ಮಡಿಕೇರಿ ಆ.31 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವು ಸೆಪ್ಟೆಂಬರ್, 4 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಟಿ.ಎನ್.ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯ ಸಮಿತಿ ಅಧ್ಯಕ್ಷರಾದ ಜಿ.ಎಲ್.ದಾಸ, ಗೌರವಾಧ್ಯಕ್ಷರಾದ ಜಿ.ಎ.ಚಾಮಿ, ಜಿ.ವಿ.ರವಿಕುಮಾರ್, ಜಿ.ಜಿ.ಬಾಲಕೃಷ್ಣ, ಉಪಾಧ್ಯಕ್ಷರಾದ ಜಿ.ಸಿ.ಜಗದೀಶ್, ಪ್ರಧಾನ ಕಾರ್ಯದರ್ಶಿ…
ಲೇಖಕ: admin
ವಿರಾಜಪೇಟೆ, ಆ.31 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವಿರಾಜಪೇಟೆ ತಾಲೂಕಿನ ಮೂರ್ನಾಡು ವಲಯ, ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಮರಗೋಡು ಇವರ ಜಂಟಿ ಆಶ್ರಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ, ಗಾಲಿಕುರ್ಚಿ ಹಾಗೂ ವಾಟರ್ ಬೆಡ್ ವಿತರಣೆ ಮತ್ತು ಸಭಾ ಕಾರ್ಯಕ್ರಮವು ಮರಗೋಡಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ಗೀತಾ ಕೆ.ಸಿ. ವಹಿಸಿದ್ದರು. ಮರಗೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕಾಂಗಿರ ಎನ್. ಸತೀಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಮಾಜಮುಖಿ ಕಾರ್ಯಗಳು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಮರಗೋಡು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಚಿತ್ರ ಬಿ.ಪಿ. ಮಾತನಾಡಿ, ಜನಮಂಗಲ ಕಾರ್ಯಕ್ರಮದಡಿ ಅರ್ಹ ಫಲಾನುಭವಿಗಳಿಗೆ ವೀಲ್ಚೇರ್ ಹಾಗೂ ವಾಟರ್…
ವಿರಾಜಪೇಟೆ ಆ.31 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮೆಡಿಕಲ್ ವಿಭಾಗ, ರಾಜಯೋಗ ಶಿಕ್ಷಣ ಮತ್ತು ಸಂಶೋಧನಾ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ನಶೆ ಮುಕ್ತ ಭಾರತ ಅಭಿಯಾನ ಹಾಗೂ ಮಿಷನ್ ಸ್ಪಂದನ ಯೋಜನೆಯಡಿ ಆಯೋಜಿಸಲಾಗಿದ್ದ ಬೃಹತ್ ಜಾಗೃತಿ ಕಾರ್ಯಕ್ರಮಗಳು ವಿರಾಜಪೇಟೆ ನಗರ ಹಾಗೂ ಸುತ್ತಮುತ್ತಲಿನ ವಿವಿಧ ಕಾಲೇಜುಗಳಲ್ಲಿ ಯಶಸ್ವಿಯಾಗಿ ನಡೆಯಿತು. ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ನಿರ್ದೇಶನ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪರಿಕಲ್ಪನೆಯಂತೆ ಭಾರತದಾದ್ಯಂತ ಸುಮಾರು 7,000 ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾದ 10 ಕೋಟಿ ನಶೆ ಮುಕ್ತ ಪ್ರತಿಜ್ಞೆಗಳ ಮಹಾ ಅಭಿಯಾನದ ಭಾಗವಾಗಿ ಈ ಜಾಗೃತಿ ತರಬೇತಿಗಳನ್ನು ನಡೆಸಲಾಯಿತು. ಇಂದಿನ ಯುವಜನತೆ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಮಾನಸಿಕ ಒತ್ತಡ ಹಾಗೂ ವಿವಿಧ ದುರಭ್ಯಾಸಗಳಿಂದ ಹೊರಬರಲು ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಆಧ್ಯಾತ್ಮಿಕ ಜ್ಞಾನ ಮತ್ತು ರಾಜಯೋಗ ಧ್ಯಾನದ ಕುರಿತು ವಿಶೇಷ ಮಾರ್ಗದರ್ಶನ ನೀಡಲಾಯಿತು. ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಎಂ.ಕೆ. ಪದ್ಮಾ ಅವರ…
ವಿರಾಜಪೇಟೆ ಆ.31 NEWS DESK : ಜಮಾಅತೆ ಇಸ್ಲಾಮಿ ಹಿಂದ್ ಸಂಸ್ಥೆಯು ಆಯೋಜಿಸುವ ಪ್ರತಿಯೊಂದು ಕಾರ್ಯಕ್ರಮವೂ ಜನಮುಖಿಯಾಗಿದ್ದು, ಸಾಮುದಾಯಿಕ ಕಳಕಳಿಯಿಂದ ಕೂಡಿರುತ್ತದೆ ಎಂದು ಅರಮೇರಿ ಕಳಂಚೇರಿ ಮಠದ ಶ್ರೀ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನೋತ್ಸವದ ಅಂಗವಾಗಿ ಜಮಾಅತೆ ಇಸ್ಲಾಮಿ ಹಿಂದ್ ಕೊಡಗು ಜಿಲ್ಲಾ ಘಟಕದ ವತಿಯಿಂದ ‘ಸೀರತ್ ಅಭಿಯಾನ’ದ ಅಂಗವಾಗಿ ವಿರಾಜಪೇಟೆಯ ಶ್ರೀ ವಿರಕ್ತ ದೊಡ್ಡಮಠದಲ್ಲಿ ಆಯೋಜಿಸಲಾಗಿದ್ದ ಎರಡು ಪ್ರಮುಖ ಸಾಹಿತ್ಯ ಕೃತಿಗಳ ಬಿಡುಗಡೆ ಹಾಗೂ ಧಾರ್ಮಿಕ ಸೌಹಾರ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಾಹಿತ್ಯದ ಮೂಲಕ ಪ್ರವಾದಿ ಮುಹಮ್ಮದ್ (ಸ) ಅವರ ಉನ್ನತ ಚಿಂತನೆಗಳು ಮತ್ತು ಮಾನವೀಯ ಮೌಲ್ಯಗಳನ್ನು ಜನಮಾನಸಕ್ಕೆ ತಲುಪಿಸುವುದರ ಜೊತೆಗೆ, ಅವು ಜನರ ನೆನಪಿನಲ್ಲಿ ಸದಾ ಉಳಿಯುವಂತೆ ಮಾಡುವ ಉದ್ದೇಶದಿಂದ ಕೃತಿ ಬಿಡುಗಡೆ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದರು. ಇತ್ತೀಚೆಗಷ್ಟೇ ನಿರಾಶ್ರಿತರಿಗೆ ಮನೆಗಳನ್ನು ಹಸ್ತಾಂತರಿಸುವಂತಹ ಉತ್ತಮ ಸಾಮಾಜಿಕ ಕಳಕಳಿಯ ಕಾರ್ಯಗಳನ್ನು ನಾವು ಕಂಡಿದ್ದೇವೆ. ಶಾಂತಿ ಪ್ರಕಾಶನ ಸಂಸ್ಥೆಯು ಕಳೆದ ಹಲವು…
ಸೋಮವಾರಪೇಟೆ, NEWS DESK ಆ.30: ಒಕ್ಕಲಿಗರ ಯುವ ವೇದಿಕೆ ಆಶ್ರಯದಲ್ಲಿ ಒಕ್ಕಲಿಗರ 10ನೇ ವರ್ಷದ ಜಿಲ್ಲಾ ಮಟ್ಟದ ಕೆಸರುಗದ್ದೆ ಕ್ರೀಡಾಕೂಟವನ್ನು ಸೆ.6ರಂದು ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಗೂರು ಗ್ರಾಮದ ದೇವರಾಜು ಅವರ ಗದ್ದೆಯಲ್ಲಿ ಏರ್ಪಡಿಸಲಾಗಿದೆ ಎಂದು ವೇದಿಕೆಯ ಕ್ರೀಡಾಕೂಟ ಉಸ್ತುವಾರಿ ದಿವಾಕರ್ ಕೂತಿ ಹೇಳಿದರು. ಸೆ.6ರಂದು ದಿನವಿಡೀ ಕ್ರೀಡಾಕೂಟ ನಡೆಯಲಿದೆ. ಪ್ರತಿವರ್ಷವೂ ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಅವಕಾಶ ಕಲ್ಪಿಸುತ್ತಿರುವ ವೇದಿಕೆ, ಈ ಬಾರಿ ದಶಮಾನೋತ್ಸವದ ಸಂಭ್ರಮದಲ್ಲಿ ಕ್ರೀಡಾಕೂಟವನ್ನು ಮತ್ತಷ್ಟು ವಿಶೇಷವಾಗಿ ಆಯೋಜಿಸುತ್ತಿದೆ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಸಾಂಪ್ರದಾಯಿಕವಾಗಿ ನಡೆಯುತ್ತಿದ್ದ ಕೆಸರುಗದ್ದೆ ಕ್ರೀಡೆಗಳು ಇತ್ತೀಚಿನ ವರ್ಷಗಳಲ್ಲಿ ಮರೆಯಾಗುತ್ತಿವೆ. ಇಂತಹ ಕ್ರೀಡೆಗಳನ್ನು ಉಳಿಸುವುದರೊಂದಿಗೆ ಯುವಜನರಲ್ಲಿ ಕ್ರೀಡಾಸಕ್ತಿ ಬೆಳೆಸುವುದು ಹಾಗೂ ಸ್ಥಳೀಯ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಕ್ರೀಡಾಕೂಟದ ಪ್ರಮುಖ ಉದ್ದೇಶವಾಗಿದೆ. ಅಲ್ಲದೆ, ಯುವಕರು ಭತ್ತ ಕೃಷಿಯತ್ತ ಚಿತ್ತ ಹರಿಸಬೇಕು ಎಂಬ ಸಂದೇಶವನ್ನೂ ಕ್ರೀಡಾಕೂಟದ ಮೂಲಕ ನೀಡಲಾಗುತ್ತಿದೆ ಎಂದು ತಿಳಿಸಿದರು. ಪುರುಷರ ವಿಭಾಗದಲ್ಲಿ ವಾಲಿಬಾಲ್, ಹಗ್ಗಜಗ್ಗಾಟ ಹಾಗೂ ಕೆಸರುಗದ್ದೆ…
ಸುಂಟಿಕೊಪ್ಪ, NEWS DESK ಆ.31: ಪ್ರತಿಯೊಬ್ಬ ಮಹಿಳೆಯನ್ನು ಗೌರವಿಸಿ, ಅವರಿಗೆ ಸಂಕಷ್ಟಗಳು ಎದುರಾದಾಗ ಪುರುಷ ಸಮಾಜ ಬೆಂಬಲವಾಗಿ ನಿಂತು, ಸಹೋದರಿಯರ ಸಮಸ್ಯೆಗಳನ್ನು ನಿವಾರಿಸಲು ಮುಂದಾದಾಗ ಮಾತ್ರ ರಕ್ಷಾಬಂಧನದ ಆಶಯ ಸಾರ್ಥಕವಾಗುತ್ತದೆ ಎಂದು ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಪ್ಪ ಕೋಟ್ಯಾನ್ ಹೇಳಿದರು. ಮಂಜನಾಥಯ್ಯ–ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಾರಾಯಣ ಗುರು ಬಿಲ್ಲವ ಸೇವಾ ಸಂಘ, ದೇಯಿ ಬೈದೇತಿ ಬಿಲ್ಲವ ಮಹಿಳಾ ಸಂಘ ಹಾಗೂ ಬಿಲ್ಲವ ವಿದ್ಯಾರ್ಥಿ ಘಟಕದ ವತಿಯಿಂದ ಆಯೋಜಿಸಿದ್ದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಹಿಳೆಯರಿಗೆ ಯಾವುದೇ ಸಮಸ್ಯೆ ಎದುರಾದರೂ ಅದನ್ನು ತಮ್ಮ ಮನೆಯ ಸಹೋದರಿಯ ಸಮಸ್ಯೆ ಎಂದು ಭಾವಿಸಿ, ಬಗೆಹರಿಸಲು ಎಲ್ಲರೂ ಸಿದ್ಧರಿರಬೇಕು. ಈ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಲು ಸಾಧ್ಯ. ಪ್ರತಿಯೊಬ್ಬ ಸಹೋದರನು ತನ್ನ ಸಹೋದರಿಯ ರಕ್ಷಣೆಗೆ ಮುಂದಾದರೆ ರಾಮರಾಜ್ಯದ ಕಲ್ಪನೆ ನನಸಾಗಲಿದೆ ಎಂದು ಅವರು ಹೇಳಿದರು. ಸುಂಟಿಕೊಪ್ಪ ಹೋಬಳಿ ನಾರಾಯಣ ಗುರು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಬಿ.ಎಂ. ಮಣಿಮುಖೇಶ್ ಮಾತನಾಡಿ,…
ಮಡಿಕೇರಿ NEWS DESK ಆ.31 : ಕಾವೇರಿ ನದಿ ನೀರಿನಿಂದ ಸಾಕಷ್ಟು ಲಾಭ ಮಾಡಿಕೊಳ್ಳುತ್ತಿರುವ ರಾಜ್ಯ ಸರಕಾರ ಕಾವೇರಿಯ ಜನ್ಮ ಸ್ಥಳ ಕೊಡಗಿನ ಅಭಿವೃದ್ಧಿಗೆ ದೊಡ್ಡ ಮೊತ್ತದ ಅನುದಾನವನ್ನು ನೀಡದೆ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈ ಬಾರಿ ಸುರಿದ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಎಲ್ಲಾ ರಸ್ತೆಗಳನ್ನು ಪುನರ್ ಡಾಂಬರೀಕರಣ ಮತ್ತು ಕಾಂಕ್ರಿಟೀಕರಣ ಮಾಡುವ ಅನಿವಾರ್ಯತೆ ಇದೆ. ಆದ್ದರಿಂದ ಕೊಡಗಿನ ರಸ್ತೆಗಳ ಅಭಿವೃದ್ಧಿಗಾಗಿ ರಾಜ್ಯ ಸರಕಾರ ರೂ.1 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ನ್ನು ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದ್ದಾರೆ. ಕೊಡಗಿನಲ್ಲಿ ಉತ್ತಮ ಮಳೆಯಾಗುವುದರಿಂದ ರಾಜ್ಯದ ಕೋಟ್ಯಾಂತರ ಜನ ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದಾರೆ. ನೀರಿಗಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ನಡೆಯುತ್ತಿರುವ ಸಂಘರ್ಷ ಶಮನವಾಗಲು ಜಿಲ್ಲೆಯಲ್ಲಾಗಿರುವ ಮಳೆಯೇ ಕಾರಣವಾಗಿದೆ. ಮಳೆಗಾಗಿ ಪ್ರಾರ್ಥನೆ…
ಸುಂಟಿಕೊಪ್ಪ, NEWS DESK ಆ.31: ಸುಂಟಿಕೊಪ್ಪ ಮಾಲಯಾಳಿ ಸಮಾಜದ 2026-27ನೇ ಸಾಲಿನ ಅಧ್ಯಕ್ಷರಾಗಿ ಕೆ.ಕೆ. ವಾಸುದೇವ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಕೆ. ಕಮಲಾಸನ್ ಆಯ್ಕೆಯಾಗಿದ್ದಾರೆ. ಭಾನುವಾರ ಶ್ರೀ ಮುತ್ತಪ್ಪ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವಿ.ಕೆ. ರಾಜು, ಸಹ ಕಾರ್ಯದರ್ಶಿಗಳಾಗಿ ವೇಲಾಯುಧನ್, ಶಶಿಕುಮಾರ್ ಹಾಗೂ ಟಿ.ಕೆ. ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ಕೆ. ಕನೀಷ್ ಕುಮಾರ್ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಕೆ.ಪಿ. ವಿನೋದ್, ಭಾಸ್ಕರನ್, ವಿ.ಎ. ಸಂತೋಷ್ ಕುಮಾರ್, ರಮೇಶ್ ಪಿಳ್ಳೆ ಹಾಗೂ ಪಿ.ಸಿ. ಮೋಹನ್ ಅವರನ್ನು ಆಯ್ಕೆ ಮಾಡಲಾಯಿತು. ಕ್ರೀಡಾ ಕಾರ್ಯದರ್ಶಿಯಾಗಿ ಪಿ.ಸಿ. ಸುರೇಶ್ ಆಯ್ಕೆಯಾಗಿದ್ದಾರೆ. ಮಹಿಳಾ ವಿಭಾಗದ ಅಧ್ಯಕ್ಷರಾಗಿ ವಿ. ಶೈಜಾ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸುಧಾ ಆಯ್ಕೆಯಾಗಿದ್ದು, ಸದಸ್ಯರಾಗಿ ತುಳಸಿ, ಶೋಭಾ, ಅಕ್ಷತಾ, ಸುಜಿತಾ, ಚಂದ್ರಿಕಾ, ರಂಜಿನಿ, ಗೀತಾದೇವಿ, ಕವಿತಾ, ಪ್ರಭಾಕರ್, ಮಂಜುಳಾ ಸುಕುಮಾರ್, ಸುಜಾತ, ಶ್ಯಾಮಲ ಹಾಗೂ ಸ್ವರ್ಣ ಅವರನ್ನು ಆಯ್ಕೆ ಮಾಡಲಾಯಿತು.
ಮಡಿಕೇರಿ, NEWS DESK ಆ 31- ಕೊಡಗು ವಿದ್ಯಾಲಯದ ಎನ್.ಸಿ.ಸಿ ಕೆಡೆಟ್ *ಗೋಲ್ಡನ್ ಸಾರ್ಜೆಂಟ್ ಜೇಷ್ಟ ಸುಬ್ಬಯ್ಯ ಎಂ.ಹೆಚ್* ಅವರು ಪ್ರತಿಷ್ಠಿತ ಅಖಿಲ ಭಾರತ ತಲ್ ಸೈನಿಕ್ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ. ಈ ಶಿಬಿರವು 2026ರ ಆಗಸ್ಟ್ 31 ರಿಂದ ಸೆಪ್ಟೆಂಬರ್ 11 ರವರೆಗೆ ನವದೆಹಲಿಯಲ್ಲಿ ನಡೆಯಲಿದೆ. ಫೈರಿಂಗ್ (ಗ್ರೂಪಿಂಗ್) ವಿಭಾಗದಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದಿಂದ 3 ಕೆಡೆಟ್ಗಳ ಮಾತ್ರ ಆಯ್ಕೆಯಾಗಿದ್ದು, ಅದರಲ್ಲಿ ಜೇಷ್ಟ ಸುಬ್ಬಯ್ಯ ಒಬ್ಬರಾಗಿದ್ದಾರೆ. ಕರ್ನಾಟಕದ ವಿವಿಧೆಡೆ ನಡೆದ 7 ಆಯ್ಕೆ ಶಿಬಿರಗಳಲ್ಲಿ ಜೇಷ್ಟ ಸುಬ್ಬಯ್ಯ ಭಾಗವಹಿಸಿ, ಗ್ರೂಪಿಂಗ್ ಶೂಟಿಂಗ್ ಸ್ಪರ್ಧೆಯಲ್ಲಿ 1.2 ಸೆಂ.ಮೀ ಗ್ರೂಪಿಂಗ್ ಸಾಧನೆ ಮಾಡುವ ಮೂಲಕ ಈ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾನೆ ಎಂದು ಶಾಲಾ ಪ್ರಾಂಶುಪಾಲರಾದ ಸುಮಿತ್ರಾ ತಿಳಿಸಿದ್ದಾರೆ. ಜೇಷ್ಟ ಸುಬ್ಬಯ್ಯ ಮರಗೋಡುವಿನ ಕೃಷಿಕ ಮಂಡಿರ ಎಂ.ವಿ. ಹರೀಶ್ ಮತ್ತು ವಿಮಾ ದಂಪತಿಯ ಪುತ್ರನಾಗಿದ್ದು 19ನೇ ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ ಯ ಕೆಡೆಟ್ ಆಗಿದ್ದಾನೆ.
ಚೆಟ್ಟಳ್ಳಿ, NEWS DESK ಆ.30: ಮಳೆಯ ಪ್ರಮಾಣ ತೀವ್ರವಾಗಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕಾಫಿ, ಕರಿಮೆಣಸು, ಭತ್ತ ಸೇರಿದಂತೆ ವಿವಿಧ ಬೆಳೆಗಳ ಮೇಲೆ ಪರಿಣಾಮ ಬೀರುವ ಆತಂಕ ಎದುರಾಗಿದ್ದು, ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಬೇಕೆಂದು ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಒತ್ತಾಯಿಸಿದರು. ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯಲ್ಲಿ ಮಾತನಾಡಿದ ಅವರು, ಕುಶಾಲನಗರ ಪ್ರದೇಶದಲ್ಲಿ ಬರದ ಪರಿಸ್ಥಿತಿ ಇದ್ದರೂ ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವುದು ವಿಷಾದನೀಯ ಎಂದರು. ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ಸರ್ಕಾರ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಕುರಿತು ಸಂಘದ ವತಿಯಿಂದ ಸರ್ಕಾರಕ್ಕೆ ಪತ್ರ ಬರೆದು ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸುವಂತೆ ಒತ್ತಾಯಿಸಲು ಮಹಾಸಭೆಯಲ್ಲಿ ತೀರ್ಮಾನಿಸಲಾಯಿತು. ಸಹಕಾರ ಸಂಘಗಳ ಆಡಳಿತ ವ್ಯವಸ್ಥೆಯನ್ನು ಗ್ರಾಮ ಪಂಚಾಯಿತಿಗಳ ಮಾದರಿಯಲ್ಲಿ ರೂಪಿಸಲು ಸರ್ಕಾರ ಮುಂದಾಗಿರುವುದು ಸರಿಯಲ್ಲ ಎಂದು ಮಣಿ ಉತ್ತಪ್ಪ ಹೇಳಿದರು. ಹಿಂದಿನ…






