ಲೇಖಕ: admin

ಮಡಿಕೇರಿ ಜೂ.16 : ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಪಟ್ಟಣದ ಇಂದಿರಾ ಬಡಾವಣೆ ನಿವಾಸಿ ಪೂಣಚ್ಚ ಎಂಬುವವರ ಪುತ್ರಿ ಭಾವನ (21) ಮೃತ ಯುವತಿ. ಗುರುವಾರ ಸಂಜೆ ಕುಶಾಲನಗರದಲ್ಲಿ  ಬೈಕ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟಿಯಲ್ಲಿದ್ದ ಭಾವನ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮೃತಪಟ್ಟಿದ್ದಾರೆ. ಜೊತೆಯಲ್ಲಿದ್ದ ಕೊಪ್ಪದ ಬಳಿಯ ಮರೂರು ನಿವಾಸಿ, ವಿದ್ಯಾರ್ಥಿನಿ ನಿಸರ್ಗ ತೀವ್ರವಾಗಿ ಗಾಯಗೊಂಡಿದ್ದು, ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾವನ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಕುಶಾಲನಗರಕ್ಕೆ ಬಂದಿದ್ದ ಈಕೆ ಸ್ನೇಹಿತೆ ನಿಸರ್ಗಳೊಂದಿಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಬೈಕ್ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಕುಶಾಲನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಪೊನ್ನಂಪೇಟೆ, ಜೂ.16 : ದಕ್ಷಿಣ ಕೊಡಗಿನಲ್ಲಿ ಹುಲಿ ದಾಳಿಯ ಆತಂಕವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಫಿ ತೋಟಗಳಲ್ಲಿ ನಿರಂತರವಾಗಿ ಹುಲಿ ಕಾಣಿಸಿಕೊಳ್ಳುತ್ತಿರುವುದರಿಂದ ಬೆಳೆಗಾರರಲ್ಲಿ ಮತ್ತು ತೋಟ ಕಾರ್ಮಿಕರಲ್ಲಿ ತೀವ್ರ ಭಯದ ವಾತಾವರಣ ಸೃಷ್ಟಿಯಾಗಿದೆ. ಆದ್ದರಿಂದ ಹುಲಿಗಳ ಹಾವಳಿಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸರಕಾರ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಬಿಜೆಪಿ ಮುಖಂಡ ಮೂಕೊಂಡ ವಿಜು ಸುಬ್ರಮಣಿ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿ ಇತ್ತೀಚಿಗೆ ಹುಲಿ ದಾಳಿ ನಡೆಸಿ ಹಸುಗಳನ್ನು ಕೊಂದು ಹಾಕಿದೆ. ಈ ಘಟನೆಯಿಂದ ಇಡೀ ಗ್ರಾಮದ ಜನರಲ್ಲಿ ಭಯ ಮೂಡಿದ್ದು, ಕಾರ್ಮಿಕರು ತೋಟದ ಕೆಲಸಗಳಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನ ಕಾಫಿ ಬೆಳೆಗಾರರಿಗೆ ಮತ್ತು ಕಾರ್ಮಿಕರಿಗೆ ಹುಲಿ ಮತ್ತು ಕಾಡಾನೆಗಳ ಹಾವಳಿ ಬಹುದೊಡ್ಡ ಸವಾಲಾಗಿದೆ. ಇದರಿಂದ ವನ್ಯಪ್ರಾಣಿಗಳ ಹಾವಳಿ ಪೀಡಿತ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ರಸ್ತೆಗಳಲ್ಲಿ ಮುಕ್ತವಾಗಿ ಸಂಚರಿಸಲು ಸಾಧ್ಯವಾಗುತ್ತಿಲ್ಲ. ವಾಹನ ಚಾಲಕರು ಜೀವಭಯದಿಂದ ವಾಹನ ಚಾಲಿಸಬೇಕಾಗಿದೆ. ಆದ್ದರಿಂದ…

Read More

ನಾಪೋಕ್ಲು ಜೂ.16 :  ನಾಪೋಕ್ಲು-ಮೂರ್ನಾಡು ಮುಖ್ಯ ರಸ್ತೆಯಲ್ಲಿ  ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋಕೇರಿ ಗ್ರಾಮದ ಎಚ್. ಕೆ.ಸುದೀಪ್ ಎಂಬ ಯುವಕನ ಚಿಕಿತ್ಸೆಗಾಗಿ ನಾಪೋಕ್ಲು ವಾಹನ ಚಾಲಕರ ಸಂಘದಿಂದ ಆರ್ಥಿಕ ನೆರವು ನೀಡಲಾಯಿತು. ನಾಪೋಕ್ಲು ವಾಹನ ಚಾಲಕರ ಸಂಘದಿಂದ  ಸಾರ್ವಜನಿಕರ ಸಹಾಯದಿಂದ ಸಂಗ್ರಹಿಸಲಾದ 21,670 ರೂ. ಗಳನ್ನು ಯುವಕನ ತಾಯಿ ಸವಿತಾ ಅವರಿಗೆ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಅವರ ನೇತೃತ್ವದಲ್ಲಿ ನಾಪೋಕ್ಲು ವಿನ ಸಂಘದ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭ ನಾಪೋಕ್ಲು ವಾಹನ ಚಾಲಕ ಮತ್ತು ಮಾಲೀಕರ ಸಂಘದ ಸದಸ್ಯರಾದ ರಾಶಿದ್, ಸುನಿಲ್, ಪ್ರಕಾಶ್,ಶಕೀಲ್, ಜಗದೀಶ್ ಮತ್ತಿತರರು ಹಾಜರಿದ್ದರು. ವರದಿ :ಝಕರಿಯ ನಾಪೋಕ್ಲು   

Read More

ನಾಪೋಕ್ಲು ಜೂ.16 : ಕೇರಳದ ಕಲ್ಲಿಕೋಟೆಯಲ್ಲಿರುವ ಮರ್ಕಝ್ ನಾಲೇಜ್ ಸಿಟಿಯಲ್ಲಿ ಅಂತರಾಷ್ಟ್ರೀಯ ವೈದ್ಯಕೀಯ ಸಮ್ಮೇಳನ ಸಂಭ್ರಮದಿಂದ ನಡೆಯಿತು. ಮರ್ಕಝ್ ಯುನಾನಿ ವೈದ್ಯಕೀಯ ಕಾಲೇಜು, ಡಾ.ಮೂಪನ್ಸ್ ವೈದ್ಯಕೀಯ ಕಾಲೇಜು ಮತ್ತು ಮೆಡಿಸಿನ್ ಇಂಡಿಯಾ ಇವುಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ಸಮ್ಮೇಳನವನ್ನು ಮೂಪನ್ಸ್ ವೈದ್ಯಕೀಯ ಕಾಲೇಜಿನ ಡೀನ್ ಡಾ.ಗೋಪಕುಮಾರ ಕರ್ತ ಉದ್ಘಾಟಿಸಿದರು. ಮರ್ಕಝ್ ನಾಲೇಜ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಡಾ.ಎ.ಪಿ ಅಬ್ದುಲ್ ಹಕೀಂ ಅಝ್ಹರಿ ಮುಖ್ಯ ಭಾಷಣ ಮಾಡಿದರು. ಡಾ.ಅನೀಶ್ ಬಶೀರ್, ಡಾ.ಅಮೀರ್ ಹಸನ್, ಡಾ.ಶೇಖ್ ಶಾಹುಲ್ ಹಮೀದ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯದ ಪ್ರೊ.ಅಲನ್ ಬಿಟ್ಟಿಲ್, ಡಾ.ಅಜು ಮ್ಯಾಥ್ಯೂ, ಡಾ.ಗ್ರೇಸ್ ರೌಲಿ ಯುಕೆ, ಡಾ.ಒಕೆಎಂ ಅಬ್ದುರ್ರಹ್ಮಾನ್, ಡಾ.ಪಿವಿ ಶಂಸುದ್ದೀನ್, ಡಾ.ಗಿರೀಶ್ ವಡಗೊಂಕರ್ ಮುಂಬೈ ಮತ್ತು ಇತರ ವೈದ್ಯಕೀಯ ರಂಗದ ತಜ್ಞರು ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದರು. ಕ್ಯಾನ್ಸರ್ ಆರೈಕೆ, ಪೋಷಕ ಆಹಾರ, ಸಾಂಕ್ರಾಮಿಕ ರೋಗ ತಡೆಗಟ್ಟುವಿಕೆ, ಸಾಂಕ್ರಾಮಿಕ ರೋಗ ತಡೆಗಟ್ಟುವಿಕೆಗೆ ಯುನಾನಿ ವಿಧಾನ ಮರ್ಕಝ್ ವಿಧಾನ, ಆರೋಗ್ಯ ಸೇವೆಯ ಗುಣಮಟ್ಟ ಸುಧಾರಣೆ, ವೈದ್ಯಕೀಯ…

Read More

ನಾಪೋಕ್ಲು ಜೂ.16 : ಅತೀ ಹೆಚ್ಚು ಗ್ರಾಮಗಳನ್ನು ಹೊಂದಿರುವ ನಾಪೋಕ್ಲು ವ್ಯಾಪ್ತಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ಇದ್ದರೂ ಅಗತ್ಯವಾದ ವೈದ್ಯರ ಸೇವೆ ಲಭಿಸದೆ ದಶಕಗಳಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಎಂದು ಆರೋಪಿಸಿರುವ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಕಾರ್ಯದರ್ಶಿ ನಾಪೋಕ್ಲುವಿನ ಟಿ.ಎ. ಮೊಹಮ್ಮದ್ ಹನೀಫ್ ಆರೋಗ್ಯ ಕೇಂದ್ರದಲ್ಲಿ ದಿನದ 24 ಗಂಟೆ ಸಮರ್ಪಕವಾಗಿ ವೈದ್ಯರ ಸೇವೆ ಒದಗಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹೆಚ್ಚು ಜನಸಂಖ್ಯೆ ಹೊಂದಿರುವ ನಾಪೋಕ್ಲು ಪಟ್ಟಣದಲ್ಲಿ ಈ ಹಿಂದೆ ಇದ್ದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕೆಡವಿ ಸರ್ಕಾರ ಕೋಟಿಗಟ್ಟಲೆ ಹಣ ಖರ್ಚುಮಾಡಿ ಸುಸಜ್ಜಿತ ಕಟ್ಟಡ ನಿರ್ಮಿಸಿ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಆದರೆ ವೈದ್ಯರ ನೇಮಕದ ಬಗ್ಗೆ ಮಾತ್ರ ಇದುವರೆಗು ಯಾರೂ ಕಾಳಜಿ ತೋರಿಲ್ಲವೆಂದು ಆರೋಪಿಸಿದ್ದಾರೆ. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಪ್ರತಿದಿನ 200ರಿಂದ 300 ಮಂದಿ ರೋಗಿಗಳು ಬರುತ್ತಿದ್ದಾರೆ. ಆದರೆ ಇಲ್ಲಿರುವ ಎರಡು ವೈದ್ಯರುಗಳು ಬೆಳಿಗ್ಗೆ 10 ಗಂಟೆಯಿಂದ…

Read More

ಸುಂಟಿಕೊಪ್ಪ : ಚೆಟ್ಟಳ್ಳಿ – ಸುಂಟಿಕೊಪ್ಪ ಮಾರ್ಗದ ಕೃಷ್ಣ ತೋಟದ ಸಮೀಪ ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿತು. ರಸ್ತೆಯಲ್ಲಿ ಆನೆ ಓಡಾಟ ಕಂಡು ವಾಹನ ಸವಾರರು ಆತಂಕಗೊಂಡರು. ಕಾಡಾನೆಯನ್ನು ಅರಣ್ಯ ಇಲಾಖೆಯ ಆರ್ ಆರ್ ಟಿ ತಂಡದ ಸಿಬ್ಬಂದಿಗಳು ಪಟಾಕಿ ಸಿಡಿಸಿ ಕಾಡಿಗೆ ಅಟ್ಟಿಸುವ ಕೆಲಸ ಮಾಡಿದರು.

Read More

ಮಡಿಕೇರಿ ಜೂ.15 : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆಯ ಕುರಿತು ಸಿಎನ್‌ಸಿ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಜೂ.14 ರಂದು ಹೈಕೋರ್ಟ್ ನಲ್ಲಿ ನಡೆಯಿತು. ವಿಚಾರಣೆಯನ್ನು ಆ.3 ಕ್ಕೆ ಮುಂದೂಡಲಾಗಿದ್ದು, ಮುಂದಿನ 6 ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಿತು. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಎಂಜೆ ಎಸ್ ಕಮಲ್ ಅವರ ವಿಭಾಗೀಯ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಡಾ.ಸುಬ್ರಮಣಿಯನ್ ಸ್ವಾಮಿ ಅವರ ಪರವಾಗಿ ನ್ಯಾಯವಾದಿ ಕಿರಣ್, ಎನ್.ಯು.ನಾಚಪ್ಪ ಅವರ ಪರ ಸುಪ್ರೀಂ ಕೋರ್ಟ್ ವಕೀಲ ವಿಕ್ರಮ್ ಹೆಗ್ಡೆ ಹಾಗೂ ಚಿತ್ವಾನ್ ಹಾಜರಾಗಿ ಅಹವಾಲು ಸಲ್ಲಿಸಿದರು. ಎನ್.ಯು.ನಾಚಪ್ಪ, ಲೆಫ್ಟಿನೆಂಟ್ ಕರ್ನಲ್ ಪಾರ್ವತಿ, ಮಚ್ಚಾರಂಡ ಸಿಂಧು, ಶ್ರೇಯ ನಾಚಪ್ಪ, ಕಲಿಯಂಡ ಪ್ರಕಾಶ್, ಜಮ್ಮಡ ಮೋಹನ್, ಪಟ್ಟಮಾಡ ಕುಶ, ಅರೆಯಡ ಗಿರೀಶ್, ಚಂಬಂಡ ಜನತ್, ಮಂದಪಂಡ ಮನೋಜ್, ಆಲ್ಮಂಡ ಜೈ, ಬೊಳ್ಳಾರಪಂಡ…

Read More

ಮಡಿಕೇರಿ ಜೂ.15 : ಸರ್ಕಾರಿ ದಾಖಲೆಗಳಲ್ಲಿ ಕೊಡವರನ್ನು ಕೊಡಗರು ಎನ್ನುವ ಬದಲಿಗೆ ಕೊಡವರು ಎಂದು ನಮೂದಿಸಲು ಅಧಿಕೃತ ಆದೇಶ ಹೊರಡಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮುಖ್ಯಮಂತ್ರಿಗಳು ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಪತ್ರ ಸಲ್ಲಿಸಿದೆ. ಬೆಂಗಳೂರಿಗೆ ತೆರಳಿದ ಸಿಎನ್‌ಸಿ ನಿಯೋಗ ಕೊಡವರು ಪದ ಬಳಕೆಯ ಕುರಿತು ಹೈಕೋರ್ಟ್ ಆದೇಶವನ್ನು ಗೆಜೆಟ್ ಅಧಿಸೂಚನೆಯ ಮೂಲಕ ಅನುಷ್ಠಾನಕ್ಕೆ ತರಬೇಕೆಂದು ಒತ್ತಾಯಿಸಿತು. 2010 ಜೂನ್ ತಿಂಗಳಿನಲ್ಲಿ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿದ ಪರಿಣಾಮ ಆಯೋಗವು ಕಾಗುಣಿತ ದೋಷ ತಿದ್ದುಪಡಿಗೆ ಶಿಫಾರಸ್ಸು ಮಾಡಿತು. ಕೊಡಗರ ಬದಲಿಗೆ ಕೊಡವ/ಕೊಡವರು ಎಂದು ನಮೂದಿಸುವ ಕುರಿತು ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿತು. ಆದರೆ ಸರ್ಕಾರ ವರದಿಯನ್ನು ಜಾರಿಗೊಳಿಸಲಿಲ್ಲ ಮತ್ತು ಯಾವುದೇ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲಿಲ್ಲ. ಈ ಕಾರಣದಿಂದ ಹೈಕೋರ್ಟ್ ಮೆಟ್ಟಿಲೇರಿದ ಪರಿಣಾಮ ಕೋರ್ಟ್ ಕೂಡ ಕೊಡವ ಪದ ಬಳಕೆ ಕುರಿತು ಆದೇಶ ಹೊರಡಿಸಿತು. ಆದರೆ ಅಧಿಕಾರಿಶಾಹಿಗಳು ನ್ಯಾಯಾಲಯದ ಆದೇಶವನ್ನು ಕೂಡ ಪಾಲಿಸಲಿಲ್ಲವೆಂದು ಸಿಎನ್‌ಸಿ ಅಧ್ಯಕ್ಷ…

Read More

ಮಡಿಕೇರಿ ಜೂ.15 : ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ 30 ಮಂದಿ ಅಧಿಕಾರಿ ಸಿಬ್ಬಂದಿಯನ್ನೊಳಗೊಂಡ ಕೊಡಗು ಜಿಲ್ಲಾ ಪೊಲೀಸ್ ವಿಪತ್ತು ನಿರ್ವಹಣಾ ತಂಡದಿಂದ ಮದೆನಾಡು ಗ್ರಾಮ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣಾ ಕಾರ್ಯಾಚರಣೆ ನಡೆಸುವ ಬಗ್ಗೆ ಅಭ್ಯಾಸವನ್ನು ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ನೇತೃತ್ವದಲ್ಲಿ ನಡೆದ ಅಭ್ಯಾಸ ಕಾರ್ಯಾಚರಣೆಯಲ್ಲಿ ಮಡಿಕೇರಿ ಉಪವಿಭಾಗ ಸಹಾಯಕ ಎಸ್.ಪಿ, ಆರ್.ಪಿ.ಐ. ಡಿಎಆರ್ ಮಡಿಕೇರಿ ಹಾಗೂ ಇನ್ನಿತರ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

Read More

ಮಡಿಕೇರಿ ಜೂ.15 : ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮಡಿಕೇರಿ ಉಪ ವಿಭಾಗದ ಕುಂದಚೇರಿ ಗ್ರಾಮದ ಚೆಟ್ಟಿಮಾನಿ ಸಮುದಾಯ ಭವನ, ಗೋಣಿಕೊಪ್ಪಲು ಉಪ ವಿಭಾಗದ ಹೊಸೂರು ಗ್ರಾ.ಪಂ. ಸಭಾಂಗಣ, ವಿರಾಜಪೇಟೆ ಉಪ ವಿಭಾಗದ ಹಚ್ಚಿನಾಡು ಸರ್ಕಾರಿ ಪ್ರಾಥಮಿಕ ಶಾಲೆ, ಹೆಗ್ಗಳ ಹಿರಿಯ ಪ್ರಾಥಮಿಕ ಶಾಲೆ, ಬೇಟೋಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ, ಕುಶಾಲನಗರ ಉಪ ವಿಭಾಗದ ಕೂಡಿಗೆ ಗ್ರಾಮದ ತೊರೆನೂರು ಗ್ರಾ.ಪಂ ಸಭಾಂಗಣ ಹಾಗೂ ಸೋಮವಾರಪೇಟೆ ಉಪ ವಿಭಾಗದ ಬಜೆಗುಂಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಜೂ.17 ರಂದು ಬೆಳಗ್ಗೆ 11 ಗಂಟೆಯಿಂದ ವಿದ್ಯುತ್ ಅದಾಲತ್ ನಡೆಯಲಿದೆ. ಆದ್ದರಿಂದ ಈ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್‍ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.

Read More