ಮಡಿಕೇರಿ ಜೂ.28 : ಸಹಕಾರ ಕ್ಷೇತ್ರದಲ್ಲಿ ಹಾಗೂ ಚೆಟ್ಟಳ್ಳಿ ಸಹಕಾರ ಸಂಘದ ಅಧ್ಯಕ್ಷರಾಗಿ ಮುಂದುವರಿಯುತ್ತಿರುವ ಬಲ್ಲಾರಂಡ ಮಣಿಉತ್ತಪ್ಪ ಅವರ ಸೇವೆಯನ್ನು ಪರಿಗಣಿಸಿ ಜು.2 ರಂದು ಚೆಟ್ಟಳ್ಳಿ ನಾಗರಿಕರಿಂದ ಸನ್ಮಾನ ನಡೆಯಲಿದೆ ಎಂದು ಚೆಟ್ಟಳ್ಳಿ ಕೃಷಿಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಕಣಜಾಲು ಪೂವಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಲ್ಲಾರಂಡ ಮಣಿ ಉತ್ತಪ್ಪ ಅವರು ಸಹಕಾರ ಕ್ಷೇತ್ರದಲ್ಲಿ 25 ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿ ‘ರಜತ ಮಹೋತ್ಸವ’ ಆಚರಿಸಿಕೊಳ್ಳುತ್ತಿರುವ ಹಾಗೂ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 15 ವರ್ಷಗಳಿಂದ ಅಧ್ಯಕ್ಷರಾಗಿ ನಿಷ್ಕಂಳಕ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ಸಮಾಜ ಸೇವೆಯಲ್ಲಿ ತೊಡಗಿಕೊಂಡು ಅವಿರತ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ರಾಜಕೀಯ ಕ್ಷೇತ್ರದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಜನರ ಸೇವೆ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಕೃಷಿ ಕ್ಷೇತ್ರದಲ್ಲಿ ವಿನೂತನ ಬೆಳವಣಿಗೆಯ ಕೃಷಿಕನಾಗಿದ್ದು, ದೈವಭಕ್ತರಾಗಿ ಚೆಟ್ಟಳ್ಳಿಯನ್ನು ದೇವರ ನಾಡಾಗಿ ಪರಿವರ್ತಿಸಿದ್ದಾರೆ. ಪ್ರಾಕೃತಿಕ ವಿಕೋಪ, ಕೋವಿಡ್ ಸಂದರ್ಭದಲ್ಲಿ ಮಾನವೀಯ…
ಲೇಖಕ: admin
ಚೆಯ್ಯಂಡಾಣೆ ಜೂ.28 : ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದ್ದು, ಕೃಷಿ ಫಸಲು ಮತ್ತು ಮನೆ, ತೋಟದ ಗೇಟ್ ಗೆ ಹಾನಿ ಮಾಡಿರುವ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ಗ್ರಾಮದ ಸುತ್ತಮುತ್ತ ನೆಲೆ ನಿಂತಿರುವ ಕಾಡಾನೆಗಳ ಹಿಂಡು ರಾತ್ರಿ, ಹಗಲೆನ್ನದೆ ತೋಟಗಳಿಗೆ ಲಗ್ಗೆ ಇಡುತ್ತಿವೆ. ಬಾಳೆ, ಅಡಿಕೆ, ಕಾಫಿ, ತೆಂಗು, ಕಾಳುಮೆಣಸು ಗಿಡಗಳನ್ನು ನಾಶ ಪಡಿಸಿವೆ. ಕಳೆದವಾರ ಚೇಲಾವರ ಗ್ರಾಮದಲ್ಲಿ ಮಹಿಳೆಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದರು. ಇದೇ ಗ್ರಾಮದ ನಿವಾಸಿ ಪಿ.ಪಿ.ಮಾಚಯ್ಯ ಎಂಬುವವರ ಮನೆಯಂಗಳಕ್ಕೆ ಕಾಡಾನೆ ನುಗ್ಗಿ ಇಂಟರ್ ಲಾಕ್ ಗಳನ್ನು ಹಾನಿಪಡಿಸಿದೆ. ಸಮೀಪದಲ್ಲೇ ಇರುವ ಸುಧೀರ್ ರೆಡ್ಡಿ ಎಂಬುವವರ ತೋಟಕ್ಕೆ ತೆರಳುವ ಗೇಟ್ ನ್ನು ಬೀಳಿಸಿದೆ. ಕೋಕೇರಿಯಲ್ಲ್ಲಿ ಮಚ್ಚಂಡ ಸುಮತಿ ಎಂಬುವವರ ತೋಟಕ್ಕೆ ಲಗ್ಗೆ ಇಟ್ಟಿರುವ ಕಾಡಾನೆಗಳು ಅಪಾರ ನಷ್ಟ ಉಂಟು ಮಾಡಿವೆ. ರಾತ್ರಿ ವೇಳೆ 9 ಕಾಡಾನೆಗಳ ಹಿಂಡು ಮುಖ್ಯ ರಸ್ತೆಯಲ್ಲಿ ಸಂಚರಿಸುತ್ತಿರುವ ದೃಶ್ಯ ಇದೀಗ ಸಾಮಾಜಿಕ…
ಚೆಯ್ಯಂಡಾಣೆ ಜೂ.28 : ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 18 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಜೀವನಕ್ಕೆ ಕಾಲಿಟ್ಟ ಮುಖ್ಯ ಶಿಕ್ಷಕಿ ಮೀನಾ ಅವರನ್ನು ಶಾಲಾ ಆಡಳಿತ ಮಂಡಳಿ ಹಾಗೂ ಸ್ಥಳೀಯ ಗ್ರಾಮಸ್ಥರು ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಸಮ್ಮುಖದಲ್ಲಿ ಸನ್ಮಾನಿಸಿ ಕಿರು ಕಾಣಿಕೆ ನೀಡಿ ಬೀಳ್ಕೊಟ್ಟರು. ಕ್ಷೇತ್ರ ಸಮನ್ವಯ ಅಧಿಕಾರಿ ನಳಿನಿ ಮಾತನಾಡಿ, ತಮ್ಮ ಸೇವಾಕಾರ್ಯದಲ್ಲಿ ಶಿಕ್ಷಕರು ಹಾಗೂ ಮಕ್ಕಳ ನಡುವೆ ಅವಿನಾಭವ ಸಂಬಂಧ ಹೊಂದಿದ್ದು, ಶಾಲೆಯನ್ನ ಅವರ ಭವಿಷ್ಯವನ್ನ ರೂಪಿಸುವಲ್ಲಿ ಮುಖ್ಯಪಾತ್ರವಾಹಿಸಿರುತ್ತಾರೆ. ನಿವೃತ್ತಿ ಸಂದರ್ಭ ಶಾಲೆ ಹಾಗೂ ವಿದ್ಯಾರ್ಥಿಗಳನ್ನು ಬಿಟ್ಟುಹೋಗುವುದು ಸವಾಲಿನ ಕೆಲಸ ಎಂದರು. ತಾ.ಪಂ ಮಾಜಿ ಸದಸ್ಯೆ ಉಮಾ ಪ್ರಭು ಮಾತನಾಡಿ, ತಾಲೂಕು ಪಂಚಾಯಿತಿ ಸದಸ್ಯೆ ಯಾಗಿ ಆಯ್ಕೆ ಆದ ಅಂದಿನಿಂದ ಇಂದಿನ ವರೆಗೆ ಶಿಕ್ಷಕಿ ಮೀನಾ ಅವರೊಂದಿಗಿನ ಒಡನಾಟವನ್ನು ನೆನೆದರು. ಉತ್ತಮ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಇವರ ನಿವೃತ್ತಿ ಜೀವನ ಸುಖಕರವಾಗಲೆಂದು ಶುಭ ಹಾರೈಸಿದರು. ಸಿ ಆರ್ ಪಿ ಉಷಾ ಮಾತನಾಡಿ, ನನ್ನ…
ಮಡಿಕೇರಿ ಜೂ.28 : ಮಂಗಳೂರು ವಿಶ್ವವಿದ್ಯಾನಿಲಯದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ವಿದ್ಯಾರ್ಥಿ ಎನ್.ಪ್ರಿಣಿತ್ ಸುಬ್ಬಯ್ಯ ಮಂಡಿಸಿದ ‘ಎಲೆಕ್ಟ್ರೋ ಅನಾಲಿಟಿಕಲ್ ಮೆಥಡಾಲಜಿ ಫಾರ್ ದಿ ಡಿಟರ್ಮಿನೇಶನ್ ಆಫ್ ಎಲೆಕ್ರೋಆಕ್ಟಿವ್ ಸ್ಪೀಸೀಸ್ ಯೂಸಿಂಗ್ ಕೆಮಿಕಲಿ ಮಾಡಿಫೈಡ್ ಕಾರ್ಬನ್ ಪೇಸ್ಟ್ ಎಲೆಕ್ಟೋಡ್’ ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್ಡಿ ಪದವಿ ನೀಡಿ ಗೌರವಿಸಿದೆ. ಹಾಗೆಯೇ ಮಂಗಳೂರು ವಿಶ್ವವಿದ್ಯಾನಿಲಯದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ವಿದ್ಯಾರ್ಥಿ ಎನ್.ಹರೀಶ ಮಂಡಿಸಿದ ‘ಡೆವಲಪ್ಮೆಂಟ್ ಆಫ್ ಎಲೆಕ್ಟ್ರೋಕೆಮಿಕಲ್ ಸೆನ್ಸಾರ್ ಫಾರ್ ದ ಎಲೆಕ್ಟ್ರೋಕ್ಯಾಟಲೈಟಿಕ್ ಇನ್ವೆಸ್ಟಿಗೇಶನ್ ಆಫ್ ಬಯಲಾಜಿಕಲಿ ಆಕ್ಟಿವ್ ಮಾಲಿಕ್ಯೂಲ್ಸ್’ ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್ಡಿ ಪದವಿ ನೀಡಿ ಗೌರವಿಸಿದೆ. ಇವರು ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಜೆ.ಜಿ.ಮಂಜುನಾಥ ಅವರ ಮಾರ್ಗದರ್ಶನದಲ್ಲಿ ತಮ್ಮ ಪ್ರಬಂಧ ಮಂಡಿಸಿದ್ದರು. ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಮಡಿಕೇರಿ ಜೂ.28 : ನಗರಸಭೆ ಕೌನ್ಸಿಲ್ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಜೂನ್, 30 ರಂದು ಬೆಳಗ್ಗೆ 11 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತ ವಿಜಯ ತಿಳಿಸಿದ್ದಾರೆ.
ಮಡಿಕೇರಿ ಜೂ.28 : ಅಂಚೆ ಅದಾಲತ್ನ ಸಭೆಯು ಜೂನ್, 30 ರಂದು ಬೆಳಗ್ಗೆ 11.30 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ ಸಿದ್ದಾಪುರ ರಸ್ತೆ ಅಶೋಕಪುರದಲ್ಲಿ ನಡೆಯಲಿದೆ ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಜೂ.28 : ತಾಲ್ಲೂಕಿನ ಗಾಳಿಬೀಡು ಬಳಿ ಇರುವ ಜವಾಹರ್ ನವೋದಯ ವಿದ್ಯಾಲಯಕ್ಕೆ 2024-25 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳಲ್ಲಿ 5 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್, 10 ಕೊನೆಯ ದಿನವಾಗಿದೆ. ಅರ್ಜಿಯನ್ನು https://navodaya.gov.in ಮತ್ತು https://cbseitms.rcil.gov.in/nvs ವೆಬ್ಸೈಟ್ನಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು. 2023-24 ರ ಶೈಕ್ಷಣಿಕ ಅವಧಿಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 01-05-2012 ರಿಂದ 31-07-2014 ರ ನಡುವೆ ಜನಿಸಿರಬೇಕು. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಜವಾಹರ್ ನವೋದಯ ವಿದ್ಯಾಲಯ, ಗಾಳಿಬೀಡು ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರಾದ ಪಂಕಜಾಕ್ಷನ್ ತಿಳಿಸಿದ್ದಾರೆ.
ಮಡಿಕೇರಿ ಜೂ.28 : ಗ್ರಾಹಕರ ವ್ಯಾಜ್ಯಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಜು.8 ರಂದು ಲೋಕ್ ಅದಾಲತ್ ನಡೆಯಲಿದೆ. ಆ ದಿನದಂದು ಸಂಬಂಧಪಟ್ಟವರು ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ಗುರುತಿಸಿಕೊಂಡು ಇತ್ಯರ್ಥಪಡಿಸಿಕೊಳ್ಳುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ಆಡಳಿತಾಧಿಕಾರಿ ಹಾಗೂ ಸಹಾಯಕ ರಿಜಿಸ್ಟ್ರಾರ್ ಶಾರದ ತಿಳಿಸಿದ್ದಾರೆ.
ಮಡಿಕೇರಿ ಜೂ.28 : ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದಾರೆ. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಗಮನಕ್ಕೆ ತರುವಂತಹ ಪತ್ರಗಳು, ಅರೆ ಸರ್ಕಾರಿ ಪತ್ರಗಳು, ಇನ್ನಿತರ ಯಾವುದೇ ಮುಖ್ಯವಾದ ಪತ್ರಗಳನ್ನು ಅಧ್ಯಕ್ಷರು, ನಗರಾಭಿವೃದ್ಧಿ ಪ್ರಾಧಿಕಾರ, ಕೆಎಸ್ಆರ್ಟಿಸಿ ಬಸ್ ಡಿಪೋ ಹತ್ತಿರ, ಮಡಿಕೇರಿ ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೆಂಕಟ್ ರಾಜಾ ತಿಳಿಸಿದ್ದಾರೆ.
ಮಡಿಕೇರಿ ಜೂ.28 : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2023-24 ನೇ ಸಾಲಿನಲ್ಲಿಯೂ ಜಾರಿಯಲ್ಲಿರುತ್ತದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಬನಾ ಎಂ.ಶೇಕ್ ತಿಳಿಸಿದ್ದಾರೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಹೇಳಿದ್ದಾರೆ. ಈ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿದೆ ಎಂದು ವಿವರಿಸಿದ್ದಾರೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ…






