ವಿರಾಜಪೇಟೆ NEWS DESK ಫೆ.12 : ವಿದ್ಯಾರ್ಥಿಗಳಲ್ಲಿ “ವಿವಿಧತೆಯಲ್ಲಿ ಏಕತೆ”ಯ ಮಹತ್ವವನ್ನು ಬೆಳೆಸುವ ಉದ್ದೇಶದಿಂದ ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ ನರ್ಸರಿ ವಿಭಾಗದ ವಿದ್ಯಾರ್ಥಿಗಳಿಗೆ ಜನಾಂಗೀಯ ದಿನವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಈ ಒಂದು ಕಾರ್ಯಕ್ರಮದಲ್ಲಿ ಪೋಷಕರು ತಮ್ಮ ಮಕ್ಕಳೊಂದಿಗೆ ಸಾಂಪ್ರದಾಯಿಕ ಉಡುಗೆ ಯನ್ನು ತೊಟ್ಟು ಬಹಳ ಉತ್ಸಾಹದಿಂದ ಭಾಗವಹಿಸಿ, ಪೋಷಕರೇ ತಯಾರಿಸಿ ತಂದಿದ್ದ ವಿವಿಧ ರೀತಿಯ ತಿಂಡಿ ತಿನಿಸುಗಳನ್ನು ಹಂಚಿ ಪರಸ್ಪರ ಸಂತೋಷವನ್ನು ವ್ಯಕ್ತಪಡಿಸಿದರು. ಈ ಒಂದು ಸಂದರ್ಭದಲ್ಲಿ ಪೋಷಕರಿಗೆ ಮನೋರಂಜನ ಕ್ರೀಡೆಯನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಲಾಯಿತು. ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮಾ ನ್ ಸುದೇಶ್ ಬಿ.ಎಸ್, ಕಾರ್ಯದರ್ಶಿಯವರಾದ ಶ್ರೀಮಾನ್ ವಿನೋದ್ ಪಿ.ಎನ್, ಮುಖ್ಯ ಶಿಕ್ಷಕಿ ಪಾರ್ವತಿ ಪಿ.ಯು, ಸಂಯೋಜಕಿ ಅಮೃತ ಅರ್ಜುನ್, ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಸಹ ಶಿಕ್ಷಕಿ ಶ್ರೀಮತಿ ಲೀನಾ ಹಾಗೂ ಶ್ರೀಮತಿ ಗಂಗಾ ನೆರವೇರಿಸಿದರು.
ಲೇಖಕ: admin
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು k ಕಲೋತ್ಸವ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾದ ಹನಿಯ ಎ ಚಿತ್ರಕಲೆ ಸ್ಪರ್ಧೆಯಲ್ಲಿ ಹಾಗೂ ಬೋವ್ವೆರಿಯಂಡ ಹನ್ಸಿಕ ಪೊನ್ನಪ್ಪ ಭರತನಾಟ್ಯ ಸ್ಪರ್ಧೆಯಲ್ಲಿ ಉತ್ತಮ ರೀತಿಯ ಪ್ರದರ್ಶನವನ್ನು ನೀಡಿ ನಾಲ್ಕನೇ ಸ್ಥಾನ ಗಳಿಸಿರುತ್ತಾರೆ. ಇವರಿಗೆ ಸಮಾಧಾನಕರ ಬಹುಮಾನದೊಂದಿಗೆ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಯಿತು. ತಮ್ಮ ಅದ್ಭುತ ಪ್ರತಿಭೆಯಿಂದ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮಾನ್ ಸುಧೇಶ್ ಬಿ. ಎಸ್, ಕಾರ್ಯದರ್ಶಿಯರಾದ ಶ್ರೀಮಾನ್ ವಿನೋದ್ ಪಿ. ಎನ್, ಮುಖ್ಯ ಶಿಕ್ಷಕಿಯಾದ ಪಾರ್ವತಿ ಯು.ಪಿ, ಸಂಯೋಜಕಿ ಯಾದ ಅಮೃತ ಅರ್ಜುನ್, ಶಿಕ್ಷಕ ಶಿಕ್ಷಕೇತರ ವೃಂದದವರು ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ.
ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ದಾಖಲಾಗಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಇಂದಿನ ದರ ಪಟ್ಟಿ (ಫೆಬ್ರವರಿ 11, 2026) ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಂದಾಜು ದರಗಳು ಹೀಗಿವೆ: 1. ಶುದ್ಧ ಚಿನ್ನ (24 ಕ್ಯಾರೆಟ್): 1 ಗ್ರಾಂ: ₹15,851 (₹27 ಇಳಿಕೆ) 10 ಗ್ರಾಂ: ₹1,58,510 (₹270 ಇಳಿಕೆ) 2. ಆಭರಣ ಚಿನ್ನ (22 ಕ್ಯಾರೆಟ್): 1 ಗ್ರಾಂ: ₹14,530 (₹25 ಇಳಿಕೆ) 10 ಗ್ರಾಂ: ₹1,45,300 (₹250 ಇಳಿಕೆ) 3. ಬೆಳ್ಳಿ ದರ (Silver Rate): ಬೆಳ್ಳಿ ಬೆಲೆಯು ಏರಿಕೆಯೂ ಆಗದೆ, ಇಳಿಕೆಯೂ ಆಗದೆ ತಟಸ್ಥವಾಗಿದೆ. 1 ಕೆಜಿ ಬೆಳ್ಳಿ: ₹2,90,000 ಫೆಬ್ರವರಿ ತಿಂಗಳ ಏರಿಳಿತದ ಹಾದಿ ಫೆಬ್ರವರಿ ತಿಂಗಳ ಆರಂಭದಿಂದ ಚಿನ್ನದ ದರವು ತೀವ್ರ ಏರಿಳಿತಕ್ಕೆ ಸಾಕ್ಷಿಯಾಗಿದೆ: ಗರಿಷ್ಠ ದರ:…
ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಳೆದ ಒಂದು ತಿಂಗಳಿನಿoದ 7 ಜಾನುವಾರುಗಳನ್ನು ಮತ್ತು ಬೆಸಗೂರು ಗ್ರಾಮದಲ್ಲಿ ಒಂದೇ ದಿನ 3 ಹಸುಗಳನ್ನು ಬಲಿ ಪಡೆದ ಹುಲಿ ಇಂದು ಬಂಧಿಯಾಗಿದೆ. ಕೊಡಗು ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಾಲ್ ವೃಷ್ಠಿ ಅವರ ಮಾರ್ಗದರ್ಶನದಲ್ಲಿ ವಿರಾಜಪೇಟೆ ಡಿಸಿಎಫ್ ಜಗನ್ನಾಥ್ ಹಾಗೂ ಎಸಿಎಫ್ ಗೋಪಾಲ್ ಅವರ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗಿನಿಂದಲೇ ಡ್ರೋಣ್ ಕ್ಯಾಮೆರಾ ಬಳಸಿ ಆರ್.ಆರ್.ಟಿ ಸಿಬ್ಬಂದಿಗಳ ಮೂಲಕ ಹುಲಿಯ ಚಲನವಲನ ಪತ್ತೆ ಮಾಡಲು ಕೂಂಬಿAಗ್ ಕಾರ್ಯಾಚರಣೆ ನಡೆಯಿತು. ಕಾರ್ಯಾಚರಣೆಯಲ್ಲಿ ಹೆಚ್.ಡಿ.ಕೋಟೆ ತಾಲ್ಲೂಕಿನ ಬಳ್ಳೆ ಸಾಕಾನೆ ಶಿಬಿರದಿಂದ ಮಹೇಂದ್ರ ಹಾಗೂ ತಿತಿಮತಿಯ ಮತ್ತಿಗೋಡು ಸಾಕಾನೆ ಶಿಬಿರದಿಂದ ಭೀಮ ಆನೆಯನ್ನು ಬಳಸಿಕೊಳ್ಳಲಾಗಿತ್ತು. ಗ್ರಾಮಸ್ಥರ ತೋಟಗಳು ಹಾಗೂ ಕೀರೆಹೊಳೆಯ ಸುತ್ತಮುತ್ತಲಿನಲ್ಲಿ ದ್ರೋಣ್ ಕ್ಯಾಮರಾ ಬಳಸಿ ಹುಲಿಯ ಚಲನವಲನ ಪತ್ತೆ ಕಾರ್ಯಾಚರಣೆ ನಡೆಸಲಾಯಿತು. ಕೀರೆಹೊಳೆಯ…
ನವದೆಹಲಿ/ಬೆಂಗಳೂರು NEWS DESK ಫೆ.11: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳು, ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಆರ್ಥಿಕ ಸುಧಾರಣೆಗಳನ್ನು ವಿರೋಧಿಸಿ ಫೆಬ್ರವರಿ 12ರಂದು (ಗುರುವಾರ) ದೇಶಾದ್ಯಂತ ಬೃಹತ್ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ. ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (AITUC) ಸೇರಿದಂತೆ 10ಕ್ಕೂ ಹೆಚ್ಚು ಪ್ರಮುಖ ಕಾರ್ಮಿಕ ಸಂಘಟನೆಗಳು ಈ ಹೋರಾಟಕ್ಕೆ ಕೈಜೋಡಿಸಿದ್ದು, ಸುಮಾರು 30 ಕೋಟಿ ಕಾರ್ಮಿಕರು ಭಾಗವಹಿಸುವ ನಿರೀಕ್ಷೆಯಿದೆ. ಏಕೆ ಈ ಮುಷ್ಕರ? ಪ್ರಮುಖ ಬೇಡಿಕೆಗಳೇನು? ಕಾರ್ಮಿಕ ಸಂಘಟನೆಗಳ ಪ್ರಕಾರ, ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳಲಿವೆ. ಕಾರ್ಮಿಕ ಸಂಹಿತೆ ರದ್ದತಿ: 29 ಹಳೆಯ ಕಾನೂನುಗಳನ್ನು ಬದಲಿಸಿ ತರಲಾದ 4 ಹೊಸ ಸಂಹಿತೆಗಳನ್ನು ಕೈಬಿಡಬೇಕು. ಖಾಸಗೀಕರಣಕ್ಕೆ ವಿರೋಧ: ಸಾರ್ವಜನಿಕ ವಲಯದ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು. ಕನಿಷ್ಠ ವೇತನ: ಕಾರ್ಮಿಕರಿಗೆ ಗೌರವಯುತ ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು. ರೈತರ ಬೆಂಬಲ: ಕೃಷಿ ಕಾಯ್ದೆಗಳ ತಿದ್ದುಪಡಿ…
ಮಡಿಕೇರಿ NEWS DESK ಫೆ.11 : ಪಿ.ಕೃಷ್ಣೇಗೌಡ ಅವರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ನೂತನ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆಯಾಗಿದ್ದಾರೆ. ಕುಶಾಲನಗರದ ಪ್ರವಾಸಿ ಮಂದಿರದಲ್ಲಿ ನಡೆದ ರಕ್ಷಣಾ ವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಸಂಯೋಜಕರಾಗಿ ತನು ಕಿಶೋರ್ ಕೆ.ಕೆ, ಜಿಲ್ಲಾ ಸಮಿತಿಯ ವಕ್ತಾರರಾಗಿ ಜೀವನ್ ಎಂ.ಜಿ, ಪ್ರಚಾರ ಸಮಿತಿಯ ಜಿಲ್ಲಾ ಉಸ್ತುವಾರಿಯಾಗಿ ಶಶಿಕುಮಾರ್ ಹೆಚ್.ಎಂ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಕಲಾ ಪ್ರಕಾಶ್, ಜಿಲ್ಲಾ ಉಪಾಧ್ಯಕ್ಷರಾಗಿ ಸೋನಿ, ವಿರಾಜಪೇಟೆ ತಾಲೂಕು ಅಧ್ಯಕ್ಷರಾಗಿ ಕಾರ್ಯಪ್ಪ ಎ.ಜಿ, ಉಸ್ತುವಾರಿಯಾಗಿ ರಂಜನ್ ಕೆ.ಐ, ಜಿಲ್ಲಾ ಮಹಿಳಾ ಉಸ್ತುವಾರಿಗಳಾಗಿ ಮಂಜುಳಾ ಹಾಗೂ ಭವ್ಯ ವಿನೋದ್ ಆಯ್ಕೆಯಾದರು. ಜಿಲ್ಲೆಯ ಗಡಿಭಾಗವಾದ ಸಂಪಾಜೆ ಹೋಬಳಿಯಲ್ಲಿ ಸಂಘಟನೆಯನ್ನು ಸದೃಢಗೊಳಿಸುವ ಸಲುವಾಗಿ ಉಸ್ತುವಾರಿಯಾಗಿ ಸುಕುಮಾರ್ ಕೆ.ಕೆ ಅವರನ್ನು ಆಯ್ಕೆ ಮಾಡಲಾಯಿತು. ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ನಾಯಕ ಪಿ.ಕೃಷ್ಣೇಗೌಡ ಅವರು ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು. ಕನ್ನಡ ನಾಡು, ನುಡಿ, ನೆಲ ಜಲದ ಉಳಿವಿಗಾಗಿ ಮತ್ತು…
ಮಡಿಕೇರಿ, NEWS DESK ಫೆ.11 :-ಆಹಾರ ಭದ್ರತಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷಾ್ಠನಗೊಳಿಸುವಂತೆ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಎಚ್.ಕೃಷ್ಣ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಆಹಾರ ಇಲಾಖೆ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ದುರುಪಯೋಗ ಆಗದಂತೆ ತಡೆಯಬೇಕು. ಮಧ್ಯಾಹ್ನದ ಉಪಹಾರ ಯೋಜನೆಯನ್ನು ವಿದ್ಯಾರ್ಥಿಗಳಿಗೆ ಸರಿಯಾಗಿ ತಲುಪಿಸಬೇಕು. ಪೂರಕ ಪೌಷ್ಠಿಕ ಆಹಾರ ವಿತರಿಸಬೇಕೆಂದು ಸೂಚಿಸಿದರು. ಜಿಲ್ಲೆಯ ಹಾಡಿಗಳಲ್ಲಿರುವ ಮಕ್ಕಳಿಗೆ ಗುಣಮಟ್ಟದ ಪೌಷ್ಠಿಕ ಆಹಾರ ಪೂರೈಸಬೇಕು. ಅಪೌಷ್ಠಿಕತೆ ಉಂಟಾಗದಂತೆ ಗಮನ ಹರಿಸುವುದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಕರ್ತವ್ಯ ಆಗಿದೆ ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಸ್ಪಷ್ಟ ನಿರ್ದೇಶನ ನೀಡಿದರು. ಅಪೌಷ್ಠಿಕತೆ ಹೋಗಲಾಡಿಸುವ ನಿಟ್ಟಿನಲ್ಲಿ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿ ಪಡಿತರ ವಿತರಿಸುತ್ತಿದೆ. ಇವುಗಳ ಸಮರ್ಪಕ ಬಳಕೆ ಆಗಬೇಕು ಎಂದು ಕೃಷ್ಣ ಅವರು ಹೇಳಿದರು. ದುರ್ಬಲ ವರ್ಗಗಳಿಗೆ ಸರ್ಕಾರದ ಕಾರ್ಯಕ್ರಮ ತಲುಪಿಸುವುದು ಅತೀ ಮುಖ್ಯವಾಗಿದೆ. ವಿದ್ಯಾರ್ಥಿ…
ಮಡಿಕೇರಿ, NEWS DESK ಫೆ.11:-ಹಲವು ದಶಕಗಳಿಂದ ಅರಣ್ಯ/ ಸರ್ಕಾರಿ ಭೂಮಿ ಅನುಭವಿಸಿಕೊಂಡು ಬಂದಿರುವ ಆದಿವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆಯನ್ನು ಹೆಚ್ಚಿನ ಕಾಳಜಿಯಿಂದ ತಲುಪಿಸುವಂತಾಗಬೇಕು ಎಂದು ಕೇಂದ್ರ ಬುಡಕಟ್ಟು ಮಂತ್ರಾಲಯದ ಅಧಿಕಾರಿ ಗಿರಿಧರ್ ಅವರು ತಿಳಿಸಿದ್ದಾರೆ. ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ತಲುಪಿಸುವ ಬಗ್ಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ ಮಾನ್ಯ ಮಾಡುವ ಸಂಬಂಧ 2006, 2007 ಮತ್ತು 2008 ನಿಯಮ ಮತ್ತು ತಿದ್ದುಪಡಿಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ, ಆದಿವಾಸಿಗಳಿಗೆ ಸೌಲಭ್ಯಗಳನ್ನು ತಲುಪಿಸಬೇಕು ಎಂದು ಅವರು ವಿವರಿಸಿದರು. ಗ್ರಾಮ ಮಟ್ಟದಲ್ಲಿನ ಅಧಿಕಾರಿಗಳು ಅರ್ಹ ಬುಡಕಟ್ಟು ಜನಾಂಗದವರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಸೌಲಭ್ಯ ತಲುಪಿಸಬೇಕು. ಯಾವುದೇ ಕಾರಣಕ್ಕೂ ಸತಾಯಿಸಬಾರದು. ಇತರರಂತೆ ಬದುಕಲು ಅವಕಾಶ ಮಾಡಬೇಕು ಎಂದು ಅವರು ನುಡಿದರು. ಗ್ರಾಮ ಅರಣ್ಯ ಸಮಿತಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪ…
ಮಡಿಕೇರಿ, NEWS DESK ಫೆ.11 : ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ಆಗಮಿಸುವ ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲಿನ ವ್ಯವಸ್ಥೆಯಿಂದ ಮುಕ್ತಿ ನೀಡಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಜಿಲ್ಲಾ ಸರ್ಜನ್ ನಂಜುAಡಯ್ಯ ಅವರಿಗೆ ಮನವಿ ಸಲ್ಲಿಸಿತು. ಜಿಲ್ಲಾಸ್ಪತ್ರೆಯ ಕಚೇರಿಯಲ್ಲಿ ಜಿಲ್ಲಾ ಸರ್ಜನ್ ಅವರನ್ನು ಭೇಟಿಯಾದ ಎಸ್ಡಿಟಿಯು ಪ್ರಮುಖರು ಅನಾರೋಗ್ಯದಿಂದ ಬಳಲುವ ಕಾರ್ಮಿಕರು ಆಸ್ಪತ್ರೆಗೆ ಬಂದಾಗ ತಕ್ಷಣ ಚಿಕಿತ್ಸೆ ನೀಡಬೇಕು. ಸರತಿ ಸಾಲಿನಲ್ಲಿ ನಿಲ್ಲುವುದರಿಂದ ಮತ್ತು ಬೇಕಾದ ದಾಖಲಾತಿಗಳನ್ನು ತಕ್ಷಣ ನೀಡಲು ತೊಂದರೆಯಾಗುವುದರಿAದ ಕಾರ್ಮಿಕ ವರ್ಗಕ್ಕೆ ವಿನಾಯಿತಿ ನೀಡಬೇಕೆಂದು ಮನವಿ ಮಾಡಿದರು. ಮನವಿ ಸಲ್ಲಿಸಿದ ನಂತರ ಮಾತನಾಡಿದ ಎಸ್ಡಿಟಿಯು ಜಿಲ್ಲಾಧ್ಯಕ್ಷ ಕೆ.ಹೆಚ್.ಅಣ್ಣ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ಎಂ.ಎ ಅವರು ಜಿಲ್ಲಾಸ್ಪತ್ರೆಯಲ್ಲಿ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಯನ್ನು ಮನಗಂಡು ನಾವು ನೀಡಿದ ಮನವಿಗೆ ಜಿಲ್ಲಾ ಸರ್ಜನ್ ಅವರು ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ಅಲ್ಲದೆ ಕಾರ್ಮಿಕ ವರ್ಗಕ್ಕೆ ವಿನಾಯಿತಿ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು. ಮನವಿ ಸಲ್ಲಿಸುವ…
ಮೈಸೂರು, NEWS DESK ಫೆ. 11: ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿ ಹೊರಹೊಮ್ಮುತ್ತಿದೆ. ಇಲ್ಲಿಂದ ದೇಶ-ವಿದೇಶಗಳಿಗೆ ತೆರಳುವವರ ಸಂಖ್ಯೆಯೂ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಮೈಸೂರಿನಲ್ಲಿ ಈಗಿರುವ ಪಾಸ್ಪೋರ್ಟ್ ಸೇವಾ ಕೇಂದ್ರವನ್ನು ತತ್ಕಾಲ್ ಸೇವೆಯನ್ನೂ ಒಳಗೊಂಡಂತೆ ಪೂರ್ಣ ಪ್ರಮಾಣದ ಕೇಂದ್ರವನ್ನಾಗಿ ಮೇರ್ಲರ್ಜೆಗೇರಿಸಬೇಕು ಎಂದು *ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್* ಮನವಿ ಮಾಡಿದ್ದಾರೆ. ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ನಂತರ ಸಂಸದ ಯದುವೀರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮೈಸೂರಿನಲ್ಲಿರುವ ಅಂಚೆ ಕಚೇರಿ ಪಾಸ್ಪೋರ್ಟ್ ಸೇವಾ ಕೇಂದ್ರ (POPSK)ವನ್ನು ತತ್ಕಾಲ್ ಸೇವೆಗಳೊಂದಿಗೆ ಪೂರ್ಣ ಪ್ರಮಾಣದ ಪಾಸ್ಪೋರ್ಟ್ ಸೇವಾ ಕೇಂದ್ರ (PSK)ವನ್ನಾಗಿ ಮೇಲ್ದರ್ಜೆಗೇರಿಸಬೇಕಾದ ಅಗತ್ಯವಿದೆ. ಮೈಸೂರಿನ ಇಟ್ಟಿಗೆಗೂಡಿನಲ್ಲಿರುವ ಪಾಸ್ಪೋರ್ಟ್ ಕಚೇರಿ ಆವರಣಕ್ಕೆ ಸ್ಥಳಾಂತರಿಸಲು ಮನವಿ ಸಲ್ಲಿಸಲಾಗಿದೆ ಎಂದರು. ಮೈಸೂರಿನಲ್ಲಿ ಉನ್ನತ ಶಿಕ್ಷಣ, ಐಟಿ ವಲಯ, ಪ್ರವಾಸೋದ್ಯಮ ಮತ್ತು ವಿದೇಶಗಳಲ್ಲಿ ಉದ್ಯೋಗ ಕ್ಷೇತ್ರ ವಿಸ್ತರಣೆಯಾಗಿದೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಪಾಸ್ಪೋರ್ಟ್ ಸೇವೆಗಳಿಗೆ ಬೇಡಿಕೆ ತೀವ್ರವಾಗಿದೆ…






