ಮಡಿಕೇರಿ ಜೂ.22 : ತಾಲ್ಲೂಕಿನ ಗಾಳಿಬೀಡು ಬಳಿ ಇರುವ ಜವಾಹರ್ ನವೋದಯ ವಿದ್ಯಾಲಯಕ್ಕೆ 2024-25 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳಲ್ಲಿ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆ.10 ಕೊನೆಯ ದಿನವಾಗಿದೆ. ಅರ್ಜಿಯನ್ನು https://navodaya.gov.in ಮತ್ತು https://cbseitms.rcil.gov.in/nvs ವೆಬ್ಸೈಟ್ನಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು. 2023-24 ರ ಶೈಕ್ಷಣಿಕ ಅವಧಿಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 01-05-2012 ರಿಂದ 31-07-2014 ರ ನಡುವೆ ಜನಿಸಿರಬೇಕು. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಜವಾಹರ್ ನವೋದಯ ವಿದ್ಯಾಲಯ, ಗಾಳಿಬೀಡು ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರಾದ ಪಂಕಜಾಕ್ಷನ್ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಜೂ.22 : ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ರಾಜಾಸೀಟು, ರಾಜರ ಗದ್ದುಗೆ, ನೆಹರು ಮಂಟಪ ಅಭಿವೃದ್ಧಿ ಸಂಬಂಧಿಸಿದಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್.ಆರ್.ನಾಯಕ್ ಮಾಹಿತಿ ನೀಡಿದರು. ರಾಜಾಸೀಟು ಅಭಿವೃದ್ಧಿ ಸಂಬಂಧ ಇದುವರೆಗೆ ಕೈಗೊಳ್ಳಲಾಗಿರುವ ಕಾರ್ಯಕ್ರಮಗಳ ಬಗ್ಗೆ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಪ್ರಮೋದ್ ಮಾಹಿತಿ ನೀಡಿದರು. ರಾಜಾಸೀಟು ಅಭಿವೃದ್ಧಿ ಸಂಬಂಧಿಸಿದಂತೆ ಮಾಹಿತಿ ಪಡೆದು ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ರಾಜಸೀಟು, ರಾಜರ ಗದ್ದುಗೆ, ನೆಹರು ಮಂಟಪಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಹೊಸ ಕ್ರಿಯಾಯೋಜನೆ ಅನುಮೋದಿಸಲಾಗುವುದು ಎಂದು ತಿಳಿಸಿದರು. ಯಾವ ಉದ್ದೇಶಕ್ಕೆ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ಸಮಗ್ರ ವರದಿ ನೀಡುವಂತೆ ಜಿಲ್ಲಾಧಿಕಾರಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು. ರಾಜಸೀಟಿನ ಪುಟಾಣಿ ರೈಲು ಭಾಗದಲ್ಲಿ ಬೀದಿ ವ್ಯಾಪಾರಿಗಳಿಗೆ ನಿರ್ಮಾಣ ಮಾಡಲು ಉದ್ದೇಶಿಸಿರುವ ಅಂಗಡಿ ಮಳಿಗೆ ಯೋಜನೆ ಬಗ್ಗೆ…
ಮಡಿಕೇರಿ ಜೂ.22 : ಕೊಡಗು ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಆ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವಂತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾದಲ್ಲಿ ಸಂಭವಿಸಬಹುದಾದ ಅನಾಹುತ ತಡೆಯುವ ಸಂಬಂಧ ಅಗತ್ಯ ಮುನ್ನೆಚ್ಚರ ವಹಿಸುವ ಬಗ್ಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. `ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 300 ಮಿ.ಮೀ. ಮಳೆ ಕಡಿಮೆ ಇದೆ. ಆದರೂ ಮುಂದಿನ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ವ್ಯಾಪಕ ಮಳೆಯಾದಲ್ಲಿ, ಮಳೆಯಿಂದ ಉಂಟಾಗಬಹುದಾದ ಅವಘಡವನ್ನು ತಪ್ಪಿಸಲು ಅಗತ್ಯ ಕಟ್ಟೆಚ್ಚರ ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.’ ಹೆಚ್ಚಿನ ಮಳೆಯಿಂದ ಉಂಟಾಗಬಹುದಾದ ಪ್ರಾಣ ಹಾನಿ, ಜಾನುವಾರು ಹಾನಿ, ಆಸ್ತಿ-ಪಾಸ್ತಿ ಹಾನಿ ಹೀಗೆ ಪ್ರತಿಯೊಂದರ ಬಗ್ಗೆ ಎಚ್ಚರ ವಹಿಸಬೇಕಿದೆ. ಆ ನಿಟ್ಟಿನಲ್ಲಿ ತಮ್ಮ ಹಂತದಲ್ಲಿ ತಂಡೋಪಾದಿಯಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ಸ್ಥಳೀಯರಿಗೆ ಮಾಹಿತಿ ನೀಡುವಂತಾಗಬೇಕು ಎಂದು ವೆಂಕಟ್ ರಾಜಾ…
ಮಡಿಕೇರಿ ಜೂ.22 : ಕುಶಾಲನಗರ ಸಮೀಪದ ಕೊಪ್ಪ ಹಳೆಯ ಸೇತುವೆ ಕೆಳಭಾಗದಲ್ಲಿ ವೃದ್ಧರೊಬ್ಬರ ಮೃತದೇಹ ಪತ್ತೆಯಾಗಿದೆ. ಪಟ್ಟಣದ ಚಿಕ್ಕಣ್ಣ ಬಡಾವಣೆಯ ನಿವಾಸಿ, ಲಾರಿ ಚಾಲಕ ಗಂಗಾಧರ (72) ಎಂಬುವವರೇ ಮೃತ ವ್ಯಕ್ತಿಯಾಗಿದ್ದು, ಇದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ. ಕಾವೇರಿ ನದಿ ಸೇತುವೆ ಮೇಲ್ಭಾಗದಿಂದ ಇಂದು ಮುಂಜಾನೆ ಗಂಗಾಧರ ಬಿದ್ದಿದ್ದಾರೆ ಎಂದು ಹೇಳಲಾಗಿದೆ. ನದಿ ಬಂಡೆ ಮೇಲೆ ರಕ್ತ ಸಿಕ್ತ ಮೃತ ದೇಹವನ್ನು ಕಂಡ ಸ್ಥಳೀಯರು ಕುಶಾಲನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಪಟ್ಟಣದ ಠಾಣಾಧಿಕಾರಿ ರವೀಂದ್ರ ಹಾಗೂ ಸಿಬ್ಬಂದಿಗಳು ಭೇಟಿ ಸ್ಥಳಕ್ಕೆ ನೀಡಿ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡರು. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ನಾಪೋಕ್ಲು ಜೂ.22 : ವಿವಿಧ ಶಾಲಾ ಕಾಲೇಜುಗಳಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕಾವೇರಿ ಮಾತನಾಡಿ ಯೋಗಾಭ್ಯಾಸದಿಂದ ದೈಹಿಕ ಕ್ಷಮತೆಯನ್ನು ಪಡೆದುಕೊಳ್ಳಬಹುದು. ಪ್ರತಿದಿನ ಯೋಗ ಮಾಡುವುದರಿಂದ ಓದಿನ ಗಮನಕೊಡಲು ಸಾಧ್ಯ. ದೈಹಿಕ ಹಾಗೂ ಮಾನಸಿಕ ಸದೃಡತೆ ಹೊಂದಲು ಯೋಗ ಸಹಕಾರಿ ಎಂದರು. ಈ ಸಂದರ್ಭ ಕಾಲೇಜಿನ ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ಯೋಗ ಮಾಡುವುದರ ಮೂಲಕ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ.ಬೊಪ್ಪಂಡ ಬೋಪಯ್ಯ ಅಧ್ಯಕ್ಷತೆ ವಹಿಸಿದ್ದು, ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ, ಪ್ರಾಂಶುಪಾಲರಾದ ಕಲ್ಯಾಟಂಡ ಶಾರದ ಅಪ್ಪಣ್ಣ, ಸಂಸ್ಥೆಯ ನಿರ್ದೇಶಕ ಪ್ರೊ.ಪೂಣಚ್ಚ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಶಿಕ್ಷಕಿ ಕೆ.ಎಸ್.ಶೋಭಿತ ಹಾಗೂ ಕೆ.ಕೆ.ಸರಿತಾ ಯೋಗ ಪ್ರದರ್ಶನದ ಮಾರ್ಗದರ್ಶನ ನೀಡಿದರು. ಈ ಸಂದರ್ಭ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಹೋಬಳಿ ವ್ಯಾಪ್ತಿಯ…
ಮಡಿಕೇರಿ ಜೂ.22 : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಹೊದ್ದೂರು ಗ್ರಾ.ಪಂ ಮತ್ತು ವಾಟೆಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಾಟೆಕಾಡು ಸಹಯೋಗದಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಾಟೆಕಾಡು ಹೊದ್ದೂರು ಗ್ರಾ.ಪಂ ಕಟ್ಟಡದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ವಿವಿಧ ಭಂಗಿಯ ಯೋಗಗಳನ್ನು ಅಭ್ಯಾಸಿಸಲಾಯಿತು. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ ಮಾತನಾಡಿ, ಯೋಗವು ಮನಸ್ಯನ ಆರೋಗ್ಯ ಮತ್ತು ಮನಸ್ಸನ್ನು ಹತೋಟಿಯಲ್ಲಿ ಇಡುಲು ಉತ್ತಮ ಸಾಧನವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಲ್ಲಿಯೇ ಯೋಗ ಅಭ್ಯಾಸ ಮಾಡಿದರೆ ಉತ್ತಮ ಜೀವನಶೈಲಿ ರೂಪಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು. ಯೋಗ ತರಬೇತುದಾರೆ ಅರ್ಜುನ ಪ್ರಶಸ್ತಿ ವಿಜೇತ ಪಿ. ಹೆಚ್. ಅಲೀಮಾ ಮಾತನಾಡಿ, ಯೋಗದಲ್ಲಿ ಹದಿನೆಂಟು ಸಾವಿರ ಆಸನಗಳಿದ್ದು, ಅದರಲ್ಲಿ ಸುಮಾರು ನೂರು ಆಸನಗಳನ್ನು ಕಲಿತಿರುವ ನನಗೆ ಅರ್ಜುನ ಪ್ರಶಸ್ತಿ ಲಭಿಸಿದೆ. ಹಾಗಾಗಿ ಮಕ್ಕಳು ಚಿಕ್ಕಂದಿನಿಂದಲೇ ಯೋಗಾಭ್ಯಾಸ ಮಾಡಿದರೆ ಉತ್ತಮ ಸಾಧನೆ ಮಾಡಬಹುದು ಎಂದು ಮಕ್ಕಳನ್ನು ಹುರಿದುಂಬಿಸಿದರು. ನಂತರ ಮಕ್ಕಳಿಗೆ ಕೆಲವು ಆಸನಗಳನ್ನು ಅಭ್ಯಾಸಿಸುವ ಮೂಲಕ ವಿಶ್ವ…
ಮಡಿಕೇರಿ ಜೂ.22 : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ, ಕರ್ನಾಟಕ ಸರಕಾರ ಕಾರಾಗೃಹ ಮತ್ತು ಸುಧಾರಣಾ ಸೇವೆ ಜಿಲ್ಲಾ ಕಾರಾಗೃಹ ಮಡಿಕೇರಿ ಹಾಗೂ ಮಡಿಕೇರಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದ ಸಹಯೋಗದೊಂದಿಗೆ “ವಸುಧೈವ ಕುಟುಂಬಕ್ಕಾಗಿ ಯೋಗ” ಎಂಬ ಧ್ಯೇಯ ವಾಕ್ಯದೊಂದಿಗೆ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಡಿಕೇರಿಯ ಕಾರಾಗೃಹ ಬಂದಿ ನಿವಾಸಿಗಳೊಂದಿಗೆ ಯೋಗ ದಿನವನ್ನು ಆಚರಿಸಲಾಯಿತು. ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಮಾನಾಡಿ, ಯೋಗ ಎಲ್ಲರ ಮನಸ್ಸನ್ನು ಕೇಂದ್ರೀಕರಿಸುತ್ತದೆ ಮತ್ತು ನಮ್ಮ ಮನಸ್ಸನ್ನು ಪರಿವರ್ತಿಸುತ್ತದೆ ಇದನ್ನು ತಮ್ಮ ದಿನ ನಿತ್ಯದ ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದಲಾಗಬಹುದು ಎಂದು ಸಲಹೆ ನೀಡಿದರು. ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾನಾಡಿದ ಜಿಲ್ಲಾ ಕಾರಾಗೃಹದ ಅಧೀಕ್ಷಕ ಸಂಜಯ್ ಜಿತ್ತಿ, ಯಾವುದೋ ಕಾರಣಕ್ಕಾಗಿ ಅಪರಾಧ ಮಾಡಿ ಕೈದಿಗಳಾಗಿ ಬಂಧಿಯಾಗಿದ್ದು, ನಮ್ಮ ಮನಸ್ಸು, ಬುದ್ದಿಯನ್ನು ಹತೋಟಿಯಲ್ಲಿಡಲು ಯೋಗ ಮತ್ತು ಧ್ಯಾನ ಅತ್ಯಂತ ಸಹಕಾರಿ.…
ವಿರಾಜಪೇಟೆ ಜೂ.22 : ವಿರಾಜಪೇಟೆ ತಾಲ್ಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ 2022ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಐವರು ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಅವರು ತಮ್ಮ ತಂದೆ ದಿವಂಗತ ಎ.ಕೆ ಸುಬ್ಬಯ್ಯ ಹಾಗೂ ತಾಯಿ ದಿವಂಗತ ಎ.ಎಸ್ ಪೊನ್ನಮ್ಮ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ “ಮಾಲ್ದಾರೆ ಶಾಲಾ ಮಕ್ಕಳಿಗಿಲ್ಲ ಆಟದ ಮೈದಾನ” ವರದಿಗೆ ಎ.ಎನ್ ವಾಸು ಪಡೆದುಕೊಂಡಿದ್ದಾರೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಆರ್ ಸವಿತಾ ರೈ ಅವರು ತಮ್ಮ ತಂದೆ ಕೃಷಿಕರಾಗಿದ್ದ ದಿವಂಗತ ಬಿ.ಎಸ್ ರಂಗನಾಥ ರೈ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕೃಷಿ ವರದಿಗೆ ವಿಜಯಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ “ಪ್ರಯೋಗಶೀಲ ಕೃಷಿಕ ಬಿ.ಎಸ್ ನಾರಾಯಣ್ ರಾವ್” ವರದಿಗೆ ರಜಿತಾ ಕಾರ್ಯಪ್ಪ ಪಡೆದುಕೊಂಡಿದ್ದಾರೆ. ಸಿದ್ದಾಪುರದ ಸಮಾಜ ಸೇವಕ ಕೆ.ಯು ಅಬ್ದುಲ್ ಮಜೀದ್ ಅವರು ತಮ್ಮ ತಂದೆ ದಿವಂಗತ ಉಸ್ಮಾನ್ ಹಾಜಿ ಅವರ ಹೆಸರಿನಲ್ಲಿ…
ಮಡಿಕೇರಿ ಜೂ.22 : ಚೆಟ್ಟಳ್ಳಿ ಸಮೀಪದ ಕಂಡಕರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಹೆಚ್.ದಿನಕರ್ ಶೆಟ್ಟಿ ಅವರು, ಮಡಿಕೇರಿ ತಾಲ್ಲೂಕಿನ ಚೆಂಬು ಶಾಲೆಗೆ ವರ್ಗಾವಣೆಗೊಂಡಿದ್ದು, ಅವರನ್ನು ಕಂಡಕರೆಯ ಗಾಂಧಿ ಯುವಕ ಸಂಘದಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಮಾತನಾಡಿದ ಗಾಂಧಿ ಯುವಕ ಸಂಘದ ಅಧ್ಯಕ್ಷ, ಪತ್ರಕರ್ತ ಇಸ್ಮಾಯಿಲ್ ಕಂಡಕರೆ, ದಿನಕರ್ ಶೆಟ್ಟಿ ಅವರು ಕಳೆದ ನಾಲ್ಕು ವರ್ಷಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಕಂಡಕರೆ ಶಾಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದಾರೆ. ಸಹ ಶಿಕ್ಷಕರ ಸಹಕಾರದೊಂದಿಗೆ ಶಾಲೆಯ ಆವರಣದಲ್ಲಿ ಉತ್ತಮವಾದ ಪರಿಸರವನ್ನು ನಿರ್ಮಾಣ ಮಾಡಿದ್ದಾರೆ. ಇವರ ಮುಂದಿನ ಭವಿಷ್ಯ ಉಜ್ವಲವಾಗಲೆಂದು ಶುಭಹಾರೈಸಿದರು. ಶಿಕ್ಷಣ ಇಲಾಖೆ ಕಂಡಕರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೂಡಲೇ ದೈಹಿಕ ಶಿಕ್ಷಕರನ್ನು ನೇಮಕ ಮಾಡಬೇಕೆಂದು ಇಸ್ಮಾಯಿಲ್ ಒತ್ತಾಯಿಸಿದರು. ಬೀಳ್ಕೊಡುಗೆ ಸನ್ಮಾನ ಸ್ವೀಕರಿಸಿ ಮಾತನಾಡಿದ ದೈಹಿಕ ಶಿಕ್ಷಕ ದಿನಕರ್ ಶೆಟ್ಟಿ , ಕಳೆದ ನಾಲ್ಕು ವರ್ಷಗಳ ಕಾಲ ಕಂಡಕರೆ ಶಾಲೆಯಲ್ಲಿ ಕೆಲಸ ಮಾಡಿರುವುದಕ್ಕೆ ಆತ್ಮತೃಪ್ತಿ…
ಮಡಿಕೇರಿ ಜೂ.22 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಡಗು, ಜಿಲ್ಲಾ ಆಸ್ಪತ್ರೆ ಐಸಿಟಿಸಿ ವಿಭಾಗ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ, ಉದ್ಭವ್ ಸಂಸ್ಥೆ ಬೆಂಗಳೂರು, ಆಶೋದಯ ಸಮಿತಿ ಕೊಡಗು ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಕೊಯನಾಡುವಿನಲ್ಲಿ ವಲಸೆ ಕಾರ್ಮಿಕರು ಮತ್ತು ಎಸ್ಟೇಟ್ಗಳ ಕಾರ್ಮಿಕರಿಗೆ ಆರೋಗ್ಯ ತಪಾಸಣ ಶಿಬಿರ ನಡೆಯಿತು. ಕಾರ್ಯಕ್ರಮಕ್ಕೆ ಸಂಪಾಜೆ ಗ್ರಾ.ಪಂ ಸದಸ್ಯ ನವೀನ್ , ಜಿಲ್ಲಾ ಐಸಿಟಿಸಿ ವಿಭಾಗದ ಆಪ್ತ ಸಮಾಲೋಚಕರಾದ ಅಶ್ವಿತಾ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಪಿ.ಮಲ್ಲಿಕಾರ್ಜುನ, ಕೊಯನಾಡು ಥಾಮಸನ್ ಪ್ಲಾಂಟೇಶನ್ ನಿರ್ದೇಶಕರಾದ ಸುಜಾತ ಚಾಲನೆ ನೀಡಿದರು. ಈ ಸಂದರ್ಭ ಅಸ್ಸಾಂ, ಕೇರಳ ಹಾಗೂ ಸ್ಥಳೀಯ ಕಾರ್ಮಿಕರು ಭಾಗವಹಿಸಿ ಆರೋಗ್ಯ ತಪಾಸಣೆ ಹಾಗೂ ಆರೋಗ್ಯ ಮಾಹಿತಿ ಪಡೆದುಕೊಂಡರು. ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಸಿಎಚ್ಓ, ಆಶಾ ಕಾರ್ಯಕರ್ತೆಯರು, ಜಿಲ್ಲಾ ಐಸಿಟಿಸಿ ಪ್ರಯೋಗ ಶಾಲಾ ತಂತ್ರಜ್ಞಾ ಸುರೇಶ್, ಆಶೋದಯ ಸಮಿತಿ ಆಪ್ತ ಸಮಾಲೋಚಕ ಸಂತೋಷ್ ಕುಮಾರ್ ಸಂಪಾಜೆ, ಸಿಬ್ಬಂದಿಗಳಾದ ಮಂಜುಳಾ, ಧನ್ಯ ಹಾಜರಿದ್ದರು.…






