ಬೆಂಗಳೂರು ಜು.19 : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಆರೋಪದಡಿ ಐವರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದು, ಮಾಸ್ಟರ್ ಮೈಂಡ್ ತಲೆಮರೆಸಿಕೊಂಡಿದ್ದಾನೆ. ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಇಂದು ಬೆಳಗ್ಗೆ ಕರ್ಯಾಚರಣೆ ನಡೆಸಿತು. ಬಂಧಿತರಿಂದ ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸಂಭವಿಸಬಹುದಾಗಿದ್ದ ಭಾರೀ ದುರಂತವನ್ನು ಪೊಲೀಸರು ತಪ್ಪಿಸಿದ್ದಾರೆ. ಏಳು ಪಿಸ್ತೂಲ್, 45 ಮದ್ದು ಗುಂಡುಗಳು, ಹನ್ನೆರಡು ಬೇಸಿಕ್ ಸೆಟ್ ಮೊಬೈಲ್ ಫೋನ್, ಡ್ರ್ಯಾಗರ್, ವಾಕಿ ಟಾಕಿ ವಶಕ್ಕೆ ಪಡೆಯಲಾಗಿದೆ. ಬಂಧಿತರು ಬೆಂಗಳೂರು ನಗರದಲ್ಲಿ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ್ದರು. ಕೃತ್ಯಗಳಿಗೆ ವಿದೇಶದಿಂದ ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಸೈಯದ್ ಸುಹೇಲ್, ಉಮರ್, ಜಾನಿದ್, ಮುದಾಸಿರ್ ಹಾಗೂ ಜಾಹಿದ್ ಬಂಧಿತರೆಂದು ಗುರುತಿಸಲಾಗಿದೆ.
ಲೇಖಕ: admin
ಮಡಿಕೇರಿ ಜು.19 : ಸುಮಾರು 5 ಲಕ್ಷ ರೂ. ಮೌಲ್ಯದ ಶುಂಠಿಯನ್ನು ಕಳ್ಳತನ ಮಾಡಿರುವ ಘಟನೆ ಹುಣಸೂರು ತಾಲ್ಲೂಕಿನ ಸಣ್ಣೇನಹಳ್ಳಿಯಲ್ಲಿ ನಡೆದಿದೆ. ಸಣ್ಣೆನಹಳ್ಳಿಯ ಚಂದ್ರೇಗೌಡ ಮತ್ತಿತರ ರೈತರಿಂದ ಒಟ್ಟು 15 ಎಕರೆ ಜಮೀನನ್ನು ಗುತ್ತಿಗೆ ಪಡೆದ ಚೆನ್ನಸೋಗೆಯ ಪ್ರಸನ್ನಕುಮಾರ್, ಹೊಸಕೋಟೆಯ ಶ್ರೀನಿವಾಸ್ ಹಾಗೂ ದೇವೇಂದ್ರ ಎಂಬುವವರು ಶುಂಠಿ ಬೆಳೆದಿದ್ದರು. ಅರ್ಧ ಏಕರೆಯಷ್ಟು ಪ್ರದೇಶದಲ್ಲಿ ಬೆಳೆಯಲಾಗಿದ್ದ ಸುಮಾರು 5 ಲಕ್ಷ ರೂ. ಮೌಲ್ಯದ ಶುಂಠಿಯನ್ನು ರಾತ್ರಿ ವೇಳೆ ಚೋರರು ಕದ್ದೊಯ್ದಿದ್ದಾರೆ. ಶುಂಠಿಗೆ ಉತ್ತಮ ಧಾರಣೆ ಬಂದಿರುವ ಹಿನ್ನೆಲೆ ಕಳ್ಳರು ಶುಂಠಿ ಕಳ್ಳತನಕ್ಕೂ ಮುಂದಾಗಿದ್ದು, ರೈತರಲ್ಲಿ ಆತಂಕ ಮೂಡಿದೆ. ಈ ಬಗ್ಗೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ ಜು.19 : ಜಾನುವಾರುಗಳನ್ನು ಭಕ್ಷಿಸಿ ಅಪಾರ ನಷ್ಟ ಉಂಟು ಮಾಡುವ ಮೂಲಕ ಹುಣುಸೂರು ತಾಲ್ಲೂಕಿನ ವದ್ಲಿಮನುಗನಹಳ್ಳಿ ಗ್ರಾಮದಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದೆ. ಅನೇಕ ಮೇಕೆ ಹಾಗೂ ಬೀದಿ ನಾಯಿಗಳನ್ನು ತಿಂದು ಹಾಕಿದ್ದ ಚಿರತೆಯ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿತು. ಮೂರು ದಿನಗಳ ಹಿಂದೆ ಗ್ರಾಮದ ಕುಮಾರ ನಾಯಕ ಎಂಬುವವರ ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಮೇಕೆಯನ್ನು ಚಿರತೆ ಕೊಂದು ಹಾಕಿತ್ತು. ಉಳಿದ ಮೇಕೆ ಮಾಂಸವನ್ನು ಬೋನಿನಲ್ಲಿಟ್ಟು ಸೆರೆಗಾಗಿ ತಂತ್ರ ರೂಪಿಸಲಾಗಿತ್ತು. ಮಾಂಸ ತಿನ್ನಲು ಬಂದ 4 ವರ್ಷದ ಹೆಣ್ಣು ಚಿರತೆ ಕೊನೆಗೂ ಬಂಧಿಯಾಯಿತು. ಸೆರೆಸಿಕ್ಕ ಚಿರತೆಯನ್ನು ನಾಗರಹೊಳೆ ಉದ್ಯಾನವನಕ್ಕೆ ಸುರಕ್ಷಿತವಾಗಿ ಬಿಡಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: 2021- 22ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಹಾಗೂ 2022- 23ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ 2021 ಮತ್ತು 22 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿ, ಗೌರವಿಸಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸಚಿವರಾದ ಹೆಚ್.ಕೆ ಪಾಟೀಲ್ ಹಾಗೂ ಎನ್.ಎಸ್. ಬೋಸ ರಾಜು, ಪರಿಷತ್ ಸದಸ್ಯರಾದ ಭೋಜೇಗೌಡ, ಟಿ. ಎ. ಶರವಣ, ಮುಖ್ಯ ಸಚೇತಕ ಸಲೀಂ ಅಹ್ಮದ್, ವೈ.ಎ. ನಾರಾಯಣಸ್ವಾಮಿ, ಶಾಸಕ ಕೋಟ ಶ್ರೀನಿವಾಸ ಮೂರ್ತಿ ಮೊದಲಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ನಾಪೋಕ್ಲು ಜು.19 : ಮರಂದೋಡ ಗ್ರಾಮದಲ್ಲಿ ಮರವೊಂದು ಮುರಿದು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಯ ಮೇಲೆ ಬಿದ್ದು ಜನರು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಮರಂದೋಡ ಗ್ರಾಮದ ಕೆರೆತಟ್ ರಸ್ತೆಯ ಸಮೀಪ ನಾಪೋಕ್ಲು – ವಿರಾಜಪೇಟೆ ಮುಖ್ಯರಸ್ತೆಯ ಮೇಲೆ ಮರ ಮುರಿದುಬಿದ್ದಿದ್ದು, ಸ್ಥಳೀಯರಾದ ಗ್ರಾ.ಪಂ ಸದಸ್ಯ ಹರೀಶ್ ಮೊಣ್ಣಪ್ಪ ಮರ ತೆರವುಗೊಳಿಸುವುದರ ಮೂಲಕ ಬಸ್ಸು ಸಂಚಾರಕ್ಕೆ ಅನುವು ಮಾಡಿಕೊಟ್ಟರು. 11 ಕೆ.ವಿ.ವಿದ್ಯುತ್ ತಂತಿಯ ಮೇಲೆ ಮರ ಬಿದ್ದಿದ್ದು ತಂತಿಗಳು ತುಂಡಾಗಿ ಸಮಸ್ಯೆಗೆ ಕಾರಣವಾಗಿತ್ತು. ಬೆಂಗಳೂರಿನಿಂದ ಮಡಿಕೇರಿಗೆ ಬಸ್ಸು ಬರುವ ಸಂದರ್ಭ ತೊಂದರೆ ಆಗುತ್ತಿದ್ದುದನ್ನು ಮನಗಂಡು ಹರೀಶ್ ಮೊಣ್ಣಪ್ಪ ಸಕಾಲದಲ್ಲಿ ಸ್ಥಳಕ್ಕೆ ತೆರಳಿ ಕಟ್ಟಿಂಗ್ ಮಿಷನ್ ನಿಂದ ಮರ ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಹರೀಶ್ ಮೊಣ್ಣಪ್ಪ ಅವರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಜು.19 : ಇತ್ತೀಚಿನ ದಿನಗಳಲ್ಲಿ ಕಾಡುಗಳು ಕ್ಷಿಣಿಸುತ್ತಾ ಕಾಂಕ್ರೀಟ್ ಮಯವಾಗುತ್ತಿದೆ.ಪರಿಸರ ಸಮತೋಲನವನ್ನು ಕಾಪಾಡಿ ಪರಿಸರ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶೌರ್ಯ ಸದಸ್ಯರು ನಡೆಸುತ್ತಿರುವ ಹಣ್ಣಿನ ಗಿಡ ನಾಟಿ ಅಭಿಯಾನ ಶ್ಲಾಘನೀಯ ಎಂದು ಕುಂಜಲಗೇರಿ ಗ್ರಾಮದ ಶ್ರೀ ಈಶ್ವರ ಬೊಟ್ಲಪ್ಪ ದೇವಾಲಯದ ಕಾರ್ಯದರ್ಶಿ ಕುತಂಡ ಬೋಪಯ್ಯ ಹೇಳಿದರು. ಶ್ರೀ ಈಶ್ವರ ಬೊಟ್ಲಪ್ಪ ದೇವಾಲಯದ ಆವರಣದಲ್ಲಿ ನಾಪೋಕ್ಲು ಶೌರ್ಯ ಘಟಕದ ಸದಸ್ಯರು ಆಯೋಜಿಸಲಾಗಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಣ್ಣಿನ ಗಿಡಗಳನ್ನು ನೆಡುವುದರಿಂದ ಪರಿಸರ ರಕ್ಷಣೆಯೊಂದಿಗೆ ಪ್ರಾಣಿ ಪಕ್ಷಿಗಳಿ ಗೆ ಮುಂದಿನ ದಿನಗಳಲ್ಲಿ ಆಹಾರದ ಕೊರತೆ ನೀಗಿಸಿದಂತಾಗುತ್ತದೆ. ತಮ್ಮ ಈ ಸೇವೆಯಿಂದಾಗಿ ಕಾಡು ಪ್ರಾಣಿ ಮತ್ತು ಮಾನವ ಸಂಘರ್ಷಕ್ಕೆ ಕಡಿವಾಣ ಹಾಕಬಲ್ಲದು ಎಂದರು. ನಾಪೋಕ್ಲು ಶೌರ್ಯ ಘಟಕದ ಸಂಯೋಜಕ ಬಾಳೆಯಡ ದಿವ್ಯ ಮಂದಪ್ಪ ಮಾತನಾಡಿ, ಕಳೆದ 3 ವರ್ಷಗಳಿಂದ ನಾನಾ ಕಡೆಗಳಲ್ಲಿ ಗಿಡ ನಾಟಿ ಕಾರ್ಯಕ್ರಮ ನಡೆಸುತ್ತಾ ಬರುತ್ತಿದ್ದೇವೆ, ನೆಟ್ಟ ಗಿಡಗಳು ಚೆನ್ನಾಗಿ ಬೆಳೆದು ಕೆಲವೊಂದು ಗಿಡಗಳಲ್ಲಿ ಹಣ್ಣುಗಳಾಗಿರುವುದು ನಮ್ಮ ಶೌರ್ಯ…
ನಾಪೋಕ್ಲು ಜು.19 : ನಾಪೋಕ್ಲು ಸಮೀಪದ ಬಲ್ಲಮಾವಟಿ ಗ್ರಾ.ಪಂಚಾಯಿತಿ ವ್ಯಾಪ್ತಿಯ ನೆಲಜಿ ಗ್ರಾಮದಲ್ಲಿ ಬೆಳೆಗಾರರ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ಅಪಾರ ಪ್ರಮಾಣದಲ್ಲಿ ಬೆಳೆದಿದ್ದ ಬೆಳೆಗಳನ್ನು ತುಳಿದು ನಾಶಪಡಿಸಿ ನಷ್ಟ ಉಂಟು ಮಾಡಿದೆ. ನೆಲಜಿ ಗ್ರಾಮದ ನಿವಾಸಿ ಎಂ.ಎಂ ಶಾರದ ಎಂಬವರ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ತೋಟದಲ್ಲಿ ಬೆಳೆದಿದ್ದ ಕಾಫಿ, ತೆಂಗು, ಬಾಳೆ ಸೇರಿದಂತೆ ಇನ್ನಿತರ ಫಸಲು ಭರಿತ ಗಿಡಗಳನ್ನು ತುಳಿದು ನಾಶಪಡಿಸಿ ಅಪಾರ ನಷ್ಟಉಂಟು ಮಾಡಿದೆ. ಕಳೆದ ಕೆಲವು ದಿನಗಳ ಹಿಂದೆ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಯ್ಯಂಡಾಣೆ, ಚೇಲಾವರ, ಮರಂದೋಡ ಹಾಗೂ ಕಕ್ಕಬ್ಬೆ, ಕುಂಜಿಲ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಹಿಂಡು ತೋಟಗಳಿಗಲ್ಲಿ ದಾಂಧಲೆ ನಡೆಸಿ ಬೆಳೆಗಾರರು ಕಷ್ಟಪಟ್ಟು ಬೆಳೆದಿದ್ದ ಬೆಳೆಗಳನ್ನು ತುಳಿದು ನಾಶಪಡಿಸಿ ನಷ್ಟ ಅನುಭವಿಸುವಂತೆ ಮಾಡಿತ್ತು. ಈಗ ಕಾಡಾನೆಗಳು ನೆಲಜಿ ಗ್ರಾಮ ವ್ಯಾಪ್ತಿಯಲ್ಲಿ ಗೋಚರಿಸಿದ್ದು ಜನರು ನಡೆದಾಡಲು ಭಯಪಡುವ ಪರಿಸ್ಥಿತಿ ಉದ್ಭವವಾಗಿದೆ. ಸಂಬಂಧಪಟ್ಟ ಅರಣ್ಯ ಇಲಾಖೆಯವರು ತಕ್ಷಣ ಕಾಡಾನೆಗಳನ್ನು ಕಾಡಿಗಟ್ಟುವ ಅಥವಾ ಹಿಡಿದು…
ಮಡಿಕೇರಿ ಜು.18 : ಮಡಿಕೇರಿಯನ್ನು ಸ್ವಚ್ಚ, ಸುಂದರ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಜವಾಬ್ದಾರಿಯಿದ್ದು, ಆ ನಿಟ್ಟಿನಲ್ಲಿ ಮನೆಯಲ್ಲಿನ ಕಸವನ್ನು ಪ್ಲಾಸ್ಟಿಕ್ನಿಂದ ವಿಂಗಡಿಸಿ ನಗರಸಭೆ ವಾಹನಕ್ಕೆ ನೀಡುವಂತಾಗಬೇಕು ಎಂದು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಕೋರಿದ್ದಾರೆ. ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಸಂಬಂಧಿಸಿದಂತೆ ನಡೆದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು. ಏಕ ಬಳಕೆ ಪ್ಲಾಸ್ಟಿಕ್ನ್ನು ಬಳಸಬಾರದು. ಸಾರ್ವಜನಿಕರು ಸಹ ಎಲ್ಲೆಂದರಲ್ಲಿ ಪ್ಲಾಸ್ಟಿಕ್ನ್ನು ಬಿಸಾಡದೆ ಡಸ್ಟ್ಬಿನ್ಗೆ ಹಾಕಬೇಕು. ನಗರವನ್ನು ಸುಂದರ, ಸ್ವಚ್ಚವಾಗಿ ಕಾಣುವಂತಾಗಲು ಎಲ್ಲರೂ ನಗರಸಭೆಯ ಜೊತೆ ಕೈಜೋಡಿಸಬೇಕಿದೆ ಎಂದು ನಗರಸಭಾ ಅಧ್ಯಕ್ಷರು ಮನವಿ ಮಾಡಿದರು. ‘ನಮ್ಮ ತ್ಯಾಜ್ಯ, ನಮ್ಮ ಹೊಣೆ’ ಎಂಬುದನ್ನು ಅರ್ಥಮಾಡಿಕೊಂಡು ಪ್ರತಿಯೊಂದು ಪ್ಲಾಸ್ಟಿಕ್ ತ್ಯಾಜ್ಯವನ್ನು ವಿಂಗಡಿಸಿ ನೀಡಬೇಕಿದೆ. ಪ್ಲಾಸ್ಟಿಕ್ ಹೊರತು ಪಡಿಸಿ ಉಳಿದ ಕಸದಿಂದ ಗೊಬ್ಬರವನ್ನು ಉತ್ಪಾದಿಸಬಹುದಾಗಿದೆ ಎಂದು ಹೇಳಿದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸತೀಶ್ ಅವರು ಮಾತನಾಡಿ ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಹಾನಿ ಎಂಬುದನ್ನು ತಿಳಿಯಬೇಕಿದೆ. ಆದ್ದರಿಂದ ಸ್ವಯಂ ಪ್ಲಾಸ್ಟಿಕ್ ಬಳಸದೆ ಬಟ್ಟೆ…
ಮಡಿಕೇರಿ ಜು.18 : ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ತಾಲ್ಲೂಕಿನ ವಿವಿಧ ಇಲಾಖೆಗಳ ಸಾಮಾನ್ಯ ಸಭೆಯು ಜಿ.ಪಂ.ಉಪ ಕಾರ್ಯದರ್ಶಿ ಜಗದೀಶ್ ಅಧ್ಯಕ್ಷತೆಯಲ್ಲಿ ನಡೆಯಿತು. ನಂತರ ಮಾತನಾಡಿದ ಅವರು ಶಿಕ್ಷಣ ಇಲಾಖೆಯಲ್ಲಿ ಬಾಕಿ ಇರುವ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸಲಹೆ ನೀಡಿದರು. ನರೇಗಾ ಯೋಜನೆಯಡಿ ಶಾಲಾ ಶೌಚಾಲಯ ಕಾಮಗಾರಿ ತೆಗೆದುಕೊಳ್ಳಲಾಗಿದ್ದು, ಶೀಘ್ರ ಪೂರ್ಣಗೊಳಿಸಲಾವುದು ಎಂದು ಮಾಹಿತಿ ನೀಡಿದರು. ಮಳೆಗಾಲ ಪ್ರಾರಂಭವಾಗಿದ್ದು ಶಾಲಾ ಕಟ್ಟಡ ದುರಸ್ತಿಗಳಿದ್ದಲ್ಲಿ ಕೂಡಲೇ ಕ್ರಮ ತೆಗೆದುಕೊಂಡು ಯಾವುದೇ ರೀತಿ ಹಾನಿಯಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು. ಹಾಡಿಗಳಲ್ಲಿ ವಾಸಿಸುವ ಜನರ ಆರೋಗ್ಯದ ಮೇಲೆ ಹೆಚ್ಚು ಗಮನ ನೀಡಬೇಕು. ಅನುದಾನದ ಕೊರತೆಗಳಿದ್ದರೆ ಗಮನಕ್ಕೆ ತಂದು ಬಗೆಹರಿಸಿಕೊಳ್ಳಿ ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಪೂರಕವಾಗಿ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಜಲ ಜೀವನ್ ಮೀಷನ್ ಯೋಜನೆಯಡಿ ಬಾಕಿ ಇರುವ ಕಾಮಗಾರಿಯನ್ನು ಪೂರ್ಣಗೊಳಿಸಿ, ಕುಡಿಯುವ ನೀರಿನ ಸಮಸ್ಯೆ ಬರದಂತೆ…
ಮಡಿಕೇರಿ ಜು.18 : ಭಾರತ ಆಹಾರ ನಿಗಮದಲ್ಲಿ ಲಭ್ಯತೆಯನುಸಾರ ಜುಲೈ-2023 ರ ಮಾಹೆಗೆ ಸಾರ್ವಜನಿಕ ವಿತರಣಾ ಪದ್ಧತಿಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಚೀಟಿದಾರರಿಗೆ ‘ಸಾರವರ್ಧಿತ’ (ಪೌಷ್ಟಿಕಾಂಶ) ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದ್ದು, ಸಾರ್ವಜನಿಕ ಪಡಿತರದಾರರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೇ ಸಾರವರ್ಧಿತ ಅಕ್ಕಿಯನ್ನು ಪಡೆದು ಸದುಪಯೋಗಿಸಿಕೊಳ್ಳಬೇಕೆಂದು ಸಾರ್ವಜನಿಕ ಪಡಿತರದಾರರಲ್ಲಿ ಆಹಾರ ಇಲಾಖೆ ಕೋರಿದೆ. ಅಂತ್ಯೋದಯ ಪಡಿತರ ಚೀಟಿಗಳಿಗೆ (ಎಎವೈ) ಪ್ರತಿ ಪಡಿತರ ಚೀಟಿಗೆ ಅಕ್ಕಿ- 35 ಕೆ.ಜಿ ಉಚಿತ, ಪಿಹೆಚ್ಹೆಚ್ ಪಡಿತರ ಚೀಟಿಗಳಿಗೆ (ಬಿಪಿಎಲ್) (ಆದ್ಯತಾ) ಪ್ರತಿ ಸದಸ್ಯರಿಗೆ ಅಕ್ಕಿ-05 ಕೆ.ಜಿ. ಉಚಿತ, ಎನ್ಪಿಹೆಚ್ಹೆಚ್ ಪಡಿತರ ಚೀಟಿಗಳಿಗೆ (ಎಪಿಎಲ್)(ಒಪ್ಪಿತ ಪಡಿತರ ಚೀಟಿಗಳಿಗೆ) ಏಕ ಸದಸ್ಯ ಪಡಿತರ ಚೀಟಿಗೆ ಅಕ್ಕಿ-05 ಕೆ.ಜಿ, 2 ಮತ್ತು ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿಗೆ ಅಕ್ಕಿ-10 ಕೆ.ಜಿ. ಪ್ರತಿ ಕೆ.ಜಿ.ಗೆ ರೂ.15/-, ಅಂತರ್ ನ್ಯಾಯಬೆಲೆ ಅಂಗಡಿ / ಅಂತರ್ ಜಿಲ್ಲೆ /ಅಂತರ್ ರಾಜ್ಯ ಪಡಿತರ ಚೀಟಿಗಳಿಗೆ ಪೋರ್ಟಬಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಜಿಲ್ಲೆಯ/ ರಾಜ್ಯದ…






