ಮಡಿಕೇರಿ ಮಾ.30 NEWS DESK : ಭಗವಾನ್ ಮಹಾವೀರರ ತತ್ವ, ಚಿಂತನೆ ಹಾಗೂ ಅಹಿಂಸೆಯನ್ನು ಅಳವಡಿಸಿಕೊಂಡಲ್ಲಿ ಪ್ರಪಂಚದಲ್ಲಿ ಯಾವುದೇ ಯುದ್ದ ನಡೆಯುವುದಿಲ್ಲ. ಆ ನಿಟ್ಟಿನಲ್ಲಿ ಭಗವಾನ್ ಮಹಾವೀರರ ಸಂದೇಶಗಳು ಹಾಗೂ ಮಾರ್ಗದರ್ಶನವನ್ನು ಪಾಲಿಸುವಂತಾಗಬೇಕು ಎಂದು ನಿವೃತ್ತ ಪ್ರಾಂಶುಪಾಲರಾದ ಡಾ.ವಾಣಿ ಪುಷ್ಪರಾಜ್ ಅವರು ಪ್ರತಿಪಾದಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಭಗವಾನ್ ಮಹಾವೀರರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಮೆರಿಕಾ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಿಂದ ವಿಶ್ವದಲ್ಲಿ ಒಂದು ರೀತಿ ಸಂದಿಗ್ಧ ವಾತಾವರಣ ನಿರ್ಮಾಣವಾಗಿದೆ. ಇದರಿಂದ ಆರ್ಥಿಕ ಚಟುವಟಿಕೆ ಹಾಗೂ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಹೇಳಿದರು. ‘ಇಂದಿನ ವೇಗದ ಬದುಕಿನಲ್ಲಿ ಜಗತ್ತು ಒಂದು ಹಳ್ಳಿಯಾಗಿದ್ದು, ರಾಷ್ಟ್ರ ರಾಷ್ಟ್ರಗಳು ಒಂದಕ್ಕೊಂದು ಅವಲಂಬಿತವಾಗಿ ಬದುಕು ನಡೆಸುವಂತಾಗಿದೆ. ಆದ್ದರಿಂದ ಇಡೀ ವಿಶ್ವದಲ್ಲಿ ಶಾಂತಿ ನೆಲೆಸುವಂತಾಗಬೇಕು. ಅದಕ್ಕೆ ಮಹಾವೀರರ ಸಂದೇಶಗಳು ಮತ್ತು ತತ್ವಗಳನ್ನು ಅಳವಡಿಸಿಕೊಂಡು ಮುನ್ನಡೆಯುವಂತಾಗಬೇಕು ಎಂದು ವಾಣಿ ಪುಷ್ಪರಾಜ್ ಅವರು ಪ್ರತಿಪಾದಿಸಿದರು.’ ಭಗವಾನ್…
ಲೇಖಕ: admin
ಮಡಿಕೇರಿ ಮಾ.30 NEWS DESK : ವಿದ್ಯಾರ್ಥಿಗಳು ತಾವು ಶಿಕ್ಷಣ ಪಡೆದ ಸಂಸ್ಥೆಯ ಮೂಲ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಮತ್ತು ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಶ್ರೇಷ್ಠತೆಯನ್ನು ಸಾಧಿಸಲು ಶ್ರಮಿಸಬೇಕೆಂದು ಸೈನಿಕ ಶಾಲೆಗಳು, ರಾಷ್ಟ್ರೀಯ ಮಿಲಿಟರಿ ಶಾಲೆಗಳು ಮತ್ತು ಆರ್ಐಎಂಸಿ ನಿರ್ದೇಶಕರಾದ ಕೆ.ವಿ.ಅಜಿತ್ ಕರೆ ನೀಡಿದರು. ಕೂಡಿಗೆ ಕೊಡಗು ಸೈನಿಕ ಶಾಲೆಗೆ ತಮ್ಮ ಚೊಚ್ಚಲ ಭೇಟಿ ನೀಡಿದ ಅಜಿತ್ ಅವರು, ಈ ಸಂದರ್ಭ ಆಯೋಜಿತ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಸೈನಿಕ ಶಾಲೆಯ ವಿದ್ಯಾರ್ಥಿಗಳು ಉನ್ನತ ಗುರಿಗಳನ್ನು ತಲುಪುವ ನಿಟ್ಟಿನಲ್ಲಿ ತಮಗೆ ದೊರಕುವ ಯಾವುದೇ ಅವಕಾಶವನ್ನು ವ್ಯರ್ಥ ಮಾಡುವುದಿಲ್ಲ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಯುಪಿಎಸ್ಸಿ, ಎನ್ಡಿಎ ಪರೀಕ್ಷೆಗಳು, ಬೋರ್ಡ್ ಪರೀಕ್ಷೆ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸೈನಿಕ ಶಾಲಾ ವಿದ್ಯಾರ್ಥಿಗಳು ಸಾಧಿಸಿದ ಅಭೂತಪೂರ್ವ ಯಶಸ್ಸನ್ನು ಅವರು ಶ್ಲಾಘಿಸಿದರು. ಕೊಡಗು ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್ ಅವರು, ಶಾಲೆಗೆ ಭೇಟಿಯನ್ನಿತ್ತ ಕೆ.ವಿ.ಅಜಿತ್ ಅವರಿಗೆ ಧನ್ಯವಾದ ಅರ್ಪಿಸಿ, ಶಾಲೆಯಲ್ಲಿ ಕೈಗೊಳ್ಳಲಾದ ವಿವಿಧ…
ಮಡಿಕೇರಿ ಮಾ.30 NEWS DESK : ಬೇತ್ರಿ ಮುಕ್ಕಾಟಿರ ಕುಟುಂಬಸ್ಥರ ವತಿಯಿಂದ ಕೊಡವ ಕುಟುಂಬಗಳ ನಡುವೆ ಏ.3 ರಿಂದ ಮತ್ತು ಮೇ 1 ರವರೆಗೆ ಮೂರ್ನಾಡು ಹಾಗೂ ಅರಮೇರಿಯಲ್ಲಿ 24ನೇ ವರ್ಷದ ‘ಮುಕ್ಕಾಟಿರ ಕ್ರಿಕೆಟ್ ನಮ್ಮೆ-2026’ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇತ್ರಿ ಮುಕ್ಕಾಟಿರ ಕುಟುಂಬದ ವಕ್ತಾರ ರವಿ ಚಿಯಣ್ಣ ಹಾಗೂ ಗೌರವ ಕಾರ್ಯದರ್ಶಿ ಭಜನ್ ಬೋಪಣ್ಣ ಅವರು ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದರು. ಮುಕ್ಕಾಟಿರ ಕ್ರಿಕೆಟ್ ನಮ್ಮೆಯಲ್ಲಿ ಸೆಣಸಾಡಲು ದಾಖಲೆಯ ಒಟ್ಟು 289 ಕೊಡವ ಕುಟುಂಬ ತಂಡಗಳು ಹೆಸರು ನೋಂದಾಯಿಸಿಕೊಂಡಿವೆ. ಮೂರ್ನಾಡು ವಿದ್ಯಾ ಸಂಸ್ಥೆಯ ಲಾಲು ಮುದ್ದಯ್ಯ ಕ್ರೀಡಾಂಗಣ, ಸರಕಾರಿ ಶಾಲಾ ಮೈದಾನ ಹಾಗೂ ಅರಮೇರಿ ಕಳಂಚೇರಿ ಶಾಲಾ ಮೈದಾನದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಆರು ಓವರ್ ನ ಪಂದ್ಯಾವಳಿ ಇದಾಗಿದ್ದು, ಪ್ರತಿದಿನ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಮಹಿಳಾ ಕ್ರಿಕೆಟ್ ಗೆ ಈಗಾಗಲೇ 44 ತಂಡಗಳು ಹೆಸರು ನೋಂದಾಯಿಸಿಕೊಂಡಿದ್ದು, ನೋದಣಿಗೆ ಏ.4 ರವರೆಗೆ ಅವಕಾಶವಿರುವುದರಿಂದ ಮತ್ತಷ್ಟು…
ಮಡಿಕೇರಿ ಮಾ.30 NEWS DESK : ಕೊಡಗು ಜಿಲ್ಲಾ ಮೊಗೇರ ಸಮಾಜ ಸೇವಾ ಸಮಾಜದ ವತಿಯಿಂದ 10ನೇ ವರ್ಷದ ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏ.18 ಮತ್ತು 19 ರಂದು ನಡೆಯಲಿದೆ ಎಂದು ಸಮಾಜದ ಗೌರವಾಧ್ಯಕ್ಷ ಪಿ.ಎಂ.ರವಿ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎರಡು ದಿನಗಳ ಕಾಲ ನಡೆಯುವ ಕ್ರೀಡಾಕೂಟದ ಕುರಿತು ಮಾಹಿತಿ ನೀಡಿದರು. ಕೊಡಗನ್ನು ಒಳಗೊಂಡಂತೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಮತ್ತು ಕಾಸರಗೋಡು ಜಿಲ್ಲಾ ವ್ಯಾಪ್ತಿಯ ಮೊಗೇರ ಬಾಂಧವರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾಜ ಬಾಂಧವರನ್ನು ಒಗ್ಗೂಡಿಸುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮೊಗೇರ ಸಮಾಜದ ಪ್ರತಿಭಾವಂತರನ್ನು ಗುರುತಿಸುವ ಉದ್ದೇಶದಿಂದ ಕ್ರೀಡಾಕೂಟವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದರು. *60 ತಂಡಗಳ ನೋಂದಣಿ* ರಾಜ್ಯ ಮಟ್ಟದ ಕ್ರೀಡಾಕೂಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಈಗಾಗಲೆ 60 ತಂಡಗಳು ನೋಂದಣಿ ಮಾಡಿಕೊಂಡಿವೆ. 4 ಓವರ್ಗಳಿಗೆ ಸೀಮಿತವಾಗಿ ಪಂದ್ಯಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಏ.18ರಂದು ಬೆಳಗ್ಗೆ…
ಮಡಿಕೇರಿ ಮಾ.30 NEWS DESK : ಮಡಿಕೇರಿ ನಗರ ಆಟೋ ಮಾಲೀಕ ಚಾಲಕರ ಸಂಘದ ವತಿಯಿಂದ ಏ.5 ರಿಂದ ಮೂರು ದಿನಗಳ ಕಾಲ ಕ್ರೀಡಾಕೂಟ ಹಾಗೂ ಏ.11 ರಂದು ಡ್ಯಾನ್ಸ್ ಮೇಳ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಟೋ ಮಾಲೀಕ ಚಾಲಕರ ಸಂಘದ ಜಿಲ್ಲಾಧ್ಯಕ್ಷ ಡಿ.ಹೆಚ್.ಮೇದಪ್ಪ ಅವರು ವಿವಿಧ ಕ್ರೀಡಾ ಸ್ಪರ್ಧೆಗಳು ಹಾಗೂ ಆಕರ್ಷಕ ಡ್ಯಾನ್ಸ್ ಮೇಳದ ಕುರಿತು ಮಾಹಿತಿ ನೀಡಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಖಡ್ಡಾಯವಾಗಿ ಸ್ಥಳೀಯ ಆಟೋ ಸಂಘಟನೆಗಳಲ್ಲಿ ಸದಸ್ಯರಾಗಿರುವ ಕೊಡಗಿನ ಆಟೋ ಚಾಲಕರಿಗೆ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈಗಾಗಲೇ 16ತಂಡಗಳು ಹೆಸರು ನೋಂದಾಯಿಸಿಕೊಂಡಿವೆ. ಉದ್ಘಾಟನಾ ಪಂದ್ಯದಲ್ಲಿ 5 ಓವರ್ ಗಳಿಗೆ ಸೀಮಿತವಾಗಿ ಪೊಲೀಸ್ ಇಲಾಖಾ ಸಿಬ್ಬಂದಿಗಳು, ವಕೀಲರು ಹಾಗೂ ವೈದ್ಯರ ತಂಡವನ್ನು ನಿರೀಕ್ಷಿಸಲಾಗಿದೆ. ವಿಜೇತ ತಂಡಕ್ಕೆ ವಿನ್ನರ್ ಮತ್ತು ರನ್ನರ್ ಟ್ರೋಫಿ ನೀಡಲಾಗುವುದು. ಆಟೋ ಚಾಲಕರ ನಡುವೆ ನಡೆಯುವ ಪಂದ್ಯಾವಳಿಯ ವಿಜೇತ ತಂಡಕ್ಕೆ 40ಸಾವಿರ ರೂ. ನಗದು ಮತ್ತು ಟ್ರೋಫಿ ಹಾಗೂ…
ಮಡಿಕೇರಿ ಮಾ.30 NEWS DESK : ಮಾಯಮುಡಿಯಲ್ಲಿ ಆಯೋಜನೆಗೊಂಡ ಎಂಪಿಎಲ್ ಸೀಸನ್ 1 ಕ್ರಿಕೆಟ್ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಮಾಯಮುಡಿ ಶಾಲಾ ಮೈದಾನದಲ್ಲಿ ಆಯೋಜನೆಗೊಂಡ ಕ್ರಿಕೆಟ್ ಪಂದ್ಯಾವಳಿಗೆ ಬ್ಯಾಟ್ ಬಿಸುವ ಮೂಲಕ ಚಾಲನೆ ನೀಡಿ, ಶುಭ ಕೋರಿದರು. ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪ್ಪುಡೀರ ಅರುಣ್ ಮಾಚಯ್ಯ, ಬ್ಲಾಕ್ ಅಧ್ಯಕ್ಷರಾದ ಮಿದೇರಿರ ನವೀನ್, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರಾದ ಟಾಟು ಮೊಣ್ಣಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಾನಂಡ ಪ್ರತ್ಯು, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಆಲಿರ ರಶೀದ್, ಪಕ್ಷದ ಪ್ರಮುಖರು ಅಜ್ಜಿಕುಟ್ಟಿರ ಪೊನ್ನು, ಯಸ್ವಿನ್,ಸಿದ್ದು ನಾಚಪ್ಪ, ಮಚ್ಚಮಾಡ ಮನು,ಅಜ್ಜಿಕುಟ್ಟಿರ ಗಿರೀಶ್, ಮನು, ಹಾಗೂ ಕಾರ್ಯಕ್ರಮ ಆಯೋಜಕರು, ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಮಾ.30 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಹಿಂದಿ ವಿಭಾಗ ಮತ್ತು ಕೇಂದ್ರೀಯ ಹಿಂದಿ ಸಂಸ್ಥಾನ, ಆಗ್ರಾದ ಪ್ರಾದೇಶಿಕ ಕೇಂದ್ರ ಮೈಸೂರು ಇವರ ಸಹ ಭಾಗಿತ್ವದಲ್ಲಿ 12 ದಿನಗಳ “ಸಂಚೇತನಾ ಶಿಬಿರ” ನಡೆಯಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅವರು ವಿದ್ಯಾರ್ಥಿಗಳ ಪ್ರತಿಭೆ ಅನಾವರಣ, ಭಾಷೆಯ ಕಲಿಕೆ ಮತ್ತು ವಿವಿಧ ಅವಕಾಶಗಳ ಕುರಿತು ಮಾಹಿತಿ ಪಡೆಯಲು 12 ದಿನಗಳ ಈ ಶಿಬಿರ ಹೆಚ್ಚು ಸಹಕಾರಿಯಾಗಿದೆ ಎಂದರು. ಕೇಂದ್ರೀಯ ಹಿಂದಿ ಸಂಸ್ಥಾನದ ಪ್ರಾದೇಶಿಕ ಕೇಂದ್ರ ಮೈಸೂರಿನ ನಿರ್ದೇಶಕ ಪ್ರೊ.ಯೋಗೇಂದ್ರ ಮಿಶ್ರ ಅವರು ಕಾರ್ಯಕ್ರಮದ ಧ್ಯೇಯೋದ್ದೇಶ ಹಾಗೂ ವಿದ್ಯಾರ್ಥಿಗಳು ಕಲಿಯಬೇಕಾದ ವಿಷಯಗಳನ್ನು ವಿವರಿಸಿದರು. ಕೇಂದ್ರೀಯ ಹಿಂದಿ ಸಂಸ್ಥಾನ ಆಗ್ರಾ ನಿರ್ದೇಶಕ ಪ್ರೊ.ವಿನಯ ಬಾಬುರಾವ್ ಕುಲಕರ್ಣಿ ಆನ್ ಲೈನ್ ಮೂಲಕ ಮಾತನಾಡಿ ಶುಭ ಹಾರೈಸಿದರು. ಫೀ.ಮಾ.ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲ ಪ್ರೊ.ಮೇಜರ್ ಡಾ.ರಾಘವ ಬಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ…
ಮಡಿಕೇರಿ ಮಾ.30 NEWS DESK : ಸಿದ್ದಾಪುರ ಗ್ರಾಮದ ಕರಡಿಗೋಡಿನ ಶ್ರೀ ಬಸವೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟೆ ನೀಡಿ ವಾರ್ಷಿಕ ಉತ್ಸವದಲ್ಲಿ ಪಾಲ್ಗೊಂಡರು. ಉತ್ಸವದ ಸಂದರ್ಭದಲ್ಲಿ ಶ್ರೀ ದೇವರ ಸನ್ನಿಧಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ, ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭ ವಲಯ ಅಧ್ಯಕ್ಷರಾದ ಪ್ರತೀಶ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷರಾದ ಕುಲಚಂಡ ಪ್ರಮೋದ್ ಗಣಪತಿ, ಪಕ್ಷದ ಮುಖಂಡರು ಸೂರಜ್ ಹೊಸೂರು, ಕುಂಡಚ್ಚಿರ ಮಂಜು ದೇವಯ್ಯ, ಮಲ್ದಾರೆ ಪಂಚಾಯಿತಿ ಅಧ್ಯಕ್ಷರು ಮಾಲತಿ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಮಾ.30 NEWS DESK : ಕೊಡಗು ಜಿಲ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ವಿ. ರೈ ಪುನರಾಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಬಿ.ಡಿ. ಜಗದೀಶ್ ರೈ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಆಡಳಿತ ಮಂಡಳಿಗೆ ಪದಾಧಿಕಾರಿಗಳು ಹಾಗೂ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು. ಗೌರಧ್ಯಕ್ಷರಾಗಿ ಬಿ.ಬಿ. ಐತಪ್ಪ ರೈ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರತ್ನಾಕರ ರೈ, ಸದಾಶಿವ ರೈ, ಲೀಲಾಧರ ರೈ, ಜನಾರ್ಧನ ಶೆಟ್ಟಿ ಮತ್ತು ಸದಾನಂದ ರೈ, ಖಜಾಂಚಿಯಾಗಿ ಪ್ರಮೋದ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿಯಾಗಿ ಅಪ್ಪು ಬಾಲಕೃಷ್ಣ ರೈ, ಸಹಕಾರ್ಯದರ್ಶಿಗಳಾಗಿ ಬಿ.ಸಿ. ಹರೀಶ್ ರೈ ಮತ್ತು ಮನೋಜ್ ಶೆಟ್ಟಿ, ಸಹ ಖಜಾಂಚಿಯಾಗಿ ಜಗನ್ನಾಥ್ ರೈ ಮೂರ್ನಾಡು ಅವರನ್ನು ಆಯ್ಕೆ ಮಾಡಲಾಗಿದೆ. ಕ್ರೀಡಾ ಸಮಿತಿಯ ಅಧ್ಯಕ್ಷರಾಗಿ ಶರತ್ ಶೆಟ್ಟಿ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾಗಿ ಪ್ರತಿಮಾ ಹರೀಶ್ ರೈ, ಸ್ವಚ್ಛತಾ ಆಂದೋಲನದ ಸಂಚಾಲಕರಾಗಿ ನಗರಸಭಾ ಸದಸ್ಯ ಅರುಣ್ ಶೆಟ್ಟಿ, ಮಾಧ್ಯಮ ಸಂಯೋಜಕರಾಗಿ ಹೇಮಂತ್ ಕುಮಾರ್ ಶೆಟ್ಟಿ, ಸಾಮಾಜಿಕ ಜಾಲತಾಣ ಸಂಯೋಜಕರಾಗಿ ಕಿಶೋರ್ ರೈ…
ಮಡಿಕೇರಿ NEWS DESK ಮಾ.30 : ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯದ “ಸಂಘ” ಕ್ಷೇತ್ರದ ಮಾದರಿಯಲ್ಲೇ ಆದಿಮಸಂಜಾತ ಕೊಡವ ಸಮುದಾಯಕ್ಕೆ ಭಾರತದ ಸಂಸತ್ತು ಮತ್ತು ಕರ್ನಾಟಕ ವಿಧಾನಸಭೆ ಎರಡರಲ್ಲೂ ಪ್ರತ್ಯೇಕ ಪ್ರಾತಿನಿಧ್ಯವನ್ನು ನೀಡಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಏ.2 ರಂದು ಮಡಿಕೇರಿಯಲ್ಲಿ ಕೊಡವ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗುರುವಾರ ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸತ್ಯಾಗ್ರಹ ನಡೆಸಿ ಭಾರತದ ರಾಷ್ಟçಪತಿ, ಪ್ರಧಾನಮಂತ್ರಿ, ಕೇಂದ್ರ ಕಾನೂನು ಮಂತ್ರಿ ಹಾಗೂ ಭಾರತದ ಚುನಾವಣಾ ಆಯೋಗಕ್ಕೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ನೀಡಲಾಗುವುದು ಎಂದು ಹೇಳಿದ್ದಾರೆ.ಕೊಡವರು ಪ್ರಕೃತಿಯ ಆರಾಧಕರು, ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ಇವರು ಆದಿಮಸಂಜಾತ ಸಮುದಾಯದವರಾಗಿದ್ದು, ಭಾರತದ ಪ್ರಜಾಪ್ರಭುತ್ವ ರಚನೆಯಲ್ಲಿ ತಮ್ಮ ಅಸ್ಮಿತೆಯನ್ನು ಉಳಿಸಿಕೊಳ್ಳಲು ವಿಶೇಷ ಪ್ರಾತಿನಿಧ್ಯದ ಅಗತ್ಯವಿದೆ. ಈ “ವರ್ಚುವಲ್ ಕ್ಷೇತ್ರ” ವು ಯಾವುದೇ ನಿರ್ದಿಷ್ಟ ಭೌಗೋಳಿಕ ಗಡಿಗಳನ್ನು ಹೊಂದಿರುವುದಿಲ್ಲ. 1958 ರಲ್ಲಿ…






