ಮಡಿಕೇರಿ NEWS DESK ಜು.9 : ಬಾಡಗರಕೇರಿಯ ಇತಿಹಾಸ ಪ್ರಸಿದ್ಧ ಶ್ರೀ ಮೃತ್ಯುಂಜಯ ಕ್ಷೇತ್ರದ ನೂತನ ಗರ್ಭಗುಡಿಯಲ್ಲಿ ಕಳೆದ 4 ದಿನಗಳಿಂದ ನಡೆಯುತ್ತಿದ್ದ ದೇವರ ಬಿಂಬ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಇಂದು ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು. ಗಣಪತಿ ಹೋಮ, ತತ್ವಹೋಮ, ತತ್ವ ಕಲಶ ಪೂಜೆ, ಸಿಂಹಲಗ್ನದ ಶುಭ ಮುಹೂರ್ತದಲ್ಲಿ ಶ್ರೀ ಮೃತ್ಯುಂಜಯ ದೇವರ ಬಿಂಬ ಪ್ರತಿಷ್ಠೆ, ಅಷ್ಟಬಂಧ ಲೇಪನ, ಜೀವಕಲಶಾಭಿಷೇಕ, ಶಿಖರ ಪ್ರತಿಷ್ಠೆ ಮುಂದುವರಿದು ತತ್ವ ಕಲಶಾಭಿಷೇಕ ನಡೆಯಿತು. ಮಹಾಪೂಜೆ, ಮಂತ್ರಾಕ್ಷತೆಯ ನಂತರ ಭಕ್ತರಿಗೆ ಅನ್ನಸಂತರ್ಪಣೆಯಾಯಿತು. ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಬಾಡಗರಕೇರಿ ಗ್ರಾಮದಲ್ಲಿರುವ ಶ್ರೀ ಮೃತ್ಯುಂಜಯ ದೇವಸ್ಥಾನ ಐತಿಹಾಸಿಕವಾಗಿದ್ದು, ನೂರಾರು ವರ್ಷಗಳ ಹಿನ್ನೆಲೆ ಹೊಂದಿದೆ. ಸುಮಾರು 1.20 ಕೋಟಿ ರೂ. ವೆಚ್ಚದ ಕಾಮಗಾರಿ ಪೂರ್ಣಗೊಂಡಿದ್ದು, ಗರ್ಭಗುಡಿ, ತೀರ್ಥಮಂಟಪ ಹಾಗೂ ಗಣಪತಿ ಗುಡಿಯ ಜೀರ್ಣೋದ್ಧಾರವಾಗಿದೆ.
ಲೇಖಕ: admin
ಮಡಿಕೇರಿ NEWS DESK ಜು.9 : ಕುಂದಚೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಸುಮಾರು 1.25 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಂಡಿರುವ ಚೆಟ್ಟಿಮಾನಿ, ಕುಂದಚೇರಿ, ಕಾನಕಂಡಿ ರಸ್ತೆಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ನಂತರ ಗ್ರಾ.ಪಂ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸರಕಾರ ಬದ್ಧವಾಗಿದೆ ಎಂದು ತಿಳಿಸಿದರು. ಗ್ರಾ.ಪಂ ಮಾಜಿ ಉಪಾಧ್ಯಕ್ಷ ಹಾಗೂ ಡಿಸಿಸಿ ಸದಸ್ಯ ಕೆ.ಯು.ಹ್ಯಾರೀಶ್ ಅವರು ಮಾತನಾಡಿ ಕಳೆದ 25 ವರ್ಷಗಳಿಂದ ಚೆಟ್ಟಿಮಾನಿ, ಕುಂದಚೇರಿ, ಕಾನಕಂಡಿ ರಸ್ತೆ ಹೊಂಡ ಗುಂಡಿಗಳಿಂದ ಕೂಡಿತ್ತು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಪೊನ್ನಣ್ಣ ಅವರು 6 ತಿಂಗಳ ಹಿಂದೆ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ್ದರು. ಇದೀಗ ಡಾಂಬರೀಕರಣಗೊಂಡ ರಸ್ತೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಂಡಿದ್ದು, ಶಾಸಕರ ಕಾರ್ಯ ಶ್ಲಾಘನೀಯವೆಂದರು. ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ, ಕಾರ್ಯಪಾಲಕ ಅಭಿಯಂತರ ಗಿರೀಶ್ ಹಾಗೂ ಗುಣಮಟ್ಟದ ರಸ್ತೆಯನ್ನು ನೀಡಿದ ಗುತ್ತಿಗೆದಾರ ಕೆ.ಟಿ.ಸತೀಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.…
ವಿರಾಜಪೇಟೆ ಜು.8 NEWS DESK : 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿದ ವಿರಾಜಪೇಟೆಯ ವಿದ್ಯಾರ್ಥಿ ಬಿ.ಆರ್.ಭವಿಷ್ ಅನ್ನು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ, ಕೊಡಗು ಜಿಲ್ಲಾ ಈಡಿಗ ಮತ್ತು ಬಿಲ್ಲವ ಘಟಕ ಇವುಗಳ ಜಂಟಿ ಆಶ್ರಯದಲ್ಲಿ ಮಡಿಕೇರಿಯ ಹೋಟೆಲ್ ರಾಜ್ ದರ್ಶನ್ ಸಭಾಂಗಣದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಎಂ. ಶ್ರೀನಿವಾಸ್ ಹಾಗೂ ಕೊಡಗು ಈಡಿಗ ಬಿಲ್ಲವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಸಿ. ಕುಮಾರ್ ಸೇರಿದಂತೆ ಹಲವು ಪ್ರಮುಖ ಗಣ್ಯರು ಹಾಜರಿದ್ದರು ಬಿ.ಆರ್ ಭವಿಷ್ ವಿರಾಜಪೇಟೆಯ ಪಂಜರಪೇಟೆ ನಿವಾಸಿಗಳಾದ ಬಿ.ಎನ್.ರಮೇಶ್ (ರಘು) ಹಾಗೂ ಆಶಾ ದಂಪತಿಗಳ ಪುತ್ರ. ಇವನು ಪ್ರಸ್ತುತ ಗೋಣಿಕೊಪ್ಪದ ಲಯನ್ಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾನೆ.
ಮಡಿಕೇರಿ ಜು.8 NEWS DESK : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಮಡಿಕೇರಿ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ.,ಮಡಿಕೇರಿ ಹಾಗೂ ಸಹಕಾರ ಇಲಾಖೆ, ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಪರಿಕರಗಳನ್ನು ವಿತರಣೆ ಮಾಡಲಾಯಿತು. ನಗರದ ಬಾಲಭವನದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಪಿ.ಯು.ರಾಬಿನ್ ದೇವಯ್ಯ, ಕೃಷಿ ಪ್ರಧಾನ ದೇಶದಲ್ಲಿ ಗ್ರಾಮೀಣ ಆರ್ಥಿಕತೆಯನ್ನು ಸದೃಡಗೊಳಿಸಲು ಹಾಗೂ ಸಹಕಾರ ಕ್ಷೇತ್ರವನ್ನು ಬಲವರ್ಧನೆಗೊಳಿಸಬೇಕೆಂಬ ಉದ್ದೇಶದಿಂದ ಸಹಕಾರ ಸಚಿವಾಲಯವನ್ನು ಪ್ರಾರಂಭಿಸಿ ಇಂದಿಗೆ 5 ವರ್ಷ ಪೂರೈಸಿದೆ. ಒಂದು ವಾರಗಳ ಕಾಲ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಮಾರ್ಗಸೂಚಿ ನೀಡಿದ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯಲ್ಲೂ ಸಹ ‘ಸಹಕಾರದಿಂದ ಸಮೃದ್ಧಿ’ ಎಂಬ ಧ್ಯೇಯದೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದರು. ರೈತರ ಸಮಾವೇಶ, ಪರಿಸರ ಸಂರಕ್ಷಣೆಗಾಗಿ ಸಸಿ ನೆಡುವ ಕಾರ್ಯಕ್ರಮ, ವಿದ್ಯಾರ್ಥಿಗಳಿಗೆ ಸಹಕಾರ ಅರಿವು, ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣೆ ಶಿಬಿರ,…
ಮಡಿಕೇರಿ NEWS DESK ಜು.8 : ಕಾವೇರಿ ನಾಡು ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ನದಿ ನೀರಿನ ಮಟ್ಟ ಏರಿಕೆಯಾಗುತ್ತಲೇ ಇದೆ. ಭಾಗಮಂಡಲ ಮತ್ತು ಪೊನ್ನಂಪೇಟೆಯಲ್ಲಿ ಕಳೆದ 24 ಗಂಟೆಗಳಲ್ಲಿ ತಲಾ 7 ಇಂಚು ಮಳೆ ದಾಖಲಾಗಿದೆ. ವಿರಾಜಪೇಟೆ ತಾಲ್ಲೂಕು ಅಮ್ಮತಿ ಹೋಬಳಿ ಕರಡಿಗೋಡು ಕಾವೇರಿ ನದಿ ಪಾತ್ರದಲ್ಲಿರುವ ಹೊಳೆಕೆರೆಯಲ್ಲಿ ಕರಡಿಗೋಡು ಚಿಕ್ಕನಳ್ಳಿ ಸಂಪರ್ಕ ರಸ್ತೆ ಪ್ರವಾಹದಿಂದ ಕಡಿತ ಗೊಂಡಿದೆ. ಅಧಿಕಾರಿಗಳು, ಕಂದಾಯ ಪರಿವೀಕ್ಷಕರು, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ರಸ್ತೆಯಲ್ಲಿ ಬ್ಯಾರಿಕೆಡ್ ಅಳವಡಿಸಿ ಸಂಚಾರ ನಿಷೇಧಿಸಿದ್ದಾರೆ. ವಿರಾಜಪೇಟೆ ಹೋಬಳಿ ಅರಮೇರಿ-ಚಾಮಿಯಾಲ ಸಂಪರ್ಕ ಸೇತುವೆಯು ಸಂಪೂರ್ಣ ಜಲಾವೃತವಾಗಿದ್ದು, ಇಲ್ಲಿ ಕೂಡ ಮುನ್ನೆಚ್ಚರಿಕೆ ಕ್ರಮವಾಗಿ ಬ್ಯಾರಿಕೇಡ್ ಹಾಕಲಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮೈಕೊರೆಯುವ ಚಳಿಯ ವಾತಾವರಣವಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 60.45 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 19.29 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 631.54 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ…
ಮಡಿಕೇರಿ ಜು.8 NEWS DESK : ಪ್ರಸಕ್ತ (2026-27) ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ರೈತ, ರೈತ ಮಹಿಳೆಯರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ವಿನೂತನ, ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಶ್ರೇಯೋಭಿವೃದ್ದಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ “ಕೃಷಿ ಪಂಡಿತ” ಪ್ರಶಸ್ತಿಯನ್ನು ನೀಡಲಾಗುತ್ತಿದೆ. 2026-27ನೇ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಕೃಷಿ ಪಂಡಿತ ಪ್ರಶಸ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಭಾಗವಹಿಸಲು ಇಚ್ಚಿಸುವ ಜಿಲ್ಲೆಯ ರೈತರುಗಳು ಅರ್ಜಿ ಸಲ್ಲಿಸಬಹುದಾಗಿದೆ. ಭಾಗವಹಿಸುವ ರೈತರ ಸಂಶೋಧನೆ, ಸಾಧನೆಗಳು ಮೂಲ ಸ್ವರೂಪದಾಗಿದ್ದು, ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಈ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಬಯಸುವ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ ಎಫ್ಐಡಿ (ಫ್ರೂಟ್ಸ್ ಐಡಿ) ಸಂಖ್ಯೆಯನ್ನು ಬಳಸಿಕೊಂಡು ಕೆ-ಕಿಸಾನ್ ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ…
ಕುಶಾಲನಗರ NEWS DESK ಜು.8 : ಕುಶಾಲನಗರದ ಪುರಸಭೆ ವತಿಯಿಂದ ಯುಜಿಡಿ ಸಂಪರ್ಕಕ್ಕೆ ದರ ನಿಗದಿ ಮಾಡಿರುವುದು ಅವೈಜ್ಞಾನಿಕವಾಗಿದೆ. ತಕ್ಷಣ ಅದನ್ನ ವಾಪಸ್ ಪಡೆಯಲು ಕುಶಾಲನಗರ ನಿವಾಸಿಗಳ ಒತ್ತಾಯ. ಕುಶಾಲನಗರದ ಕನ್ನಿಕಾ ಕನ್ವೇಷನ್ ಸೆಂಟರ್ ನಲ್ಲಿ ಬುಧವಾರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ನ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೇಲಿನ ತೀರ್ಮಾನವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ. ಸರ್ಕಾರದಿಂದ ಯುಜಿಡಿ ಕಾಮಗಾರಿಗಾಗಿ ಕೋಟ್ಯಾಂತರ ರೂಪಾಯಿ ಹಣ ಬಂದಿದೆ. ಸರ್ಕಾರಕ್ಕೆ ಜನರು ಈಗಾಗಲೇ ಹಲವು ರೀತಿಯ ತೆರಿಗೆ ಕಟ್ಟಿ ಸಾಕಾಗಿರುವ ಈ ಸಂದರ್ಭದಲ್ಲಿ ಹೊಸ ತರಹದ ತೆರಿಗೆ ಕಟ್ಟಬೇಕೆನ್ನುವುದು ಗಾಯದ ಮೇಲೆ ಬರೆ ಎಳೆದಂತೆ ಎಂಬಂತಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಈಗ ನಡೆದಿರುವ ಯುಜಿಡಿ ಕಾಮಗಾರಿ ಕಳಪೆಯಾಗಿದೆ. ಹಲವು ಬಡಾವಣೆಗಳಲ್ಲಿ ನಿರ್ಮಾಣವಾಗಿರುವ ಮ್ಯಾನ್ ಹೋಲ್ ಗಳು ಈಗಾಗಲೇ ಹಾಳಾಗಿದೆ. ಅದಕ್ಕೆ ಅಳವಡಿಸಿರುವ ಪೈಪ್ ಕೂಡ ಚಿಕ್ಕದಾಗಿದೆ, ಅದರಲ್ಲಿ ಸರಾಗವಾಗಿ ನೀರು ಹರಿಯಲು ಸಾಧ್ಯವಿಲ್ಲವೆಂದು ಹಲವರು ಆತಂಕ ವ್ಯಕ್ತಪಡಿಸಿದರು. ಚೇಂಬರ್ ಆಫ್ ಕಾಮರ್ಸ್ ನ ಜಿಲ್ಲಾಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಅವರು…
ಮಡಿಕೇರಿ ಜು.8 NEWS DESK : ಮಡಿಕೇರಿ ನಗರದಲ್ಲಿ ಸುಗಮ ವಾಹನ ಸಂಚಾರ ಮತ್ತು ಸಾರ್ವಜನಿಕರ ಹಾಗೂ ಸಾರ್ವಜನಿಕ ಆಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ಜು.9 ರಿಂದ ಜುಲೈ, 12 ರವರೆಗೆ ಮುಂಜಾಗ್ರತಾ ಕ್ರಮವಾಗಿ ರಾಜಾಸೀಟು ಬಳಿ ವಾಹನ ನಿಲುಗಡೆ ಮತ್ತು ರಾಜಾಸೀಟ್ಗೆ ಸಾರ್ವಜನಿಕರ/ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಮಳೆಯಾಗುತ್ತಿದ್ದು, ಇದರ ಪರಿಣಾಮ ಮಡಿಕೇರಿ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಬಳಿ ಭೂ ಕುಸಿತ ಉಂಟಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಮಡಿಕೇರಿ ನಗರ ವ್ಯಾಪ್ತಿಯಲ್ಲಿ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿರುತ್ತದೆ. ಹಾಲಿ ಖಾಸಗಿ ಮತ್ತು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಕಡೆಯಿಂದ ಹೊರಹೋಗುವ ಎಲ್ಲಾ ವಾಹನಗಳು ರಾಜಾಸೀಟು ರಸ್ತೆಯನ್ನು ಬಳಸಿ ಸಂಚರಿಸುತ್ತಿರುವುದಾಗಿದೆ. ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿರುವ ಕಾರಣ ಮತ್ತು ರಾಜಾಸೀಟು ಬಳಿ ಸಾರ್ವಜನಿಕರು ಮತ್ತು ಪ್ರವಾಸಿಗರ ವಾಹನ ನಿಲುಗಡೆಗೊಳಿಸುತ್ತಿರುವ ಕಾರಣ…
ಮಡಿಕೇರಿ ಜು.8 NEWS DESK : ನೆಲ್ಲಿಹುದಿಕೇರಿ ಕೆಪಿಎಸ್ ಶಾಲೆಗೆ ಉದ್ಯಮಿ ಸೆಬಾಸ್ಟಿನ್ (ದೇವಸಿ) ಅವರು ಬಿಸಿನೀರಿನ ಬಾಯ್ಲರನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭ ಎಸ್ಡಿಎಂಸಿ ಉಪಾಧ್ಯಕ್ಷರಾದ ಮುಸ್ತಫಾ, ಕೆಪಿಎಸ್ ನ ಉಪ ಪ್ರಾಂಶುಪಾಲರಾದ ಅನಿಲ್ ಕುಮಾರ್, ಪ್ರಾಥಮಿಕ ವಿಭಾಗದ ಶಿಕ್ಷಕ ವೃಂದದವರು ಹಾಜರಿದ್ದರು.
ಮಡಿಕೇರಿ ಜು.7 NEWS DESK : ಗೊಣಿಕೊಪ್ಪಲು ಕಾಫಿ ಮಂಡಳಿಯ ವತಿಯಿಂದ ಸುಸ್ಥಿರ ಕಾಫಿ ಕೃಷಿಗೆ ಅನುಸರಿಸಬೇಕಾದ ಉತ್ತಮ ಕೃಷಿ ಪದ್ಧತಿಗಳ ಕುರಿತು ಮಾಹಿತಿ ನೀಡಿದರು. ನಿಟ್ಟೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ರಾಮ ಮಟ್ಟದ ಕಾಫಿ ಬೆಳೆಗಾರರ ಸಭೆಯನ್ನು ಹಿರಿಯ ಕಾಫಿ ಬೆಳೆಗಾರರಾದ ಮಾಚಂಗಡ ಡಿಕ್ಕಿ ಅಯ್ಯಣ್ಣ ಅವರು ಉದ್ಘಾಟಿಸಿದರು. ಬಾಳೆಲೆ ವಲಯ ಕಾಫಿ ಮಂಡಳಿಯ ಸಹಾಯಕ ವಿಸ್ತರಣಾಧಿಕಾರಿ ಗಳಾದ ಮಹಿಜಾ ಪ್ರಸ್ತುತ ಕಾಫಿ ಬೆಳೆಗಾರರಿಗೆ ಕಾಫಿ ಮಂಡಳಿಯ ವತಿಯಿಂದ ಲಭ್ಯವಿರುವ ವಿವಿಧ ಯೋಜನೆಗಳು, ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ, ಕೊಳೆ ರೋಗ, ಬೆರ್ರಿ ಬೋರ್ , ಸಾರ್ಟ್ ಹೋಲ್ ಬೋರ್ ರೋಗಗಳನ್ನು ತಡೆಗಟ್ಟಲು ಅನುಸರಿಸಬೇಕಾದ ಕೃಷಿ ಪದ್ಧತಿಗಳು, ಕಾಫಿ ಬೆಳೆ ಅಭಿವೃದ್ಧಿಗೆ ಪೂರಕವಾದ ತೋಟ ನಿರ್ವಹಣಾ ವಿಧಾನಗಳ ಬಗ್ಗೆ ಬೆಳೆಗಾರರಿಗೆ ಮಾಹಿತಿ ನೀಡಿ ವೈಜ್ಞಾನಿಕ ಕಾಫಿ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ಕಾಫಿ ಕೃಷಿಯಲ್ಲಿ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳಬಹುದೆಂದು ತಿಳಿಸಿದರು. ಕಾಫಿ ಮಂಡಳಿಯ ಮಣ್ಣು ವಿಜ್ಞಾನಿಗಳಾದ ಪ್ರಪೂಲ ಕುಮಾರಿ ಕಾಫಿ…






