ಲೇಖಕ: admin

ಮಡಿಕೇರಿ ಡಿ.16 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ವಿರಾಜಪೇಟೆ ತಾಲ್ಲೂಕು ಘಟಕದ ವತಿಯಿಂದ ಡಿ.17 ರಂದು ಶಾಲಾ ಮಟ್ಟದ ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೇಂದ್ರ ಸಮಿತಿಯ ನಿರ್ದೇಶನ ದಲ್ಲಿ, ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಸಹಕಾರದೊಂದಿಗೆ, ವಿರಾಜಪೇಟೆ ತಾಲೂಕು ಅಧ್ಯಕ್ಷರಾದ ಮುಕ್ಕಾಟಿರ ಕಾವೇರಮ್ಮ ಕರುಂಬಯ್ಯ ಅವರ ಅಧ್ಯಕ್ಷತೆಯಲ್ಲಿ ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯ ಗುಂಡಿಗೆರೆ ಸರ್ಕಾರಿ ಶಾಲೆಯಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ , ಜಿಲ್ಲಾ ಪ್ರಧಾನ ಕಾರ್ಯದರ್ಶಿ  ಕರಿನೆರವಂಡ ಡ್ಯಾನಿ ಕುಶಾಲಪ್ಪ, ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಎಂ.ಎಂ.ಇಸ್ಮಾಯಿಲ್, ಶಾಲಾ ಮುಖ್ಯ ಶಿಕ್ಷಕರಾದ ಹೆಚ್.ಜಿ.ಸವಿತಾ ಹಾಗೂ ಜಿಲ್ಲಾ ಸಮಿತಿ ಸದಸ್ಯರು ಹಾಗೂ ತಾಲ್ಲೂಕು ಸಮಿತಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಕಾರ್ಯದರ್ಶಿ ಡ್ಯಾನಿ…

Read More

ನಾಪೋಕ್ಲು ಡಿ.16 NEWS DESK : ಶಿಸ್ತು, ವಿದೇಯತೆ ಮತ್ತು ಸಮಯ ಪಾಲನೆ ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕಾದ ಉತ್ತಮ ಹವ್ಯಾಸಗಳು ಎಂದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ  ಚೌರಿರ ಡಾ.ಜಗತ್ ತಿಮ್ಮಯ್ಯ ಹೇಳಿದರು. ನಾಪೋಕ್ಲು ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಪೆÇೀಷಕರು ಮಕ್ಕಳಿಗೆ ಒಳ್ಳೆಯ ಮಾರ್ಗದರ್ಶನ ನೀಡದಿದ್ದರೆ ಮಕ್ಕಳು ಬೆಳೆಯಲು ಸಾಧ್ಯವಿಲ್ಲ. ಪೋಷಕರು ಮಕ್ಕಳಿಗೆ ಶಿಸ್ತು ಮತ್ತು ಸಮಯ ಪಾಲನೆಯ ಮಹತ್ವದ ಅರಿವು ಮೂಡಿಸಬೇಕು. ಮಕ್ಕಳಿಗೆ ಯಾವತ್ತು ಒಳ್ಳೆಯದನ್ನು ಹೇಳಿಕೊಡಬೇಕು. ಮಕ್ಕಳ ಬುದ್ಧಿ ಸ್ಮಿತಕ್ಕೆ ಬಂದಾಗ ಅವರು ಖಂಡಿತ ಒಳ್ಳೆಯದನ್ನು ಪಾಲಿಸುತ್ತಾರೆ ಎಂದರು.  ಕೊಡಗಿನ ಮಕ್ಕಳಲ್ಲಿ ಶಿಸ್ತು ಇದೆ. ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಅವರು ಜೀವನದುದ್ದಕ್ಕು ಶಿಸ್ತನ್ನು ಪಾಲಿಸಿದರು. ಅಂತಹ ನಾಡಿನಲ್ಲಿ ಹುಟ್ಟಿದ ಮಕ್ಕಳು ಶಿಸ್ತುಬದ್ಧ ಜೀವನ ನಡೆಸಲು ಶಕ್ತರು ಎಂದ ಅವರು, ಇಂದಿನ ದಿನಗಳಲ್ಲಿ ಆಂಗ್ಲ ಭಾಷೆಯ ಅಗತ್ಯ ಬಹಳಷ್ಟು ಇದೆ. ಭಾಷೆ…

Read More

ನಾಪೋಕ್ಲು ಡಿ.16 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮಡಿಕೇರಿ ತಾಲ್ಲೂಕಿನ ಜ್ಞಾನವಿಕಾಸ ಕಾರ್ಯಕ್ರಮದ ಪ್ರಯುಕ್ತ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವು ಮಡಿಕೇರಿಯ ಮೈತ್ರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸಮಾಜಮುಖಿ ಕಾರ್ಯಕ್ರಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಇಂತಹ ವಿಚಾರ ಗೋಷ್ಠಿ ಕಾರ್ಯಕ್ರಮ ಅತ್ಯಗತ್ಯ ಎಂದು ಹೇಳಿದರು. ಜಿಲ್ಲಾ ನ್ಯಾಯಾಲಯದ ವಕೀಲರಾದ ಮೀನಾಕುಮಾರಿ ಮಾತನಾಡಿ, ನೊಂದ ಮಹಿಳೆಗೆ ಕಾನೂನಿನಲ್ಲಿ ಸಿಗುವ ನ್ಯಾಯದ ಬಗ್ಗೆ, ಬಾಲ್ಯ ವಿವಾಹದ ಬಗ್ಗೆ, ಹೆಣ್ಣು ಮಕ್ಕಳಿಗೆ ಶಿಕ್ಷಣದ ಮೌಲ್ಯದ ಕುರಿತು ಮಹಿಳಾ ಸಹಾಯವಾಣಿಯ ಕುರಿತು ಮಾಹಿತಿ ನೀಡಿದರು. ಪ್ರಾಸ್ತವಿಕ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮಡಿಕೇರಿ ತಾಲ್ಲೂಕಿನ ಯೋಜನಾಧಿಕಾರಿ ಪುರುಷೋತ್ತಮ್, ಯೋಜನೆಯ ಹಿನ್ನೆಲೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಇಂದು ಮಹಿಳೆಯು ಸರ್ವತೋಮುಖ ಬೆಳವಣಿಗೆ ಸಾಧಿಸಿ, ಒಂದು ಕುಟುಂಬ ನಿರ್ವಹಣೆ ಮಾಡಲು ಮಹಿಳೆ ಸಿದ್ದರಾಗಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆಯಿಂದ ಎಲ್ಲಾ ಕಾರ್ಯಕ್ರಮಕ್ಕೆ ತೊಡಗಿಸಿಕೊಳ್ಳುವುದರಿಂದ ಪ್ರತಿಯೊಬ್ಬ ಮಹಿಳೆ…

Read More

ನಾಪೋಕ್ಲು ಡಿ.16 NEWS DESK : ಅರೆಭಾಷೆ ಸಮುದಾಯಕ್ಕೆ ತನ್ನದೇ ಆದ ಇತಿಹಾಸವಿದ್ದು, ಪ್ರಾಚೀನ ಕಾಲದಿಂದಲೂ ಎಲ್ಲಾ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ ಎಂದು ನಿವೃತ್ತ ಮೇಜರ್, ಡಾ.ಕುಶ್ವಂತ್ ಕೋಳಿಬೈಲು ಅವರು ಅಭಿಪ್ರಾಯ ಪಟ್ಟರು. ಮೈಸೂರಿನ ಕೊಡಗು ಗೌಡ ಸಮಾಜದ ಆಶ್ರಯದಲ್ಲಿ ನಡೆದ ಅರೆಭಾಷೆ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಸಮುದಾಯದ ಸಹಬಾಳ್ವೆಯಿಂದಾಗಿ ಪ್ರಾಚೀನ ಕಾಲದ ಎಲ್ಲಾ ಊರುಗಳ ದೇವಾಲಯಗಳಲ್ಲಿ ತಕ್ಕ ಮುಖ್ಯಸ್ಥರಾಗಿ ಅಧಿಕಾರ ಹೊಂದಿ ಅಂದಿನ ಕಾಲದ ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದರು ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು. ಭಾರತದಿಂದ ಬ್ರಿಟಿಷರನ್ನು ಓಡಿಸಲು, 1837ರಲ್ಲೇ ಕೆದಂಬಾಡಿ ರಾಮೇಗೌಡ ಹಾಗೂ ಗುಡ್ಡೆಮನೆ ಅಪ್ಪಯ್ಯ ಗೌಡ ಎಲ್ಲಾ ಜನರನ್ನು ಸಂಘಟಿಸಿ ಹೋರಾಡಿರುವುದು ಅವರ ನಾಯಕತ್ವದ ಗುಣವನ್ನು ತೋರಿಸುತ್ತದೆ. ಇಂತಹ ಗುಣವನ್ನು ಹೊಂದಿದ ಸಮುದಾಯ ತನ್ನ ಇತಿಹಾಸವನ್ನು ಅರಿತುಕೊಂಡು ಮುನ್ನಡೆಯುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು. ಸಮಾರಂಭದಲ್ಲಿ ಭಾಗವಹಿಸಿದ್ದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯರಾದ…

Read More

ಮಡಿಕೇರಿ ಡಿ.16 NEWS DESK : ಕರ್ನಾಟಕ ಅರೆಭಾಷೆ ಅಕಾಡೆಮಿ, ಭಾಗಮಂಡಲ ನಾಡು ಗೌಡ ಸಮಾಜ ಮತ್ತು ಭಾಗಮಂಡಲ ನಾಡು ಗೌಡ ಯುವ ಒಕ್ಕೂಟದ ವತಿಯಿಂದ ಅರೆಭಾಷೆ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಭಾಗಮಂಡಲ ವಿ.ಎಸ್.ಎಸ್.ಎನ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಪ್ರಾಂಶುಪಾಲರಾದ  ಕುಂದಲ್ಪಾಡಿ ದಿವಾಕರ್, ಅರೆಭಾಷೆ ಅಕಾಡೆಮಿ, ಕೊಡಗು ಗೌಡ ಫೆಡರೇಶನ್, ಗೌಡ ಸಮಾಜಗಳು ಮತ್ತು ಗೌಡ ಯುವ ಒಕ್ಕೂಟಗಳ ವಿವಿಧ ಕಾರ್ಯಕ್ರಮಗಳ ಫಲವಾಗಿ ಇಂದು ಅರೆಭಾಷೆ ಹೆಚ್ಚು ಬಳಕೆಯಾಗಿ ಜನಪ್ರಿಯವಾಗಿದೆ. ಎಲ್ಲರೂ ಹೆಮ್ಮೆಯಿಂದ ಅರೆಭಾಷೆಯನ್ನು ಗಟ್ಟಿಧ್ವನಿಯಲ್ಲಿ ಮಾತನಾಡುತ್ತಾರೆ. ಮಕ್ಕಳಿಗೆಗೊತ್ತಿರುವ ಮಾತೃ ಭಾಷೆಯಲ್ಲಿ ಶಿಕ್ಷಣ ಒದಗಿಸಿ ಬದುಕಿನ ದಾರಿ ಕಲಿಸಬೇಕು ಎಂದು ಹೇಳಿದರು. ಬುದ್ಧಿಶಕ್ತಿ ಬೆಳವಣಿಗೆಗೆ ಅವರ ಮಾತೃಭಾಷೆ ಹೆಚ್ಚು ಪ್ರಯೋಜನ. ನಗರಗಳಲ್ಲಿ ಓದುವ ಅನಿವಾರ್ಯತೆ ಇಲ್ಲ, ಮಕ್ಕಳಿಗೆ ಮನೆಗಳಲ್ಲಿ ಮಾತೃಭಾಷೆಯಲ್ಲಿ ಸಾಕಷ್ಟು ವಿಷಯ ಕಲಿಸಬಹುದು, ಎಲ್ಲರೂ ನಮ್ಮ ಆಚಾರ ವಿಚಾರ ಸಂಪ್ರದಾಯಗಳನ್ನು ಬೆಳೆಸಲು ಒಂದಾಗುವ ಎಂದು ಕರೆ ನೀಡಿದರು. ಗೌಡ ಸಮಾಜ ಗೌರವಾಧ್ಯಕ್ಷ ಕುದುಪಜೆ ಪಳಂಗಪ್ಪ…

Read More

ಪುತ್ತೂರು ಡಿ.16 NEWS DESK : ಪುತ್ತೂರು ನಗರದ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್‌ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ವಾರ್ಷಿಕ ವಜ್ರಾಭರಣಗಳ ವಿಶೇಷ ಉತ್ಸವ ‘ಗ್ಲೋ-ಫೆಸ್ಟ್’ಗೆ ಚಾಲನೆ ನೀಡಲಾಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ನಳಿನಿ ಪಿ. ಶೆಟ್ಟಿ ಅವರು ಉತ್ಸವವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ವಜ್ರಾಭರಣಗಳನ್ನು ಖರೀದಿಸುವುದು ಮತ್ತು ಧರಿಸುವುದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ವಜ್ರವು ಕೇವಲ ಒಂದು ಕಲ್ಲಲ್ಲ: ಅದು ಶುದ್ಧತೆ, ಶಕ್ತಿ, ಪ್ರೇಮ ಮತ್ತು ವಿಶ್ವಾಸದ ಸಂಕೇತವಾಗಿದೆ. ಜಿ.ಎಲ್ ಆಚಾರ್ಯ ಸಂಸ್ಥೆಯು ಗ್ರಾಹಕರ ನಂಬಿಕೆಯನ್ನು ಉಳಿಸಿಕೊಂಡು, ವೈವಿಧ್ಯಮಯ ವಿನ್ಯಾಸಗಳನ್ನು ನೀಡುವಲ್ಲಿ ಹೆಸರುವಾಸಿಯಾಗಿದೆ,” ವಜ್ರಗಳಲ್ಲಿ ಎರಡು ವಿಧಗಳಿವೆ ಜಿ.ಎಲ್ ನಲ್ಲಿ ಮಾರಟವಾಗೋದು ಪ್ರಕೃತಿಯಲ್ಲಿ ಸಿಗುವ ನೈಜ ವಜ್ರ ಅದರ ಮೌಲ್ಯ ಏರುತ್ತಲೇ ಇದೆ; ನನ್ನ ತಾಯಿ ಮದುವೆಗೆ ಮೊದಲು ಜಿ.ಎಲ್ ನಲ್ಲಿ ಖರೀದಿಸಿದ ಉಂಗುರವನ್ನು ಇವತ್ತೂ ಬದಲಿಸಲು ಬಿಡುವುದಿಲ್ಲ ಅದಕ್ಕೆ ಕಾರಣ ಇಲ್ಲಿಯ ಪ್ಯೂರಿಟಿ ಎಂದು ಮೆಚ್ಚುಗೆ…

Read More

ಕುಶಾಲನಗರ ಡಿ.16 NEWS DESK : ಶಿಕ್ಷಣ ಮತ್ತು ಆರೋಗ್ಯ ಇವೆರಡು ದೇಶದ ಅಭಿವೃದ್ದಿಯಲ್ಲಿ ಮಹತ್ವ ಪಾತ್ರ ವಹಿಸುತ್ತವೆ ಎಂದು ಡಾ. ಜಮೀರ್‌ಅಹಮದ್‌ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿ ಪ್ಯಾರಾ ಮೆಡಿಕಲ್‌ ಕಾಲೇಜಿನಲ್ಲಿ ನಡೆದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಜ್ಞಾನದಿಂದ ಮಾತ್ರ ವ್ಯಕ್ತಿವಿಕಸನ ಸಾಧ್ಯ, ಸಾಮಾಜಿಕ ಬದ್ಧತೆ ಮತ್ತು ಮಾನವೀಯತೆ ಮೌಲ್ಯಗಳನ್ನು, ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವಂತೆ ಅವರು ಕರೆ ನೀಡಿದರು. ಪ್ಯಾರಾಮೆಡಿಕಲ್‌ಕೋರ್ಸುಗಳಿಗೆ ಇತ್ತೀಚಿನ ದಿನಗಳಲ್ಲಿ ವಿಪುಲ ಉದ್ಯೋಗಅವಕಾಶಗಳಿವೆ ಎಂದು ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಸನ್ನ ಅವರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು ಸಾಮಾಜಿಕ ಜಾಲತಾಣಗಳ ಸದ್ಭಳಕೆ ಅಗತ್ಯ ಹಾಗೂ ಅವಶ್ಯತೆಗಳಿಗೆ ಮಾತ್ರ ಬಳಸಿಕೊಳ್ಳುವಂತೆ ತಿಳಿಸಿದ ಅವರು ಉದ್ಯೋಗದಲ್ಲಿ ಆಮಿಷಗಳಿಗೆ ಬಲಿಯಾಗದೆ ಭ್ರಷ್ಟಾಚಾರ ರಹಿತವಾಗಿ ಕೆಲಸ ನಿರ್ವಹಿಸುವಂತೆ ಕಿವಿ ಮಾತು ಹೇಳಿದರು. ಸಮಾರಂಭದಲ್ಲಿ ಆಟೋಟ ಸ್ಪರ್ಧೆಗಳಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ, ಅತಿಥಿ ಗಣ್ಯರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿನಿ ಅನಿಶಾ…

Read More

ಕುಶಾಲನಗರ ಡಿ.16 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮೂಲಕ ಭಾಷಾ ಅಭಿವೃದ್ಧಿಯೊಂದಿಗೆ ಅನ್ಯಭಾಷಿಕರಿಗೆ ಅರೆ ಭಾಷೆಯನ್ನು ಕಲಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ತಿಳಿಸಿದ್ದಾರೆ. ಕುಶಾಲನಗರದ ರೈತ ಸಹಕಾರ ಭವನ ಸಭಾಂಗಣದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಕುಶಾಲನಗರ ಗೌಡ ಸಮಾಜ ಮತ್ತು ಅದರ ಅಂಗ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ಅರೆಭಾಷೆ ದಿನಾಚರಣೆ -2025 ಮತ್ತು ಅರೆ ಭಾಷೆ ನಾಟಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಕಾಡೆಮಿ ಮೂಲಕ ಸಂಸ್ಕೃತಿ ಸಾಹಿತ್ಯ ಸಂಶೋಧನೆ ಕಾರ್ಯಕ್ರಮ ಚಟುವಟಿಕೆಗಳು ನಿರಂತರ ನಡೆಯುತ್ತಿವೆ. ಸಮುದಾಯದ ಪ್ರತಿಯೊಬ್ಬರು ಮಾತೃಭಾಷೆಗೆ ಆದ್ಯತೆ ನೀಡಬೇಕು. ಯುವ ಜನಾಂಗ ಭಾಷಾಜ್ಞಾನ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದರು. ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ನಿವೃತ್ತ ಮುಖ್ಯೋಪಾಧ್ಯಾಯರು ಹಾಗೂ ಗೌಡ ಸಮಾಜ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾದ ಸೂದನ ಎಸ್ ಗೋಪಾಲ್, ವ್ಯಾಪ್ತಿಗಳು ಬದಲಾದಂತೆ ಭಾಷೆ ಬದಲಾಗುತ್ತವೆ. ಭಾಷೆ ಸಂಸ್ಕೃತಿಯನ್ನು…

Read More

ಮಡಿಕೇರಿ ಡಿ.15 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಚೆಟ್ಟಳ್ಳಿ ಚೇರಳ ಗೌಡ ಸಮಾಜದ ಸಹಯೋಗದಲ್ಲಿ ಅರೆಭಾಷೆ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಚೇರಳ ಗೌಡ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ನಿಡ್ಯಮಲೆ ಜ್ಞಾನೇಶ್ ಅವರು, ಅರೆಭಾಷೆ ಬೆಳೆದು ಬಂದ ದಾರಿ, ಅರೆಭಾಷೆ ಗೌಡರು ಮದುವೆಯ ಶಾಸ್ತ್ರ ಸಂಪ್ರದಾಯಗಳು ಹಾಗೂ ಹುಟ್ಟು-ಸಾವುಗಳಲ್ಲಿ ಮಾಡುವ ಶಾಸ್ತ್ರಗಳ ಬಗ್ಗೆ ವಿವರಿಸಿದರು. ಯುವ ಪೀಳಿಗೆ ನಮ್ಮ ಆಚಾರ ವಿಚಾರಗಳನ್ನು ಮರೆಯದೆ ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸಿಕೊಂಡು ಹೋಗಬೇಕೆಂದು ಸಲಹೆ ನೀಡಿದರು. ಮುಂದಿನ ದಿನಗಳಲ್ಲಿ ಕರ್ನಾಟಕ ಅಕಾಡೆಮಿ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು, ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು. ಹಿರಿಯರು ಹಾಗೂ ಕಾಫಿ ಬೆಳೆಗಾರರಾದ ಮರದಾಳು ಬಸಪ್ಪ ಮತ್ತು ಪೇರಿಯನ ಕುಶಾಲಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾಜದ ಕಾರ್ಯದರ್ಶಿ ಆಜೀರ ಧನಂಜಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ…

Read More

ಮಡಿಕೇರಿ ಡಿ.15 NEWS DESK : ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಕ್ಕಳು ಮತ್ತು ಯುವಜನರ ಕಲಾಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾನೈಪುಣ್ಯವನ್ನು ವೃದ್ಧಿಗೊಳಿಸುವಂತೆ ಪ್ರೋತ್ಸಾಹಿಸಲು ಕಲಾಪ್ರತಿಭೋತ್ಸವ ಸ್ಪರ್ಧೆಗಳು ಬಾಲಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆ, ಸಮೂಹ ಸ್ಪರ್ಧೆಗಳು ಇತ್ತೀಚೆಗೆ ನಗರದ ಗಾಂಧಿ ಭವನದಲ್ಲಿ ನಡೆಸಲಾಗಿತ್ತು. ಜಿಲ್ಲಾ ಮಟ್ಟದ ಕಲಾಪ್ರತಿಭೋತ್ಸವ ಸ್ಪರ್ಧೆಯಲ್ಲಿ ಬಾಲ ಪ್ರತಿಭೆ (8 ರಿಂದ 14 ವರ್ಷದೊಳಗಿನವರಲ್ಲಿ)ಯಲ್ಲಿ ಪ್ರಥಮ ಸ್ಥಾನ ಪಡೆದು ಡಿ.22 ರಂದು ಮೈಸೂರಿನ ಕಲಾಮಂದಿರದಲ್ಲಿರುವ ರಂಗಾಯಣದ ಆವರಣದಲ್ಲಿ ನಡೆಯುವ ವಿಭಾಗ ಮಟ್ಟಕ್ಕೆ ಆಯ್ಕೆಯಾದ ವಿಜೇತರ ವಿವರ ಇಂತಿದೆ. ಕರ್ನಾಟಕ/ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಪ್ರಥಮ ಸ್ಥಾನ ಅಪೇಕ್ಷ ಆರ್.ರೈ, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ, ಮಡಿಕೇರಿ ತಂದೆ ರಾಧಕೃಷ್ಣ ರೈ, ಶ್ರೀ ಗಜಾನನ ಸ್ಟೋರ್ಸ್, ಮಲ್ಲಿಕಾರ್ಜುನ ನಗರ, ಮಡಿಕೇರಿ ಕೊಡಗು ಜಿಲ್ಲೆ. ದೂ.ಸಂ. 9480646175. ಶಾಸ್ತ್ರೀಯ ನೃತ್ಯ (ಭರತನಾಟ್ಯ)ದಲ್ಲಿ ಪ್ರಥಮ ಸ್ಥಾನ ಆವಂತಿಕ ಟಿ.ಯು., ಸಂತ ಅನ್ನಮ್ಮ…

Read More