ಲೇಖಕ: admin

ಮಡಿಕೇರಿ ಜೂ.15 : ಭತ್ತದ ಬೀಜದಿಂದ ಬರುವ ಬೆಂಕಿರೋಗ, ಊದು ಬತ್ತಿರೋಗ, ಕಂದು ಎಲೆಚುಕ್ಕಿ ರೋಗ ಮತ್ತು ಹುಸಿಕಾಡಿಗೆ ರೋಗಾಣುಗಳು ಮಣ್ಣು, ನೀರು, ಗಾಳಿ, ಬಿತ್ತನೆ ಬೀಜ ಮತ್ತು ಇತರೆ ಮಾಧ್ಯಮಗಳಿಂದ ಬೀಜದ ಮುಖಾಂತರ ಪ್ರಸಾರಗೂಂಡು ರೈತರಿಗೆ ಅಪಾರ ಆರ್ಥಿಕ ಹಾನಿಯನ್ನು ಉಂಟುಮಾಡುತ್ತವೆ. ರೈತರು ಅತಿ ಸರಳ ಮತ್ತು ಕಡಿಮೆ ಖರ್ಚಿನಲ್ಲಿ ಬೀಜದಿಂದ ಪ್ರಸಾರವಾಗುವ ಈ ರೋಗಗಳನ್ನು ಬಿಜೋಪಚಾರ ಮಾಡಿ ಬಿತ್ತನೆ ಮಾಡುವುದರಿಂದ ಬೀಜಗಳಿಗೆ, ಮೊಳಕೆಯೊಡೆಯುವ ಸಸಿಗಳಿಗೆ ಹಾಗೂ ಮುಂದಿನ ಸಸ್ಯ ಬೆಳವಣಿಗೆ ಹಂತದಲ್ಲಿ ಬರುವ ಅನೇಕ ರೋಗಗಳಿಂದ ರಕ್ಷಣೆ ಒದಗಿಸಬಹುದಾಗಿದೆ. ಬೀಜದಿಂದ ಪ್ರಸಾರವಾಗುವ ಅನೇಕ ರೋಗಗಳಲ್ಲಿ ಹಾನಿಕಾರಕ ರೋಗಾಣುಗಳಾದ ಶಿಲೀಂದ್ರ, ದುಂಡಾಣು ಮತ್ತು ನಂಜಾಣು ಸೂಕ್ಷ್ಮ ಜೀವಿಗಳು ಬೀಜಗಳ ಹೊರಮೈ ಹಾಗೂ ಒಳಮೈ ಆವರಿಸಿ ಬೀಜಗಳು ಮೊಳಕೆಯೊಡೆಯುವಾಗ ಸಸಿಗಳು ಬೆಳೆಯುವಾಗ ಜೊತೆಯಲ್ಲೆ ಇದ್ದು ಬೆಳೆಯ ವಿವಿಧ ಬೆಳವಣಿಗೆಯ ಹಂತದಲ್ಲಿ ರೋಗವು ಉಲ್ಬಣಿಸಿ ಬೆಳೆಯ ಹಾನಿಗೆ ಕಾರಣವಾಗುತ್ತವೆ. ಬೀಜೋಪಚಾರ ಮಾಡುವ ವಿಧಾನ :: ಪ್ರತೀ ಎಕರೆಗೆ ಶಿಫ಼ಾರಸ್ಸು ಮಾಡಿದ 25-30 ಕೆ.ಜಿ…

Read More

ಮಡಿಕೇರಿ ಜೂ.15 : ನಾಗರಹೊಳೆಯ ಆದಿವಾಸಿ ಜಮ್ಮ-ಪಾಳೇ ಹಕ್ಕು ಸ್ಥಾಪನಾ ಸಮಿತಿಯು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸುತ್ತಿದ್ದು, ಈ ಹಿನ್ನೆಲೆ ಅರಣ್ಯ ಹಕ್ಕು ಕಾಯ್ದೆಯಡಿ ಮತ್ತೊಮ್ಮೆ ಪರಿಶೀಲಿಸಲು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಹಾಡಿಗಳ ಆದಿವಾಸಿ ಜನರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಹಾಡಿಯ ಜನರು ವಾಸಕ್ಕಾಗಿ ಮಾತ್ರ ಅರಣ್ಯ ಹಕ್ಕು ಪತ್ರ ನೀಡಿದ್ದು, ವ್ಯವಸಾಯಕ್ಕೆ ಭೂಮಿ ನೀಡಿಲ್ಲ. ಆದ್ದರಿಂದ ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ ಹಕ್ಕು ಕಾಯ್ದೆಯಡಿ ಉಳುಮೆ ಮಾಡುತ್ತಿರುವ ಕೃಷಿ ಭೂಮಿಯನ್ನು ಆದಿವಾಸಿಗಳಿಗೆ ನೀಡಬೇಕು ಎಂಬುದು ಆಗ್ರಹವಾಗಿದೆ. ಆ ನಿಟ್ಟಿನಲ್ಲಿ ಈಗಾಗಲೇ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿ ಎರಡು ಬಾರಿ ಗ್ರಾಮ ಅರಣ್ಯ ಹಕ್ಕು ಸಮಿತಿಯಲ್ಲಿ ತಿರಸ್ಕೃತವಾಗಿರುವ ವೈಯಕ್ತಿಕ 320 ಅರ್ಜಿಗಳನ್ನು ಪುನರ್ ಪರಿಶೀಲಿಸಿ ವರದಿ ನೀಡುವಂತೆ…

Read More

ಸುಂಟಿಕೊಪ್ಪ ಜೂ.15 : ಸುಂಟಿಕೊಪ್ಪ ಗ್ರಾ.ಪಂ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡ ಹಿನ್ನೆಲೆ ಜಿಲ್ಲಾಡಳಿತ, ಕೊಡಗು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆಕಾಶ್ ಹಾಗೂ ಡಿಎಚ್‍ಓ ಡಾ.ಸತೀಶ್‍ಕುಮಾರ್ ವಿವಿಧ ವಾರ್ಡ್‍ಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು. ನಂತರ ಸುಂಟಿಕೊಪ್ಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಕೊಂಡ ಅಧಿಕಾರಿಗಳು ಅಗತ್ಯ ಮುಂಜಾಗೃತ ಕ್ರಮ ಕೈಗೊಳ್ಳಲು ಸೂಚಿಸಿದರು. ಮನೆಯ ಸುತ್ತ ಶುಚಿತ್ವ ಕಾಪಾಡಲು ಆದ್ಯತೆ ನೀಡಬೇಕು, ಚರಂಡಿಯಲ್ಲಿ ನೀರು ಕಟ್ಟಿರುವುದನ್ನು ತೆರವುಗೊಳಿಸಲು ಪಂಚಾಯಿತಿ ವತಿಯಿಂದ ಕ್ರಮ ಕೈಗೊಳ್ಳಬೇಕೆಂದರು. ಈ ಸಂದರ್ಭ ಗ್ರಾ.ಪಂ ಸದಸ್ಯ ರಫೀಕ್‍ಖಾನ್ ಮಾತನಾಡಿ, ಶುಚಿತ್ವ ಈಗಾಗಲೇ ಜಾಷಧಿ ಸಿಂಪಡಿಸುವ ಕಾರ್ಯವನ್ನು ಪೌರ ಕಾರ್ಮಿಕರಿಂದ ನಿರ್ವಹಿಸಲಾಗಿದೆ ಎಂದು ತಿಳಿಸಿದರು. ಮತ್ತೋರ್ವ ಸದಸ್ಯ ಪಿ.ಆರ್.ಸುನಿಲ್‍ಕುಮಾರ್ ಮಾತನಾಡಿ, ಸುಂಟಿಕೊಪ್ಪ ಗ್ರಾ.ಪಂ.ಗೆ ಕಸ ವಿಲೇವಾರಿಗಾಗಿ ವಾಹನದ ಅವಶ್ಯಕತೆ ಇದ್ದು, ಇರುವ 1 ವಾಹನದಿಂದ ಎಲ್ಲಾ ವಾರ್ಡ್‍ಗಳಿಗೆ ತೆರಳಿ ಕಸವಿಲೇವಾರಿ ಮಾಡಲು ಸಾಧ್ಯವಾಗುತ್ತಿಲ್ಲ. ಇನ್ನೊಂದು ವಾಹನದ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರದು. 7 ವಾರ್ಡ್‍ನಲ್ಲಿ ಕುಡಿಯುವ ನೀರಿನ…

Read More

ಸುಂಟಿಕೊಪ್ಪ ಜೂ.15 : ಕುಶಾಲನಗರ ಕೊಡಗು ಜಿಲ್ಲಾ ಗೌಡ ನೌಕರರ ಟ್ರಸ್ಟ್ ಉದ್ಘಾಟನೆ, ಪ್ರತಿಭಾ ಪುರಸ್ಕಾರ, ನಿವೃತ್ತರಿಗೆ ಸನ್ಮಾನ ಹಾಗೂ ಜಿಲ್ಲೆಯ ನೂತನ ಶಾಸಕರುಗಳಿಗೆ ಅಭಿನಂದನಾ ಸಮಾರಂಭವು ಜೂ.18 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆಯಲಿದ್ದು, ಆದಿ ಚುಂಚನಗಿರಿ ಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಹಾಸನ ಕೊಡಗು ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಆರ್ಶಿವಚನ ಹಾಗೂ ಸಮಾರಂಭ ಉದ್ಘಾಟನೆಯನ್ನು ನೇರವೇರಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಾಳಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್‍ಗೌಡ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಾಜಿ ಮುಖ್ಯ ಮಂತ್ರಿಗಳು ಹಾಗೂ ಲೋಕಸಭಾ ಸದಸ್ಯ ಡಿ.ವಿ.ಸದಾನಂದಗೌಡ, ಕೊಡಗು ಮೈಸೂರು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ತ್ ನ ಎಲ್.ಬೋಜೇಗೌಡ, ಮಾಜಿ ಸಚಿವ ಬಿ.ಎ.ಜೀವಿಜಯ, ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ, ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ,…

Read More

ಮಡಿಕೇರಿ ಜೂ.15:  ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳು‌ ಪ್ರಕಟಗೊಂಡಿದ್ದು ಜಿಲ್ಲೆಯ ಐವರು ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ತಿಳಿಸಿದ್ದಾರೆ. ಸಂಘದ ವತಿಯಿಂದ ನೀಡಲಾಗುವ ಅತ್ಯತ್ತಮ ಕ್ರೀಡಾ ವರದಿ ಪ್ರಶಸ್ತಿಗೆ ಕನ್ನಡ ಪ್ರಭ ಜಿಲ್ಲಾ ವರದಿಗಾರ ವಿಘ್ನೇಶ್ ಭೂತನಕಾಡು ಭಾಜನರಾಗಿದ್ದಾರೆ. ಕನ್ನಡ ಪ್ರಭದಲ್ಲಿ ಪ್ರಕಟಗೊಂಡ ‘ಏಷ್ಯನ್ ಗೇಮ್ಸ್,ಕಾಮನ್ ವೆಲ್ತ್ ಗೆ ಅರ್ಹತೆ ಪಡೆದ ಕೊಡಗಿನ ಎ.ಬಿ‌.ಬೆಳ್ಳಿಯಪ್ಪ’ ವರದಿಗೆ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿಗೆ ಪ್ರತಿನಿಧಿ ಪತ್ರಿಕೆಯ ಜಿಲ್ಲಾ ವರದಿಗಾರ ಸುರೇಶ್ ಬಿಳಿಗೇರಿ ಭಾಜನರಾಗಿದ್ದಾರೆ.ಪ್ರತಿನಿಧಿಯಲ್ಲಿ ಪ್ರಕಟಗೊಂಡ ‘ಕೊಡಗಿನಲ್ಲಿ ರಸ್ತೆಗಳೇ ಮಾಯ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ.ಅತ್ಯುತ್ತಮ ಕೃಷಿ ವರದಿ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಸೋಮವಾರಪೇಟೆ ವರದಿಗಾರ ಕವನ್ ಕಾರ್ಯಪ್ಪ ಭಾಜನರಾಗಿದ್ದಾರೆ.ವಿಜಯ ಕರ್ನಾಟಕದಲ್ಲಿ ಪ್ರಕಟಗೊಂಡ ‘ಕಾಡಾನೆ ಕಾಟದಿಂದ ಕಂಗಾಲಾದ ಕೃಷಿಕ’ ವರದಿಗೆ ಪ್ರಶಸ್ತಿ ದೊರೆತಿದೆ.ಸಂಘದ ಸಲಹೆಗಾರರಾದ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ.ಅನಂತ ಶಯನ ಅವರು ತಮ್ಮ ತಾಯಿ ರಾಜಲಕ್ಷ್ಮಿ ಗೋಪಾಲಕೃಷ್ಣ ಅವರ…

Read More

ಮಡಿಕೇರಿ ಜೂ.15 : ಜಿಲ್ಲೆಯಲ್ಲಿ ಮಲೆನಾಡು ರಕ್ಷಣಾ ಸೇನೆ ಅಸ್ಥಿತ್ವಕ್ಕೆ ಬಂದಿದ್ದು, ಜಿಲ್ಲಾ ಮತ್ತು ತಾಲೂಕು ಹಾಗೂ ಹೋಬಳಿ ಪದಾಧಿಕಾರಿಗಳನ್ನು ಶೀಘ್ರದಲ್ಲಿ ನೇಮಕ ಮಾಡಲಾಗುವುದು ಎಂದು ಮಲೆನಾಡು ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ರಕ್ಷಿತ್ ರವೀಂದ್ರ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೆನಾಡು ರಕ್ಷಣಾ ಸೇನೆಯ ಸಂಸ್ಥಾಪಕ, ರಾಜ್ಯಾಧ್ಯಕ್ಷ ಸಾಗರ್ ಜಾನೇಕೆರೆ ಅವರು ಕೊಡಗು ಜಿಲ್ಲಾಧ್ಯಕ್ಷನ್ನಾಗಿ ತನ್ನನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಪದಾಧಿಕಾರಿಗಳ ನೇಮಕ ಮತ್ತು ತಾಲೂಕು, ಹೋಬಳಿ ಮಟ್ಟದ ಪದಾಧಿಕಾರಿಗಳನ್ನು ರಾಜ್ಯಾಧ್ಯಕ್ಷ ನೇತೃತ್ವದಲ್ಲಿ ನೇಮಕ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಕನ್ನಡಪರ ಧ್ವನಿ ಎತ್ತಲು ಯಾವುದೇ ಸಂಘಟನೆ ಮುಂದೆ ಬರದೇ ರಾಜಕೀಯ ಪ್ರೇರಿತವಾಗಿ ನಡಿಯುತ್ತಿದೆ. ಆದ್ದರಿಂದ ಕನ್ನಡ ಪರ, ರೈತರ ಪರ ಹಾಗೂ ಜಿಲ್ಲೆಯ ಜ್ವಲಾಂತ ಸಮಸ್ಯೆಗಳ ಬಗ್ಗೆ ಸಂಘಟನೆ ವತಿಯಿಂದ ಕಾಳಜಿ ವಹಿಸಿ ಬಗೆಹರಿಸುವ ಪ್ರಯತ್ನ ಮಾಡಲಾಗುವುದು. ಮಲೆನಾಡಿನ ಸಂರಕ್ಷಣೆಗಾಗಿ ಪಣ ತೊಡುವುದರ ಜತೆಗೆ ನೆಲ-ಜಲ, ನಾಡು-ನುಡಿ ಸಂರಕ್ಷಣೆಗೆ ಹೋರಾಟ ಹಾಗೂ ಸಾಮಾಜಿಕ…

Read More

ಬೆಂಗಳೂರು ಜೂ.15  : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹ ಲಕ್ಷ್ಮಿ’ ಯೋಜನೆಗೆ ಜೂ.16 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ನವರಿಗೆ ಈ ಯೋಜನೆ ಲಾಭ ಸಿಗುತ್ತದೆ. ನಾಳೆಯಿಂದ ಆಫ್ ಲೈನ್ ಹಾಗೂ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದರು. ಜೂ.16ರ ಮಧ್ಯಾಹ್ನ 1.30ಕ್ಕೆ ‘ಗೃಹಲಕ್ಷ್ಮೀ’ ಅರ್ಜಿ ಸಲ್ಲಿಕೆಗೆ ಸಿ.ಎಂ ಸಿದ್ದರಾಮಯ್ಯ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ. ಸೇವಾ ಸಿಂಧು ಪೋರ್ಟಲ್​ನಲ್ಲಿ ಚಾಲನೆ ನೀಡಲಿದ್ದಾರೆ. ಶಕ್ತಿಭವನದಲ್ಲಿ ಸೇವಾ ಸಿಂಧು ವೆಬ್​ಪೋರ್ಟಲ್​ ನ್ನು  ಸಿಎಂ ಬಿಡುಗಡೆ ಮಾಡಲಿದ್ದಾರೆ ಎಂದು  ತಿಳಿಸಿದರು.

Read More

ನಾಪೋಕ್ಲು ಜೂ.15 :  ಮಡಿಕೇರಿಯಿಂದ ಮೂರ್ನಾಡು, ಕುಂಬಳದಾಳು ಮೂಲಕ ನಾಪೋಕ್ಲುವನ್ನು ಸಂಪರ್ಕಿಸುವ ನೂತನ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಗೊಂಡಿದ್ದು, ಆರಂಭಿಕ ದಿನದಂದು ಮಹಿಳೆಯರು ಉಚಿತ ಪ್ರಯಾಣ ಮಾಡಿ ಸಂಭ್ರಮಿಸಿದರು. ಮಡಿಕೇರಿಯಿಂದ ಮಧ್ಯಾಹ್ನ 12.30 ಕ್ಕೆ ಹೊರಡುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು 1.15 ಕ್ಕೆ ನಾಪೋಕ್ಲು ತಲುಪಲಿದ್ದು ಅದೇ ರಸ್ತೆಯಲ್ಲಿ ಹಿಂದಿರುಗಲಿದೆ. ಶಾಸಕ ಡಾ.ಮಂಥರ್ ಗೌಡ ಅವರಿಗೆ ಕುಂಬಳಗಾಳು ಗ್ರಾಮಸ್ಥರು ಬಸ್ ಸಂಚಾರ ಕಲ್ಪಿಸಿ ಕೊಡುವಂತೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರ ಉಪಯೋಗಕ್ಕಾಗಿ ಈ ಬಸ್ ಸೌಲಭ್ಯವನ್ನು ಕಲ್ಪಿಸಿರುವುದು ಗ್ರಾಮಸ್ಥರ ಪ್ರಶಂಸೆಗೆ ಕಾರಣವಾಗಿದೆ.ಈ ಸಂದರ್ಭ ಬಸ್ ಸಂಚಾರದ ಉದ್ಘಾಟನೆಯನ್ನು ಕುಂಬಳದಾಳು ಅಂಗನವಾಡಿ ಕೇಂದ್ರದ ಸಮೀಪ ನೆರವೇರಿಸಿ ಮಹಿಳೆಯರು ಸಂಭ್ರಮಿಸಿದರು. ಸಂಜೀವಿನಿ ಸ್ವಸಹಾಯ ಸಂಘದ ಮುಖ್ಯಸ್ಥೆ ವೀಣಾ ಕುಮಾರಿ, ಅಂಗನವಾಡಿ ಕಾರ್ಯಕರ್ತೆ ಅನುರಾವತಿ ಬಸ್ಸಿಗೆ ಹೂವಿನ ಮಾಲೆ ಹಾಕಿ ಆರತಿ ಎತ್ತಿ ಈಡುಗಾಯಿ ಒಡೆಯುವುದರ ಮೂಲಕ ಬಸ್ ಸಂಚಾರಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಹೊದ್ದೂರು ಗ್ರಾಮ ಪಂಚಾಯ್ತಿ ಸದಸ್ಯರಾದ…

Read More

ಬೆಂಗಳೂರು: ಪಿಯುಸಿ ನಂತರ ಇಂಜಿನಿಯರಿಂಗ್, ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್‌ಸಿ ನರ್ಸಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದು (KCET Results 2023)ಅದರ ಫಲಿತಾಂಶ ಪ್ರಕಟವಾಗಿದೆ. ಮಲ್ಲೇಶ್ವರದ ಕೆಇಎ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್, ಈ ಬಾರಿ ರಾಜ್ಯದ 592 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. 592 ಕೇಂದ್ರಗಳಲ್ಲಿ 2,61,610 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದರು. ಆ ಪೈಕಿ 2,44,345 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಸರಿ ಉತ್ತರಗಳನ್ನು ಪ್ರಾಧಿಕಾರದ kea.nic.in ವೆಬ್ ಸೈಟ್ ನಲ್ಲಿ ಪ್ರಕಟ ಮಾಡಲಿದೆ ಎಂದು ಹೇಳಿದರು. ಬಾಲಕಿಯರು ಮೇಲುಗೈ: ಈ ಬಾರಿ ಸಿಇಟಿಯಲ್ಲೂ ಬಾಲಕಿಯರದ್ದೇ ಮೇಲುಗೈ. ಇಂಜಿನಿಯರಿಂಗ್ ವಿಭಾಗದಲ್ಲಿ​, ವಿಘ್ನೇಶ್​ ನಟರಾಜು ಕುಮಾರ್ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಕ್ವಾಲಿಫೈ ಪರೀಕ್ಷೆಯಲ್ಲಿ 99.667 ಅಂಕ ಕಳಿಸಿದ್ದು, ಸಿಟಿಇಯಲ್ಲಿ 96.111 ಅಂಕ ಪಡೆದಿದ್ದು. ಒಟ್ಟು 97.111…

Read More

ಮಡಿಕೇರಿ ಜೂ.15 : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನೀಡುವ ಅತ್ಯುತ್ತಮ ಪರಿಣಾಮಕಾರಿ ವರದಿ ಪ್ರಶಸ್ತಿಗೆ ಹಿರಿಕರ ರವಿ ಭಾಜನರಾಗಿದ್ದಾರೆ.ಪ್ರಜಾಸತ್ಯ ಪತ್ರಿಕೆಯಲ್ಲಿ 5-07-2022 ರಂದು ಕತ್ತಲಲ್ಲಿ ಕಮರುತ್ತಿದೆ ಕಿಬ್ಬೆಟ್ಟ ಗಿರಿಜನರ ಬದುಕು ಶಿರೋನಾಮೆಯಲ್ಲಿ ಪ್ರಕಟವಾದ ವಿಶೇಷ ವರದಿ ಪ್ರಶಸ್ತಿಗೆ ಆಯ್ಕೆಯಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕೆ.ಬಿ. ಮಹಾಂತೇಶ್ ಸ್ಮರರ್ಥ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ವಾರ್ಷಿಕವಾಗಿ ಅತ್ಯುತ್ತಮ ಪರಿಣಾಮಕಾರಿ ವರದಿ ಪ್ರಶಸ್ತಿ ನೀಡಲಾಗುತ್ತದೆ.ಜೂನ್ 25 ರಂದು ಮಡಿಕೇರಿಯಲ್ಲಿರುವ ಪತ್ರಿಕಾ ಭವನದಲ್ಲಿ ಆಯೋಜಿಸಿರುವ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 5,000 ರೂಪಾಯಿ, ಪ್ರಶಸ್ತಿ ಫಲಕ ಇರುತ್ತದೆ.     

Read More