ಮಡಿಕೇರಿ ಜೂ.30: ಕೊಡವ ಕುಟುಂಬಗಳ ನಡುವಿನ “ಕುಂಡ್ಯೋಳಂಡ ಹಾಕಿ ನಮ್ಮೆ-2024” ರ ಕೈಪಿಡಿ ಬಿಡುಗಡೆ ಕಾರ್ಯಕ್ರಮ ಕೊಡವ ಹಾಕಿ ಅಕಾಡೆಮಿಯ ಸಹಯೋಗದೊಂದಿಗೆ ನಾಪೋಕ್ಲುವಿನ ಕುಂಡ್ಯೋಳಂಡ ಐನ್ ಮನೆಯಲ್ಲಿ 2023 ಜುಲೈ 1 ರಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.
ಲೇಖಕ: admin
ಮಡಿಕೇರಿ ಜೂ.30 : ಸ್ಯಾಂಡಲ್ವುಡ್ನ ಖ್ಯಾತ ಕಲಾವಿದರಾದ ಕೊಡಗಿನ ಉಳ್ಳಿಯಡ ಭುವನ್ ಪೊನ್ನಣ್ಣ ಹಾಗೂ ಉದ್ದಪಂಡ ಹರ್ಷಿಕಾ ಪೂಣಚ್ಚ ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ. ಈಗಾಗಲೇ ಭುವನ್ ಹಾಗೂ ಹರ್ಷಿಕಾರ ಲಗ್ನಪತ್ರಿಕೆ ಕಾರ್ಯ ಕೊಡವ ಸಂಪ್ರದಾಯದಂತೆ ಸರಳವಾಗಿ ನಡೆದಿದ್ದು, ಎರಡೂ ಕುಟುಂಬದ ಕೆಲವರು ಮಾತ್ರ ಇಗ್ಗುತ್ತಪ್ಪ ದೇವಾಲಯದಲ್ಲಿ ನಡೆದ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ವಿವಾಹ ಆ.24 ರಂದು ಅಮ್ಮತ್ತಿ ಕೊಡವ ಸಮಾಜದಲ್ಲಿ ನಿಗದಿಯಾಗಿದೆ. ರಿಯಾಲಿಟಿ ಶೋ ಸೇರಿದಂತೆ ಹಲವು ಕನ್ನಡ ಚಿತ್ರಗಳಲ್ಲಿ ಭುವನ್ ಪೊನ್ನಣ್ಣ ನಟಿಸಿದ್ದು, ಹರ್ಷಿಕಾ ಪೂಣಚ್ಚ ಕನ್ನಡ, ಕೊಡವ ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ನಟಿಸಿ, ಬಹುಭಾಷಾ ತಾರೆಯಾಗಿ ಗುರುತಿಸಲ್ಪಟ್ಟಿದ್ದಾರೆ. ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಭುವನ್ ಹಾಗೂ ಹರ್ಷಿಕಾ ಭುವನಂ ಫೌಂಡೇಶನ್ ಮೂಲಕ ರಾಜ್ಯಾದ್ಯಂತ ಸಂತ್ರಸ್ತರಿಗೆ ಸಹಾಯಹಸ್ತ ನೀಡುವ ಮೂಲಕ ಚೈತನ್ಯ ಮೂಡಿಸುವಲ್ಲಿ ಯಶಸ್ವಿಯಾಗಿ ಜನಮನ ಗೆದ್ದಿದ್ದರು.
ಮಡಿಕೇರಿ ಜೂ.30 : ಬೆಂಗಳೂರಿನ ಸುವರ್ಣ ಆರೋಗ್ಯ ಟ್ರಸ್ಟ್ನ ಹೆಚ್ಚುವರಿ ಕಾರ್ಯದರ್ಶಿಯಾಗಿ ಕೊಡಗಿನಿಂದ ವರ್ಗಾವಣೆಗೊಂಡಿದ್ದ ಈ ಹಿಂದಿನ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರನ್ನು ಇದೀಗ ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಜಂಟಿ ನಿರ್ದೇಶಕರಾಗಿ (ಆಡಳಿತ) ಸರ್ಕಾರ ನೇಮಕ ಮಾಡಿದೆ.
ಮಡಿಕೇರಿ ಜೂ.30 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 6.69 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 24.54 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 301.83 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 690.35 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 11 ಮಿ.ಮೀ. ಕಳೆದ ವರ್ಷ ಇದೇ ದಿನ 49.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 458.98 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 962.16 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.71 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 15.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 224.22 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 606.01 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.37 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.13…
ನಾಪೋಕ್ಲು ಜೂ.30 : ಮೂರ್ನಾಡು ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಮೂರ್ನಾಡು ಪೊಲೀಸ್ ಠಾಣಾ ಸಿಬ್ಬಂದಿ ಹನುಮಂತಪ್ಪ ಮಾತನಾಡಿ, ಮಾದಕ ವಸ್ತುಗಳ ದುಷ್ಪರಿಣಾಮಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿ ಹದಿಹರೆಯದ ವಯಸ್ಸಿನವರು ಮಾದಕ ವಸ್ತುಗಳ ಸೇವನೆಗೆ ಒಳಗಾದರೆ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಶಾಲಾ ಕಾಲೇಜು ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗದೆ ವಿದ್ಯಾರ್ಜನೆ ಮಾಡಿ ಉತ್ತಮ ಪ್ರಜೆಯಾಗಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ದೇವಕಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಾಣಿ ಶ್ರೀ, ಮೂರ್ನಾಡು ಪೊಲೀಸ್ ಠಾಣಾ ಎಎಸ್ಐ ಅನಿಲ್ ಕುಮಾರ್ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ದಿಲೀಪ್, ಮಂಜುನಾಥ್ ಆಗಮಿಸಿದರು. ಈ ಸಂದರ್ಭ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಜೂ.30 : ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ ಮೌಲ್ಯಾಧಾರಿತವಾದ ಜೀವನ ನಡೆಸಲು ನೆರವಾಗಬೇಕು ಎಂದು ನಿವೃತ್ತ ಪ್ರಾಂಶುಪಾಲರಾದ ಡಾ. ಸುಲೋಚನಾ ನಾರಾಯಣ ಹೇಳಿದರು. ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರು ವಿದ್ಯಾರ್ಥಿಗಳಿಗೆ ಕಲಿಕಾ ಮಟ್ಟವನ್ನು ಹಂತಹಂತವಾಗಿ ಬೆಳೆಸುತ್ತಾ ಹೋಗಬೇಕು. ವಿದ್ಯಾರ್ಥಿ ಸಂಘದ ನಾಯಕರು ಎಲ್ಲರನ್ನೂ ಪ್ರತಿನಿಧಿಸುವಂತಿರಬೇಕು. ವಿದ್ಯಾರ್ಥಿ ಜೀವನದಲ್ಲಿ ದೊರೆಯುವ ಅವಕಾಶವನ್ನು ಬಳಸಿಕೊಂಡು ಜೀವನದಲ್ಲಿ ಮುಂದೆ ಸಾಗಬೇಕು ಎಂದ ಸುಲೋಚನಾ, ವ್ಯಕ್ತಿ ಗೌರವ ಬಹಳ ಪ್ರಮುಖವಾದದ್ದು. ಸಮಾಜದಲ್ಲಿ ಉತ್ತಮ ಸ್ಥಾನಮಾನವನ್ನು ಹೊಂದಬೇಕಾದರೆ ವ್ಯಕ್ತಿ ಗೌರವವನ್ನು ಕಾಪಾಡಿಕೊಳ್ಳುವುದು ಅಗತ್ಯ. ಜೀವನದಲ್ಲಿ ಸಿಗುವ ಅವಕಾಶಗಳನ್ನು ಬಳಸಿಕೊಳ್ಳಬೇಕೆಂದು ಸಲಹೆ ನೀಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಶಾರದಾ ಅಪ್ಪಣ್ಣ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಕರ್ತವ್ಯ ಪರರಾಗಿ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಡಾ.ಬೊಪ್ಪಂಡ ಜಾಲಿ ಬೋಪಯ್ಯ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಕಲಿಯಂಡ ಹ್ಯಾರಿ ಮಂದಣ್ಣ,…
ನಾಪೋಕ್ಲು ಜೂ.30 : ದಾನಿಗಳಿಂದ ಸಂಗ್ರಹಿಸಿದ 13 ಲಕ್ಷ ರೂ.ನಲ್ಲಿ ನಿರ್ಮಿಸಲಾಗಿರುವ ಬೆಟ್ಟಗೇರಿ ಗ್ರಾ.ಪಂ ವ್ಯಾಪ್ತಿಯ ಅರುವತ್ತೋಕ್ಲುವಿನ ಶ್ರೀ ಮಹಾ ವಿಷ್ಣು ದೇವಾಲಯದ ನೂತನ ಗೋದಾಮು ಮತ್ತು ಅಡುಗೆ ಕೋಣೆ ಕಟ್ಟಡದವನ್ನು ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಪೂಜಾರಿರ ಮಾದಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕಟ್ಟಡದ ಕೆಲಸ ಕಾರ್ಯಗಳಿಗೆ ಸಹಕರಿಸಿದ ಎಲ್ಲರಿಗೂ ಅಭಿನಂದಿಸಿ ಶುಭ ಕೋರಿದರು. ದೇವಾಲಯದ ಆಡಳಿತ ಮಂಡಳಿ ಸದಸ್ಯ ಚೆರುಮಾಡಂಡ ಸತೀಶ್ ಸೋಮಣ್ಣ ಮಾತನಾಡಿ, ಕಟ್ಟಡ ನಿರ್ಮಾಣದ ಖರ್ಚು ವೆಚ್ಚಗಳ ಬಗ್ಗೆ ಹಾಗೂ ಮುಂದೆ ದೇವಾಲಯಕ್ಕೆ ಅವಶ್ಯಕವಾಗಿರುವ ಕೆಲಸ ಕಾರ್ಯಗಳ ಬಗ್ಗೆ ಮಾತನಾಡಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಈ ಸಂದರ್ಭ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಸಹಕರಿಸಿದ ದಾನಿಗಳಿಗೆ ಹಾಗೂ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರಾದ ತಿಲಾಕ್ಷ ಅವರುಗಳನ್ನು ಫಲ ತಾಂಬೂಲ ಕಿರುಕಾಣಿಕೆ ನೀಡಿ ಗೌರವಿಸಲಾಯಿತು. ಇದಕ್ಕೂ ಮೊದಲು ಬೆಳಗ್ಗೆ ಗಣಪತಿ ಹೋಮ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನವನ್ನು ದೇವಾಲಯದ ಅರ್ಚಕ ಪ್ರಸಾದ್ ಭಟ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ದೇವಾಲಯದ…
ನಾಪೋಕ್ಲು ಜೂ.30 : ನಾಪೋಕ್ಲು ಸೇರಿದಂತೆ ಸುತ್ತಮುತ್ತಲಿನ ಮಸೀದಿಗಳಲ್ಲಿ ತ್ಯಾಗ ಬಲಿದಾನದ ಸಂದೇಶ ಸಾರುವ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಮುಸ್ಲಿಂ ಸಮುದಾಯ ಬಾಂಧವರು ಆಚರಿಸಿದರು . ಮುಸ್ಲಿಂ ಸಮುದಾಯದ ಪ್ರಮುಖ ಹಬ್ಬಗಳಲ್ಲಿ ಬಕ್ರೀದ್ ಹಬ್ಬವು ಒಂದಾಗಿದೆ. ಬೆಳಿಗ್ಗೆ ಸ್ಥಳೀಯ ಪಟ್ಟಣದ ಮುಯ್ಯದ್ದಿನ್ ಜುಮ್ಮಾ ಮಸೀದಿಯಲ್ಲಿ ಹಬ್ಬದ ಪ್ರಯುಕ್ತ ವಿಶೇಷ ಸಾಮೂಹಿಕ ಪ್ರಾರ್ಥನೆ , ನಮಾಜ್ ನೆರವೇರಿಸಿದರು. ಈ ಸಂದರ್ಭ ಧರ್ಮ ಗುರುಗಳಾದ ಅಶ್ರಫ್ ಅನ್ಸಾರಿ ವಿಶೇಷ ಪ್ರಾರ್ಥನೆ ನೆರವೇರಿಸಿ ಬಳಿಕ ದಿನದ ಮಹತ್ವ ಹಾಗೂ ಧರ್ಮ ಸಂದೇಶ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜಮಾತ್ ಆಡಳಿತ ಮಂಡಳಿ ಅಧ್ಯಕ್ಷ ಪಿ.ಎಂ.ಸಲೀಂ ಹ್ಯಾರಿಸ್, ಉಪ ಅಧ್ಯಕ್ಷ ರಶೀದ್, ಕಾರ್ಯದರ್ಶಿ ಅಹಮದ್ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು ಇನ್ನಿತರರು ಉಪಸ್ಥಿತರಿದ್ದರು. ಇದೇ ರೀತಿ ಎಮ್ಮೆಮಾಡು, ಪಡಿಯಾಣಿ, ಕುಂಜಿನ, ಕೊಳಕೇರಿ, ಕೊಟ್ಟಮುಡಿ, ಎಡಪಾಲ, ಕಿಕ್ಕೆರೆ ಸೇರಿದಂತೆ ವಿವಿಧ ಮಸೀದಿಗಳಲ್ಲಿ ನಮಾಜ್, ಪ್ರಾರ್ಥನೆಯೊಂದಿಗೆ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಸದಸ್ಯರು ಶ್ರದ್ಧಾ ಭಕ್ತಿಯಿಂದ ಬಕ್ರಿದ್ ಹಬ್ಬವನ್ನು ವೈಶಿಷ್ಟ್ಯವಾಗಿ…
ಮಡಿಕೇರಿ ಜೂ.29 : ತಮಿಳುನಾಡಿನಲ್ಲಿ ಮಾರಾಟ ಮಾಡಲು ಬೆಂಗಳೂರಿನಿಂದ ರಕ್ತ ಚಂದನ ಮರವನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಮೂವರನ್ನು ಕೊಳ್ಳೆಗಾಲ ನಗರದ ಪೊಲೀಸ್ ಅರಣ್ಯ ಸಂಚಾರಿ ದಳ ಬಂಧಿಸಿದೆ. ಬೆಂಗಳೂರಿನ ವಿಜಯನಗರದ ನಿವಾಸಿ ಅರುಣ್ ಕುಮಾರ್ (26), ಪಂಡಿತರ ಪಾಳ್ಯ ನಿವಾಸಿ ಆನಂದ್ (46) ಹಾಗೂ ತುಮಕೂರಿನ ಸೋಮೇಶ್ವರಪುರಂನ ಮುಸ್ತಫ ( 52) ಬಂಧಿತ ಆರೋಪಿಗಳಾಗಿದ್ದಾರೆ. ಬೆಂಗಳೂರು ಕಡೆಯಿಂದ ಕೊಳ್ಳೇಗಾಲಕ್ಕೆ ಆಗಮಿಸುತ್ತಿದ್ದಂತೆ ಕಾರನ್ನು ತಡೆದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಿನಲ್ಲಿದ್ದ 17.04 ಲಕ್ಷ ರೂ. ಮೌಲ್ಯದ ರಕ್ತ ಚಂದನ ಮರದ ತುಂಡುಗಳು, 3 ಮೊಬೈಲ್, 1 ಕಾರು ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ.
ಸೋಮವಾರಪೇಟೆ ಜೂ.29 : ಬಕ್ರೀದ್ ಹಬ್ಬವನ್ನು ಸೋಮವಾರಪೇಟೆ ವ್ಯಾಪ್ತಿಯಲ್ಲಿ ಮುಸ್ಲಿಂ ಸಮುದಾಯದವರು ಸಂಭ್ರಮದಿಂದ ಆಚರಿಸಿದರು. ಸಮೀಪದ ಕಲ್ಕಂದೂರು ಜುಮಾ ಮಸೀದಿಯಲ್ಲಿ ಖತೀಬರಾದ ಹಸೈನಾರ್ ಮದನಿ ಉಸ್ತಾದ್ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ನಂತರ ಖಬರಸ್ಥಾನದಲ್ಲಿ ಝಿಯಾರತ್ ಪ್ರಾರ್ಥನೆ ನೆರವೇರಿತು. ಹೊಸತೋಟ ಜಾಮಿಯಾ ಮಸೀದಿಯಲ್ಲಿ, ಬಜೆಗುಂಡಿ ಖಿಳಾರಿಯಾ ಮಸೀದಿ, ಪಟ್ಟಣದ ಜಲಾಲಿಯಾ ಮಸೀದಿಗಳಲ್ಲಿ ದಿನದ ಅಂಗವಾಗಿ ವಿಶೇಷ ಪ್ರಾರ್ಥನೆಗಳು ನಡೆದವು.






