ಲೇಖಕ: admin

ಮಡಿಕೇರಿ ಜೂ.30 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಮಟ್ಟದಲ್ಲಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಹೊರತಂದಿರುವ ವಾರ್ಷಿಕ ಕಾರ್ಯಕ್ರಮಗಳ ಯೋಜನೆ ಪುಸ್ತಕವನ್ನು ಬಿಡುಗಡೆ ಮಾಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆ ಮಾಡಿ ಜಿಲ್ಲಾ ಮಟ್ಟದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಚಟುವಟಿಕೆ ಮತ್ತಿತರ ಬಗ್ಗೆ ಮಾಹಿತಿ ಪಡೆದರು. ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಜಿಲ್ಲೆಯಲ್ಲಿ 10 ಸಾವಿರಕ್ಕೂ ಹೆಚ್ಚು ಮಕ್ಕಳು ಸ್ವಚ್ಛತೆ, ಪರಿಸರ ಹೀಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿವಿಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇ ಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸಿ.ರಂಗಧಾಮಯ್ಯ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಹಾಗೂ ಗೈಡ್ಸ್ ಆಯುಕ್ತರಾದ ರಾಣಿ ಮಾಚಯ್ಯ, ಪ್ರಧಾನ ಕಾರ್ಯದರ್ಶಿ ಎಂ.ಎಂ.ವಸಂತಿ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಸ್ಥಾನಿಕ ಆಯುಕ್ತರಾದ ಎಚ್.ಆರ್.ಮುತ್ತಪ್ಪ,…

Read More

ಮಡಿಕೇರಿ ಜೂ.30 : ಬಡವರ ಹಸಿವು ನೀಗಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಮಡಿಕೇರಿ ನಗರದ ಹೃದಯ ಭಾಗ ಜನರಲ್ ತಿಮ್ಮಯ್ಯ ವೃತ್ತ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಬಿಳಿಗೇರಿ ಗ್ರಾ.ಪಂ ಮಾಜಿ ಸದಸ್ಯ ಮಂಡುವಂಡ ರಮೇಶ್ ಅಯ್ಯಪ್ಪ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಇಂದಿರಾ ಕ್ಯಾಂಟೀನ್ ನ್ನು ಪುನಶ್ಚೇತನಗೊಳಿಸಲು ಪಣ ತೊಟ್ಟಿದೆ. ಜಿಲ್ಲೆಯಲ್ಲೂ ಶಾಸಕರುಗಳಾದ ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಕ್ಯಾಂಟೀನ್ ಗೆ ಕಾಯಕಲ್ಪ ನೀಡುವುದರೊಂದಿಗೆ ಬಡವರ ಅನುಕೂಲಕ್ಕಾಗಿ ಜಿಲ್ಲಾಸ್ಪತ್ರೆ ಬಳಿ ಮತ್ತೊಂದು ಇಂದಿರಾ ಕ್ಯಾಂಟೀನ್ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕೆಲವು ವರ್ಷಗಳ ಹಿಂದೆ ನಗರದ ನೂತನ ಖಾಸಗಿ ಬಸ್ ನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಆರಂಭಗೊಂಡು ಬಡವರಿಗೆ ಕಡಿಮೆ ಖರ್ಚಿನಲ್ಲಿ ಊಟ, ಉಪಹಾರ ದೊರೆಯುತ್ತಿತ್ತು. ಆದರೆ ನಂತರದ ದಿನಗಳಲ್ಲಿ ಇಲ್ಲಿನ ಕಾರ್ಯಚಟುವಟಿಕೆ ಸ್ಥಗಿತಗೊಂಡು ಬಡವರು ಹಾಗೂ…

Read More

ಮಡಿಕೇರಿ ಜೂ.30 : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯ ವತಿಯಿಂದ 2023-24 ನೇ ಸಾಲಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ವೈದ್ಯಕೀಯ ಶುಶ್ರೂಷಕಿ(ಸ್ಟಾಪ್ ನರ್ಸ್) ಹುದ್ದೆಗೆ ಜುಲೈ, 5 ರಂದು ಬೆಳಗ್ಗೆ 10 ರಿಂದ ನೇರ ಸಂದರ್ಶನ ನಡೆಯಲಿದೆ. ಸ್ಟಾಪ್ ನರ್ಸ್ ಹುದ್ದೆಯು ತಾತ್ಕಾಲಿಕವಾಗಿದ್ದು, ತಿಂಗಳಿಗೆ ರೂ. 34,125 ವೇತನ ನೀಡಲಾಗುತ್ತದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಜುಲೈ, 05 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12.30 ಗಂಟೆವರೆಗೆ ಹಾಜರಾಗುವಂತೆ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ವಿದ್ಯಾಲಯದ ವೆಬ್‍ಸೈಟ್  nvsjnv_kodagu  ಹಾಗೂ ದೂ.ಸಂ.9447368470, 9380802179 ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಜೂ.30 : ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸುಂಟಿಕೊಪ್ಪದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜು.1 ರಂದು ಬೆಳಿಗ್ಗೆ 10:30 ಗಂಟೆಗೆ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಹಿಂದುಳಿದ ವರ್ಗದ ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷರಾದ ಟಿ ಕೆ ಸಾಯಿ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಹಿರಿಯ ಸಲಹೆಗಾರರಾದ ಟಿ.ಪಿ ರಮೇಶ್ ಅವರ ಗೌರವ ಉಪಸ್ಥಿತಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ವಿಘ್ನೇಶ್ ಎಂ ಭೂತನಕಾಡು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಎ.ಮುರುಳಿಧರ್, ಮುಖ್ಯ ಭಾಷಣಕಾರರಾಗಿ ಸಂಘದ ಗೌರವ ಸಲಹೆಗಾರರಾದ ಶ್ರೀಧರ್ ನೆಲ್ಲಿತ್ತಾಯ, ಅತಿಥಿಗಳಾಗಿ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ವೇಣುಗೋಪಾಲ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಎಸ್.ಜಾನ್ ಪಾಲ್ಗೊಳ್ಳಲಿದ್ದಾರೆ. ಪತ್ರಿಕಾ ದಿನಾಚರಣೆಯ ಅಂಗವಾಗಿ ಹಿರಿಯ ಪತ್ರಕರ್ತರಿಂದ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಹಿರಿಯ ಪತ್ರಕರ್ತರಾದ ಜಿ.ಕೆ…

Read More

ಮಡಿಕೇರಿ ಜೂ.30 : ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಮಡಿಕೇರಿ ತಾಲೂಕು ಒಕ್ಕೂಟದಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಅಭಿನಂದಿಸಲಾಯಿತು. ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಪಿ.ಸುಕುಮಾರ್, ತಾಲೂಕು ಯುವ ಒಕ್ಕೂಟ ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್ ಸೇರಿದಂತೆ ಪ್ರಮುಖರು ಶಾಸಕರಿಗೆ ಹೂವುಗುಚ್ಛ ನೀಡಿ ಅಭಿನಂದಿಸಿ, ಜಿಲ್ಲಾ ಯುವ ಚಟುವಟಿಕೆಗಳಿಗೆ ಸಹಕರಿಸುವಂತೆ ಮನವಿ ಮಾಡಿದರು. ಯುವ ಒಕ್ಕೂಟದ ಎಲ್ಲ ಚಟುವಟಿಕೆಗಳಿಗೆ ಸಂಪೂರ್ಣ ಸಹಕಾರ ನೀಡುವದಾಗಿ ಶಾಸಕ ಮಂಥರ್ ಗೌಡ ನಿಯೋಗಕ್ಕೆ ಭರವಸೆ ನೀಡಿದರು. ಈ ಸಂದರ್ಭ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಕೆ.ಪ್ರಮೋದ್ ಗಣಪತಿ, ಮಡಿಕೇರಿ ತಾಲೂಕು ಯುವ ಒಕ್ಕೂಟ ಕಾರ್ಯಕಾರಿ ಸದಸ್ಯರಾದ ಜಯಕುಮಾರ್, ನಿಖಿಲ್ ಬೆಳಿಯ್ಯಪ್ಪ, ಇಂದುಮತಿ, ಮದನ್ ಹಾಗೂ ಸದಸ್ಯರು ಹಾಜರಿದ್ದರು.

Read More

ವಿರಾಜಪೇಟೆ ಜೂ.30 : ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ(ಕೃತಕ ವಿಜ್ಞಾನ) ಎಂಬ ಹೊಸ ಆವಿಷ್ಕಾರದ ಬಗ್ಗೆ 6ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಪೊನ್ನಂಪೇಟೆಯ “ಓಜಸ್ವಿ” ಫೌಂಡೇಶನ್ ಟ್ರಸ್ಟಿ ಡಾ. ಪಿ.ಸಿ.ಕವಿತಾ ಹಾಗೂ ಸಿಇಓ ಕೋ ಫೌಂಡರ್ ಜಸ್ಟ್ ರೋಬೋಟಿಕ್ಸ್ ವಿಭಾಗದ ಸಿ.ಡಿ.ಬ್ರಿಜೇಶ್ ಅವರು ಮುಂದಿನ ಕಾಲಘಟ್ಟದಲ್ಲಿ ಈ ಹೊಸ ಆವಿಷ್ಕಾರ ನಮ್ಮ ಜೀವನದ ಒಂದು ಭಾಗವಾಗುವುದಾಗಿಯೂ ಹಾಗೂ ಅದು ಯಾವ ರೀತಿಯಾಗಿ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಮಕ್ಕಳಿಗೆ ಮನಮುಟ್ಟುವಂತೆ ಉಪನ್ಯಾಸದಲ್ಲಿ ತಿಳಿಸಿದರು. ಅಲ್ಲದೆ ಮುಂಬರುವ ದಿನಗಳಲ್ಲಿ ತಮ್ಮ ಪಠ್ಯ ವಿಷಯಗಳ ಬೋಧನೆ ಅವಧಿಯ ಜೊತೆಗೆ “ರೋಬೋಟಿಕ್ಸ್ ಸೈನ್ಸ್” ಎಂಬ ವಿಷಯವನ್ನು ಅಳವಡಿಸುವುದಾಗಿ ಹಾಗೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಹೇಳಿದರು. ಕಾರ್ಯಕ್ರಮದಲ್ಲಿ ಶಾಲೆ ಆಡಳಿತ ಮಂಡಳಿ ಅಧ್ಯಕ್ಷರಾದ ಬಿ.ಎಸ್ ಸುದೇಶ್, ಕಾರ್ಯದರ್ಶಿ ವಿನೋದ್ ಪಿ.ಎನ್ ಹಾಗೂ ಪೋಷಕರು ಹಾಜರಿದ್ದರು.

Read More

ಸೋಮವಾರಪೇಟೆ ಜೂ.30 :  ಬಿಟಿಸಿಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಅಂತರ ಕಾಲೇಜು ಪ್ರಾಕೃತಿಕ ವಿಕೋಪ ನಿರ್ವಹಣೆ ಸಮ್ಮೇಳನದ ವಿವಿಧ ಸ್ಪರ್ಧೆಗಳಲ್ಲಿ ರಾಜ್ಯದ ವಿವಿಧೆಡೆಗಳಿಂದ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ಕೆಲವರು ಬಹುಮಾನ ಪಡೆದುಕೊಂಡರು. ಕಾಲೇಜು ಆವರಣದಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಕೃತಿ ವಿಕೋಪದ ಸಂದರ್ಭ ಜೀವ ರಕ್ಷಣೆಯಲ್ಲಿ ತಾವು ಏನು ಮಾಡಬಹುದೆಂದು ಛಾಯಾಚಿತ್ರ ಹಾಗೂ ಭಿತ್ತಿಪತ್ರದ ಮೂಲಕ ಅನಾವರಣಗೊಳಿಸಿದರು. ಪ್ರಬಂಧ ಮಂಡನೆಯಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಶಾನ್ಯ ಹಾಗೂ ರಜತ್ ಕುಮಾರ್ ಪ್ರಥಮ, ಇದೇ ಕಾಲೇಜಿನ ಅಕ್ಷತಾ ಹಾಗೂ ಅನಗ ದ್ವಿತೀಯ, ವಿರಾಜಪೇಟೆ ಸೆಂಟ್ಆನ್ಸ್ ಕಾಲೇಜಿನ ಕಾವೇರಮ್ಮ ಮತ್ತು ಶರ್ಲಿತ್  ತೃತೀಯ ಬಹುಮಾನವನ್ನು ಪಡೆದುಕೊಂಡರು. ಭಿತ್ತಿಪತ್ರ  ಪ್ರದರ್ಶನ ಸ್ಪರ್ಧೆಯಲ್ಲಿ ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ಅಂಕಿತ ಹಾಗೂ ರಕ್ಷಾ ಪ್ರಥಮ,  ಪ್ರೇಕ್ಷ ಹಾಗೂ ಬಾಬು ದ್ವಿತೀಯ, ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಪಿತಾ ತೃತೀಯ ಬಹುಮಾನ ಗಳಿಸಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಕಾಲೇಜು ಪ್ರಾಂಪಾಲರಾದ ಧನಲಕ್ಷ್ಮಿ, ನೆಹರು…

Read More

ಕುಶಾಲನಗರ, ಜೂ.30 : ಕುಶಾಲನಗರ ತಾಲ್ಲೂಕಿನ ಕೂಡಿಗೆ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತಗೊಂಡ ಸಿ.ದುರ್ಗೇಶ್ ಅವರನ್ನು ತಾಲ್ಲೂಕು ಶಿಕ್ಷಣ ಇಲಾಖೆ, ತಾಲ್ಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾರ ಸಂಘ, ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ಶಾಲೆಯ ಆಡಳಿತ ಮಂಡಳಿ ಮತ್ತು ಶಾಲೆಯ ವತಿಯಿಂದ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು. ನಿವೃತ್ತಗೊಂಡ ಮುಖ್ಯ ಶಿಕ್ಷಕ ದುರ್ಗೇಶ್ ಅವರಿಗೆ ಶಾಲು ಹೊದಿಸಿ ಫಲ ತಾಂಬುಲ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಮಾತನಾಡಿ, ಈ ಶಾಲೆಯಲ್ಲಿ ಆಡಳಿತ ಮಂಡಳಿ, ಹಿರಿಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಜತೆಗೂಡಿ ನಿವೃತ್ತಗೊಂಡ ಮುಖ್ಯ ಶಿಕ್ಷಕರನ್ನು ಗೌರವಿಸಿ ಬೀಳ್ಕೊಡುತ್ತಿರುವುದು ಗುರುಗಳಿಗೆ ಸಮಾಜ ನೀಡುತ್ತಿರುವ ದ್ಯೋತಕವಾಗಿದೆ ಎಂದು ಪ್ರಶಂಸಿದರು. ಗ್ರಾಮೀಣ ಶಾಲೆಯ ಪ್ರಗತಿಗೆ ಹಳೆ ವಿದ್ಯಾರ್ಥಿಗಳು ಹಾಗೂ ದಾನಿಗಳು ನೀಡುತ್ತಿರುವ ಸಹಕಾರ ಮತ್ತು ಪ್ರೋತ್ಸಾಹವು ಶಾಲೆಯ ಹಿರಿಮೆ ಮತ್ತು ಗರಿಮೆಯನ್ನು ಎತ್ತಿ ಹಿಡಿದಿದೆ ಎಂದರು. ಶಾಲಾ ಆಡಳಿತ ಮಂಡಳಿ ಹಾಗೂ…

Read More

ಮಡಿಕೇರಿ ಜೂ.30 : ಭಿನ್ನಮತಗಳನ್ನು ಬದಿಗೊತ್ತಿ ಎಲ್ಲರೂ ಒಗ್ಗಟ್ಟಿನಿಂದ ಜನಪರವಾಗಿ ನಗರದ ಅಭಿವೃದ್ಧಿಗೆ ಶ್ರಮಿಸೋಣವೆಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕರೆ ನೀಡಿದ್ದಾರೆ. ಮಡಿಕೇರಿ ನಗರಸಭೆಯಿಂದ ನೀಡಲಾದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಯಾವುದೇ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೆ ಜನರ ನಿರೀಕ್ಷೆಯಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳೋಣವೆಂದರು. ಸಭೆಯಲ್ಲಿ ವಾಗ್ವಾದ ಮಾಡುವುದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ, ಬದಲಿಗೆ ನೈಜಾಂಶವನ್ನು ಅರಿತು ಸಮಸ್ಯೆಯನ್ನು ಬಗೆ ಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಹೇಳಿದರು. ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಸಹಕಾರ ನೀಡವುದಾಗಿ ಭರವಸೆ ನೀಡಿದರು. ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಪೌರಾಯುಕ್ತ ವಿಜಯ, ಆಡಳಿತಾರೂಢ ಬಿಜೆಪಿ, ವಿರೋಧ ಪಕ್ಷ ಎಸ್‌ಡಿಪಿಐ ಹಾಗೂ ಕಾಂಗ್ರೆಸ್ ಪಕ್ಷದ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

Read More

ಮಡಿಕೇರಿ ಜೂ.30 : ಮಡಿಕೇರಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಮೊದಲ ಬಾರಿಗೆ ಪಾಲ್ಗೊಂಡ ಕ್ಷೇತ್ರದ ನೂತನ ಶಾಸಕ ಡಾ.ಮಂತರ್ ಗೌಡ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಪೇಟ ತೊಡಿಸಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್ ಹಾಗೂ ಪೌರಾಯುಕ್ತ ವಿಜಯ ಅವರುಗಳು ನಗರದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದರು. ಸಭೆಯಲ್ಲಿದ್ದ ಸದಸ್ಯರುಗಳು ಕೂಡ ಹೂಗುಚ್ಚ ನೀಡಿ ಅಭಿನಂದಿಸಿದರು.

Read More