ಲೇಖಕ: admin

ಸೋಮವಾರಪೇಟೆ ಜೂ.23 : ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ರವೀಂದ್ರ ಮತ್ತು ನಯನ ರವೀಂದ್ರ ಅವರುಗಳು ತಮ್ಮ ಕಚೇರಿಯಲ್ಲಿ ಪುಸಕ್ತಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು. ಈ ಸಂದರ್ಭ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜ್, ಕಾರ್ಯದರ್ಶಿ ರಾಜಪ್ಪ, ಜೆಕಬ್ ಸೈಮನ್, ಜಮೀರ್, ಮಹಮ್ಮದ್ ಶಫಿ ಮತ್ತಿತರರು ಇದ್ದರು.

Read More

ಸೋಮವಾರಪೇಟೆ ಜೂ.23 : ಹಿಂದೂಸ್ತಾನ್ ಪೆಟ್ರೋಲಯಂ ಲಿಮಿಟೆಡ್ ವತಿಯಿಂದ ವಾರ್ಷಿಕವಾಗಿ ನೀಡುವ ಅಪ್ರಿಸೇಷನ್ ಆಫ್ ಎಕ್ಸಾಲೆನ್ಸ್ ಅವಾರ್ಡ್‍ನ್ನು ಶ್ರೀ ಗಜಾನನ ಗ್ಯಾಸ್ ಸರ್ವೀಸ್ ನ ಮಾಲೀಕ ಪಿ.ಕೆ.ರವಿ ಪಡೆದುಕೊಂಡಿದ್ದಾರೆ. ಮಂಗಳೂರಿನ ಎಲ್‍ಪಿಜಿ ಪ್ರಾಂತೀಯ ಕಚೇರಿಯಲ್ಲಿ ನಡೆದ ಎಲ್‍ಪಿಜಿ ವಿತರಕರ ಸಭೆಯಲ್ಲಿ ಅವಾರ್ಡ್ ಪಡೆದುಕೊಂಡರು. ಹಿಂದುಸ್ತಾನ್ ಪೆಟ್ರೋಲಿಯಂ ಲೀ ನ ಪ್ರಧಾನ ವ್ಯವಸ್ಥಾಪಕ ರಾಕೇಶ್ ಗುಪ್ತಾ, ಸಹಾಯಕ ವ್ಯವಸ್ಥಾಪಕ ಭವ್ಯಂಗಸ, ಮಾರಾಟ ವ್ಯವಸ್ಥಾಪಕ ಸಿ.ಎಸ್.ರಾಹುಲ್ ಹಾಜರಿದ್ದರು. 

Read More

ಮಡಿಕೇರಿ ಜೂ.23 : ನಗರದ ನೂತನ ಖಾಸಗಿ ಬಸ್ ನಿಲ್ದಾಣದ ವೃತ್ತಕ್ಕೆ ಸ್ವಾತಂತ್ರ್ಯ ಹೋರಾಟಗಾರ ‘ಪಂದ್ಯಂಡ ಬೆಳ್ಯಪ್ಪ’ ಅವರ ಹೆಸರನ್ನು ಇಡಬೇಕೆಂದು ಅಲ್ಲಾರಂಡ ರಂಗ ಚಾವಡಿಯ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ನಗರಸಭೆ ಖಾಸಗಿ ಬಸ್ ನಿಲ್ದಾಣದ ವೃತ್ತಕ್ಕೆ ಸ್ವಾಮಿ ವಿವೇಕಾನಂದರ ಹೆಸರಿನ್ನಿರಿಸಲು ಮುಂದಾಗಿ, ಜೂನ್ ಅಂತ್ಯದ ಒಳಗಾಗಿ ಆಕ್ಷೇಪಣೆಗಳನ್ನು ಆಹ್ವಾನಿಸಿದೆ. ಈ ಹಿನ್ನೆಲೆ ಸಾರ್ವಜನಿಕರ ಪರವಾಗಿ ವೃತ್ತಕ್ಕೆ ಪಂದ್ಯಂಡ ಬೆಳ್ಯಪ್ಪ ಅವರ ಹೆಸರನ್ನು ಇಡುವಂತೆ ಸೂಚಿಸಿ ಆಕ್ಷೇಪಣೆ ಸಲ್ಲಿಸಲಾಗಿದೆ. ಇದು ಯಾವುದೇ ಕಾರಣಕ್ಕೂ ಸ್ವಾಮಿ ವಿವೇಕಾನಂದರ ಇಡೀ ಜಗತ್ತೆ ಮಾನ್ಯ ಮಾಡಿರುವ ತತ್ತ್ವ ಸಿದ್ಧಾಂತಗಳ ವಿರುದ್ಧವಾಗಿ ಅಲ್ಲವೆಂದು ಸ್ಪಷ್ಟಪಡಿಸಿದರು. ಕೊಡಗಿನಲ್ಲಿ ಕೊಡಗಿಗಾಗಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ದುಡಿದ ಮಹನೀಯರನ್ನು ಸ್ಮರಿಸುವುದು, ಅವರ ಚಿಂತನೆಗಳನ್ನು ಜನರಿಗೆ ಮುಟ್ಟಿಸುವುದು ಮತ್ತು ಆ ಮೂಲಕ ಯುವ ಸಮೂಹಕ್ಕೆ ಪ್ರೇರಣೆ ನೀಡುವ ಕಾರ್ಯ ನಡೆಯಬೇಕಾಗಿದೆ. ಈ ಹಿನ್ನೆಲೆ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾದ ಪಂದ್ಯಂಡ ಬೆಳ್ಯಪ್ಪ ಅವರ ಹೆಸರನ್ನು ನೂತನ…

Read More

ವಿರಾಜಪೇಟೆ ಜೂ.23 : ಕೊಡಗು ಹಾಕಿ ಕ್ಷೇತ್ರಕ್ಕೆ ತನ್ನದೇಯಾದ ಕೊಡುಗೆಗಳನ್ನು ನೀಡಿದೆ. ಹಾಕಿ ಕ್ರೀಡೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರೋತ್ಸಾಹ ಮತ್ತು ಅನುದಾನಗಳನ್ನು ಬಿಡುಗಡೆ ಮಾಡುವಂತೆ ಖೇಲೋ ಮಾಸ್ಟರ‍್ಸ್ ಗೇಮ್ಸ್ ಹಾಕಿ ಫೆಡರೇಷನ್ ಕರ್ನಾಟಕ ಸಂಸ್ಥೆಯ ಕೊಡಗು ಜಿಲ್ಲಾ ಪದಾಧಿಕಾರಿಗಳು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ. ಖೇಲೋ ಮಾಸ್ಟರ‍್ಸ್ ಗೇಮ್ಸ್ ಹಾಕಿ ಫೆಡರೇಷನ್ ಕರ್ನಾಟಕ ಸಂಸ್ಥೆಯ ಕೊಡಗು ಜಿಲ್ಲಾ ಘಟಕದಿಂದ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನಿವಾಸದಲ್ಲಿ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿತು. ಈ ಸಂದರ್ಭ ವಿಶ್ವ ಹಾಕಿ ತೀರ್ಪುಗಾರರು, ಕರ್ನಾಟಕ ಹಾಕಿ ಅಸೋಶಿಯೆಷನ್ ಸಂಸ್ಥೆಯ ಕಾರ್ಯನಿರ್ವಾಹಕ ಸದಸ್ಯರು ಮತ್ತು ಖೇಲೋ ಮಾಸ್ಟರ‍್ಸ್ ಗೇಮ್ಸ್ ಹಾಕಿ ಫೆಡರೇಷನ್ ಕರ್ನಾಟಕ ಸಂಸ್ಥೆಯ ಉಪಧ್ಯಕ್ಷ ಅಮ್ಮಣಿಚಂಡ ಸಂಜು ಸೋಮಯ್ಯ ಮಾತನಾಡಿ, ಹಾಕಿ ಕ್ರೀಡೆಯಲ್ಲಿ ವಿಪುಲ ಅವಕಾಶಗಳಿದು, ಕಿರಿಯ ಹಿರಿಯ ಆಟಗಾರರಿಗೆ ಪ್ರೋತ್ಸಾಹ ನೀಡುವಂತಾಗಬೇಕು. ಪಂದ್ಯಾವಳಿಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ವಿಶೇಷ ಅನುದಾನ ಮತ್ತು ಸೌಲಭ್ಯಗಳನ್ನು ಸರ್ಕಾರ ಒದಗಿಸುವಂತಾಗಬೇಕು ಎಂದು ಸಂಸ್ಥೆ…

Read More

ಮಡಿಕೇರಿ ಜೂ.23 : ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಜೂ.24 ರಂದು 19ನೇ ಹೂಡಿಕೆ ಸಮಾರಂಭ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಶಾಲೆಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಮಲ್ಚಿರ ಕೆ.ಕಾರ್ಯಪ್ಪ ಪಾಲ್ಗೊಳ್ಳಲಿದ್ದು, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಅಧ್ಯಕ್ಷತೆ ವಹಿಸಿಲಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.23 :  ಮುಂಬೈನಲ್ಲಿ ಉದ್ಯೋಗದಲ್ಲಿರುವ  ನೆಲಜಿಯ ಆಶೀಶ್ ನಾಲಡಿ  ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ನೀಡಿದರು. ಅವರ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ  ಸಂಪನ್ ಅಯ್ಯಪ್ಪ, ಶಾಲಾ ಶಿಕ್ಷಕರು  ವಿದ್ಯಾರ್ಥಿಗಳಿಗೆ ವಿತರಿಸಿದರು.

Read More

ಮಡಿಕೇರಿ ಜೂ.23 :  ಗೋಣಿಕೊಪ್ಪಲು ಗ್ರಾ.ಪಂ ವ್ಯಾಪ್ತಿಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಸಲುವಾಗಿ ಪಂಚಾಯಿತಿ ಸದಸ್ಯರ, ಗೋಣಿಕೊಪ್ಪಲು ಚೇಂಬರ್ ಆಫ್ ಕಾಮರ್ಸ್ ಸದಸ್ಯರ ಹಾಗೂ ಪೊಲೀಸ್ ಇಲಾಖೆಯ ಜಂಟಿ ಸಭೆ ನಡೆಯಿತು. ಗೋಣಿಕೊಪ್ಪಲು ಗ್ರಾ.ಪಂ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ  ಮನ್ನಕ್ಕಮನೆ ಸೌಮ್ಯ ಬಾಲು  ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ  ಹಲವು ವಿಷಯಗಳನ್ನು ಚರ್ಚಿಸಲಾಯಿತು. ಈ ಸಂದರ್ಭ ಗೋಣಿಕೊಪ್ಪಲು ಸಬ್ ಇನ್ಸ್ ಪೆಕ್ಟರ್ ದೀಕ್ಷಿತ್ ಪ್ರಾಸ್ತಾವಿಕವಾಗಿ ಮಾತನಾಡಿ, ಗೋಣಿಕೊಪ್ಪಲು ನಗರವನ್ನು ಸುಗಮ ಸಂಚಾರ ತರಲು ಬೇಕಾದ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಿದರು. ಪ್ರಕರಣ ದಾಖಲಿಸುವುದು ನಮ್ಮ ಉದ್ದೇಶವಲ್ಲ. ಸಂಚಾರ ನಿಯಮ ಪಾಲನೆಯಾಗಬೇಕು. ಚಾಲನೆ ಮಾಡುವಾಗ ಎಚ್ಚರಿಕೆ ವಹಿಸಬೇಕು. ಗೋಣಿಕೊಪ್ಪಲು ನಗರದಲ್ಲಿ ವಾಹನ ನಿಲುಗಡೆ ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ಹಲವಾರು ಫಲಕಗಳನ್ನು ಅಳವಡಿಸಬೇಕು. ವಾಹನವನ್ನು ಸರಿಯಾಗಿ ನಿಲುಗಡೆ ಮಾಡುವ ಸಲುವಾಗಿ ರಸ್ತೆಯಲ್ಲಿ ನಿಲುಗಡೆಗಾಗಿ ಬಣ್ಣ ಬಳಿಯುವ ಕೆಲಸವಾಗಬೇಕು ಎಂದು ಸಭೆಯ ಗಮನಕ್ಕೆ ತಂದರು. ಅಧ್ಯಕ್ಷೆ   ಸೌಮ್ಯ ಬಾಲು ಪಾರ್ಕಿಂಗ್ ವ್ಯವಸ್ಥೆಯಲ್ಲಿ ನಾಲ್ಕು ಚಕ್ರಗಳ ವಾಹನಗಳು ನಿಲ್ಲುವ ಕಡೆಗಳಲ್ಲಿ ತ್ರಿಚಕ್ರ…

Read More

ಮಡಿಕೇರಿ ಜೂ.23 : ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರಾವುಫ್ ಹಾಗೂ ಉಪಾಧ್ಯಕ್ಷ ವಿ.ಜಿ.ಮೋಹನ್ ತಮಗೆ ಅಧ್ಯಕ್ಷ ಸ್ಥಾನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಎಂ.ಎನ್.ರಾವುಫ್ ಈ ಬಾರಿ ಕಾಂಗ್ರೆಸ್ ಆಡಳಿತ ಅಧಿಕಾರ ಹಂಚಿಕೆಯ ಸಂದರ್ಭ ಯುವ ಸಮೂಹಕ್ಕೆ ಆದ್ಯತೆ ನೀಡಲಿದೆ ಎಂದು ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಮಡಿಕೇರಿ ಕ್ಷೇತ್ರದಲ್ಲಿ ಪಕ್ಷಕ್ಕೆ ಅತ್ಯಧಿಕ ಮತ ದೊರೆಯಲು ಸಾಕಷ್ಟು ಶ್ರಮಿಸಿದ್ದೇನೆ. ಬಿ.ಕಾಂ ಪದವೀಧರನಾಗಿರುವ ನಾನು ನಗರ ಯುವ ಕಾಂಗ್ರೆಸ್ ಸದಸ್ಯನಾಗಿ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಮತ್ತು ಸಾಮಾಜಿಕ ಜಾಲತಾಣದ ಜಿಲ್ಲಾ ಕಾರ್ಯದರ್ಶಿಯಾಗಿಯೂ ಪಕ್ಷಕ್ಕಾಗಿ ದುಡಿದಿದ್ದೇನೆ. ಬೂತ್ ಸಂಖ್ಯೆ 210ರಲ್ಲಿ ಬೂತ್ ಅಧ್ಯಕ್ಷನಾಗಿ ಅತಿ ಹೆಚ್ಚು ಮತಗಳು ಕಾಂಗ್ರೆಸ್ ಗೆ ಬರುವಂತೆ ನೋಡಿಕೊಂಡಿದ್ದೇನೆ. ಪ್ರಸ್ತುತ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ನಿಷ್ಠೆಯನ್ನು ಪ್ರದರ್ಶಿಸಿದ್ದೇನೆ. ಮಡಿಕೇರಿ ಕ್ಷೇತ್ರದ ಶಾಸಕರು ಯುವ ಸಮೂಹಕ್ಕೆ ಅಧಿಕಾರ…

Read More

ಮಡಿಕೇರಿ ಜೂ.23 : ಮಣಿಪುರ ರಾಜ್ಯದಲ್ಲಿ ಕ್ರೈಸ್ತ ಸಮುದಾಯದ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕ್ರಿಶ್ಚಿಯನ್ ಘಟಕ, ಕೇಂದ್ರ ಸರ್ಕಾರದ ವಿರುದ್ಧ ಜೂ.28 ರಂದು ಶಾಂತಿಯುತ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕ್ರಿಶ್ಚಿಯನ್ ಘಟಕದ ಪ್ರಮುಖರು ಕೇಂದ್ರ ಸರ್ಕಾರದ ನಿಷ್ಕ್ರೀಯ ಧೋರಣೆಯಿಂದ ಮಣಿಪುರದಲ್ಲಿ ಚರ್ಚ್‍ಗಳ ಮೇಲೆ ದಾಳಿಯಾಗುತ್ತಿದೆ ಮತ್ತು ಕ್ರೈಸ್ತರನ್ನು ಹಿಂಸಿಸಲಾಗುತ್ತಿದೆ ಎಂದು ಆರೋಪಿಸಿದರು. ಕೇಂದ್ರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಮತ್ತು ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಕ್ರೈಸ್ತರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಕಪ್ಪು ಪಟ್ಟಿ ಧರಿಸಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು. ಬುಧವಾರ ಬೆಳಗ್ಗೆ 10.30 ಗಂಟೆಗೆ ನಗರದ ಸಂತ ಮೈಕಲರ ಚರ್ಚ್ ಬಳಿಯಿಂದ ಜನರಲ್ ತಿಮ್ಮಯ್ಯ ವೃತ್ತ ಮತ್ತು ಮಂಗೇರಿರ ಮುತ್ತಣ್ಣ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಧರ್ಮಗುರುಗಳು, ಧಾರ್ಮಿಕ ಮುಖಂಡರು ಹಾಗೂ ಸರ್ವ ಕ್ರೈಸ್ತ ಬಾಂಧವರು…

Read More

ಮಡಿಕೇರಿ ಜೂ.23 : ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ ಡಿ.ಜೆ.ಜವರಪ್ಪ ವಿದ್ಯಾರ್ಥಿಗಳಿಗೆ ಯೋಗದ ಮಹತ್ವದ ಕುರಿತು ತಿಳಿಸಿದರು. ದೈಹಿಕ ಉಪನ್ಯಾಸಕರಾದ ಟಿಶೋನಿ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಆಯೋಗ ಆಸನಗಳನ್ನು ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಬೋಧಕ, ಬೋಧಕೇತರರು ಹಾಜರಿದ್ದರು.

Read More