ಲೇಖಕ: admin

ಮಡಿಕೇರಿ ಜೂ.17 : ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ನಡೆದ ಯೋಗ ಜಾಥಕ್ಕೆ ನಗರದ ಗಾಂಧಿ ಮೈದಾನದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಪ್ರತಿಯೊಬ್ಬರ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದೆ ಎಂದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಯೋಗ ಸಂಘಟನೆಯ ಸಂಯುಕ್ತ ಆಶ್ರಯದಲ್ಲಿ 2023ರ 9ನೇ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಗರದ ಗಾಂಧಿ ಮೈದಾನದಿಂದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದವರೆಗೆ ಜಾಥಾ ನಡೆಯಿತು. ಜೂನ್ 21 ರಂದು ನಡೆಯಲಿರುವ ಯೋಗ ದಿನಾಚರಣೆಯಲ್ಲಿ ಶಾಲಾ ಮಕ್ಕಳು, ಎಲ್ಲಾ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಹೇಳಿದರು. ಈ ಬಾರಿಯ ಘೋಷವಾಕ್ಯ ವಸುದೈವ ಕುಟುಂಬಕ್ಕಾಗಿ ಯೋಗ ಆಗಿರುವುದರಿಂದ ಪ್ರತಿಯೊಬ್ಬರೂ ಮನೆಯಲ್ಲಿಯೇ ಯೋಗದಲ್ಲಿ ಪಾಲ್ಗೊಳ್ಳುವಂತೆ ಡಾ.ಬಿ.ಸಿ.ಸತೀಶ ತಿಳಿಸಿದರು. ಜಾಥಾದಲ್ಲಿ ನಗರಸಭೆ ಅಧ್ಯಕರಾದ ಅನಿತಾ ಪೂವಯ್ಯ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ, ಪೌರಾಯುಕ್ತ ವಿಜಯ,…

Read More

ಮಡಿಕೇರಿ ಜೂ.17 : ಕಾಲೇಜಿನಲ್ಲಿ ನಡೆಸಲಾಗುವ ವಿವಿಧ ಉತ್ಸವಗಳು ಕೇವಲ ಮನರಂಜನೆಗಾಗಿ ಮಾತ್ರ ಸೀಮಿತವಾಗಿಲ್ಲ, ಬದಲಾಗಿ ವಿದ್ಯಾರ್ಥಿಗಳು ಪಾಠ ಪ್ರವಚನದಲ್ಲಿಗಳಿಸುವ ಅಂಕದೊಂದಿಗೆ ಬೆಸ್ಟ್ ಮ್ಯಾನೇಜರ್ ನಂತ ವಿವಿಧ ಚಟುವಟಿಕೆಗಳಲ್ಲಿ ಜಯಶೀಲರಾಗುವುದನ್ನು ಕೂಡ ಇಂದು ಕಂಪನಿಗಳು ಉದ್ಯೋಗಕ್ಕೆ ಪ್ರಮುಖವಾಗಿ ಮಾನ್ಯ ಮಾಡುತ್ತವೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಹಾಗೂ ಮಾಜಿ ಪ್ರಾಂಶುಪಾಲರಾದ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ತಿಳಿಸಿದರು. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣೆ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಉತ್ಸವ ‘ಸಂಕಲ್ಪ-2023’ ನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಸಹ ಕಲಿಕೆಯಿಂದ ಅವರಲ್ಲಿರುವ ಬಹುಮುಖ ಪ್ರತಿಭೆ ಹೊರಹೊಮ್ಮಿ ಮತ್ತಷ್ಟು ಸೃಜನಶೀಲಾತ್ಮಕ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯ ಎಂದು ತಿಳಿಸಿದರು. ವಿವಿಧ ಕಾಲೇಜಿನಿಂದ ಆಗಮಿಸಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದರೆ ವಿದ್ಯಾರ್ಥಿಗಳಲ್ಲಿ ಗೆಳೆತನದ ಸಂಪರ್ಕ ಹೆಚ್ಚಾಗುತ್ತದೆಯಲ್ಲದೆ, ಸ್ನೇಹಮಯ ಗುಣ ಜೀವನದ ಪ್ರಗತಿಗೆ ಮತ್ತಷ್ಟು ಮೆರುಗು ಕಲ್ಪಿಸುತ್ತದೆ ಎಂದು ಕಿವಿಮಾತು ಹೇಳಿದರು. ಕ್ಯಾಪಿಟಲ್…

Read More

ಮಡಿಕೇರಿ ಜೂ.17 : ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿ ಇರುವ ಜಿಲ್ಲಾ ಕಸಾಪ ಕಚೇರಿಯಲ್ಲಿ ಕಸಾಪ ತಾಲ್ಲೂಕು ಮತ್ತು ಜಿಲ್ಲಾ ಘಟಕಗಳ ವತಿಯಿಂದ ಕಳೆದ ವರ್ಷ ಹಮ್ಮಿಕೊಂಡಿದ್ದ ಸಮ್ಮೇಳನ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಲೆಕ್ಕಪತ್ರ ಮಂಡನೆ, ಗೌರಮ್ಮ ಕಸಾಪ ಜಿಲ್ಲಾ ಘಟಕದ ಸಣ್ಣ ಕಥೆಗಳ ಗೌರಮ್ಮ ಕಥಾ ಸ್ಪರ್ಧೆ, ದತ್ತಿ ಕಾರ್ಯಕ್ರಮಗಳ ಆಯೋಜನೆ ಮತ್ತಿತರ ವಿಚಾರಗಳ ಕುರಿತು ಚರ್ಚೆ ನಡೆಯಿತು. ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಗಡಿ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚನೆ ನೀಡಿದ್ದು, ಆ ನಿಟ್ಟಿನಲ್ಲಿ ಮಳೆಗಾಲದ ನಂತರ ಗಡಿ ಭಾಗ ಕರಿಕೆ ಗ್ರಾಮದಲ್ಲಿ `ಗಡಿ ಉತ್ಸವ’ ಆಯೋಜಿಸಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ಆರಂಭದಲ್ಲಿ ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಕಳೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯ ವರದಿ ಮಂಡಿಸಿದರು.…

Read More

ಮಡಿಕೇರಿ ಜೂ.17 : ‘ಹರ್ ಆಂಗನ್ ಯೋಗ’ ಎನ್ನುವ ಷೋಷ ವಾಕ್ಯದೊಂದಿಗೆ ಜೂ.21 ರಂದು ಮಡಿಕೇರಿಯಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದ್ದು, ಸಾವಿರಕ್ಕೂ ಹೆಚ್ಚಿನ ಯೋಗ ಪಟುಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಿ.ರೇಣುಕಾ ದೇವಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕೆಳಗಿನ ಗೌಡ ಸಮಾಜದ ಸಭಾಂಗಣದಲ್ಲಿ ಬೆಳಗ್ಗೆ 6.30 ಗಂಟೆಗೆ ಯೋಗಪಟುಗಳು ಸಮಾವೇಶಗೊಳ್ಳಲಿದ್ದು, 7 ಗಂಟೆಗೆ ‘ಯೋಗ ದಿನಾಚರಣೆ’ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಡಾ.ಮಂಥರ್ ಗೌಡ ವಹಿಸಲಿದ್ದಾರೆ ಎಂದರು. ಯೋಗ ದಿನದ ಆಸನಗಳು : ಯೋಗ ದಿನಾಚರಣೆಯಂದು ತಾಡಾಸನ, ವೃಕ್ಷಾಸನ, ತ್ರಿಕೋನಾಸನ, ವೀರಭದ್ರಾಸನ, ವಜ್ರಾಸನ, ಪಶ್ಚಿಮೋತ್ತಾಸನ, ಉಷ್ಟ್ರಾಸನ, ವಜ್ರಾಸನ, ಮಕರಾಸನ, ಭುಜಂಗಾಸನ, ಏಕಪಾದ ಶಲಭಾಸನ, ಧನುರಾಸನ, ಅರ್ಧ ಹಲಾಸನ, ಸೇತು ಬಂಧಾಸನ ಪವನ ಮುಕ್ತಾಸನ, ಶವಾಸನ, ಕಪಾಲಭಾತಿ ಆಸನಗಳು ಹಾಗೂ ಪ್ರಾಣಾಯಾಮವನ್ನು ಯೋಗ ಪಟುಗಳು ಪ್ರದರ್ಶಿಸಲಿದ್ದಾರೆ. ಗ್ರಾಮ ಗ್ರಾಮಗಳಲ್ಲಿ ಯೋಗ : ಆಯುಷ್ ಇಲಾಖೆಯಡಿ…

Read More

ಮಡಿಕೇರಿ ಜೂ.17 : ಕೊಡಗು ಜಿಲ್ಲೆಯ 104 ಗ್ರಾ.ಪಂ ಗಳಲ್ಲಿ ಖಾಲಿ ಹುದ್ದೆಗಳು ಭರ್ತಿಯಾಗದೆ ಇರುವುದರಿಂದ ಸಾರ್ವಜನಿಕರ ಕೆಲಸ, ಕಾರ್ಯಗಳು ಸ್ತಬ್ಧವಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘದ ಕೊಡಗು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಗ್ರಾ.ಪಂ ಗಳಲ್ಲಿ ಡಾಟಾ ಎಂಟ್ರಿ ಆಪರೇಟರ್, ಬಿಲ್ ಕಲೆಕ್ಟರ್, ಸ್ವಚ್ಛತಾ ಸಿಬ್ಬಂದಿ, ಅಟೆಂಡರ್, ನೀರುಗಂಟಿಗರು ಸೇರಿದಂತೆ ಸುಮಾರು 180 ಹುದ್ದೆಗಳು ಖಾಲಿ ಇವೆ. ಇವುಗಳನ್ನು ಶೀಘ್ರ ಭರ್ತಿ ಮಾಡುವ ಮೂಲಕ, ಪಂಚಾಯ್ತಿ ವ್ಯಾಪ್ತಿಯಲ್ಲಿ ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದರು. ::: ಖಾಲಿ ಇರುವ 23 ಪಿಡಿಒ ಹುದ್ದೆ ::: ಜಿಲ್ಲಾ ವ್ಯಾಪ್ತಿಯ ಗ್ರಾ.ಪಂ ಗಳಲ್ಲಿ 23 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹುದ್ದೆಗಳು ಖಾಲಿ ಇವೆ. ಇದರಿಂದ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪಿಡಿಒಗಳು ಹೆಚ್ಚುವರಿಯಾಗಿ ಇತರೆ ಗ್ರಾಮ ಪಂಚಾಯ್ತಿಗಳ ಜವಾಬ್ದಾರಿಯನ್ನು ನಿರ್ವಹಿಸುವ ಪರಿಸ್ಥಿತಿ ಬಂದೊದಗಿದೆ ಎಂದು ತಿಳಿಸಿದರು. ಅಗತ್ಯ ಕೆಲಸ ಕಾರ್ಯಗಳಿಗಾಗಿ ಜನ ಪಂಚಾಯ್ತಿಗಳಿಗೆ…

Read More

ನಾಪೋಕ್ಲು ಜೂ.17 :  ಹಳೆತಾಲೂಕು ಬದ್ರಿಯಾ ಜುಮಾ ಮಸೀದಿಯ 2023-24ನೇ ಸಾಲಿನ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಟಿ. ಎ.ಮೊಹಮ್ಮದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಬಿ.ಬಿ.ಅಬ್ದುಲ್ ಖಾದರ್,  ಪ್ರಧಾನ ಕಾರ್ಯದರ್ಶಿಯಾಗಿ ಟಿ. ಎ.ಅಬ್ದುಲ್ ಖಾದರ್, ಸಹ ಕಾರ್ಯದರ್ಶಿಯಾಗಿ ಬಿ.ಎ. ಕಬೀರ್,ಸಮಿತಿ ಸದಸ್ಯರಾಗಿ ಎಂ.ಎಸ್. ಸಂಶುದ್ದೀನ್, ಬಿ.ಕೆ.ಗಫೂರ್, ಪಿ.ಎಂ. ನಾಸಿರ್, ಎ.ಎಂ. ಸಲೀಂ, ಎಂ.ಕೆ.ಯೂಸುಫ್, ಟಿ.ಐ.ರಿಯಾಝ್, ಪಿ.ಎಂ. ಇಸ್ಮಾಯಿಲ್, ಬಿ.ಎ.ಹ್ಯಾರಿಸ್, ಎಂ.ಎಚ್.ನೌಶಾದ್ ಇವರನ್ನು ಹಳೇತಾಲೂಕು ಬದ್ರಿಯಾ ಜುಮಾ ಮಸೀದಿಯ ಮದರಸಾ ಸಭಾಂಗಣದಲ್ಲಿ ನಡೆದ ಜಮಾಅತ್ ನ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆಮಾಡಲಾಯಿತು. ವರದಿ :ಝಕರಿಯ ನಾಪೋಕ್ಲು  

Read More

ಮಡಿಕೇರಿ ಜೂ.17 :  ಪೊನ್ನಂಪೇಟೆ  ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯು ಲೋಕಸಭಾ ಸದಸ್ಯ  ಪ್ರತಾಪ್ ಸಿಂಹ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಾಜಿ ಶಾಸಕ  ಕೆ.ಜಿ. ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮಂಡಲ ಅಧ್ಯಕ್ಷ  ಚಲನ್ ನೆಲ್ಲಿರ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಅರುಣ್ ಭೀಮಯ್ಯ, ರಾಜ್ಯ ಕೃಷಿ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಯಮುನಾ ಚಂಗಪ್ಪ, ಶಕ್ತಿ ಕೇಂದ್ರ ಪ್ರಮುಖ  ಕಿಶನ್ ಕೊಟ್ಟೆರ, ಮಧು ಮೂಕೇಳೇರ, ಪಕ್ಷದ ಪ್ರಮುಖರು, ಗ್ರಾ.ಪಂ ಸದಸ್ಯರು, ವಿವಿಧ ಮೋರ್ಚಾ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.

Read More

ಮಡಿಕೇರಿ ಜೂ.17 : ದ್ವೇಷ ರಾಜಕಾರಣಕ್ಕೆ ಆದ್ಯತೆ ನೀಡದೆ ಕೊಡಗು ಜಿಲ್ಲೆಯ ಆಶೋತ್ತರಗಳಿಗೆ ಪೂರಕವಾಗಿ ಕೆಲಸ ಮಾಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ತಿಳಿಸಿದ್ದಾರೆ. ನಗರದಲ್ಲಿ ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಆಡಳಿತ ಮಂಡಳಿಯ ವತಿಯಿಂದ ನೀಡಲಾದ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ಚುನಾವಣಾ ಸಂದರ್ಭ ಕೆಲವರು ನನ್ನ ಕಾಲೆಳೆದಿದ್ದು ತುಂಬಾ ನೋವಾಗಿದೆ. ಆದರೆ ಯಾವುದೇ ಅಪಪ್ರಚಾರಕ್ಕೆ ಮನ್ನಣೆ ನೀಡದ ಈ ಕ್ಷೇತ್ರದ ಜನ ನನ್ನನ್ನು ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ. ಶಾಸಕನಾಗಿ ನಾನು ದ್ವೇಷ ರಾಜಕಾರಣಕ್ಕೆ ಅವಕಾಶ ನೀಡದೆ ಅಭಿವೃದ್ಧಿಪರ ಚಿಂತನೆಯೊಂದಿಗೆ ಕಾರ್ಯ ನಿರ್ವಹಿಸುವುದಾಗಿ ಹೇಳಿದರು. ಜನರ ಪ್ರೀತಿ ಗಳಿಸಿ ಸರ್ವರ ಏಳಿಗೆಗಾಗಿ ಶ್ರಮಿಸಲು ಬದ್ಧನಿದ್ದೇನೆ. ಜಿಲ್ಲೆಯ ಹಿರಿಯರು ಹಾಗೂ ಅನುಭವಿಗಳು ನನಗೆ ಬೆಂಬಲವಾಗಿ ನಿಂತು ಮಾರ್ಗದರ್ಶನ ನೀಡಬೇಕೆಂದು ಡಾ.ಮಂಥರ್ ಗೌಡ ಮನವಿ ಮಾಡಿದರು. ನಗರದ ಸಂಘದ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ, ಅತೀ ಚಿಕ್ಕ ವಯಸ್ಸಿನಲ್ಲಿ ಮಂಥರ್ ಅವರು ಶಾಸಕರಾಗಿ ಆಯ್ಕೆಯಾಗಿರುವುದು…

Read More

ಮಡಿಕೇರಿ ಜೂ.17 : ಕಕ್ಕಬೆಯ “ದಿ ತಾಮರ ಕೂರ್ಗ್” ರೆಸಾರ್ಟ್ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ “ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಡೈನಿಂಗ್ ಟೇಬಲ್ ಮತ್ತು ಕುರ್ಚಿಗಳನ್ನು ಕೊಡುಗೆ ನೀಡಲಾಯಿತು. ಈ ಸಂದರ್ಭ ತಾಮರ ಕೂರ್ಗ್ ನ ವ್ಯವಸ್ಥಾಪಕ ಕಲಿಯಟಂಡ ಗಿರೀಶ್ ಸುಬ್ಬಯ್ಯ, ಕುಂಜಿಲ ಕಕ್ಕಬೆ ಗ್ರಾ.ಪಂ ಅಧ್ಯಕ್ಷ ಸಂಪನ್ ಅಯ್ಯಪ್ಪ, ಅಭಿವೃದ್ಧಿ ಅಧಿಕಾರಿ ಅಶೋಕ್, ರೆಸಾರ್ಟ್ ಸಿಬ್ಬಂದಿಗಳಾದ ಶ್ರೀಕಾಂತ್, ವಿಜು, ಗ್ರಾ.ಪಂ ಸದಸ್ಯರಾದ ರಝಾಕ್, ಬಶೀರ್, ಶಾಲೆಯ ಮುಖ್ಯ ಶಿಕ್ಷಕಿ ಕೆ.ಎಂ.ಸುಮಯ್ಯ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Read More

ಮಡಿಕೇರಿ ಜೂ.17 : ನಾಪೋಕ್ಲು-ವಿರಾಜಪೇಟೆ ಮುಖ್ಯ ರಸ್ತೆಯ ಪೊದ್ದಮಾನಿ ತಿರುವಿನಲ್ಲಿ ಬೃಹತ್ ಮರ ರಸ್ತೆಗೆ ಉರುಳಿಬಿದ್ದ ಪರಿಣಾಮ ಸ್ವಲ್ಪ ಸಮಯ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ನಂತರ ಗ್ರಾಮಸ್ಥರು ಮರವನ್ನು ತೆರವು ಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸಮೀಪದಲ್ಲೇ ಕಡಂಗ, ಕರಡ ಗ್ರಾಮಕ್ಕೆ ನೀರು ಸರಬರಾಜು ಮಾಡುವ ಪೈಪ್ ಹಾನಿಯಾಗಿದೆ.

Read More