ಮಡಿಕೇರಿ ಜೂ.23 : ಸಿಕ್ಕಲ್ಸೆಲ್ ರಕ್ತಹೀನತೆಯು ಸಿಕ್ಕಲ್ಸೆಲ್ ರೋಗ ಎಂದು ಕರೆಯಲ್ಪಡುವ ಆನುವಂಶಿಕ ಅಸ್ವಸ್ಥತೆಗಳ ಗುಂಪಿನಲ್ಲಿ ಒಂದಾಗಿದೆ. ಇದು ದೇಹದ ಎಲ್ಲಾ ಭಾಗಗಳಿಗೆ ಆಮ್ಲಜನಕವನ್ನು ಸಾಗಿಸುವ ಕೆಂಪುರಕ್ತ ಕಣಗಳ ಆಕಾರದ ಮೇಲೆ ಪರಿಣಾಮ ಬೀರುತ್ತದೆ. ಕೆಂಪುರಕ್ತ ಕಣಗಳು ಸಾಮಾನ್ಯವಾಗಿ ದುಂಡಾಗಿರುತ್ತವೆ ಮತ್ತು ಹೊಂದಿಕೊಳ್ಳುತ್ತವೆ, ಆದ್ದರಿಂದ ಅವು ರಕ್ತನಾಳಗಳ ಮೂಲಕ ಸುಲಭವಾಗಿ ಚಲಿಸುತ್ತವೆ. ಸಿಕ್ಕಲ್ಸೆಲ್ ಕಣ ರಕ್ತಹೀನತೆಯಲ್ಲಿ, ಕೆಲವು ಕೆಂಪುರಕ್ತ ಕಣಗಳು ಕುಡಗೋಲು ಅಥವಾ ಅರ್ಧಚಂದ್ರರ ಆಕಾರದಲ್ಲಿರುತ್ತವೆ. ಈ ಸಿಕ್ಕಲ್ಸೆಲ್ಗಳು ಕಠಿಣ ಮತ್ತು ಅಂಟಿಕೊಳ್ಳುತ್ತವೆ. ಇದು ರಕ್ತದ ಹರಿವನ್ನು ನಿಧಾನಗೊಳಿಸುತ್ತದೆ ಅಥವಾ ನಿಬರ್ಂಧಿಸುತ್ತದೆ. ಸಿಕ್ಕಲ್ಸೆಲ್ ರಕ್ತಹೀನತೆ ಹೊಂದಿರುವ ಹೆಚ್ಚಿನ ಜನರಿಗೆ ಯಾವುದೇ ಚಿಕಿತ್ಸೆ ಇಲ್ಲ. ಚಿಕಿತ್ಸೆಗಳು ನೋವನ್ನು ನಿವಾರಿಸಬಹುದು ಮತ್ತು ರೋಗಕ್ಕೆ ಸಂಬಂಧಿಸಿದ ತೊಡಕುಗಳನ್ನು ತಡೆಯಲು ಸಹಾಯ ಮಾಡುತ್ತದೆ. ಸಿಕ್ಕಲ್ಸೆಲ್ ರಕ್ತಹೀನತೆಯ ಚಿಹ್ನೆಗಳು ಮತ್ತು ರೋಗ ಲಕ್ಷಣಗಳು ಸಾಮಾನ್ಯವಾಗಿ 6 ತಿಂಗಳ ವಯಸ್ಸಿನಲ್ಲಿ ಕಾಣಿಸಿಕೊಳ್ಳುತ್ತವೆ. ಅವು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗುತ್ತವೆ ಮತ್ತು ಕಾಲಾನಂತರದಲ್ಲಿ ಬದಲಾಗಬಹುದು. ಚಿಹ್ನೆಗಳು ಮತ್ತು ರೋಗಲಕ್ಷಣಗಳು ಇವುಗಳನ್ನು ಒಳಗೊಂಡಿರಬಹುದು. ರಕ್ತಹೀನತೆ.…
ಲೇಖಕ: admin
ಮಡಿಕೇರಿ ಜೂ.23 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ `ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ’ಯು ಜೂ.26 ರಂದು ಬೆಳಗ್ಗೆ 11 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಎನ್.ಆನಂದ್, ಮಡಿಕೇರಿ ತಾಲ್ಲೂಕು…
ಮಡಿಕೇರಿ ಜೂ.23 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಒಕ್ಕಲಿಗರ ಸಂಘ ಮತ್ತು ಕೊಡಗು ಗೌಡ ಸಮಾಜಗಳ ಸಹಕಾರದೊಂದಿಗೆ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿಯು ಜೂನ್, 27 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕೊಡಗು ಗೌಡ ಸಮಾಜದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು, ಶಾಸಕ ಡಾ.ಮಂಥರ್ ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ಶಾಸಕ ಎ.ಎಸ್. ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್.ಸೋಮಣ್ಣ, ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ. ವಕೀಲರಾದ ಕೆ.ಆರ್.ವಿದ್ಯಾಧರ ಅವರು…
ಮಡಿಕೇರಿ ಜೂ.23 : ಕುಶಾಲನಗರ 220/11 ಕೆವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೋಗುವ ಎಫ್2 ಕಾವೇರಿ ಮತ್ತು ಇಂಡಸ್ಟ್ರೀಯಲ್ ಏರಿಯಾ ಫೀಢರ್ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಜೂ.25 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕೂಡ್ಲೂರು, ಕೂಡುಮಂಗಳೂರು, ಕೂಡಿಗೆ, ಸುಂದರನಗರ, ಚಿಕ್ಕತ್ತೂರು, ದೊಡ್ಡತ್ತೂರು, ಹಳೆಕೂಡಿಗೆ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.
ಮಡಿಕೇರಿ ಜೂ.23 : ಗ್ರಾಹಕರ ವ್ಯಾಜ್ಯಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಜು.8 ರಂದು ಲೋಕ್ ಅದಾಲತ್ ನಡೆಯಲಿದೆ. ಆ ದಿನದಂದು ಸಂಬಂಧಪಟ್ಟವರು ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ಗುರುತಿಸಿಕೊಂಡು ಇತ್ಯರ್ಥಪಡಿಸಿಕೊಳ್ಳುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ಆಡಳಿತಾಧಿಕಾರಿ ಹಾಗೂ ಸಹಾಯಕ ರಿಜಿಸ್ಟ್ರಾರ್ ಶಾರದ ತಿಳಿಸಿದ್ದಾರೆ.
ಮಡಿಕೇರಿ ಜೂ.23 : ಐಗೂರು, ಯಸಳೂರು ಮತ್ತು ಬಿಳಿಗೇರಿಯಲ್ಲಿರುವ ಸಾಂಬಾರ ಮಂಡಳಿಯ ಇಲಾಖಾ ನರ್ಸರಿಗಳಲ್ಲಿ ಉತ್ತಮ ಗುಣಮಟ್ಟದ ಸಾಂಬಾರ ನಾಟಿ ಸಸಿಗಳು ಲಭ್ಯವಿದೆ. ಕೊಡಗು ಜಿಲ್ಲೆಯ ರೈತರು ಈ ಹಂಗಾಮಿನಲ್ಲಿ ನಾಟಿ ಮಾಡಲು ಸಸಿಗಳನ್ನು ಪಡೆಯಬಹುದು. ಪ್ರತಿ ಚಿಕ್ಕ ಏಲಕ್ಕಿ ಬೀಜ ರೂ.15, ಪ್ರತಿ ಏಲಕ್ಕಿ ಕ್ಲೋನಲ್ ಸಕ್ಕರ್ ರೂ. 50, ಬ್ಲಾಕ್ ಪೆಪ್ಪರ್ ರೂಟೆಡ್ ಕಟಿಂಗ್ಸ್ ರೂ.7 ಮತ್ತು ಕರಿಮೆಣಸು ನ್ಯೂಕ್ಲಿಯಸ್ ಮೆಟಿರಿಯಲ್ ರೂ.20 ಐಗೂರು ಸ್ಪೈಸಸ್ ಬೋರ್ಡ್ನ ನರ್ಸರಿಯ ಫಾರ್ಮ್ ವ್ಯವಸ್ಥಾಪಕರು-9745295470, ಯಸಳೂರು ಸಾಂಬಾರ ಮಂಡಳಿ ಇಲಾಖಾ ನರ್ಸರಿಯ ವ್ಯವಸ್ಥಾಪಕರು 8310208940 ಹಾಗೂ ಬಿಳಿಗೇರಿ ಸಾಂಬಾರ ಮಂಡಳಿ ಇಲಾಖೆಯ ನರ್ಸರಿಯ ವ್ಯವಸ್ಥಾಪಕರು 9480249497/ 8281376265 ನ್ನು ಸಂಪರ್ಕಿಸಬಹುದು ಎಂದು ಸಾಂಬಾರ ಮಂಡಳಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಜೂ.23 : ನಗರಸಭಾ ವ್ಯಾಪ್ತಿಯಲ್ಲಿರುವ ವಿವಿಧ ಅಂಗಡಿ ಮುಂಗಟ್ಟು ಉದ್ದಿಮೆದಾರರ 2023-24 ನೇ ಸಾಲಿನ ಉದ್ದಿಮೆ ಪರವಾನಿಗೆ ನವೀಕರಣ ಪ್ರಕ್ರಿಯೆಯು ಈಗಾಗಲೇ ಏ.1 ರಿಂದ ಪ್ರಾರಂಭವಾಗಿದ್ದು, 1838 ಅಧಿಕೃತ ಉದ್ದಿಮೆ ಪರವಾನಿಗೆಗಳ ಪೈಕಿ 148 ಉದ್ದಿಮೆದಾರರು ಮಾತ್ರ ನವೀಕರಿಸಿಕೊಂಡಿದ್ದಾರೆ. ಉದ್ದಿಮೆ ಪರವಾನಿಗೆ ನವೀಕರಿಸದೆ ವ್ಯಾಪಾರ ವಹಿವಾಟು ಮಾಡುತ್ತಿರುವುದು 1964 ರ ಪೌರಸಭೆಗಳ ಅಧಿನಿಯಮ ಕಲಂ 243ಕ್ಕೆ ವಿರುದ್ಧವಾಗಿದೆ. ಈ ಬಗ್ಗೆ ಸರ್ಕಾರದಿಂದ ಆಕ್ಷೇಪ ವ್ಯಕ್ತವಾಗಿ ಸೂಕ್ತ ಕ್ರಮವಹಿಸುವಂತೆ ಸೂಚಿಸಲಾಗಿದೆ. ಸರ್ಕಾರದ ಆದೇಶದಂತೆ ವ್ಯಾಪಾರ ತಂತ್ರಾಂಶದಲ್ಲಿ ಕಚೇರಿಗೆ ಅರ್ಜಿ ಸಲ್ಲಿಸದೆ ಉದ್ದಿಮೆದಾರರು ಸ್ವಯಂ ಚಾಲಿತವಾಗಿ ನಿಗಧಿತ ಶುಲ್ಕ ಪಾವತಿಸಿ ಆನ್ಲೈನ್ನಲ್ಲಿ ನವೀಕರಣಗೊಳಿಸುವ ಅವಕಾಶವಿದ್ದು, ಅದರಂತೆ ಚಾಲ್ತಿಯಲ್ಲಿರುವ ಉದ್ದಿಮೆದಾರರು ಪ್ರಸಕ್ತ ವರ್ಷದ ನವೀಕರಣವನ್ನು ಮಾಡಿಕೊಳ್ಳಬಹುದು. ಉಳಿದಂತೆ ಒಂದು ವರ್ಷಕ್ಕಿಂತ ಹೆಚ್ಚು ನವೀಕರಣವಿರುವ ಉದ್ದಿಮೆದಾರರು ಕಚೇರಿಯಲ್ಲಿ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಹಳೆಯ ಉದ್ದಿಮೆ ಪರವಾನಿಗೆ ಮತ್ತು ತೆರಿಗೆ ಪಾವತಿಯ ರಶೀದಿಗಳನ್ನು ಮಾತ್ರ ಅಡಕಗೊಳಿಸಿ 48 ಗಂಟೆ ಒಳಗೆ ನವೀಕರಣಗೊಳಿಸಿಕೊಳ್ಳುವಂತೆ ಸರಳಿಕರಣ…
ಮಡಿಕೇರಿ ಜೂ.23 : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಜೂ.27 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಂದು ಬೆಳಗ್ಗೆ 8.30 ಗಂಟೆಗೆ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಲಿದ್ದಾರೆ. ಬಳಿಕ ಬೆಳಗ್ಗೆ 10.30 ಗಂಟೆಗೆ ನಗರದ ಕೊಡಗು ಗೌಡ ಸಮಾಜದಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಬೆಳಗ್ಗೆ 11.30 ಗಂಟೆಗೆ ಕೊಡಗು ಜಿ.ಪಂ ಸಭಾಂಗಣದಲ್ಲಿ ನಡೆಯುವ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಮಡಿಕೇರಿ ಜೂ.23 : ಮಡಿಕೇರಿ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಎಂ.ಎ.ನಿರಂಜನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಡಿ.ಎಂ.ಕೇಶವ, ಉಪಾಧ್ಯಕ್ಷರಾಗಿ ಎಂ.ಜಿ.ನಾಗರಾಜ್, ಖಜಾಂಚಿ ಜಿ.ಆರ್.ರವಿಶಂಕರ್, ಜಂಟಿ ಕಾಯದರ್ಶಿಯಾಗಿ ಪವನ್ ಪೆಮ್ಮಯ್ಯ, ನಿರ್ದೇಶಕರುಗಳಾಗಿ ಕೆ.ಎಸ್.ಚಂದ್ರಶೇಖರ್, ಡಾಮೋನಿಕ್, ಜಿತೇಂದ್ರ ಕುಮಾರ್, ಕಪಿಲ್ ಕುಮಾರ್, ಡಿ.ಸಿ.ರಮೇಶ್, ವಿಶಾಲಾಕ್ಷಿ, ಪ್ರಿಯಾಂಕ, ತಾಹಾ ಆಯ್ಕೆಯಾದರು.
ಕುಶಾಲನಗರ, ಜೂ.23 : ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡುವುದರಿಂದ ಉತ್ತಮ ರಕ್ತ ಉತ್ಪತ್ತಿಯಾಗುವ ಜತೆಯಲ್ಲಿ ರಕ್ತನಿಧಿ ಕೇಂದ್ರಗಳಲ್ಲಿ ಕೊರತೆ ನಿವಾರಣೆಯಾಗುತ್ತದೆ ಎಂದು ಮಡಿಕೇರಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕೆ.ಪಿ.ಕರುಂಬಯ್ಯ ಅಭಿಪ್ರಾಯಪಟ್ಟರು. ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ನ ಕೊಡಗು ಜಿಲ್ಲಾ ಶಾಖೆ, ಮಡಿಕೇರಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರ ಹಾಗೂ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.,,) ಯ ಘಟಕದ ಆಶ್ರಯದಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸುಂಟಿಕೊಪ್ಪ ಜೆ.ಸಿ.ಐ., ಕುಶಾಲನಗರ ಕಾವೇರಿ ಜೆ.ಸಿ.ಐ., ಸಂಸ್ಥೆ, ಲಕ್ಷ್ಮಿ ನಾರಾಯಣ ವಾಟರ್ ಪಾರ್ಕ್ ಹಾಗೂ ಸ್ಥಳೀಯ ಕಂದಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವಿಶ್ವ ರಕ್ತದಾನ ದಿನ: 2023 ರ ಅಂಗವಾಗಿ ಏರ್ಪಡಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ರಕ್ತದಾನ ಶಿಬಿರದ ಮಹತ್ವ ಕುರಿತು ವಿವರಿಸಿದರು. ರಕ್ತದಾನ ಮಾಡುವುದರಿಂದ ರಕ್ತದೊತ್ತಡ ಸಮಸ್ಯೆ ಸೇರಿದಂತೆ ಹೃದಯ ಸಂಬಂಧಿ ಕಾಯಿಲೆ ದೂರವಾಗುತ್ತದೆ.…






