ಲೇಖಕ: admin

ಮಡಿಕೇರಿ ಜು.18 : ಎಲ್ಲಾ ರಂಗಗಳಲ್ಲಿಯೂ ಬದಲಾವಣೆ ಆಗುತ್ತಿರುವ ದಿನಗಳಲ್ಲಿ ಸಾಹಿತ್ಯ ಕ್ಷೇತ್ರದಲ್ಲಿಯೂ ಬದಲಾವಣೆ ಅನಿವಾಯ೯ವಾಗಿದೆ ಎಂದು ಹಿರಿಯ ಪತ್ರಕತ೯ ಜಿ.ಚಿದ್ವಿಲಾಸ್ ಅಭಿಪ್ರಾಯಪಟ್ಟಿದ್ದಾರೆ. ಮಡಿಕೇರಿಯ ಲಯನ್ಸ್ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿತ  ಉಪನ್ಯಾಸಕಿ ಮತ್ತು ಲೇಖಕಿ ಕೆ.ಜಯಲಕ್ಷ್ಮಿ ವಿರಚಿತ ಚಪ್ಪಾಳೆಗೂ ಬೆಲೆ ಇದೆ ಪುಸ್ತಕವನ್ನು  ಲೋಕಾಪ೯ಣೆ ಮಾಡಿ ಮಾತನಾಡಿದ ಚಿದ್ವಿಲಾಸ್, ಸಮಾಜದಲ್ಲಿನ ಪ್ರತೀ ಕ್ಷೇತ್ರವೂ ಆಧುನಿಕ ದಿನಮಾನಗಳ ಬೇಡಿಕೆಗೆ ತಕ್ಕಂತೆ ಬದಲಾವಣೆ ಆಗುತ್ತಿದೆ. ಎಲ್ಲಾ ರಂಗಗಳಲ್ಲಿಯೂ ಹೊಸತನದ ಗಾಳಿ ಬೀಸುತ್ತಿದೆ. ಸಾಹಿತ್ಯ ಕ್ಷೇತ್ರ ಕೂಡ ಅದಕ್ಕೆ ಹೊರತಾಗಿಲ್ಲ. ಸಾಹಿತ್ಯ ರಂಗದಲ್ಲಿಯೂ ಬದಲಾವಣೆ ಅನಿವಾಯ೯ವಾಗಿದೆ. ಮುಖ್ಯವಾಗಿ ಯುವಪೀಳಿಗೆಯನ್ನು ಆಕಷಿ೯ಸುವಂಥ ಸಾಹಿತ್ಯದ ಅನಿವಾಯ೯ತೆ ಇದೆ. ಮಕ್ಕಳಲ್ಲಿ ಆಸಕ್ತಿ ಸೖಷ್ಟಿಸುವ ಸಾಹಿತ್ಯದ ಆದ್ಯತೆ ಸಾಹಿತಿಗಳದ್ದಾಗಬೇಕಾಗಿದೆ ಎಂದು ಅನಿಸಿಕೆ ವ್ಯಕ್ತಪಡಿಸಿದರು. ಕೊಡಗಿನಲ್ಲಿ ಲೇಖಕರಿಗೆ ಸಾಹಿತ್ಯ ಲೋಕದ ಬದಲಾವಣೆ ಮತ್ತು ಮಹತ್ವದ ಬಗ್ಗೆ ತಿಳುವಳಿಕೆ ಮೂಡಿಸುವ ನಿಟ್ಟಿನಲ್ಲಿ ಸಾಹಿತ್ಯ ಕಮ್ಮಟದ ಅಗತ್ಯವಿದ್ದು ಕನ್ನಡ ಪರ ಸಂಘಸಂಸ್ಥೆಗಳು ಈ ನಿಟ್ಟಿನಲ್ಲಿ ಯೋಜನೆ ರೂಪಿಸುವಂತೆಯೂ ಚಿದ್ವಿಲಾಸ್ ಸಲಹೆ ನೀಡಿದರು. ಕೊಡಗು ಜಿಲ್ಲಾ ಕನ್ನಡ…

Read More

ಮಡಿಕೇರಿ ಜೂ.18 : ಕೊಡವಾಮೆರ ಕೊಂಡಾಟ ಸಂಘಟನೆ ನಡೆಸುವ “ಬಾಳೋಪಾಟ್’ರ ಬಂಬಂಗ” ಕೊಡವ ಕೌಟುಂಬಿಕ ಎರಡನೇ ವಾರ್ಷಿಕ ಬಾಳೋ ಪಾಟ್ ಸ್ಪರ್ಧೆಯಲ್ಲಿ ಚೇನಂಡ ಪ್ರಥಮ ಕನ್ನಿಂಗಂಡ(ಕುಂಬಾರಗಡಿಗೆ) ದ್ವಿತೀಯ ಏಳ್‌ನಾಡ್ ಓಡಿಯಂಡ ತೃತೀಯ ಬಹುಮಾನ ಪಡೆಯಿತು. ಮಡಿಕೇರಿಯ ಕಾಫಿ ಕೃಪ ಸಭಾಂಗಣದಲ್ಲಿ, ಕೊಡವಾಮೆರ ಕೊಂಡಾಟ ಸಂಘಟನೆಯ ಉಪಾಧ್ಯಕ್ಷ ಮಾಳೇಟಿರ ಅಜಿತ್ ಪೂವಣ್ಣ ಅಧ್ಯಕ್ಷತೆಯಲ್ಲಿ, ಸ್ಪರ್ಧಾ ಸಂಚಾಲಕ, ಸಂಘಟನೆಯ ಕಾರ್ಯದರ್ಶಿ ಕುಂuಟಿಜeಜಿiಟಿeಜರ ಗಿರೀಶ್ ಬೀಮಯ್ಯ ನೇತೃತ್ವದಲ್ಲಿ ನಡೆದ ತೀರ್ಪುಗಾರಿಕೆಯಲ್ಲಿ, ಮೊದಲಿಗೆ ಆಡಳಿತ ಮಂಡಳಿ ನಿರ್ದೇಶಕ ಅಜ್ಜಮಕ್ಕಡ ವಿನು ಕುಶಾಲಪ್ಪ ಅವರು ಗುರು ಕಾರೋಣರಿಗೆ ನೇರ್ಚೆ ಕಟ್ಟಿ ಅಕ್ಕಿ ಹಾಕುವ ಮೂಲಕ ಚಾಲನೆ ನೀಡಲಾಯಿತು. ತೀರ್ಪುಗಾರರಾಗಿ ಬಾಳೋ ಪಾಟ್ ತಜ್ಞರಾದ ಕಾಳಿಮಾಡ ಮೋಟಯ್ಯ, ಮುದ್ದಂಡ ದೇವಯ್ಯ, ಚೀಯಕ್‌ಪೂವಂಡ ದೇವಯ್ಯ ಅವರು ಕಾರ್ಯ ನಿರ್ವಹಿಸಿದರು. ಎರಡನೇ ವರ್ಷದ ಸ್ಪರ್ಧೆಯ, ಆರಂಭದಲ್ಲಿ 19ಕುಟುಂಬಗಳು ಹೆಸರು ನೋಂದಾಯಿಸಿ ಕೊಂಡಿದ್ದರಾದರೂ, ಅಂತಿಮವಾಗಿ 7ಕುಟುಂಬಗಳು ಸ್ಪರ್ಧಾ ಕಣದಲ್ಲಿದ್ದವು. ‘ಕಾವೇರಿ ಪಾಟ್ ‘ ವಿಷಯವಾಗಿ 20ನಿಮಿಷಕ್ಕೆ ಮೀರದಂತೆ ಹಾಡಲು ನಿಗದಿ ಪಡಿಸಲಾಗಿತ್ತು. ಹಾಡಿನ ವಿಷಯ,…

Read More

ಮಡಿಕೇರಿ ಜೂ.17 : ಭಾಗಮಂಡಲದ ಸಮೀಪ ಕೋಪಟ್ಟಿಯಲ್ಲಿ ಕಾಡಾನೆಗಳ ದಾಂಧಲೆ ಮಿತಿ ಮೀರಿದೆ. ಗ್ರಾಮದ ವಿವಿಧ ತೋಟಗಳಲ್ಲಿ ಕಾಣಿಸಿಕೊಂಡ ಆರಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಬಾಳೆ, ಅಡಿಕೆ ಮತ್ತಿತರ ಸಸಿಗಳನ್ನು ಧ್ವಂಸ ಮಾಡಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಅಧಿಕಾರಿಗಳು ಗ್ರಾಮಸ್ಥರ ಸಹಕಾರದೊಂದಿಗೆ ಕಾಡಾನೆಗಳನ್ನು ಓಡಿಸುವಲ್ಲಿ ಯಶಸ್ವಿಯಾದರು. ಅರಣ್ಯ ಇಲಾಖೆ ಕಾಡಾನೆ ಉಪಟಳ ತಡೆಗೆ ಶಾಶ್ವತ ಪರಿಹಾರ ಸೂಚಿಸಬೇಕೆಂದು ನಷ್ಟಕ್ಕೊಳಗಾದ ಕೋಪಟ್ಟಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಜೂ.17 :  ಪ್ರಧಾನ ಮಂತ್ರಿ ನರೇಂದ್ರ ಮೋದಿ  ನೇತೃತ್ವದ ಕೇಂದ್ರ ಸರ್ಕಾರವು 9 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ, ಹಾಗೂ ಕೇಂದ್ರ ಸರ್ಕಾರ  ನೀಡಿರುವ  ಅಭಿವೃದ್ಧಿ ಕಾರ್ಯಗಳನ್ನ ಮನೆ ಮನೆಗೆ ತಲುಪಿಸುವ ಅಭಿಯಾನದ ಅಂಗವಾಗಿ ವಿರಾಜಪೇಟೆಯಲ್ಲಿ ಬಿಜೆಪಿ  ಕಾರ್ಯಕರ್ತರ ಸಭೆ ನಡೆಯಿತು. ಈ ಸಂದರ್ಭ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಸರ್ಕಾರದ ಸಾಧನೆ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಮಾಜಿ ಶಾಸಕ  ಕೆ.ಜಿ ಬೋಪಯ್ಯ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು  ಹಾಜರಿದ್ದರು.

Read More

ಸುಂಟಿಕೊಪ್ಪ ಜೂ.17: ಜೂನ್ ತಿಂಗಳಿನಲ್ಲಿ ಮೃಗಶಿರ ಮಳೆ ಬೆಳೆಗಾರರ ರೈತರ ಚಟುವಟಿಕೆಗಳಿಗೆ ಆಶಾದಾಯಕವಾಗಿರುತ್ತದೆ. ಆದರೆ ಈ ವರ್ಷ ಮಳೆ ಬಾರದೆ ಕರಿಮೆಣಸಿನ ಫಸಲಿಗೆ ಹೊಡೆತ ನೀಡಿದೆ. ಭತ್ತದ ಬಿತ್ತನೆಗಾಗಿ ಗದ್ದೆ ಹದ ಮಾಡಿದ ರೈತ ಮಳೆಗಾಗಿ ಆಕಾಶದತ್ತ ನೋಡುವಂತಾಗಿದೆ. ಜೂನ್ ತಿಂಗಳಿನಲ್ಲಿ ಸರಿಯಾಗಿ ಮಳೆ ಬಾರದೆ ಕರಿಮೆಣಸಿನ ಕೊತ್ತು ಬಿಡುವ ಸಕಾಲ ಮಳೆ ಮಾಯವಾಗಿದೆ. ಮುಂದಿನ ವರ್ಷದ ಕರಿಮೆಣಸು ಇಳುವರಿಗೆ ಭಾರೀ ಹಿನ್ನಡೆಯಾಗಲಿದೆ ಎಂದು  ಬೆಳೆಗಾರರು ಕಂಗಾಲಾಗಿದ್ದಾರೆ. ಜೂನ್ ತಿಂಗಳಿನಲ್ಲಿ ಭತ್ತದ ಬಿತ್ತನೆ ಕಾರ್ಯ ಆರಂಭವಾಗಲಿದ್ದು, ಮಳೆ ಸರಿಯಾಗಿ ಬಾರದೆ ಕೃಷಿಕರ ಮೊಗದಲ್ಲಿ ಆತಂಕ ಮೂಡಿದೆ. ಅನಿಸಿಕೆ: ಪ್ರತೀ ವರ್ಷ ಕರಿಮೆಣಸಿನ ಬಳ್ಳಿ 2018 ರ ಮಹಾಮಳೆಯಿಂದ ಹಳದಿ ರೋಗ ಕೊಳೆರೋಗದಿಂದ ನಶಿಸುತ್ತಿದೆ. ಇದಕ್ಕೆ ಮಣ್ಣಿನ ಫಲವತ್ತತೆ ಕಡಿಮೆಯಾಗಿರುವುದೇ ಕಾರಣವಾಗಿದೆ. ವಿಜ್ಞಾನಿಗಳು ಏನೇ ಪರಿಹಾರ ಸೂಚಿಸಿದ್ದರೂ ಕರಿಮೆಣಸಿನ ಬಳ್ಳಿಗೆ ಬರುವ ರೋಗ ತಡೆಯಲು ಸಾಧ್ಯವಾಗುತ್ತಿಲ್ಲ. ಈ ವರ್ಷ ಜೂನ್‍ನಲ್ಲಿ ಮಳೆ ಬಾರದೆ ಇರುವುದರಿಂದ ಕರಿಮೆಣಸು ಗಿಡಕ್ಕೆ ಸಿಗಬೇಕಾದ ಪೌಷ್ಠಿಕತೆ ಕಡಿಮೆಯಾಗಲಿದ್ದು, ಇಳುವರಿ…

Read More

ಮಡಿಕೇರಿ ಜೂ.17 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯುದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ.5 ಸಾವಿರಗಳ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಜುಲೈ, 15 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು www.dom.karnataka.gov.in ಹಾಗೂ ದೂ.ಸಂ.08272-225528/ 220214 ಸಂಪರ್ಕಿಸಬಹುದು ಹಾಗೂ www.dom.karnataka.gov.in ಇಲಾಖಾ ವೆಬ್‍ಸೈಟ್‍ನಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯ ಮಾಹಿತಿ ಪಡೆದು ಸದುಪಯೋಗ ಪಡಿಸಿಕೊಳ್ಳವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ದಿವಾಕರ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.17 : ಪ್ರಸಕ್ತ(2023-24) ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಸೋಮವಾರಪೇಟೆ ತಾಲ್ಲೂಕು ಖ್ಯಾತೆ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸ್‍ಇ) (ಆಂಗ್ಲ ಮಾಧ್ಯಮ) ಇಲ್ಲಿಗೆ ರಸಾಯನ ಶಾಸ್ತ್ರ, ಜೀವಶಾಸ್ತ್ರ ಹಾಗೂ ಗಣಿತ ವಿಷಯಗಳಿಗೆ ಸಂಬಂಧಿಸಿದಂತೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ದೂ.ಸಂ.7676473767/ 9632746411 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.17 : ನಗರದ ನೂತನ ಖಾಸಗಿ ಬಸ್ ನಿಲ್ದಾಣದ ವೃತ್ತಕ್ಕೆ ಸ್ವಾಮಿ ವಿವೇಕಾನಂದರ ಹೆಸರು ಇಡುವುದು ಹಾಗೆಯೇ ಇಂದಿರಾ ಕ್ಯಾಂಟೀನ್ ಬಳಿ ಇರುವ ಬಸ್ ನಿಲ್ದಾಣದ ಉದ್ಯಾನವನದಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪಿಸಲು ನಗರಸಭೆ ತೀರ್ಮಾನಿಸಲಾಗಿದೆ. ಈ ಬಗ್ಗೆ ಸಲಹೆ ಮತ್ತು ಆಕ್ಷೇಪಣೆಗಳು ಇದ್ದಲ್ಲಿ, 30 ದಿನದೊಳಗೆ ಸಕಾರಣ ಮತ್ತು ಸಂಬಂಧಿತ ದಾಖಲೆಗಳೊಂದಿಗೆ ನಗರಸಭೆ ಕಚೇರಿಗೆ ಸಲ್ಲಿಸಲು ಕೋರಿದೆ. ಅವಧಿ ಮೀತಿ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನಗರಸಭೆ ಪೌರಾಯುಕ್ತ ವಿಜಯ್ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.17 : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕುಶಾಲನಗರ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜು ಇವರ ಸಹಯೋಗದಲ್ಲಿ ಜೂ.22 ರಂದು ಬೆಳಗ್ಗೆ 10.30 ಯಿಂದ ಮಧ್ಯಾಹ್ನ 3 ಗಂಟೆ ವರೆಗೆ ಕುಶಾಲನಗರದ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ, ದಿಯಾ ಸಿಸ್ಟಮ್ ಪ್ರೈವೇಟ್ ಲಿಮಿಟೆಡ್ ಮಂಗಳೂರು, ರಾಣಿ ಮದ್ರಾಸ್-ಮೈಸೂರು, ಜಸ್ಟ್ ಡಯಲ್-ಬೆಂಗಳೂರು, ಈಕ್ವಲೈಜರ್ ಆರ್‍ಎಂಸಿ-ಮೈಸೂರು, ಪ್ಯಾಲೆಸ್ ಟೊಯೋಟಾ ಕುಶಾಲನಗರ, ಅಲ್ಫಾ ಟೆಕ್ನಾಲಜಿ-ಮಡಿಕೇರಿ, ಪುಜಿಟೆಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, ಎಸ್‍ಎಲ್‍ಎನ್ ಕಾಫಿ ಪ್ರೈವೇಟ್ ಲಿಮಿಟೆಡ್ ಕೂಡಿಗೆ, ಮ್ಯಾಜಿಕ್ ಬಸ್ ಇಂಡಿಯಾ ಬೆಂಗಳೂರು, ಪರ್ಪಲ್ ಪಾಲ್ಮ್ ರೆಸಾರ್ಟ್ ಮತ್ತು ಸ್ಪಾ-ಕುಶಾಲನಗರ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್ಸೆಸ್ಸೆಲ್ಸಿ ಕ್ಕಿಂತ ಕಡಿಮೆ, ಎಸ್ಸೆಸ್ಸೆಲ್ಸಿ, ಪಿಯುಸಿ,…

Read More

ಮಡಿಕೇರಿ ಜೂ.17 : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ವತಿಯಿಂದ 2023-24ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿದ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ ವಯಾ ಸಿಇಟಿ/ಎನ್‍ಇಇಟಿ(ನೀಟ್) ಮುಖಾಂತರ) ಎಂಬಿಬಿಎಸ್, ಬಿಡಿಎಸ್, ಆಯುಷ್, ಬ್ಯಾಚುಲರ್ ಆಫ್ ಆರ್ಕ್, ಎಂಜಿನಿಯರಿಂಗ್, ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಪಾರ್ಮಸ್ಸಿ, ಅಗ್ರಿಕಲ್ಚರ್ ಸೈನ್ಸ್, ವೆಟರ್ನರಿ ಹಾಗೂ ಫಾರ್ಮ್ ಸೈನ್ಸ್ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲ ನೀಡಲಾಗುತ್ತದೆ. ಸಿಇಟಿ/ಎನ್‍ಇಇಟಿ ಮುಖೇನ ಪ್ರವೇಶ ಪಡೆಯ ಬಯಸುವ ವಿದ್ಯಾರ್ಥಿಗಳಿಗೆ “ ಅರಿವು” ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್‍ಸೈಟ್  https://kmdconline.karnataka.gov.in/ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟೌಟ್ ಪಡೆದು ಕ್ಯೂಆರ್…

Read More