ಲೇಖಕ: admin

ಮಡಿಕೇರಿ ಜೂ.20 : ಸರ್ಕಾರದ ಎಲ್ಲಾ ಯೋಜನೆಗಳನ್ನು ನಿಯಮಾನುಸಾರ ಅನುಷ್ಟಾನಿಸಿ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್.ಆಕಾಶ್ ಸೂಚನೆ ನೀಡಿದರು. ನಗರದ ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮಡಿಕೇರಿ ತಾಲೂಕು ವ್ಯಾಪ್ತಿಯ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಜಿ.ಪಂ.ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಹಲವು ಯೋಜನೆಗಳು ಪ್ರಗತಿ ಹಂತದಲ್ಲಿದೆ. ಇವುಗಳನ್ನು ಕಾಲಮಿತಿಯೊಳಗೆ ಅನುಷ್ಟಾನಿಸಿ ಸಂಪೂರ್ಣ ಪ್ರಗತಿ ಸಾಧಿಸಬೇಕು. ನಿಯಮಾನುಸಾರ ಗ್ರಾಮಪಂಚಾಯಿತಿಗಳು ಕಂದಾಯ ಸಂಗ್ರಹಣೆ ಮಾಡುವಂತೆ ಸೂಚನೆ ನೀಡಿದರು. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ತಾಲೂಕಿನ ಎಲ್ಲಾ ಗ್ರಾಮಪಂಚಾಯತ್ ಗಳು ಮಹಿಳಾ ಸ್ವ ಸಹಾಯ ಸಂಘಗಳ ಸಹಕಾರದೊಂದಿಗೆ ಸೂಕ್ತ ರೀತಿಯಲ್ಲಿ ಘನ ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿಗಳನ್ನು ಕೈಗೊಳ್ಳಬೇಕು. ಗ್ರಾಮ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಿಸಿದಂತೆ ಅರ್ಹ…

Read More

ಮಡಿಕೇರಿ ಜೂ.20 : ಪ್ರಸಕ್ತ (2023-24) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪಿಯುಸಿ ಮತ್ತು ಪಿಯುಸಿ ಸಮನಾಂತರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ, 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: http://shp.karnataka.gov.in. ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್‍ಸಿ ಮತ್ತು ಎಸ್‍ಟಿ ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1 ಲಕ್ಷ ಆಗಿದೆ. ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕೆ ಇಲಾಖೆಯ ವೆಬ್‍ಸೈಟ್ http://bcwd.karnataka.gov.in ಅನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಯವರ ಕಚೇರಿ ಮತ್ತು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ…

Read More

ಮಡಿಕೇರಿ ಜೂ.20 : ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೇಶಕ  ಪಿ.ಬಿ.ಯತೀಶ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯೋಗೇದ್ರ ನಾಯಕ್ ಅವರಿಗೆ ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಟಿ.ಆರ್.ಶರವಣಕುಮಾರ್, ಉಪಾಧ್ಯಕ್ಷರಾದ ಆನಂದ್ ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದು  2022-2023ನೇ ಸಾಲಿನ ಲಾಭಾಂಶದಿಂದ ತೆಗೆದ ಶೇಕಡಾ 2 ರಷ್ಟು ಮೊತ್ತವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಕ್ಕೆ ಸಹಕಾರ ಸಂಘಗಳ ಕಾಯ್ದೆ ಪ್ರಕಾರ ನೀಡಬೇಕಾಗಿರುವುದರಿಂದ ಜಿಲ್ಲೆಯಲ್ಲೇ ಪ್ರಥಮವಾಗಿ ಸಹಕಾರ ಶಿಕ್ಷಣ ನಿಧಿ ಚೆಕ್ಕನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಗೆ ನೀಡಿರುತ್ತಾರೆ.

Read More

ಮಡಿಕೇರಿ ಜೂ.20 : ಸಾಮಾಜಿಕ ಭದ್ರತಾ ಯೋಜನೆಯಡಿಯಲ್ಲಿ ವೃದ್ದಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ, ಸಂಧ್ಯಾ ಸುರಕ್ಷಾ, ಮನಸ್ವಿನಿ ಹೀಗೆ ವಿವಿಧ ಪಿಂಚಣಿಯನ್ನು ಕೊಡಗು ಜಿಲ್ಲೆಯಲ್ಲಿ ಒಟ್ಟು 69,473 ಫಲಾನುಭವಿಗಳಿಗೆ ಈಗಾಗಲೇ ವಿತರಿಸಲಾಗಿದ್ದು, ಈ ಪಿಂಚಣಿಯನ್ನು ಸಂಬಂಧಿಸಿದ ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ. ಆದರೆ ಜೂನ್, 2023 ರಿಂದ ಸಾಮಾಜಿಕ ಭದ್ರತಾ ಯೋಜನೆ ಮತ್ತು ಪಿಂಚಣಿಗಳ ನಿರ್ದೇಶನಾಲಯವು ಫಲಾನುಭವಿಗಳಿಗೆ ಪಾವತಿಸುತ್ತಿರುವ ಪಿಂಚಣಿಯನ್ನು ಆಧಾರ್ ನಂಬರ್ ಆಧಾರಿತ ಪಾವತಿಯನ್ನಾಗಿಸಲು ತೀರ್ಮಾನಿಸಿದ್ದು, ಈ ತೀರ್ಮಾನದಂತೆ ಆಧಾರ್ ನಂಬರನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡದೇ ಇರುವ ಎನ್‍ಪಿಸಿಐ ಮ್ಯಾಪಿಂಗ್ ಆಗದೇ ಇರುವ ಹಾಗೂ ಬ್ಯಾಂಕ್/ ಅಂಚೆ ಕಚೇರಿಯಲ್ಲಿ ಚಾಲನೆಯಲ್ಲಿಲ್ಲದಿರುವ ಖಾತೆಗಳಿಗೆ ಪಿಂಚಣಿ ಪಾವತಿಯಾಗುವುದಿಲ್ಲ. ಈ ಕಾರ್ಯವನ್ನು ಜೂ.25 ರ ಒಳಗೆ ಫಲಾನುಭವಿಗಳು ಸರಿಪಡಿಸಿಕೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಜಿಲ್ಲೆಯಲ್ಲಿ ಅಂತಹ ಒಟ್ಟು 5,949 ಫಲಾನುಭವಿಗಳಿದ್ದು, ಈ ಫಲಾನುಭವಿಗಳ ಪಟ್ಟಿಯನ್ನು ನಿರ್ದೇಶನಾಲಯದಿಂದ ಕಳುಹಿಸಲಾಗಿದ್ದು, ತಾಲ್ಲೂಕುವಾರು ವಿವರ ಇಂತಿದೆ: ಮಡಿಕೇರಿ…

Read More

ಮಡಿಕೇರಿ ಜೂ.20 : `ಅನ್ನಭಾಗ್ಯ’ ಯೋಜನೆಯಡಿ ಹತ್ತು ಕೆ.ಜಿ.ಅಕ್ಕಿ ವಿತರಿಸುವ ರಾಜ್ಯ ಸರ್ಕಾರದ ಯೋಜನೆಯ ಜಾರಿಗೆ ಅಗತ್ಯವಾದ ಅಕ್ಕಿಯನ್ನು ಪೂರೈಸಲು ಕೇಂದ್ರ ಸರ್ಕಾರ ನಕಾರಾತ್ಮಕ ಧೋರಣೆ ತಳೆದಿರುವುದನ್ನು ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ನಗರದಲ್ಲಿ ಪ್ರತಿಭಟನೆ ನಡೆಸಿತು. ಕಾಂಗ್ರೆಸ್ ಜಿಲ್ಲಾಧ್ಯಕ್ಷ  ತಿತೀರ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಮುಂಭಾಗ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಕಾಂಗ್ರೆಸ್ ಪ್ರಮುಖರು, ಕಾರ್ಯಕರ್ತರು ಸಮಾವೇಶಗೊಂಡು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಅದರಂತೆ ಅಧಿಕಾರಕ್ಕೆ ಬಂದ ಬಳಿಕ ಅವುಗಳನ್ನು ಈಡೇರಿಸಲು ಮೊದಲ ಶಾಸಕಾಂಗ ಸಭೆಯಲ್ಲೆ ಅನುಮೋದನೆಯನ್ನು ನೀಡಲಾಗಿತ್ತು.ಗ್ಯಾರಂಟಿಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಪಡಿತರದಾರರಿಗೆ ತಲಾ 10 ಕೆ.ಜಿ. ಅಕ್ಕಿ ವಿತರಿಸಲು ಸರ್ಕಾರ ಕಾರ್ಯ ಯೋಜನೆಗಳನ್ನು ಅದಾಗಲೆ ರೂಪಿಸಿದೆ. ಆದರೆ, ಇದನ್ನು ಕಾರ್ಯಗತಗೊಳಿಸಬಾರದೆನ್ನುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಯೋಜನೆಯ ಪೂರೈಕೆಗೆ ಅಗತ್ಯವಾದ ಅಕ್ಕಿ ವಿತರಣೆಗೆ ಅಸಹಕಾರ ತೋರುತ್ತಿರುವುದಾಗಿ ಕಾಂಗ್ರೆಸ್ ಪ್ರಮುಖರು…

Read More

ಮಡಿಕೇರಿ ಜೂ.20 : ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವಂತೆ ಭಾರತೀಯ ವೈದ್ಯಕೀಯ ಸಂಘ ಕೊಡಗು ಶಾಖೆಯ ಅಧ್ಯಕ್ಷ ಹಾಗೂ ರೇಡಿಯಾಲಜಿಸ್ಟ್  ಡಾ. ಚೌರೀರ ಶ್ಯಾಮ್ ಅಪ್ಪಣ್ಣ ತಿಳಿಸಿದರು. ಮಂಗಳೂರು ವಿಶ್ವವಿದ್ಯಾನಿಲಯ, ಕೊಡಗು ವಿಶ್ವವಿದ್ಯಾನಿಲಯ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವತಿಯಿಂದ ನಡೆದ 74ನೇ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ವ್ಯಕ್ತಿಯ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಮತ್ತು ನಾವು ನೋಡುವ ದೃಷ್ಟಿಕೋನವನ್ನು ಬದಲಾಯಿಸುತ್ತದೆ ಮತ್ತು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಗುರುತಿಸಿಕೊಳ್ಳಲು ಸಹಾಯ ಮಾಡುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿ ಸಾಧಿಸಲು ಕರೆ ನೀಡಿದರು. ತಂದೆ-ತಾಯಿ ಎಂದಿಗೂ ಮಕ್ಕಳಿಗೆ ಒಳಿತನ್ನು ಬಯಸುವರು ಅವರ ಆಸೆ-ಆಕಾಂಕ್ಷೆಯನ್ನು ನೆರವೇರಿಸಿ ಕೊಡಬೇಕಾದದ್ದು ವಿದ್ಯಾರ್ಥಿಗಳ ಕರ್ತವ್ಯ ಎಂದರು. ಮೊಬೈಲ್ ಕಡಿಮೆ ಬಳಕೆ ಮಾಡಿ ತಂದೆ, ತಾಯಿ ಕುಟುಂಬ, ಸ್ನೇಹಿತರೊಂದಿಗೆ ಮಾತನಾಡಿ ತಮ್ಮ ಅಮೂಲ್ಯ ಸಮಯವನ್ನು ಕುಟುಂಬದೊಂದಿಗೆ ಕಳೆಯಿರಿ ಎಂದರು. `ಗಡಿಯಾರವನ್ನು ಕೊಳ್ಳಬಹುದು ಸಮಯವನ್ನು ಕೊಳ್ಳಲು ಸಾಧ್ಯವಿಲ್ಲ, ಕಳೆದುಹೋದ…

Read More

ಮಡಿಕೇರಿ ಜೂ.20 :  ಕೊಡಗು ಪ್ರೆಸ್ ಕ್ಲಬ್ ನಿರ್ದೇಶಕ ಕೆ.ಆರ್. ಪ್ರಸಿನ್ ಗೌಡ ಬರೆದಿರುವ ಚೊಚ್ಚಲ ಕೃತಿ “ಮನ ಮಾತದಾಗ” ಲೋಕಾರ್ಪಣೆ ಕಾರ್ಯಕ್ರಮ ಜೂ.27 ರಂದು ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿಯಿಂದ ಅಂದು ಬೆಳಗ್ಗೆ 10.30 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್‍ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ. ಪೂವಯ್ಯ ಅಧ್ಯಕ್ಷತೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಮಕ್ಕಳ ತಜ್ಞ ವೈದ್ಯ ಡಾ.ಬಿ.ಸಿ. ನವೀನ್‍ಕುಮಾರ್ ಉದ್ಘಾಟಿಸಲಿದ್ದಾರೆ. ಮನ ಮಾತಾದಾಗ ಕೃತಿಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ ಅನಾವರಣ ಮಾಡಲಿದ್ದಾರೆ. ಮುಖ್ಯಅತಿಥಿಗಳಾಗಿ ವಿಕ್ರಮ ಸಂಪಾದಕ ವೃಶಾಂಕ್ ಭಟ್, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಜೂ.20 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ಆ.14 ರಂದು ಕೊಡಗು ಮೂಲದ 25 ನಿವೃತ್ತ ಯೋಧರನ್ನು ಸನ್ಮಾನಿಸಲಾಗುತ್ತದೆ ಎಂದು ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್‍ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಹಾಗೂ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಘಟಕ ಸಂಯುಕ್ತಾಶ್ರಯದಲ್ಲಿ ಮಡಿಕೇರಿಯ ಪತ್ರಿಕಾ ಭವನದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ವಿರಾಜಪೇಟೆ ಕಾವೇರಿ ಕಲ್ಯಾಣ ಮಂಟಪದಲ್ಲಿ ಅಖಿಲ ಕರ್ನಾಟಕ ಮಾಲಿ ಸೈನಿಕರ ಸಂಘದ ಕೊಡಗು ಘಟಕ ಅಧ್ಯಕ್ಷ ಕೊಟ್ಟುಕತ್ತಿರ ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸನ್ಮಾನ ಕಾರ್ಯಕ್ರಮದ ರೂಪುರೇಷೆ ಚರ್ಚಿಸಲಾಯಿತು. ಸೇನೆಯಲ್ಲಿ ಕರ್ತವ್ಯನಿರ್ವಹಿಸಿದ ಬಳಿಕ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ 25 ಯೋಧರನ್ನು ಸನ್ಮಾನಿಸಲು ತೀರ್ಮಾನಿಸಲಾಗಿದೆ. ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ನಿವೃತ್ತ ಯೋಧರ ಹೆಸರನ್ನು ಸನ್ಮಾನಕ್ಕೆ ಶಿಫಾರಸ್ಸು ಮಾಡಬಹುದು. ಫೋಟೋ ಸಹಿತ ಸಾಧನೆಯ ಮಾಹಿತಿಯೊಂದಿಗೆ ಬಯೋಡಾಟವನ್ನು ಜುಲೈ…

Read More

ಮಡಿಕೇರಿ ಜೂ.20 : ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಡಾ.ಎನ್.ವಿ.ಪ್ರಸಾದ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ. ಅಭಿವೃದ್ಧಿ ಯೋಜನೆ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ, ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರಕಾರಿ ವರದಿ ಮಾಡಲು ಸರಕಾರದ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳ ಮಟ್ಟದಲ್ಲಿ ಅಧಿಕಾರಗಳನ್ನು ನೇಮಿಸಲಾಗಿದೆ ಎಂದು ಸರಕಾರದ ಅಧೀನ ಕಾರ್ಯದರ್ಶಿ ಎಸ್.ಕಲ್ಪನ ಆದೇಶದಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.20 : ಕೊಡಗು ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಕೋಲಾರ ಜಿಲ್ಲಾಧಿಕಾರಿಯಾಗಿದ್ದ ವೆಂಕಟರಾಜ ನೇಮಕಗೊಂಡಿದ್ದು, ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ.ಬಿ.ಸಿ.ಸತೀಶ್ ಅವರು ಸುವರ್ಣ ಆರೋಗ್ಯ ಟ್ರಸ್ಟ್‍ನ ಹೆಚ್ಚುವರಿ ಕಾರ್ಯದರ್ಶಿಯಾಗಿ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ. ಈ ಸಂಬಂಧ ಕರ್ನಾಟಕ ಸರಕಾರ ಆದೇಶ ಹೊರಡಿಸಿದ್ದು, ರಾಜ್ಯದ 12 ಅಧಿಕಾರಿಗಳನ್ನು ಬೇರೆ ಬೇರೆ ಕಡೆ ವರ್ಗಾವಣೆ ಮಾಡಲಾಗಿದೆ.

Read More