ಲೇಖಕ: admin

ಮಡಿಕೇರಿ ಜೂ.17 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಸುಸ್ಥಿರ ಅಭಿವೃದ್ಧಿಗಾಗಿ ಡಿಜಿಟಲೀಕರಣ’ ಎಂಬ ವಿಷಯದ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ ನಡೆಯಿತು. ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಸಮ್ಮೇಳನದಲ್ಲಿ ಆನ್ ಲೈನ್ ಮತ್ತು ಆಫ್ ಲೈನ್ ಸೇರಿದಂತೆ ಸುಮಾರು 60 ಪ್ರಬಂಧಗಳನ್ನು ಮಂಡಿಸಲಾಯಿತು. ಪ್ರಧಾನ ಭಾಷಣಕಾರರಾಗಿ ಡಾ.ಕೃಷ್ಣ ರಾಜ್, ಅಂತರರಾಷ್ಟ್ರೀಯ ಮಟ್ಟದ ಸಂಪನ್ಮೂಲ ವ್ಯಕ್ತಿ ಡಾ.ಬೇಟ ಪರ್ಕಸ (ಇಂಡೋನೇಷ್ಯಾ) ಮತ್ತು ಪ್ರೊ.ಅಬ್ದುಲ್ ವಾಸಿ ಗೌಹರ್ (ಅಫ್ಘಾನಿಸ್ತಾನ್) ಭಾಗವಹಿಸಿದ್ದರು. ಕೊಡಗು ವಿಶ್ವವಿದ್ಯಾಲಯದ ಕುಲಸಚಿವ (ಪರೀಕ್ಷಾಂಗ) ಡಾ.ಸೀನಪ್ಪ, ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಡಾ. ಕೆ.ಶೈಲಶ್ರೀ, ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ಉಪನ್ಯಾಸಕರು, ಕಾಲೇಜಿನ ಇತರ ವಿಭಾಗದ ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ. ಬಿ.ರಾಘವ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕ…

Read More

ಮಡಿಕೇರಿ ಜೂ.17 :  ಎಸ್‌ವೈಸ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಮೇಕೇರಿಯಲ್ಲಿ ಜಿಲ್ಲಾ ಮತ್ತು ಝೋನ್ ಮಟ್ಟದ ನಾಯಕರಿಗೆ ತರಬೇತಿ ಶಿಬಿರ ನಡೆಯಿತು. ದರ್ಗಾ ಝಿಯಾರತ್‌ನೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಎಸ್‌ವೈಸ್ ಸಂಘಟನಾ ಕಾರ್ಯದರ್ಶಿ ಯಾಖೂಬ್ ಮಾಸ್ಟರ್  ಉದ್ಘಾಟಿಸಿದರು. ಕೂರ್ಗ್ ಜಂ‌ಇಯ್ಯತುಲ್ ಉಲಾಮಾದ ಪ್ರಧಾನ  ಕಾರ್ಯದರ್ಶಿ ಅಶ್ರಫ್ ಅಹ್ಸನಿ, ಅನ್ವಾರಲ್ ಹುದಾ, ಮೊದಲ ಹಂತದ ತರಗತಿ ನಡೆಸಿ ಎಸ್‌ವೈ‌ಎಸ್ ಹಾಗೂ  ನಾಯಕರ ಇತಿಹಾಸವನ್ನು ಮೆಲುಕು ಹಾಕಿದರು. ನಂತರ  ನಾಯಕತ್ವ ಹೇಗಿರಬೇಕು ಎಂಬುದನ್ನು ಉದಾಹರಣೆ ಸಹಿತ  ವಿವರಿಸಿದರು. ಜಿಲ್ಲಾಧ್ಯಕ್ಷ  ಅಬ್ದುಲ್ ಹಮೀದ್ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ರಾಜ್ಯ ಸಮಿತಿಯ ಸಂಘಟನಾ ಕಾರ್ಯದರ್ಶಿ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೊಂಟುಗೋಳಿ ಎರಡನೇ ಹಂತದ ತರಬೇತಿ ನೀಡಿ ನಾಯಕತ್ವ ಮತ್ತು ವ್ಯಕ್ತಿತ್ವ ವಿಕಸನದ ಕುರಿತು ಮಾಹಿತಿ ನೀಡಿದರು. ಪ್ರಧಾನ ಕಾರ್ಯದರ್ಶಿ ಅಹ್ಮದ್ ಮದನಿ ಸ್ವಾಗತಿಸಿ, ಸರ್ವರನ್ನು ವಂದಿಸಿದರು.

Read More

ಸುಂಟಿಕೊಪ್ಪ,ಜೂ.17 : ಸುಂಟಿಕೊಪ್ಪ ಗ್ರಾ.ಪಂ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಜಿ.ಪಂ ಮಾಜಿ ಸದಸ್ಯ ಪಿ.ಎಂ.ಲತೀಫ್ ವಿವಿಧ ಬಡಾವಣೆಗಳಿಗೆ ತಮ್ಮ ಸ್ವಂತ ಖರ್ಚಿನಿಂದ ಜಾಷಧಿ ಸಂಪಡಣೆ ಮಾಡಿದರು. ನಂತರ ಮಾತನಾಡಿದ ಪಿ.ಎಂ.ಲತೀಫ್, ಕಳೆದ ಕೆಲವು ತಿಂಗಳುಗಳಿಂದ ಈ ಭಾಗದಲ್ಲಿ ಅನೇಕರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರೂ, ಸಂಬಂಧಿಸಿದ ಇಲಾಖೆಗಳು ರೋಗ ನಿಯಂತ್ರಣಕ್ಕೆ ಮುಂದಾಗದೆ ತಾತ್ಸರ ಮನೋಭಾವನೆಯನ್ನು ತೋರುತ್ತಿರುವುದು ಸರಿಯಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಗ್ರಾ.ಪಂ. ಸದಸ್ಯರಾದ ಸಬಾಸ್ಟೀನ್, ರಫೀಕ್ ಖಾನ್ ಮತ್ತಿತರರು ಭೇಟಿ ನೀಡಿ ಆರೋಗ್ಯ ಇಲಾಖೆಯ ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತದ ವಿರುದ್ಧ ಬೇಸರ ವ್ಯಕ್ತಪಡಿಸಿದರು. ಅಲ್ಲದೆ ಪಿ.ಎಂ.ಲತೀಫ್ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಈ ಸಂದರ್ಭ ಪಂಚಾಯಿತಿ ಸದಸ್ಯ ರಫೀಕ್‍ಖಾನ್, ರಜಾಕ್, ವಾಹನ ಚಾಲಕ ರಿಜ್ವಾನ್, ಕೋಟೆಕಾಡು ತೋಟದ ವ್ಯವಸ್ಥಾಪಕ ರಜಾಕ್ ಹಾಗೂ ಕಾರ್ಮಿಕರು ತೊಡಗಿಸಿಕೊಂಡಿದ್ದರು.

Read More

ಸಿದ್ದಾಪುರ ಜೂ.17 :  ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದಲ್ಲಿ ತೋಟದ ಮಾರ್ಗದಲ್ಲಿ ಸಾಗುತ್ತಿದ್ದ ಸಂದರ್ಭ ದಿಢೀರನೆ ಕಾಡಾನೆ ಪ್ರತ್ಯಕ್ಷಗೊಂಡು ಫೀಳಿಟ್ಟ ಸಂದರ್ಭ ಭಯಗೊಂಡು ಎದುರಿ ಕಂಬಕ್ಕೆ ಬೈಕ್ ಸಿಹಿತವಾಗಿ ಡಿಕ್ಕಿ ಹೊಡೆದು ಕಾಲು ಮುರಿತಗೊಂಡಿರು ಘಟನೆ ಪುಲಿಯೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಸುರೇಶ್ ಎಂಬವರು ಗಾಯ ಗೊಂಡ ವ್ಯಕ್ತಿ. ಅಮ್ಮತ್ತಿಯ ಅಮೇರಿಕನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಮಾಹಿತಿ ತಿಳಿದು ಶಾಸಕ ಪೊನ್ನಣ್ಣ ಅವರ ಸೂಚನೆಯಂತೆ ಕೆಪಿಸಿಸಿ ವಕ್ತಾರ ಸಂಕೇಂತ್ ಪೂವಯ್ಯ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿ ವೈದ್ಯರೊಂದಿಗೆ ಚರ್ಚಿಸಿದ್ದಾರೆ. ಗಾಯಾಳು ಸುರೇಶ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಬೇಕಿದ್ದು, ಸೋಮವಾರ ನಡೆಸುವುದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆ ಬಗ್ಗೆ ಅರಣ್ಯಾಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಸೂಕ್ತ ಪರಿಹಾರ ಹಾಗೂ ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ನಡೆಸಲು ಶಾಸಕರು ಸೂಚಿಸಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಸ್ಥಳೀಯರಾದ ಎಸ್.ಹೆಚ್.ಮತೀನ್, ಜಾನ್‍ಸನ್, ಎನ್.ಎ.ನೌಶಾದ್, ಎ.ಡಿ.ದಿನೇಶ್, ದಿವಾಕರ್ ಮತ್ತಿರರು ಸಹಕರಿಸಿದ್ದಾರೆ. ಸ್ಥಳಕ್ಕೆ ಆರ್.ಎಫ್.ಓ ದೇವಯ್ಯ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ…

Read More

ಮಡಿಕೇರಿ ಜೂ.17 :  ಇದು ಇಂದಿನ ಆಧುನಿಕ ಕಾಲದ ಚುನಾವಣೆಯ ಚಿತ್ರಣ ಯಾವ ಪ್ರಜಾಪ್ರಭುತ್ವದಡಿಯಲ್ಲಿ ಚುನಾವಣೆಗಳು ನಿಸ್ಪಕ್ಷವಾಗಿ ನಿರ್ಭಯವಾಗಿ ನಡೆಯಬೇಕಿತ್ತು. ಆದರೆ ಇಂದು ಅದರ ಚಿತ್ರಣವೇ ಬೇರೆ ಆಗಿದೆ. ನಮ್ಮ ಮತಗಳನ್ನು ನಾವು ಮಾರಾಟಕ್ಕೆ ಇಟ್ಟಿದ್ದೇವೆ. ಅದರ ಮೌಲ್ಯವನ್ನು ಅಭ್ಯರ್ಥಿ ರಾಜಕೀಯ ಪಕ್ಷಗಳು ನಿರ್ಧಾರ ಕೈಗೊಳ್ಳುತ್ತಾರೆ. ಪೈಪೋಟಿ ಹೆಚ್ಚಾದಷ್ಟು ಮತದ ಮೌಲ್ಯ ಹೆಚ್ಚಾಗುತ್ತದೆ. ಇದು ಚುನಾವಣೆಯಲ್ಲಿ ಮೌಲ್ಯ ಸಿದ್ಧಾಂತಗಳಿಗೆ ಬೆಲೆಯೆ ಇಲ್ಲ. ಚುನಾವಣೆಯೇ ಒಂದು ದೊಂಬರಾಟ ಇಲ್ಲಿ ನೀವು ಯಾರು ಯಾರನ್ನು ಬೆಂಬಲಿಸಬೇಕು ಎಂಬುದು ಅರಿಯುವುದಿಲ್ಲ. ಏಕೆಂದರೆ ನಾಯಕ ಎನಿಸಿಕೊಂಡವನು ರಾತ್ರೋ ರಾತ್ರಿ ಪಕ್ಷ ಬದಲಿಸಿ ತಮ್ಮ ಸ್ವಾರ್ಥ ಸಾಧನೆಗಾಗಿ ಕಾರ್ಯಕರ್ತರ ಬಲಿ ತೆಗೆದು ತಾವು ಬದುಕುತ್ತಾರೆ. ಒಂದು ಪಕ್ಷದಲ್ಲಿ ಅನೇಕ ವರ್ಷ ಕಾಲ ಅಧಿಕಾರ ಅನುಭವಿಸಿ ಒಂದು ಸಿದ್ಧಾಂತಕ್ಕೆ ಬದ್ಧನಾಗಿ ಇದ್ದವನು ಒಂದು ದಿನ ಅವನಿಗೆ ಅಧಿಕಾರ ದೊರೆಯದಿದ್ದರೆ ಪಕ್ಷ ಬದಲಿಸಿ ಬಿಡುತ್ತಾರೆ. ಒಟ್ಟಿನಲ್ಲಿ ಅವರಿಗೆ ಅಧಿಕಾರ ಬೇಕು. ವಿಪರ್ಯಾಸ ಏನೆಂದರೆ ಒಂದು ಪಕ್ಷದಲ್ಲಿ ವರ್ಷಗಳ ಕಾಲ ಎಲ್ಲಾ ಅನುಭವಿಸಿ…

Read More

ಮಡಿಕೇರಿ ಜೂ.17 :  ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವವು ಜೂ.18 ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯಲಿದೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ  ಎಸ್.ಎ ಮುರಳೀಧರ್ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10.30ಕ್ಕೆ  ಕಾರ್ಯಕ್ರಮ ನಡೆಯಲಿದ್ದು, ಗೌರವ ಅತಿಥಿಯಾಗಿ ರಕ್ಷಣಾ ಪಡೆಗಳ ಆಸ್ಪತ್ರೆ ಸೇವಾ ವಿಭಾಗದ ಮಾಜಿ ಮಹಾ ನಿರ್ದೇಶಕರು, ರಾಷ್ಟ್ರಪತಿಗಳ ಗೌರವ ಚಿಕಿತ್ಸಕ ಲೆ.ಜ. ಡಾ. ಬಿ.ಎನ್.ಬಿ.ಎಂ ಪ್ರಸಾದ್ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಶಾಸಕರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ, ಮಡಿಕೇರಿ ಶಾಸಕ  ಡಾ.ಮಂತರ್ ಗೌಡ, ರಾಜ್ಯ ಸರ್ಕಾರದ ಮುಖ್ಯ ವಿದ್ಯುತ್ ಪರಿವೀಕ್ಷಕರಾದ ತೀತಿರ ರೋಷನ್ ಅಪ್ಪಚ್ಚು, ಕೊಡಗು ರೆಡ್ ಕ್ರಾಸ್ ಸಭಾಪತಿಗಳಾದ ಬಿ.ಕೆ ರವೀಂದ್ರ ರೈ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.16 : ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ   ಸಂಗಪ್ಪ ಆಲೂರು ಅವರು ಮಾಜಿ ಕಾನೂನು ಸಚಿವ ಎಂ.ಸಿ.ನಾಣಯ್ಯ ಅವರನ್ನು ಅವರ ಸ್ವಗೃಹದಲ್ಲಿ ಇಂದು ಔಪಚಾರಿಕವಾಗಿ ಭೇಟಿಯಾದರು. ಕೊಡಗು ವಿಶ್ವವಿದ್ಯಾಲಯದ ಸರ್ವತೋಮುಖ ಬೆಳವಣಿಗೆಗೆ ಸಹಕರಿಸುವ ಯೋಜನೆಗಳನ್ನು ರೂಪಿಸುವಂತೆ ಕೋರಿ ಸರಕಾರದ ಮುಂದೆ ಆಶೋತ್ತರಗಳನ್ನು ಮುಂದಿಡುವಂತೆ ಅವರಲ್ಲಿ ಕೇಳಿಕೊಳ್ಳಲಾಯಿತು.  ಮುಂದಿನ ಶೈಕ್ಷಣಿಕ ವರ್ಷಕ್ಕೆ ಕೊಡಗು ವಿಶ್ವವಿದ್ಯಾಲಯದ ಅಧೀನದಲ್ಲಿರುವ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಎಪ್ಪತ್ತೈದು ವರ್ಷಗಳನ್ನು ಪೂರೈಸುತ್ತಿದ್ದು ಸರಕಾರವು ಕಾಲೇಜಿನ ಮೂಲಭೂತ ಸೌಕರ್ಯಗಳನ್ನು ಮೇಲ್ದರ್ಜೆಗೇರಿಸುವಂತ ಯೋಜನೆಗಳನ್ನು ಕೈಗೊಳ್ಳಬೇಕು. ಆ ಮೂಲಕ ಕೊಡಗಿನ ವಿದ್ಯಾರ್ಥಿಗಳು ರಾಜ್ಯದ ಬೇರೆ ಜಿಲ್ಲೆಗೆ ಉತ್ತಮ ಶಿಕ್ಷಣವನ್ನರಸಿ ಹೋಗದಂತೆ ಕಾರ್ಯಚಟುವಟಿಕೆಗಳನ್ನು ರೂಪಿಸಬೇಕು ಎಂಬ ಚರ್ಚೆಗಳನ್ನು ನಡೆಸಲಾಯಿತು. ಹೊಸದಾಗಿ ಆರಂಭವಾಗಿರುವ ವಿಶ್ವವಿದ್ಯಾಲಯಗಳ ಅರ್ಥಿಕ ಸ್ಥಿತಿಗತಿ ಸುಧಾರಿಸುವ, ಅನುದಾನಗಳನ್ನು ಪಡೆಯುವ, ಆ ಮೂಲಕ ಕೊಡಗಿನ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುವಂತಹ ದೂರದೃಷ್ಟಿತ್ವ ಇರುವ ಅಂಶಗಳನ್ನು ಈ ನಿಯೋಗವು ಚರ್ಚಿಸಿತು.  ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರಾದ ಡಾ. ಸೀನಪ್ಪ ಅವರು,  ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ…

Read More

ಸೋಮವಾರಪೇಟೆ ಜೂ.16 : ಕೃಷಿ ಇಲಾಖೆಯ ವತಿಯಿಂದ ಸ್ವಸಹಾಯ ಸಂಘಗಳ ಸದಸ್ಯರಿಗೆ ಅಣಬೆ ಬೇಸಾಯದ ತರಬೇತಿ ಕಾರ್ಯಾಗಾರ ನಡೆಯಿತು. ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಕಾರ್ಯಾಗಾರದಲ್ಲಿ ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ಸಂಪನ್ಮೂಲ ವ್ಯಕ್ತಿ ರಶ್ಮಿ, ಅಣಬೆ ಬೇಸಾಯದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ಕೃಷಿ ಸಹಾಯಕ ನಿರ್ದೇಶಕ ಯಾದವ್ ಬಾಬು, ಕೃಷಿ ಅಧಿಕಾರಿ ನವ್ಯನಾಣಯ್ಯ, ಒಕ್ಕಲಿಗರ ಪ್ರಗತಿಪರ ಮಹಿಳಾ ವೇದಿಕೆ ಅಧ್ಯಕ್ಷೆ ಪೂರ್ಣಿಮಾ ಗೋಪಾಲ್ ಇದ್ದರು. 

Read More

ಸೋಮವಾರಪೇಟೆ ಜೂ.16 : ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಪರಿಸರ ನಾಶದಿಂದ ಅನೇಕ ದುಷ್ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಶಾಸಕ ಡಾ.ಮಂತರ್‍ಗೌಡ ಹೇಳಿದರು. ಅರಣ್ಯ ಇಲಾಖೆಯ ವತಿಯಿಂದ ಪರಿಸರ ದಿನಾಚರಣೆ ಅಂಗವಾಗಿ ನಿಡ್ತ ಮೀಸಲು ಅರಣ್ಯದ ಯರಪಾರೆಯಲ್ಲಿ ಬಿತ್ತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾವೆಲ್ಲರೂ ಪರಿಸರ ರಕ್ಷಣೆ ಮಾಡದಿದ್ದರೆ ಮುಂದಿನ ಪೀಳಿಗೆ ಚಿತ್ರದಲ್ಲಿ ಅರಣ್ಯ ಹಾಗೂ ವನ್ಯಪ್ರಾಣಿಗಳನ್ನು ನೋಡಬೇಕಾದ ಪರಿಸ್ಥಿತಿ ಬರಬಹುದು. ಮಕ್ಕಳು ಮನೆಯ ಸುತ್ತಮುತ್ತ ಗಿಡಗಳನ್ನು ನೆಟ್ಟು ಆರೈಕೆ ಮಾಡಿ ತಮ್ಮ ಕೊಡುಗೆ ನೀಡಬೇಕು ಎಂದು ಹೇಳಿದರು. ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್ ಮೂರ್ತಿ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಎ.ಟಿ. ಪೂವಯ್ಯ, ಮಡಿಕೇರಿ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸ ನಾಯಕ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎ.ಗೋಪಾಲ್, ಆರ್‍ಎಫ್‍ಓ ಗಳಾದ ಎಚ್.ಪಿ. ಚೇತನ್, ಶಿವರಾಮ್, ವಿಮಲ್‍ಬಾಬು ಇದ್ದರು.

Read More

ಮಡಿಕೇರಿ ಜೂ.16 :  ಅಖಿಲ ಭಾರತ ಸಾಹಿತ್ಯ ಪರಿಷದ್ ವತಿಯಿಂದ ಜೂ.18  ರಂದು  “ಕವಿತೆಗಳ ಮಳೆ” ವಿನೂತನ ಕವಿಗೋಷ್ಠಿ ನಡೆಯಲಿದೆ. ನಗರದ  ಭಾರತೀಯ ವಿದ್ಯಾಭವನದ ಸಭಾಂಗಣದಲ್ಲಿ  ಸಂಜೆ 3 ಗಂಟೆಯಿಂದ ಕಾರ್ಯಕ್ರಮ ನಡೆಯಲಿದ್ದು,  ಮಳೆಯ ಕುರಿತಂತೆ ಬರೆದ ಕವಿತೆಗಳನ್ನು ಕನ್ನಡ ಮತ್ತು ಪ್ರಾದೇಶಿಕ ಭಾಷೆಯ ಕವಿಗಳು ವಾಚಿಸಲಿದ್ದಾರೆ. ಕಾರ್ಯಕ್ರಮನ್ನು ಅ.ಭಾ.ಸ.ಪ ವಿಭಾಗ ಸಂಯೋಜಕ ಶ್ರೀ ಸುಂದರ್ ಶೆಟ್ಟಿ ಉದ್ಘಾಟಿಸಲಿದ್ದು,  ಕನ್ನಡ ಕಾವ್ಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಕೊಡಗಿನ ಖ್ಯಾತ ಕವಯತ್ರಿ  ಸ್ಮಿತಾ ಅಮೃತರಾಜ್ ಅವರ ಜೊತೆಗೆ ಕವಿತೆಗಳ ಕುರಿತಾದ ಸಂವಾದವೂ ನಡಯಲಿದೆ. ನೂತನವಾಗಿ ಆಯ್ಕೆಯಾದ ಅಖಿಲ ಭಾರತ ಸಾಹಿತ್ಯ ಪರಿಷದ್ ಕೊಡಗು ಘಟಕದ ಅಧ್ಯಕ್ಷ  ಮೇಜರ್ ಡಾ.ಕುಶ್ವಂತ್ ಕೋಳಿಬೈಲು, ಜಿಲ್ಲಾ ಕಾರ್ಯದರ್ಶಿ  ಬಬ್ಬೀರ ಸರಸ್ವತಿ ಮತ್ತು ಸರ್ವ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದು,  ಜಿಲ್ಲೆಯ ಕವಿಗಳು ಮತ್ತು ಸಾಹಿತ್ಯಾಸಕ್ತರು ಪಾಲ್ಗೊಳ್ಳುವಂತೆ ಅಖಿಲ ಭಾರತ ಸಾಹಿತ್ಯ ಪರಿಷದ್  ಮನವಿ ಮಾಡಲಾಗಿದೆ.

Read More