ಮಡಿಕೇರಿ NEWS DESK ಜೂ.2 : ಕೊಡಗು ವೈದ್ಯಕಿಯ ವಿಜ್ಞಾನಗಳ ಸಂಸ್ಥೆಯ ಸಹ ಪ್ರಾಧ್ಯಾಪಕಿ ಡಾ.ಮಮತಾ ವೈ. ಅವರಿಗೆ ಉತ್ತಮ ಸೇವೆಯನ್ನು ಪರಿಗಣಿಸಿ ಜ್ಞಾನಜ್ಯೋತಿ ಸಮಾಜಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಟ್ರಸ್ಟ್ “ಸಮಾಜ ಸೇವಾ ರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಿತು. ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆದ “ನಾಡು-ನುಡಿ ಸಾಂಸ್ಕೃತಿಕ ಉತ್ಸವ 2026” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ.ಮಮತಾ ವೈ. ಅವರು ಈ ಹಿಂದೆ ಡಾ.ಬಿ.ಆರ್.ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಡಿಕೇರಿ ಘಟಕದಿಂದ ಉತ್ತಮ ಸೇವಾ ಪ್ರಶಸ್ತಿಯನ್ನು ಪಡೆದಿದ್ದಾರೆ.
ಲೇಖಕ: admin
ಮಡಿಕೇರಿ NEWS DESK ಜೂ.2 : ಕೊಡಗು ಜಿಲ್ಲೆಯ ಜನಸ್ನೇಹಿ ಶಾಸಕದ್ವಯರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ ಮೂಲಕ ರಾಜ್ಯ ಮಟ್ಟದಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಅಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯು ಅವರು ಕೊಡಗು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಕಳೆದ ಮೂರು ವರ್ಷಗಳಿಂದ ಅವಿರತ ಶ್ರಮ ವಹಿಸುತ್ತಿರುವ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಸಚಿವ ಸ್ಥಾನವನ್ನು ಹೊಂದಲು ಅರ್ಹರಾಗಿದ್ದಾರೆ. ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು, ಸರ್ವ ಜನಾಂಗಗಳ ಪ್ರಗತಿಗಾಗಿ ಸ್ಪಂದಿಸಲು ಮತ್ತು ರಾಜ್ಯದ ಜನರ ಸೇವೆ ಮಾಡಲು ಇವರಿಬ್ಬರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಬ್ಬರು ಸಜ್ಜನ ಶಾಸಕರಿಗೆ ಸಚಿವ ಸ್ಥಾನ ನೀಡಿದರೆ ದಕ್ಷ ಆಡಳಿತದಿಂದ ಸರಕಾರದ ಘನತೆ ಮತ್ತಷ್ಟು ಹೆಚ್ಚಲಿದೆ. ಅಲ್ಲದೆ ಎಲ್ಲಾ ಸಮುದಾಯಗಳ ಪ್ರೀತಿ,…
ಮಡಿಕೇರಿ NEWS DESK ಜೂ.2 : ರಾಜ್ಯ ಸರಕಾರದ ನೂತನ ಸಚಿವ ಸಂಪುಟದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಗೌಡ ಯುವ ವೇದಿಕೆ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಯುವ ವೇದಿಕೆಯ ಅಧ್ಯಕ್ಷ ಬಾಲಾಡಿ ಮನೋಜ್ ಹಾಗೂ ಆಡಳಿತ ಮಂಡಳಿಯ ಸದಸ್ಯರು ಕೊಡಗಿನ ಜನತೆಯ ಆಕಾಂಕ್ಷೆ ಹಾಗೂ ವಿಶೇಷವಾಗಿ ಕೊಡಗಿನ ಒಕ್ಕಲಿಗ ಜನಾಂಗದ ನಿರೀಕ್ಷೆಯಂತೆ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ರಾಜ್ಯದ 25ನೇ ಮುಖ್ಯಮುಖ್ಯಂತ್ರಿಗಳಾಗಿ ಅಧಿಕಾರ ಸ್ವೀಕರಿಸುತ್ತಿರುವುದು ಹೆಮ್ಮೆ ಎನಿಸಿದೆ. ನೂತನ ಸಚಿವ ಸಂಪುಟದಲ್ಲಿ ಯುವ ಶಾಸಕರಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಿದರೆ ಯುವ ಸಮೂಹಕ್ಕೆ ಮತ್ತಷ್ಟು ಬಲ ಬಂದoತ್ತಾಗುತ್ತದೆ ಮತ್ತು ರಾಜಕೀಯ ಸ್ಫೂರ್ತಿ ತುಂಬಿದoತ್ತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲೆಯ ಇಬ್ಬರು ಶಾಸಕರು ಅಭಿವೃದ್ಧಿ ಕಾರ್ಯಗಳನ್ನು ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ನಡೆಸುತ್ತಿದ್ದಾರೆ. ವೀರ ಸೈನಿಕರ ಪ್ರತಿಮೆ ಮರುನಿರ್ಮಾಣ ಕಾರ್ಯ,…
ಮಡಿಕೇರಿ NEWS DESK ಜೂ.2 : ರಾಜ್ಯದಲ್ಲಿ ನೂತನ ಮಂತ್ರಿಮoಡಲ ರಚನೆಯ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್.ಪಿ.ಚಂದ್ರಶೇಖರ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅನುಭವಿ ರಾಜಕಾರಣಿಗಳಾಗಿ ಆಡಳಿತದಲ್ಲಿ ದಕ್ಷತೆಯನ್ನು ಮೆರೆದು ಜನಸ್ನೇಹಿ ನಾಯಕರಾಗಿ ಗುರುತಿಸಿಕೊಂಡಿರುವ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ಲಭಿಸಿದರೆ ಕೊಡಗಿನ ಸಮಗ್ರ ಅಭಿವೃದ್ಧಿಯಾಗಲಿದೆ. ಎಂದು ತಿಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಶಾಸಕದ್ವಯರು ಎಲ್ಲಾ ಜಾತಿ, ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಸರಕಾರದಿಂದ ಸಾಕಷ್ಟು ಅನುದಾನ ತಂದಿದ್ದಾರೆ. ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲೂ ಮೇಲುಗೈ ಸಾಧಿಸಿದ್ದಾರೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಮುಂಚೂಣಿಯಲ್ಲಿದ್ದಾರೆ. ಅಭಿವೃದ್ಧಿಪರ ಚಿಂತನೆಯ ಯುವ ಶಾಸಕರಿಗೆ ಸಚಿವ ಸ್ಥಾನದ ಅಧಿಕಾರ ದೊರೆತರೆ ರಾಜ್ಯ ಮಟ್ಟದಲ್ಲಿ ಉತ್ತಮ ಸೇವೆ ಮಾಡಲು ಅವಕಾಶ ಲಭಿಸಿದಂತ್ತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ…
ಮೈಸೂರು NEWS DESK ಜೂ.2 : ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಸ್ಪಷ್ಟಪಡಿಸಿದ್ದಾರೆ. ಈ ಸ್ಪಷ್ಟೀಕರಣವು ಅವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ನಂತರ ಹೊರಬಂದಿದ್ದು, ಈ ಸಂದರ್ಭದಲ್ಲಿ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ರೈಲ್ವೆ ಮೂಲಸೌಕರ್ಯ ಮತ್ತು ಸಂಪರ್ಕ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸಲಾಯಿತು. ಇತ್ತೀಚಿನ ದಿನಗಳಲ್ಲಿ ಹರಿದಾಡುತ್ತಿರುವ ಕೆಲವು ವರದಿಗಳು ಮತ್ತು ಚರ್ಚೆಗಳು ಕೊಡಗಿನ ಮೂಲಕ ರೈಲು ಮಾರ್ಗ ಹಾದುಹೋಗುವ ಸಾಧ್ಯತೆಯ ಬಗ್ಗೆ ಸಾರ್ವಜನಿಕರ ಒಂದು ವಲಯದಲ್ಲಿ ಆತಂಕವನ್ನು ಉಂಟುಮಾಡಿವೆ ಎಂದು ಶ್ರೀ ಯದುವೀರ್ ತಿಳಿಸಿದ್ದಾರೆ. ಆದರೆ, ರೈಲ್ವೆ ಸಚಿವರೊಂದಿಗೆ ನಡೆದ ಮಾತುಕತೆಯಲ್ಲಿ ಇಂತಹ ಯಾವುದೇ ಪ್ರಸ್ತಾವನೆ ಪ್ರಸ್ತುತ ಸಚಿವಾಲಯದ ಪರಿಗಣನೆಯಲ್ಲಿಲ್ಲ ಎಂಬುದು ದೃಢಪಟ್ಟಿದೆ. ಪ್ರದೇಶಕ್ಕೆ ಸಂಬಂಧಿಸಿದ ಯಾವುದೇ ಭವಿಷ್ಯದ ಮೂಲಸೌಕರ್ಯ ಯೋಜನೆಯನ್ನು ಕೈಗೊಳ್ಳುವ ಮೊದಲು…
ಮಡಿಕೇರಿ NEWS DESK ಜೂ.2 : ರಾಜ್ಯ ಸರಕಾರದ ನೂತನ ಸಚಿವ ಸಂಪುಟದಲ್ಲಿ ಕೊಡಗು ಜಿಲ್ಲೆಯ ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಬೇಕೆಂದು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಹಿಳಾ ಕಾಂಗ್ರೆಸ್ ನಗರಾಧ್ಯಕ್ಷೆ ಶಶಿಕಲಾ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರು ಈ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವುದು ಹೆಮ್ಮೆ ಎನಿಸಿದೆ. ಇವರ ನೇತೃತ್ವದ ಸಚಿವ ಸಂಪುಟದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಿದಲ್ಲಿ ರಾಜ್ಯದ ಪ್ರಗತಿಗೆ ಮತ್ತು ಉತ್ತಮ ಆಡಳಿತಕ್ಕೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲೆಯ ಇಬ್ಬರು ಶಾಸಕರು ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಮಹಿಳಾ ಸಬಲೀಕರಣ ಮತ್ತು ಸ್ವಾಭಿಮಾನದ ಬದುಕಿಗೆ ಸಹಕಾರ ನೀಡಿದ್ದಾರೆ. ಮಹಿಳಾ ಕಾಂಗ್ರೆಸ್ ಘಟಕದ ಸಂಘಟನೆಗೂ ಪ್ರೋತ್ಸಾಹ ನೀಡಿರುವ ಇವರು ಜನಸ್ನೇಹಿ ಶಾಸಕರಾಗಿ ಜಿಲ್ಲೆ ಮಾತ್ರವಲ್ಲದೆ ರಾಜ್ಯದಲ್ಲೂ ಮನೆ ಮಾತಾಗಿದ್ದಾರೆ. ಅಭಿವೃದ್ಧಿ…
ಮಡಿಕೇರಿ NEWS DESK ಜೂ.2 : ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರಕಾರ ರಚನೆಯ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ತೀಯನ್ ಮಹಾಸಭಾ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಹಾಸಭಾದ ಸಂಘಟನಾ ಕಾರ್ಯದರ್ಶಿ ಸುದರ್ಶನ್ ಎನ್.ಸಿ ಅವರು ದಕ್ಷ ಆಡಳಿತಕ್ಕೆ ಹೆಸರಾಗಿರುವ ಜಿಲ್ಲೆಯ ಇಬ್ಬರು ಶಾಸಕರು ಸಚಿವ ಸ್ಥಾನವನ್ನು ಅಲಂಕರಿಸಲು ಸಮರ್ಥರಾಗಿದ್ದಾರೆ. ಇವರ ಸೇವೆ ರಾಜ್ಯ ಮಟ್ಟಕ್ಕೆ ವ್ಯಾಪಿಸಲು ಸಚಿವ ಸ್ಥಾನವನ್ನು ನೀಡುವುದು ಸೂಕ್ತ ಎಂದು ತಿಳಿಸಿದ್ದಾರೆ. ಕೊಡಗಿನ ಅಭಿವೃದ್ಧಿಗೆ ಆದ್ಯತೆ ನೀಡಿರುವ ಶಾಸಕರು ಕಳೆದ ಮೂರು ವರ್ಷಗಳಲ್ಲಿ ಅನೇಕ ಪ್ರಗತಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಎಲ್ಲಾ ಸಮುದಾಯವನ್ನು ಒಗ್ಗಟ್ಟಿನಿಂದ ಮುನ್ನಡೆಸುತ್ತಿದ್ದು, ಪ್ರತಿಯೊಂದು ಜನಾಂಗದ ಶ್ರೇಯೋಭಿವೃದ್ಧಿಗೆ ಸಹಕಾರ ನೀಡುತ್ತಿದ್ದಾರೆ. ಇವರಿಬ್ಬರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಹೊಂದಲಿದೆ, ಅಲ್ಲದೆ ಜನಪರ ಕಾರ್ಯಗಳು ಅನುಷ್ಠಾನಗೊಳ್ಳಲಿದೆ. ನೂತನ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು…
ಕೂಡಿಗೆ, ಮೇ 1 NEWS DESK : ಕೊಡಗು ಸೇರಿದಂತೆ ಹಾಸನ, ಚಿಕ್ಕಮಗಳೂರು ಜಿಲ್ಲೆಯು ಹಾಸನ ಹಾಲು ಒಕ್ಕೂಟಕ್ಕೆ ಒಳಗೊಂಡಿದ್ದು , ಮೂರು ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ ದಿನಂಪ್ರತಿ ಬೆಳಿಗ್ಗೆ ಮತ್ತು ಸಂಜೆ ಸೇರಿದಂತೆ ಒಂದು ದಿನಕ್ಕೆ 16.ಲಕ್ಷ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದೆ. ಅದರ ಮುಖೇನ ರೈತರ ಅಭಿವೃದ್ಧಿ ಸಹಕಾರ ಮತ್ತು ಸಹಕಾರ ಸಂಘಗಳು ಪ್ರಗತಿಗೆ ಪೂರಕವಾದ ಯೋಜನೆಗಳನ್ನು ಹಮ್ಮಿಕೊಂಡು ಒಕ್ಕೂಟವು ಪ್ರಗತಿಯತ್ತ ಸಾಗುತ್ತಿದೆ. ರೈತರು ಗುಣಮಟ್ಟದ ಹಾಲನ್ನು ಸಂಘಕ್ಕೆ ಹಾಕಬೇಕಾಗಿದೆ ಎಂದು ಕೊಡಗು ಜಿಲ್ಲೆಯ ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ, ಕೂಡುಮಂಗಳೂರು ಸಹಕಾರ ಸಂಘದ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್ ಅವರು ಹೇಳಿದರು. ವಿಶ್ವ ಹಾಲು ದಿನಾಚರಣೆ ಅಂಗವಾಗಿ ಶಿರಂಗಾಲ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ನಡೆದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತಾನಾಡಿದರು. ಹೆಚ್ಚು ಹಾಲು ಸಂಗ್ರಹದಿಂದ ಹೆಚ್ಚು ಉತ್ಪನ್ನಗಳು ತಯಾರಿಸುವ ಹಿನ್ನೆಲೆಯಲ್ಲಿ ಈಗಾಗಲೇ ಒಕ್ಕೂಟದ ಅಧ್ಯಕ್ಷ ಹೆಚ್.ಡಿ. ರೇವಣ್ಣ ಅವರ…
ವಿರಾಜಪೇಟೆ ಜೂ.1 NEWS DESK : ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ವಿರಾಜಪೇಟೆಯವರಾದ ಮುಲ್ಲೇರ ಪೊನ್ನಮ್ಮ ಪೂವಣ್ಣ ಅವರು ಸಾಧನೆ ಮಾಡಿದ್ದಾರೆ. ಗೋವಾದ ಬ್ಯಾಂಬೋಲಿಮ್ ನಲ್ಲಿ ಜರುಗಿದ ಮೂರನೇ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಶೋಟ್ ಪುಟ್ ನಲ್ಲಿ ಪ್ರಥಮ ಸ್ಥಾನ ಹಾಗೂ 100 ಮೀ ಓಟದಲ್ಲಿ ಹಾಗೂ ಜಾವೆಲಿನ್ ನಲ್ಲಿಯೂ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಸೋಮವಾರಪೇಟೆ ಜೂ.1 NEWS DESK : ಕೊಡಗು ಜಿಲ್ಲೆಯ ವೀರಶೈವ ಜಂಗಮ ಅರ್ಚಕರ ಮತ್ತು ಪುರೋಹಿತರ ಸಂಘದ ವಾರ್ಷಿಕ ಮಹಾಸಭೆ ಸೋಮವಾರಪೇಟೆಯ ವಿರಕ್ತ ಮಠದಲ್ಲಿ ಭಾನುವಾರ ಜರುಗಿತು. ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಹಾಗೂ ಸೋಮವಾರಪೇಟೆ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಮಹಾಸ್ವಾಮಿ ಅವರ ಸಾನಿಧ್ಯದಲ್ಲಿ ಸಭೆ ನಡೆಯಿತು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಅರ್ಚಕರು ಮತ್ತು ಪುರೋಹಿತರ ಪುರೋಹಿತರ ಸಂಘದ ಜಿಲ್ಲಾ ಅಧ್ಯಕ್ಷ ಎಫ್.ಸಿ.ಹಿರೇಮಠಶಾಸ್ತ್ರಿ, ಉಪಾಧ್ಯಕ್ಷ ಮಹೇಶ್ ಜಿ.ಶಾಸ್ತ್ರಿ, ಕಾರ್ಯದರ್ಶಿ ಬಸವಕುಮಾರ ಶಾಸ್ತ್ರಿ, ಖಜಾಂಚಿ ಅಭಿಮಠದ ಮಹೇಶ್ ಶಾಸ್ತ್ರಿ, ನಿರ್ದೇಶಕರಾದ ಚಂದ್ರಶೇಖರ ಶಾಸ್ತ್ರಿ, ವೀರಯ್ಯ ಹಿರೇಮಠ, ಶಾಂತಮಲ್ಲಯ್ಯ, ನಂಜುಂಡಪ್ಪ, ಜಂಬೂರು ನಂಜಪ್ಪ,ಸೋಮಶೇಖರ, ಪುಷ್ಪಗಿರಿ ನಂದೀಶ್,ತ್ರಿಶಂಕು ಕುಮಾರ್, ವಿರೂಪಾಕ್ಷ ಇದ್ದರು.






