ಮಡಿಕೇರಿ ಜೂ.19 : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. ಗಳನ್ನು ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಜಿಲ್ಲೆಯ ಸುಮಾರು 49,582 ಜನ ನೋಂದಣಿಯಾಗಿದ್ದು, ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ ಚಾಲ್ತಿಯಲ್ಲಿದೆ. ಈ ಯೋಜನೆಯ ನೆರವು ಅರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿದೆ. ಇ-ಕೆವೈಸಿ ಮಾಡಿಕೊಂಡ ರೈತರಿಗೆ ಮಾತ್ರ ಮುಂದಿನ ಕಂತು ಬಿಡುಗಡೆ ಮಾಡಲಾಗುವುದು. ರೈತರು http://pmkisan.gov.in ಪೋರ್ಟಲ್ನ ಪಾರ್ಮರ್ಸ್ ಕಾರ್ನರ್ನ ಇ-ಕೆವೈಸಿ ಅವಕಾಶದಡಿ ರೈತನ (ಈಗಾಗಲೇ ಪಿಎಂಕಿಸಾನ್ ಯೋಜನೆಯಡಿ ಫಲಾನುಭವಿಗಳಾಗಿರುವ ಪ್ರತಿಯೊಬ್ಬ) ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ನಂತರ ಮೊಬೈಲ್ಗೆ ಒಟಿಪಿ ಯು ರವಾನೆಯಾಗುತ್ತದೆ. ಹೀಗೆ ಸ್ವೀಕರಿಸಿದ ಒಟಿಪಿಯನ್ನು ಪೋರ್ಟಲ್ನಲ್ಲಿ ದಾಖಲಿಸಿ “ಸಬ್ಮಿಟ್ ಫಾರ್ ಆಥ್ (SUBMIT FOR AUTH) ಎಂಬ…
ಲೇಖಕ: admin
ಮಡಿಕೇರಿ ಜೂ.19 : ಪ್ರಸಕ್ತ (2022-23) ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಿಕ್ಷಕರು/ ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಹೆಚ್ಚುವರಿ ಕೌನ್ಸಿಲಿಂಗ್ ಪ್ರಕ್ರಿಯೆಯು ಜೂ.20, 21 ಮತ್ತು 22 ರಂದು ನಗರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದೆ. ಹೆಚ್ಚುವರಿಯಾದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರುಗಳಿಗೆ ಪೂರ್ವಹ್ನ ಮತ್ತು ಹೆಚ್ಚುವರಿಯಾದ ಪ್ರೌಢಶಾಲಾ ಶಿಕ್ಷಕರುಗಳಿಗೆ ಅಪರಾಹ್ನ ಜೂ.20, 21 ಮತ್ತು 22 ರಂದು ಕೌನ್ಸಿಲಿಂಗ್ ನಡೆಸಲಾಗುತ್ತದೆ. ಹೆಚ್ಚುವರಿಯಾದ ಪ್ರಾಥಮಿಕ ಮತ್ತು ಪೌಢಶಾಲಾ ಶಿಕ್ಷಕರುಗಳು ತಪ್ಪದೇ ಹೆಚ್ಚುವರಿ ಕೌನ್ಸಿಲಿಂಗನಲ್ಲಿ ಹಾಜರಾಗುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ತಿಳಿಸಿದ್ದಾರೆ.
ಮಡಿಕೇರಿ ಜೂ.19 : ಕರ್ನಾಟಕ ರಾಜ್ಯ ಸರ್ಕಾರದ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10 ನೇ ತರಗತಿ) ಗಳಿಗೆ ವಾರ್ಷಿಕ ರೂ.10 ಸಾವಿರ ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡುವ ಯೋಜನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಆಸಕ್ತ ಕ್ರೀಡಾಪಟುಗಳು ಇಲಾಖಾ ಅಧಿಕೃತ ಜಾಲತಾಣ http://sevasindhuservices.karnataka.gov.in ಆನ್ಲೈನ್ ಮೂಲಕ ಜು.31 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು 2022-23 ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10 ನೇ ತರಗತಿ) ಯಲ್ಲಿ ಓದುತ್ತಿರಬೇಕು. ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು 2022 ರ ಏಪ್ರಿಲ್, 1 ರಿಂದ 2023 ರ ಮಾ.31 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ…
ಮಡಿಕೇರಿ ಜೂ.19 : ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಜಿಲ್ಲಾ ಶುಶ್ರೂಷಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಿ.ಐ.ಚಿತ್ರಾವತಿ ಅವರಿಗೆ ಪ್ರತಿಷ್ಟಿತ ಪ್ಲೊರೆನ್ಸ್ ನೈಂಟಿಂಗಲ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಪ್ರೆಸ್ಕ್ಲಬ್ ಆಫ್ ಇಂಡಿಯಾ ವತಿಯಿಂದ ನೀಡುವ ಈ ಪ್ರಶಸ್ತಿಯು ಅತ್ಯುತ್ತಮವಾಗಿ ಸೇವೆ ಸಲ್ಲಿಸುವ ಶುಶ್ರೂಷಕ ಅಧಿಕಾರಿಗಳಿಗೆ ನೀಡಲ್ಪಡುತ್ತದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಬಿ.ಐ.ಚಿತ್ರಾವತಿ ಅವರಿಗೆ ಪ್ರಶಸಿಯನ್ನು ಆಂಧ್ರ ಪ್ರದೇಶದ ರಾಜ್ಯಪಾಲ ಅಬ್ದುಲ್ ನಜೀರ್ ಪ್ರದಾನ ಮಾಡಿದರು. ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ, ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ ಡಾ.ಚಂದ್ರಶೇಖರ್ಶೆಟ್ಟಿ, ಮೇಜರ್ ಜನರಲ್(ನಿವೃತ್ತ) ವಿಪಿಎಸ್ ಬಪುನಿ, ನ್ಯೂಸ್ ಪೇಪರ್ ಆಸೋಸಿಯೇಶನ್ನ ರಾಜ್ಯಾಧ್ಯಕ್ಷ ಗಣೇಶ್ ಕಾಸರಗೋಡು, ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ನೋಂದಣಿ ಅಧಿಕಾರಿ ಡಾ.ಪ್ರಶಾಂತ್ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು. 25 ವರ್ಷಗಳಿಂದ ಶುಶ್ರೂಷಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತ್ತಿರುವ ಬಿ.ಐ.ಚಿತ್ರಾವತಿ ಪ್ರಸ್ತುತ ಎಸ್ಬಿಎ (ತಾಯಿ ಹಾಗೂ ಮಗುವಿನ ಆರೋಗ್ಯ ಸಂರಕ್ಷಣೆ ಯೋಜನೆ) ಕೊಡಗು ಜಿಲ್ಲಾ ತರಬೇತುದಾರರಾಗಿ ಸುಮಾರು 14 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುತ್ತಾರೆ.
ಮಡಿಕೇರಿ ಜೂ.19 : ತಾಳ್ಮೆ, ಸಮಯಪ್ರಜ್ಞೆ ಸಾಧನೆಯ ಮೊದಲ ಹೆಜ್ಜೆ ಆಗಿದೆ. ಇದನ್ನು ವಿದ್ಯಾರ್ಥಿಗಳು ಅರಿತು ತಮ್ಮ ಬದುಕಿನುದ್ದಕ್ಕೂ ಅಳವಡಿಸಿಕೊಂಡರೆ ಯಾವ ಕ್ಷೇತ್ರದಲ್ಲಿ ಬೇಕಾದರೂ ಸಾಧನೆ ಮಾಡಬಹುದು ಎಂದು ಅಂತರಾಷ್ಟ್ರೀಯ ರಗ್ಬಿ ಆಟಗಾರ ಮಾದಂಡ ಪಿ.ತಿಮ್ಮಯ್ಯ ತಿಳಿಸಿದರು. ಮಂಗಳೂರು ವಿಶ್ವವಿದ್ಯಾನಿಲಯ, ಕೊಡಗು ವಿಶ್ವವಿದ್ಯಾನಿಲಯ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವತಿಯಿಂದ ಎರಡು ದಿನಗಳ ಪ್ರತಿಭೋತ್ಸವ ಹಾಗೂ 74ನೇ ಕಾಲೇಜು ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಷ್ಟ್ರದಲ್ಲಿ ಕ್ರೀಡೆಗೆ ಇನ್ನೂ ಹೆಚ್ಚಿನ ಅವಕಾಶ ಕಲ್ಪಿಸಬೇಕಿದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡಾ ಕ್ಷೇತ್ರದಲ್ಲಿ ಗುರುತಿಸಿಕೊಂಡು ಸಾಧಿಸಿದವರಿಗೆ ಭಾರತವು ಹೆಚ್ಚು ಮಾನ್ಯತೆ ನೀಡುತ್ತದೆ ಎಂದರು. ಪದವಿ ಎಂಬುದು ಸಾಮಾನ್ಯ ಹಂತವಲ್ಲ ಪದವಿ ಓದುವಾಗಲೇ ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಾಧಿಸಬೇಕು ಎಂದು ಅವರು ಹೇಳಿದರು. “ಸೋಲು ಪ್ರತಿಯೊಂದು ಸಾಧನೆಗೆ ಮುನ್ನುಡಿ” ವಿದ್ಯಾರ್ಥಿಗಳು ಇದನ್ನರಿತು ಸೋತರು ಮರಳಿ ಪ್ರಯತ್ನ ಮಾಡಬೇಕು. ವಿದ್ಯಾರ್ಥಿಗಳು ತಮ್ಮ ಜೀವನದುದ್ದಕ್ಕೂ ಶಿಸ್ತು, ಸಮಯಪ್ರಜ್ಞೆ ಅಳವಡಿಸಿಕೊಂಡರೆ ಯಾವ ಕ್ಷೇತ್ರದಲ್ಲಿ…
ಮಡಿಕೇರಿ ಜೂ.19 : 2022-23ನೇ ಸಾಲಿನಲ್ಲಿ 7ನೇಹೊಸಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಕಾರಣರಾದ ಶಿಕ್ಷಕರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಂಚಾಯತ್ ಅಧ್ಯಕ್ಷ ರಮೇಶ್, ನಾವು ಉತ್ತಮವಾದ ನಾಗರೀಕರಾಗುವುದನ್ನು ಮುಖ್ಯ ಗುರಿಯನ್ನಾಗಿಸಿಕೊಳ್ಳಬೇಕು. ಇದೇ ಮೊದಲ ಬಾರಿಗೆ ನಮ್ಮ ಶಾಲೆ ಸನ್ಮಾನಕ್ಕೆ ಭಾಜನರಾಗುತ್ತಿರುವುದು ನಮ್ಮ ಜವಾಬ್ದಾರಿಯನ್ನು ಹೆಚ್ಚು ಮಾಡುತ್ತಿದೆ. ಈ ಸನ್ಮಾನ ಪಡೆದುಕೊಂಡು ಸಿಕ್ಕ ಗೌರವವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ನುಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಡಿ.ಎಸ್.ಎಸ್ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ಇತರ ವಿದ್ಯಾರ್ಥಿಗಳು ಸ್ಪೂರ್ತಿಗೊಂಡು ಹೆಚ್ಚಿನ ಸಾಧಿಸುವ ಪ್ರಯತ್ನ ನಡೆಸುವಂತಾಗಲಿ ಎಂದು ದಲಿತ ಸಂಘರ್ಷ ಸಮಿತಿ ಶಿಕ್ಷಕರನ್ನು ಹಾಗೂ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸುತ್ತ ಬರಲಾಗುತ್ತಿದೆ ಎಂದರು. ವಿದ್ಯಾರ್ಥಿಗಳು ದೇಶದ ಶಕ್ತಿ. ಅವರನ್ನು ಯಾವುದೇ ದಶ್ಚಟಗಳಿಗೆ ಬಲಿಯಾಗದಂತೆ ವಿದ್ಯಾರ್ಥಿ ಜೀವನದಲ್ಲೇ ಜಾಗೃತಗೊಳಿಸಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಂದೀಶ್ ಮಾತನಾಡಿ, ವಿದ್ಯಾರ್ಥಿಗಳನ್ನು ಮುನ್ನಲೆಗೆ ತರುವ ಶಿಕ್ಷಕರನ್ನು ಸನ್ಮಾನಿಸಿ ಪ್ರೋತ್ಸಾಹಿಸುವುದು…
ಮಡಿಕೇರಿ ಜೂ.19 : ಕಾರು ಅವಘಡದಲ್ಲಿ ದಕ್ಷಿಣ ಕೊಡಗಿನ ಬಾಡಗರಕೇರಿ ಗ್ರಾಮದ ಯುವಕ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಾಡಗರಕೇರಿ ಗ್ರಾಮದ ಕುಪ್ಪುಡೀರ ಪೊನ್ನು ಮುತ್ತಪ್ಪ ಎಂಬವರ ಮಗ ಪ್ರಖ್ಯಾತ್ ಚಿಣ್ಣಪ್ಪ (21) ಸಾವನ್ನಪ್ಪಿದ ದುರ್ದೈವಿ. ಇಂದು ಮುಂಜಾನೆಯ ನಸುಗತ್ತಲಿನಲ್ಲಿ ನಡೆದ ಅವಘಡದಲ್ಲಿ ಪ್ರಖ್ಯಾತ್ ಚಿಣ್ಣಪ್ಪ ಅವರಿದ್ದ ಕಾರು, ರಸ್ತೆ ಬದಿಯಲ್ಲಿದ್ದ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ.
ಸೋಮವಾರಪೇಟೆ ಜೂ.19 : ಕೊಡಗಿನ ವಿವಿಧ ಆಸ್ಪತ್ರೆಗಳಲ್ಲಿ ಎಂ.ಆರ್.ಐ. ಸ್ಕ್ಯಾನಿಂಗ್ ಘಟಕ ಅಳವಡಿಸುವಂತೆ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಪದಾಧಿಕಾರಿಗಳು ಶಾಸಕ ಡಾ. ಮಂತರ್ಗೌಡ ಅವರಿಗೆ ಮನವಿ ಸಲ್ಲಿಸಿದರು. ಸರ್ಕಾರಿ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಮುಂದಾಗಬೇಕೆಂದು ಒತ್ತಾಯಿಸಿದರು. ಮನವಿ ಸಲ್ಲಿಕೆ ಸಂದರ್ಭ ಸಂಸ್ಥೆಯ ರಾಜ್ಯ ಕಾರ್ಯದರ್ಶಿ ವಿ.ಕೃಷ್ಣ, ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷ ಷಂಶುದ್ಧೀನ್, ಕಾರ್ಯದರ್ಶಿ ರೋನಾಲ್ಡ್, ಪದಾಧಿಕಾರಿ ಶಿರಂಗಾಲದ ಪುರುಷೋತ್ತಮ ಆಚಾರ್ಯ ಹಾಜರಿದ್ದರು.
ಸೋಮವಾರಪೇಟೆ ಜೂ.19 : ಕೆಂಚಮ್ಮನಬಾಣೆಯಲ್ಲಿನ ಶ್ರೀ ಬಲಮುರಿ ಗಣಪತಿ ದೇವಾಲಯದ 21ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ವಾರ್ಷಿಕೋತ್ಸವದ ಅಂಗವಾಗಿ ದೇವಾಲದಲ್ಲಿ ಕಳಶರಾಧನೆ, ಪಂಚಾಮೃತಾಭಿಷೇಕ, ಗಣಹೋಮಗಳು ದೇವಾಲಯದ ಪ್ರದಾನ ಅರ್ಚಕ ಶ್ರೀನಿವಾಸ್ ಶರ್ಮ ಅವರ ಪೌರೋಹಿತ್ಯದಲ್ಲಿ ನಡೆಯಿತು. ಉತ್ಸವದ ಪ್ರಯುಕ್ತ ಗ್ರಾಮದ ಪ್ರತಿ ಬೀದಿಯಲ್ಲಿ ಚಾಮರಾಜನಗರದ ವೀರಭದ್ರೇಶ್ವರ ಕಲಾತಂಡದಿಂದ ವೀರಗಾಸೆ ಕಾಯಕ್ರಮ ನಡೆಯಿತು. ಈ ಸಂದರ್ಭ ನೂತನವಾಗಿ ಆಯ್ಕೆಯಾದ ಮಡಿಕೇರಿ ವಿಧಾನ ಸಭಾಕ್ಷೇತ್ರದ ಶಾಸಕ ಡಾ. ಮಂತರ್ಗೌಡ, ಜಿ.ಪಂ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ದಾನಿಗಳಾದ ಗುಡುಗೂರಿನ ಡಾ.ವೇಣುಗೋಪಾಲ್, ಮಧುವನ ಎಸ್ಟೇಟ್ನ ಮಧುಕರ್ ಭಟ್, ಪಾಲಿಗದ್ದೆ ಎಸ್ಟೇಟ್ನ ಎಚ್.ಪ್ರಸಾದ್, ಬೇಳೂರು ಎಸ್ಟೇಟ್ನ ರಾಣಿ ಪ್ರತಾಪ್ ಅವರನ್ನು ಸನ್ಮಾನಿಸಲಾಯಿತು. ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಕೆ.ಪಿ.ಸೋಮಶೇಖರ್, ಪದಾಧಿಕಾರಿಗಳಾದ ಕೆ.ಎಸ್.ಪ್ರತಾಪ್, ಪಿ.ಈ.ಸುರೇಶ್, ಕೆ.ಬಿ.ರಮೇಶ್, ಬಿ.ಆರ್. ರವಿ., ಎಂ.ಆರ್.ವಿಶ್ವನಾಥ್, ಕೆ.ಆರ್.ಶಿವಕುಮಾರ್ ಹಾಜರಿದ್ದರು.
ಸೋಮವಾರಪೇಟೆ ಜೂ.19 : ಗೌಡಳ್ಳಿ ಗ್ರಾ.ಪಂ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ನಂದಿಗುಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು ಗೌಡಳ್ಳಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಇಂದೂಧರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಆರೋಗ್ಯವಂತರು ಪ್ರತಿ ಮೂರು ತಿಂಗಳಿಗೊಮ್ಮೆ ಯಾವುದೇ ಅಂಜಿಕೆಯಿಲ್ಲದೆ, ರಕ್ತದಾನ ಮಾಡಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ರಕ್ತದಾನಕ್ಕೆ ಮುಂದಾಗಬೇಕು. ರಕ್ತದಾನದಿಂದ ಉತ್ತಮ ಆರೋಗ್ಯವನ್ನು ಹೊಂದಬಹುದು. ದೇಹದಲ್ಲಿ ಹೊಸ ರಕ್ತ ಉತ್ಪಾದನೆ ನಾವೇ ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು. ಮಡಿಕೇರಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ.ಕರುಂಬಯ್ಯ ಮಾತನಾಡಿ, ರಕ್ತಕ್ಕೆ ಪರ್ಯಾಯವಿಲ್ಲ. ಅದಕ್ಕಾಗಿ ಮತ್ತೊಬ್ಬರ ರಕ್ತವನ್ನು ಪಡೆಯಬೇಕಿದೆ. ಒಬ್ಬರು ರಕ್ತದಾನ ಮಾಡಿದಲ್ಲಿ, ಅದು ನಾಲ್ಕು ಜನರಿಗೆ ಉಪಯೋಗಕ್ಕೆ ಬರುವುದು. ಕೆಲವರು ಇಂದಿಗೂ ರಕ್ತದಾನ ಮಾಡಲು ಭಯಪಡುತ್ತಿದ್ದು, ಅಂತವರಲ್ಲಿ ಅರಿವು ಮೂಡಿಸುವ ಅಗತ್ಯ ಇದೆ ಎಂದರು. ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ರಕ್ತಕ್ಕೆ ಬೇಡಿಕೆ ಅಧಿಕವಾಗಿದ್ದು, ತುರ್ತು ಸಂದರ್ಭ ಬೇರೆ ಜಿಲ್ಲೆಯಿಂದಲೂ…






