ಲೇಖಕ: admin

ಮಡಿಕೇರಿ ಆ.5 NEWS DESK : ಕೊಡಗು ಜಿಲ್ಲೆಯಲ್ಲಿ ಕಳೆದ ಬಾರಿಗೆ ಹೊಲಿಸಿದರೆ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಸದ್ಯ ಇದುವರೆಗಿನ ಮಳೆ ಪ್ರಮಾಣ, ಹಾರಂಗಿ ಜಲಾಶಯ ನೀರಿನ ಮಟ್ಟ ಹಾಗೂ ಬೆಳೆ ಪರಿಸ್ಥಿತಿ ಮತ್ತಿತರ ಬಗ್ಗೆ ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ ಅವರು ತಿಳಿಸಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಬರ ಪರಿಸ್ಥಿತಿ ಕುರಿತು ಬುಧವಾರ ನಡೆದ ಪರಿಶೀಲನಾ ಸಭೆಯಲ್ಲಿ ಮಾಹಿತಿ ಪಡೆದು ಸಚಿವರು ಮಾತನಾಡಿದರು. ಹವಾಮಾನ ವೈಪರಿತ್ಯದಿಂದ ಈ ಬಾರಿ ಮುಂಗಾರು ಆರಂಭವಾಗುವುದು ತಡವಾಗಿದೆ. ಜಿಲ್ಲೆಯ ಅಲ್ಲಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿದೆ. ಆದರೂ ಸಹ ಆಗಸ್ಟ್ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಭತ್ತ ನಾಟಿ ಕಾರ್ಯ ಹಾಗೂ ಇತರ ಕೃಷಿ ಚಟುವಟಿಕೆ ನಡೆಯಲಿದೆ ಎಂದು ಸಚಿವರು ಹೇಳಿದರು. ಜಿಲ್ಲೆಯಲ್ಲಿ ಮಳೆಯಿಂದಾಗಿ ಸ್ಥಳೀಯ ಸಂಸ್ಥೆ, ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯ ರಸ್ತೆಗಳು ಗುಂಡಿ ಬಿದ್ದಿದ್ದು, ಇವುಗಳನ್ನು ಮುಚ್ಚಲು…

Read More

ಮೈಸೂರು, ಆ 5 NEWS DESK : ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯದ ವಿವಿಧ ಯೋಜನೆಗಳಲ್ಲಿ ಕೃತಕ ಬುದ್ಧಿಮತ್ತೆ (Artificial Intelligence – AI) ತಂತ್ರಜ್ಞಾನವನ್ನು ಅಳವಡಿಸುವ ಕುರಿತು ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದರು. AI ಬಳಕೆಯ ಉದ್ದೇಶಗಳು, ಜಾರಿಗೆ ತರಲಿರುವ ಯೋಜನೆಗಳು, ವೈಯಕ್ತಿಕ ಮಾಹಿತಿಯ ಸುರಕ್ಷತೆ, ತಾರತಮ್ಯ ತಡೆಗಟ್ಟುವ ಕ್ರಮಗಳು ಹಾಗೂ ಸ್ವತಂತ್ರ ಮೌಲ್ಯಮಾಪನ ಮತ್ತು ಪರಿಶೀಲನೆ ಕುರಿತ ಮಾಹಿತಿಯನ್ನು ಅವರು ಸರ್ಕಾರದಿಂದ ಕೋರಿದ್ದರು. ಇದಕ್ಕೆ ಉತ್ತರಿಸಿದ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯವು, ಭಾರತAI (IndiaAI) ಮಿಷನ್‌ನ ವ್ಯಾಪ್ತಿಯಲ್ಲಿ ದೇಶೀಯ ಕೃತಕ ಬುದ್ಧಿಮತ್ತೆ ಸಂಸ್ಥೆಗಳ ಸಹಯೋಗದೊಂದಿಗೆ ಡಿಜಿಟಲ್ ಆಡಳಿತವನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು AI ಆಧಾರಿತ ತಂತ್ರಜ್ಞಾನಗಳ ಬಳಕೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದೆ. ಬಹುಭಾಷಾ AI ಚಾಟ್‌ಬಾಟ್‌ಗಳು, ವರ್ಚುವಲ್ ಸಹಾಯಕ ವ್ಯವಸ್ಥೆಗಳು ಹಾಗೂ ಹಜ್ ಸುವಿಧಾ ಆಪ್ ಸೇರಿದಂತೆ ನಾಗರಿಕ ಸೇವೆಗಳನ್ನು ಮತ್ತಷ್ಟು ಸುಲಭಗೊಳಿಸುವ ಡಿಜಿಟಲ್ ವೇದಿಕೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಸರ್ಕಾರ…

Read More

ಸುಂಟಿಕೊಪ್ಪ ಆ.5 NEWS DESK  : ಶ್ರೀ ಗೌರಿ ಗಣೇಶ ಹಬ್ಬದಲ್ಲಿ ಆಚರಣೆಯ ಡಿಜೆಗೆ ಅಳವಡಿಸಲು ಮುಂದಾಗಬೇಡಿ. ಬ್ಯಾಂಡ್‍ಸೆಟ್, ಓಲಗ, ನಾಸಿಕ್ ಬ್ಯಾಂಡ್, ನಗರಿ ಅಂತಹವುಗಳನ್ನು ಬಳಕೆ ಮಾಡುವಂತೆ ಶ್ರೀ ಗೌರಿ ಗಣೇಶ ಸಮಿತಿಯ ಪದಾಧಿಕಾರಿಗಳಿಗೆ ಸೋಮವಾರಪೇಟೆ ವಿಭಾಗದ ಡಿವೈಎಸ್‍ಪಿ ಚಂದ್ರಶೇಖರ್ ಹೇಳಿದರು. ಸುಂಟಿಕೊಪ್ಪ ಪೊಲೀಸ್ ಠಾಣಾ ಆವರಣದಲ್ಲಿ ಆಯೋಜಿಸಲಾದ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಶ್ರೀ ಗೌರಿ ಗಣೇಶ ಆಚರಣಾ ಸಮಿತಿಗಳ ಪೂರ್ವನಿಯೋಜಿತ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಹೋಬಳಿ ವ್ಯಾಪ್ತಿಯಲ್ಲಿ ಕಳೆದ ಬಾರೀ 24 ಗೌರಿ-ಗಣೇಶ ಮೂರ್ತಿಗಳನ್ನು ಆಚರಣಾ ಸಮಿತಿಯವರು ಪ್ರತಿಷ್ಠಾಪಿಸಿದ್ದು, ಕಾನೂನು ಪಾಲನೆಯೊಂದಿಗೆ ಶಿಸ್ತುಬದ್ಧವಾಗಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆÀ ಆಚರಣಾ ಸಮಿತಿಯವರು ಮುನ್ನಡೆಸಿರುವುದು ಶ್ಲಾಘನೀಯ ಎಂದು ಹೇಳಿದರು. ಸರಕಾರವು ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಆಯೋಜಕ ಸಮಿತಿಗಳು ಪೊಲೀಸ್‍ಠಾಣೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಂಡಿರಬೇಕು. ಮುಂಜಾಗೃತ ಕ್ರಮವಾಗಿ ಶ್ರೀ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸ್ಥಳದಲ್ಲಿ ಸಿಸಿಕ್ಯಾಮರಗಳನ್ನು ಅಳವಡಿಸುವುದರಿಂದ ಪುಂಡಾಪೋಕರಿಗಳು ಎಸಗುವ ಅಹಿತಕರ ಘಟನೆಗಳು…

Read More

ಮಡಿಕೇರಿ ಆ.5 NEWS DESK  : ಕೊಡಗಿನ ವಿಶಿಷ್ಟ ಸಂಸ್ಕೃತಿ ಪರಂಪರೆಗಳನ್ನು ಪ್ರತಿಬಿಂಬಿಸುವ ಮೂಲಕ ಜನ ಮನವನ್ನು ಗೆದ್ದಿರುವ “ವಾಂಟೆಡ್ ಬಾಲ” ಕಿರುಚಿತ್ರವನ್ನು ಇದೇ ಆ.7 ರಿಂದ 9ರವರೆಗೆ ಗೋಣಿಕೊಪ್ಪಲು ಸಿನಿಪ್ಲೆಕ್ಸ್ ಚಿತ್ರ ಮಂದಿರದಲ್ಲಿ ಪ್ರದರ್ಶಿಸಲಾಗುತ್ತದೆಂದು ಚಿತ್ರ ನಿರ್ದೇಶಕ ಸಂಕೇತ್ ಶಿವಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೊಣಿಕೊಪ್ಪಲಿನ ಸಿನಿಪ್ಲೆಕ್ಸ್‍ನಲ್ಲಿ ಸೂಚಿತ ಮೂರು ದಿನಗಳಂದು ಬೆಳಗ್ಗೆ 11 ಗಂಟೆ, ಮಧ್ಯಾಹ್ನ 1 ಮತ್ತು 3 ಗಂಟೆಗೆ ಚಿತ್ರ ಪ್ರದರ್ಶನ ನಡೆಯಲಿದೆ. ಜಿಲ್ಲೆಯ ಸಿನಿ ಪ್ರಿಯರು ಕಿರು ಚಿತ್ರವನ್ನು ವೀಕ್ಷಿಸುವ ಮೂಲಕ ಚಿತ್ರ ತಂಡವನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಸಾಹಿತಿಗಳಾದ ಮೇಜರ್ ಕುಶ್ವಂತ್ ಕೋಳಿಬೈಲು ಅವರ “ಕೂರ್ಗ್ ರೆಜಿಮೆಂಟ್” ಕೃತಿಯನ್ನು ಆಧರಿಸಿ ಕಿರುಚಿತ್ರವನ್ನು ನಿರ್ಮಿಸಲಾಗಿದೆ. ಕಿರುಚಿತ್ರದಲ್ಲಿ ಈಗಾಗಲೆ ಸಾಮಾಜಿಕ ಜಾಲ ತಾಣಗಳ ಮೂಲಕ ಪ್ರಸಿದ್ಧಿ ಪಡೆದಿರುವ “ಪೂಡೆ ಪೂಡೆ ವಾ” ಹಾಡು ಸೇರಿದಂತೆ ಒಟ್ಟು ನಾಲ್ಕು ಹಾಡುಗಳು ಇರುವುದಾಗಿ ಮಾಹಿತಿ ನೀಡಿದರು. ಚಿತ್ರದಲ್ಲಿ ಸಂಕೇತ್ ಶಿವಪ್ಪ, ಪ್ರಮೀತಾ ಕೇಚಮಾಡ, ಗಗನ್ ಗಣಪತಿ, ರಮೇಶ್…

Read More

ಮಡಿಕೇರಿ NEWS DESK ಆ.5 : “ಬ್ರೈನೋಬ್ರೈನ್” ಇಂಟರ್ ನ್ಯಾಷನಲ್ ದುಬೈ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಬೆಂಗಳೂರಿನ ಡಾ|| ಬಾಬು ಜಗಜೀವನ್ ರಾಂ ರಿಸರ್ಚ್ ಇನ್ಸ್ಟಿಟ್ಯೂಟ್‍ನಲ್ಲಿ ಆಯೋಜಿಸಲಾಗಿದ್ದ “178ನೇ ರಾಜ್ಯ ಮಟ್ಟದ “ಬ್ರೈನೋಬ್ರೈನ್ ಸ್ಪರ್ಧೆ-2026”ರಲ್ಲಿ ಮಡಿಕೇರಿಯ “ಬ್ರೈನೋಬ್ರೈನ್” ಕೇಂದ್ರದ 50 ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಪದಕ ಪಡೆದಿದ್ದಾರೆ. ಈ ಸ್ಪರ್ಧೆಯಲ್ಲಿ ಕರ್ನಾಟಕದ ಒಟ್ಟು 80 “ಬ್ರೈನೋಬ್ರೈನ್” ಕೇಂದ್ರಗಳಿಂದ ಸುಮಾರು 2000 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮಡಿಕೇರಿ “ಬ್ರೈನೋಬ್ರೈನ್” ಕೇಂದ್ರದ ತರಬೇತುದಾರರಾದ ಮಾಪಂಗಡ  ಕವಿತಾ ಕರುಂಬಯ್ಯ ಅವರ ನೇತೃತ್ವದಲ್ಲಿ ವಿವಿಧ ವಿಭಾಗಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಕೇವಲ 3 ನಿಮಿಷದಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತೀ ಚುರುಕಾಗಿ ಮಾಡುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಹೆಚ್ಚು ಮಕ್ಕಳು ಅಬಾಕಸ್ ತರಗತಿಗೆ ಹೊಸ ದಾಖಲಾತಿ ಪಡೆದುಕೊಂಡು ಅತೀ ಪರಿಶ್ರಮದಿಂದ ಶೇ.100ರಷ್ಟು ಫಲಿತಾಂಶದೊಂದಿಗೆ 24 ಚಾಂಪಿಯನ್ ಟ್ರೋಫಿ, 16 ಚಿನ್ನದ ಪದಕ ಮತ್ತು 10 ಬೆಳ್ಳಿಯ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಮಡಿಕೇರಿ “ಬ್ರೈನೋಬ್ರೈನ್” ಕೇಂದ್ರಕ್ಕೆ “ಬೆಸ್ಟ್…

Read More

ಮಡಿಕೇರಿ ಆ.4 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್, 07 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ನೇರ ಸಂದರ್ಶನ’ ನಡೆಯಲಿದೆ. ಈ ನೇರ ಸಂದರ್ಶನದಲ್ಲಿ ಡೊಬರ್ಮನ್ ಸೆಕ್ಯೂರಿಟಿ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್, ಮಂಗಳೂರು, ಸಂಸ್ಥೆಯು, ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ನೇರ ಸಂದರ್ಶನದಲ್ಲಿ ಫೀಲ್ಡ್ ಆಫೀಸರ್, ಫೀಲ್ಡ್ ಇನ್ವೆಸ್ಟಿಗೇಟರ್ ಹಾಗೂ ಆಡಳಿತ ಸಿಬ್ಬಂದಿ, ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಅರ್ಹತೆಗಳು ಪಿಯುಸಿ ಅಥವಾ ಪದವಿ, ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮತ್ತು ಕಂಪ್ಯೂಟರ್ ಜ್ಞಾನ, ಹೊಂದಿರುವಂತಹ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ವಯೋಮಿತಿ 18 ರಿಂದ 35 ವರ್ಷಗಳು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ.…

Read More

ಮಡಿಕೇರಿ ಆ.4 NEWS DESK : ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯಸೌಧದಲ್ಲಿ ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್ ರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು. ಯುವ ನಿಧಿ-ಯುವ ನಿಧಿ ಯೋಜನೆ ಕುರಿತು ಹೆಚ್ಚಿನ ಪ್ರಚಾರವಾಗಬೇಕು. ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿ ಯೋಜನೆಯ ಉಪಯೋಗವನ್ನು ಮಾಡಿಕೊಳ್ಳಲು ತಿಳಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಯಾರೆಲ್ಲಾ ಯುವ ನಿಧಿ ಯೋಜನೆಯಡಿ ಅರ್ಹರಾಗಿರುತ್ತಾರೆ ಎಂಬುದನ್ನು ಸಭೆಯಲ್ಲಿ ಉದ್ಯೋಗ ವಿನಿಮಯಾಧಿಕಾರಿಗಳು ಮಾಹಿತಿ ನೀಡಿದರು. 2024-25 ರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಾಗಿರಬೇಕು (ಪದವಿ-3000, ಡಿಪ್ಲೊಮ -1500.) ಸ್ನಾತಕೋತ್ತರ ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ರೂ.3 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಎಲ್ಲಾ ಕಾಲೇಜುಗಳಿಗೆ ನಿರಂತರವಾಗಿ ಭೇಟಿ ನೀಡಿ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕಿ ಇದರಿಂದ ಯೋಜನೆಯ ಸದುಪಯೋಗವಾಗುತ್ತದೆ. ರೇಡಿಯೋ ಪತ್ರಿಕೆ ಹಾಗೂ ದೃಶ್ಯಮಾಧ್ಯಮಗಳಲ್ಲಿ ಯೋಜನೆಯ ಕುರಿತು ಜಾಹೀರಾತು ನೀಡಲು ಪೊನ್ನಂಪೇಟೆ ತಾ.ಪಂ.ಗ್ಯಾರಂಟಿ ಅಧ್ಯಕ್ಷರಾದ ಪ್ರಶಾಂತ್ ಅವರು ತಿಳಿಸಿದರು. ::…

Read More

ಮಡಿಕೇರಿ ಆ.4 NEWS DESK : ಮಂಡ್ಯ ಜಿಲ್ಲೆಯ ರಾಜ್ಯ ಮಟ್ಟದ ಕನ್ನಡ ಮಾಸ ಪತ್ರಿಕೆ ಜೀವನಾಡಿ ಪತ್ರಿಕೆಯು ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸ್ಪರ್ಧೆ 2026 ಏರ್ಪಡಿಸಿದ್ದು ರಾಜ್ಯ ಮಟ್ಟದ ಜೀವನಾಡಿ ಕನ್ನಡ ಕಥಾ ಸ್ಪರ್ಧೆ, ಕನ್ನಡ ಪ್ರಬಂಧ ಸ್ಪರ್ಧೆ ಮತ್ತು ಕನ್ನಡ ಕವನ ಸ್ಪರ್ಧೆ ಏರ್ಪಡಿಸಿದೆ. ಕಥೆ ಪ್ರಬಂಧ ಕವಿತೆಗಳು ಸ್ವ ರಚನೆಯಾಗಿದ್ದು ಬೇರೆಲ್ಲೂ ಪ್ರಕಟವಾಗಿರಬಾರದು. ಕಥೆ 2,500 ಪದಗಳಿಗೆ ಮೀರಬಾರದು ಪ್ರಬಂಧ 2 ಸಾವಿರ ಪದಗಳಿಗೆ ಮೀರಿರಬಾರದು, ಕವಿತೆ 24 ಸಾಲುಗಳನ್ನು ಮೀರಿರಬಾರದು. ಅನುವಾದಿತ ಕಥೆ ಪ್ರಬಂಧ ಕವಿತೆಗಳಿಗೆ ಅವಕಾಶವಿಲ್ಲ. ಆಗಸ್ಟ್ 15 ರೊಳಗೆ ಜೀವನಾಡಿ ಮಾಸಪತ್ರಿಕೆ, ನಂ3, “ಚೈತ್ರ”, ಚಾಲುಕ್ಯರಸ್ತೆ, ನಾಡಪ್ರಭು ಕೆಂಪೇಗೌಡ ಬಡಾವಣೆ, ಕಿರಗಂದೂರು, ಮಂಡ್ಯ. ಇಲ್ಲಿಗೆ ಕಳುಹಿಸಬೇಕು. ಹೆಚ್ಚಿನ ವಿವರಗಳಿಗೆ ಡಾ. ಎಚ್.ಎಸ್ ಮುದ್ದೇಗೌಡ 98451 98098 ಅಥವಾ ಎಂ.ಪಿ ಕೇಶವ ಕಾಮತ್ 94483 46276 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

Read More

ಕಾರ್ಕಳ ಆ.4 NEWS DESK : ಕಾರ್ಕಳದ ಜೋಡು ರಸ್ತೆಯಲ್ಲಿರುವ ಕ್ರಿಯೇಟಿವ್ ಪುಸ್ತಕ ಮನೆಯ ವತಿಯಿಂದ ಮಾನ್ಸೂನ್ ಪ್ರಯುಕ್ತವಾಗಿ ಪುಸ್ತಕಗಳ ವಿಶೇಷರಿಯಾಯಿತಿಯೊಂದಿಗೆ ಭರ್ಜರಿ ಮಾರಾಟ ನಡೆಯುತ್ತಿದೆ. ಯಾವುದೇ ಪ್ರಕಾಶನದ 2 ಪುಸ್ತಕಗಳಿಗೆ ಶೇ.20 ರಿಯಾಯಿತಿ, 3 ಪುಸ್ತಕಗಳಿಗೆ ಶೇ.30 ರಿಯಾಯಿತಿ ಹಾಗೂ ಪುಸ್ತಕ ಮನೆ ಪ್ರಕಾಶನದ 5 ಅಥವಾ ಅದಕ್ಕಿಂತ ಹೆಚ್ಚಿನ ಪುಸ್ತಕಗಳಿಗೆ ಶೇ.50 ರಿಯಾಯಿತಿ! ಈ ವಿಶೇಷ ಕೊಡುಗೆ ಆಗಸ್ಟ್ 15 ರವರೆಗೆ ಮಾತ್ರ. ಹೆಚ್ಚಿನ ಮಾಹಿತಿಗಾಗಿ : 9606474296.

Read More

ಮಡಿಕೇರಿ NEWS DESK ಆ.4 : ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯು ಗೌಡ ಜನಾಂಗದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಸೆ.15 ರೊಳಗೆ ಅರ್ಜಿಯನ್ನು ಸಲಿಸುವಂತೆ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಮನವಿ ಮಾಡಿದ್ದಾರೆ. 10ನೇ ತರಗತಿ ಕನ್ನಡ ಮಾಧ್ಯಮದಲ್ಲಿ ಶೇ.85 ಮೇಲ್ಪಟ್ಟು ಮತ್ತು ಆಂಗ್ಲ ಮಾಧ್ಯಮದಲ್ಲಿ ಶೇ.90 ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ, ಪಿ.ಯು.ಸಿಯಲ್ಲಿ ಗ್ರಾಮೀಣ ವಿಭಾಗದಲ್ಲಿ ಶೇ.90 ಮೇಲ್ಪಟ್ಟು ಮತ್ತು ನಗರ ವಿಭಾಗದಲ್ಲಿ ಶೇ.95 ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಪದವಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಸಿ.ಇ.ಟಿ ಯಲ್ಲಿ 1000 ರ‍್ಯಾಂಕ್ ಒಳಗೆ ಮತ್ತು ಎನ್.ಇ.ಇ.ಟಿ ಯಲ್ಲಿ ರಾಷ್ಟ್ರಮಟ್ಟದಲ್ಲಿ 5000 ರಾಂಕ್ ಒಳಗೆ ಪಡೆದುಕೊಂಡಿರುವ ಪ್ರತಿಭಾವಂತ ವಿದ್ಯಾರ್ಥಿಗಳು ‘ಪ್ರತಿಭಾ ಪುರಸ್ಕಾರ’ ಪಡೆಯಲು ಅರ್ಹರಾಗಿದ್ದಾರೆ. ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳು ದಿನಾಂಕ 15-09-2026ರ ಒಳಗೆ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯೊಡನೆ…

Read More