ಲೇಖಕ: admin

ಮಡಿಕೇರಿ NEWS DESK ಫೆ.12 : ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಸರಕಾರದ ಭ್ರಷ್ಟಾಚಾರಕ್ಕಿಂತಲೂ ಈಗಿನ ಸರಕಾರದ ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ ಮತ್ತು “ಮಧ್ಯವರ್ತಿ”ಗಳ ಮೂಲಕ ಸರಕಾರದ ಆಡಳಿತ ನಡೆಯುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಗಂಭೀರ ಆರೋಪ ಮಾಡಿದ್ದಾರೆ.  ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಗುತ್ತಿಗೆದಾರರ ಸಂಘದ ಹಿಂದಿನ ಅಧ್ಯಕ್ಷರಾಗಿ ಕೆಂಪಣ್ಣ ಅವರು ಕಾರ್ಯನಿರ್ವಹಿಸುತ್ತಿದ್ದ ಸಂದರ್ಭ ವಿರೋಧ ಪಕ್ಷದಲ್ಲಿದ್ದ ಸಿದ್ದರಾಮಯ್ಯ ಅವರು, ಅಂದಿನ ಸಂದರ್ಭಗಳನ್ನು ಬಳಸಿಕೊಂಡು ಅಧಿಕಾರಕ್ಕೆ ಬಂದರು. ಹೀಗಿದ್ದೂ ಇಂದು ಗುತ್ತಿಗೆದಾರರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಬಹಳಷ್ಟು ಇಲಾಖೆಗಳಲ್ಲಿ ಕೆಲವು ಸಚಿವರು ಮಧ್ಯವರ್ತಿಗಳ ಮೂಲಕ ಆಡಳಿತ ನಡೆಸುತ್ತಿದ್ದಾರೆ, ಇಂತಹ ಕೆಲಸ ಇತಿಹಾಸದಲ್ಲೆ ನಡೆದಿಲ್ಲ ಎಂದು ಟೀಕಿಸಿದರು. ರಾಜ್ಯವ್ಯಾಪಿ ಗುತ್ತಿಗೆದಾರರ ಕೆಲಸಗಳಿಗೆ 37 ಸಾವಿರ ಕೋಟಿ ರೂ. ಇಂದಿಗೂ ಪಾವತಿಯಾಗಿಲ್ಲ. ಕಳೆೆದ ಎರಡೂವರೆ ವರ್ಷಗಳ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕಿಂಚಿತ್ ಹಣ ಪಾವತಿಯಾಗದೆ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಾಕಿ ಮೊತ್ತವನ್ನು ತಕ್ಷಣ ಪಾವತಿಸುವಂತೆ…

Read More

ಮಡಿಕೇರಿ NEWS DESK  ಫೆ.12 : ದುಡಿಯುವ ವರ್ಗಕ್ಕೆ ಮಾರಕವಾಗಿರುವ ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ಹಿಂದಕ್ಕೆ ಪಡೆಯಬೇಕು, ಮಹಾತ್ಮಾ ಗಾಂಧಿ ನರೇಗಾ ಯೋಜನೆಯನ್ನು ಮತ್ತೆ ಆರಂಭಿಸಬೇಕೆAದು ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತು ಸ್ವತಂತ್ರ ಒಕ್ಕೂಟಗಳಿಂದ ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಯಿತು. ಜಂಟಿ ಕ್ರಿಯಾ ಸಮಿತಿಯ ಪ್ರಮುಖರ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ನಗರದ ಹಳೇ ಖಾಸಗಿ ಬಸ್ ನಿಲ್ದಾಣದ ಬಳಿಯಿಂದ ವಿವಿಧ ಕಾರ್ಮಿಕ ಸಂಘಟನೆಗಳ ನೂರಾರು ಮಂದಿ ಘೋಷಣೆಗಳ ಸಹಿತ ನಗರದ ಮುಖ್ಯ ಬೀದಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಗಾಂಧಿ ಮೈದಾನದಲ್ಲಿ ಸಮಾವೇಶಗೊಂಡು, ಕೇಂದ್ರ‍್ರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಪಿ.ಆರ್.ಭರತ್ ಮಾತನಾಡಿ, ಹಲ ದಶಕಗಳ ಹೋರಾಟಗಳಿಂದ ಕಾರ್ಮಿಕರಿಗೆ ನ್ಯಾಯ ಒದಗಿಸುವ 41 ಕಾನೂನುಗಳನ್ನು ದುಡಿಯುವ ವರ್ಗ ಪಡೆದುಕೊಂಡಿದೆ. ಇಂತಹ ಕಾನೂನುಗಳಲ್ಲಿ 21 ಕಾನೂನುಗಳನ್ನು ಇಂದಿನ ಕೇಂದ್ರ ಸರಕಾರ ನಾಲ್ಕು ಲೇಬರ್ ಕೋಡ್‌ಗಳನ್ನಾಗಿ ಬದಲಿಸುವ ಮೂಲಕ, ಕಾರ್ಮಿಕ ಮೂಲಭೂತ ಹಕ್ಕುಗಳನ್ನು…

Read More

ಮಡಿಕೇರಿ, NEWS DESK ಫೆ.12:-ಮಡಿಕೇರಿ ಪ್ರಾದೇಶಿಕ ವಿಭಾಗದ ಮಡಿಕೇರಿ ವಲಯದ ವ್ಯಾಪ್ತಿಯಲ್ಲಿ ಬರುವ ಮಾಂದಲ್ ಪಟ್ಟಿ ಪ್ರವಾಸಿ ತಾಣದಲ್ಲಿ ರಸ್ತೆ ದುರಸ್ತಿ ಮತ್ತು ಅಭಿವೃದ್ಧಿ ಕಾರ್ಯ ಕೈಗೊಳ್ಳುವುದರಿಂದ ಫೆಬ್ರವರಿ, 16 ರಿಂದ 28 ರವರೆಗೆ ಮಾಂದಲ್ ಪಟ್ಟಿ ಪ್ರವಾಸಿ ತಾಣದಲ್ಲಿ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಹಾಗೂ ಯಾವುದೇ ವಾಹನಕ್ಕೆ ಪ್ರವೇಶವಿರುವುದಿಲ್ಲ ಎಂದು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ, NEWS DESK ಫೆ.12:-ಮಾಹಿತಿ ತಂತ್ರಜ್ಞಾನದ ಬಳಕೆಯಿಂದ ಸರಕಾರಿ ಸೇವೆಗಳು ಹಾಗೂ ಕೆಲಸಗಳನ್ನು ಸುಲಭವಾಗಿ ಹಾಗೂ ಶೀಘ್ರವಾಗಿ ಜನಸಾಮಾನ್ಯರಿಗೆ ಒದಗಿಸಲು ಪೂರಕವಾಗಿದೆ. ಅವುಗಳ ಮಾಹಿತಿಗಳು ಅಂತರ್ಜಾಲದಲ್ಲಿ ಸೋರಿಕೆಯಾಗದಂತೆ ಸುರಕ್ಷಿತ ಕ್ರಮ ಅನುಸರಿಸುವುದು ಅತ್ಯಗತ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅವರು ತಿಳಿಸಿದ್ದಾರೆ. ಸುರಕ್ಷಿತ ಅಂತರ್ಜಾಲ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾಧಿಕಾರಿ ಅವರ ಸಭಾಂಗಣದಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ಅಂತರ್ಜಾಲ ಸುರಕ್ಷತೆಯ ಕುರಿತು ಏರ್ಪಡಿಸಲಾಗಿದ್ದ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರೊಂದಿಗೆ ಸಂವಹನ ಅತ್ಯಂತ ಸುಲಭವಾಗಿದೆ. ಸರಕಾರಿ ವೆಬ್‍ಸೈಟ್ ಗಳನ್ನು ಹ್ಯಾಕರ್ ಗಳು ಸುಲಭವಾಗಿ ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಸೈಬರ್ ಅಪರಾಧಗಳ ಬಗ್ಗೆ ಅರಿವು ಹೊಂದಿದಾಗ ತಮಗಾದ ಮೋಸದ ಬಗ್ಗೆ ದೂರು ನೀಡಿ ನ್ಯಾಯ ಪಡೆಯಲು ಅನುಕೂಲವಾಗುತ್ತದೆ ಎಂದು ಆರ್.ಐಶ್ವರ್ಯ ಅವರು ವಿವರಿಸಿದರು. ಅಧಿಕಾರಿಗಳು ಕಚೇರಿಯ ಕಂಪ್ಯೂಟರ್, ಮೊಬೈಲ್‍ಗಳಲ್ಲಿ ಅಂತರ್ಜಾಲ ಬಳಕೆಯ ಉಪಯೋಗ ಪಡೆದುಕೊಳ್ಳಬೇಕು. ಜೊತೆಗೆ ಅದರ ಅನಾನುಕೂಲತೆಗಳ ಬಗ್ಗೆ…

Read More

ಮಡಿಕೇರಿ, NEWS DESK ಫೆ.12 : ನಗರದ ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಲಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಪಿ.ಜಿ.ಸುಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಶಿವರಾತ್ರಿಯಂದು ಬೆಳಿಗ್ಗೆ 7 ಗಂಟೆಗೆ ಮಹಾಗಣಪತಿ ಹೋಮ, 9 ಗಂಟೆಗೆ ಶ್ರೀವೀರಭದ್ರ ದೇವರ ಉತ್ಸವ ಮೂರ್ತಿಯ ನಗರ ಪ್ರದಕ್ಷಿಣೆಯ ಶೋಭಾಯಾತ್ರೆ ನಡೆಯಲಿದೆ. ಶೋಭಾಯಾತ್ರೆಯಲ್ಲಿ ಡೊಳ್ಳುಕುಣಿತ ಭಜನೆ ತಂಡ ಸೇರಿದಂತೆ ವಿವಿಧ ಕಲಾ ತಂಡಗಳು ಭಾಗವಹಿಸಲಿವೆ ಎಂದರು. ಶೋಭಾಯಾತ್ರೆ ದೇವಾಲಯದಿಂದ ಪ್ರಾರಂಭಗೊಂಡು ದಾಸವಾಳ ರಸ್ತೆಗಾಗಿ, ಗಣಪತಿ ಬೀದಿಯನ್ನು ಹಾದು, ಬನ್ನಿಮಂಟಪದಲ್ಲಿ ಪೂಜೆ ಸಲ್ಲಿಸಿ ನಂತರ ಮಹದೇವಪೇಟೆಗಾಗಿ ಚೌಕಿ ವೃತ್ತದಿಂದ ಹಳೆ ಬಸ್ ನಿಲ್ದಾಣಕ್ಕಾಗಿ ಜೂನಿಯರ್ ಕಾಲೇಜು ರಸ್ತೆಗಾಗಿ ಮರಳಿ ದೇವಾಲಯಕ್ಕೆ ಬರಲಿದೆ. ಅಂದು ಮಧ್ಯಾಹ್ನ 1 ಗಂಟೆಗೆ ಭಕ್ತಾದಿಗಳಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿದೆ. ಸಂಜೆ 6 ಗಂಟೆಗೆ ಮಹಾಮೃತ್ಯುಂಜಯ ಹೋಮ ನಡೆಯಲಿದೆ. ಮೃತ್ಯುಂಜಯ ಹೋಮಕ್ಕೆ ಹೆಸರು, ನಕ್ಷತ್ರ ನೋಂದಾಯಿಸುವವರು ಮೊ.9343819138…

Read More

ಮಡಿಕೇರಿ, NEWS DESK ಫೆ.12 : ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಫೆ.15 ರಂದು ಉದ್ಘಾಟನೆಗೊಳ್ಳಲಿದೆ ಎಂದು ಸೊಸೈಟಿಯ ಅಧ್ಯಕ್ಷ ಕೆ.ಸಿ.ಸದಾನಂದ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಮೂರ್ನಾಡಿನಲ್ಲಿ 24ನೇ ಶಾಖೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಲಿದ್ದಾರೆ ಎಂದರು. ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಹಾಗೂ ಗಣಕೀಕರಣವನ್ನು ಮೂರ್ನಾಡು ವರ್ತಕರ ಸಂಘದ ಅಧ್ಯಕ್ಷ ಅರುಣ್ ಅಪ್ಪಚ್ಚು ಬಡವಂಡ ಉದ್ಘಾಟಿಸಲಿದ್ದಾರೆ. ಪ್ರಥಮ ಪಾಲುಪತ್ರವನ್ನು ಮೂರ್ನಾಡು ಗೌಡ ಸಮಾಜದ ಅಧ್ಯಕ್ಷ ಪಾಣತ್ತಲೆ ಟಿ.ಹರೀಶ್, ಠೇವಣಿಪತ್ರವನ್ನು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್‌ ನ ಉಪಾಧ್ಯಕ್ಷ ನವೀನ್ ಅಂಬೆಕಲ್ಲು ವಿತರಿಸಲಿದ್ದಾರೆ. ಪ್ರಥಮ ಉಳಿತಾಯ ಖಾತೆ ಪುಸ್ತಕವನ್ನು ಕಾಂತೂರು ಮೂರ್ನಾಡು…

Read More

ಮಡಿಕೇರಿ, NEWS DESK  ಫೆ.12 : ಶಿವರಾತ್ರಿ ಪ್ರಯುಕ್ತ ಶ್ರೀ ರಾಮಾಂಜನೇಯ ಭಜನಾ ಮಂಡಳಿ ವತಿಯಿಂದ ಫೆ.15ರಂದು ವಿವಿಧ ಭಜನಾ ತಂಡಗಳಿಂದ ನಗರದಲ್ಲಿ ಸಂಕೀರ್ತನೆ ಏರ್ಪಡಿಸಲಾಗಿದೆ ಎಂದು ಕಾರ್ಯಕ್ರಮದ ಸಂಚಾಲಕ ಕೆ.ಕೆ.ಮಹೇಶ್ ಕುಮಾರ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರ ಮತ್ತು ಗ್ರಾಮಾಂತದ ೨೫ ಭಜನಾ ತಂಡಗಳು ಪಾಲ್ಗೊಳ್ಳಲಿವೆ. ನಗರ ಸಂಕೀರ್ತನೆ ಸಂಜೆ 6 ಗಂಟೆಗೆ ಕೋದಂಡರಾಮ ದೇವಸ್ಥಾನದಿಂದ ಆರಂಭಗೊಳ್ಳಲಿದೆ. ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ಧರ್ಮದರ್ಶಿ ಗೋವಿಂದಸ್ವಾಮಿ ಹಾಗೂ ನಗರಸಭಾ ಅಧ್ಯಕ್ಷೆ ಪಿ.ಕಲಾವತಿ ಅವರು ಉದ್ಘಾಟಿಸಲಿದ್ದಾರೆ. ನಂತರ ಮುತ್ತಪ್ಪ ದೇವಸ್ಥಾನ, ಬನ್ನಿಮಂಟಪ, ಚೌಕಿ, ನಗರದ ಪೊಲೀಸ್ ಠಾಣೆ, ಜಿ.ಟಿ ವೃತ್ತ, ಎಂ.ಎಂ.ವೃತ್ತವಾಗಿ ಆಂಜನೇಯ ದೇವಸ್ಥಾನದ ಮೂಲಕ ಓಂಕಾರೇಶ್ವರ ದೇವಾಲಯದಲ್ಲಿ ಮಂಗಳವಾಗಲಿದೆ ಎಂದರು. ಮೆರವಣಿಗೆಯಲ್ಲಿ ಭಜನಾ ಸಂಕೀರ್ತನೆಗಳು ಮೊಳಗಲಿದೆ. ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲೊಂಡು ಕಾರ್ಯಕ್ರವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ರಾಮಾಂಜನೇಯ ಭಜನಾ ಮಂಡಳಿಯ ಪ್ರಮುಖರಾದ ದಿನೇಶ್ ಕುಮಾರ್, ಚಂದ್ರಶೇಖರ್, ವಿಶಾಲಾಕ್ಷಿ ಹಾಗೂ ರಂಜನ್ ಉಪಸ್ಥಿತರಿದ್ದರು.

Read More

ಕುಶಾಲನಗರ, NEWS DESK ಫೆ.12 : ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಕೂಡ್ಲೂರು ಕೈಗಾರಿಕಾ ಪ್ರದೇಶದಲ್ಲಿರುವ ಎಂಪ್ಲಾಯೀಸ್ ಯೂನಿಯನ್ ಹಾಗೂ ಮೈಸೂರು ವಿಭಾಗದ ಕೈಗಾರಿಕಾ ಕಾರ್ಮಿಕ ಯೂನಿಯನ್ ಸಹಯೋಗದೊಂದಿಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಕಾಯಿದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಕುಶಾಲನಗರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ಕೈಗಾರಿಕಾ ಕೇಂದ್ರದಿಂದ ಕುಶಾಲನಗರ ತಾಲ್ಲೂಕು ತಹಶಿಲ್ದಾರರ ಕಚೇರಿಯವರೆಗೆ ಮೆರವಣಿಗೆ ಸಾಗಿದರು. ನಂತರ ಕಾರ್ಮಿಕರ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ತಹಶಿಲ್ದಾರವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಪ್ರತಿಭಟನೆಯ ಮೆರವಣಿಗೆಯಲ್ಲಿ ಎಸ್.ಎಲ್.ಎನ್ ಕಾಫಿ ಎಂಪ್ಲಾಯೀಸ್ ಯೂನಿಯನ್ ನ ಐವತ್ತಕ್ಕೂ ಹೆಚ್ಚು ಕಾರ್ಮಿಕರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ಸಂಹಿತೆಗಳ ಭಿತ್ತಿಪತ್ರಗಳನ್ನು ಇಡಿದು ಮೆರವಣಿಗೆಯಲ್ಲಿ ಸಾಗಿದರು. ಈ ಸಂದರ್ಭದಲ್ಲಿ ಎ.ಐ.ಟಿ.ಯು.ಸಿ ಮೈಸೂರು ಜಿಲ್ಲಾ ಸಮಿತಿ ಕಾರ್ಯದರ್ಶಿ ಕೆ.ಜೆ. ಸೋಮಶೇಖರ್ ಅರಸ್, ರಾಜ್ಯ ಸಮಿತಿ ಕಾರ್ಯದರ್ಶಿ ಹೆಚ್‌.ಬಿ.ರಾಮಕೃಷ್ಣ, ಎಸ್.ಎಲ್.ಎನ್ ಘಟಕದ ಅಧ್ಯಕ್ಷ ಎಸ್.ಶಿವರಾಘವೇಂದ್ರ, ಡಿ.ಆರ್. ರವಿತೇಜ, ಎಸ್.ಆರ್.ಲೋಕೇಶ್,…

Read More

ಮಡಿಕೇರಿ NEWS DESK ಫೆ.12 : ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ತಡಿಯಪ್ಪನ ನರೇಂದ್ರ, ಪೊಕ್ಕುಳಂಡ್ರ ರಮೇಶ್, ಕಾರ್ಯದರ್ಶಿಯಾಗಿ ಮಂಜAಡ್ರ ರೇಖಾ ಉಲ್ಲಾಸ್, ಜಂಟಿ ಕಾರ್ಯದರ್ಶಿಯಾಗಿ ಚಂಡಿರ ಸುಂದರ, ಖಜಾಂಚಿಯಾಗಿ ಬಿಳಿಯಂಡ್ರ ಹರಿಪ್ರಸಾದ್ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಪೊಕ್ಕುಲಂಡ್ರ ದನೋಜ್ (ದಿವ್ಯ), ಗೌಡದಾರೆ ಚೋಟು ಬಿದ್ದಪ್ಪ, ಕತ್ರಿ ಕೊಲ್ಲಿ ನಂಜುಂಡ, ತೆಕ್ಕಡೆ ಗಾಯತ್ರಿ, ಉಪ್ಪುಂಡಿ ಬಾಬಿ ದೇವಯ್ಯ, ಮುಕ್ಕಾಟಿ ದಿಲೀಪ್, ಪೊಕ್ಕುಳಂಡ್ರ ದಿನೇಶ್, ಕಾಯರ ತೋಡಿ ನಾಣಯ್ಯ, ಕೊಂಪುಳಿರ ಪೃಥ್ವಿ, ಜೈನೀರ ತನು ತಮ್ಮಯ್ಯ, ಖಾಯಂ ಗೌರವ ಅಧ್ಯಕ್ಷರಾಗಿ ಡಾ.ಕೆ.ವಿ.ಚಿದಾನಂದ, ಡಾ.ಕೆ.ವಿ.ರೇಣುಕಾ ಪ್ರಸಾದ್, ಖಾಯಂ ಸಲಹೆಗಾರರಾಗಿ ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ್ ಕರಂದ್ಲಾಜೆ ಹಾಗೂ ಉಪಾಧ್ಯಕ್ಷ ಡಾ.ರಾಜೇಶ್ ತೇನನ ಅವರು ಮುಂದುವರೆಯಲಿದ್ದಾರೆ ಎಂದು ವಿರಾಜಪೇಟೆ ಗೌಡ ಸಮಾಜದ ಪ್ರಕಟಣೆ ತಿಳಿಸಿದೆ. ನೂತನ ಪದಾಧಿಕಾರಿಗಳ ಆಯ್ಕೆ ಸಂದರ್ಭ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ್ ಕರಂದ್ಲಾಜೆ, ಮಡಿಕೇರಿ ಗೌಡ ಸಮಾಜದ ನಿರ್ದೇಶಕ ತೋಟಂಬೈಲು…

Read More

ಕಣಿವೆ NEWS DESK ಫೆ.12 : ಕೊಡಗು ಜಿಲ್ಲಾ ಅರೆಸೇನಾಪಡೆಯ ಮಾಜಿ ಯೋಧರ ಸಂಘದ ಪದಾಧಿಕಾರಿಗಳು ಗುರುವಾರ ಮಡಿಕೇರಿಯ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರನ್ನು ಭೇಟಿ ಮಾಡಿ ಫಲತಾಂಬೂಲ ನೀಡಿ ಅಭಿನಂದಿಸಿದರು. ಹಾಗೆಯೇ ಈ ತಿಂಗಳ ತಾ. 14 ರಂದು ಕುಶಾಲನಗರದಲ್ಲಿ ಆಯೋಜಿಸಿರುವ ಪುಲ್ವಾಮಾ ‌ಹುತಾತ್ಮ ಯೋಧರ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಪುಲಿಯಂಡ.ಎಂ.ಚಂಗಪ್ಪ, ಬಿ.ಎಂ.ರವೀಂದ್ರ, ಜಿ.ಕೆ.ದಿನೇಶ್ ಕುಮಾರ್, ಹರೀಶ್ ಕುಮಾರ್, ಎನ್.ಎಂ.ಭೀಮಯ್ಯ ಇದ್ದರು.

Read More