ಮಡಿಕೇರಿ ಜೂ.20 : ಬಾಳೆಲೆ ಫಾರ್ಮರ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಮತ್ತು ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅಳಮೇಂಗಡ ಬೋಸ್ ಮಂದಣ್ಣ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅಡ್ಡೇಂಗಡ ನವಿನ್, ಕಾರ್ಯದರ್ಶಿಯಾಗಿ ಅದೇಂಗಡ ಪುಟ್ಟು ಮಂದಣ್ಣ, ಖಚಾಂಚಿಯಾಗಿ ಅದೇಂಗಡ ಚಂದ್ರಶೇಖರ್, ಕ್ರೀಡಾ ಕಾರ್ಯದರ್ಶಿಯಾಗಿ ಕಾಡ್ಯಮಾಡ ಸುಬ್ಬಯ್ಯ ನೇಮಕಗೊಂಡಿದ್ದು, ನಿರ್ದೇಶಕರುಗಳಾಗಿ ಅಳಮೇಂಗಡ ದಿಲ್ಲು ತಿಮ್ಮಯ್ಯ, ಪೊಡಮಾಡ ಗಿರೀಶ್ ಮಾಚಯ್ಯ, ಮಾಚಂಗಡ ರೋಷನ್, ಮಲಚಿರ ಅನೀಶ್ ಬೋಪಣ್ಣ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿಗಳಾಗಿ ಶಿಕ್ಷಕರುಗಳಾದ ಸುಬ್ಬಯ್ಯ, ರಾಘವೇಂದ್ರ ಮತ್ತು ಕಾಂಡೇರ ಡಾನ್ ಕುಶಾಲಪ್ಪ ಕಾರ್ಯನಿರ್ವಹಿಸಿದರು.
ಲೇಖಕ: admin
ನಾಪೋಕ್ಲು ಜೂ.20 : ಮೂರ್ನಾಡು ಪದವಿ ಕಾಲೇಜಿನ ಪೋಷಕ ಶಿಕ್ಷಕ ಸಭೆಯನ್ನು ಇತ್ತೀಚೆಗೆ ಕಾಲೇಜಿನ ಕಾವೇರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಖ ಚಿಣ್ಣಪ್ಪ ಮಾತನಾಡಿ, ಕಾಲೇಜಿನ ಚಟುವಟಿಕೆಗಳ ಬಗ್ಗೆ ಪೋಷಕರಿಗೆ ವಿವರಿಸಿ ತಮ್ಮ ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು ಹಾಗೂ ಮೊಬೈಲ್ ನಿಂದ ಅವರನ್ನು ಆದಷ್ಟು ದೂರವಿರಿಸಬೇಕೆಂದು ಕಿವಿ ಮಾತು ಹೇಳಿದರು. ಸಂಸ್ಥೆಯ ಕಾರ್ಯದರ್ಶಿ ಪೆಮ್ಮಡಿಯ0ಡ ವೇಣು ಅಪ್ಪಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಶಿಕ್ಷಕರ ಹಾಗೂ ಪೋಷಕರ ಪಾತ್ರ ಬಹಳಷ್ಟು ಇದೆ, ವಿದ್ಯಾರ್ಥಿಗಳು ಉತ್ತಮ ನಡತೆಯನ್ನು ರೂಪಿಸಿಕೊ0ಡು ಸಮಾಜಕ್ಕೆ ಮಾದರಿಯಾಗಿ ಬದುಕಬೇಕು ಎಂದು ನುಡಿದರು. ಪೋಷಕ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಬಿ.ಪ್ರಭಾಕರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಕಲ್ಪನಾ ಸ್ವಾಗತಿಸಿ, ಉಪನ್ಯಾಸಕ ಹರೀಶ್ ನಿರೂಪಿಸಿ, ಉಪನ್ಯಾಸಕ ನವೀನ್ ವಂದಿಸಿದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಜೂ.19 : ಕುಡಿಯುವ ನೀರು, ಬೀದಿ ದೀಪ, ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡುವುದಾಗಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ತಿಳಿಸಿದ್ದಾರೆ. ನಗರಕ್ಕೆ ಕುಡಿಯುವ ನೀರನ್ನು ಒದಗಿಸುತ್ತಿರುವ ಕೂಟುಹೊಳೆ ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿದ ಅಧ್ಯಕ್ಷರು ದುರಸ್ತಿ ಕಾರ್ಯಗಳನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಅವರು ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದoತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಕೂಟುಹೊಳೆಯ ಮೋಟಾರ್ ದುರಸ್ತಿಯಾಗಿ ಸುಸ್ಥಿತಿಯಲ್ಲಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ. ನಗರದ 23 ವಾರ್ಡ್ಗಳ ಬೀದಿದೀಪಗಳ ದುರಸ್ತಿಗೆ ಸೂಚನೆ ನೀಡಲಾಗಿದೆ. ನಗರದಲ್ಲಿರುವ ಎಲ್ಲಾ ಸಾರ್ವಜನಿಕ ಬಸ್ ತಂಗುದಾಣ ಮತ್ತು ಶೌಚಾಲಯಗಳನ್ನು ಶುಚಿಗೊಳಿಸುವ ಕಾರ್ಯ ಕೈಗೊಂಡಿದ್ದು, ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಜನರು ಎಲ್ಲೆಂದರಲ್ಲಿ ಕಸ ಹಾಕದೆ ಕಸ ಸಂಗ್ರಹದ ವಾಹನಕ್ಕೆ ಹಾಕಿ ಸಹಕರಿಸುವಂತೆ ಅನಿತಾ ಪೂವಯ್ಯ ಮನವಿ ಮಾಡಿದರು. ::: ಪರಿಶೀಲನೆ ::: ಕೂಟುಹೊಳೆಯ ಪಂಪ್ ಹೌಸ್ ನ ಸ್ಥಿತಿಗತಿ ಮತ್ತು ಫೀ.ಮಾ.ಕಾರ್ಯಪ್ಪ ವೃತ್ತದ ಹೈ ಮಾಸ್ಟ್ ದೀಪದ ದುರಸ್ತಿ…
ಮಡಿಕೇರಿ ಜೂ.19 : ಗಂಭೀರವಾಗಿ ಗಾಯಗೊಂಡಿದ್ದ ಹುಲಿಯೊಂದು ಮೃತಪಟ್ಟಿರುವ ಘಟನೆ ಮಾಲ್ದಾರೆ ಸಮೀಪದ ಅಸ್ತಾನ ಹಾಡಿ ವ್ಯಾಪ್ತಿಯಲ್ಲಿ ನಡೆದಿದೆ. ಹುಲಿಗಳ ನಡುವಿನ ಕಾದಾಟದಲ್ಲಿ ಕಾಲಿಗೆ ಗಾಯವಾಗಿದೆ ಎಂದು ಶಂಕೆ ವ್ಯಕ್ತವಾಗಿದೆ. ಅರಣ್ಯದಂಚಿನಲ್ಲಿ ಮೃತದೇಹ ಪತ್ತೆಯಾಗಿದ್ದು, ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಹುಲಿ ಕೆರೆಯ ಬಳಿ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಹುಲಿ ಸೆರೆಗೆ ಮುಂದಾಗಿತ್ತಾದರೂ ಇದೀಗ ಕೊನೆಯುಸಿರೆಳೆದಿದೆ.
ನಾಪೋಕ್ಲು ಜೂ.19 : ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡರೇ ಬದುಕು ಸುಂದರವಾಗಿ ಸಾಗುತ್ತದೆ ಎಂದು ಮಡಿಕೇರಿ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಹೇಳಿದರು. ನಾಪೋಕ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ಏನಾದರು ಸಾಧಿಸಬೇಕು ಎಂದರೆ ಶಿಸ್ತು, ತಾಳ್ಮೆ, ಧೈರ್ಯ ಬಹಳ ಮುಖ್ಯವಾದುದು. ಹದಿಹರೆಯದ ವಯಸ್ಸಿನಲ್ಲಿ ಅನೇಕ ತಪ್ಪುಗಳು ಅರಿವು ಇದ್ದೋ, ಇಲ್ಲದೇನೋ ಅಗುವುದು ಆದರೆ ನಮ್ಮ ದೇಶದ ಕಾನೂನು ಅದಕ್ಕೆ ಅವಕಾಶ ನೀಡುವುದಿಲ್ಲ. ಎಲ್ಲಾರಿಗೂ ಸಮಾನವಾದ ಶಿಕ್ಷೆ ವಿಧಿಸುತ್ತದೆ. ಯಾರು ಕೂಡ ಸಂಚಾರಿ ನಿಯಮ ಉಲ್ಲಂಘನೆ, ಗಾಂಜಾ ಸೇವನೆ ಮಾಡಬಾರದು ಎಂದು ತಿಳಿಸಿದರು. ನಾಪೋಕ್ಲು ಠಾಣಾಧಿಕಾರಿ ಮಂಜುನಾಥ ಮಾತನಾಡಿ, ವ್ಯಸನಗಳಿಂದ ಮುಕ್ತ ಹೊಂದಿ, ಜೀವನದಲ್ಲಿಯೇ ಸರಳ ಜೀವನ ನಡೆಸಿಕೊಂಡು ಉನ್ನತ ಧ್ಯೇಯ ಮತ್ತು ಗುರಿಯನ್ನು ಹೊಂದಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವಂತೆ ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಕಾವೇರಿ, ಎನ್.ಎನ್ .ಎಸ್ ಘಟಕದ ಮುಖ್ಯಸ್ಥೆ…
ಮಡಿಕೇರಿ ಜೂ.19 : ಬೆಂಗಳೂರಿನ ಪ್ರತಿಷ್ಠಿತ ವೀಣಾಧರಿ ಇನ್ಸ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ ಮತ್ತು ಫೈನ್ ಆಟ್ಸ್ ನಡೆಸಿದ ಆನ್ಲೈನ್ ಅಂತರಾಷ್ಟ್ರೀಯ ಮಟ್ಟದ ಫಿಲಂ ಮ್ಯೂಸಿಕ್, ಸೀನಿಯರ್ ವಿಭಾಗದ ಸ್ಪರ್ಧೆಯಲ್ಲಿ ಕೊಡಗಿನ ಬಾಳೆಲೆಯ ಸಿ.ವಿ.ಅನ್ವಿತ್ ಕುಮಾರ್ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಇವರು ಬಾಳೆಲೆಯ ಗಣೇಶ ದೇವಸ್ಥಾನದ ಅರ್ಚಕ ವಿಷ್ಣುಮೂರ್ತಿ ಮತ್ತು ಚಂದ್ರಕಲಾ ದಂಪತಿಗಳ ಪುತ್ರನಾಗಿದ್ದು, ಗೋಣಿಕೊಪ್ಪದ ಕಾವೇರಿ ಕಾಲೇಜಿನ ಬಿಸಿಎವಿದ್ಯಾರ್ಥಿ. ವತ್ಸಲ ನಾರಾಯಣ್ ಅವರ ಶಿಷ್ಯ.
ಮಡಿಕೇರಿ ಜೂ.19 : ಕರ್ನಾಟಕ ಸರ್ಕಾರದ ಗೃಹ ಜ್ಯೋತಿ ಯೋಜನೆಯ ಸೌಲಭ್ಯವನ್ನು ಪಡೆಯಲು ಕೊಡಗು ಜಿಲ್ಲೆಯ ಗೃಹ ಬಳಕೆಯ ವಿದ್ಯುತ್ ಗ್ರಾಹಕರು ಜೂ.18 ರಿಂದ ಸೂಕ್ತ ದಾಖಲಾತಿಗಳೊಂದಿಗೆ ಮಡಿಕೇರಿ ಕಾರ್ಯ ಮತ್ತು ಪಾಲನಾ ವಿಭಾಗ ಕಚೇರಿ, ಮಡಿಕೇರಿ, ಕುಶಾಲನಗರ ಸೋಮವಾರಪೇಟೆ, ಗೋಣಿಕೊಪ್ಪಲು, ವಿರಾಜಪೇಟೆ ಕಾರ್ಯ ಮತ್ತು ಪಾಲನಾ ಉಪವಿಭಾಗ/ಶಾಖಾ ಕಚೇರಿ ಹಾಗೂ ತಾಳತ್ಮನೆ, ಸಂಪಾಜೆ, ಭಾಗಮಂಡಲ, ಮೂರ್ನಾಡು, ನಾಪೋಕ್ಲು, ಕೂಡಿಗೆ, ಸುಂಟಿಕೊಪ್ಪ, ಚೆಟ್ಟಳ್ಳಿ, ಮಾದಾಪುರ, ಶಾಂತಳ್ಳಿ, ಶನಿವಾರಸಂತೆ, ಆಲೂರು ಸಿದ್ದಾಪುರ, ಕೊಡ್ಲಿಪೇಟೆ, ಶ್ರೀಮಂಗಲ, ಬಾಳೆಲೆ, ಸಿದ್ದಾಪುರ, ಅಮ್ಮತ್ತಿ, ಪಾಲಿಬೆಟ್ಟ ಕಾರ್ಯ ಮತ್ತು ಪಾಲನಾ ಶಾಖಾ ಕಚೇರಿಗಳಲ್ಲಿ ಚಾ.ವಿ.ಸ.ನಿ.ನಿ.(CESCOM) ಕಚೇರಿಗಳ ಗೃಹಜ್ಯೋತಿ ಕೌಂಟರ್ಗಳಿಗೆ ಭೇಟಿ ನೀಡಿ ಅರ್ಜಿ ನೋಂದಾಯಿಸಿಕೊಳ್ಳಬಹುದು. ಸಾರ್ವಜನಿಕರು ನಿಮ್ಮ ಮೊಬೈಲ್, ಲ್ಯಾಪ್ಟಾಪ್, ಕಂಪ್ಯೂಟರ್, ಸಮೀಪದ ಕರ್ನಾಟಕ-1, ಗ್ರಾಮ-1, ಗ್ರಾಮ ಪಂಚಾಯತ್ ಮತ್ತು ನಾಡ ಕಚೇರಿಗಳಲ್ಲಿ ಹಾಗೂ ಸೇವಾ ಸಿಂಧು ಆನ್ಲೈನ್ ತಂತ್ರಾಂಶದಲ್ಲೂ ಕೂಡ ಗೃಹಜ್ಯೋತಿ ಯೋಜನೆಯ ಅರ್ಜಿಯನ್ನು ನೋಂದಾಯಿಸಿ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ…
ಮಡಿಕೇರಿ ಜೂ.19 : ರಾಜ್ಯ ಹಣಕಾಸು ಸಂಸ್ಥೆ ವತಿಯಿಂದ ನಡೆದ 64ನೇ ವಾರ್ಷಿಕ ಮಹಾಸಭೆಯಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಏಕರೂಪ್ ಕೌರ್ ಅವರು ಸಂಸ್ಥೆಯ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದರು. 64ನೇ ವಾರ್ಷಿಕ ಮಹಾಸಭೆಯಲ್ಲಿ 2023ರ ಮಾರ್ಚ್ 31 ಕ್ಕೆ ಅಂತ್ಯಗೊಂಡ ಹಣಕಾಸು ವರ್ಷ 2022-23 ರ ಸಂಸ್ಥೆಯ ವಾರ್ಷಿಕ ಕಾರ್ಯಾಚರಣೆ ಹಾಗೂ ಪರಿಶೋಧಿಸಲ್ಪಟ್ಟ ಲೆಕ್ಕಪತ್ರಗಳ ಪ್ರಮುಖ ಅಂಶಗಳನ್ನು ಹಂಚಿಕೊಂಡರು. ಸಂಸ್ಥೆಯು ಪ್ರಸಕ್ತ 2022-23ನೇ ಸಾಲಿನ ಆರ್ಥಿಕ ಸ್ಥಿತಿಯನ್ನು ಕ್ರೋಡಿಕರಿಲಾಗಿದ್ದು, ತೆರಿಗೆ ಪೂರ್ವ ರೂ. 138.78 ಕೋಟಿಗಳ ದಾಖಲೆ ಲಾಭಗಳಿಸಿದೆ ಹಾಗೂ ರೂ.107.31 ಕೋಟಿಗಳ ತೆರಿಗೆ ನಂತರದ ಲಾಭಗಳಿಸಿದೆ. ಸಂಸ್ಥೆಯು 2022-23 ರ ಹಣಕಾಸು ವರ್ಷದಲ್ಲಿ ವಿವಿಧ ಸಾಲ ಯೋಜನೆಗಳ ಮೂಲಕ 901.10 ಕೋಟಿ ರೂ.ಗಳ ಸಾಲದ ಮಂಜೂರಾತಿ ಮಾಡಿದ್ದು, ಇದರಲ್ಲಿ ರೂ.874.68 ಕೋಟಿಗಳ ಮೊತ್ತದ ಮಂಜೂರಾತಿಯು 682 ಸೂಕ್ಷ್ಮ ಮತ್ತು ಸಣ್ಣ ಗಾತ್ರದ ಕೈಗಾರಿಕಾ ಘಟಕಗಳಿಗೆ ಒಳಗೊಂಡಿದೆ. 2023 ರ ಮಾರ್ಚ್ ಅಂತ್ಯದವರೆಗೆ 1,75,833 ಉದ್ಯಮಗಳಿಗೆ 19,680.73 ಕೋಟಿ ರೂ.ಗಳ ಸಂಚಿತ…
ಮಡಿಕೇರಿ ಜೂ.19 : ನಗರದ ವಿದ್ಯಾನಗರದಲ್ಲಿರುವ ನೂತನ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿರುವ ಉಪಹಾರ ಗೃಹವನ್ನು ಮಾಸಿಕ ಬಾಡಿಗೆ ಆಧಾರದ ಮೇಲೆ ನಡೆಸಲು ಟೆಂಡರ್/ ಕೊಟೇಷನ್ನ್ನು ಆಸಕ್ತಿವುಳ್ಳ ಹಾಗೂ ನುರಿತ ಹೋಟೆಲ್ ಉದ್ದಿಮೆದಾರರಿಂದ ಮುಚ್ಚಿದ ಲಕೋಟೆಗಳಲ್ಲಿ ಕೊಟೇಷನ್ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ, ಷರತ್ತುಗಳು ಹಾಗೂ ನಿಬಂಧನೆಗಳನ್ನು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ https://districts.ecourts.gov.in/kodagu ನಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಇಚ್ಛಿಸುವವರು, ನಗರದ ವಿದ್ಯಾನಗರದಲ್ಲಿರುವ ನೂತನ ನ್ಯಾಯಾಲಯ ಆವರಣದಲ್ಲಿರುವ ಉಪಹಾರ ಗೃಹವನ್ನು ನೋಡಬಹುದು. `ಮಡಿಕೇರಿಯ ನೂತನ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿರುವ ಉಪಹಾರ ಗೃಹ ನಡೆಸುವ ಸಲುವಾಗಿ ಟೆಂಡರು’ ಎಂದು ನಮೂದಿಸಬೇಕು. ಈ ಮುಚ್ಚಿದ ಲಕೋಟೆಗಳನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಕೊಡಗು-ಮಡಿಕೇರಿ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ, ವಿದ್ಯಾನಗರ, ಮಡಿಕೇರಿ-571201 ಇವರ ವಿಳಾಸಕ್ಕೆ ಜು.18 ರ ಸಂಜೆ 6 ಗಂಟೆ ಒಳಗೆ ಸಲ್ಲಿಸಬೇಕು. ನಂತರ ತಲುಪಿದ ಲಕೋಟೆಗಳನ್ನು ಪರಿಗಣಿಸಲಾಗುವುದಿಲ್ಲ. ಮುಚ್ಚಿದ ಲಕೋಟೆಗಳನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಕೊಡಗು-ಮಡಿಕೇರಿ ಇವರ ಸಮ್ಮುಖದಲ್ಲಿ ಜು.20 ರಂದು…
ಮಡಿಕೇರಿ ಜೂ.19 : ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ, ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಪದವಿ ಪ್ರದಾನ ಸಮಾರಂಭವು ಜೂ.20 ರಂದು ಮಧ್ಯಾಹ್ನ 2.30 ಗಂಟೆಗೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ನಡೆಯಲಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ನಿವೃತ್ತ ಡೀನ್(ಅರಣ್ಯ) ಡಾ.ಸಿ.ಜಿ.ಕುಶಾಲಪ್ಪ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್(ಅರಣ್ಯ) ಡಾ.ಜಿ.ಎಂ.ದೇವಗಿರಿ ಇತರರು ಪಾಲ್ಗೊಳ್ಳಲಿದ್ದಾರೆ.






