ಲೇಖಕ: admin

ಮಡಿಕೇರಿ ಫೆ.19 NEWS DESK : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಹಿಂದೂ ಧರ್ಮ ಮತ್ತು ಸಂಸ್ಕøತಿಯ ಸಂರಕ್ಷಣೆಯ ಮಹಾನ್ ಚಿಂತನೆಯಡಿ, ಹಿಂದೂ ಬಾಂಧವರನ್ನು ಸಂಘoಟಿಸುವ ಉದ್ದೇಶದಿಂದ ರೂಪಿಸಲಾಗಿರುವ “ಹಿಂದೂ ಸಂಗಮ” ಕಾರ್ಯಕ್ರಮ ಮೂರ್ನಾಡಿನಲ್ಲಿ ಫೆ.22 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮೂರ್ನಾಡು ಮಂಡಲ ಹಿಂದೂ ಸಂಗಮ ಆಯೋಜನಾ ಸಮಿತಿಯ ಅಧ್ಯಕ್ಷ ಚೆಟ್ಟಿಮಾಡ ಜಯಂತ್ ಕುಮಾರ್ ಕಾರ್ಯಕ್ರಮದ ವಿವರಗಳನ್ನು ನೀಡಿ, ಅಂದು ಮಧ್ಯಾಹ್ನ 2.15 ಗಂಟೆಗೆ ಮೂರ್ನಾಡು ವಿದ್ಯಾಸಂಸ್ಥೆಯ ಮೈದಾನದಿಂದ ಬೃಹತ್ ಶೋಭಾಯಾತ್ರೆ ನಡೆಯಲಿದ್ದು, ಇದರಲ್ಲಿ ಸುತ್ತಮುತ್ತಲ ಆರು ಗ್ರಾಮಗಳ ಸಹಸ್ರಾರು ಮಂದಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು. ಶೋಭಾಯಾತ್ರೆಯು ಮೂರ್ನಾಡು ವಿದ್ಯಾಸಂಸ್ಥೆಯ ಮೈದಾನದಿಂದ ಆರಂಭಗೊಂಡು, ಗಾಂಧಿ ನಗರ, ಮಹಿಳಾ ಸಮಾಜವನ್ನು ಹಾದು, ಪಟ್ಟಣದ ಮುಖ್ಯ ಬೀದಿಗಾಗಿ ಕೊಂಡಂಗೇರಿಗೆ ತೆರಳುವ ಜಂಕ್ಷನ್‍ವರೆಗೆ ಹೋಗಿ, ಅದೇ ಮಾರ್ಗವಾಗಿ ಪಾಂಡಾಣೆ ನಾಡ್‍ಮಂದ್‍ಗೆ ಆಗಮಿಸಲಿದೆ. ಶೋಭಾಯಾತ್ರೆಯಲ್ಲಿ ಕೊಡಗಿನ ವಾಲಗ, ಕೇರಳದ ಚಂಡೆ, ಬೊಂಬೆ ಕುಣಿತ, ನಾಗರಹೊಳೆ ಗಿರಿಜನ ಕಲಾ ತಂಡಗಳು ಪಾಲ್ಗೊಳ್ಳಲಿವೆ. ಶೋಭಾಯಾತ್ರೆಯ ಬಳಿಕ ಸಭಾ…

Read More

ಮಡಿಕೇರಿ ಫೆ.19 NEWS DESK : ಮಡಿಕೇರಿ ನಗರದಲ್ಲಿ ತಲೆದೋರಿರುವ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ನಗರಸಭೆಯ ಆಡಳಿತ ವಿಫಲವಾಗಿದೆ. ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸದಿದ್ದಲ್ಲಿ ಎಸ್‌ಡಿಪಿಐ ವತಿಯಿಂದ ನಗರಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ನಗರಸಭೆಯ ವಿರೋಧ ಪಕ್ಷದ ನಾಯಕ ಅಮೀನ್ ಮೊಹಿಸಿನ್ ಎಚ್ಚರಿಕೆ ನೀಡಿದ್ದಾರೆ. ಮಡಿಕೇರಿ ನಗರದ ಬಹುತೇಕ ರಸ್ತೆಯ ಎರಡು ಬದಿಗಳಲ್ಲಿ ಅಮೃತ್ 2.0 ನೀರಿನ ಪೈಪ್ ಅಳವಡಿಸಲು ಅಗೆದಿದ್ದು, ನಗರ ಪೂರ್ತಿ ದೂಳು ಆವರಿಸಿಕೊಂಡಿದೆ. ಇದರಿಂದ ಜನರು ಅನಾರೋಗ್ಯಕ್ಕೆ ಒಳಗಾಗುವ ಆತಂಕವಿದೆ. ಹೆಚ್ಚಿನ ರಸ್ತೆಗಳು ಸಂಚರಿಸಲು ಸಾಧ್ಯವಾಗದ ಸ್ಥಿತಿಯಲ್ಲಿವೆ. ಪೈಪ್ ಅಳವಡಿಸಿದ ನಂತರ ಡಾಂಬರೀಕರಣ ಮಾಡಿ ಜನರಿಗೆ ಅನುಕೂಲ ಕಲ್ಪಿಸಿಲ್ಲ.   ಆಡಳಿತ ಪಕ್ಷ ಕಳೆದ ಹತ್ತು ತಿಂಗಳಿನಲ್ಲಿ ಕೇವಲ 4 ಸಾಮಾನ್ಯ ಸಭೆಯನ್ನು ನಡೆಸಿದೆ. 4 ಸ್ಥಾಯಿ ಸಮಿತಿ ರಚನೆಯಾಗಿ 2 ತಿಂಗಳಾದರೂ ಒಂದೇ ಒಂದು ಸಭೆ ಕರೆಯಲಿಲ್ಲ. ಕಳೆದ 5 ತಿಂಗಳು ಆಡಳಿತ ನಡೆಸಿದ ಬಿ.ಜೆ.ಪಿ…

Read More

ಮಡಿಕೇರಿ, NEWS DESK ಫೆ.19 : ಟ್ರ‍್ಯಾಕ್ಟರ್ ಹಳ್ಳಕ್ಕೆ ಮಗುಚಿದ ಪರಿಣಾಮ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ಬಾಗಲಕೋಟೆಯ ನಿವಾಸಿ ಪ್ರವೀಣ್ (35) ಮೃತ ದುರ್ದೈವಿ. ಚಾಲಕನಿಲ್ಲದ ಸಂದರ್ಭ ಟ್ರ‍್ಯಾಕ್ಟರ್ ಚಲಾಯಿಸುವ ದುಸ್ಸಾಹಸಕ್ಕೆ ಪ್ರವೀಣ್ ಕೈಹಾಕಿದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ನಿಯಂತ್ರಣ ತಪ್ಪಿದ ಟ್ರ‍್ಯಾಕ್ಟರ್ ಹಳ್ಳಕ್ಕೆ ಮಗುಚಿದ್ದು, ಪ್ರವೀಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಡಿಕೇರಿ ಫೆ.19 NEWS DESK  : ಕರ್ನಾಟಕ ರಾಜ್ಯದ 2026-27ರ ಬಜೆಟ್‍ನಲ್ಲಿ ಕೊಡಗು ಜಿಲ್ಲೆಯ ಅಭವೃದ್ಧಿಗೆ 500 ಕೋಟಿ ರೂ.ಗಳ ವಿಶೇಷ ಪ್ಯಾಕೆಜ್ ಘೋಷಣೆ ಮಾಡಬೇಕು ಮತ್ತು ಪ್ರವಾಸೋದ್ಯಮದ ಅಭಿವೃದ್ಧಿಗೆ ರೂ.2,500 ಕೋಟಿ ಬಿಡುಗಡೆಗೊಳಿಸಬೇಕು ಎಂದು ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರು ಬಜೆಟ್ ನ ಬೇಡಿಕೆಗಳ ಕುರಿತು ಕರಪತ್ರದ ಮೂಲಕ ಸರಕಾರದ ಗಮನ ಸೆಳೆಯಲಾಗುವುದು ಎಂದರು. ಕೊಡಗಿಗೆ ಅತೀ ಅಗತ್ಯವಾಗಿರುವ ರೈಲು ಸಂಪರ್ಕವನ್ನು ಕೇಂದ್ರ ಹಾಗೂ ರಾಜ್ಯದ ಪ್ರತಿಷ್ಠೆಯ ಕಿತ್ತಾಟದಿಂದ ಕೈ ಬಿಡಲಾಗಿದೆ. ಈ ಬಜೆಟ್‍ನಲ್ಲಿ ಕೊಡಗಿಗೆ ರೈಲು ಸಂಪರ್ಕಕ್ಕಾಗಿ ಬೇಕಿರುವ ಅನುದಾನವನ್ನು ಕರ್ನಾಟಕ ಸರಕಾರ ಮೀಸಲಿಟ್ಟು ಪ್ರಕ್ರಿಯೆ ಪ್ರಾರಂಭಿಸಬೇಕು. ಕೊಡಗಿನ ಲೋಕಸಭಾ ಸದಸ್ಯರು ಕೇಂದ್ರದೊಂದಿಗೆ ಚರ್ಚಿಸಿ ಸಹಕರಿಸಬೇಕು. ತುರ್ತು ಆರೋಗ್ಯ ಸೇವೆಗಾಗಿ ಜಿಲ್ಲೆಗೆ ಏರ್ ಆಂಬ್ಯುಲೆನ್ಸ್ ನೀಡಬೇಕು. ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಅನುದಾನ ಮೀಸಲಿಡಬೇಕು. ವನ್ಯಜೀವಿ ಹಾಗೂ ಮಾನವ ಸಂಘರ್ಷ…

Read More

ಮಡಿಕೇರಿ, NEWS DESK ಫೆ.19:-ಜಿಲ್ಲಾಧಿಕಾರಿಗಳು ಹಾಗೂ ಪ್ರಾಣಿದಯಾ ಸಂಘದ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಅವರು ಮಡಿಕೇರಿ ಕೆ.ನಿಡುಗಣೆ ಜಿಲ್ಲಾ ಸರ್ಕಾರಿ ಗೋಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಗೋಶಾಲೆಯಲ್ಲಿ 37 ಜಾನುವಾರುಗಳನ್ನು ಸಾಕುತ್ತಿದ್ದು, ಜಾನುವಾರುಗಳ ನಿರ್ವಹಣೆಗೆ ಬೇಕಾಗುವ ಒಣ ಮೇವು ದಾಸ್ತಾನು, ಪಶು ಆಹಾರ ದಾಸ್ತಾನು ಕೊಠಡಿ ಹಾಗೂ ಚಿಕಿತ್ಸೆಗೆ ಬೇಕಾಗುವ ಔಷಧ ದಾಸ್ತಾನನ್ನು ಜಿಲ್ಲಾಧಿಕಾರಿ ಅವರು ವೀಕ್ಷಿಸಿದರು. ಗೋಶಾಲೆಯಲ್ಲಿನ ಜಾನುವಾರುಗಳ ನಿರ್ವಹಣೆಗೆ 3 ಜನ ಹೊರಗುತ್ತಿಗೆ ‘ಡಿ’ ದರ್ಜೆ ನೌಕರರು 3 ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಗೋಶಾಲೆ ಉಸ್ತುವಾರಿ ಅಧಿಕಾರಿ ಡಾ.ಎಂ.ಸಿ.ಲತಾ ಅವರು ಮಾಹಿತಿ ನೀಡಿದರು. ಹಸಿರು ಮೇವು ಬೆಳೆಯುವ ಕ್ಷೇತ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಗೋಶಾಲೆಗೆ ಹೆಚ್ಚುವರಿ ಜಾನುವಾರುಗಳ ಸೇರ್ಪಡೆಗೆ ಬೇಡಿಕೆ ಇದ್ದು, ಹೆಚ್ಚುವರಿ ದನದ ಕೊಟ್ಟಿಗೆ, ಒಣ ಮೇವು ದಾಸ್ತಾನು ಕೊಠಡಿ ನಿರ್ಮಾಣ ಹಾಗೂ ಹೆಚ್ಚುವರಿ ಜಾನುವಾರುಗಳನ್ನು ಮೇಯಲು ಬಿಡಲು ಗೋಶಾಲೆಗೆ ಮಂಜೂರಾದ 8 ಎಕರೆ ಜಾಗದ ಪೈಕಿ ಬಾಕಿ ಉಳಿದಿರುವ 6…

Read More

ಮಡಿಕೇರಿ, NEWS DESK ಫೆ.19:-ಮಾಜಿ ಸೈನಿಕರು ಮತ್ತು ಅವಲಂಬಿತರು ನಿವೇಶನಕ್ಕಾಗಿ ಫೆಬ್ರವರಿ, 25 ರೊಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಿಲ್ಲಾ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ, ನಿರ್ದೇಶನಾಲಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಇವರ ಪತ್ರ ಶೀರ್ಷಿಕೆಯಡಿ ಸುಳ್ಳು ಪ್ರಕಟಣೆಯನ್ನು ವಾಟ್ಸಪ್ ಜಾಲತಾಣದಲ್ಲಿ ಹರಡುತ್ತಿದ್ದು, ಈ ರೀತಿಯ ಯಾವುದೇ ಪ್ರಕಟಣೆಯನ್ನು ನಮ್ಮ ಇಲಾಖೆ ಅಥವಾ ಕಚೇರಿಯಿಂದ ಪ್ರಕಟಿಸಿರುವುದಿಲ್ಲ. ಈ ರೀತಿಯ ಸುಳ್ಳು ಪ್ರಕಟಣೆಯನ್ನು ನೀಡಿ ಮಾಜಿ ಸೈನಿಕರನ್ನು ದಿಕ್ಕು ತಪ್ಪಿಸುತ್ತಿರುವುದು ಕಂಡುಬಂದಿದ್ದು, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದಿರಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ, NEWS DESK ಫೆ.19:-ಛತ್ರಪತಿ ಶಿವಾಜಿ ಮಹಾರಾಜರು ಭರತಖಂಡದಲ್ಲಿ ಜನಿಸದಿದ್ದರೆ ಊಹಿಸಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಆ ನಿಟ್ಟಿನಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಸಾಗರ್ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿವಾಜಿ ಮಹಾರಾಜರ ತಾಯಿ ಜೀಜಾಬಾಯಿಯವರಿಂದ ಮಕ್ಕಳನ್ನು ಹೇಗೆ ಬೆಳೆಸಬೇಕು ಎಂಬುದನ್ನು ಸಮಾಜಕ್ಕೆ ಹೇಳಿಕೊಟ್ಟಿದ್ದಾರೆ. ಗುಡ್ಡಗಾಡು ಪ್ರದೇಶದಲ್ಲಿ ಹುಟ್ಟಿ ಬೆಳೆದು ಭರತಖಂಡದ ಸಾಮ್ರಾಜ್ಯವನ್ನು ಕಟ್ಟಿದ್ದಾರೆ ಎಂದು ಲೋಕೇಶ್ ಸಾಗರ್ ಅವರು ಹೇಳಿದರು.ತಾಯಿ ಜೀಜಾಬಾಯಿ ಅವರ ಕಥೆಯನ್ನು ಕೇಳಿ ಬೆಳೆದ ಶಿವಾಜಿ ಅವರು ಸಮಾಜಕ್ಕೆ ಏನಾದರೂ ಕೊಡಬೇಕು ಎಂಬ ಉದ್ದೇಶದಿಂದ ಇಡೀ ಭರತ ಸಾಮ್ರಾಜ್ಯವನ್ನು ಕಟ್ಟಲು ಪ್ರಯತ್ನಿಸುತ್ತಾರೆ ಎಂದರು. ಶಿವಾಜಿ ಮಹಾರಾಜರು ಎಲ್ಲರನ್ನು ಪ್ರೀತಿಸುತ್ತಿದ್ದರು. ಗೌರವಿಸುತ್ತಿದ್ದರು ಎಂದು ಹೇಳಿದರು. ಶಿವಾಜಿ ಅವರ ತಾಯಿ ಜಿಜಾಬಾಯಿ ಅವರು…

Read More

ಮಡಿಕೇರಿ, NEWS DESK ಫೆ.19:-ವಿದ್ಯುತ್ ಇಲಾಖೆಗೆ ಸಂಬಂಧಿಸಿದಂತೆ ಕಾರ್ಯ ಮತ್ತು ಪಾಲನೆ ಕ್ಷೇತ್ರ ಮಟ್ಟದಲ್ಲಿ ಗ್ರಾಹಕರಿಗೆ/ ಸಾರ್ವಜನಿಕರಿಗೆ/ ಸಿಬ್ಬಂದಿಗಳಿಗೆ ವಿದ್ಯುತ್ ಸೇವೆಗಳ ಹಾಗೂ ವಿದ್ಯುತ್ ಸುರಕ್ಷಿತಾ ಅರಿವನ್ನು ಮೂಡಿಸಲು ಅರಿವು ಸಪ್ತಾಹ ಕಾರ್ಯಕ್ರಮವನ್ನು ಉಪ ವಿಭಾಗ ಮಟ್ಟದಲ್ಲಿ ಆಯೋಜಿಸಲು ನಿರ್ಧರಿಸಿದ್ದು, ಕುಶಾಲನಗರ ಉಪ ವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡ ಹಾಗೂ ಸುರಕ್ಷಿತಾ ಕ್ರಮಗಳ ಬಗ್ಗೆ ಗ್ರಾಹಕರಲ್ಲಿ ಅರಿವು ಮೂಡಿಸುವ ಸಲುವಾಗಿ ಫೆಬ್ರವರಿ, 21 ರಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರ ಉಪ ವಿಭಾಗ ಕಚೇರಿ ಆವರಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ತಿಳಿಸಿದ್ದಾರೆ.

Read More

ಮಡಿಕೇರಿ, NEWS DESK ಫೆ.19 : ಹೊದ್ದೂರು ಗ್ರಾಮದ ಕಬಡಗೇರಿಯ ನಿವೇಶನ ರಹಿತ 47 ಕುಟುಂಬಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಹಕ್ಕುಪತ್ರ ವಿತರಿಸಿದರು. ಹಾಗೆಯೇ ಹೊದ್ದೂರು ಗ್ರಾಮದ ಪಾಲೆಮಾಡಿನ 14 ಕುಟುಂಬಗಳಿಗೆ 94ಸಿ ರಡಿ ಹಕ್ಕುಪತ್ರವನ್ನು ಶಾಸಕರು ವಿತರಿಸಿದರು. ಹೊದ್ದೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ನಿವೇಶನ ಹಕ್ಕುಪತ್ರವನ್ನು ವಿತರಿಸಿದರು. ಹೊದವಾಡ ಗ್ರಾಮದ ಅಂಬಲ ಅಂಗನವಾಡಿ ಕೇಂದ್ರವನ್ನು ಇದೇ ಸಂದರ್ಭದಲ್ಲಿ ಶಾಸಕರು ಉದ್ಘಾಟಿಸಿದರು. ಹಾಗೆಯೇ ಹೊದ್ದೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ವಿವಿಧ ಸಂಪರ್ಕ ರಸ್ತೆಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ನಿವೇಶನ ನೀಡಲಾಗಿರುವ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲು ಪ್ರಯತ್ನಿಸಲಾಗುವುದು ಎಂದರು. ಹೊದ್ದೂರಿನ ಕಬಡಗೇರಿಗೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರನ್ನು ಇಡುವಂತಾಗಬೇಕು ಎಂದು ಸಲಹೆ ಮಾಡಿದ ಶಾಸಕರು ಬಡವರ ಶ್ರೇಯೋಭಿವೃದ್ಧಿಗೆ ಇನ್ನಷ್ಟು ಅಭಿವೃದ್ಧಿ ಕೆಲಸ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಬಡಾವಣೆ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಆ…

Read More

ಮಡಿಕೇರಿ, NEWS DESK ಫೆ.19 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರ ಉಪಸ್ಥಿತಿಯಲ್ಲಿ, ಕೊಡಗು ಅರೆಭಾಷೆ ಗೌಡ ಸಮುದಾಯ ವತಿಯಿಂದ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರನ್ನು ಬೆಂಗಳೂರಿನಲ್ಲಿ ಸನ್ಮಾನಿಸಿ, ಗೌರವಿಸಲಾಯಿತು. ಇತ್ತೀಚೆಗೆ ಬೆಂಗಳೂರಿನಲ್ಲಿ ಜರುಗಿದ ಅರೆಭಾಷೆ ಗೌಡ ಸಮುದಾಯದ ಸಮಾರಂಭದಲ್ಲಿ ನೀಡಿದ ಆಶ್ವಾಸನೆಯಂತೆ, ಮುಖ್ಯಮಂತ್ರಿಗಳು, ಅರೆಭಾಷೆ ಗೌಡ ಸಮುದಾಯದ ಸಂಸ್ಕೃತಿ, ಶೈಕ್ಷಣಿಕ ಮತ್ತು ಕ್ರೀಡಾ ಕೇಂದ್ರ ಸ್ಥಾಪನೆ ಉದ್ದೇಶಕ್ಕಾಗಿ, ಮಡಿಕೇರಿ ತಾಲೂಕು ಮದೆ ಗ್ರಾಮದ ಕಾಟಕೇರಿ ಬಳಿ, 6 ಎಕರೆ ಜಾಗ ಮಂಜೂರು ಮಾಡಲು ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು. ಅದಲ್ಲದೇ, ದಶಕಗಳಿಂದ ಕೊಡಗಿನ ಜನತೆಯನ್ನು ಕಾಡುತ್ತಿದ್ದ, ಅತ್ಯಂತ ಜಟಿಲವಾದ ಜಮ್ಮ ಬಾಣೆ ಸಮಸ್ಯೆಯ ಪರಿಹಾರಕ್ಕಾಗಿ, ಕರ್ನಾಟಕ ರಾಜ್ಯ ಕಂದಾಯ ಮಸೂದೆ 2025 ರ ತಿದ್ದುಪಡಿ ವಿದೇಯಕಕ್ಕೆ ಅನುಮೋದನೆ…

Read More