ಸೈನಿಕ ಬೆಳಿಯಂಡ್ರ ಲಕ್ಷ್ಮಣ್ ಪಾಲ್ಗೊಳ್ಳಲಿದ್ದು, ಕೊಡಗು ಗೌಡ ಯುವ ವೇದಿಕೆ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಗೌರವ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು. ತೋಟಂಬೈಲ್ ಅನಂತ್‍ಕುಮಾರ್ ಅವರ ಒಕ್ಕಣೆ ನಂತರ ನಾಟಿ ನೆಡಲಾಗುವುದು. ನಂತರ ಬೆಳಿಗ್ಗೆ…

Read More

ಮಡಿಕೇರಿ ಆ.1 : ಪರಿಶುದ್ಧ ಉಮ್ರಾ ನಿರ್ವಹಿಸಲು ಕೊಡಗು ಜಿಲ್ಲೆಯಿಂದ ತೆರಳುತ್ತಿರುವ ಸುಮಾರು 50 ಕ್ಕೂ ಅಧಿಕ ಉಮ್ರ ಯಾತ್ರಾರ್ಥಿಗಳಿಗೆ ಸುಂಟಿಕೊಪ್ಪ ಎಸ್‍ಎಂಎಸ್ ಅರಬಿಕ್ ಕಾಲೇಜಿನ ವತಿಯಿಂದ ಉಮ್ರಾ ತರಬೇತಿ ಶಿಬಿರ ಮತ್ತು ಬೀಳ್ಕೊಡುಗೆ ಸಮಾರಂಭ ನಡೆಯಿತು. ಎಸ್‍ಎಂಎಸ್ ಸಂಸ್ಥೆಯ ಕಾರ್ಯದರ್ಶಿ ಸಿ.ಎಂ.ಹಮೀದ್ ಮುಸ್ಲಿಯಾರ್ ಮಾತನಾಡಿ ಎಸ್‍ಎಂಎಸ್ ಅರಬಿಕ್ ಕಾಲೇಜಿನ ಅಧ್ಯಕ್ಷರಾದ ಉಮ್ಮರ್ ಫೈಝಿ ಅವರ ನೇತೃತ್ವದಲ್ಲಿ ಸುಮಾರು 7 ವರ್ಷಗಳಿಂದ ನೂರಾರು ಮಂದಿಯನ್ನು ಪರಿಶುದ್ಧ ಮಕ್ಕಾಗೆ ಉಮ್ರ ನಿರ್ವಹಿಸಲು ಮತ್ತು ಪ್ರವಾದಿ ಮುಹಮ್ಮದ್ ಪೈಗಂಬರ ಅವರು ಅಂತಿಮ ವಿಶ್ರಾಂತಿ ಪಡೆಯುತ್ತಿರುವ ಮದೀನಾ ಶರೀಫನ್ನು ಸಂದರ್ಶಿಸಲು ಅವಕಾಶವನ್ನು ಕಲ್ಪಿಸಲಾಗುತ್ತಿದೆ. ಕೊಡಗು ಜಿಲ್ಲೆಯಿಂದ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗಿ ಕರೆ ತರುವ ಕಾರ್ಯವನ್ನು ಉತ್ತಮ ರೀತಿಯಲ್ಲಿ ನಡೆಸುತ್ತಿದೆ ಎಂದರು. ಸಂಸ್ಥೆಯ ಮೂಲಕ ನಡೆಯುತ್ತಿರುವ ಈ ಯಾತ್ರೆ ಪಾರದರ್ಶಕ ಮತ್ತು ಅತ್ಯುತ್ತಮ ಸೇವೆಯಾಗಿ ಯಾತ್ರೆ ಕೈಗೊಂಡವರ ಪ್ರಶಂಸೆಗೆ ಪಾತ್ರವಾಗಿದೆ. ಮಕ್ಕ ಮದೀನದ ಎರಡು ಹರಮ್ ಶರೀಫುಗಳ ಅತಿ ಹತ್ತಿರವೇ ಯಾತ್ರಾರ್ಥಿಗಳಿಗೆ ವಸತಿಗಳನ್ನು ಒದಗಿಸಿಕೊಡಲಾಗುತ್ತಿದೆ. ಉಮ್ರ ತವಾಫ್…

Read More

ಸೋಮವಾರಪೇಟೆ ಆ.1 : ಕಾವ್ಯ ಲಲಿತ ಕಲೆ ಗಳಲ್ಲೊಂದು, ಇತರ ಕಲೆಗಳಿಗಿಂತ ಭಿನ್ನವಾಗಿ ಒಂದು ವೈಶಿಷ್ಟ ವನ್ನು ಪಡೆದುಕೊಂಡಿದೆ ಎಂದು ಪ್ರಾದ್ಯಪಕ, ಸಾಹಿತಿ, ಜಾನಪದ ವಿದ್ವಾಂಸ ಡಾ. ಮೋಹನ್ ಪಾಳೇಗಾರ್ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಸಮಾಜದಲ್ಲಿ ನಡೆದ “ನೆಲ ಮುಗಿಲು” ಕವನ ಸಂಕಲನ ಬಿಡುಗಡೆಗೊಳಿಸಿ ಮಾತನಾಡಿದರು. ಅನ್ಯ ಕಲೆಗಳಲ್ಲಿ ಒಂದಕ್ಕೊಂದು ಅದರದೆಯಾದ ಮಾದ್ಯಮವುಂಟು, ಕಾವ್ಯಕ್ಕೆ ಹಾಗೆ ಪ್ರತ್ಯೇಕವಾದ ಮಾಧ್ಯಮವಿಲ್ಲ ಕಾವ್ಯ ಸಾರ್ಥಕವಾಗಬೇಕಾದರೆ ಅದು ಓದುಗರ ಹೃದಯಕ್ಕೆ ಮುಖ ಮಾಡಿರಬೇಕು. ಅವರ ಹೃದಯವನ್ನು ಮುಟ್ಟಬೇಕು ತಟ್ಟಬೇಕು ಇಲ್ಲವಾದರೆ ಅಂತಹ ಕಾವ್ಯ ನಿರರ್ಥಕವಾಗುತ್ತದೆ. ಬಾಹ್ಯ ವಸ್ತುಗಳು ಕವಿಗೆ ಮುಖ್ಯವಲ್ಲ ಅವುಗಳು ನಿಮಿತ್ತ ಮಾತ್ರ, ಅವನು ತಾನು ಅನುಭವಿಸಿದಂತೆ ಚಿತ್ರಿಸಬೇಕು ಎಂದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಜಲಜಾ ಶೇಖರ್ ವಿರಚಿತ “ನೆಲಮುಗಿಲು ಕವನ ಸಂಕಲನ ಮೊದಲ ಪ್ರಯತ್ನದಲ್ಲೇ ಸದನ ಕದನ…

Read More

ನಾಪೋಕ್ಲು ಆ.1 : ನಾಪೋಕ್ಲು ಕೊಡವ ಸಮಾಜದ ಮೊಮ್ಮಕ್ಕಡ ಪರಿಷತ್ ವತಿಯಿಂದ ಆ.3ರಂದು ಮೂರನೇ ವರ್ಷದ ಕಕ್ಕಡ 18ರ ತೀನಿ ನಮ್ಮೆಯನ್ನು ಹಮ್ಮಿಕೊಳ್ಳಲಾಗಿದ್ದು, ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿ ಸಭಾಂಗಣದಲ್ಲಿ ವಿವಿಧ ತಿನಿಸುಗಳ ಪ್ರದರ್ಶನ ಮತ್ತು ಪೈಪೋಟಿಯನ್ನು ಏರ್ಪಡಿಸಲಾಗಿದೆ ಎಂದು ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಮೂವೇರ ರೇಖಾ ಪ್ರಕಾಶ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಮಕ್ಕಳು ಹಳೆ ಕಾಲದ ತಿಂಡಿತಿನಿಸುಗಳನ್ನು ಮರೆಯುತ್ತಿದ್ದಾರೆ. ಅಂತಹ ತಿಂಡಿತಿನಿಸುಗಳು ಚರಿತ್ರೆಯಲ್ಲಿ ಮರೆತು ಹೋಗುವ ಸಾಧ್ಯತೆಇದೆ. ಅದನ್ನು ದಾಖಲಿಸುವ ಹಿನ್ನೆಲೆಯಲ್ಲಿ ಕಕ್ಕಡ 18ರ ತೀನಿ ನಮ್ಮೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು. ತೀನಿ ನಮ್ಮೆಯ ಪೈಪೋಟಿಯಲ್ಲಿ ಪ್ರದರ್ಶನಕ್ಕಿರಿಸುವ ತಿನಿಸುಗಳನ್ನು ತೀರ್ಪುಗಾರರು ಪರೀಕ್ಷಿಸಲಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಈ ಸಂದರ್ಭ ಸಾಧಕ ಮಹಿಳೆಯರನ್ನು ಗೌರವಿಸಲಾಗುವುದು ಎಂದರು. ಅಂದಿನ ಕಾರ್ಯಕ್ರಮವನ್ನು ಪರಿಷತ್ ಖಜಾಂಚಿ ಮೂವೇರ ಧರಣಿ ಗಣಪತಿ ಉದ್ಘಾಟಿಸಲಿದ್ದಾರೆ. ತಿನಿಸುಗಳ ಪ್ರದರ್ಶನವನ್ನು ನಿವೃತ್ತ ಪೋಸ್ಟ್ ಮಾಸ್ಟರ್ ಪೆಬ್ಬಾಟಂಡ ಪುಷ್ಪ ತಮ್ಮಯ್ಯ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡವ ಸಮಾಜದ ಅಧ್ಯಕ್ಷ ಅಪ್ಪಚೆಟ್ಟೋಳಂಡ…

Read More

ನಾಪೋಕ್ಲು ಆ.1 : ಕೊಡವ ಜನಾಂಗ ಪಕ್ಷಾತೀತವಾಗಿ ಒಗ್ಗೂಡಿ ಕೆಲಸ ನಿರ್ವಹಿಸಿದರೆ ಜಿಲ್ಲೆಯ ಪ್ರಗತಿ ಸಾಧ್ಯ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ನಾಪೋಕ್ಲು ಕೊಡವ ಸಮಾಜದ ಆಶ್ರಯದಲ್ಲಿರುವ ಕ್ರೀಡಾ ಸಾಂಸ್ಕೃತಿಕ ಮತ್ತು ಮನೋರಂಜನಾ ಕೂಟದ ವಾರ್ಷಿಕ ಒತ್ತೋರ್ಮೆ ಕೂಟದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಚುನಾವಣೆ ಅವಧಿಯಲ್ಲಿ ಪಕ್ಷಕ್ಕಾಗಿ, ಗೆಲುವಿಗಾಗಿ ಹೋರಾಟ ನಡೆಸುವುದು ಅನಿವಾರ್ಯ. ಬಳಿಕ ಸಾಮಾಜಿಕ ಸೇವೆಯಲ್ಲಿ ಪಕ್ಷಾತೀತವಾಗಿ ಕಾರ್ಯನಿರ್ವಹಿಸಿದರೆ ಎಲ್ಲರ ವಿಶ್ವಾಸಗಳಿಸಲು ಸಾಧ್ಯ ಎಂದರು. ಜನಾಂಗಗಳ ನಡುವೆ ದ್ವೇಷಸಾಧನೆ, ವೈಯಕ್ತಿಕ ಅವಹೇಳನ, ತೇಜೋವಧೆ ಮಾಡುವುದರಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ. ಯುವ ಜನಾಂಗಕ್ಕೆ, ಮುಂದಿನ ಪೀಳಿಗೆಗೆ ಸಾರ್ವಜನಿಕ ವಲಯದಲ್ಲಿ ಸೇವೆ ಸಲ್ಲಿಸಲು ವಿಫಲ ಅವಕಾಶ ಇದೆ. ಅದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು. ನಾಪೋಕ್ಲುವಿನಲ್ಲಿ ಸಮುದಾಯ ಆರೋಗ್ಯ ಕೇಂದ್ರವಿದ್ದು, ಜನ ಸಾಮಾನ್ಯರಿಗೆ ಮತ್ತಷ್ಟು ಅನುಕೂಲವಾಗುವ ನಿಟ್ಟಿನಲ್ಲಿ ಅಭಿವೃದ್ಧಿಪಡಿಸಲಾಗುವುದು. ಡಯಾಲಿಸಿಸ್ ಕೇಂದ್ರವನ್ನು ಸ್ಥಾಪಿಸಲು ಬೇಡಿಕೆ ಇದ್ದು, ನಾಪೋಕ್ಲುವಿನಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ವಿಧಾನ…

Read More

ಮಡಿಕೇರಿ ಆ.1 : ಕೊಡಗು ಜಿಲ್ಲಾ ಪೊಲೀಸ್ ಘಟಕದ ವಿವಿಧ ಠಾಣೆ, ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸಿ ಜು.31 ರಂದು ನಿವೃತ್ತಿ ಹೊಂದಿದ  ಸಿಪಿಐ ಹೆಚ್.ಜೆ ಶಿವಶಂಕರ್, ಎಎಸ್‌ಐ ಟಿ.ಎಂ ಸುರೇಶ್, ಎಎಸ್‌ಐ ಕೆ.ಹೆಚ್‌ ಮೊಹಿದೀನ್ ಅವರನ್ನು ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.

Read More

ಮಡಿಕೇರಿ ಆ.1 : ಓಂ ಯುವಕ ಸಂಘದ ಆಶ್ರಯದಲ್ಲಿ ಅರ್ವತೋಕ್ಲು ಅಪ್ಪಂಗಳದ ಶ್ರೀಪತಿ ಹೆಬ್ಬಾರ್ ಅವರ ಗದ್ದೆಯಲ್ಲಿ ನಡೆದ ಹಿಂದೂ ಕಪ್ ಕೆಸರುಗದ್ದೆ ಕ್ರೀಡಾಕೂಟದ ಸಮಾರಂಭದಲ್ಲಿ ಊರಿನ ಹಿರಿಯರು ಹಾಗೂ ದಾನಿಗಳಾದ ಶಂಕರ ನಾರಾಯಣ ಭಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Read More

ಮಡಿಕೇರಿ ಆ.1 :  ಕರಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನೂತನ ಘಟಕವನ್ನು ರಚಿಸಲಾಗಿದ್ದು, ವಿಶ್ವಹಿಂದೂ ಪರಿಷತ್ ಅಧ್ಯಕ್ಷರಾಗಿ ಜಯಪ್ರಕಾಶ್ ಗುಡ್ಡೆಮನೆ, ಬಜರಂಗದಳ ಸಂಚಾಲಕರಾಗಿ ವಿನೋದ್ ಕುಮಾರ್ ನೇಮಕಗೊಂಡಿದ್ದಾರೆ. ವಿಶ್ವಹಿಂದೂ ಪರಿಷತ್ ಕಾರ್ಯದರ್ಶಿಯಾಗಿ ಜಯಂತ್ ಪೆತ್ತಾಜೆ, ಬಜರಂಗದಳ ಸಹ ಸಂಚಾಲಕರಾಗಿ ರಕ್ಷಿತ್ ಕಂಡಿಗೆ, ವಿಶ್ವಹಿಂದೂ ಪರಿಷತ್ ಸೇವಾ ಪ್ರಮುಖ್ ಕೋಡಿ ಭಾರ್ಗವ ಜಯಪ್ರಕಾಶ್,  ಸತ್ಸಂಗ ಪ್ರಮುಖ್ ರಾಜೇಶ್ ಚೆತ್ತುಕಾಯ, ಬಜರಂಗದಳ ಗೋರಕ್ಷಕ ಪ್ರಮುಖ್ ಪ್ರಸನ್ನ ಕುಮಾರ್, ಸುರಕ್ಷಾ ಪ್ರಮುಖ್ ದಿಲಿಪ್ ಕುಮಾರ್, ಅಖಾಡ ಪ್ರಮುಖ್ ಚೇತನ್ ಹುಲಿಮನೆ ಆಯ್ಕೆಯಾಗಿದ್ದಾರೆ. ಕರಿಕೆ ವಿಎಸ್‍ಎಸ್‍ಎನ್‍ಎಲ್ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮದಲ್ಲಿ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯಕ್ರಮವನ್ನು  ಹಿರಿಯರಾದ ಕೋಡಿ ಪೊನ್ನಪ್ಪ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ವಿಶ್ವಹಿಂದೂ ಪರಿಷತ್ತಿನ ಸುಳ್ಯ ತಾಲೂಕಿನ ಅಧ್ಯಕ್ಷ  ಸೋಮಶೇಖರ್ ಪೈಕ  ಕರಿಕೆಯ ನೂತನ ಪದಾಧಿಕಾರಿಗಳಿಗೆ ಶಾಲು ಹೊದಿಸಿ ಜವಾಬ್ದಾರಿ ನೀಡಿದರು. ಈ ಸಂದರ್ಭ ಸುಳ್ಯ ತಾಲೂಕಿನ ವಿಶ್ವ ಹಿಂದೂ ಪರಿಷತ್ ಸಹಕಾರ್ಯದರ್ಶಿ ಬಾನು ಪ್ರಕಾಶ್ ಪೆರುಮುಂಡ, ಸುಳ್ಯ…

Read More