ಮಡಿಕೇರಿ ಜೂ.21 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಅರ್ಥಪೂರ್ಣವಾಗಿ ಜರುಗಿತು. “ವಸುದೈವ ಕುಟುಂಬಕ್ಕಾಗಿ ಯೋಗ’ ‘ಹರ್ ಆಂಗನ್ ಯೋಗ” ಎಂಬ ಘೋಷ ವ್ಯಾಕ್ಯದೊಂದಿಗೆ ನಗರದ ಕೆಳಗಿನ ಗೌಡ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಗಾಭಿಮಾನಿಗಳು ಭಾಗವಹಿಸಿ ಯೋಗ, ಧ್ಯಾನ ಮಾಡಿ ಗಮನ ಸೆಳೆದರು. ಸೂರ್ಯ ನಮಸ್ಕಾರ, ವೃಕ್ಷಾಸನ, ಪಾದಹಸ್ತಾಸನ, ಉದ್ರ್ವಾಸನ, ತಾಡಾಸನ, ಅರ್ಧ ಮತ್ಸೇಂದ್ರಾಸನ, ಭುಜಂಗಾಸನ, ಪವನಮುಕ್ತಾಸನ, ಭದ್ರಾಸನ, ತ್ರಿಕೋನಾಸನ, ಉಷ್ಟ್ರಾಸನ, ವಜ್ರಾಸನ, ಶಲಭಾಸನ, ಶಶಾಂಕಾಸನ, ಮಂಡೂಕಾಸನ, ವಕ್ರಾಸನ, ಮಕರಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧಹಲಾಸನ, ಶವಾಸನ, ಕಪಾಲಭಾತಿ, ಶೀತಲಿ ಪ್ರಾಣಾಯಾಮ, ಭ್ರಾಮರಿ ಪ್ರಾಣಾಯಾಮ, ಧ್ಯಾನ, ನಾಡಿಶೋಧ ಪ್ರಾಣಾಯಾಮ ಹೀಗೆ ಹಲವು ರೀತಿಯ ಯೋಗ ಮಾಡಲಾಯಿತು. ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಿ.ರೇಣುಕಾದೇವಿ, ಯೋಗ ಶಿಕ್ಷಕರಾದ ಮಹೇಶ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ…
ಲೇಖಕ: admin
ಮಡಿಕೇರಿ ಜೂ.21 : ನಗರದ ಮಲ್ಲಿಕಾರ್ಜುನ ನಗರದಲ್ಲಿ ಇತ್ತೀಚಿಗೆ ಪುನರ್ ಪ್ರತಿಷ್ಠಾಪನಗೊಂಡ ಕೋದಂಡರಾಮ ದೇವಾಲಯದಲ್ಲಿ ದೃಢಕಲಶ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಪುನರ್ಪ್ರತಿಷ್ಟೆ ಬಳಿಕ 48 ದಿನಗಳು ಕಳೆದು ನಡೆಯುವ ದೃಢಕಲಶ ಪೂಜೆಯಲ್ಲಿ ಹೋಮ-ಹವನದೊಂದಿಗೆ ಬೆಳಿಗ್ಗೆ 8 ಗಂಟೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಭಕ್ತರ ಸಮ್ಮುಖದಲ್ಲಿ ನೆರವೇರಿವು. ವೈದಿಕರುಗಳಾದ ಕೃಷ್ಣ ಉಪಾಧ್ಯ, ಶ್ರೀನಿವಾಸ ಉಪಾಧ್ಯ, ಅರ್ಚಕರುಗಳಾದ ಷಣ್ಮುಖ, ಸುಬ್ರಮಣ್ಯ ಶಾಸ್ತ್ರೀ ಹಾಗೂ ಕೋದಂಡರಾಮ ದೇವಾಲಯದ ಅರ್ಚಕ ಚಂದ್ರಕಾಂತ್ ಭಟ್ ಹಾಗೂ ಇತರ ಅರ್ಚಕರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತಾಧಿಗಳಿಂದ ವಿಷ್ಣು ಸಹಸ್ರನಾಮ ನಡೆಯಿತು. ಮಧ್ಯಾಹ್ನ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ಜರುಗಿತು.
ನಾಪೋಕ್ಲು ಜೂ.21 : ಮುಂಗಾರು ಆರಂಭದ ಹಿನ್ನೆಲೆ ನಾಪೋಕ್ಲು ರೈತ ಸಂಪರ್ಕ ಕೇಂದ್ರದಲ್ಲಿ ಬೆಳೆಗಾರರಿಗೆ ವಿವಿಧ ಬಿತ್ತನೆ ಬೀಜಗಳನ್ನು ಒದಗಿಸಲು ಸಿದ್ಧತೆ ಮಾಡಲಾಗಿದೆ. ನಾಪೋಕ್ಲು ಹೋಬಳಿಯಲ್ಲಿ ಶೇಕಡ 50ರ ಸಹಾಯಧನದಲ್ಲಿ ತುಂಗಾ ಆರ್ ಎನ್ ಆರ್ 1508 ಬೀಜಗಳು ಲಭ್ಯವಿದ್ದು, ಭತ್ತ ಬೆಳೆಯುವ ರೈತರು ತಮ್ಮ ಮೂಲ ಆಧಾರ್ ಕಾರ್ಡು ತೋರಿಸಿ ಬಿತ್ತನೆ ಬೀಜಗಳನ್ನು ಪಡೆಯಬಹುದು ಎಂದು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಜೂ.21 : ಮಳೆ ಕೊರತೆ ಹಿನ್ನೆಲೆ ಜಿಲ್ಲೆಯಲ್ಲಿ ಉತ್ತಮ ಮಳೆ ಆಗುವಂತೆ ಸಂಸದ ಪ್ರತಾಪ ಸಿಂಹ ಹಾಗೂ ಮಾಜಿ ಶಾಸಕ ಕೆ.ಜಿ ಬೋಪಯ್ಯ ಕಕ್ಕಬ್ಬೆಯ ಶ್ರೀ ಪಾಡಿ ಇಗ್ಗುತಪ್ಪ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಜೂನ್ ಮೂರನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆ ಆರಂಭವಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಕೊಡಗಿನಲ್ಲಿ ಕಾಫಿ ಹಾಗೂ ಕಾಳುಮೆಣಸಿನ ಕೃಷಿಗೆ ಸಮಸ್ಯೆ ಉಂಟಾಗಲಿದೆ. ಕೃಷಿ ಚಟುವಟಿಕೆಗಳು ಹಿನ್ನಡೆ ಆಗಲಿವೆ. ಈ ಹಿನ್ನೆಲೆಯಲ್ಲಿ ಸಂಸದರು ಹಾಗೂ ಮಾಜಿ ಶಾಸಕರು ಪ್ರಾರ್ಥಿಸಿದರು. ಈ ಸಂದರ್ಭ ಬಿಜೆಪಿ ತಾಲೂಕು ಅಧ್ಯಕ್ಷ ಕಾಂಗಿರ ಸತೀಶ್, ಬಿಜೆಪಿ ಹಿಂದುಳಿದ ವರ್ಗಗಳ ತಾಲೂಕು ಅಧ್ಯಕ್ಷ ಕೋಲೆಯಂಡ ಗಿರೀಶ್, ಬಿಜೆಪಿ ತಾಲೂಕು ಕಾರ್ಯದರ್ಶಿ ಪಾಡಿಯಮ್ಮಂಡ ಮನು ಮಹೇಶ್, ಕಕ್ಕಬೆ ಶಕ್ತಿ ಕೇಂದ್ರದ ಅಧ್ಯಕ್ಷ ಕಲಿಯಂಡ ಸುನಂದ, ತಾ.ಪಂ ಮಾಜಿ ಉಪಾಧ್ಯಕ್ಷ ಬೊಳಿಯಾಡಿರ ಸಂತು ಸುಬ್ರಮಣಿ, ಕಕ್ಕಬೆ ವಿಎಸ್ಎಸ್ ಎನ್ ಅಧ್ಯಕ್ಷ ಕಲ್ಯಾಟಂಡ ರಘು ತಮ್ಮಯ್ಯ, ಭಕ್ತ ಜನ ಸಂಘದ ಉಪಾಧ್ಯಕ್ಷ ಪರದಂಡ ಡಾಲಿ, ಚಂಡಿರ ಜಗದೀಶ್…
ಮಡಿಕೇರಿ ಜೂ 21 : ಕೊಡಗು ಪ್ರೆಸ್ ಕ್ಲಬ್ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜೂ.25 ರಂದು ಪತ್ರಿಕಾ ಭವನದಲ್ಲಿ ಆಯೋಜಿಸ ಲಾಗಿದೆ ಎಂದು ಕ್ಲಬ್ ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಕೊಡಗು ಪ್ರೆಸ್ ಕ್ಲಬ್ ಉಪಾಧ್ಯಕ್ಷ ಚೀಯಂಡಿ ತೇಜಸ್ ಪಾಪಯ್ಯ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಮಾಜ ಸೇವಕ ಮೇರಿಯಂಡ ಸಂಕೇತ್ ಪೂವಯ್ಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ. ಅತ್ಯುತ್ತಮ ಪರಿಣಾಮಕಾರಿ ವರದಿಗಾಗಿ ಕೆ.ಬಿ. ಮಹಾಂತೇಶ್ ಸ್ಮರಣಾರ್ಥ ನೀಡುವ ಪ್ರಶಸ್ತಿಗೆ ಭಾಜನರಾಗಿರುವ ಹಿರಿಕರ ರವಿ ಅವರಿಗೆ ಶಕ್ತಿ ಪ್ರಧಾನ ಸಂಪಾದಕ ಜಿ. ರಾಜೇಂದ್ರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯಅತಿಥಿಗಳಾಗಿ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ. ಪೂವಯ್ಯ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಪಾಲ್ಗೊಳ್ಳಲಿದ್ದಾರೆ. ಬೊಳ್ಳಜೀರ ಬಿ.…
ಸೋಮವಾರಪೇಟೆ ಜೂ.21 : ಕಾಫಿ ಬೆಳೆಗಾರರ 10 ಎಚ್.ಪಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ಹಾಗೂ ಬೆಳೆಗಾರರ ವಿದ್ಯುತ್ಬಿಲ್ ಬಾಕಿ ಮನ್ನಾಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸದ್ಯದಲ್ಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಾಗುವುದೆಂದು ರಾಜ್ಯ ರೈತ ಸಂಘದ ಕೊಡಗು ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಹೇಳಿದರು. ಕೊಡಗು ಜಿಲ್ಲಾ ರೈತ ಸಂಘದ ವತಿಯಿಂದ ಸಫಾಲಿ ಹಾಲ್ನಲ್ಲಿ ನಡೆದ ರೈತರ ಮಾಸಿಕ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭತ್ತ, ಅಡಕೆ, ತೆಂಗು, ಹೊಗೆಸೊಪ್ಪು ಸೇರಿದಂತೆ ಇನ್ನಿತರ ಬೆಳೆಗಳಿಗೆ ಉಚಿತ ವಿದ್ಯುತ್ ನೀಡುತ್ತಾರೆ. ಆದರೆ ಸಂಕಷ್ಟದಲ್ಲಿರುವ ಸಣ್ಣ ಕಾಫಿ ಬೆಳೆಗಾರರಿಗೆ ಈ ಸೌಲಭ್ಯವಿಲ್ಲ ಎಂದು ವಿಷಾಧಿಸಿದರು. ರೈತ ಸಂಘದ ಹೋರಾಟದ ಫಲವಾಗಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ 10ಎಚ್.ಪಿ.ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನೀಡುವ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮ್ಮಯಿ ಅವರು ವಿಧಾನಸಭೆ ಅಧಿವೇಶನದಲ್ಲಿ ಘೋಷಣೆ ಮಾಡಿದ್ದರು. ಅದನ್ನು ರೈತ ಸಂಘ ಸ್ವಾಗತ ಮಾಡಿತ್ತು. ಆದರೆ ನಂತರ ತಂದ ಸಬ್ಸಿಡಿ ನಿಯಮವನ್ನು ಸಂಘ…
ಸುಂಟಿಕೊಪ್ಪ,ಜೂ.20 : ಮಡಿಕೇರಿಯ ದಿವ್ಯ ಜ್ಯೋತಿ ಪತ್ತಿನ ಸಹಕಾರ ಸಂಘದ ವತಿಯಿಂದ ಮಡಿಕೇರಿ ಶಾಸಕ ಮಂಥರ್ ಗೌಡ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ದಿವ್ಯ ಜ್ಯೋತಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಿರಿಲ್ ಮೊರಾಸ್ ಉಪಾಧ್ಯಕ್ಷ ಎನ್.ಟಿ.ಜೋಸೆಫ್ ಹಾಗೂ ನಿರ್ದೇಶಕರುಗಳು ಸೇರಿ ಶಾಸಕರಿಗೆ ಮಂಥರ್ ಗೌಡ ಅವರಿಗೆ ಪುಷ್ಪಗುಚ್ಚ ನೀಡಿ ಅಭಿನಂದಿಸಿದರು.
ಮಡಿಕೇರಿ ಜೂ.20 : ಕಕ್ಕಬೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಗುತ್ತಿಗೆದಾರ ವಿ.ಜಿ.ಮೋಹನ್ ಕಲಿಕಾ ಪ್ರೋತ್ಸಾಹಕವಾಗಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಿದರು. ಈ ಸಂದರ್ಭ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಕುಂಜಿಲ-ಕಕ್ಕಬೆ ಗ್ರಾ.ಪಂ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಕೆ.ಎ.ಕಾರ್ಯಪ್ಪ, ಪ್ರಮುಖರಾದ ಕಿರಣ್, ಶಾಲಾ ಶಿಕ್ಷಕರು ಹಾಜರಿದ್ದರು.
ನಾಪೋಕ್ಲು ಜೂ.20 : ಮಳೆಗಾಲ ಪ್ರಾರಂಭಕ್ಕೂ ಮೊದಲು ಚೆರಿಯಪರಂಬು ಗ್ರಾಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಿ ಕೊಡುವಂತೆ ಒತ್ತಾಯಿಸಿ ನಾಪೋಕ್ಲು ಗ್ರಾ.ಪಂ ಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ. ಗ್ರಾ.ಪಂ ಅಧ್ಯಕ್ಷೆ ಎಚ್. ಎಸ್.ಪಾರ್ವತಿ ಅವರಿಗೆ ಮನವಿ ನೀಡಿದ ಗ್ರಾಮಸ್ಥರು, ಚೆರಿಯಪರಂಬು ಗ್ರಾಮವು ಪ್ರವಾಹ ಪೀಡಿತ ಗ್ರಾಮವಾಗಿದೆ. ಗ್ರಾಮದ ರಸ್ತೆಗೆ ಸರಿಯಾದ ಚೆರಂಡಿ ವ್ಯವಸ್ಥೆ ಇಲ್ಲದೆ ಮಳೆಗಾಲದಲ್ಲಿ ನೀರು ರಸ್ತೆಯಲ್ಲಿಯೇ ಶೇಖರಣೆಗೊಂಡು ಶಾಲಾ ಮಕ್ಕಳು, ಸಾರ್ವಜನಿಕರು ನಡೆದಾಡಲು ಬವಣೆ ಪಡುವ ಪರಿಸ್ಥಿತಿ ಉದ್ಭವ ವಾಗಲಿದೆ. ಅದರಂತೆ ಗ್ರಾಮದಲ್ಲಿ ಬೀದಿ ದೀಪಗಳಿಲ್ಲದೆ ಕತ್ತಲಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ಇದ್ದು ಮಳೆಗಾಲ ಪ್ರಾರಂಭಕ್ಕೂ ಮೊದಲು ಪಂಚಾಯಿತಿ ವತಿಯಿಂದ ಗ್ರಾಮಕ್ಕೆ ಆಗಬೇಕಾದ ಮೂಲಭೂತ ಸೌಕರ್ಯದ ವ್ಯವಸ್ಥೆಗಳನ್ನು ಪೂರ್ಣಗೊಳಿಸಿ ಕೊಡಬೇಕೆಂದು ಗ್ರಾಮಸ್ಥರು ಮನವಿ ಸಲ್ಲಿಸಿದರು. ಈ ಸಂದರ್ಭ ಗ್ರಾಮಸ್ಥರಾದ ಪರವಂಡ ಸಿರಾಜ್, ಅಬ್ದುಲ್ ರಜಾಕ್,ಬಶೀರ್, ಅಫೀಲ್,ರಶೀದ್, ಅಬ್ದುಲ್ ಖಾದರ್ ಮತ್ತಿತರರು ಹಾಜರಿದ್ದರು. ವರದಿ :ಝಕರಿಯ ನಾಪೋಕ್ಲು
ಮಡಿಕೇರಿ ಜೂ.20 : ಮೂರ್ನಾಡು 33/11ಕೆವಿ ಎಂಯುಎಸ್ಎಸ್ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಜೂ.21 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 3 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪಾರಾಣೆ, ನಾಪೋಕ್ಲು, ಹೊದ್ದೂರು, ಮರುಗೋಡು, ಮೂರ್ನಾಡು, ಹಾಕತ್ತೂರು, ಕಾಂತೂರು, ಹೊದವಾಡ, ಚೆಯ್ಯಂಡಾಣೆ, ಕಕ್ಕಬೆ, ನೆಲಜಿ, ಪಾಲೂರು, ಯವಕಪಾಡಿ, ಬೇತು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.






