ಲೇಖಕ: admin

ವಿರಾಜಪೇಟೆ ಜು.1 :  ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ, ಮಕ್ಕಳ ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜು.2 ರಂದು ವಿರಾಜಪೇಟೆಯಲ್ಲಿ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎ.ಎಸ್ ಮುಸ್ತಫ ತಿಳಿಸಿದ್ದಾರೆ. ಜು.2 ರಂದು ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆಯ ಎ-ಟು-ಜೆಡ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ  ರೆಜಿತ್ ಕುಮಾರ್ ಗುಹ್ಯ ಅವರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಲಿದೆ. ಜಿಲ್ಲಾ ವೀಕ್ಷಕರಾಗಿ ಆನಂದ್ ಕೊಡಗು ಪಾಲ್ಗೊಳ್ಳಲಿದ್ದು, ಜಿಲ್ಲಾಧ್ಯಕ್ಷರಾದ ಬಿ.ಆರ್ ಸವಿತಾರೈ, ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ರಾಷ್ಟ್ರೀಯ ಸಮಿತಿ ಸದಸ್ಯರಾದ ಸುನಿಲ್ ಪೊನ್ನೇಟಿ, ರಾಜ್ಯ ಸಮಿತಿ ಸದಸ್ಯರಾದ ಟಿ.ಎನ್ ಮಂಜುನಾಥ್, ತಾಲ್ಲೂಕು ಸಂಘದ ಉಪಾಧ್ಯಕ್ಷ ಪುತ್ತಂ ಪ್ರದೀಪ್ ಭಾಗವಹಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮಕ್ಕಳ ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದ್ದು, ದತ್ತಿ ಪ್ರಶಸ್ತಿ ಸ್ಥಾಪಿಸಿರುವ ವಿರಾಜಪೇಟೆಯ ಪ್ರಗತಿ ಶಾಲೆಯ ವ್ಯವಸ್ಥಾಪಕ ಮಾದಂಡ ತಿಮ್ಮಯ್ಯ, ಸಿದ್ದಾಪುರದ ಸಮಾಜ ಸೇವಕ  ಕೆ.ಯು.ಅಬ್ದುಲ್…

Read More

ಮಡಿಕೇರಿ ಜು 1 : ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕಳೆದ ಆರು ವರ್ಷಗಳಿಂದ ನಮ್ಮ ಜನಾಂಗದ ಸಂಘಟನೆ ಹಾಗೂ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುವುದರೊಂದಿಗೆ ನಮ್ಮ ಸಂಸ್ಕೃತಿ, ಆಚಾರ, ವಿಚಾರಗಳ ಉಳಿಸುವ ಸಂಕಲ್ಪದೊಂದಿಗೆ ಹಲವು ಹೋರಾಟ ನಡೆಸುತ್ತಿದೆ. ಇದರ ಭಾಗವಾಗಿ ಜು.5 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನೂತನ ಶಾಸಕರು, ಸಚಿವರಿಗೆ ಗೌರವ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ  ಹೆಚ್.ಎಂ. ದಿವಾಕರ್ ತಿಳಿಸಿದರು. ನಗರದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತೀಯ ಸಂಸ್ಕೃತಿ,ನಾಡು ನುಡಿ ರಕ್ಷಣೆಯೊಂದಿಗೆ ನಮ್ಮ ಜನಾಂಗದ ಉನ್ನತಿಯೂ ಮುಖ್ಯವಾಗಿದೆ. ರಾಜಕೀಯ ಕ್ಷೇತ್ರದಲ್ಲಿ ಈ ಹಿಂದಿನಿಂದಲೂ ನಮ್ಮ ಸಮುದಾಯದ ಕೊಡುಗೆ ಅಪಾರ ಹಾಗೂ ಗಮನಾರ್ಹವಾದದು ಎಂದರು. ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲೂ ವಿವಿಧ ಪಕ್ಷಗಳಿಂದ ನಮ್ಮ ಸಮುದಾಯದವರು ಜಯಗಳಿಸಿದ್ದಾರೆ. ಪ್ರಸ್ತುತ ಇರುವ ಲೋಕಸಭೆಯಲ್ಲಿ ಹಲವು ಮಂದಿ ಸಂಸದರಾಗಿದ್ದಾರೆ, ಕೇಂದ್ರ ಸಚಿವರಾಗಿರುವ ಹೆಮ್ಮೆಯ ಸಂಗತಿ ಹಾಗೂ ಇವರುಗಳನ್ನು ಅಭಿನಂದಿಸುವ ಗೌರವಿಸುವ ಜವಾಬ್ದಾರಿ ನಮ್ಮದು.…

Read More

ವಿರಾಜಪೇಟೆ ಜು 1 : ದೇವಣಗೇರಿ ಸಹಕಾರ ದವಸ ಭಂಡಾರ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾಕೇಂದ್ರದ ಸುತ್ತಮತ್ತ ಬಿಟ್ಟಂಗಾಲ ವಿಪತ್ತು ನಿರ್ವಹಣೆ ಘಟಕದ ವತಿಯಿಂದ ಶ್ರಮದಾನ ನಡೆಸಲಾಯಿತು. ಆವರಣವನ್ನು ಕಳೆ ಹೊಡೆಯುವ ಯಂತ್ರದಿಂದ ಸ್ವಚ್ಛತೆ ಮಾಡಲಾಯಿತು. ಶ್ರಮದಾನದಲ್ಲಿ ವಿಪತ್ತು ತಂಡದ ಸಂಯೊಜಕಿ ರೇಖಾ ಗಣೇಶ್ ಸ್ವಯಂ ಸೇವಕರಾದ ಜೀವನ್ ನವಜೀವನ ಸಮಿತಿ ಸದಸ್ಯರಾದ ರಮೇಶ್, ಜ್ಞಾನವಿಕಾಸ ಕೇಂದ್ರದ ಸದಸ್ಯರು ಭಾಗವಹಿಸಿದ್ದರು.

Read More

ಕಡಂಗ ಜೂ.30 :  ಮೀತಲ್ತಂಡ ಅಕ್ಬರ್ ಅವರು ದುಬಾಯಿಯಲ್ಲಿರುವ ಕೊಡಗಿನ ಕ್ರೀಡಾಪಟುಗಳಿಗಾಗಿ ಆಯೋಜಿಸಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಫೋರ್ ಸ್ಟಾಲ್ ಎಡಪಲ ತಂಡವು ಬಲಿಷ್ಠ ಆರ್ ವೈ ಸಿ ಎಮ್ಮೆಮಾಡು ತಂಡವನ್ನು ಮಣಿಸುವುದರ ಮೂಲಕ ದುಬಾಯಿ ವಾಲಿಬಾಲ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಇದಕ್ಕೂ ಮುನ್ನ ನಡೆದ ಪ್ರಥಮ ಸೆಮಿಫೈನಲ್ ಪಂದ್ಯದಲ್ಲಿ ಫೋರ್ ಎಡಪಲ ತಂಡವು ಬಲಿಷ್ಠ ಗುಂಡಿಕೆರೆ ತಂಡವನ್ನು ಮಣಿಸಿ ಪೈನಲ್ ಹಂತ ಪ್ರವೇಶಿಸಿದರೆ ಆರ್ ವೈ ಸಿ ಎಮ್ಮೆಮಾಡು. ತಂಡವು ಹೊದವಾಡ ತಂಡವನ್ನು ಮಣಿಸಿ ಫೈನಲ್ ಗೆ ಪ್ರವೇಶಿಸಿದವು. ಉತ್ತಮ ಹೊಡೆತಗಾರ ಪ್ರಶಸ್ತಿಯನ್ನು ಎಡಪಲ ತಂಡದ ಯಹ್ಯಾ ಅವರು ಪಡೆದರೆ ಆಲ್ ರೌಂಡರಾಗಿ ಎಮ್ಮೆಮಾಡುವಿನ ಆಶಿಕ್  ಆಯ್ಕೆಯಾದರು. ಪಂದ್ಯಾವಳಿಯಲ್ಲಿ ಕೊಡಗು ಸುನ್ನಿ ವೆಲ್ಪೇರ್ ಅಸೋಶಿಯೇಷನ್ ಸಾರಥಿಗಳಾದ ರಿಯಾಝ್ ಕೊಂಡಂಗೇರಿ, ಹಂಝ ಪೊನ್ನಂಪೇಟೆ, ಸಲೀಂ ಗುಂಡಿಕೆರೆ, ಹಮೀದ್ ಚಾಮಿಯಾಲ, ಹಸನ್ ಹಾಜಿ ಚಾಮಿಯಾಲ, ಹಾಗೂ ಟ್ರೋಪಿ ಧಾನಿಗಳಾದ ಮಾರ್ಷಲ್ ಪಿಟ್ನೆಸ್ ನೌಶಾದ್ ಕೊಂಡಂಗೇರಿ ,ಜೀಮೇಕ್ ಗಪೂರ್ ಎಮ್ಮೆಮಾಡು,ಮಿಡೆಕ್ಸ್ ಹಮೀದ್ ಚಾಮಿಯಾಲ, ಮುತಾದವರು…

Read More

ಸುಂಟಿಕೊಪ್ಪ,ಜೂ.30 : ಏಳು ಗ್ರಾ.ಪಂ ಗಳನ್ನು ಒಳಗೊಂಡು ಸುಮಾರು 25 ಸಾವಿರ ಜನ ಸಂಖ್ಯೆಗೆ ಆಧಾರವಾಗಿರುವ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸರಕಾರದ ನಿಯಮಗಳ ಅಡಿಯಲ್ಲಿ ಮೇಲ್ದರ್ಜೆಗೇರಿಸಲು ಆದ್ಯತೆ ಮೇರೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಶಾಸಕ ಡಾ.ಮಂಥರ್‍ಗೌಡ ಭರವಸೆ ನೀಡಿದರು. ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಶಾಸಕರು ಆಸ್ಪತ್ರೆಯ ಆವರಣ ಸುತ್ತು ಪರಿಶೀಲಿಸಿ, ವೈದ್ಯಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭ ಆಸ್ಪತ್ರೆಯ ಹಿಂಭಾಗದಲ್ಲಿ ಬೆಳೆದು ನಿಂತಿರುವ ಕಾಡುಗಿಡ ಗಂಟಿಗಳನ್ನು ತೆಗೆಯುವಂತೆ ಸೂಚಿಸಿದರಲ್ಲದೆ 3 ದಿನಗಳ ಗಡವು ನೀಡಿ, ಜನರ ಆರೋಗ್ಯ ಕಾಪಾಡಬೇಕಿರುವ ಆರೋಗ್ಯ ಕೇಂದ್ರ ಹೀಗಿರುವುದು ಎಷ್ಟು ಸರಿಯೆಂದು ಅಸಾಮಾಧಾನ ವ್ಯಕ್ತಪಡಿಸಿದರು. ಸ್ವತಃ ವೈದ್ಯರಾಗಿರುವ ಶಾಸಕ ಡಾ.ಮಂಥರ್ ಗೌಡ ಆಸ್ಪತ್ರೆಯಲ್ಲಿನ ಹೊರರೋಗಿಗಳು ಮತ್ತು ಒಳ ರೋಗಿಗಳನ್ನು ಮಾತನಾಡಿಸಿ, ಅವರಲ್ಲಿ ಜ್ವರದಿಂದ ಬಳಲುತ್ತಿರುವವರ ಸ್ಥಿತಿ ಗತಿ ಏನೆಂಬುದನ್ನು ತಿಳಿದರು. ಇದೇ ಆರೋಗ್ಯ ಇಲಾಖೆಯ ಸಿಬ್ಬಂದಿಗಳಲ್ಲಿ ಅನಾರೋಗ್ಯ ಇರುವುದರ ಕುರಿತು ಮಾಹಿತಿ ಪಡೆದು, ಆರೋಗ್ಯ ಕೇಂದ್ರ ಅಶುಚಿತ್ವ ಕುರಿತು ಜಿಲ್ಲಾ ಕುಟುಂಬ ಕಲ್ಯಾಣ ಮತ್ತು…

Read More

ಮಡಿಕೇರಿ ಜೂ.30 : ಜಿಲ್ಲಾಡಳಿತ, ಎನ್‍ಡಿಆರ್‍ಎಫ್ ತಂಡ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪ್ರಾಕೃತಿಕ ವಿಕೋಪ ಸಂಭವಿಸಿದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಜುಲೈ, 1 ರಂದು ಬೆಳಗ್ಗೆ 11 ಗಂಟೆಗೆ ತಾಲ್ಲೂಕಿನ ಕೆ.ನಿಡುಗಣೆ ಪಂಚಾಯತ್ ವ್ಯಾಪ್ತಿಯ ಹೆಬ್ಬೆಟ್ಟಗೇರಿ ಗ್ರಾಮದಲ್ಲಿ ಅಣಕು ಕಾರ್ಯಾಚರಣೆ ನಡೆಯಲಿದೆ. ಆದ್ದರಿಂದ ಹೆಬ್ಬೆಟ್ಟಗೇರಿ ಗ್ರಾಮದಲ್ಲಿ (ಕುಮಾರಸ್ವಾಮಿ ಬಡಾವಣೆಗೆ ಹೋಗುವ ರಸ್ತೆ) ನಡೆಯುವ ಅಣಕು ಕಾರ್ಯಾಚರಣೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೋರಿದ್ದಾರೆ.

Read More

ಮಡಿಕೇರಿ ಜೂ.30 : ಇದೇ ಜು.1 ರಿಂದ 7 ರವರೆಗೆ ವನ ಮಹೋತ್ಸವ ಸಪ್ತಾಹ ಕಾರ್ಯಕ್ರಮ ಜರುಗಲಿದ್ದು, ಜು.1 ರಂದು ಬೆಳಗ್ಗೆ 11 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಆವರಣದಲ್ಲಿ ವನ ಮಹೋತ್ಸವ ಸಪ್ತಾಹ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಲಿದ್ದಾರೆ.

Read More

ಮಡಿಕೇರಿ ಜೂ.30 : ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಿಸುವ ಸಭೆಯು ಜು.1 ರಂದು ಮಧ್ಯಾಹ್ನ 12.30 ಯಿಂದ 01.30 ಗಂಟೆವರೆಗೆ ಸೋಮವಾರಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ಸಭೆಯು ಜು.1 ರಂದು ಮಧ್ಯಾಹ್ನ 4 ರಿಂದ 05 ಗಂಟೆವರೆಗೆ ಕುಶಾಲನಗರ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸೋಮವಾರಪೇಟೆ ಮತ್ತು ಕುಶಾಲನಗರ ವ್ಯಾಪ್ತಿಯ ಸಾರ್ವಜನಿಕರು/ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.30 : ‘ಕುಂಡಾಮೇಸ್ತ್ರಿ’ ಯೋಜನೆಯ ಮೂಲಕ ಮಡಿಕೇರಿಗೆ ನೀರು ಸರಬರಾಜು ಮಾಡುವ ಜವಾಬ್ದಾರಿಯನ್ನು ಒಂದು ವರ್ಷಗಳ ಕಾಲ ಕರ್ನಾಟಕ ರಾಜ್ಯ ನೀರು ಸರಬರಾಜು ಮಂಡಳಿ(ಕೆಯುಡಬ್ಲುಎಸ್)ಗೆ ವಹಿಸಿಕೊಡುವ ಮಹತ್ವದ ನಿರ್ಣಯವನ್ನು ನಗರಸಭಾ ಸಾಮಾನ್ಯ ಸಭೆಯಲ್ಲಿ ಕೈಗೊಂಡಿದೆ. ಮಡಿಕೇರಿ ನಗರಸಭೆಯ ಸಭಾಂಗಣದಲ್ಲಿ ಚುನಾವಣಾ ನಂತರ ನಡೆದ ಪ್ರಥಮ ಸಾಮಾನ್ಯ ಸಭೆಯಲ್ಲಿ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರ ಉಪಸ್ಥಿತಿಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತಲ್ಲದೆ, ಕೆಯುಡಬ್ಲ್ಯುಎಸ್‍ನ ಕುಡಿಯುವ ನೀರು ಸಂಪರ್ಕ ವ್ಯವಸ್ಥೆಯ 20 ಕೋಟಿ ವೆಚ್ಚದ ಯೋಜನೆಗೆ ಇದೇ ಸಂದರ್ಭ ಒಪ್ಪಿಗೆಯನ್ನು ನೀಡಲಾಯಿತು. ನಗರಸಭೆಯ ಎಸ್‍ಡಿಪಿಐ ಸದಸ್ಯ ಮನ್ಸೂರ್ ಮಾತನಾಡಿ, ಕುಂಡಾಮೇಸ್ತ್ರಿ ಯೋಜನೆಯಡಿ ಎರಡು 300 ಹೆಚ್‍ಪಿ ಪಂಪ್‍ಗಳು ಹದಗೆಟ್ಟು , ಮಡಿಕೇರಿ ನಗರದ ನಿರು ಸರಬರಾಜು ವ್ಯವಸ್ಥೆ ಕೆಲ ದಿನಗಳ ಕಾಲ ಹದಗೆಟ್ಟಿತ್ತೆಂದು ಬೇಸರ ವ್ಯಕ್ತಪಡಿಸಿದರು. ಈ ಸಂದರ್ಭ ಸದಸ್ಯ ಕೆ.ಎಸ್.ರಮೇಶ್ ಅವರು, ಕುಂಡಾ ಮೇಸ್ತ್ರಿ ಯೋಜನೆಯಡಿ ಕೂಟುಹೊಳೆಗೆ ನೀರು ಪಂಪ್ ಮಾಡುವ ಎರಡು ಮೋಟಾರುಗಳು ಹಾಳಾಗಿದ್ದರು, ಅದನ್ನು ಅಧಿಕಾರಿಗಳು ಮತ್ತು…

Read More

ಮಡಿಕೇರಿ ಜೂ.30 : ವಿಶ್ವ 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಕಾರಾಗೃಹದಲ್ಲಿ ಬಂದಿನಿವಾಸಿಗಳಿಗೆ ಯೋಗ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಜಿಲ್ಲಾ ಕಾರಾಗೃಹದ ಅಧೀಕ್ಷಕ ಸಂಜಯ್ ಜಿತ್ತಿ, ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಟಿ.ಡಿ.ಪುಟ್ಟರಂಗಸ್ವಾಮಿ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ಪಾಲ್ಗೊಂಡಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವ ಪಲ್ಲೇದ್, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‍ನ ಕಾರ್ಯದರ್ಶಿ ಎಂ.ಎಂ.ವಸಂತಿ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಸಹ ಕಾರ್ಯದರ್ಶಿ ಎಚ್.ಆರ್.ಮುತ್ತಪ್ಪ, ಸ್ಥಾನಿಕ ಆಯುಕ್ತರಾದ ಅಜ್ಜಮಕ್ಕಡ ವಿನು ಕುಮಾರ್, ಕಾರ್ಯದರ್ಶಿ ಸ್ಥಳೀಯ ಸಂಸ್ಥೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಬ್ರಹ್ಮಕುಮಾರಿ ಧನಲಕ್ಷ್ಮಿ, ಯೋಗ ತರಬೇತಿದಾರರಾದ ಅಲಿಮ ಪಿ.ಎಚ್, ವಾಟೆಕಾಡು ಹಿರಿಯ ಪ್ರಾಥಮಿಕ ಶಾಲೆ ಸ್ಕೌಟ್ ಮಾಸ್ಟರ್ ಶಿಕ್ಷಕರು…

Read More